ಮಡಿಕೇರಿ ಫೆ.24 NEWS DESK : ಖ್ಯಾತ ವೈದ್ಯರು ಹಾಗೂ ಸಾಹಿತಿಗಳಾದ ಡಾ.ಕೆ.ಬಿ.ಸೂರ್ಯಕುಮಾರ್ ಅವರು ರಚಿಸಿರುವ ಕೆನಡಾ ದೇಶದ ಪ್ರವಾಸ ಕಥನ “ಪ್ರಯಾಸವಲ್ಲದ ಪ್ರವಾಸ” ಪುಸ್ತಕ ಬಿಡುಗಡೆಗೊಂಡಿದೆ.
ಲೇಖಕ: admin
ಮಡಿಕೇರಿ ಫೆ.24 NEWS DESK : ಕ್ರೈಸ್ತ ಧರ್ಮಗುರುಗಳಾಗಿ 25 ವರ್ಷಗಳನ್ನು ಪೂರೈಸಿದ ಮಡಿಕೇರಿಯ ಸಂತ ಮೈಕಲರ ದೇವಾಲಯದ ಧರ್ಮಗುರು ಬೆಳ್ಳಿಗುರು ಜಾರ್ಜ್ ದೀಪಕ್ ಅವರನ್ನು ಫೆ.26 ರಂದು ಸನ್ಮಾನಿಸಿ ಗೌರವಿಸಲಾಗುವುದು ಎಂದು ಸಂತ ಮೈಕಲರ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಬುಧವಾರ ಸಂಜೆ 5 ಗಂಟೆಗೆ ಸಂತ ಮೈಕಲರ ದೇವಾಲಯದಲ್ಲಿ ಆಡಂಬರ ಕೃತಜ್ಞತಾ ಗಾಯನ ಬಲಿಪೂಜೆ, 7 ಗಂಟೆಗೆ ಬೆಳ್ಳಿಗುರು ಜಾರ್ಜ್ ದೀಪಕ್ ರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ನಂತರ ಸಹಭೋಜನದ ವ್ಯವಸ್ಥೆ ಇದ್ದು ಸಂತ ಮೈಕಲರ ದೇವಾಲಯದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.
ವಿರಾಜಪೇಟೆ, ಫೆ.24 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರನ್ನು ನೇಮಕಮಾಡಿ, ಜಿಲ್ಲಾ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಆದೇಶಿಸಿದ್ದಾರೆ. ಮಡಿಕೇರಿ ತಾಲ್ಲೂಕು ಅಧ್ಯಕ್ಷರಾಗಿ ಪಾಲೇರ ಮಂದಣ್ಣ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾಗಿ ಅಪ್ಪುಡ ಸುದೀಶ್ ಕುಶಾಲಪ್ಪ, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷರಾಗಿ ವಿಜಯ್ ಪೂಜಾರಿ, ಪೊನ್ನಂಪೇಟೆ ತಾಲ್ಲೂಕು ಅಧ್ಯಕ್ಷರಾಗಿ ಬೊಟ್ಟಂಗಡ ಸುಮನ್ ಸೀತಮ್ಮ, ಕುಶಾಲನಗರ ತಾಲ್ಲೂಕು ಅಧ್ಯಕ್ಷರಾಗಿ ಸಿಂಚನ ಸಿ.ಮೋಹನ್ ಅವರುಗಳನ್ನು ಆಯ್ಕೆ ಮಾಡಲಾಗಿದ್ದು, ತಕ್ಷಣದಿಂದ ತಾಲ್ಲೂಕು ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳನ್ನು ಒಳಗೊಂಡಂತೆ ಸದಸ್ಯರನ್ನು ನೇಮಿಸಿ, ಜಿಲ್ಲೆಯಲ್ಲಿ ಮಕ್ಕಳ ಸಾಹಿತ್ಯ ಪರಿಷತ್ ಬೆಳವಣಿಗೆಗೆ ಪೂರಕ ಕಾರ್ಯಯೋಜನೆ ಸಿದ್ದಪಡಿಸುವಂತೆ ತಿಳಿಸಲಾಗಿದೆ ಎಂದು ಚಾಮೆರ ದಿನೇಶ್ ಬೆಳ್ಯಪ್ಪ ಹೇಳಿದ್ದಾರೆ.
