ಮಡಿಕೇರಿ ಮಾ.14 NEWS DESK : ರಾಜ್ಯದಲ್ಲಿ ಬಲಿಜ ಸಮಾಜಕ್ಕೆ ಈ ಹಿಂದೆ 2ಎ ಹಿಂದುಳಿದ ವರ್ಗದಡಿ ಮೀಸಲಾತಿ ದೊರೆಯುತ್ತಿದ್ದು, ಈಗ 3ಬಿ ವ್ಯಾಪ್ತಿಗೆ ಸೇರಿಸಿ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕೆ ತೊಂದರೆಯಾಗಿದ್ದು, ಈ ಮೊದಲು ಇದ್ದಂತೆ ಬಲಿಜ ಸಮಾಜವನ್ನು 2ಎ ಗೆ ಸೇರಿಸುವಂತಾಗಬೇಕು ಎಂದು ನಿವೃತ್ತ ಅಧಿಕಾರಿ ಗಣೇಶ್ ನಾಯ್ಡು ಮನವಿ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ನಡೆದ ಶ್ರೀ ಯೋಗಿ ನಾರಾಯಣ ಯತೀಂದ್ರರ ಜಯಂತಿ(ಕೈವಾರ ತಾತಯ್ಯ) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಲಿಜ ಸಮಾಜವು ಹಿಂದುಳಿದ ವರ್ಗಕ್ಕೆ ಬರಲಿದ್ದು, ಬಳೆ ಮಾರುವುದು ಪ್ರಮುಖ ಕಸುಬಾಗಿದೆ. ಹಿಂದೆ ಬಳೆ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು ಎಂದು ಗಣೇಶ್ ನಾಯ್ಡು ತಿಳಿಸಿದರು. ಕೈವಾರ ತಾತಯ್ಯ ಅವರ ತತ್ವಗಳು, ಸಂದೇಶಗಳನ್ನು ಯುವ ಜನರು ತಿಳಿದುಕೊಳ್ಳುವಂತಾಗಬೇಕು. ಬಳೆ ಮಾರುವುದು ಕನಿಷ್ಠ ಕೆಲಸವಲ್ಲ. ಸ್ವ ಉದ್ಯೋಗ ಮಾಡುವಲ್ಲಿ ಬಲಿಜರು ತಮ್ಮದೇ ಆದ ಸ್ಥಾನ…
ಲೇಖಕ: admin
ಮಡಿಕೇರಿ ಮಾ.14 NEWS DESK : ನಗರದ ಪ್ರಸಿದ್ಧ ಎಲೆಕ್ಟ್ರಾನಿಕ್ ಮತ್ತು ಫರ್ನಿಚರ್ ಶೋರೂಮ್ ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕಾರ್ಯನಿರ್ವಹಿಸಲು ಉತ್ಸಾಹಿ ಹಾಗೂ ಪ್ರತಿಭಾವಂತ ಅಭ್ಯರ್ಥಿಗಳನ್ನು ನಾವು ಆಹ್ವಾನಿಸಲಾಗಿದೆ. ಸೇಲ್ಸ್ ಕ್ಷೇತ್ರದಲ್ಲಿ ಆಸಕ್ತಿ ಮತ್ತು ಗ್ರಾಹಕರೊಂದಿಗೆ ಸಂವಹಿಸಲು ಉತ್ತಮ ನೈಪುಣ್ಯ ಇರಬೇಕು. ಅನುಭವ ಇರುವವರಿಗೆ ಆದ್ಯತೆ, ಹೊಸದು ಕಲಿಯಲು ಮತ್ತು ತಂಡದೊಂದಿಗೆ ಕೆಲಸ ಮಾಡಲು ಸಿದ್ಧತೆ ಇರಬೇಕು. ಆಕರ್ಷಕ ಸಂಬಳ ಮತ್ತು ಇತರ ಸೌಲಭ್ಯಗಳು ಲಭ್ಯವಿದೆ. ಆಶಕ್ತರು 94481 25571 ತಮ್ಮ ಪ್ರೊಫೈಲ್ ಅನ್ನು ವಾಟ್ಸಪ್ ಮೂಲಕ ಕಳಿಸಬಹುದು.
