ಸೋಮವಾರಪೇಟೆ ಮಾ.17 NEWS DESK : ಕುಮಾರಳ್ಳಿ ಶ್ರೀ ಸಬ್ಬಮ್ಮ ಭದ್ರಕಾಳಿ ದೇವಿಯ ಪ್ರಧಾನ ಶಿಲಾ ಪ್ರತಿಮೆ ಪ್ರತಿಷ್ಠಾಪನೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಹೆದ್ದೇವರ ಗುಡಿಯಲ್ಲಿ ಗಣಪತಿ ಪ್ರಾರ್ಥನೆ ನೆರವೇರಿಸಿ, ಶ್ರೀ ಸಬ್ಬಮ್ಮ ಬನದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ನಂತರ ಪ್ರಸಾದ ವಿತರಿಸಲಾಯಿತು. ಮರುದಿನ ಹೆದ್ದೇವರ ಗುಡಿಯಿಂದ ಸಬ್ಬಮ್ಮ ಸುಗ್ಗಿ ಬನದ ವರೆಗೆ 160 ಕಳಸಗಳನ್ನು ಹೊತ್ತ ಗ್ರಾಮದ ಮಹಿಳೆಯರು ಮೆರವಣಿಗೆ ನಡೆಸಿದರು. ಶ್ರೀ ಸಬ್ಬಮ್ಮ ದೇವಿ ಶಿಲೆಗೆ ಕ್ಷೀರ, ಪಂಚಾಮೃತ, ಎಳೆನೀರು ಅಭಿಷೇಕ ಮಾಡಲಾಯಿತು. ಗ್ರಾಮದ ಸಮೃದ್ಧಿ, ಮಳೆಗಾಗಿ ಗ್ರಾಮಸ್ಥರು ಸಾಮೂಹಿಕ ಪೂಜೆ ನಡೆಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಕುಮಾರಳ್ಳಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಯು.ಕೆ.ದೇಶರಾಜು, ಹಗ್ಗಡಮನೆ ಶಾಂತಮಲ್ಲಿಕಾರ್ಜುನ ದೇವಾಲಯ ಸಮಿತಿ ಅಧ್ಯಕ್ಷ ಟಿ.ಪಿ.ಚಂಗಪ್ಪ, ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ.ತಮ್ಮಯ್ಯ, ಶಾಂತಳ್ಳಿ ಶ್ರೀಕುಮಾರಲಿಂಗೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎಂ.ಲೋಕೇಶ್, ಉದ್ಯಮಿ ಹರಪಳ್ಳಿ ರವೀಂದ್ರ, ನಿವೃತ್ತ ಇಂಜಿನಿಯರ್ ಜಯರಾಮ್ ಇದ್ದರು.
ಲೇಖಕ: admin
ಮಡಿಕೇರಿ ಮಾ.17 NEWS DESK : ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಮಿತಿ ವತಿಯಿಂದ ಕನ್ನಡ ಭವನದ ಕೊಡಗು ಜಿಲ್ಲಾ ಘಟಕ ಹಾಗೂ ಕನ್ನಡ ಚುಟುಕು ಸಾಹಿತ್ಯ ಪರಿಷತ್ ನ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಮಾ.23 ರಂದು ಮಡಿಕೇರಿಯಲ್ಲಿ ನಡೆಯಲಿದೆ. ನಗರದ ಪತ್ರಿಕಾ ಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕನ್ನಡ ಭವನದ ಸ್ಥಾಪಕ ಸಂಚಾಲಕ ಡಾ.ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಉದ್ಘಾಟಿಸಲಿದ್ದು, ಕನ್ನಡ ಭವನದ ಕೊಡಗು ಜಿಲ್ಲಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ, ಹಿರಿಯ ಸಾಹಿತಿ ಭಾರಧ್ವಜ್ ಕೆ.ಆನಂದತೀರ್ಥ, ಕನ್ನಡ ಭವನ ಕೇಂದ್ರ ಸಮಿತಿಯ ಉಪಾಧ್ಯಕ್ಷ ಕೆ.ಪಿ.ರಾಜೇಶ್ ಚಂದ್ರ ಪಾಲ್ಗೊಳ್ಳಲಿದ್ದಾರೆ. ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾಧ್ಯಕ್ಷ ವಿರಾಜ್ ಅಡೂರು ಪ್ರಾಸ್ತಾವಿಕ ನುಡಿಯಾಡಲಿದ್ದಾರೆ. ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷೆ ಎಂ.ಎ.ರುಬೀನಾ, ಜಿಲ್ಲಾ ಕೋಶಾಧಿಕಾರಿ…
ಮಡಿಕೇರಿ ಮಾ.17 NEWS DESK : ನಾಪೋಕ್ಲು ವ್ಯಾಪ್ತಿಯ ಬಲ್ಲಮಾವಟಿ ಪಂಚಾಯ್ತಿ ಕಚೇರಿಯಲ್ಲಿ ನಾಪೋಕ್ಲು ಠಾಣಾ ಪಿಎಸ್ಐ ಸಮುದಾಯ ಆರೋಗ್ಯ ಅಧಿಕಾರಿಗಳ ಸಭೆ ನಡೆಸಿದರು. ಬಲ್ಲಮಾವಟಿ ಮತ್ತು ಸುತ್ತಲಗ್ರಾಮಗಳ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯ ಅಧಿಕಾರಿಗಳ ಸಭೆ ನಡೆಸಿ, ಹೆಣ್ಣು ಮಕ್ಕಳ ಸುರಕ್ಷತೆ ಹಾಗೂ ಹೆಣ್ಣು ಮಕ್ಕಳಿಗೆ ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಲಾಯಿತು.
