ಮಡಿಕೇರಿ NEWS DESK ಫೆ.21 : ಜಿಲ್ಲೆಯ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಮಹತ್ವಾಕಾಂಕ್ಷೆಯ ಕೊಡಗು ವಿಶ್ವ ವಿದ್ಯಾಲಯವನ್ನು ಮುಚ್ಚುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ವಿವಿ ಸೇರಿದಂತೆ ರಾಜ್ಯದ 9 ವಿವಿಗಳನ್ನು ಮುಚ್ಚುವ ನಿರ್ಧಾರ ಖಂಡನೀಯ. ಹೆಚ್ಚಿನ ಶಿಕ್ಷಣಕ್ಕೆ ಬೇರೆ ಜಿಲ್ಲೆಗಳಿಗೆ ಹೋಗದೆ ಜಿಲ್ಲೆಯಲ್ಲೆ ವಿದ್ಯಾಭ್ಯಾಸ ಮಾಡುವ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳ ಕನಸು ನುಚ್ಚುನೂರಾಗಿದೆ. ಅನೇಕ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದ್ದಾರೆ. ರಾಜ್ಯ ಸರ್ಕಾರ ದುಂದುವೆಚ್ಚಕ್ಕೆ ಕಡಿವಾಣ ಹಾಕಿದ್ದರೆ ವಿವಿಗಳನ್ನು ಮುಚ್ಚುವ ಮತ್ತು ಜನಸಾಮಾನ್ಯರ ಮೇಲೆ ತೆರಿಗೆ ಹೊರೆ ಹಾಕುವ ದುಸ್ಥಿತಿ ಒದಗಿ ಬರುತ್ತಿರಲಿಲ್ಲ. ಈಗಲಾದರು ಸರ್ಕಾರ ಎಚ್ಚೆತ್ತುಕೊಂಡು ಜನಸಾಮಾನ್ಯರಿಗೆ ಹೊರೆಯಾಗದಂತೆ ಶಿಕ್ಷಣ, ಆರೋಗ್ಯ ಮತ್ತು ಕೃಷಿಯಂತಹ ವಲಯಗಳ ಕಡೆ ಒಲವು ತೋರಿ ಈ ಬಾರಿಯ ಬಜೆಟ್ ಮಂಡಿಸಬೇಕು ಹಾಗೂ…
ಲೇಖಕ: admin
ಮಡಿಕೇರಿ ಫೆ.21 NEWS DESK : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಕಾನೂನು ಸಚಿವರಾಗಿ ರಾಷ್ಟ್ರದಲ್ಲಿ ಪ್ರಥಮ ಬಾರಿಗೆ ಹಿಂದೂ ಕೋಡ್ ಬಿಲ್ ಜಾರಿಗೊಳಿಸುವ ಮೂಲಕ ಮಹಿಳೆಯರಿಗೆ ಸಮಾನ ಅವಕಾಶ ಮತ್ತು ಹಕ್ಕುಗಳನ್ನು ನೀಡಿದ್ದಾರೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಮಹದೇವ ಅತ್ನಿ ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವತಿಯಿಂದ ಕಾಲೇಜಿನ ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆ ಕುರಿತು ನಡೆದ ‘ಅಂಬೇಡ್ಕರ್ ಓದು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಹಿಳೆಯರಿಗೆ ಸ್ವಾತಂತ್ರ್ಯ, ಸಮಾನತೆ, ಆಸ್ತಿ ಹಕ್ಕನ್ನು ಕಲ್ಪಿಸಿದ್ದಾರೆ, ಅಂಬೇಡ್ಕರ್ ಅವರ ಹೋರಾಟ, ಚಿಂತನೆ ಸದಾ ಸ್ಮರಣೀಯ ಎಂದು ಹೇಳಿದರು. ಸಂವಿಧಾನ ಕರಡು ರಚನಾ ಸಮಿತಿ ಅಧ್ಯಕ್ಷರಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಯೊಬ್ಬರಿಗೂ ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ ಒಳಗೊಂಡ ಸಂವಿಧಾನ ರಚಿಸಿದ್ದಾರೆ ಎಂದರು. ವೈವಿದ್ಯತೆ ಒಳಗೊಂಡಿರುವ ರಾಷ್ಟ್ರಕ್ಕೆ ಅತ್ಯುತ್ತಮ ಸಂವಿಧಾನ ನೀಡಿದ್ದಾರೆ. ಶಿಕ್ಷಣ,…
