ಮಡಿಕೇರಿ NEWS DESK ಮಾ.20 : ಮಡಿಕೇರಿ ನಗರದ ಮಲ್ಲಿಕಾರ್ಜುನ ನಗರ ಬಡಾವಣೆಯ ಶ್ರೀ ಕೋದಂಡ ರಾಮೋತ್ಸವದ ಭಜನಾ ಸಮಿತಿಯ ವಿಶಾಲಾಕ್ಷಿ ಸುಕುಮಾರ್ ಕಾರ್ಯನಿರ್ವಹಿಸಲಿದ್ದಾರೆ. ಏ.5 ರಂದು ನಗರದಲ್ಲಿ ನಡೆಯುವ ಶ್ರೀರಾಮನ ಮೆರವಣಿಗೆಯಲ್ಲಿ ಸುಮಾರು 12 ಕ್ಕೂ ಅಧಿಕ ಭಜನಾ ತಂಡಗಳ ಭಜನೆ ಪ್ರಮುಖ ಆಕರ್ಷಣೆಯಾಗಲಿದೆ. ಏ.5 ಮತ್ತು 6ರಂದು ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ರಾಮೋತ್ಸವ ಜರುಗಲಿದೆ.
ಲೇಖಕ: admin
ನಾಪೋಕ್ಲು ಮಾ.19 NEWS DESK : ಕೊಳಕೇರಿ ಗ್ರಾಮದಲ್ಲಿರುವ ಬೊಮ್ಮಂಜಿಕೇರಿ ಶ್ರೀ ಭದ್ರಕಾಳಿ ದೇವಿಯ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಉತ್ಸವದ ಅಂಗವಾಗಿ ಪೋದ ಹಾಗೂ ಭದ್ರಕಾಳಿ ಮುಡಿ ಕೋಳ ನೆರವೇರಿತು. ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಹಾಗೂ ಹರಕೆ ಕಾಣಿಕೆಗಳನ್ನು ಒಪ್ಪಿಸಿದರು. ಈ ಸಂದರ್ಭ ಉತ್ಸವದಲ್ಲಿ ದೇವಾಲಯದ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿಯ ಪದಾಧಿಕಾರಿಗಳು, ವಿವಿಧ ಗ್ರಾಮದ ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ NEWS DESK ಮಾ.20 : ಮಡಿಕೇರಿ ನಗರದ ಮಲ್ಲಿಕಾರ್ಜುನ ನಗರ ಬಡಾವಣೆಯ ಶ್ರೀ ಕೋದಂಡ ರಾಮೋತ್ಸವದ ಭಜನಾ ಸಮಿತಿಯ ಅಧ್ಯಕ್ಷರಾಗಿ ಕೆ.ಕೆ.ಮಹೇಶ್ ಕುಮಾರ್ ಕಾರ್ಯನಿರ್ವಹಿಸಲಿದ್ದಾರೆ. ಏ.5 ಮತ್ತು 6ರಂದು ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ರಾಮೋತ್ಸವ ಜರುಗಲಿದೆ. ಏ.5 ರಂದು ನಗರದಲ್ಲಿ ನಡೆಯುವ ಶ್ರೀರಾಮನ ಮೆರವಣಿಗೆಯಲ್ಲಿ ಸುಮಾರು 12 ಕ್ಕೂ ಅಧಿಕ ಭಜನಾ ತಂಡಗಳ ಭಜನೆ ಪ್ರಮುಖ ಆಕರ್ಷಣೆಯಾಗಲಿದೆ.
