ಮಡಿಕೇರಿಮಾ.13 NEWS DESK : ಮಡಿಕೇರಿಯಲ್ಲಿ ಮಾಜಿ ಸೈನಿಕರ ಸಂಪರ್ಕ, ರ್ಯಾಲಿ ಸೇವಾ ನಿರತ ಸಶಸ್ತ್ರ ಪಡೆಗಳ ಯೋಧರು, ನಿವೃತ್ತ ಸೈನಿಕರು ಜೊತೆ ಸಂಪರ್ಕವನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ, ಆವರ ಜೊತೆ ಸಂವಹನ ನಡೆಸಲು ಮತ್ತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ವೇದಿಕೆಯೊಂದನ್ನು ಕಲ್ಪಿಸಲಾಗಿದೆ. ವಿಶೇಷವಾಗಿ ಕೊಡಗಿನ ಸಶಸ್ತ್ರ ಪಡೆಗಳ ಕುಟುಂಬವು ಇದರ ಪ್ರಯೋಜನ ಪಡೆಯಬಹುದು. ಇದರ ಜೊತೆಗೆ, ಪಿಂಚಣಿ ಮತ್ತು ಇತರ ಸೌಲಭ್ಯಗಳಿಗೆ ಸಂಬಂಧಿಸಿದ ದೂರುಗಳನ್ನು ಒಂದೇ ಸ್ಥಳದಲ್ಲಿ ಪರಿಹರಿಸಿಕೊಳ್ಳಬಹುದಾಗಿದೆ ಹಾಗೂ ವಿವಿಧ ರೀತಿಯ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿಕೊಳ್ಳಲು ಇದು ಸಹಕಾರಿಯಾಗಿದೆ. ಭಾರತೀಯ ಸೈನ್ಯದ ಶ್ರೇಷ್ಠತೆಯನ್ನು ಇನ್ನಷ್ಟು ಮೇಲಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಅನುಭವಿ ಯೋಧರ ಅನುಭವಗಳನ್ನು ಬಳಸಿಕೊಳ್ಳಲು ಈ ವೇದಿಕೆ ಅವಕಾಶ ಕಲ್ಪಿಸುತ್ತಿದೆ. ಈ ಸಂಬಂಧ ಕೊಡಗು ಜಿಲ್ಲೆಯಲ್ಲಿ ಔಟ್ರೀಚ್/ ರ್ಯಾಲಿಯನ್ನು ಆಯೋಜಿಸಲಾಗಿದ್ದು, ಮಾಜಿ ಸೈನಿಕರ ರ್ಯಾಲಿಯು ಮಾರ್ಚ್, 24 ರಂದು ಬೆಳಗ್ಗೆ 9 ಗಂಟೆಗೆ ಕ್ಯಾಪಿಟಲ್ ಹಾಲ್, ಹಿಲ್ಡೇಲ್ ರೆಸಾರ್ಟ್, ಐಒಸಿ ಪೆಟ್ರೋಲ್ ಪಂಪ್ ಎದುರು, ಸ್ಟುವರ್ಟ್ ಹಿಲ್, ಮಡಿಕೇರಿ ಇಲ್ಲಿ…
ಲೇಖಕ: admin
ಮಡಿಕೇರಿ ಮಾ.13 NEWS DESK : ಶಾಸಕದ್ವಯರ ನಿರಂತರ ಪ್ರಯತ್ನದಿಂದ ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ದೊರೆತ್ತಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಹಾಗೂ ಬಗರ್ ಹುಕುಂ ತಾಲ್ಲೂಕು ಸಮಿತಿ ಸದಸ್ಯ ಜೆ.ಎಲ್.