ಮಡಿಕೇರಿ ಫೆ.21 NEWS DESK : ಕನ್ನಡದ ಹೆಸರಾಂತ ಸಾಹಿತಿಗಳಾಗಿದ್ದ, ಮಡಿಕೇರಿಯ ಜೂನಿಯರ್ ಕಾಲೇಜಿನಲ್ಲಿ ಮುಖ್ಯೋಪಾಧ್ಯಾಯರಾಗಿದ್ದ ಪಂಜೆ ಮಂಗೇಶರಾಯರ ನೆನಪನ್ನು ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಅವರು ಕತ೯ವ್ಯ ಸಲ್ಲಿಸಿದ್ದ ಶಾಲೆಯ ಕೊಠಡಿಯೊಂದನ್ನು ಸ್ಮಾರಕವಾಗಿಸಿ, ಶಾಲೆಯಲ್ಲಿ ಪಂಜೆಯವರ ಪುತ್ತಳಿ ಸ್ಥಾಪಿಸಬೇಕೆಂದು ಶಕ್ತಿ ಪತ್ರಿಕೆಯ ಸಂಪಾದಕ ಜಿ. ಚಿದ್ವಿಲಾಸ್ ಸಲಹೆ ನೀಡಿದ್ದಾರೆ. ನಗರದ ಸರಕಾರಿ ಪ್ರಥಮ ದಜೆ೯ ಕಾಲೇಜಿನ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನ ಕೊಡಗು ಘಟಕದಿಂದ ಆಯೋಜಿತ ಪಂಜೆ ಮಂಗೇಶರಾಯರ 150 ನೇ ವಷಾ೯ಚರಣೆ ಸಂದಭ೯ದ ಸಾಂಸ್ಕೃತಿಕ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಚಿದ್ವಿಲಾಸ್, ಮಡಿಕೇರಿಯ ಅಂದಿನ ಸೆಂಟ್ರಲ್ ಹೈಸ್ಕೂಲಿನಲ್ಲಿ ಪಂಜೆ ಮಂಗೇಶರಾಯರು ಮುಖ್ಯೋಪಾಧ್ಯಾಯರಾಗಿದ್ದರು ಎಂಬುದೇ ಕೊಡಗಿಗೆ ಅತ್ಯಂತ ಹೆಮ್ಮೆಯ ವಿಚಾರವಾಗಿದೆ. ಹೀಗಿರುವಾಗ ಪಂಜೆ ಮಂಗೇಶರಾಯರ ಸಾಹಿತ್ಯ ಲೋಕದ ಬಗ್ಗೆ ವಿದ್ಯಾಥಿ೯ಗಳಿಗೆ ಮತ್ತಷ್ಟು ರೀತಿಯಲ್ಲಿ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಅವರು ಪಾಠ ಮಾಡುತ್ತಿದ್ದ ತರಗತಿಯನ್ನು ಪಂಜೆಯವರ ಹೆಸರಿನಲ್ಲಿ ಗುರುತಿಸಿ, ಉತ್ತಮ ಕೖತಿಗಳ ಗ್ರಂಥಾಲಯವನ್ನು ಸ್ಥಾಪಿಸಬೇಕು. ಆ ಮೂಲಕ ಸಾಹಿತ್ಯ ಪ್ರೇಮಿಗಳ ಮನದಲ್ಲಿ ಪಂಜೆಯವರ ನೆನಪನ್ನು…
ಮಡಿಕೇರಿ ಫೆ.21 NEWS DESK : ಕರ್ನಾಟಕ ಜಾನಪದ ಅಕಾಡೆಮಿ ಮತ್ತು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಂಯುಕ್ತಾಶ್ರಯದಲ್ಲಿ ಫೆ.24 ರಂದು ಕಾಲೇಜು ಸಭಾಂಗಣದಲ್ಲಿ ‘ಕೊಡಗು ಜಾನಪದ ಬೆಡಗು-ಜಾನಪದ ನಡೆ ವಿದ್ಯಾರ್ಥಿಗಳ ಕಡೆ’ ಎನ್ನುವ ವಿಶಿಷ್ಟ ಕಾರ್ಯಕ್ರಮ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ಡಾ.ಕಾವೇರಿ ಪ್ರಕಾಶ್, ಜಾನಪದ ಎನ್ನುವುದು ಸಾಹಿತ್ಯದ ಮೂಲಬೇರು. ಇಂತಹ ಅಮೂಲ್ಯ ಜಾನಪದ ಸಂಸ್ಕೃತಿ ಪರಂಪರೆಗಳು ತಲೆತಲಾಂತರಗಳಿಂದ ಹರಿದು ಬಂದಿದ್ದು, ಇದನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು. ಅಂದು ಬೆಳಗ್ಗೆ 10.30 ಗಂಟೆಗೆ ‘ಕೊಡಗು ಜಾನಪದ ಬೆಡಗು’ ಕಾರ್ಯಕ್ರಮವನ್ನು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಗೊಲ್ಲಹಳ್ಳಿ ಶಿವ ಪ್ರಸಾದ್ ಅವರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ವೆಂಕಟೇಶ ಪ್ರಸನ್ನ ಪಿ.ಕೆ. ವಹಿಸಲಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದ ಸಹ ಸಂಚಾಲಕರು ಹಾಗೂ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಮೋಹನ್ ಕುಮಾರ್…