ನಾಪೋಕ್ಲು ಮಾ.19 NEWS DESK : ನಾಡು ಶ್ರೀ ಭಗವತಿ ದೇವರ ವಾರ್ಷಿಕ ಉತ್ಸವವು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಮಾ.17 ರಂದು ಆರಂಭಗೊಂಡು ಶ್ರೀ ಭಗವತಿ ದೇವರ ಹಬ್ಬವು ಪಟ್ಟಣಿ ಆಚರಣೆಯೊಂದಿಗೆ ಸಾಂಪ್ರದಾಯಕವಾಗಿ ಸಂಪನ್ನಗೊಂಡಿತ್ತು. ಆರಂಭದಲ್ಲಿ ತಕ್ಕರ ಮನೆಯಿಂದ ದೇವರ ಬಂಡಾರವನ್ನು ದೇವಾಲಯಕ್ಕೆ ತರಲಾಯಿತು. ನಂತರ ಅಂದಿಬೊಳಕು, ರಾತ್ರಿ ಶ್ರೀ ಭದ್ರಕಾಳಿ ದೇವರ ಕೋಲ, ದೇವರ ಊರ ಪ್ರದಕ್ಷಿಣೆನೆರವೇರಿತು. ಬುಧವಾರ ಪಟ್ಟಣಿ ಹಬ್ಬದ ವಿಶೇಷ ಪೂಜಾ ಕಾರ್ಯಗಳು ಜರುಗಿದವು. ಬೆಳಿಗ್ಗೆ ದೇವರ ದರ್ಶನ ಅನಂತರ ಎತ್ತುಪೋರಾಟ, ವಿಶೇಷ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಬಳಿಕ ನೆರೆದಿದ್ದ ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ ಜರುಗಿತು. ಮಧ್ಯಾಹ್ನದ ಬಳಿಕ ಗ್ರಾಮಸ್ಥರಿಂದ ಬೋಳಕಾಟ್, ದೇವರ ಪ್ರದರ್ಶನ ನೃತ್ಯ ಮಹೋತ್ಸವ ಸಾಂಗವಾಗಿ ನೆರವೇರಿತು. ಉತ್ಸವದ ಧಾರ್ಮಿಕ ಪೂಜಾ ವಿಧಿ ವಿಧಾನವನ್ನು ಹರೀಶ್ ತಂತ್ರಿ ದೇವಾಲಯದ ಮುಖ್ಯ ಅರ್ಚಕ ಹರೀಶ್ ಕೆಕುಣ್ಣಾಯ, ಸುರೇಶ್ ಹಾಗೂ ದೇವರ ನೃತ್ಯ ಮಹೋತ್ಸವವನ್ನು ಜಯಚಂದ್ರ (ಪುಂಡ) ನೆರವೇರಿಸಿಕೊಟ್ಟರು. ಈ ಸಂದರ್ಭ…
ಮಡಿಕೇರಿ ಮಾ.19 NEWS DESK : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ತರ ಯೋಜನೆ ಎಂದರೆ ಅದು “ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ”. ಗ್ರಾಮೀಣ ಭಾಗದ ಜನರ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆ ಕಾರ್ಯನಿರ್ವಹಿಸುತ್ತ ಬಂದಿದೆ. ಕೊಡಗು ಜಿಲ್ಲೆಯಲ್ಲಿಯೂ ಸಹ ನರೇಗಾ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ನಿರಂತರ ಕೂಲಿ ಒದಗಿಸುವ ಜೊತೆಗೆ, ಗ್ರಾಮೀಣ ಜನರಿಗೆ ನೆರವಾಗಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಹೇಳಿದ್ದಾರೆ. ‘ಉದ್ಯೋಗ ಖಾತ್ರಿ’ ಹೆಸರು ಸೂಚಿಸುವಂತೆ ಈ ಯೋಜನೆ ಗ್ರಾಮೀಣ ಭಾಗದ ಕುಟುಂಬಕ್ಕೆ ಕನಿಷ್ಠ 100 ದಿನಗಳ ಉದ್ಯೋಗವನ್ನು ಖಾತರಿ ಪಡಿಸುತ್ತದೆ. ಜೊತೆಗೆ ದಿನಕ್ಕೆ ರೂ. 349 ಕೂಲಿಯನ್ನು ನೀಡುತ್ತಿದೆ. ಗ್ರಾಮಗಳ ಅಭಿವೃದ್ಧಿಗೆ ಯೋಜನೆಯು ಪೂರಕವಾಗುವಂತೆ ಕಾರ್ಯನಿರ್ವಹಿಸುತ್ತಿದ್ದು ಪ್ರಮುಖವಾಗಿ ರೈತರಿಗೆ ಉದ್ಯೋಗ ಖಾತ್ರಿ ಯೋಜನೆಯು ಸಹಕಾರಿಯಾಗಿದೆ. ಪ್ರಸ್ತುತ ಬೇಸಿಗೆ ಪ್ರಾರಂಭವಾಗಿದ್ದು ಗ್ರಾಮೀಣ ಜನರಿಗೆ ನಿರಂತರ ಉದ್ಯೋಗ ಕೊಡವ ನಿಟ್ಟಿನಲ್ಲಿ ಯೋಜನೆಯು ಸಹಕಾರಿಯಾಗಿದ್ದು, ಕೆಲಸಕ್ಕಾಗಿ ಹತ್ತಿರದ ಗ್ರಾಮ ಪಂಚಾಯಿತಿ…