ಮಡಿಕೇರಿ ಫೆ.24 NEWS DESK : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ರೋಟರಿ ಜಿಲ್ಲಾ ಮಟ್ಟದ ಪ್ರಥಮ ವಷ೯ದ ಕಬ್ಬಡಿ ಪಂದ್ಯಾವಳಿಯಲ್ಲಿ ಮಿಸ್ಟಿ ಹಿಲ್ಸ್ ತಂಡವು ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. ನಗರದ ಗಾಂಧಿ ಮೈದಾನದಲ್ಲಿ ಆಯೋಜಿತ ರೋಟರಿ ಜಿಲ್ಲೆ 3181 ನ ರೋಟರಿ ಸದಸ್ಯರಿಗಾಗಿನ ಕಬ್ಬಡಿ ಪಂದ್ಯಾಟದಲ್ಲಿ ಮಿಸ್ಟಿ ಹಿಲ್ಸ್ ತಂಡವು ತಂಡದನಾಯಕ ಕಪಿಲ್ ನೇತೖತ್ವದಲ್ಲಿ ಪಿರಿಯಾಪಟ್ಟಣ ಮಿಡ್ ಟೌನ್ ತಂಡವನ್ನು ಮಣಿಸಿ ಕಬ್ಬಡಿ ಚಾಂಪಿಯನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. 25 ಸಾವಿರ ನಗದು ಮತ್ತು ಟ್ಪೋಫಿಯನ್ನು ಮಿಸ್ಟಿ ಹಿಲ್ಸ್ ಪಡೆದುಕೊಂಡಿದೆ. ದ್ವಿತೀಯ ಬಹುಮಾನವನ್ನು ಪಿರಿಯಾಪಟ್ಟಣ ಮಿಡ್ ಟೌನ್ ತಂಡ ಪಡೆದುಕೊಂಡು 15 ಸಾವಿರ ರು. ನಗದು ಮತ್ತು ಟ್ರೋಫಿಯನ್ನು ಪಡೆದರೆ, ಸೆಂಟ್ರಲ್ ಪುತ್ತೂರು ತಂಡವು ತೖತೀಯ ಮತ್ತು ಹುಣಸೂರು ರೋಟರಿ ತಂಡವು ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಮಡಿಕೇರಿ ರೋಟರಿ ವುಡ್ಸ್ ತಂಡವು ಅತ್ಯಂತ ಶಿಸ್ತು ಬದ್ದ ತಂಡಕ್ಕಾಗಿನ ಪ್ರಶಸ್ತಿ ಪಡೆಯಿತು. ಆಲ್ ರೌಂಡರ್ ಆಟಗಾರ ಪ್ರಶಸ್ತಿಯನ್ನು ಪಿರಿಯಾಪಟ್ಟಣ ಮಿಡ್…
ಮಡಿಕೆಕೇರಿ ಫೆ.24 NEWS DESK : ರಕ್ತದಾನವು ಶ್ರೇಷ್ಠ ದಾನಗಳಲ್ಲಿ ಒಂದಾಗಿದ್ದು, ಮತ್ತೊಂದು ಜೀವವನ್ನು ಉಳಿಸುವ ಪುಣ್ಯ ಕೆಲಸ ಮಾಡಿದಂತೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟರು. ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಎನ್.ಎಸ್.ಎಸ್.ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ಮೈಸೂರಿನ ಸಂತ ಜೋಸೆಫರ ರಕ್ತನಿಧಿ ಘಟಕದ ಸಹಯೋಗದಲ್ಲಿ ವಿರಾಜಪೇಟೆ ನಗರದ ಸಂತ ಅನ್ನಮ್ಮ ಸಭಾಂಗಣದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಯುಗದಲ್ಲಿ ರಕ್ತದಾನವು ಶ್ರೇಷ್ಠದಾನವಾಗಿದ್ದು, ಹಲವು ಜನರ ಜೀವ ರಕ್ಷಣೆ ಮಾಡುವುದರಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ರಕ್ತದಾನ ಮಾಡುವುದರೊಂದಿಗೆ ದಾನಿಗಳ ಆರೋಗ್ಯ ವೃದ್ಧಿಸುವುದರೊಂದಿಗೆ ಒಂದು ಪುಣ್ಯ ಕಾರ್ಯದಲ್ಲಿ ಭಾಗವಹಿಸಿದ ಸಂತೃಪ್ತಿ ರಕ್ತದಾನಿಗಳಿಗೆ ಒದಗಲಿದೆ ಎಂದು ಹೇಳಿದರು. ಇಂತಹ ಸಮಾಜಮುಖಿ ಕಾರ್ಯಕ್ರಮವನ್ನು ಆಯೋಜಿಸಿದ ಆಯೋಜಕರಿಗೆ ಅಭಿನಂದನೆ ಸಲ್ಲಿಸಿದ ಶಾಸಕರು, ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳು ಮತ್ತಷ್ಟು ನಡೆಯಲಿ ಎಂದು ಹಾರೈಸಿದರು. ವಿದ್ಯಾರ್ಥಿಗಳು ಉತ್ತಮ ಪರಿಸರ…
ಮಡಿಕೇರಿ NEWS DESK ಫೆ.24 : ಬೇಂಗ್ ನಾಡ್ ಕೊಡವ ಸಮಾಜದ ನೂತನ ಪ್ರವೇಶದ್ವಾರ ಮತ್ತು ಅಡುಗೆ ಮನೆಯನ್ನು ದಾನಿಗಳಾದ ತೇಲಪಂಡ ಪ್ರದೀಪ್ ಪೂವಯ್ಯ ಹಾಗೂ ನೂರೆರ ಮಿಟ್ಟು ಸುಬ್ಬಯ್ಯ ಅವರು ಉದ್ಘಾಟಿಸಿದರು. ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ದಿನೇಶ್ ಗಣಪತಿ, ಉಪಾಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಸಮಾಜದ ಸದಸ್ಯರು ಮತ್ತಿತರರು ಹಾಜರಿದ್ದರು. *ವಾರ್ಷಿಕ ಮಹಾಸಭೆ* ಇದೇ ಸಂದರ್ಭ ಬೇಂಗ್ ನಾಡ್ ಕೊಡವ ಸಮಾಜದ ವಾರ್ಷಿಕ ಮಹಾಸಭೆ ಬಾಚರಣಿಯಂಡ ದಿನೇಶ್ ಗಣಪತಿ ಅವರ ಅದ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಮಾಜದ ಸ್ಥಾಪಕ ಅಧ್ಯಕ್ಷರನ್ನು, ಇಲ್ಲಿಯವರೆಗೆ ಕಾರ್ಯನಿರ್ವಹಿಸಿದ ಅಧ್ಯಕ್ಷರನ್ನು ಹಾಗೂ ಬೇರೆ ಸಂಘ ಸಂಸ್ಥೆಗಳಲ್ಲಿ ಚುನಾಯಿತರಾಗಿ ಅಧಿಕಾರದಲ್ಲಿರುವ ಸಮಾಜದ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಸ್ಥಾಪಕ ಅಧ್ಯಕ್ಷ ದಿ.ಕಲ್ಮಾಡಂಡ ಅಯ್ಯಣ್ಣ ಅವರ ಪರವಾಗಿ ಪುತ್ರ ಕೆ.ಎ.ರವಿ ದೇವಯ್ಯ, ಮಾಜಿ ಅಧ್ಯಕ್ಷ ದಿ.ಮಂದಪಂಡ ತಿಮ್ಮಯ್ಯ ಅವರ ಪುತ್ರ ಎಂ.ಟಿ.ಸುಬ್ಬಯ್ಯ, ಮಾಜಿ ಅಧ್ಯಕ್ಷ ದಿ.ಪಟ್ಟಮಾಡ ಜೋಯಪ್ಪ ಅವರ ಪುತ್ರ ಪಿ.ಜೆ.ಗವಿನ್, ಮಾಜಿ ಅಧ್ಯಕ್ಷ ದಿ.ಕಲ್ಮಾಡಂಡ ಕೆ.ಗಣಪತಿ ಅವರ ಪುತ್ರ ಕೆ.ಜಿ.ಕುಟ್ಟಪ್ಪ, ಮಾಜಿ ಅಧ್ಯಕ್ಷರುಗಳಾದ…