ಮಡಿಕೇರಿ ಮಾ.17 NEWS DESK : ಕೊಡಗು ವಿಶ್ವವಿದ್ಯಾಲಯವನ್ನು ಸ್ವತಂತ್ರವಾಗಿ ಉಳಿಸಿ ಅಭಿವೃದ್ಧಿಗೊಳಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಕ್ತ ಸಲಹೆ ಸೂಚನೆ ನೀಡುವ ಸಂಬಂಧ ಕೊಡಗು ಜಿಲ್ಲಾ ಸಂಘ, ಸಂಸ್ಥೆಗಳ ಒಕ್ಕೂಟ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಿಗೆ ಮನವಿ ಪತ್ರ ಸಲ್ಲಿಸಿತು. ಈ ಸಂದರ್ಭ ಪ್ರತಿಕ್ರಿಯಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯೆ ವಿಜಯ ಭಾರತಿ ಸಯಾನಿ ಮತ್ತು ಮಾಜಿ ಸದಸ್ಯರಾದ ರಾಜೀವ್ ಜೈನ್ ಸರ್ಕಾರದ ಗಮನ ಸೆಳೆಯುವುದಾಗಿ ಭರವಸೆ ವ್ಯಕ್ತಪಡಿಸಿದರು. ವಿವಿ ಹಿತರಕ್ಷಣಾ ಸಮಿತಿ, ಪ್ರಮುಖ ಸಂಘ ಸಂಸ್ಥೆಗಳಾದ ಕರ್ನಾಟಕ ರಕ್ಷಣಾ ವೇದಿಕೆ, ಕುಶಾಲನಗರ ಗೌಡ ಸಮಾಜ, ಕಾವೇರಿ ಮೀಡಿಯಾ ನೆಟ್ವರ್ಕ್, ಕಾವೇರಿ ಆರತಿ ಬಳಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕುಶಾಲನಗರ ತಾಲ್ಲೂಕು ಸೌಂದರ್ಯ ತಜ್ಞರ ವೇದಿಕೆ, ರಾಷ್ಟ್ರೀಯ ಮಕ್ಕಳ ಸಾಹಿತ್ಯ ವೇದಿಕೆ, ವಿವಿ ಬೋಧಕ ಬೋಧಕೇತರ ಸಿಬ್ಬಂದಿಗಳು, ಸ್ಥಳೀಯ ಪ್ರಮುಖರು ಹಾಜರಿದ್ದರು.