ಮಡಿಕೇರಿ ಮಾ.19 NEWS DESK : ಬೆಳ್ಳಿ ಮಹೋತ್ಸವದ ಹೊಸ್ತಿಲಲ್ಲಿರುವ ಕೊಡವ ಕೌಟುಂಬಿಕ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಪಾಲ್ಗೊಳ್ಳಲು ದಾಖಲೆಯ 396 ಕೊಡವ ಕುಟುಂಬ ತಂಡಗಳು ಹೆಸರು ನೋಂದಾಯಿಸಿಕೊAಡಿದ್ದು, ಇದೊಂದು ನೂತನ ದಾಖಲೆಯಾಗಿದೆ. ಈ ಬಾರಿ ಕೊಡವ ಕೌಟುಂಬುಕ ಹಾಕಿ ಉತ್ಸವದ ಜವಾಬ್ದಾರಿಯನ್ನು ಮುದ್ದಂಡ ಕುಟುಂಬ ವಹಿಸಿಕೊಂಡಿದ್ದು, ಪಂದ್ಯಾವಳಿ ಇದೇ ಮಾ.28 ರಿಂದ ಒಂದು ತಿಂಗಳ ಕಾಲ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎರಡು ಮೈದಾನ ಮತ್ತು ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ. ಕೌÀಟುಂಬಿಕ ಹಾಕಿ ಪಂದ್ಯಾವಳಿ ಸಮೀಪಿಸುತ್ತಿದ್ದು, ಇದಕ್ಕಾಗಿ ಭರದ ಸಿದ್ಧತೆಗಳು ನಡೆದಿದೆ. ಕಳೆದ ಸಾಲಿನ ಕುಂಡ್ಯೋಳ0ಡ ಕೊಡವ ಹಾಕಿ ಉತ್ಸವದಲ್ಲಿ 360 ತಂಡಗಳು ಪಾಲ್ಗೊಂಡಿದ್ದವು. ಈ ಬಾರಿ ಇದಕ್ಕೂ ಮಿಗಿಲಾಗಿ 36 ಹೆಚ್ಚುವರಿ ತಂಡಗಳು ಪಾಲ್ಗೊಳ್ಳುವ ಮೂಲಕ ಹಾಕಿ ಉತ್ಸವದ ಕಳೆ ಹೆಚ್ಚಿಸಲಿವೆ. ಕೊಡವ ಹಾಕಿ ಅಕಾಡೆಮಿಯ ಸಹಭಾಗಿತ್ವದಲ್ಲಿ ಮುದ್ದಂಡ ಕುಟುಂಬಸ್ಥರಿ0ದ ಆಯೋಜನೆಯಾಗುತ್ತಿರುವ ಹಾಕಿ ಪಂದ್ಯಾವಳಿಯ ‘ಕ್ರೀಡಾ ಜ್ಯೋತಿ’ಯ ಮೆರಥಾನ್ ಇದೇ ಮಾ.24 ರಿಂದ ಪಾಂಡAಡ…
ಮಡಿಕೇರಿ ಮಾ.19 NEWS DESK : ಡಾ.ಅಂಬೇಡ್ಕರ್ ಭವನದ ಆವರಣದಲ್ಲಿ ಪ್ರತಿಮೆ ಸ್ಥಾಪಿಸಬಾರದೆಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ನಗರಸಭಾ ಸದಸ್ಯ ಹೆಚ್.ಸಿ.ಸತೀಶ್, ಪ್ರಮುಖರಾದ ಪ್ರೇಂ ಕುಮಾರ್, ಎನ್.ವೀರಭದ್ರಯ್ಯ, ಡಿ.ಜೆ.ಈರಪ್ಪ, ಟಿ.ಎನ್.ಗೋವಿಂದಪ್ಪ, ಹೆಚ್.ಕೆ.ಪ್ರೇಮ ಕೃಷ್ಣಪ್ಪ, ನಾಗೇಂದ್ರ, ದಿಲೀಪ್ ಮತ್ತಿತರರು ಪ್ರತಿಭಟನೆಗೆ ಮುಂದಾದರು. ಈ ಸಂದರ್ಭ ಪೊಲೀಸ್ ಅಧಿಕಾರಿಗಳು ಮಧ್ಯ ಪ್ರವೇಶಿಸಿ ಭವನದ ಸುತ್ತ ನಿಷೇಧಾಜ್ಞೆ ವಿಧಿಸಿರುವುದರಿಂದ ಪ್ರತಿಭಟನೆಗೆ ಅವಕಾಶವಿಲ್ಲ ಎಂದರು. ಒಂದು ಹಂತದಲ್ಲಿ ಹೆಚ್.ಎಂ.ನಂದಕುಮಾರ್ ಹಾಗೂ ಹೆಚ್.ಸಿ.ಸತೀಶ್ ನಡುವೆ ಏಕವಚನದಲ್ಲಿ ಮಾತಿನ ಚಕಮಕಿ ನಡೆಯಿತು. ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಎಲ್.ದಿವಾಕರ್ ಹಾಗೂ ದಲಿತ ಸಂಘಟನೆಗಳ ಮುಖಂಡ ಟಿ.ಈ.ಸುರೇಶ್ ಅವರು ಡಾ.ಅಂಬೇಡ್ಕರ್ ಭವನದ ಎದುರು ಪ್ರತಿಮೆ ಸ್ಥಾಪನೆಗೆ ನಮ್ಮ ವಿರೋಧವಿದೆ. ಜಿಲ್ಲಾಡಳಿತ ಹಾಗೂ ನಗರಸಭೆ ಸೂಚಿಸುವ ಸ್ಥಳದಲ್ಲಿ ಪ್ರತಿಮೆ ನಿರ್ಮಾಣವಾಗಲಿ ಎಂದರು.