ಜನಾರ್ಧನ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಡಿಕೇರಿ- ಸೋಮವಾರಪೇಟೆ ಜನತೆಯ ದಶಕಗಳ ಕನಸು ನನಸಾಗಿದೆ. ಮಡಿಕೇರಿ- ದೋಣಿಗಲ್ ನಡುವೆ ಅಂತರರಾಷ್ಟ್ರೀಯ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ 900 ಕೋಟಿ ರೂ. ಯೋಜನೆಯನ್ನು ರಾಜ್ಯ ಬಜೆಟ್ ನಲ್ಲಿ ಘೋಷಿಸಲಾಗಿದೆ. ಇದಕ್ಕೆ ಕಾರಣಕರ್ತರಾದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅಭಿನಂದನಾರ್ಹರು. ಜನರ ಹಲವು ವರ್ಷಗಳ ಬೇಡಿಕೆಗೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಿದೆ. ಮಡಿಕೇರಿ – ದೋಣಿಗಲ್ -ಮಾದಾಪುರ – ಸೋಮವಾರಪೇಟೆ – ಶನಿವಾರಸಂತೆ – ಕೊಡ್ಲಿಪೇಟೆಯ 95 ಕಿ.ಮೀ ಅಂತರದ ಮಾರ್ಗ ಸರ್ವಋತು ರಸ್ತೆಯಾಗಿ ಅಭಿವೃದ್ಧಿಯಾಗಲಿದೆ. ಇದು ಡಾ.ಮಂತರ್ ಗೌಡ ಅವರ ಪ್ರಯತ್ನದ ಫಲವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. …
ಮಡಿಕೇರಿ ಮಾ.13 NEWS DESK : ವಿದ್ಯುತ್ ಸ್ಪರ್ಶದಿಂದ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲ ಗ್ರಾಮದ ಕಾಫಿ ತೋಟವೊಂದರಲ್ಲಿ ಬುಧವಾರ ನಡೆದಿದೆ. ಸುಮಾರು 36 ವರ್ಷದ ಗಂಡಾನೆ ಮೂರು ದಿನಗಳ ಹಿಂದೆಯೇ ಮೃತಪಟ್ಟಿರುವ ಕುರಿತು ಶಂಕಿಸಲಾಗಿದೆ. ಸೋಲಾರ್ ಬೇಲಿ ದಾಟುವ ಸಂದರ್ಭ ವಿದ್ಯುತ್ ಸ್ಪರ್ಶಗೊಡಿರಬಹುದುದೆಂದು ಸಂಶಯ ವ್ಯಕ್ತವಾಗಿದೆ. ಅರಣ್ಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಆದೇಶಿಸಿದ್ದಾರೆ. ಸ್ಥಳಕ್ಕೆ ಎಸಿಎಫ್ ಗೋಪಾಲ್, ಆರ್ಎಫ್ ಓ ರತನ್ ಕುಮಾರ್, ಡಿಆರ್ಎಫ್ ಓ ಸುಬ್ರಾಯ, ವನ್ಯಜೀವಿ ವೈದ್ಯರಾದ ಚಿಟ್ಟಿಯಪ್ಪ, ಸಿಂಧೆ, ಚೆಸ್ಕಾಂ ಇಲಾಖೆ ಅಧಿಕಾರಿ ಮಂಜುನಾಥ್ ಸೇರಿದಂತೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸೀಲಿಸಿದರು.
ನವದೆಹಲಿ ಮಾ.13 NEWS DESK : ಸಂಸತ್ ಅಧಿವೇಶನದ ಬುಧವಾರದ ಕಲಾಪದಲ್ಲಿ ಮೈಸೂರು-ಕೊಡಗು ಸಂಸದರಾದ ಯದುವೀರ್ ಒಡೆಯರ್ ಮಾತೃಭಾಷೆಯಲ್ಲಿ ಭಾಷಣ ಮಾಡಿ ಗಮನ ಸೆಳೆದರು. ಚರ್ಚೆಯಲ್ಲಿ ವಿಷಯ ಮಂಡನೆಗೂ ಮುನ್ನ ಮಾತನಾಡಿದ ಯದುವೀರ್, ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ವಿಷಯ ಮಂಡಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಆಭಾರಿಯಾಗಿದ್ದೇನೆ. ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಯದುವೀರ್ ತಿಳಿಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸಿದ್ಧಲಿಂಗಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳೆ ಕೆಸರೆ ಗ್ರಾಮದಲ್ಲಿ ಅವೈಜ್ಞಾನಿಕ ಘನತ್ಯಾಜ್ಯ ಘಟಕ ನಿರ್ಮಾಣದಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮೈಸೂರು-ಕೊಡಗು ಸಂಸದ ಯದುವೀರ್ ಚಾಮರಾಜ ಕೃಷ್ಣದತ್ತ ಒಡೆಯರ್ ಸಂಸತ್ತಿನ ಅಧಿವೇಶನದಲ್ಲಿ ಗಮನ ಸೆಳೆದರು. ನನ್ನ ಕ್ಷೇತ್ರ ವ್ಯಾಪ್ತಿಯ ಹಳೆ ಕೆಸರೆ ಗ್ರಾಮದಲ್ಲಿ ಘನತ್ಯಾಜ್ಯ ಘಟಕ ನಿರ್ಮಾಣದ ವೇಳೆ ಕಾನೂನು ರೀತಿ ಕ್ರಮಗಳನ್ನು ತೆಗೆದುಕೊಂಡಿಲ್ಲ, ಯಾವುದೇ ನೀತಿ-ನಿಯಮಗಳನ್ನು ಪಾಲಿಸಿಲ್ಲ ಎಂದು ಮಾಹಿತಿ ನೀಡಿದರು. ಘನತ್ಯಾಜ್ಯ ನಿರ್ಮಾಣಕ್ಕೆ ಶಾಸನಬದ್ಧ ಅನುಮತಿಗಳನ್ನು ಪಡೆಯದೇ ನಿರ್ಮಾಣ ಮಾಡಲಾಗಿದೆ. ಅವೈಜ್ಞಾನಿಕವಾಗಿ ನಿರ್ವಹಣಾ ಘಟಕವನ್ನು ಸ್ಥಾಪಿರುವುದರಿಂದ ಕೊಳೆತ…
ಮಡಿಕೇರಿ ಮಾ.13 NEWS DESK : ದಕ್ಷಿಣ ಕೊಡಗು ಭಾಗದಲ್ಲಿ ಮತ್ತೆ ಹುಲಿ ಉಪಟಳ ಮಿತಿ ಮೀರಿದೆ. ಮೇಯಲು ಬಿಟ್ಟಿದ್ದ ಹಸುವೊಂದರ ಮೇಲೆ ಇಂದು ಹುಲಿ ದಾಳಿ ಮಾಡಿರುವ ಘಟನೆ ಹುದಿಕೇರಿ ಸಮೀಪ ಕೋಣಗೇರಿಯಲ್ಲಿ ನಡೆದಿದೆ. ಬೆಳೆಗಾರ ಚೆಕ್ಕೇರ ಗಣಪತಿ ಅವರಿಗೆ ಸೇರಿದ ಹಸುವನ್ನು ಮೇಯಲೆಂದು ಬಿಡಲಾಗಿತ್ತು. ಹಾಡಹಗಲೇ ದಾಳಿ ಮಾಡಿದ ಹುಲಿ ಹಸುವನ್ನು ಕೊಂದು ದೇಹದ ಅರ್ಧಭಾಗವನ್ನು ತಿಂದು ಹಾಕಿದೆ. ಈ ಘಟನೆಯಿಂದ ಗ್ರಾಮದಲ್ಲಿ ಆತಂಕ ಮೂಡಿದ್ದು, ಬೆಳೆಗಾರರು ಹಾಗೂ ಕಾರ್ಮಿಕರು ತೋಟಕ್ಕೆ ಹೋಗಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅರಣ್ಯ ಇಲಾಖೆ ತಕ್ಷಣ ಹುಲಿಯನ್ನು ಸೆರೆ ಹಿಡಿಯಬೇಕೆಂದು ಭಯಭೀತರಾಗಿರುವ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ದಕ್ಷಿಣ ಕೊಡಗಿನ ವಿವಿಧ ಭಾಗಗಳಲ್ಲಿ ಕಳೆದ ಒಂದು ತಿಂಗಳಿನಿಂದ ಹುಲಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಲೇ ಇದ್ದು, ಅರಣ್ಯ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಮಡಿಕೇರಿ ಮಾ.13 NEWS DESK : ಹೋಂಸ್ಟೇ ಅಸೋಸಿಯೇಷನ್ ಸೋಮವಾರಪೇಟೆ ವತಿಯಿಂದ ಹೊಸ ತೋಟ ಜಂಕ್ಷನ್ ಬಳಿ ಪ್ರವಾಸೋದ್ಯಮ ಸ್ಥಳಗಳ ಸೂಚನಾ ಫಲಕವನ್ನು ಅಳವಡಿಸಲಾಗಿದ್ದು, ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷ ಸಿ.ಕೆ.ರೋಹಿತ್ ಉದ್ಘಾಟಿಸಿ, ಮಾತನಾಡಿ ಸೂಚನಾ ಫಲಕವನ್ನು ಅಳವಡಿಸುವುದರಿಂದ ಪ್ರವಾಸಕರಿಗೆ ಅನುಕೂಲವಾಗುವುದು ಮತ್ತು ನಮ್ಮಿಂದ ಸಮಾಜಕ್ಕೆ ಒಂದು ಕೊಡುಗೆ ಇರುವುದು, ಇದೇ ರೀತಿ ಹಲವಾರು ಸೂಚನಾ ಫಲಕವನ್ನು ಸೋಮವಾರಪೇಟೆ ಭಾಗದಲ್ಲಿ ಅಳವಡಿಸುತ್ತಿರುವುದಾಗಿ ತಿಳಿಸಿದರು. ಈ ಸಂದರ್ಭ ಉಪಾಧ್ಯಕ್ಷ ಯೋಗೇಶ್ ಪಟೇಲ್, ಕಾರ್ಯದರ್ಶಿ ಅಭಿನಂದ್ ಹಾಗೂ ಸದಸ್ಯರುಗಳು ಹಾಜರಿದ್ದರು. ಹೋಂ ಸ್ಟೇ ಅಸೋಸಿಯೇಷನ್ ಕಾರ್ಯಾಗಾರ :: ಹೋಂ ಸ್ಟೇ ಅಸೋಸಿಯೇಷನ್ ಕಾರ್ಯಾಗಾರವನ್ನು ಮೌಂಟ್ರೋಸ್ ರೆಸಾರ್ಟ್ ನಲ್ಲಿ ನಡೆಸಲಾಯಿತು. ಕಾರ್ಯಾಗಾರದಲ್ಲಿ ಮಡಿಕೇರಿ ಹೋಂ ಸ್ಟೇ ಅಸೋಸಿಯೇಷನ್ ಅಧ್ಯಕ್ಷೆ ಮೊಂತಿ ಗಣೇಶ್ ಮಾತನಾಡಿ ಹೋಂ ಸ್ಟೇಗೆ ಸಂಬಂಧಪಟ್ಟ ಕಾನೂನು ನಿಯಮಗಳು, ನಿಬಂಧನೆಗಳು ಮತ್ತು ಮಾನದಂಡಗಳ ಬಗ್ಗೆ ವಿವರಿಸಿದರು. ಉಪಾಧ್ಯಕ್ಷ ನವೀನ್ ಅಂಬೆಕಲ್ ಹಾಗೂ ಸದಸ್ಯರು ಹಾಜರಿದ್ದರು.
ಮಡಿಕೇರಿ ಮಾ.13 NEWS DESK : ಮಾಯಮುಡಿ ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಗ್ರಾಮ ಸಭೆಯು ಮಾ.17 ರಂದು ಗ್ರಾ.ಪಂ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಮಾಯಮುಡಿ ಕಂಗಳತ್ತು ನಾಡು ಮಹಿಳಾ ಸಮಾಜದ ಸಭಾಂಗಣದಲ್ಲಿ ನೋಡಲ್ ಅಧಿಕಾರಿ, ಪೊನ್ನಂಪೇಟೆ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಪ್ರೀತಿ ಚಿಕ್ಕಮಾದಯ್ಯ ಅವರ ಸಮ್ಮುಖದಲ್ಲಿ ನಡೆಯುವ ಸಭೆಯಲ್ಲಿ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕುಂದು ಕೊರತೆಗಳ ಕುರಿತು ಚರ್ಚಿಸಿ ಪಂಚಾಯಿತಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಲು ಅಧ್ಯಕ್ಷ ಎ.ಎಸ್.ಟಾಟು ಮೊಣ್ಣಪ್ಪ ಮನವಿ ಮಾಡಿದ್ದಾರೆ.
ಮಡಿಕೇರಿ ಮಾ.13 NEWS DESK : ಅಂಗನವಾಡಿ ಮಕ್ಕಳ ಆರೋಗ್ಯ ಮತ್ತು ಕ್ರೀಡೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಭರವಸೆ ನೀಡಿದ್ದಾರೆ. ಮಾಯಮುಡಿ ಗ್ರಾ.ಪಂ ವತಿಯಿಂದ ಗ್ರಾ.ಪಂ ವ್ಯಾಪ್ತಿಯ 11 ಅಂಗನವಾಡಿಗಳಿಗೆ ಕುರ್ಚಿಗಳನ್ನು ವಿತರಿಸಿ ಮಾತನಾಡಿದ ಅವರು ಅಂಗನವಾಡಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು. ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ಉದ್ದೇಶದಿಂದ ಆರೋಗ್ಯ ಮತ್ತು ಕ್ರೀಡೆಗೆ ಹೆಚ್ಚಿನ ಮಹತ್ವವನ್ನು ನೀಡಲಾಗುತ್ತಿದೆ. ಗ್ರಾ.ಪಂ ಅನುದಾನದಲ್ಲಿ 11 ಅಂಗನವಾಡಿಗಳ ಮಕ್ಕಳಿಗೆ ತಲಾ 14 ಕುರ್ಚಿಗಳನ್ನು ವಿತರಿಸಲಾಗುತ್ತಿದೆ. ಪೋಷಕರು ಹಾಗೂ ಅಂಗನವಾಡಿ ಕಾರ್ಯಕರ್ತರು ಮಕ್ಕಳ ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಟಾಟು ಮೊಣ್ಣಪ್ಪ ಕರೆ ನೀಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ ಸದಪ್ಪ ಮಟಲ್ಕೋಡ್, ಉಪಾಧ್ಯಕ್ಷರಾದ ಪಿ.ಎಸ್.ಶಾಂತ, ಸದಸ್ಯರುಗಳಾದ ಹೆಚ್.ಆರ್.ಸುಶೀಲ, ಪಿ.ಕೆ.ಸರಸ್ವತಿ, ಕೆ.ಕೆ.ಸುಮಿತ್ರ ರವಿ, ಎಂ.ಪಿ.ವೀಣಾ, ಸಿ.ಕೆ.ಪೂವಯ್ಯ, ಕೆ.ಕೆ.ಶಬರೀಶ್, ಪಿ.ಮುತ್ತಮ್ಮ, ಸಿಬ್ಬಂದಿಗಳಾದ ಆಶಾ ಸೂದನ್, ಸಚಿತಾ,…
ಕುಶಾಲನಗರ ಮಾ.13 NEWS DESK : ಮುಳ್ಳುಸೋಗೆಯಲ್ಲಿರುವ ಮೂರು ಗ್ರಾಮಗಳ ಗ್ರಾಮದೇವತೆ ದೊಡ್ಡಮ್ಮ ದೇವತಾ ಪ್ರತಿಷ್ಠಾಪನೆಯ 12ನೇ ವಾರ್ಷಿಕೋತ್ಸವದ ಅಂಗವಾಗಿ ಕುಂಭಾಭಿಷೇಕ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ದಾಭಕ್ತಿಯಿಂದ ನೆರವೇರಿತು. ಎರಡು ದಿನಗಳ ಕಾಲ ನಡೆದ ದೇವತಾ ಪೂಜೋತ್ಸವದಲ್ಲಿ ಮುಂಜಾನೆ ಗಣಪತಿ ಹೋಮ, ನವಗ್ರಹ ಹೋಮ, ಕಳಸಾಭಿಷೇಕ, ಮಹಾಪೂಜೆ, ಸಂಜೆ ವಾಸ್ತು ಹೋಮ, ರಾಕ್ಷೋಘ್ನ ಹೋಮ, ದಿಗ್ಬಲಿ ನೆರವೇರಿತು. ಮರುದಿನ ಬೆಳಗ್ಗೆ ಕಾವೇರಿ ನದಿಯಿಂದ ಕಳಶ ತರಲಾಯಿತು. ಬಳಿಕ ಗಣಪತಿ ಹೋಮ, ದುರ್ಗಾ ಹೋಮ, ಪ್ರತಿಷ್ಠಾ ಕಳಸಾಭಿಷೇಕ, ಮಧ್ಯಾಹ್ನ ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ನೆರವೇರಿತು. ದೈವಜ್ಞ ಜಗದೀಶ್ ಉಡುಪ, ಸುಂಟಿಕೊಪ್ಪದ ಗಣೇಶ ಭಟ್, ಕೌಶಿಕ್ ಅವರಿಂದ ವಿವಿಧ ಹೋಮ ಹವನಾದಿಗಳು ನಡೆದವು. ದೇವಾಲಯ ಸಮಿತಿ ಅಧ್ಯಕ್ಷ ಎಂ.ಎ.ಕುಮಾರಸ್ವಾಮಿ, ಉಪಾಧ್ಯಕ್ಷ ಧನರಾಜ್, ಕಾರ್ಯದರ್ಶಿ ಎಂ.ಹೆಚ್.ಅಣ್ಣೇಗೌಡ, ಸಹಕಾರ್ಯದರ್ಶಿ ಎಂ.ಮಂಜುನಾಥ್, ಖಜಾಂಚಿ ಸೋಮು, ನಿರ್ದೇಶಕರಾದ ಎಂ.ಕೆ.ಗಣೇಶ್, ಎಂ.ಆರ್.ನಂಜುಂಡ, ಗೋವಿಂದರಾಜು, ಡಿ.ಅಪ್ಪಣ್ಣ, ಎಂ.ಸಿ.ಮಂಜುನಾಥ್, ಪುಟ್ಟರಾಜು, ಜಯರಾಜ್, ವಿಶ್ವನಾಥ್, ಗಣಪತಿ, ಸೋಮು, ಎಂ.ಸಂತೋಷ್ ಇದ್ದರು. ಮುಳ್ಳುಸೋಗೆ, ಗುಮ್ಮನಕೊಲ್ಲಿ…
ಪುತ್ತೂರು ಮಾ.13 NEWS DESK : ರಕ್ತಕ್ಕೆ ಪರ್ಯಾಯವಿಲ್ಲ, ಯಾವ ಸಂದರ್ಭದಲ್ಲಿಯೂ ಮನುಷ್ಯನಿಗೆ ರಕ್ತದ ಆವಶ್ಯಕತೆ ಉಂಟಾಗಬಹುದು ಹಾಗಾಗಿ ರಕ್ತದಾನವು ನಾವು ಇತರರಿಗೆ ನೀಡಬಹುದಾದ ಅಮೂಲ್ಯ ಹಾಗೂ ಜೀವ ಉಳಿಸುವ ಕೊಡುಗೆಯಾಗಿದೆ ಎಂದು ಪುತ್ತೂರಿನ ರೋಟರಿ ಕ್ಯಾಂಪ್ಕೋ ರಕ್ತ ಕೇಂದ್ರದ ವೈದ್ಯಾಧಿಕಾರಿ ಡಾ.ಸೀತಾರಮ ಭಟ್.ಕೆ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಯೂತ್ ರೆಡ್ಕ್ರಾಸ್ ಮತ್ತು ಎನ್ಎಸ್ಎಸ್ ಘಟಕ ಹಾಗೂ ರೋಟರಿ ಕ್ಯಾಂಪ್ಕೋ ರಕ್ತ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ರಕ್ತದಾನದ ನಂತರ ಅವಶ್ಯಕತೆಯುಳ್ಳ ರೋಗಿಗೆ ಅದನ್ನು ನೀಡುವ ಮೊದಲು ಯಾವೆಲ್ಲಾ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಮತ್ತು ರಕ್ತದಾನದ ಪರಿಣಾಮಗಳ ಬಗ್ಗೆ ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಮಾತನಾಡಿ, ಸಾಮಾಜದ ಆವಶ್ಯಕತೆಗನುಗುಣವಾಗಿ ವಿವಿಧ ಸಂಘ ಸಂಸ್ಥೆಗಳ ಜತೆ ಸೇರಿ ಕಾಲೇಜಿನಲ್ಲಿ ಪ್ರತಿವರ್ಷವೂ ರಕ್ತದಾನ ಶಿಬಿರಗಳನ್ನು ಏರ್ಪಡಿಸಲಾಗುತ್ತದೆ, ವಿದ್ಯಾರ್ಥಿಗಳು…






