ಲೇಖಕ: admin

ಮಡಿಕೇರಿ ಮಾ.13 NEWS DESK : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಕಾಂಗ್ರೆಸ್ ಭವನ ( ಕಾಂಗ್ರೆಸ್ ಪಕ್ಷದ ಸುಸಜ್ಜಿತವಾದ ನೂತನ ಕಚೇರಿ) ನಿರ್ಮಿಸುವ ನಿಟ್ಟಿನಲ್ಲಿ ಕೊಡಗು ಕಾಂಗ್ರೆಸ್ ನಿಯೋಗವು ಬೆಂಗಳೂರಿನಲ್ಲಿ ಸಭೆ ನಡೆಸಿತು. ಸಭೆಯಲ್ಲಿ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಹಿರಿಯ ಕಾಂಗ್ರೆಸ್ ಮುಖಂಡ ಹೆಚ್.ಎಸ್.ಚಂದ್ರಮೌಳಿ, ಕುಡ ಸಮಿತಿ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಹಾಗೂ ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿದ್ದರು.

Read More

ಕುಶಾಲನಗರ ಮಾ.13 NEWS DESK  :  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಉಚಿತ ಸೌಂದರ್ಯವರ್ಧಕ ತರಬೇತಿ ಶಿಬಿರ ನಡೆಯಿತು.  ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ವ್ಯಾಪ್ತಿಯ ಕಂಪ್ಲಾಪುರದಲ್ಲಿ ನಡೆದ ಎರಡು ತಿಂಗಳ ಅವಧಿಯ ತರಬೇತಿ ಶಿಬಿರದಲ್ಲಿ 12 ಮಂದಿ ಮಹಿಳೆಯರು ಪಾಲ್ಗೊಂಡಿದ್ದರು. ಪತ್ರಕರ್ತೆ ಹಾಗೂ ಸೌಂದರ್ಯ ತಜ್ಞರಾದ ವನಿತಾ ಚಂದ್ರಮೋಹನ್ ಅವರು ಶಿಬಿರಾರ್ಥಿಗಳಿಗೆ ತರಬೇತಿ ನೀಡಿದರು. ಕೇಶ ವಿನ್ಯಾಸ, ಚರ್ಮದ ಸುರಕ್ಷತೆ, ಫೇಶಿಯಲ್, ಹೇರ್ ಸ್ಟೈಲ್ ಆಯಿಲ್ ಮಸಾಜ್, ವ್ಯಾಕ್ಸಿಂಗ್, ಐ ಬ್ರೋ ಸೇರಿದಂತೆ ವ್ಯಕ್ತಿತ್ವ ವಿಕಸನ ಮತ್ತಿತರ ವಿಷಯಗಳ ಬಗ್ಗೆ ವಿಶೇಷ ತರಗತಿಗಳ ಮೂಲಕ ಶಿಬಿರಾರ್ಥಿಗಳಿಗೆ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ತರಬೇತಿ ಕಾರ್ಯಕ್ರಮದ ಪ್ರಯೋಜನಗಳನ್ನು ಹಾಗೂ ಹೆಚ್ಚಿನ ಜ್ಞಾನ ಪಡೆಯುವ ಮೂಲಕ ಪ್ರತಿಯೊಬ್ಬರೂ ಸ್ವಾವಲಂಬಿ ಬದುಕು ರೂಪಿಸಿಕೊಳ್ಳುವಂತೆ ಶುಭ ಹಾರೈಸಿದರು.

