ಲೇಖಕ: admin

ಮಡಿಕೇರಿ ಫೆ.20 NEWS DESK : ಹಜ್ರತ್ ಸೂಫಿ ಶಹೀದ್ ಮತ್ತು ಹಜ್ರತ್ ಸೈಯದ್ ಹಸನ್ ಸಕಾಫ್ ಹಾಗೂ ಇನ್ನಿತರ ಮಹಾತ್ಮರುಗಳ ಹೆಸರಿನಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಸಮಾರಂಭವು ಫೆ.21 ರಿಂದ 28ರ ವರೆಗೆ ನಡೆಯಲಿದೆ ಎಂದು ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಸಖಾಫಿ ಪುದಿಯೋಡಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಮ್ಮೆಮಾಡುವಿನಲ್ಲಿ ಎಂಟು ದಿನಗಳ ಕಾಲ ನಡೆಯಲಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಫೆ.21 ರಂದು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಸಖಾಫಿ ಪುದಿಯೋಡಿ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಿದ್ದಾರೆ ಎಂದರು. ಜುಮಾ ನಮಾಝಿನ ಬಳಿಕ ಮಖಾಂ ಝಿಯಾರತ್ ಮತ್ತು ಸಮೂಹ ವಿವಾಹ ನಡೆಯಲಿದ್ದು, ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಅಧ್ಯಕ್ಷ ಸಯ್ಯಿದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಙಳ್ ನೇತೃತ್ವ ವಹಿಸಲಿದ್ದಾರೆ. ಕಾರ್ಯಕ್ರಮನ್ನು ಕೊಡಗು ನಾಇಬ್ ಖಾಝಿ ಅಬ್ದುಲ್ಲ ಫೈಝಿ ಎಡಪ್ಪಲ ಉದ್ಘಾಟಿಸಲಿದ್ದು, ಟಿಐಎಂಜೆ ಕೋಶಾಧಿಕಾರಿ ಆಲಿ…

Read More

ಮಡಿಕೇರಿ ಫೆ.20 NEWS DESK : ಬೆಂಗಳೂರಿನಲ್ಲಿ ಫೆ.22ರಿಂದ ನಡೆಯಲಿರುವ ಖೇಲೋ ಇಂಡಿಯಾ ಅಂಡರ್ 15 ಮಹಿಳಾ ಫುಟ್ಬಾಲ್ ತಂಡದ ಯುನೈಟೆಡ್ ಎಫ್.ಸಿ ಕೊಡಗು ತಂಡ ಪ್ರಕಟಿಸಲಾಗಿದೆ. ಕೊಡಗು ತಂಡದಲ್ಲಿ ಪಿ.ಪಿ ಕುಶಿ ತಂಗಮ್ಮ, ಸಿ.ಕೆ ನಮ್ರಿತ್ ಪೂವಮ್ಮ, ಪಿ.ಆರ್ ವಿದ್ಯಾ, ಎಂ.ಎಸ್ ಶರ್ವಾ ಸೀತಮ್ಮ, ಡಿ.ಜೆ ವಂಶಿಕ, ಆರ್.ಧನ್ಯ, ಕೆ.ಪಿ ಬ್ರಹ್ಮ್ಯ, ಕೆ.ಎನ್.ವಿದಿತಾ, ಕೆ.ಇ.ಸೋನಾಶ್ರೀ , ಬಿ.ಆರ್.ನೀಕ್ಷಾ, ಎ.ಎಸ್.ಶೃತಿ, ಎಂ.ಎಸ್.ಸೋನಿ, ಯು.ಜನ್ಯಶ್ರೀ, ಕೆ.ಪಿ.ಪೂಜಿತಾ ಹಾಗೂ ವಿ.ಎಸ್ ಸುಪ್ರಿಯಾ ಯುನೈಟೆಡ್ ಎಫ್‌ಸಿ ಕೊಡಗು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇತ್ತೀಚಿಗೆ ಕೊಡಗು ಯುನೈಟೆಡ್ ಎಫ್‌ಸಿ ತಂಡಕ್ಕೆ ಆಯ್ಕೆ ಪ್ರಕ್ರಿಯೆ ಅಮ್ಮತ್ತಿಯಲ್ಲಿ ನಡೆದಿತ್ತು. ಖೇಲೋ ಇಂಡಿಯಾ ಅಂಡರ್ 15 ಮಹಿಳಾ ಫುಟ್ಬಾಲ್ ಪಂದ್ಯಾವಳಿಯಲ್ಲಿ ಒಟ್ಟು ಆರು ತಂಡಗಳು ಭಾಗವಹಿಸುತ್ತಿದ್ದು, ಪ್ರತೀ ತಂಡಗಳು ಲೀಗ್ ಹಂತದಲ್ಲಿ ಎಲ್ಲಾ ತಂಡಗಳ ವಿರುದ್ಧ ಎರಡೆರಡು ಪಂದ್ಯಗಳನ್ನು ಆಡಬೇಕಾಗಿದೆ. ಯುನೈಟೆಡ್ ಎಫ್.ಸಿ ಕೊಡಗು ತಂಡವು ಲೀಗ್ ಮಾದರಿಯಲ್ಲಿ ಹತ್ತು ಪಂದ್ಯಗಳನ್ನು ಆಡಲಿದೆ‌. ತಂಡದ ವ್ಯವಸ್ಥಾಪಕರಾಗಿ ಹೆಚ್.ಹೆಚ್ ಹರೀಶ್,ತರಬೇತುದಾರರಾಗಿ ಜೆ.ಮಾನಸಾ,ಎಸ್ ಅರವಿಂದ್…

