ಲೇಖಕ: admin

ಕುಶಾಲನಗರ NEWS DESK ಫೆ.22 : ಕೊಡಗು ವಿಶ್ವ ವಿದ್ಯಾಲಯವನ್ನು ಬಂದ್ ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಅಖಿಲಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಶಿವಪ್ಪ ಹೇಳಿದರು. ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು ಕೊಡಗು ಗುಡ್ಡಗಾಡು ಪ್ರದೇಶ ಹಾಗೂ ಇಲ್ಲಿನ ಬಹುತೇಕ ಸಮುದಾಯ ಕೂಲಿಕಾರ್ಮಿಕರಾಗಿದ್ದಾರೆ. ಗ್ರಾಮೀಣ ಹಾಗೂ ಜನಸಾಮಾನ್ಯರ ಮಕ್ಕಳಿಗೆ ಕೊಡಗು ವಿವಿ ರಚನೆಯಿಂದ‌ ಮನೆ ಬಾಗಿಲಲ್ಲಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣ ದೊರೆಯುತ್ತಿದೆ.ಕೊಡಗು ವಿವಿ ಬಂದ್‌ ಮಾಡಿದರೆ ಉನ್ನತ ಶಿಕ್ಷಣಕ್ಕಾಗಿ ಮಂಗಳೂರು ಹಾಗೂ ಮೈಸೂರು ಅವಲಂಬಿಸಬೇಕಾಗುತ್ತದೆ. ಜೊತೆಗೆ ಉನ್ನತ ಶಿಕ್ಷಣಕ್ಕೆ ಅವಕಾಶಗಳು ಕಡಿಮೆ ಇರುತ್ತವೆ. ಆದ್ದರಿಂದ ಇಲ್ಲಿನ‌ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೊಡಗು ವಿವಿಯನ್ನು ಅಳುವಾರದಲ್ಲಿ ಉಳಿಸಿ ಮುಂದುವರೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದರು. ಕೊಡಗು ವಿವಿ ಉಳಿವಿಗಾಗಿ ಹಿತರಕ್ಷಣಾ ಬಳಗದ‌ ಹೋರಾಟಕ್ಕೆ ನಮ್ಮ ಸಂಘಟನೆ ವತಿಯಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದರು. ಕೊಡಗು ವಿವಿ ಮುಂದುವರಿಸುವಂತೆ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ…

Read More

ಕುಶಾಲನಗರ NEWS DESK ಫೆ 22: ಕುಶಾಲನಗರ ಲಯನ್ಸ್ ಕ್ಲಬ್ ಗೆ ಲಯನ್ಸ್ ಜಿಲ್ಲಾ ಗವರ್ನರ್‌ ಬಿ.ಎಂ.ಭಾರತಿ ಅಧಿಕೃತ ಭೇಟಿ ಕಾರ್ಯಕ್ರಮ ನಡೆಯಿತು. ಕುಶಾಲನಗರ ಗೌಡ ಸಮಾಜ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಅವರು, ಕುಶಾಲನಗರ, ಮಡಿಕೇರಿ, ಸುಂಟಿಕೊಪ್ಪ, ಸೋಮವಾರಪೇಟೆ ಕ್ಲಬ್ ಪ್ರಮುಖರೊಂದಿಗೆ ಚರ್ಚೆ ನಡೆಸಿದರು. ಕುಶಾಲನಗರ ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ಪ್ರವೀಣ್ ದೇವರಗುಂಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯಾ ಕ್ಲಬ್ ಗಳ ಕಾರ್ಯದರ್ಶಿ ಗಳು ತಮ್ಮ‌ ಕ್ಲಬ್ ನ‌ ವಾರ್ಷಿಕ ವರದಿ ವಾಚಿಸಿದರು. ಇದೇ ಸಂದರ್ಭ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾದ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಮಾತನಾಡಿದ ಜಿಲ್ಲಾ ಗವರ್ನರ್ ಬಿ.ಎಂ.ಭಾರತಿ, ಜಿಲ್ಲೆಯ‌ ಲಯನ್ಸ್ ಕ್ಲಬ್ ಗಳ‌ ಪದಾಧಿಕಾರಿಗಳು ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ಮತ್ತಷ್ಟು ತೊಡಗಿಸಿಕೊಂಡು ಸಾಧನೆ ತೋರಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರ ಶ್ರಮ ಅಗತ್ಯ. ಜಿಲ್ಲೆಯಲ್ಲಿ ಹೆಚ್ಚಿನ ಸದಸ್ಯತ್ವಕ್ಕೆ‌ ಕೂಡ ಎಲ್ಲರೂ ಒತ್ತು‌ ನೀಡಬೇಕಿದೆ. ಮಕ್ಕಳನ್ನು ಸುಶಿಕ್ಷಿತರಾಗಿಸುವುದೇ ಅವರಿಗೆ ನೀಡುವ ನಿಜವಾದ ಸಂಪತ್ತು.‌ ಆಸ್ತಿ…