Read More

ನಾಪೋಕ್ಲು ಮಾ.13 NEWS DESK  : ಮಹಿಳೆ ತ್ಯಾಗಮೂರ್ತಿ, ಹಲವು ಜವಾಬ್ದಾರಿಗಳನ್ನು ನಿಭಾಯಿಸಿ ಆತ್ಮವಿಶ್ವಾಸ, ಪ್ರೇರಣೆ ಹಾಗೂ ಶಕ್ತಿಯ ಪ್ರತಿರೂಪವಾಗಿದ್ದಾಳೆ ಎಂದು ಮಡಿಕೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕಿ, ಲೇಖಕಿ ಡಾ.ಕಾವೇರಿ ಪ್ರಕಾಶ್ ಹೇಳಿದರು. ಮಹಿಳಾ ಸಮಾಜ ಮತ್ತು ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ನಾಪೋಕ್ಲು ಮಹಿಳಾ ಸಮಾಜದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡಗಿನ ಹೆಣ್ಣು ಮಕ್ಕಳು ವ್ಯವಸ್ಥಿತವಾದ ಬದುಕನ್ನು ಕಟ್ಟಿಕೊಳ್ಳಬಲ್ಲಳು. ಇಲ್ಲಿನ ಹೆಣ್ಣು ಮಕ್ಕಳು ದಿಟ್ಟತನ ಹೊಂದಿದವರು. ಇತರರಿಗೆ ಬದುಕು ಕಟ್ಟಿಕೊಡುವ ಹೆಣ್ಣು ನಗಳು ಇತರರಿಗೆ ಕಲೆಯನ್ನು ಹೇಳಿಕೊಡುವ ಮೂಲಕ ಮಾದರಿಯಾಗಿದ್ದಾಳೆ ಎಂದರು. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿದ್ದಾರೆ. ಮಹಿಳೆಯರು ಸಮಾಜದಲ್ಲಿ ಉತ್ತಮ ಕೆಲಸಗಳನ್ನು ನಿರ್ವಹಿಸಬೇಕು. ಇದಕ್ಕಾಗಿ ಯಾರ ಹೊಗಳಿಕೆ ಬೇಕಿಲ್ಲ. ಕ್ಷಣಿಕ ಜೀವನದಲ್ಲಿ ಒಂದಷ್ಟು ಸಮಾಜಮುಖಿ ಕೆಲಸಗಳನ್ನು ಮಾಡಬೇಕು ಎಂದರು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಕಷ್ಟಪಟ್ಟು ತಮ್ಮ ಅಸ್ಮಿತೆಯನ್ನು ಗಳಿಸಿಕೊಳ್ಳಬೇಕು. ನಮ್ಮ ಪ್ರತಿಭೆಯನ್ನು ನಾವು ಕಾಪಾಡಿಕೊಳ್ಳಬೇಕು ಎಂದ ಅವರು ಯಾವುದೇ…

Read More

ನಾಪೋಕ್ಲು ಮಾ.13 NEWS DESK : ಕೊಡಗು ಜಿಲ್ಲಾ ಪಂಚಾಯಿತಿ, ಮಡಿಕೇರಿ ತಾಲ್ಲೂಕು ಪಂಚಾಯಿತಿ ಹಾಗೂ ಪಶು ಪಾಲನಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಾ.14 ರಂದು ಬೇತು ಗ್ರಾಮದಲ್ಲಿ ಉಚಿತ ಪಶು ಚಿಕಿತ್ಸಾ ಶಿಬಿರ ನಡೆಯಲಿದೆ. ಬೆಳಿಗ್ಗೆ 9.30 ರಿಂದ 11.30 ಗಂಟೆವರೆಗೆ ಸಾಕು ನಾಯಿ ಹಾಗೂ ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕೆ ಹಾಕಲಾಗುವುದು. ಕಾರ್ಯಕ್ರಮದಲ್ಲಿ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವೆಯ ಉಪ ನಿರ್ದೇಶಕರಾದ ಲಿಂಗರಾಜ್ ದೊಡ್ಡಮನಿ, ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಕೆ.ಪ್ರಸನ್ನ ಭಾಗಿಯಾಗಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಮಾ.13 NEWS DESK : ಕಳೆದ 9 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಿದ್ದಾಪುರ ಗ್ರಾಮ ಪಂಚಾಯ್ತಿಯ ಮೈಸೂರು ರಸ್ತೆ ಹಾಗೂ ಕಾಲೋನಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅನುದಾನ ಸುಮಾರು  5 ಲಕ್ಷ ದಲ್ಲಿ  ಸುಸಜ್ಜಿತ ರಸ್ತೆ  ನಿರ್ಮಾಣಕ್ಕೆ ಕಾಮಗಾರಿ ಕೈಗೊಂಡಿದ್ದು, ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿಗೆ ಅನುದಾನ ಒದಗಿಸಿದ ಶಾಸಕರು ಹಾಗೂ  ಸಹಕರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಪಟ್ಟಡ ರಂಜಿ ಪೂಣ್ಣಚ್ಚ, ಜಿಲ್ಲಾ ಅಲ್ಪ ಸಂಖ್ಯಾತ ಅಧ್ಯಕ್ಷ ಹನೀಫ್, ಬ್ಲಾಕ್ ಅಲ್ಪಸಂಖ್ಯಾತ ಅಧ್ಯಕ್ಷ ಕೋಲುಮಂಡ ರಫೀಕ್  ಅವರಿಗೆ ಗ್ರಾಮಸ್ಥರು ಧನ್ಯವಾದ ಸಲ್ಲಿಸಿದ್ದಾರೆ.

Read More

ಮಡಿಕೇರಿ ಮಾ.13 NEWS DESK : ಗ್ಲಾಕೋಮವನ್ನು ಸದ್ದಿಲ್ಲದೇ ದೃಷ್ಟಿ ಕದ್ದೊಯ್ಯುವ ಕಳ್ಳ ಎಂದು ಕರೆಯ ಬಹುದು. ಗ್ಲಾಕೋಮಾ ಕಣ್ಣಿಗೆ ಸಂಬಂಧ ಪಟ್ಟ ಆತಂಕಕಾರಿ ಕಾಯಿಲೆಯ ಸ್ಥಿತಿಗಳಲ್ಲೊಂದು. ಇದರಿಂದ ಕಣ್ಣಿನ ದೃಷ್ಟಿ ಹೋಗುತ್ತದೆ. ಸಾಧಾರಣವಾಗಿ 40 ವರ್ಷಗಳಿಗಿಂತಲೂ ಹೆಚ್ಚಿನ ವಯಸ್ಸಿನವರಿಗೆ, ಅದರಲ್ಲೂ ಅನುವಂಶಿಕವಾಗಿ ಗ್ಲಾಕೋಮಾ ರೋಗವು ಹರಡುವುದು ಕಂಡು ಬರುತ್ತದೆ. ಯಾವುದೇ ರೋಗ ಲಕ್ಷಣಗಳಿಲ್ಲದೆ ದೃಷ್ಟಿ ಕದಿಯುವ ಕಾಯಿಲೆ ಗ್ಲಾಕೋಮಾ ರೋಗ ಲಕ್ಷಣಗಳು: ಯಾವುದೇ ರೋಗ ಲಕ್ಷಣಗಳಿಲ್ಲದೆ ದೃಷ್ಠಿ ಕದಿಯುವ ಕಾಯಿಲೆ ಗ್ಲಾಕೋಮಾ, 40 ವಯಸ್ಸಿನ ನಂತರ ಪ್ರತೀಯೊಬ್ಬರೂ ವರ್ಷಕ್ಕೊಮ್ಮೆ ಕಣ್ಣಿನ ಒತ್ತಡ ಪರೀಕ್ಷಿಸಿಕೊಳ್ಳಿ, ಬೆಳಕಿನ ಸುತ್ತ ಕಾಮನ ಬಿಲ್ಲಿನಂತಹ ವೃತ್ತಗಳನ್ನು ಕಾಣುವುದು. ತಲೆನೋವು ಹಾಗೂ ಕಣ್ಣು ನೋವು. ಅಸ್ಪಷ್ಟ ದೃಷ್ಟಿ ಹಾಗೂ ನೋಟದ ವಲಯಕುಗ್ಗುತಾ ಹೋಗುವುದು. ಪದೇ ಪದೇ ಕನ್ನಡಕ ಬದಲಾಯಿಸಬೇಕಾಗಿ ಬರುವುದು. ಮೇಲಿನ ಯಾವುದೇ ಲಕ್ಷಣಗಳು ಕಂಡು ಬಂದಲ್ಲಿ ತಮ್ಮ ಸಮೀಪದ ನೇತ್ರ ತಜ್ಞರನ್ನು ಕೂಡಲೆ ಸಂಪರ್ಕಸಿ, ಗ್ಲಾಕೋಮ ಇದೆ ಅಥಾವ ಇಲ್ಲವೇ ಎಂದು ಪರೀಕ್ಷಿಸಿ ದೃಢಪಡಿಸಿಕೊಳ್ಳಿ ಗ್ಲಾಕೋಮಾವನ್ನು…