ಮಡಿಕೇರಿ ಫೆ.21 NEWS DESK : ನಿವೃತ್ತ ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನ ಆರ್ಥಿಕ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿ ಫೆ.28 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ನಿವೃತ್ತ ನೌಕರರ ವೇದಿಕೆಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ವೇದಿಕೆಯ ಜಿಲ್ಲಾ ಪ್ರಧಾನ ಸಂಚಾಲಕರಾದ ಪಿ.ಎಸ್.ಜನಾರ್ಧನ, 2022ರ ಜು.1 ರಿಂದ 2024ರ ಜು.31ರ ಅವಧಿಯ ಒಳಗೆ ನಿವೃತ್ತರಾದ ರಾಜ್ಯವ್ಯಾಪ್ತಿಯ 26,700 ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ 7ನೇ ವೇತನ ಆಯೋಗದ ಆರ್ಥಿಕ ಸೌಲಭ್ಯಗಳು ದೊರಕಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಸೂಚಿತ ಅವಧಿಯಲ್ಲಿ ನಿವೃತ್ತರಾದವರಿಗೆ ಏಳನೇ ವೇತನ ಆಯೋಗದ ಸೌಲಭ್ಯಗಳ ಬದಲಾಗಿ ಹಿಂದಿನ 6ನೇ ವೇತನ ಆಯೋಗದ ಸೌಲಭ್ಯವನ್ನಷ್ಟೆ ನೀಡಲಾಗಿದೆ. 7ನೇ ವೇತನ ಆಯೋಗದಂತೆ ‘ಎ’ ದರ್ಜೆಯಿಂದ ‘ಸಿ’ ದರ್ಜೆಯವರೆಗೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದವರಿಗೆ 12 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗಳನ್ನು ರಾಜ್ಯ ಸರ್ಕಾರ ನೀಡಬೇಕಾಗುತ್ತದೆಂದು ಮಾಹಿತಿ ನೀಡಿದರು.…
ಮಡಿಕೇರಿ ಫೆ.21 NEWS DESK : ರೋಟರಿ ಮಡಿಕೇರಿ ವತಿಯಿಂದ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರಿಗೆ ಗರ್ಭಕಂಠದ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಿಸಲಾಯಿತು. ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೈಸೂರಿನ ಮದರ್ಹುಡ್ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ಸೋನಿಯಾ ಮಂದಪ್ಪ, ಗರ್ಭಕಂಠದ ಕ್ಯಾನ್ಸರ್ ಮಹಿಳೆಯರನ್ನು ಕಾಡುತ್ತಿರುವ ಅತಿ ಮಾರಕ ಕಾಯಿಲೆಯಾಗಿದ್ದು, ಪ್ರತಿ 8 ನಿಮಿಷಕ್ಕೆ ಒಂದು ಮಹಿಳೆ ಕ್ಯಾನ್ಸರ್ ನಿಂದ ಸಾವನ್ನಪ್ಪುತ್ತಿದ್ದಾರೆ. ಇದು ಬಾರದಂತೆ ತಡೆಗಟ್ಟಲು ಲಸಿಕೆಯ ಅನಿವಾರ್ಯತೆ ಇದೆ. ಇದೇ ಕಾರಣಕ್ಕೆ 9 ರಿಂದ 14 ವಯಸ್ಸಿನ ಮಕ್ಕಳಿಗೆ ಹೆಚ್ಪಿವಿ ಲಸಿಕೆ ನೀಡಲಾಗುತ್ತಿದ್ದು, ಈ ಬಗ್ಗೆ ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದರು. ಸುಮಾರು 2 ಸಾವಿರ ರೂ. ವೆಚ್ಚದ ಈ ಲಸಿಕೆಯನ್ನು ರೋಟರಿ ಸಂಸ್ಥೆ ವಿದ್ಯಾರ್ಥಿಗಳಿಗೆ ನೀಡುತ್ತಿರುವುದು ಶ್ಲಾಘನೀಯ. ಈಗಾಗಲೇ ಸುಮಾರು 1,843 ಕಾರ್ಯಕ್ರಮಗಳನ್ನು ಮಾಡಲಾಗಿದ್ದು, ಕೊಡಗಿನಲ್ಲಿ ಇದು ಮೊದಲ…
ಮಡಿಕೇರಿ NEWS DESK ಫೆ.21 : ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಕಟ್ಟಡದ ಮುಂದುವರಿದ ಅಭಿವೃದ್ಧಿ ಕಾಮಗಾರಿಗಳಿಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು 1 ಕೋಟಿ ರೂ. ಮಂಜೂರು ಮಾಡಿದ್ದಾರೆ. ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಸಮಿತಿಯ ಅಧ್ಯಕ್ಷರು ಹಾಗೂ ನಿದೇಶಕರು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಬೆಂಗಳೂರಿನ ಗೃಹ ಕಛೇರಿಯಲ್ಲಿ ಸಚಿವರನ್ನು ಭೇಟಿ ಮಾಡಿದರು. ಮಡಿಕೇರಿಯಲ್ಲಿರುವ ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಕಟ್ಟಡದ ಮುಂದುವರಿದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಕೋರಿ ಮನವಿ ಸಲ್ಲಿಸಿದರು. ಶಾಸಕ ಡಾ.ಮಂತರ್ ಗೌಡ ಅವರ ಮನವಿಗೆ ಸ್ಪಂದಿಸಿದ ಸಚಿವರು 1 ಕೋಟಿ ರೂ. ಅನುದಾನ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭ ಕೊಡಗು ಜಿಲ್ಲಾ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಯೋಗೇಶ್ ಎಚ್.ಆರ್, ಹಾಪ್ ಕಾಮ್ಸ್ ಅಧ್ಯಕ್ಷ ರಮೇಶ್ ಚಂಗಪ್ಪ, ಉಪಾಧ್ಯಕ್ಷ ಮಧುದೇವಯ್ಯ, ಪ್ರಮುಖರಾದ ಕಿಶನ್ ಮಡಿಕೇರಿ ಹಾಗೂ ಸಮಿತಿಯ ನಿರ್ದೇಶಕರುಗಳು…
ಮಡಿಕೇರಿ ಫೆ.21 NEWS DESK : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಒಂದಲ್ಲ ಒಂದು ರೀತಿಯಲ್ಲಿ ಕೊಡಗಿನ ಸೌಲಭ್ಯಗಳನ್ನು ಕಸಿದುಕೊಳ್ಳುವ ಮೂಲಕ ಪುಟ್ಟ ಜಿಲ್ಲೆಯ ಮೇಲೆ ಗದಾಪ್ರಹಾರ ಮಾಡುತ್ತಿದೆ ಎಂದು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ವಿಶ್ವ ವಿದ್ಯಾಲಯವನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ. ಕೊಡಗು ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಕಾಪಾಡುವ ದೃಷ್ಟಿಯಿಂದ ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ವಿವಿಯನ್ನು