ಸಿದ್ದಾಪುರ ಮಾ.17 NEWS DESK : ರಂಜಾನ್ ಉಪವಾಸ ಆಚರಣೆಯ ಅಂಗವಾಗಿ ನೈಮ ಸಂಘಟನೆ ವತಿಯಿಂದ ನೆಲ್ಲಿಹುದಿಕೇರಿಯಲ್ಲಿ ಬೃಹತ್ ಇಫ್ತಾರ್ ಸೌಹಾರ್ದ ಸಂಗಮ ನಡೆಯಿತು. ನೆಲ್ಲಿಹುದಿಕೇರಿಯ ಶಾದಿ ಮಹಲ್ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಲ್ ಖತೀಬ್ ರೌವೂಪ್ ಹುದವಿ ಮಾತನಾಡಿ, ದುಶ್ಚಟಗಳಿಂದ ದೂರವಿದ್ದು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಧಾರ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಂಡು ಮುನ್ನಡೆದಲ್ಲಿ ಸೌಹಾರ್ದ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದರು. ಜಿ.ಪಂ ಮಾಜಿ ಸದಸ್ಯ ಸುಂಟಿಕೊಪ್ಪದ ಪಿ.ಎಂ.ಅಬ್ದುಲ್ ಲತೀಫ್ ಮಾತನಾಡಿ, ಸೌಹಾರ್ದತೆಗೆ ಹೆಸರುವಾಸಿಯಾದ ಗ್ರಾಮದಲ್ಲಿ ನೈಮ ಸಂಘಟನೆ ಇಫ್ತಾರ್ ಕೂಟವನ್ನು ಆಯೋಜನೆ ಮಾಡುವುದರ ಮೂಲಕ ಬಾಂಧವರನ್ನ ಒಗ್ಗೂಡಿಸಿ ಸೌಹಾರ್ದ ಸಂಗಮ ನಿರ್ಮಾಣ ಮಾಡಿದ್ದಾರೆ. ಶಾಂತಿ ಸಹ ಬಾಳ್ವೆಯ ಸೌಹಾರ್ದ ಸಂಕೇತದ ಆಚರಣೆಗಳನ್ನು ಮಾಡುವುದರ ಮೂಲಕ ಸಹೋದರತ್ವದೊಂದಿಗೆ ಸಹಬಾಳ್ವೆಯ ಜೀವನ ನಡೆಸುವಂತಾಗಲಿ ಎಂದು ಹಾರೈಸಿದರು. ಸಾಮಾಜಿಕ ಕಾರ್ಯಕರ್ತ ನಿಯಾಜ್ ಮಾತನಾಡಿ, ನೆಲ್ಲಿಹುದಿಕೇರಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಆರೋಗ್ಯ, ಶೈಕ್ಷಣಿಕ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಯುವ ಸಮೂಹವನ್ನ ಒಗ್ಗೂಡಿಕೆಯೊಂದಿಗೆ ಸೇವಾ…
ಮಡಿಕೇರಿ ಮಾ.17 NEWS DESK : ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಹೋಟೆಲ್, ರೆಸಾರ್ಟ್ ಮತ್ತು ಹೋಂ ಸ್ಟೇ ಮಾಲೀಕರುಗಳ ಸಭೆ ನಡೆಯಿತು. ಸಭೆಯಲ್ಲಿ ಠಾಣಾಧಿಕಾರಿಗಳು ವಿದೇಶಿ ಪ್ರವಾಸಿಗರ ಭೇಟಿ ಸಂದರ್ಭ ಕಾನೂನು ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಪ್ರವಾಸಿಗರಿಂದ ಪಡೆದುಕೊಳ್ಳಬೇಕಾದ ದಾಖಲೆಗಳು, ನಿರ್ವಹಿಸಬೇಕಾದ ದಾಖಲೆಗಳು ಹಾಗೂ ವಿದೇಶಿ ಪ್ರವಾಸಿಗರ ಭೇಟಿಯ ಸಮಯದಲ್ಲಿ ಕಾನೂನು ಪ್ರಕಾರ ನಡೆಸಬೇಕಾದ ನೋಂದಣಿ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡಲಾಯಿತು.
ಮಡಿಕೇರಿ ಮಾ.17 NEWS DESK : ವಿರಾಜಪೇಟೆ ನಗರ ಮತ್ತು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಬಸ್ ಮಾಲೀಕರು, ಚಾಲಕರು, ಏಜೆಂಟರು ಹಾಗೂ ನಗರದ ಆಟೋ ಮಾಲೀಕರು, ಚಾಲಕರುಗಳ ಸಭೆ ನಡೆಯಿತು. ವಿರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಾಹನ ಮಾಲೀಕರು ಮತ್ತು ಚಾಲಕರಿಗೆ ಸಂಚಾರ ಸುರಕ್ಷತೆ, ಸುರಕ್ಷಿತ ವಾಹನ ಚಾಲನೆ ಮತ್ತು ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿದರು.
*ಸದನದಲ್ಲಿ ಮುಖ್ಯಮಂತ್ರಿಗಳ ಉತ್ತರ* ಬೆಂಗಳೂರು NEWS DESK ಮಾ.17 : *NDA-BJP ಸರ್ಕಾರದ ಸಚಿವರುಗಳು, ಅಧಿಕಾರಿಗಳು ನನ್ನಲ್ಲಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಿದ್ದು ಏಕೆ: ಬಿಜೆಪಿಯವರಿಗೆ ನೇರ ಪ್ರಶ್ನೆ ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ* *ಕೇಂದ್ರ ಸರ್ಕಾರದ Indian institute of Public Administration ಸಂಸ್ಥೆಯ ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸಚಿವ ಜಿತೇಂದ್ರ ಸಿಂಗ್ ಪ್ರಶಂಸೆಯ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕೊಟ್ಟಿದ್ದಾರೆ: ಇಲ್ಲಿ ನೀವು ವಿರೋಧಿಸುತ್ತಿದ್ದೀರಿ, ಏನಿದು: ಸಿ.ಎಂ ಪ್ರಶ್ನೆ* ಗ್ಯಾರಂಟಿ ಯೋಜನೆಗಳನ್ನು ನೀವು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಕಲು ಮಾಡಿದ್ದೀರಿ. ವಿರೋಧ ಮಾಡುವುದಾದರೆ ನಕಲು ಏಕೆ ಮಾಡಬೇಕಿತ್ತು. ಸತ್ಯ ಯಾವಾಗಲೂ ಕಹಿಯಾಗಿರುತ್ತದೆ. ನಾವು ವಾಸ್ತವವನ್ನು ಹೇಳುತ್ತಿದ್ದೇವೆ. ದಿನಾಂಕ 3-1-2025 ರಂದು ಚಂದ್ರ ಬಾಬು ನಾಯ್ದು ಅವರ ಸರ್ಕಾರದ ಮಂತ್ರಿಗಳು ಹಾಗೂ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಕುರಿತು ಅಧ್ಯಯನ ಮಾಡಿ ಹೋಗಿದ್ದಾರೆ. ಸಚಿವ ರಾಮಲಿಂಗಾರೆಡ್ಡಿ ಹಾಗೂ ನನ್ನನ್ನು ಭೇಟಿಯಾಗಿ ಚರ್ಚಿಸಿದ್ದಾರೆ. 2-2-2025 ರಂದು ಮಹಾರಾಷ್ಟ್ರದ ಸಾರಿಗೆ ಸಚಿವರಾದ ಪ್ರತಾಪ್ ಸರ್ನಾಯಕ್ ಶಕ್ತಿ ಯೋಜನೆ ಬಗ್ಗೆ ಚರ್ಚಿಸಿ…
ಮಡಿಕೇರಿ NEWS DESK ಮಾ.17 : ನಾಡಿನ ಜೀವನದಿ ಕಾವೇರಿ ಉಗಮಿಸುವ ತಲಕಾವೇರಿ ಹಾಗೂ ಶ್ರೀಭಗಂಡೇಶ್ವರ ಪುಣ್ಯ ಕ್ಷೇತ್ರಗಳಿಗೆ ತೆರಳುವ ಭಾಗಮಂಡಲ ರಸ್ತೆ ಒಟ್ಟು 7.50 ಕೋಟಿ ರೂ.