Read More

ಬೆಂಗಳೂರು ಫೆ.20 NEWS DESK : ಏಕಾಏಕಿ 2 ಅಂತಸ್ತಿನ ಕಟ್ಟಡ ಕುಸಿದ ಘಟನೆ ಬೆಂಗಳೂರಿನ ಜೀವನ್ ಭೀಮಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ತಿಪ್ಪಸಂದ್ರದಲ್ಲಿ ನಡೆದಿದೆ. ಕಟ್ಟಡದ ಪಕ್ಕದಲ್ಲಿ ಮತ್ತೊಂದು ಕಟ್ಟಡಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಮನೆ ವಾಲುತ್ತಿರುವ ಕುರಿತು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಕರೆ ಬಂದಿದ್ದು, ಕೂಡಲೇ ಎರಡು ಅಗ್ನಿಶಾಮಕ ದಳದ ವಾಹನಗಳು ಎಸ್‌ಡಿಆರ್‌ಎಫ್ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿ, ಮನೆಯಲ್ಲಿದ್ದವರನ್ನು ಹೊರಗೆ ಕಳುಹಿಸಿದ ಪರಿಣಾಮ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.

Read More

ಮಡಿಕೇರಿ ಫೆ.20 NEWS DESK : ವಿವಿಧ ಕ್ಷೇತ್ರದಲ್ಲಿ ಆಯ್ಕೆಯಾದ ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಆಡಳಿತ ಮಂಡಳಿಯ ಪದಾಧಿಕಾರಿಗಳನ್ನು ಶಾಲಾ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಸೌಹಾರ್ಧ ಸಹಕಾರ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಲಾ ಗೌರವ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ನಿರ್ದೇಶಕರಾಗಿ ಆಯ್ಕೆಯಾದ ಶಾಲಾ ಆಡಳಿತ ಅಧಿಕಾರಿ ಮುಕ್ಕಾಟಿರ ಪೊನ್ನಮ್ಮ ಹಾಗೂ ಶಾಲಾ ಆಡಳಿತ ಮಂಡಳಿಯ ನೂತನ ನಿರ್ದೇಶಕಿಯಾಗಿ ