ಮಡಿಕೇರಿ ಮಾ.15 NEWS DESK : ಮಡಿಕೇರಿ ನಗರದ ಶ್ರೀಕೋದಂಡ ರಾಮ ದೇವಾಲಯದಲ್ಲಿ ಶ್ರದ್ಧಾಭಕ್ತಿ ಮತ್ತು ವಿಜೃಂಭಣೆಯ ರಾಮೋತ್ಸವವನ್ನು ಆಚರಿಸಲು ಸಿದ್ಧತೆ ನಡೆದಿದೆ. ಏ.5 ಮತ್ತು 6ರಂದು ಅದ್ಧೂರಿಯಾಗಿ ರಾಮೋತ್ಸವ ನಡೆಯಲಿದ್ದು, ಸಾವಿರಾರು ಭಕ್ತರಿಗೆ ಅನ್ನದಾನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅನ್ನದಾನಕ್ಕೆ ಆರ್ಥಿಕ ಅಥವಾ ಸಾಮಾಗ್ರಿ ನೆರವು ನೀಡುವವರು ಶ್ರೀ ಕೋದಂಡ ರಾಮೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ (9880778047) ಹಾಗೂ ಆಹಾರ ಸಮಿತಿಯ ಅಧ್ಯಕ್ಷ ಹೆಚ್.ವಿ.ಸುಧಾಕರ್ (9916393382) ಅವರನ್ನು ಸಂಪರ್ಕಿಸುವಂತೆ ರಾಮೋತ್ಸವ ಸಮಿತಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಲೇಖಕ: admin
ಮಡಿಕೇರಿ ಮಾ.15 NEWS DESK : ಭಾರತೀಯ ಜನತಾ ಪಾರ್ಟಿ ಎಸ್.ಸಿ ಮೋರ್ಚಾದ ಸಭೆಯು ನಗರದಲ್ಲಿರುವ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ಎಸ್.ಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್ ಜಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರನ್ನು ಸಂಘಟಿಸಿ ಪಕ್ಷದ ಬಲವರ್ಧನೆಗೆ ಶ್ರಮವಹಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರು. ಸರ್ಕಾರದ ಯೋಜನೆಗಳು ಪರಿಶಿಷ್ಟರಿಗೆ ದೊರಕಿಸಿಕೊಡುವಲ್ಲಿ ಎಸ್.ಸಿ ಮೋರ್ಚಾವು ಶ್ರಮಪಡಬೇಕೆಂದರು. ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪರಿಶಿಷ್ಟರಿಗೆ ಮಾಹಿತಿ ನೀಡುವಂತೆ ಕರೆ ನೀಡಿದರು. ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನವನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡುತ್ತಿದ್ದು, ಈ ವಿಚಾರವಾಗಿ ಅನೇಕ ಹೋರಾಟ ಪ್ರತಿಭಟನೆ ನಡೆಯುತ್ತಿದೆ. ಎಸ್ಸಿ ಮೋರ್ಚಾವು ಎಲ್ಲ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದು, ಪಕ್ಷದ ಬಲವರ್ಧನೆಗೆ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಎಸ್.ಸಿ.ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಜಿಲ್ಲೆಯಲ್ಲಿ ಎಸ್.ಸಿ.ಮೋರ್ಚಾವನ್ನು ಬಲಿಷ್ಠ ಗೊಳಿಸಲಾಗುವುದು. ಈ…
ನಾಪೋಕ್ಲು ಮಾ.14 NEWS DESK : ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸುದೀರ್ಘ 35 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿಯನ್ನು ಹೊಂದಿದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಸ್.ಎನ್.ಜಾನಕಿಗೆ ಸಂಸ್ಥೆಯ ವತಿಯಿಂದ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಎಸ್.ಎನ್.ಜಾನಕಿಯ ಮತ್ತು ಅವರ ಪತಿ ಯಪಾರೆ ಲಿಂಗಪ್ಪ ಅವರಿಗೆ ಸಂಘದ ಪರವಾಗಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಸಂಸ್ಥೆಯ ಉಪಾಧ್ಯಕ್ಷ ಅಶೋಕ ಪೆರುಮುಂಡ, ಗ್ರಾ.ಪಂ ಅಧ್ಯಕ್ಷರಾದ ಚಂದ್ರಕಲಾ ಬಾಲಚಂದ್ರ, ಉಪಾಧ್ಯಕ್ಷರಾದ ನಂಜಪ್ಪ ನಿಡ್ಯಮಲೆ, ಕೆಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ವಿನೀತ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲೋಕೇಶ್ ಸಂಸ್ಥೆಯ ನಿರ್ದೇಶಕರುಗಳು ಹಾಗೂ ಸಿಬ್ಬಂದಿ ವರ್ಗದವರು, ಗ್ರಾಮ ಪಂಚಾಯತ್ ಸದಸ್ಯರುಗಳು, ಹಿರಿಯ ಸಹಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು. ಸಂಸ್ಥೆಯ ಸಿಬ್ಬಂದಿಗಳಾದ ಎಂ.ಆರ್.ಗೋಪಾಲಕೃಷ್ಣ ಸ್ವಾಗತಿಸಿ ವಂದಿಸಿದರು. ವರದಿ : ದುಗ್ಗಳ ಸದಾನಂದ.