ಗಳಲ್ಲಿ ಅಭಿವೃದ್ಧಿಯಾಗಲಿದೆ.NEWS DESK ತಲಕಾವೇರಿ ಹಾಗೂ ಶ್ರೀಭಗಂಡೇಶ್ವರ ಕ್ಷೇತ್ರಗಳಿಗೆ ಪ್ರತಿದಿನ ಸಾವಿರಾರು ಭಕ್ತರು, ಪ್ರವಾಸಿಗರು ಭೇಟಿ ನೀಡುತ್ತಾರೆ. ನಿತ್ಯ ಭಾಗಮಂಡಲ ರಸ್ತೆಯಲ್ಲಿ ಪ್ರವಾಸಿಗರ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತವೆ. ಆದರೆ ಪುಣ್ಯಕ್ಷೇತ್ರಗಳಿಗೆ ತೆರಳುವ ಈ ಹೆದ್ದಾರಿ ಹೊಂಡ, ಗುಂಡಿಗಳಿಂದ ಕೂಡಿದ್ದು, ಸಂಚಾರಕ್ಕೆ ಯೋಗ್ಯವಾಗಿಲ್ಲ ಎನ್ನುವ ಅಸಮಾಧಾನ ಸಾರ್ವಜನಿಕ ವಲಯದಿಂದ ಕೇಳಿ ಬಂದಿತ್ತು.NEWS DESKಇದನ್ನು ಮನಗಂಡ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ರಸ್ತೆಯ ಅಭಿವೃದ್ಧಿಗೆ ತ್ವರಿತ ಕ್ರಮ ಕೈಗೊಂಡಿದ್ದಾರೆ. ಭಾಗಮಂಡಲ- ಚೆಟ್ಟಿಮಾನಿ ವ್ಯಾಪ್ತಿಯ ರಸ್ತೆ 2 ಕೋಟಿ ರೂ., ಬೆಟ್ಟಗೇರಿ- ಅಪ್ಪಂಗಳ 4 ಕೋಟಿ ರೂ. ಮತ್ತು ಚೇರಂಬಾಣೆ- ಕೊಟ್ಟೂರು ಭಾಗದ ರಸ್ತೆ 1.50 ಕೋಟಿ ರೂ.ಗಳಲ್ಲಿ ಅಭಿವೃದ್ಧಿಯಾಗಲಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರ ಕಾಮಗಾರಿ…
ಮಡಿಕೇರಿ ಮಾ.17 NEWS DESK : ಶಿವುಮಾದಪ್ಪ ನಿಧನದಿಂದ ಕಾಂಗ್ರೆಸ್ ಪಕ್ಷದಲ್ಲಿನ ಮತ್ತೊಂದು ಕೊಂಡಿ ಕಳೆದುಕೊಂಡಿದೆ ಎನ್ನಬಹುದು. ನಾನು ರಾಜಕೀಯದಲ್ಲಿ ಸಕ್ರಿಯನಾದರು ಯಾವುದೇ ನಾಯಕರೊಡನೇ ಒಡನಾಟ ಕಮ್ಮಿ. ಏಕೆಂದರೆ ನನಗೆ ಅನಾವಶ್ಯಕವಾಗಿ ಅವರಿಗೆ ಕಿರಿಕಿರಿ ಮಾಡಲು ಇಷ್ಟ ಇಲ್ಲ ಅದು ಎಲ್ಲಾ ನಾಯಕರುಗಳಿಗೂ ಗೊತ್ತು. ಆದರೆ ಎಲ್ಲರೊಡನೆ ಉತ್ತಮ ಬಾಂಧವ್ಯ ಇಟ್ಟುಕೊಂಡಿರುತ್ತೇನೆ. ಪಕ್ಷದ ಕೆಲಸ ಮಾಡಿ ಸುಮ್ಮನೆ ಇದ್ದು ಬಿಡುತ್ತಿದ್ದೆ. ನಾನು ಮಾನಸಿಕವಾಗಿ ನೋವು ಅನುಭವಿಸಿದ್ದು, ಬಿ.ಟಿ.ಪ್ರದೀಪ್ ಅವರನ್ನು ಕಳೆದುಕೊಂಡಾಗ ಮನದಲ್ಲಿ ಒಂದು ರೀತಿಯ ಮಾನಸಿಕ ಹಿಂಸೆ ಅನುಭವಿಸಿದೆ. ನಾನು ಮೊದಲೇ ಹೇಳಿದಂತೆ ನನಗೆ ಅವರ ಒಡನೆ ಹೇಳಿಕೊಳ್ಳುವ ಒಡನಾಟ ಇರಲಿಲ್ಲ. ಆದರೂ ಅವರು ಮನಸ್ಸಿಗೆ ನಾಟಿಕೊಂಡಿದ್ದರು. ನಾನು ನಾಪೋಕ್ಲುವಿನ ತೋಟಕ್ಕೆ ಬೆಳಿಗ್ಗೆ 7 ಗಂಟೆಗೆ ಹೋಗುವಾಗ ದಾರಿಯಲ್ಲಿ ಅವರ ಕಾರು ಸಿಗುತ್ತಿತ್ತು. ಅಷ್ಟು ಹೊತ್ತಿಗೆ ಮನೆ ಬಿಟ್ಟರೆ ಹಿಂದುರುಗುವುದು ರಾತ್ರಿ ಇದರಲ್ಲಿ ವಿಶೇಷ ಏನು ಇಲ್ಲ. ಎಲ್ಲಾ ರಾಜಕಾರಣಿಗಳು ಮಾಡುವುದು ಇದೇ ಕೆಲಸ, ಇಲ್ಲಿ ಪ್ರಶ್ನೆ ಏನೆಂದರೆ ಇಷ್ಟು ಕಷ್ಟ…