Read More

ಮಡಿಕೇರಿ ಫೆ.22 NEWS DESK :  ಕಡಗದಾಳು ಗ್ರಾಮದಲ್ಲಿರುವ ಶ್ರೀ ಬೊಟ್ಲಪ್ಪೇಶ್ವರ ದೇವಾಲಯದಲ್ಲಿ ಫೆ.26 ಮತ್ತು 27 ರಂದು ಮಹಾಶಿವರಾತ್ರಿಯ ವಾರ್ಷಿಕ ಮಹಾಪೂಜೆ ನಡೆಯಲಿದೆ. ಫೆ.26  ಬಿಲ್ವಪತ್ರೆ ಅರ್ಚನೆ, ಎಳೆನೀರು ಅಭಿಷೇಕ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ರಾತ್ರಿ ಜಾಗರಣೆ  ನಡೆಯಲಿದೆ. ಫೆ.27 ರಂದು ಬೆಳಿಗ್ಗೆ 10 ಗಂಟೆಯಿಂದ ವಿವಿಧ ಪೂಜಾ ಕೈಂಕರ್ಯಗಳು ಆರಂಭಗೊಂಡು ಮಧ್ಯಾಹ್ನ ಮಹಾಪೂಜೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನದಾನ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ  ಶ್ರೀ ಬೊಟ್ಲಪ್ಪ ಯುವ ಸಂಘದ ಪ್ರಮುಖರು ಮನವಿ ಮಾಡಿದ್ದಾರೆ.

Read More

ಮಡಿಕೇರಿ ಫೆ.22 NEWS DESK : ದಕ್ಷಿಣ ಕೊಡಗು ಲೇಖಕಿಯರ ಮತ್ತು ಕಲಾವಿದರ ಬಳಗ ವಿರಾಜಪೇಟೆ ಹಾಗೂ ಶ್ರೀಜಿತ್ ಸಂಸ್ಥೆ ಕೊಡಗು ಸಹಯೋಗದಲ್ಲಿ ಖ್ಯಾತ ಸಾಹಿತಿ ದಿ.ಕೆ.ಎ.ತಂಗವೇಲು ಮತ್ತು ದಿ.ಗೌರಮ್ಮ ಅವರ ಜ್ಞಾಪಕಾರ್ಥವಾಗಿ ಲೇಖಕಿ ಕೆ.ಟಿ.ವಾತ್ಸಲ್ಯ ಅವರ “ಮೂರನೇ ಮಹಾಯುದ್ಧ ಮತ್ತು ಶಾಂತಿ” ಪುಸ್ತಕವು ಫೆ.26 ರಂದು ಬಿಡುಗಡೆಯಾಗಲಿದೆ. ವಿರಾಜಪೇಟೆಯ ಪುರಭವನ(ಟೌನ್‍ಹಾಲ್)ನಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಸಾಹಿತಿ ಹಾಗೂ ಗೋಣಿಕೊಪ್ಪ ಕಾವೇರಿ ಕಾಲೇಜಿನ ಸಹಪ್ರಾಧ್ಯಾಪಕರಾದ ಡಾ.ಮುಲ್ಲೇಂಗಡ ರೇವತಿ ಪೂವಯ್ಯ ಉದ್ಘಾಟಿಸಲಿದ್ದು, ನಿವೃತ್ತ ಪ್ರಾಂಶುಪಾಲರಾದ ಡಾ.ಜೆ.ಸೋಮಣ್ಣ ಪುಸ್ತಕ ಲೋಕಾರ್ಪಣೆ ಮಾಡಲಿದ್ದಾರೆ. ದಕ್ಷಿಣ ಕೊಡಗು ಲೇಖಕಿಯರ ಮತ್ತು ಕಲಾವಿದರ ವೇದಿಕೆಯ ಅಧ್ಯಕ್ಷರಾದ ಎಂ.ಪಿ.ಪುಷ್ಪಲತ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾಹಿತಿ ಹಾಗೂ ನಿವೃತ್ತ ಪ್ರಾಂಶುಪಾಲರಾದ ಲತೀಶ್, ಸಾಹಿತಿ ಅಪರ್ಣ ಹುಲಿತಾಳ, ಕೊಡಗು ಹಿಂದೂ ಮಲಯಾಳಿ ಮಹಿಳಾ ಅಸೋಸಿಯೇಷನ್‍ನ ಶೀಬಾ ಪೃಥ್ವಿನಾಥ್, ಹಿರಿಯ ಸಾಹಿತಿ ಗಿರೀಶ್ ಕಿಗ್ಗಾಲು ಪಾಲ್ಗೊಳ್ಳಲಿದ್ದಾರೆ. ಸೋಮೆಯಂಡ ಕೌಸಲ್ಯ ಸತೀಶ್ ಪುಸ್ತಕ ವಿಮರ್ಶೆ ಮಾಡಲಿದ್ದಾರೆ.

Read More

ಮಡಿಕೇರಿ ಫೆ.22 NEWS DESK : ಕುಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕುಟ್ಟ ಠಾಣೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿ, ಶಾಲಾ ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕುಗಳು, ಸಂಚಾರ ಸುರಕ್ಷತೆ, ಮಾದಕ ದ್ರವ್ಯಗಳ ದುಷ್ಪರಿಣಾಮ ಮತ್ತು ಪೊಕ್ಸೊ ಕಾಯ್ದೆಗಳ ಕುರಿತು  ಅರಿವು ಮೂಡಿಸಿದರು.

Read More

ಮಡಿಕೇರಿ ಫೆ.22 NEWS DESK : ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕೊಡಗು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಕೊಡವ ವಿದ್ಯಾರ್ಥಿಗಳಿಗೆ ಮಡಿಕೇರಿಯ ಕೊಡವ ದೀನಬಂಧು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಕಾಲೇಜಿನ ಸೆಮಿನಾರ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಕಟ್ಟೇರ ಎ.ಅಯ್ಯಪ್ಪ ವಿದ್ಯಾರ್ಥಿಗಳಿಗೆ ಚೆಕ್ ಹಸ್ತಾಂತರಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ನಮ್ಮ ಟ್ರಸ್ಟ್ ವತಿಯಿಂದ ನೀಡಲಾಗುತ್ತಿರುವ ಈ ವಿದ್ಯಾರ್ಥಿವೇತನವನ್ನು ವಿದ್ಯಾರ್ಜಗೆ ಅಗತ್ಯವಾದ ಶುಲ್ಕ ಪಾವತಿಗೆ ಅಥವಾ ಪುಸ್ತಕ ಕೊಳ್ಳಲು, ಇನ್ನಿತರ ಶೈಕ್ಷಣಿಕ ಉಪಯೋಗಕ್ಕೆ ಬಳಸಿಕೊಳ್ಳಬೇಕು, ವಿದ್ಯಾರ್ಥಿಗಳು ತಾವು ಮುಂದೆ ಜೀವನದಲ್ಲಿ ಯಾವ ಮಾರ್ಗದಲ್ಲಿ ಸಾಗಬೇಕು ಎಂಬ ಗುರಿಯನ್ನು ಇಟ್ಟುಕೊಂಡು, ಸಮಯ ಪಾಲನೆಯೊಂದಿಗೆ ವಿದ್ಯಾಭ್ಯಾಸ ಮುಗಿಸಿ ಜೀವನದ ಉತ್ತುಂಗವನ್ನು ಏರಬೇಕು ಎಂದು ಸಲಹೆ ನೀಡಿದರು. ನಾವು ನಮ್ಮ ಹೆತ್ತವರಿಗೆ, ವಿದ್ಯೆ ಕೊಟ್ಟ ಗುರುಗಳಿಗೆ, ಸರಿಯಾದ ಮಾರ್ಗ ತೋರಿದ ಹಿರಿಯರನ್ನು ಗೌರವದಿಂದ ಕಾಣಬೇಕು ಮತ್ತು ಜೀವನದ ಮೌಲ್ಯವನ್ನು ಜಾಗೃತ ಗೊಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದ…