ಮಡಿಕೇರಿ ಮಾ.19 NEWS DESK : ಮಡಿಕೇರಿ ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದ ಬಳಿಯ ಡಾ.ಅಂಬೇಡ್ಕರ್ ಭವನದ ಎದುರು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಇಂದು ಭೂಮಿಪೂಜೆ ನೆರವೇರಿತು. ಡಾ.ಅಂಬೇಡ್ಕರ್ ಭವನ ಸಮಿತಿಯ ಅಧ್ಯಕ್ಷ ಹೆಚ್.ಎಂ.ನಂದಕುಮಾರ್ ಅವರ ಅಧ್ಯಕ್ಷತೆಯಲ್ಲಿ ಭೂಮಿಪೂಜೆ ನೆರವೇರಿಸಿ ಯೋಜನೆಗೆ ಚಾಲನೆ ನೀಡಲಾಯಿತು. ಡಾ.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಗೊಳ್ಳಲಿದೆ. ಭೂಮಿಪೂಜೆ ನೆರವೇರಿಸಿ ಮಾತನಾಡಿದ ಹೆಚ್.ಎಂ.ನಂದಕುಮಾರ್, ಮುಂಬರುವ ಡಾ.ಅಂಬೇಡ್ಕರ್ ಜಯಂತಿಯೊಳಗೆ 15 ಅಡಿ ಎತ್ತರದ ಪೀಠದ ಮೇಲೆ 18 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದರು. ಕೆಲವು ಕಿಡಿಗೇಡಿಗಳು ಮಡಿಕೇರಿಯಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣವಾಗಬಾರದು ಎನ್ನುವ ದುರುದ್ದೇಶದಿಂದ ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾನೂನು ಚೌಕಟ್ಟಿನಡಿ ಅವಲೋಕಿಸಿದರೆ ಪ್ರತಿಮೆ ನಿರ್ಮಾಣಕ್ಕೆ ಅಂಬೇಡ್ಕರ್ ಭವನದ ಜಾಗವೇ ಸೂಕ್ತವಾಗಿದೆ. ಸೌಹಾರ್ದತೆಯಿಂದ ಎಲ್ಲರೂ ಸೇರಿ ಪ್ರತಿಮೆ ನಿರ್ಮಿಸಬೇಕೆನ್ನುವುದು ನಮ್ಮ ಉದ್ದೇಶವಾಗಿದೆ. ಆದರೆ ಇದಕ್ಕೆ ಕೆಲವರು ಒಪ್ಪಿಗೆ ಸೂಚಿಸದೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಯಾವುದೇ ಅಡ್ಡಿ ಎದುರಾದರೂ…
ಮಡಿಕೇರಿ ಮಾ.19 NEWS DESK : ಬಾತೂರು ಶ್ರೀ ಭಗವತಿ ಕ್ಷೇತ್ರದ ಕಯಗಂ ಪನತ್ತಡಿ ತಾನತ್ತಿಂಗಾಲ್ ಶ್ರೀ ವಯನಾಟ್ ಕುಲವನ್ ದೇವಾಲಯದ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವವು ಮಾ.21, 22 ಹಾಗೂ 23 ರಂದು ಜರುಗಲಿದೆ. 