ಬೆಂಗಳೂರು NEWS DESK ಮಾ.15 : ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ”ಗೆ ರಾಜ್ಯ ಭಾಜನವಾಗಿದೆ. ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ. ಈ ಪ್ರಶಸ್ತಿಯು ಜನಪರ ಕಾರ್ಯದ ನಮ್ಮ ಉತ್ಸಾಹವನ್ನು ನೂರ್ಮಡಿಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಡಿಕೇರಿ ಮಾ.15 NEWS DESK : ಇತಿಹಾಸ ಪ್ರಸಿದ್ಧ ಕಲ್ಲುಗುಂಡಿಯ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲಕ್ಕೆ ಮುಹೂರ್ತದ ಕೊಳ್ಳಿ ಕಡಿಯುವ ಮೂಲಕ ಚಾಲನೆ ನೀಡಲಾಯಿತು. ಪ್ರತಿವರ್ಷದಂತೆ ಈ ಬಾರಿ ಕೂಡ ಮಾ.28 ಮತ್ತು 29ರಂದು ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲ ಮತ್ತು ಪಂಜುರ್ಲಿ, ಕಲ್ಲುರ್ಟಿ, ಗುಳಿಗ ಹಾಗೂ ರಕ್ತೇಶ್ವರಿ ದೈವಗಳ ಸಮ್ಮಾನ ಕಾರ್ಯಕ್ರಮ ನಡೆಯಲಿದೆ. ವರದಿ : ಕೀಲಾರು ಶರತ್, ಸಂಪಾಜೆ
ಮಡಿಕೇರಿ ಮಾ.15 NEWS DESK : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ಯಶಸ್ವಿ ವರ್ಷಗಳನ್ನು ಪೂರೈಸಿದ ಸಲುವಾಗಿ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರು ಡಿ.ಕೆ ಶಿವಕುಮಾರ್ ಅವರನ್ನು ಅಭಿನಂದಿಸಿದರು. ಈ ಸಂದರ್ಭ ಸಚಿವ ಭೈರತಿ ಸುರೇಶ್ ಇದ್ದರು.
ನಾಪೋಕ್ಲು ಮಾ.15 NEWS DESK : ಮೂರ್ನಾಡಿನ ಮಾರುತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿಂಡರ್ ಗಾರ್ಟನ್ ಘಟಿಕೋತ್ಸವ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಂಡಂಡ ಅಪ್ಪಚ್ಚು, ಪದವೀಧರ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಆಗಬೇಕಾದರೆ ಪ್ರಾರಂಭದಲ್ಲಿ ಅವರ ತಳಹದಿ ಉತ್ತಮವಾಗಿರಬೇಕು. ಶಿಕ್ಷಕರು ಕಠಿಣ ಪರಿಶ್ರಮದಿಂದ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳನ್ನು ಉತ್ತಮರಾಗಿ ರೂಪಿಸುತ್ತಾರೆ. ಎಳೆಯ ವಯಸ್ಸಿನಲ್ಲಿಯೇ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು, ಸಾಮಾಜಿಕ, ಭಾವನಾತ್ಮಕ ಬೌದ್ಧಿಕ ಅಂಶಗಳ ಕುರಿತು ತರಬೇತಿ ನೀಡಬೇಕು ಎಂದರು. ಯುಕೆಜಿಯ ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲಾ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಶಿಕ್ಷಕರಿಗೆ ಕೃತಜ್ಞತೆ ಮತ್ತು ಮೆಚ್ಚುಗೆ ವ್ಯಕ್ತಪಡಿಸಿದರು. ಒಂದನೇ ತರಗತಿ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು. ಯುಕೆಜಿಯ ಪ್ರತಿಭಾನ್ವಿತ ಪುಟ್ಟ ಮಕ್ಕಳು ಪದವಿ ನಿಲುವಂಗಿ ಮತ್ತು ಕ್ಯಾಪ್ ಧರಿಸಿ ಪದವಿ ಸ್ವೀಕರಿಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಮುಂಡಂಡ ಅಪ್ಪಚ್ಚು, ಉಪಾಧ್ಯಕ್ಷ ಚೇಂದ್ರಿಮಾಡ ಗಿಲ್ ಸೋಮಯ್ಯ,…
ಸೋಮವಾರಪೇಟೆ ಮಾ.15 NEWS DESK : ಬಳಗುಂದ ಕಾಂಚನಗಂಗಾ ಕ್ರೀಡಾ ಸಂಘ ಮತ್ತು ತಾಲ್ಲೂಕು ಒಕ್ಕಲಿಗರ ಸಂಘದ ಕುವೆಂಪು ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಬೇಸಿಗೆ ಹಾಕಿ ಶಿಬಿರ ಏ.1ರಿಂದ 20ರ ವರೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಸಿಂಥೆಟಿಕ್ ಹಾಕಿ ಟರ್ಫ್ ನಲ್ಲಿ ನಡೆಯಲಿದೆ ಎಂದು ಕ್ರೀಡಾ ಸಂಘದ ಉಪಾಧ್ಯಕ್ಷ ಅಂತೋಣಿ ಡಿಸೋಜ ಹೇಳಿದರು. ಗ್ರಾಮೀಣ ಮಕ್ಕಳ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿವರ್ಷ ಶಿಬಿರವನ್ನು ನಡೆಸಲಾಗುತ್ತದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರಪೇಟೆಯ ಅನೇಕ ಹಾಕಿ ಆಟಗಾರರು ಭಾರತ ತಂಡವನ್ನು ಪ್ರತಿನಿಧಿಸಿ ತಾಲ್ಲೂಕು ಮತ್ತು ದೇಶಕ್ಕೂ ಕೀರ್ತಿ ತಂದಿದ್ದಾರೆ ಎಂದು ಹೇಳಿದರು. ಬೆಳಿಗ್ಗೆ 6.30 ರಿಂದ 9ರ ತನಕ ತರಬೇತಿ ನಡೆಯಲಿದೆ. ಎನ್ಐಎಸ್ ತರಬೇತುದಾರರು ತರಬೇತಿ ನೀಡಲಿದ್ದಾರೆ. ಮಕ್ಕಳಿಗೆ ಹಾಲು, ಮೊಟ್ಟೆಯನ್ನು ವಿತರಿಸಲಾಗುತ್ತದೆ. ಶಿಬಿರದಲ್ಲಿ ತರಬೇತಿ ಪಡೆದ ಪ್ರತಿಭಾವಂತರನ್ನು ಗುರುತಿಸಿ ಕ್ರೀಡಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಸಲಹೆ ನೀಡಲಾಗುವುದು ಎಂದು ಹೇಳಿದರು. ಒಕ್ಕಲಿಗರ ಸಂಘದ ಅಧ್ಯಕ್ಷÀ ಎ.ಆರ್.ಮುತ್ತಣ್ಣ ಮಾತನಾಡಿ, ಪ್ರಾಥಮಿಕ ಹಾಗೂ…