ಮಡಿಕೇರಿ NEWS DESK ಫೆ.24 : ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮಕ್ಕಳಲ್ಲಿ ಅಡಗಿರುವ ಕಲಾಪ್ರತಿಭೆಯನ್ನು ಅನಾವರಣಗೊಳಿಸಲು ಪೊಲೀಸ್ ಸಾಂಸ್ಕೃತಿಕ ವೇದಿಕೆ ಸದ್ಬಳಕೆಯಾಗಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಕರೆ ನೀಡಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್ ನ ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ ವತಿಯಿಂದ ತಿಂಗಳಿಗೊಂದು ಕಾರ್ಯಕ್ರಮದಡಿ ಮಿಡಿದ ಪೊಲೀಸ್ ಹೃದಯಗಳಿಂದ ಘೋಷವಾಕ್ಯದ “ಪ್ರತಿಭೋತ್ಸವ” ಮಡಿಕೇರಿಯ ಗಾಂಧಿ ಭವನದಲ್ಲಿ ನಡೆಯಿತು. ಜನಪದ ಗೀತೆ ಮತ್ತು ಭಾವಗೀತೆಗಳ ಸಂಗಮದ “ಪ್ರತಿಭೋತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಂ.ಪಿ.ಕೇಶವ ಕಾಮತ್, ಕಾನೂನನ್ನು ಕಾಪಾಡುವ ಪೊಲೀಸರಲ್ಲಿ ಕೂಡ ಕಲಾವಿದನಿರುತ್ತಾನೆ. ಈ ಕಲಾವಿದನ ಪ್ರತಿಭೆಯನ್ನು ಪ್ರತಿಬಿಂಬಿಸಲು ಪೊಲೀಸ್ ಸಾಂಸ್ಕೃತಿಕ ವೇದಿಕೆ ಹೆಚ್ಚು ಉಪಯುಕ್ತವಾಗಿದೆ. ಇದೇ ವೇದಿಕೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮಕ್ಕಳ ಪ್ರತಿಭೆ ಕೂಡ ಅನಾವರಣಗೊಳ್ಳಬೇಕು. ಇದರಿಂದ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ದೊರೆತಂತ್ತಾಗುತ್ತದೆ ಮತ್ತು ಶಾಲಾ, ಕಾಲೇಜುಗಳಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ…
ಸುಂಟಿಕೊಪ್ಪ NEWS DESK ಫೆ.24 : ಸುಂಟಿಕೊಪ್ಪ ನಗರದಲ್ಲಿ ಸುಂಟಿಕೊಪ್ಪ ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ದ್ವಿಚಕ್ರ ವಾಹನ ಸವಾರರಿಗೆ ಚಾಲನಾ ಸುರಕ್ಷತೆ, ರಸ್ತೆ ಸುರಕ್ಷತೆ ಮತ್ತು ವಾಹನ ಚಾಲನೆಯ ಕುರಿತು ಜಾಗೃತಿ ಮೂಡಿಸಿದರು. ವಾಹನ ಚಾಲನೆಯ ಸಮಯದಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ತಿಳಿಸಿದ ಅಧಿಕಾರಿಗಳು ಮಕ್ಕಳು ಕೂಡ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಸಲಹೆ ನೀಡಿದರು.
