ಮಡಿಕೇರಿ ಫೆ.25 NEWS DESK : ಕುಶಾಲನಗರ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕೊಡಗು-ಮೈಸೂರು ಕ್ಷೇತ್ರದ ಸಂಸದ ಯದುವೀರ್ ಒಡೆಯಲ್ ಸ್ವೆಟರ್ ವಿತರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು ವಿದ್ಯಾರ್ಥಿಗಳಿಗೆ ಸೌಲಭ್ಯಗಳನ್ನು ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಬೇಕು. ವಿಕಸಿತ ಭಾರತದ ಕನಸನ್ನು ನನಸು ಮಾಡುವಲ್ಲಿ ಮಕ್ಕಳ ಪಾತ್ರ ಮುಖ್ಯವಾಗಿದೆ ಎಂದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಮಾಜ ವಿರೋಧಿಗಳಿಗೆ ಅವಕಾಶಗಳು ಹೆಚ್ಚಾಗುತ್ತಿದೆ ಎಂದರು. ಸಾಮಾನ್ಯ ಜನರು ಭಯದ ವಾತಾವರಣದಲ್ಲಿ ಬದುಕುವ ಪರಿಸ್ಥತಿ ಮೈಸೂರಿನಲ್ಲಿದೆ. ಗೋಣಿಕೊಪ್ಪದಲ್ಲಿ ಪೊಲೀಸರ ಮೇಲೆ ನಡೆದ ದಾಳಿ ಗಮನಿಸಿದ್ದೇನೆ. ಪೊಲೀಸರನ್ನುಗೌರವದಿಂದ ಕಾಣಬೇಕು. ಪೊಲೀಸರ ಸಮವಸ್ತ್ರಕ್ಕೆ ಗೌರವಿಸಬೇಕು. ಪೊಲೀಸ್ ಇಲಾಖೆಯ ರಕ್ಷಣೆಯ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ. ಇಲ್ಲವಾದಲ್ಲಿ ಭವಿಷ್ಯದಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಯಲ್ಲಿ ತೊಂದರೆಯಾಗಲಿದೆ. ರಾಜ್ಯ ಸರ್ಕಾರ ಪೊಲೀಸರ ರಕ್ಷಣೆಯಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು. ಈ ಸಂದರ್ಭ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಪಕ್ಷದ ಕಾರ್ಯಕರ್ತರು, ಶಿಕ್ಷಕರು, ಶಾಲಾ ಅಭಿವೃದ್ದಿ ಸಮಿತಿ ಸದಸ್ಯರು ಕಾರ್ಯಕ್ರಮದಲ್ಲಿ…
ಲೇಖಕ: admin
ಮೈಸೂರು ಫೆ.25 NEWS DESK : ರಾಜಕೀಯ ಇಚ್ಛಾಶಕ್ತಿ ಇದ್ದರೆ ಜನರಿಗಾಗಿ ಜನಪ್ರತಿನಿಧಿಗಳು ಎಂಥೆಂಥ ಕೆಲಸ ಮಾಡಬಹುದು ಎಂಬುದಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರಯತ್ನಕ್ಕೆ ಫಲವೇ ಸಾಕ್ಷಿಯಾಗಿದೆ. ತಮ್ಮ ಕ್ಷೇತ್ರ ವ್ಯಾಪ್ತಿಗೆ ಬರುವ ಕೊಡುಗ ಕರಿ ಮೆಣಸು ಬೆಳಗಾರರ ಸಂಕಷ್ಟವನ್ನು ನಿವಾರಿಸಲು ಸಂಸದ ಯದುವೀರ್ ಯಶಸ್ವಿಯಾಗಿದ್ದಾರೆ. ಕೊಡಗಿನಲ್ಲಿ ಅತಿ ಹೆಚ್ಚಾಗಿ ಕರಿ ಮೆಣಸು ಬೆಳೆಯಲಾಗುತ್ತದೆ. ಆದರೆ ಕೇಂದ್ರ ಸರ್ಕಾರ ಇದರ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ ) ವಿಧಿಸಿತ್ತು. ಇದರಿಂದ ಇಲ್ಲಿನ ಬೆಳೆಗಾರರಿಗೆ ಭಾರಿ ತೊಂದರೆಯಾಗಿತ್ತು. ಕೊಡಗಿನ ಗೋಣಿಕೊಪ್ಪದ ಬೆಳೆಗಾರರೊಬ್ಬರಿಗೆ ಒಂದು ಕೋಟಿ ರೂಪಾಯಿ ಜಿಎಸ್ಟಿ ಕಟ್ಟುವಂತೆಯೂ ನೋಟಿಸ್ ನೀಡಲಾಗಿತ್ತು. ಆದರೆ ಇವರು ಕರ್ನಾಟಕ ಕಾಫಿ ಬೆಳೆಗಾರರ ಸಂಘ, ಕರ್ನಾಟಕ ಬೆಳೆಗಾರರ ಸಂಘ, ಕೊಡಗು ಪ್ಲಾಂಟರ್ಸ್ ಅಸೋಸಿಯೇಶನ್ ನಿಯೋಗದೊಂದಿಗೆ ಸಂಸದ ಯದುವೀರ್ ಭೇಟಿ ಮಾಡಿ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟು ಮನವಿ ಸಲ್ಲಿಸಿದ್ದರು. ಇದಕ್ಕೆ ಕೂಡಲೇ ಸ್ಪಂದಿಸಿದ ಸಂಸದ ಯದುವೀರ್ ಅವರು ವಿತ್ತ ಸಚಿವರಾದ ನಿರ್ಮಲಾ…
ಮಡಿಕೇರಿ ಫೆ.25 NEWS DESK : ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಫೆ.26 ರಂದು “ಮಹಾಶಿವರಾತ್ರಿ” ಕಾರ್ಯಕ್ರಮ ನಡೆಯಲಿದ್ದು, ಈ ಪ್ರಯುಕ್ತ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ರಂಗೋಲಿ ಸ್ಪರ್ಧೆಯನ್ನು (ರಂಗೋಲಿ ಪುಡಿಯನ್ನು ತಾವೆ ತರುವುದು) ಏರ್ಪಡಿಸಲಾಗಿದೆ. ಆಸಕ್ತ ಸ್ಪರ್ಧಾಳುಗಳು ಫೆ.26 ರಂದು ಬೆಳಿಗ್ಗೆ 9.30ಕ್ಕೆ ದೇವಾಲಯದಲ್ಲಿ ಹಾಜರಾಗುವಂತೆ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.
ನಾಪೋಕ್ಲು ಫೆ.25 NEWS DESK : ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಆರ್ಥಿಕ ಅಭಿವೃದ್ಧಿಯನ್ನೂ ಸಾಧಿಸಲಾಗುತ್ತಿವೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಬಲ್ಲಮಾವಟ್ಟಿ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಬಲ್ಲಮಾವಟ್ಟಿ ವಲಯ ಕಾಂಗ್ರೆಸ್ ವತಿಯಿಂದ ಆಯೋಜಿಸಿದ ಅಭಿನಂದನಾ ಸಭೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ, ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಬಹಳಷ್ಟು ಕಾರ್ಯಗಳು ಸ್ಥಗಿತಗೊಂಡಿದ್ದವು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ. ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕಿದೆ ಎಂದರು. ಬಲ್ಲಮಾವಟಿ ಗ್ರಾ.ಪಂ ವ್ಯಾಪ್ತಿಯಲ್ಲಿ ಎರಡು ಕೋಟಿ 20 ಲಕ್ಷ ರೂ.ಗಳ ಕೆಲಸ ಆಗಿದೆ. ಲೋಕೋಪಯೋಗಿ ಇಲಾಖೆ ವತಿಯಿಂದ 35 ಕೋಟಿ ರೂ.ಗಳ ಅನುದಾನ ನೀಡಲಾಗಿದೆ ವಿಶೇಷ ಅನುದಾನ 20 ಕೋಟಿ ರೂ.,ವಿರಾಜಪೇಟೆ ಕ್ಷೇತ್ರದಲ್ಲಿ ಆರು ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿಗಳನ್ನು…