ಕುಶಾಲನಗರ ಮಾ.14 NEWS DESK : ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜು, ಸಾಂಸ್ಕೃತಿಕ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕ್ರೀಡಾ ವಿಭಾಗದ ಆಶ್ರಯದಲ್ಲಿ ಆಯೋಜಿಸಿಲಾದ ಮೂರು ದಿನಗಳ ಜನಪದ ಉತ್ಸವಕ್ಕೆ ತೆರೆ ಬಿದ್ದಿತು. ಜನಪದ ಕಲಾತಂಡಗಳ ಮೆರವಣಿಗೆಗೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಚಾಲನೆ ನೀಡಿದರು. ಜನಪದ ಕಾರ್ಯಾಗಾರವನ್ನು ಮೈಸೂರಿನ ಉಮೇಶ್ ಉದ್ಘಾಟಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಸಿದ್ಧಪಡಿಸಿದ ದೇಶಿ ಆಹಾರ ಸಾಮಗ್ರಿಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು, ಕಾಲೇಜಿನ ಅಭಿವೃದ್ಧಿ ಸಮಿತಿಯ ಪ್ರಮುಖರು ಚಾಲನೆ ನೀಡಿದ್ದು ಕಾಲೇಜಿನ ಪ್ರಾಂಶುಪಾಲರಾದ ಬಿ.ಎಂ.ಪ್ರವೀಣ್ ಕುಮಾರ್ ಅಧ್ಯಕ್ಷತೆಯಲ್ಲಿ ವಿವಿಧ ಕಾರ್ಯಕ್ರಮಗಳು ಜರಗಿದವು. ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ನವನೀತ್ ಪೊನ್ನೆಟಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಉಪನ್ಯಾಸಕರು ಇದ್ದರು. ಕಾಲೇಜಿನ ವಿದ್ಯಾರ್ಥಿಗಳಿಂದ ಜನಪದ ಹಾಡುಗಳು ನೃತ್ಯ ಪ್ರದರ್ಶನ ಕಾರ್ಯಕ್ರಮ ಜರುಗಿತು. ಕರ್ನಾಟಕ ಜಾನಪದ ಪರಿಷತ್ ಕುಶಾಲನಗರ ತಾಲೂಕು ಅಧ್ಯಕ್ಷರಾದ ಎಂ.ಎನ್.ಚಂದ್ರಮೋಹನ್…
ಮಡಿಕೇರಿ NEWS DESK ಮಾ.14 : ಕೊಡಗು ಪತ್ರಕರ್ತರ ಸಂಘ(ರಿ) ದ ನೂತನ ಅಧ್ಯಕ್ಷರಾಗಿ ಅನಿಲ್ ಹೆಚ್.ಟಿ. ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಬಿಳಿಗೇರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಹಾಲಿ ಅಧ್ಯಕ್ಷ ಎಸ್.ಎ.ಮುರಳೀಧರ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಹಿರಿಯ ಸಲಹೆಗಾರ ಟಿ.ಪಿ.ರಮೇಶ್ ಅವರು ಸರ್ವ ಸದಸ್ಯರ ಒಪ್ಪಿಗೆ ಪಡೆದು ನೂತನ ಆಡಳಿತ ಮಂಡಳಿಗೆ ಪದಾಧಿಕಾರಿಗಳ ಹೆಸರನ್ನು ಪ್ರಕಟಿಸಿದರು. ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಅನಿಲ್ ಹೆಚ್.ಟಿ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಬಿಳಿಗೇರಿ, ಉಪಾಧ್ಯಕ್ಷರಾಗಿ ತೇಲಪಂಡ ಕವನ್ ಕಾರ್ಯಪ್ಪ, ಕೋಶಾಧಿಕಾರಿ ಟಿ.ಕೆ.ಸಂತೋಶ್, ಕ್ಷೇಮನಿಧಿ ಅಧ್ಯಕ್ಷರಾಗಿ ಜಿ.ವಿ.ರವಿಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಕೂರ್ಗ್, ಸಂಘದ ಸಹ ಕಾರ್ಯದರ್ಶಿಯಾಗಿ ಪ್ರಸಾದ್ ಸಂಪಿಗೆಕಟ್ಟೆ, ಖಾಯಂ ಆಹ್ವಾನಿತರಾಗಿ ಸಂಘದ ನಿಕಟಪೂರ್ವ ಅಧ್ಯಕ್ಷ ಎಸ್.ಎ.ಮುರಳೀಧರ್ ಅವರನ್ನು ಆಯ್ಕೆ ಮಾಡಲಾಯಿತು. *ಜಿಲ್ಲಾ ಸಮಿತಿ ನಿರ್ದೇಶಕರು* ಉಜ್ವಲ್ ರಂಜಿತ್, ಟಿ.ಜಿ.ಸತೀಶ್, ಟಿ.ಜೆ.ಪ್ರವೀಣ್ ಕುಮಾರ್, ರಂಜಿತ್ ಕವಲಪಾರ, ಸಯ್ಯದ್ ಇರ್ಫಾನ್, ಎಚ್.ಎನ್.ಲಕ್ಷ್ಮೀಶ್, ಗುರುದರ್ಶನ್, ಪಿ.ವಿ.ಪ್ರಭಾಕರ್, ಕುಡೆಕಲ್ ಸಂತೋಷ್, ಎಸ್.ಆರ್.ವತ್ಸಲ,…