Read More

ನಾಪೋಕ್ಲು ಫೆ.22 NEWS DESK :  ಎಮ್ಮೆಮಾಡು ಮಖಾಂ ಉರೂಸ್ ಪ್ರಯುಕ್ತ ಸೆ.24 ರಂದು ನಡೆಯಲಿರುವ ಸಾರ್ವಜನಿಕ ಸಮ್ಮೇಳನಕ್ಕೆ ಜಿಲ್ಲೆ ಮತ್ತು ಹೊರ ಜಿಲ್ಲೆ ಹಾಗೂ ಹೊರ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಬರುವುದರಿಂದ ಅಲ್ಲದೇ ನಾಪೋಕ್ಲುವಿನಲ್ಲಿ ಸಂತೆ ನಡೆಯಲಿರುವುದರಿಂದ ನಾಪೋಕ್ಲು ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸಾರ್ವಜನಿಕರಿಗೆ ತೊಂದರೆ ಆಗುವ ಸಂಭವ ಇರುತ್ತದೆ. ಆದ್ದರಿಂದ ನಾಪೋಕ್ಲು ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದ್ದು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ನಾಪೋಕ್ಲು ಪೊಲೀಸ್ ಠಾಣಾಧಿಕಾರಿಗಳು ಕೋರಿದ್ದಾರೆ.  ನಾಪೋಕ್ಲು ನಗರದಲ್ಲಿ ಸುಗಮ ಸಂಚಾರಕ್ಕಾಗಿ ಎಮ್ಮೆಮಾಡು ಮಖಾಂ ಉರೂಸ್ ಗೆ ಭಾಗವಹಿಸಲು ಬರುವವರು ಹಾಗೂ ಸಾರ್ವಜನಿಕರು ತಮ್ಮ ತಮ್ಮ ವಾಹನವನ್ನು ಕೊಟ್ಟಮುಡಿ ಜಂಕ್ಷನ್ ನಿಂದ ಎಮ್ಮೆಮಾಡು ಜಂಕ್ಷನ್ ವರೆಗೆ ರಸ್ತೆಯ ಎರಡು ಬದಿಯಲ್ಲಿ ನಿಲ್ಲಿಸದಂತೆ ಮನವಿ ಮಾಡಿದ್ದಾರೆ. ಸಾರ್ವಜನಿಕರಿಗೆ ಪಾರ್ಕಿಂಗ್ ಸ್ಥಳ: 1) ಪೊಲೀಸ್ ಮೈದಾನ 2) ಕಂದಾಯ ಇಲಾಖೆಯ ಮುಂಭಾಗ 3) ಹಳೆ ಪೊಲೀಸ್ ವಸತಿ ತೆರವು ಮಾಡಿದ ಸ್ಥಳ 4)…