ನಾಪೋಕ್ಲು ಫೆ.25 NEWS DESK : ಚೆರಿಯಪರಂಬು, ಕಲ್ಲುಮೊಟ್ಟೆ ವ್ಯಾಪ್ತಿಯ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಚೆರಿಯಪರಂಬುವಿನಲ್ಲಿ 5ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ, 1.86 ಕೋಟಿ ವೆಚ್ಚದ ಚೆರಿಯಪರಂಬು – ಕಲ್ಲು ಮೊಟ್ಟೆ ಸಂಪರ್ಕ ರಸ್ತೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಚೆರಿಯಪರಂಬು ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಜನರು ಬಹಳ ಸಮಸ್ಯೆಯನ್ನು ಎದುರಿಸುತ್ತಿದ್ದು, ರಸ್ತೆ ಮುಳುಗಡೆಯಾಗಿ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಬಾರಿ ಮಳೆಗಾಲಕ್ಕಿಂತ ಮೊದಲು ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ. ರಸ್ತೆ ಕಾಮಗಾರಿಗಾಗಿ ಅಲ್ಪಸಂಖ್ಯಾತ ಇಲಾಖೆಯಿಂದ ವಿಶೇಷ ಅನುದಾನವನ್ನು ಪಡೆದುಕೊಳ್ಳಲಾಗಿದೆ ಎಂದರು. ಈ ಭಾಗದಲ್ಲಿ ಅಲ್ಪಸಂಖ್ಯಾತರೆ ಹೆಚ್ಚಿರುವುದರಿಂದ ಜಿಲ್ಲಾಧಿಕಾರಿಗಳ ಮೂಲಕ ಪ್ರಸ್ತಾವನೆಯನ್ನು ಅಲ್ಪಸಂಖ್ಯಾತರ ಇಲಾಖೆಯ ಮಂತ್ರಿಗಳಾದ ಜಮೀರ್ ಅಹ್ಮದ್ ಅವರಿಗೆ ಸಲ್ಲಿಸಿ ಭೇಟಿ ಮಾಡಿದ ಕೂಡಲೇ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ಇದಕ್ಕಾಗಿ ಅವರಿಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆಶಿ ಕುಮಾರ್ ಅವರಿಗೆ ಕೃತಜ್ಞತೆ…
ಮಡಿಕೇರಿ ಫೆ.27 NEWS DESK : ಕಾಫಿ ಮಂಡಳಿ ಮತ್ತು ಸುಕ್ಡೇನ್ ಕಾಫಿ ಪ್ರವೇಟ್ ಲಿಮಿಟೆಡ್ ಸಹಯೋಗದೊಂದಿಗೆ ನಿಟ್ಟೂರು ಗ್ರಾಮ ಪಂಚಾಯತ್ ಮತ್ತು ಕಾರ್ಮಾಡು ಇಗ್ಗುತ್ತಪ್ಪ ಸಂಘದ ಸಹಯೋಗದಲ್ಲಿ ನಿಟ್ಟೂರು ಗ್ರಾ.ಪಂ ಸಭಾಂಗಣದಲ್ಲಿ “ಸುಸ್ಥಿರ ಕಾಫಿ ಕೃಷಿಗೆ ಅನುಸರಿಸಬೇಕಾದ ಉತ್ತಮ ಕೃಷಿ ಪದ್ದತಿಗಳ ಕುರಿತು ಕಾರ್ಯಾಗಾರ ನಡೆಯಿತು. ಗೊಣಿಕೊಪ್ಪಲು ಕಾಫಿಮಂಡಳಿಯ ಉಪನಿರ್ದೆಶಕ ಡಾ.ಕೆ.ಶ್ರೀದೇವಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸುಸ್ಥಿರ ಕಾಫಿ ಉತ್ಪಾದನೆಯ ಮಹತ್ವದ ಬಗ್ಗೆ ವಿವರಿಸಿದರು. ಸಾಂಬರು ಸಂಶೋಧನಾ ಉಪಕೇಂದ್ರ ಅಪ್ಪಂಗಳದ ಹಿರಿಯ ವಿಜ್ಞಾನಿ ಡಾ.ಅಂಕೇಗೌಡ ಮಾತನಾಡಿ, ಕರಿಮೆಣಸು ಮತ್ತು ಏಲಕ್ಕಿ ಕೃಷಿ ಬೇಸಾಯ ಕ್ರಮಗಳ ಬಗ್ಗೆ ಮತ್ತು ಇತ್ತೀಚಿನ ಹವಮಾನ ಬದಲಾವಣೆಗೆ ತಕ್ಕಂತೆ ಕರಿ ಮೆಣಸು ಮತ್ತು ಏಲಕ್ಕಿ ಕೃಷಿಕರು ಅನುಸರಿಸಬೇಕಾದ ಕೃಷಿ ಪದ್ದತಿಗಳ ವಿಚಾರವಾಗಿ ಮಾಹಿತಿ ನೀಡಿದರು. ಕಾಫಿ ಸಂಸೋಧನಾ ಉಪಕೇಂದ್ರ ಚೆಟ್ಟಳ್ಳಿಯ ಮಣ್ಣು ವಿಜ್ಜನಿಗಳಾದ ಡಾ. ನಧಾಪ್ ಮಣ್ಣಿನ ಆರೋಗ್ಯ ಮತ್ತು ಸಮಗ್ರ ಪೋಷಕಾಂಶಗಳ ನಿರ್ವಹಣೆ ಬಗ್ಗೆ ಸಲಹೆಗಳನ್ನು ನೀಡಿದರು. ಗೊಣಿಕೊಪ್ಪಲು ಕಾಫಿ ಮಂಡಳಿಯ ತಳಿ ಅಭಿವೃದ್ಧಿ…