ಸುಂಟಿಕೊಪ್ಪ NEWS DESK ಮಾ.14 : ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕೊಳವೆ ಬಾವಿಗಳ ಮೋಟಾರ್ ಗಳ ದುರಸ್ತಿ ಕಾರ್ಯ ಮತ್ತು ನೀರು ಸರಬರಾಜಿನ ಪೈಪ್ ಲೈನ್ ಗಳು ಹಾನಿಗೀಡಾದ ಕಾರಣ ಸಮಸ್ಯೆ ಉಲ್ಬಣಿಸಿದೆ. ಬಡಾವಣೆಗಳ ನಿವಾಸಿಗಳು ನೀರಿಗಾಗಿ ಪರದಾಡುತ್ತಿದ್ದ ಹಿನ್ನೆಲೆ ಸುಂಟಿಕೊಪ್ಪ ಗ್ರಾ.ಪಂ ಮೋಟಾರ್ ಗಳ ದುರಸ್ತಿ ಕಾರ್ಯ ಕೈಗೊಂಡಿತು. ಆದರೆ ಇದರ ನಡುವೆಯೇ ಪೈಪ್ ಗಳು ಹಾನಿಗೀಡಾದ ಹಿನ್ನೆಲೆ ಮತ್ತಷ್ಟು ದಿನಗಳು ನೀರು ಇಲ್ಲದಂತ್ತಾಯಿತು. ಪರಿಸ್ಥಿತಿ ಕೈಮೀರುವುದನ್ನು ಅರಿತ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಹಾಗೂ ಆಡಳಿತ ಮಂಡಳಿಯ ಪ್ರಮುಖರು ತಕ್ಷಣ ಎಚ್ಚೆತ್ತುಕೊಂಡು ಖಾಸಗಿ ತೋಟಗಳಿಂದ ನೀರಿನ ಟ್ಯಾಂಕ್ ಪಡೆದು ಅಗತ್ಯವಿರುವ ಬಡಾವಣೆಗಳಿಗೆ ನೀರು ಸರಬರಾಜು ಮಾಡಿದರು. ಅಲ್ಲದೆ ಹಾನಿಗೀಡಾದ ಪೈಪ್ ಲೈನ್ ಗಳ ದುರಸ್ತಿ ಕಾರ್ಯವನ್ನು ಕೂಡ ಕೈಗೊಂಡರು. ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಗ್ರಾ.ಪಂ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗಕ್ಕೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು.
ಮಡಿಕೇರಿ NEWS DESK ಮಾ.14 : ವಿದ್ಯಾರ್ಥಿ ಜೀವನದಲ್ಲಿ ನಾವು ಏನನ್ನು ಪಡೆಯುತ್ತೇವೆಯೋ ಅದನ್ನೇ ಬದುಕಿನಲ್ಲೂ ಅಳವಡಿಸಿಕೊಳ್ಳುತ್ತೇವೆ. ಆದ್ದರಿಂದ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಶಿಸ್ತು ಮತ್ತು ತಾಳ್ಮೆಯನ್ನು ಮೈಗೂಡಿಸಿಕೊಂಡು ಯಶಸ್ಸನ್ನು ಸಾಧಿಸಬೇಕೆಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಕರೆ ನೀಡಿದ್ದಾರೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮತ್ತು ಹಳೇ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಸಮಾಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಯಶಸ್ಸನ್ನು ಸಾಧಿಸಬೇಕಾದರೆ ಪೋಷಕರ ಹಾಗೂ ಶಿಕ್ಷಕರ ಆಶೀರ್ವಾದ ಮುಖ್ಯ, ಜೊತೆಯಲ್ಲಿ ಒಳ್ಳೆತನ ಮತ್ತು ತಾಳ್ಮೆ ಅಗತ್ಯ. ಪೋಷಕರು ಮಕ್ಕಳ ತಪ್ಪುಗಳನ್ನು ತಿದ್ದಿ ಅವರಲ್ಲಿ ಮೌಲ್ಯಗಳನ್ನು ತುಂಬುತ್ತಾರೆ, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಕೌಶಲ್ಯ ಹೆಚ್ಚಿಸುವ ಕಾರ್ಯವನ್ನು ಮಾಡುತ್ತಾರೆ. ಅಲ್ಲದೆ ಉತ್ತಮ ಪ್ರಜೆಗಳನ್ನಾಗಿ ರೂಪಿಸಿ ದೇಶಕ್ಕೆ ಕೊಡುಗೆಯಾಗಿ ನೀಡುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದ ನಂತರವೂ ಶಿಕ್ಷಕರನ್ನು ಸದಾ ಸ್ಮರಿಸುವಂತಾಗಬೇಕು ಎಂದು…
ಬೆಂಗಳೂರು NEWS DESK ಮಾ.14 : ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ, ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಪ್ರಶ್ನಿಸಿದರು. ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ ಆತಂಕಕ್ಕೆ ಉತ್ತರಿಸಿದರು. ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ವಿಚಾರದ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಪ ಸಮಿತಿ ವರದಿ ಕೊಡುವುದು ಬಾಕಿ ಇದೆ. ವರದಿ ಬರುತ್ತಿದ್ದಂತೆ ಅದನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು. ವರದಿ ಬರುವ ಮೊದಲೇ ವಿವಿಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂಥಾ ತೀರ್ಮಾನ ನಮ್ಮಿಂದ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.
ವಿರಾಜಪೇಟೆ NEWS DESK ಮಾ.14 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ನವರ ಕೋರಿಕೆ ಮೇರೆಗೆ ಕ್ಷೇತ್ರದ ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಸಲ್ಲಿಸಿದ 10 ಕೋಟಿ ರೂಗಳ ವಿಶೇಷ ಪ್ರಸ್ತಾವನೆಗೆ ಆರ್ಥಿಕ ಇಲಾಖೆಯ ಸಹಮತಿಯೊಂದಿಗೆ ಸರ್ಕಾರದಿಂದ ಅನುಮೋದನೆ ದೊರಕಿದೆ. 2024-25 ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದ ಲೆಕ್ಕ ಶೀರ್ಷಿಕೆ 5054 ರಡಿ ಎ.ಎಸ್.ಪೊನ್ನಣ್ಣ ಅವರು ಸಲ್ಲಿಸಿದ ಪ್ರಸ್ತಾನನೆಯ ಆಧಾರದಲ್ಲಿ ಕಾಮಗಾರಿಗೆ ಅನುಮೋದನೆ ದೊರಕಿದ್ದು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ 34 ಆಯ್ದ ಗ್ರಾಮೀಣ ರಸ್ತೆ ಮತ್ತು ಸೇತುವೆ ಕಾಮಗಾರಿಗಳಿಗೆ ಒಟ್ಟು 12 ಪ್ಯಾಕೆಜ್ ಗಳಲ್ಲಿ 10 ಕೋಟಿ ಮೊತ್ತದಲ್ಲಿ ಕಾಮಗಾರಿ ನಡೆಸುವಂತೆ ಸರ್ಕಾರದ ಆದೇಶ ಸಂಖ್ಯೆ: ಗ್ರಾಅಪ:634-1:ಆರ್.ಆರ್.ಸಿ:2024(ಇ.1592182),ಬೆಂಗಳೂರು ದಿನಾಂಕ 12-2-2025 ರಲ್ಲಿ ಕರ್ನಾಟಕ ರಾಜ್ಯಪಾಲರ ಆದೇಶನುಸಾರ ಕರ್ನಾಟಕ ರಾಜ್ಯ ಸರ್ಕಾರದ ಪದನಿಮಿತ್ತ ಉಪ ಕಾರ್ಯದರ್ಶಿಗಳು ಉಲ್ಲೇಖಿಸಿದ್ದಾರೆ.
ನಾಪೋಕ್ಲು ಮಾ.14 NEWS DESK : ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರ್ ಕಲಾಡ್ಚ ವಾರ್ಷಿಕ ಉತ್ಸವ (ಹಬ್ಬ)ವನ್ನು ಊರಿನ ಪರವೂರಿನ ಭಕ್ತರು ಸೇರಿ ಸಾಂಪ್ರದಾಯಿಕವಾಗಿ ಶ್ರದ್ದಾಭಕ್ತಿಯಿಂದ ಆಚರಿಲಾಯಿತು. ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವತಕ್ಕರಾದ ಪರದಂಡ ಕುಟುಂಬಸ್ಥರ ಎತ್ತು ಪೋರಾಟ ಹಾಲು ಬಲಿವಾಡು .ಅದರೊಂದಿಗೆ ಇನ್ನಿತರ ತಕ್ಕಮುಖ್ಯಸ್ಥರ ಎತ್ತು ಪೋರಾಟ ಹಾಲು ಬಲಿವಾಡು ಸೇವೆಗಳೂ ಸಂಪ್ರದಾಯದಂತೆ ನಡೆದವು. ಈ ಸಂದರ್ಭ ಭಕ್ತಾದಿಗಳಿಂದ ತುಲಾಭಾರ ಸೇವೆ ಸೇರಿದಂತೆ ಹರಕೆ ಇನ್ನಿತರ ಪೂಜೆಗಳನ್ನು ನೆರವೇರಿಸಿದ ಬಳಿಕ ಮಹಾಪೂಜೆ ಜರುಗಿ ಭಕ್ತಾದಿಗಳಿಗೆ ತೀರ್ಥ ಪ್ರಸಾದ ಅನ್ನಸಂತರ್ಪಣೆ ನೆರವೇರಿತು. ನಂತರ ದೇವರ ಪ್ರಾರ್ಥನೆಯ ಬಳಿಕ ದೇವರ ಪ್ರದರ್ಶನ ಬಲಿ ಜರುಗಿ ಎತ್ತುಪೋರಾಟದೊಂದಿಗೆ ತಕ್ಕ ಮುಖ್ಯಸ್ಥರು ಭಕ್ತಾದಿಗಳು ದೇವರ ಆದಿ ನೆಲೆ ಮಲ್ಮ ಬೆಟ್ಟಕ್ಕೆ ಶ್ರದ್ದಾಭಕ್ತಿಯಿಂದ ತೆರಳಿದರು. ಇದೇ ಸಂದರ್ಭ ಪೇರೂರು ಹಾಗೂ ನೆಲಜಿ ಗ್ರಾಮದ ತಕ್ಕ ಮುಖ್ಯಸ್ಥರು ಎತ್ತುಪೋರಾಟದೊಂದಿಗೆ ಮಲ್ಮಕ್ಕೆ ಆಗಮಿಸಿದರು. ಅರ್ಚಕರು ಶುದ್ದಕಲಶ ಪೂಜಾಕಾರ್ಯಗಳನ್ನು ನೆರವೇರಿಸಿ ಎತ್ತುಪೋರಾಟ ದುಡಿಕೊಟ್ಟ್ ಪಾಟ್ ನೆರವೇರಿತು. ಬಳಿಕ ಎತ್ತುಪೋರಾಟದ ಅಕ್ಕಿಯನ್ನು ಮೂರು…
ಮಡಿಕೇರಿ NEWS DESK ಮಾ.13 : ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲ ಗ್ರಾಮದ ಕಾಫಿ ತೋಟವೊಂದರಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಡಾನೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೋಟದ ರೈಟರ್ ವಿರುದ್ಧ ಅರಣ್ಯ ಇಲಾಖೆ ಕ್ರಮ ಕೈಗೊಂಡಿರುವುದನ್ನು ವಿರೋಧಿಸಿ ಮಾ.14ರಂದು ಬೃಹತ್ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸಂಘಟನೆಗಳು ನಿರ್ಧರಿಸಿವೆ. ಸಿದ್ದಾಪುರದ ಸ್ವರ್ಣಮಾಲ ಕಲ್ಯಾಣ ಮಂಟಪದಲ್ಲಿ ಇಂದು ಸಭೆ ನಡೆಸಿದ ರೈತ ಸಂಘ ಮತ್ತು ಕಾರ್ಮಿಕ ಸಂಘಟನೆಗಳ ಪ್ರಮುಖರು ಕಾಡಾನೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತೋಟದ ರೈಟರ್ ಜೋಸೆಫ್ ಅವರ ವಿರುದ್ಧ ಪ್ರಕರಣ ದಾಖಲು ಮಾಡಿರುವುದನ್ನು ಖಂಡಿಸಿದರು. ವಿನಾಕಾರಣ ಜೋಸೆಫ್ ಅವರನ್ನು ತನಿಖೆಗೆ ಒಳಪಡಿಸಿ ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಕುಟುಂಬದ ಸದಸ್ಯರು ಆರೋಪಿಸಿದರು. ಕರ್ನಾಟಕ ರಾಜ್ಯ ರೈತ ಸಂಘದ ಸಿದ್ದಾಪುರ ಘಟಕದ ಅದ್ಯಕ್ಷ ದೇವಣೀರ ಬೋಪಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೋಸೆಫ್ ಅವರ ವಿರುದ್ಧ ಹೂಡಲಾಗಿರುವ ಪ್ರಕರಣವನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಮಾ.14 ರಂದು…