ಕುಶಾಲನಗರ ಮಾ.15 NEWS DESK : ತಾಲ್ಲೂಕಿನ ಬಲಿಜ ಸಮಾಜದ ವತಿಯಿಂದ ಕುಲಗುರು ಕೈವಾರ ತಾತಯ್ಯನವರ 299 ನೇ ಜಯಂತಿಯನ್ನು ಕುಶಾಲನಗರ ಬಲಿಜ ಸಮಾಜದ ಕಚೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಯೋಗಿ ನಾರೇಯಣರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅವರ ಸೇವೆಯನ್ನು ಸ್ಮರಿಸಲಾಯಿತು. ಯೋಗಿ ನಾರೇಯಣರು ಈ ನಾಡು ಕಂಡ ಅಪ್ರತಿಮ ಶ್ರೇಷ್ಠ ಯತೀಂದ್ರರು. ಅವರು ತಮ್ಮ ಸಾಧನಾ ಶಕ್ತಿಯಿಂದ ಜಗತ್ತನ್ನು ಮುನ್ನಡೆಸುತ್ತಿರುವ ಪಾರ್ವತಿ ಪರಮೇಶ್ವರರೇ ಸ್ವತಃ ಲೇಖನಿ ಕೊಟ್ಟು ಬರೆಸಿದ ತ್ರಿಕಾಲ ಜ್ಞಾನವನ್ನು ಬರೆಸಿದ ಬಗ್ಗೆ ಪ್ರತೀತಿ ಇದ್ದು, ಇದು ಕೃತಯುಗ, ತ್ರೇತಾಯುಗ ಹಾಗೂ ದ್ವಾಪರ ಯುಗಗಳಿಗೂ ಅನ್ವಯವಾಗುವಂತಿತ್ತು. ಹಾಗಾಗಿ ನಾರೇಯಣರು ನಂತರ ಕೈವಾರ ತಾತಯ್ಯ ನಾಗಿ ಪ್ರಸಿದ್ದಿ ಪಡೆದರೆಂದು ಬಲಿಜ ಸಮಾಜದ ಅಧ್ಯಕ್ಷ ಆರ್.ಬಾಬಣ್ಣ ಹೇಳಿದರು. ಈ ಸಂದರ್ಭ ಸಮಾಜದ ಗೌರವಾಧ್ಯಕ್ಷ ಟಿ.ಎಸ್.ಬಾಲಕೃಷ್ಣ, ಉಪಾಧ್ಯಕ್ಷ ಎಂ.ಆರ್.ಗಣೇಶ್, ಕಾರ್ಯದರ್ಶಿ ಟಿ.ಎಸ್.ನಿರಂಜನ್, ಸಹಕಾರ್ಯದರ್ಶಿ ಟಿ.ಎನ್.ಜಯರಾಂ, ಖಜಾಂಚಿ ಟಿ.ಬಿ.ಸತೀಶ್, ಸಂಚಾಲಕ ಸಿ.ಎನ್.ಮದನ್, ಪ್ರಮುಖರಾದ ಟಿ.ಡಿ.ದಯಾನಂದ್, ಸವಿತಾ ದಯಾನಂದ, ಶಿಲ್ಪಾ ಸತೀಶ್, ಚಂದ್ರಕಲಾ, ಪುಷ್ಪಾವತಿ,…
ಮಡಿಕೇರಿ ಮಾ.14 NEWS DESK : ಜಗತ್ತು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅರಿವು ಮೂಡಬೇಕಾದರೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಮತ್ತು ಸಾಮಾಜಿಕ ಜಾಲತಾಣಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಖ್ಯಾತ ಮಕ್ಕಳ ತಜ್ಞ ಡಾ.ಬಿ.ಸಿ.ನವೀನ್ ಕುಮಾರ್ ಕರೆ ನೀಡಿದ್ದಾರೆ. 2023-24ನೇ ಸಾಲಿನಲ್ಲಿ ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತೀ ಹೆಚ್ಚು ಫಲಿತಾಂಶ ಬರಲು ಕಾರಣಕರ್ತರಾದ ಕಾಲೇಜಿನ ಉಪನ್ಯಾಸಕರು ಹಾಗೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಧಾನ ಭಾಷಣ ಮಾಡಿದ ಡಾ.ಬಿ.ಸಿ.ನವೀನ್ ಕುಮಾರ್, ಶಿಕ್ಷಣ ಮತ್ತು ಆರೋಗ್ಯ ದೇಶದ ಸಂಪತ್ತು, ವಿದ್ಯಾರ್ಥಿಗಳು ಓದಿನ ಜೊತೆಗೆ ದೇಶದ ಅಭಿವೃದ್ಧಿ ಹಾಗೂ ಆರ್ಥಿಕ ಪರಿಸ್ಥಿತಿಯ ಬಗ್ಗೆ ಚಿಂತಿಸಬೇಕು. ಸಾಮಾಜಿಕ ಜಾಲತಾಣಗಳು ವಿವಿಧ ಸ್ತರಗಳ ವ್ಯಕ್ತಿತ್ವ, ಪ್ರತಿಭೆ ಮತ್ತು ಸೃಜನ ಶೀಲತೆಯನ್ನು ಸಮಾಜಕ್ಕೆ ತೋರಿಸುತ್ತದೆ. ಇಡೀ ವಿಶ್ವ, ದೇಶದಲ್ಲಿ ಏನಾಗುತ್ತಿದೆ ಎಂಬುವುದರ ಕುರಿತು ಅರಿವು ಮೂಡಿಸುತ್ತದೆ. ಸಾಮಾಜಿಕ ಜಾಲತಾಣವನ್ನು…