ಸೋಮವಾರಪೇಟೆ NEWS DESK ಫೆ.24 : ಕೊಡಗು ವಿಶ್ವವಿದ್ಯಾನಿಲಯ ಮುಚ್ಚುವ ಸರ್ಕಾರದ ಕ್ರಮ ಖಂಡನೀಯ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಲವು ದಶಕಗಳ ಕೊಡಗು ವಿ.ವಿ ಕನಸನ್ನು ಈ ಹಿಂದಿನ ಸರ್ಕಾರ ಸಾಕಾರಗೊಳಿಸಿದೆ. ಯಾವುದೇ ಸರ್ಕಾರವಾದರು ಅನುದಾನ ಒದಗಿಸಿ ಅವುಗಳನ್ನು ಉಳಿಸಿಕೊಳ್ಳಬೇಕಾಗಿರುವುದು ಅದರ ಕರ್ತವ್ಯ, ಅನುದಾನ ನೀಡದೆ ವಿ.ವಿ ಮುಚ್ಚುವ ಕ್ರಮ ಸರಿಯಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಲವಾರು ವರ್ಷಗಳಿಂದ ಕೊಡಗಿನ ವಿದ್ಯಾರ್ಥಿಗಳು ಮಂಗಳೂರು ವಿ.ವಿ.ಯನ್ನು ಅವಲಂಬಿಸಿ ಹೈರಾಣಾಗಿದ್ದಾರೆ ಎಂದಿರುವ ಅವರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಕೊಡಗು ಜಿಲ್ಲೆ ಈ ವಿ.ವಿ.ಪ್ರಾರಂಭದಿಂದಾಗಿ ಅಭಿವೃದ್ಧಿಯ ಹೊಸ ಚಿಗುರು ಕಂಡಂತಾಗಿತ್ತು ಆದರೆ ಸರ್ಕಾರದ ಈ ಕ್ರಮದಿಂದಾಗಿ ಜಿಲ್ಲೆಯ ಜನತೆಯ ಕನಸಿಗೆ ತಣ್ಣೀರೆರೀಚಿದಂತಾಗಿದೆ ಎಂದಿದ್ದಾರೆ. ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು, ಲೋಕಸಭಾ ಸದಸ್ಯರು ಪಕ್ಷಾತೀತವಾಗಿ ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದು ಕೊಡಗು ವಿವಿ ಯನ್ನ ಉಳಿಸಿಕೊಳ್ಳುವುದರೊಂದಿಗೆ ಮುಂದಿನ ಬಜೆಟ್ ನಲ್ಲಿ ಅನುದಾನ ಒದಗಿಸಲು ಶ್ರಮವಹಿಸಬೇಕೆಂದು…
ಪುತ್ತೂರು NEWS DESK ಫೆ.24 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಾಜೇಶ್ವರಿ.ಎಂ ಅವರು ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. ಪಯನೀಯರಿಂಗ್ ಫೇಶಿಯಲ್ ಇಮೋಶನ್ ಅನಾಲಿಟಿಕ್ಸ್; ಏನ್ ಇನೋವೇಟಿವ್ ಫ್ಯೂಷನ್ ಆಫ್ ಡೀಪ್ ಲರ್ನಿಂಗ್ ಎಂಡ್ ವೈಟ್ ನಾರ್ಮಲೈಸ್ಡ್ ಗ್ರೇಡಿಯೆಂಟ್ ಬೂಸ್ಟಿಂಗ್ ಟೆಕ್ನಿಕ್ (Pioneering facial emotion analytics: An innovative fusion of deep learning and weight normalized gradient boosting technics) ಎನ್ನುವ ವಿಷಯದ ಬಗ್ಗೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ.ಸುರೇಶ.ಡಿ ಹಾಗೂ ಎ.ಜೆ ಇನ್ಸ್ ಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಕೃಷ್ಣಪ್ರಸಾದ್.ಡಿ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆಯನ್ನು ಮಾಡಿದ್ದಾರೆ. 21 ವರ್ಷಗಳ ಬೋಧನಾ ಅನುಭವವನ್ನು ಹೊಂದಿರುವ ಇವರು ಕಾಲೇಜಿನ ಎಂಸಿಎ ವಿಭಾಗದ ವಿದ್ಯಾರ್ಥಿಗಳಿಗೆ ನೂತನ ತಂತ್ರಜ್ಞಾನದ ಬಗ್ಗೆ ತಮ್ಮ ಅಪಾರ ತಿಳುವಳಿಕೆಯನ್ನು…