ಸ್ಥಾಪಿಸಿತು. ಇದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಶಿಕ್ಷಣದ ಗುರಿ ಸಾಧನೆಗೆ ಹೆಚ್ಚು ಉಪಯುಕ್ತವಾಗಿತ್ತು. ಅಲ್ಲದೆ ಜಿಲ್ಲೆಯ ಅಭಿವೃದ್ಧಿಗೂ ಪೂರಕವಾಗಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರ ವಿವಿಯನ್ನು ಕಸಿದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾಗ್ಯಗಳನ್ನು ಅನುಷ್ಠಾನಗೊಳಿಸುವ ಭರದಲ್ಲಿ ಕಾಲಹರಣ ಮಾಡುತ್ತಿದೆ. ಐದು ಗ್ಯಾರಂಟಿಗಳನ್ನು ಪೂರೈಸುವುದಕ್ಕಷ್ಟೇ ತನ್ನ ಅಧಿಕಾರವನ್ನು…
ಸಿದ್ದಾಪುರ ಫೆ.21 NEWS DESK : ಕುಶಾಲನಗರ ತಾಲ್ಲೂಕಿನ ರಂಗಸಮುದ್ರ, ಗುಹ್ಯ, ದುಬಾರೆ ಮತ್ತು ಚಿಕ್ಲಿಹೊಳೆ ಜಲಾಶಯದ ರಸ್ತೆಗಳನ್ನು ರಸ್ತೆ ಬದಿ ಕಾಡುಗಳೇ ನುಂಗಿ ಬಿಡುತ್ತಿರುವ ದೃಶ್ಯಗಳು ಕಂಡು ಬರುತ್ತಿದೆ. ಈ ಎಲ್ಲಾ ರಸ್ತೆಗಳು ಹೆದ್ದಾರಿಗಳಾಗಿದ್ದು, ನಿರ್ವಹಣೆ ಇಲ್ಲದೆ ಪಾದಾಚಾರಿಗಳು ಹಾಗೂ ವಾಹನ ಸವಾರರಿಗೆ ಅಡಚಣೆಯಾಗಿದೆ. ರಸ್ತೆಗಳ ಎರಡೂ ಬದಿಗಳಲ್ಲಿ ದಟ್ಟ ಕಾಡು ಆವರಿಸಿದೆ. ಊರಿನ ಫಲಕ ಮತ್ತು ಮಾರ್ಗಸೂಚಿಯ ಫಲಕಗಳು ಕಾಡು ಗಿಡಗಳಿಂದ ಮುಚ್ಚಿ ಹೋಗಿದೆ. ಕಾಡು ಆವರಿಸಿಕೊಂಡಿರುವುದರಿಂದ ಎದುರು ಬದಿಯಿಂದ ಬರುವ ವಾಹನಗಳು ಕೂಡ ಗೋಚರಿಸುತ್ತಿಲ್ಲ. ಈ ಭಾಗದಲ್ಲಿ ಕಾಡಾನೆಗಳ ಉಪಟಳವೂ ಹೆಚ್ಚಿದ್ದು, ಕಾಡಾನೆಗಳು ಇರುವುದು ಗೋಚರಿಸದಷ್ಟು ಕಾಡು ಬೆಳೆದು ನಿಂತಿದೆ. ಆನೆಗಳು ದಿಢೀರ್ ದಾಳಿ ಮಾಡಿದರೂ ಆಶ್ಚರ್ಯ ಪಡಬೇಕಾಗಿಲ್ಲ. ಪ್ರತಿವರ್ಷ ರಸ್ತೆ ಬದಿಯ ಕಾಡುಗಳನ್ನು ಕಡಿದು ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ಕೆಲಸವನ್ನು ಲೋಕೋಪಯೋಗಿ ಇಲಾಖೆ ಮಾಡಬೇಕು. ಆದರೆ ಈ ಇಲಾಖೆ ರಸ್ತೆಯಲ್ಲಿ ಸಂಭವಿಸಬಹುದಾದ ಅಪಾಯವನ್ನು ಅರಿಯದೆ ಗಾಢ ನಿದ್ದೆಯಲ್ಲಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಭಾಗದಲ್ಲಿ…
ಮಡಿಕೇರಿ ಫೆ.21 NEWS DESK : ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ ದೇವಾಲಯದ ಬಾಧ್ಯಪಟ್ಟ ತ್ರಿವೇಣಿ ಸಂಗಮದ ಬಳಿ ಪ್ರತಿಷ್ಠಾಪಿಸಲಾದ ನಾಗನ ಕಟ್ಟೆಯ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.22 ರಂದು ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ನಾಗ ದೇವರಿಗೆ ಸೀಯಾಳ ಅಭಿಷೇಕ, ಪಂಚಾಮೃತಾಭಿಷೇಕ, ನಾಗ ತಂಬಿಲವನ್ನು ನೆರವೇರಿಸಲಾಗುವುದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ ತಿಳಿಸಿದ್ದಾರೆ.