120 ವರ್ಷಗಳ ನಂತರ ದೇವಾಲಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಹೋತ್ಸವದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಲಿದೆ. ಮಾ.21 ರಂದು ಪೂರ್ವಾಹ್ನ 10.15 ರಿಂದ ಉಗ್ರಾಣ ತುಂಬುವುದು, 11 ಗಂಟೆಯಿಂದ ಸಾಂಸ್ಕೃತಿಕ ಸಮ್ಮೇಳನ ನಡೆಯಲಿದ್ದು, ಕಾರ್ಯಕ್ರಮವನ್ನು ಕೇರಳದ ರೆವನ್ಯೂ ಸಚಿವ ಕೆ.ರಾಜನ್ ಉದ್ಘಾಟಿಸಲಿದ್ದಾರೆ. ಆಚರಣಾ ಸಮಿತಿ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಕಾಸರಗೋಡು ಲೋಕಸಭಾ ಸದಸ್ಯ ರಾಜ್ ಮೋಹನ್ ಉಣ್ಣಿತ್ತಾನ್, ಕಾಞಂಗಾಡ್ ಶಾಸಕ ಇ.ಚಂದ್ರಶೇಖರನ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಾಸರಗೋಡು ಜಿ.ಪಂ ಅಧ್ಯಕ್ಷರಾದ ಬೇಬಿ ಬಾಲಕೃಷ್ಣನ್, ಪನತ್ತಡಿ ಗ್ರಾ.ಪಂ ಅಧ್ಯಕ್ಷ ಪ್ರಸನ್ನ…
ಮಡಿಕೇರಿ NEWS DESK ಮಾ.19 : ಮಡಿಕೇರಿ ನಗರದ ಶ್ರೀ ಮಲ್ಲಿಕಾರ್ಜುನ ಬಡಾವಣೆಯಲ್ಲಿರುವ ಶ್ರೀ ಕೋದಂಡರಾಮ ದೇವಾಲಯದ ರಾಮೋತ್ಸವ ಸಮಿತಿಯ ವತಿಯಿಂದ ಈ ಬಾರಿ ವಿವಿಧತೆಯಲ್ಲಿ ಏಕತೆ ಎಂಬ ಘೋಷವಾಕ್ಯದೊಂದಿಗೆ 35ನೇ ವರ್ಷದ ರಾಮನವಮಿಯ ರಾಮೋತ್ಸವ ಹಾಗೂ ದೇವಾಲಯದ ದ್ವಿತೀಯ ವರ್ಷದ ಪ್ರತಿಷ್ಠಾಪನಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶ್ರೀ ಕೋದಂಡ ರಾಮೋತ್ಸವ ಮಹಿಳಾ ಸಮಿತಿ ತಿಳಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಸಮಿತಿಯ ಅಧ್ಯಕ್ಷರಾದ ಭಾರತಿ ರಮೇಶ್, ಏ.5 ಮತ್ತು 6 ರಂದು ನಡೆಯುವ ರಾಮೋತ್ಸವ ಹಾಗೂ ಮಹಿಳಾ ಸಮಿತಿಯ ಪಾತ್ರದ ಕುರಿತು ಮಾಹಿತಿ ನೀಡಿದರು. ಎಲ್ಲಾ ದೇವಾಲಯಗಳ ಮತ್ತು ಸಂಘ ಸಂಸ್ಥೆಗಳ ಪ್ರಮುಖರು, ಕಾರ್ಯಕರ್ತರು, ಹಾಗೂ ಸುತ್ತಮುತ್ತಲಿನ ಎಲ್ಲಾ ಸಮುದಾಯಗಳ ಜನರು, ಭಕ್ತರನ್ನು ಒಗ್ಗೂಡಿಸಿಕೊಂಡು ರಾಮೋತ್ಸವವನ್ನು ಆಚರಿಸಲಾಗುತ್ತಿದ್ದು, ಉಪಸಮಿತಿಗಳನ್ನು ರಚಿಸಲಾಗಿದೆ. ಮಹಿಳಾ ಸಮಿತಿಯು ಬಹಳ ಮುಖ್ಯವಾದ ಜವಾಬ್ದಾರಿಯನ್ನು ನಿಭಾಯಿಸಲಿದೆ. ಮಹಿಳಾ ಸಮಿತಿಯಲ್ಲಿರುವವರು ವಿವಿಧ ದೇವಾಲಯ, ಸಂಘ ಸಂಸ್ಥೆಗಳಲ್ಲಿ ಸೇವೆಸಲ್ಲಿಸಿದವರಾಗಿದ್ದು, ರಾಮೋತ್ಸವದ ಮೂಲಕ ಶ್ರೀ ರಾಮನ ಸೇವೆ ಮಾಡಲು ಉತ್ತಮ…