Read More

ಮಡಿಕೇರಿ ಮಾ.13 NEWS DESK  : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಸ್ಪಂದನ ಯೋಜನೆ-ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆ ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡ ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ಮಾರ್ಚ್ 25 ರಂದು ನೇರ ಇಲ್ಲಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.…

Read More

ಮಡಿಕೇರಿ ಮಾ.13 NEWS DESK : ವೀರಶೈವ ಪರಂಪರೆಯನ್ನು ಪಸರಿಸುವಲ್ಲಿ ಶ್ರೀ ರೇಣುಕಾಚಾರ್ಯರ ಪಾತ್ರ ಮಹತ್ತರವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಇಂದು ಶ್ರೀ ನಗರದ ಗಾಂಧಿ ಭವನದಲ್ಲಿ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರದ ಸನಾತನ ಸಂಸ್ಕೃತಿಯಲ್ಲಿ ದ್ವೈತ, ಅದ್ವೈತ, ವಿಶಿಷ್ಟ ಅದ್ವೈತ ಎಂಬ ಸಿದ್ಧಾಂತಗಳು ಪ್ರಚಲಿತದಲ್ಲಿದ್ದು, ಇತಿಹಾಸದಲ್ಲಿ ತನ್ನದೇ ಆದ ಸ್ಥಾನವನ್ನು ಹೊಂದಿದೆ. ಜಾತಿ, ಮತ, ಭಾಷೆ, ಪ್ರದೇಶ ಎಂಬ ಸಂಕುಚಿತ ಸಂಕೋಲೆಗಳನ್ನು ಮೀರಿ ಮಾನವ ಧರ್ಮದ ಉನ್ನತಿಗೆ ರೇಣುಕಾಚಾರ್ಯರು ಶ್ರಮಿಸಿದ್ದಾರೆ ಎಂದು ಪ್ರತಿಪಾದಿಸಿದರು. ಯಾವುದೇ ಜಾತಿ ಜನಾಂಗದಲ್ಲಿ ಹುಟ್ಟಿದ ವ್ಯಕ್ತಿ ತನ್ನ ಸತ್ಯ, ಶುದ್ಧ ಆಚರಣೆಯಿಂದ ಸದ್ಗುರುವಿಗೆ ಶರಣಾತಿ ಗುರು ನೀಡಿದ ಬೋಧಾಮೃತವನ್ನು ಅಳವಡಿಸಿಕೊಂಡು ಜೀವನದಲ್ಲಿ ಉನ್ನತ್ತಕ್ಕೆ ಏರಲು ಸಾಧ್ಯ ಎಂದು ರೇಣುಕಾಚಾರ್ಯರು ತಿಳಿಸಿದ್ದಾರೆ ಎಂದರು. ಆಧುನಿಕತೆ, ವಿಜ್ಞಾನ, ಪರಿವರ್ತನೆ ಯುಗದಲ್ಲಿ ಸಾಕಷ್ಟು ಬದಲಾವಣೆ ಮತ್ತು ಸುಧಾರಣೆಗಳಾಗುತ್ತಿದ್ದು, ಮನುಷ್ಯನ ಆತ್ಮ ಜ್ಞಾನವನ್ನು ಹೆಚ್ಚಿಸುವುದಕ್ಕೆ…

Read More

ಮಡಿಕೇರಿ ಮಾ.13 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಸ್ಥಳನಾಮಗಳ ಅಧ್ಯಯನ ಹಾಗೂ ಮಾಹಿತಿ ಸಂಗ್ರಹ ಕಾರ್ಯಕ್ಕೆ ಮುಂದಾಗಿದೆ. ಆರಂಭದಲ್ಲಿ ಪ್ರಾಯೋಗಿಕವಾಗಿ ಸುಳ್ಯ ತಾಲೂಕನ್ನು ಆಯ್ದುಕೊಳ್ಳಲಾಗಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸುಳ್ಯದ ನೆಹರೂ ಸ್ಮಾರಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಕಾರದಲ್ಲಿ ನಡೆದ ಸ್ಥಳನಾಮ ಅಧ್ಯಯನ ಮತ್ತು ಮಾಹಿತಿ ಸಂಗ್ರಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿಯೊಂದು ಸ್ಥಳದ ಹೆಸರಿಗೂ ಒಂದೊಂದು ಕಾರಣ, ಭೌಗೋಳಿಕ ಹಾಗೂ ಐತಿಹಾಸಿಕ ಹಿನ್ನೆಲೆ ಇದೆ. ಆ ದಿಸೆಯಲ್ಲಿ ಕಾಲ ಕ್ರಮೇಣದಲ್ಲಿ ಬರಬರುತ್ತಾ ಬಾಯಿಂದ ಬಾಯಿಗೆ ಮಾತನಾಡುವ ಸಂದರ್ಭದಲ್ಲಿ ಆಯಾಯ ಕಾಲಕ್ಕೆ ತಕ್ಕಂತೆ ಊರಿನ ಹೆಸರು ಬದಲಾಗುತ್ತಾ ಹೋದದ್ದೂ ಇದ್ದು, ಹಳೇ ಹೆಸರನ್ನು ಉಳಿಸಿಕೊಳ್ಳುವುದು ಅತ್ಯಗತ್ಯ ಎಂದು ಸದಾನಂದ ಮಾವಜಿ ನುಡಿದರು. ಆಧುನಿಕ ಯುಗದಲ್ಲಿ ಮೂಲ ಹೆಸರನ್ನು ಬದಲಿಸಿ…

Read More

ಮಡಿಕೇರಿ NEWS DESK ಮಾ.12 : ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮದ ಶ್ರೀ ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್ಗೆ ಒಳಪಟ್ಟ ಬಿಜಿಎಸ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಬಿ.ಕೆ.ಸಿಂಚನ, ಯೋಗಾಸನದ ಮೂರು ಪ್ರಕಾರಗಳಲ್ಲಿ ವಿಶಿಷ್ಟ ಸಾಧನೆಯೊಂದಿಗೆ ಗೋಲ್ಡ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ತನ್ನ ಹೆಸರನ್ನು ದಾಖಲಿಸಿ ಅಪೂರ್ವ ಸಾಧನೆಗೈದಿದ್ದಾಳೆ. ಮಧ್ಯಪ್ರದೇಶದ ಇಂದೋರ್‌ನ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯ ಏಷಿಯಾ ವಿಭಾಗದ ಮುಖ್ಯಸ್ಥರು ಹಾಗೂ ತೀರ್ಪುಗಾರರಾಗಿ ಪಾಲ್ಗೊಂಡಿದ್ದ ಡಾ.ಮನೀಶ್ ಬಿಷ್ಣೋಯ್ ಅವರ ಸಮ್ಮುಖದಲ್ಲಿ ಶಾಲೆಯ ಆವರಣದಲ್ಲಿ ಸಿಂಚನ ಯೋಗಾಸನಗಳನ್ನು ಪ್ರದರ್ಶಿಸಿ ವಿಶ್ವ ದಾಖಲೆ ಬರೆದರು. ಈ ಸಂದರ್ಭ ಡಾ.ಮನೀಶ್ ಬಿಷ್ಣೋಯ್ ಅವರು, ‘ಡಿಂಪಾಸನ’ದಲ್ಲಿ 14 ಮೀಟರ್‌ನ್ನು ಕ್ರಮಿಸುವ ಮೂಲಕ ಸಿಂಚನ ತನ್ನ ಹೆಸರಿನಲ್ಲೇ ಇದ್ದ 10 ಮೀಟರ್ ದಾಖಲೆಯನ್ನು ಮುರಿದು ವಿಶ್ವದಾಖಲೆ ಮಾಡಿದ್ದಾಳೆ. ‘ಉರಭ್ರಾಸನ’ದಲ್ಲಿ 1.04 ನಿಮಿಷ ಏಕಸ್ಥಿತಿಯಲ್ಲಿ ಇರುವ ಮೂಲಕ ಹಾಗೂ ‘ಮೃಗ ಮುಖಾಸನ’ದಲ್ಲಿ 1.45 ನಿಮಿಷ ಏಕಸ್ಥಿತಿಯಲ್ಲಿ ಇರುವ ಮೂಲಕ ಈಕೆ ವಿಶ್ವದಾಖಲೆಯ ಗರಿಯನ್ನು ತನ್ನ ಮುಡಿಗೇರಿಸಿಕೊಂಡಿರುವುದಾಗಿ…

Read More