ಮಡಿಕೇರಿ ಫೆ.25 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೊದಲಿಗೆ ದೀಪ ಬೆಳಗಿಸುವುದರೊಂದಿಗೆ ಸರ್ವಧರ್ಮ ಪ್ರಾರ್ಥನೆ ಮಾಡಲಾಯಿತು. ಭಗವದ್ಗೀತೆ, ಬೈಬಲ್, ಕುರಾನ್ ಪಠಣ ಮಾಡಲಾಯಿತು. ಜಿಲ್ಲಾ ಸ್ಕೌಟ್ ಆಯುಕ್ತರಾದ ಜಿಮ್ಮಿ ಸ್ವಿಕೇರಾ ದಿನದ ಮಹತ್ವದ ಬಗ್ಗೆ ತಿಳಿಸಿಕೊಟ್ಟರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಪ್ರಸನ್ನ ಮಾತನಾಡಿ ಸ್ಕೌಟ್ ಮತ್ತು ಗೈಡ್ ಸಂಸ್ಥೆಯು ಮಕ್ಕಳಲ್ಲಿ ಮನಸ್ಥೈರ್ಯ ಮತ್ತು ಸೇವಾ ಮನೋಭಾವ ಹೆಚ್ಚಿಸಲು ಸಹಕಾರಿಯಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಮಾತನಾಡಿ ಶತಮಾನಗಳ ಹಿಂದೆಯೇ ಬೇಡನ್ ಪೂವೆಲ್ ಅವರು ಮಕ್ಕಳ ಹಿತದೃಷ್ಟಿ ಇಟ್ಟುಕೊಂಡು ಇಂತಹ ಒಂದು ಸಂಸ್ಥೆಯನ್ನು ಹುಟ್ಟು ಹಾಕಿದ್ದು ಈ ಸಂಸ್ಥೆಯು ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ ಎಂದರೆ ತಪ್ಪಾಗಲಾರದು. ಯಾರೇ ಆದರೂ ಒಳ್ಳೆಯ ಕೆಲಸ…
ಮಡಿಕೇರಿ ಫೆ.25 NEWS DESK : ವಿರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಿಜಯನಗರದಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡಿರುವ ನೂತನ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು ಇಂದಿನ ವೇಗದ ಯುಗಕ್ಕೆ ಅತ್ಯುತ್ತಮ ರಸ್ತೆಯ ಅವಶ್ಯಕತೆ ತುಂಬಾ ಇದ್ದು, ಈ ನಿಟ್ಟಿನಲ್ಲಿ ತಾನು ತನ್ನ ಕ್ಷೇತ್ರಾದ್ಯಂತ ಉತ್ತಮ ರಸ್ತೆ ನಿರ್ಮಿಸಲು ಅನುದಾನ ಒದಗಿಸುತ್ತಿರುವುದಾಗಿ ಹೇಳಿದರು. ಅಲ್ಪಸಂಖ್ಯಾತ ಇಲಾಖೆಯ ರೂ.10 ಲಕ್ಷ ಹಾಗೂ ಶಾಸಕರ ಅನುದಾನದ ರೂ.5 ಲಕ್ಷದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ. ಬಳಿಕ ಪುರಸಭಾಧ್ಯಕ್ಷರು ಸದಸ್ಯರುಗಳು ಹಾಗೂ ಪ್ರಮುಖರೊಂದಿಗೆ ಸಭೆ ನಡೆಸಿದ ಶಾಸಕರು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿದರು ಹಾಗೂ ಮಾಹಿತಿಯನ್ನು ಪಡೆದರು. ಬಳಿಕ ವಿಶೇಷ ಆಹ್ವಾನದ ಮೇರೆಗೆ ಇತ್ತೀಚಿಗೆ ಶುಭಾರಂಭಗೊಂಡಿದ್ದ ಕಾಸ್ಕೋಫಾಬ್ ಬೂಟಿಕ್ ಮಳಿಗೆಗೆ ಭೇಟಿ ನೀಡಿ ಶುಭ ಕೋರಿದರು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಟೌನ್ ಕಾಂಗ್ರೆಸ್ ಅಧ್ಯಕ್ಷರು,…