Read More

ಕುಶಾಲನಗರ ಫೆ.22 NEWS DESK : ಕೇಂದ್ರ ಸರ್ಕಾರ ವಕ್ಫ್ ಮಸೂದೆ ತಿದ್ದುಪಡಿ ಮಾಡಿರುವ ನಿರ್ಣಯವನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕು ಮುಸ್ಲಿಂ ಒಕ್ಕೂಟದ ಪ್ರಮುಖರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ತಾಲ್ಲೂಕು ಮುಸ್ಲಿಂ ಒಕ್ಕೂಟ ಕೇಂದ್ರ ಸಮಿತಿಯ ಅಧ್ಯಕ್ಷ ಈ.ಕೆ.ಕರೀಂ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಕಾಯ್ದೆಯನ್ನು ತಕ್ಷಣವೆ ಹಿಂಪಡೆಯಬೇಕೆಂದು ಒತ್ತಾಯಿಸಿದರು. ಕೊಡಗು ವಿಶ್ವವಿದ್ಯಾನಿಲಯ ರದ್ದುಗೊಳಿಸುವ ನಿರ್ಣಯ ಕೈಗೊಳ್ಳಬಾರದು ಅಥವಾ ಇತರ ವಿಶ್ವವಿದ್ಯಾಲಯಗಳಿಗೆ ವಿಲೀನಗೊಳಿಸುವ ನಿರ್ಧಾರ ಸರ್ಕಾರ ಮಾಡಿದ್ದಲ್ಲಿ ಜಿಲ್ಲೆಯ ಬಡ ಮತ್ತು ಅಲ್ಪಸಂಖ್ಯಾತರ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಅನ್ಯಾಯ ಮಾಡಿದಂತಾಗುತ್ತದೆ. ಕೊಡಗು ವಿವಿಯನ್ನು ಅಳುವಾರದಲ್ಲಿ ಉಳಿಸಿಕೊಂಡು ಅದರ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾರ್ಯ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿದರು. ಒಕ್ಕೂಟದ ಪ್ರಮುಖರಾದ ಅಬ್ದುಲ್ ರಜಾಕ್, ಆದಮ್, ಇಬ್ರಾಹಿಂ, ಉಸ್ಮಾನ್, ರಿಜ್ವಾನ್, ಶಮಿ, ಸಾಮಾಜಿಕ ಕಾರ್ಯಕರ್ತ ಮಹಮ್ಮದ್ ಹನೀಫ್ ಸೇರಿದಂತೆ…

Read More

ಮಡಿಕೇರಿ ಫೆ.22 NEWS DESK : ಪೆರಾಜೆ ಗ್ರಾಮದ ಕನ್ನಡ ಪೆರಾಜೆಯಲ್ಲಿ ಷರೀಫ್ ಮನೆ ಹತ್ತಿರದಿಂದ ಹಾದು ಹೋಗುವ ಮತ್ತು ಶಾಲೆಯ ಹತ್ತಿರದಿಂದ ಅರಮನೆ ಪಾರೆ ಸಂಪರ್ಕಿಸುವ ರಸ್ತೆ ಕಾಮಗಾರಿ ಪೂರ್ಣಗೊಂಡಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರ ಅನುದಾನದಲ್ಲಿ ಡಾಂಬರೀಕರಣ ಕಾಮಗಾರಿ ನಡೆಯಿತು. ಹಲವು ವರ್ಷದಿಂದ ಅಭಿವೃದ್ಧಿ ಕಾಣದೆ ಇದ್ದ ರಸ್ತೆಯ ಕಾಮಗಾರಿಯನ್ನು ಮುತುವರ್ಜಿ ವಹಿಸಿ ಶಾಸಕರು ಅನುದಾನ ಬಿಡುಗಡೆಗೊಳಿಸಿದ್ದಕ್ಕೆ ಹಾಗೂ  ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳಲು ಸಹಕರಿಸಿದ ಬ್ಲಾಕ್ ಅಧ್ಯಕ್ಷ  ಕೆ.ಎ. ಇಸ್ಮಾಯಿಲ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮನು ಪೆರುಮುಂಡ, ವಾರ್ಡ್ ಸದಸ್ಯರಾದ ಸುರೇಶ್ ಪೆರುಮುಂಡ, ಬೂತ್ ಅಧ್ಯಕ್ಷ  ಅಬೂಬಕ್ಕರ್, ವಲಯ ಅಧ್ಯಕ್ಷ ಜಯರಾಮ ಹಾಗೂ ಶಿಹಾಬ್ ಪೆರಾಜೆ ಅವರಿಗೆ ಗ್ರಾಮಸ್ಥರು ಧನ್ಯವಾದ ಸಲ್ಲಿಸಿದರು.

Read More

ಮಡಿಕೇರಿ ಫೆ.22 NEWS DESK : ಸೋಮವಾರಪೇಟೆ ಠಾಣಾ ವ್ಯಾಪ್ತಿಯ ಐಗೂರಿನ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ಸೋಮವಾರಪೇಟೆ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಕ್ಕಳ ಕಾನೂನು ಅರಿವು, ಸಂಚಾರ ಸುರಕ್ಷತೆ, ಮಾದಕ ದ್ರವ್ಯ ವಿರೋಧಿ ಅರಿವು ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

Read More