ಸುಂಟಿಕೊಪ್ಪ ಫೆ.25 NEWS DESK : ಕಲೆ ಮತ್ತು ಕ್ರೀಡೆಗೆ ಪರಸ್ಪರ ಬಾಂಧವ್ಯ ಮತ್ತು ಮನುಷ್ಯ ಸಂಬಂಧಗಳನ್ನು ಗಟ್ಟಿಗೊಳಿಸುವ ಅದ್ಬುತ ಶಕ್ತಿಯಿದೆ ಎಂದು ಸೋಮವಾರಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಅಭಿಪ್ರಾಯ ವ್ಯಕ್ತಪಡಿಸಿದರು. ಬೆಳ್ಳಿ ಹಬ್ಬದ ಅಂಗವಾಗಿ ನಾಕೂರು ಶಿರಂಗಾಲದ ಕಾನ್ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್ ವತಿಯಿಂದ ಕಾನ್ಬೈಲ್ ಶಾಲಾ ಆವರಣದಲ್ಲಿ ನಡೆದ ಬೆಳ್ಳಿಹಬ್ಬ ಮತ್ತು ಕ್ರೀಡೋತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಯುವ ಸಂಘಕ್ಕೆ 25 ವರ್ಷಗಳ ಇತಿಹಾಸವಿದ್ದು ಅದರ ಪರಿಣಾಮವೇ ಜಾತಿ, ಜನಾಂಗ, ರಾಜಕೀಯ ಮೀರಿದ ಈ ಕ್ರೀಡೋತ್ಸವ ಎಂದು ಬಣ್ಣಿಸಿದರು. ಕ್ರೀಡೋತ್ಸೋವ ಮತ್ತು ಯುವ ಸಂಘದ ಇತಿಹಾಸದಲ್ಲಿ 2 ತಲೆಮಾರುಗಳ ಕ್ಷಮವನ್ನು ಕಾಣಬಹುದಾಗಿದೆ. ಪ್ರೆಂಡ್ಸ್ ಯೂತ್ ಕ್ಲಬ್ ಮುಂದೆ ಸುವರ್ಣಮಹೋತ್ಸವ ವಜ್ರಮಹೋತ್ಸವ ಮತ್ತು ಅಮೃತಮಹೋತ್ಸವಗಳನ್ನು ದಾಟಿ ಶತಮನೋತ್ಸವ ಆಚರಿಸಲೆಂದು ಹಾರೈಸಿದರು. ನಾಕೂರಿನ ಪ್ರೆಂಡ್ಸ್ ಯೂತ್ಕ್ಲಬ್ ಕ್ರೀಡಾಕೂಟದ ಮೂಲಕ ಸಾಮಾಜಿಕ ಹೊಣೆಗಾರಿಕೆಯನ್ನು ನಿಭಾಯಿಸುತ್ತಿದ್ದು, ಎಲ್ಲಾರನ್ನು ಒಳಗೊಳ್ಳುವ ಮನುಷ್ಯ ಪ್ರೀತಿಯ ಸಮಾಜವನ್ನು ನಿರ್ಮಿಸುತ್ತಿರುವ…
ಮಡಿಕೇರಿ ಫೆ.25 NEWS DESK : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ನಡೆಯುವ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಫೆಬ್ರವರಿ, 26 ರಂದು ಬೆಳಗ್ಗೆ 9.30 ಗಂಟೆಯಿಂದ 12 ಗಂಟೆವರೆಗೆ ಸಾರ್ವಜನಿಕ ಭಕ್ತಾಧಿಗಳಿಗೆ ವಿಶೇಷ ಸೇವೆ ರುದ್ರಹೋಮ ಮತ್ತು ಏಕಾದಶ ರುದ್ರಾಭಿಷೇಕ ಹಾಗೂ ಅಲಂಕಾರ ಪೂಜೆ ನಡೆಯಲಿದೆ. ನಂತರ ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಡೆಯಲಿದೆ. ಬಳಿಕ ವಿವಿಧ ಪೂಜೆ-ಅರ್ಚನೆಗಳು ನಡೆಯಲಿದೆ. ಈ ದಿನದಂದು ದೇವಾಲಯವು ರಾತ್ರಿಪೂರ್ತಿ ತೆರೆದಿರುತ್ತದೆ. ಭಕ್ತಾದಿಗಳು ದೇವಾಲಯದಲ್ಲಿ ನಡೆಯುವ ಪೂಜೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಬಾಜನರಾಗುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.9902290302, 9845821566 ನ್ನು ಸಂಪರ್ಕಿಸಬಹುದು ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ದೇವರಾಜು ತಿಳಿಸಿದ್ದಾರೆ.






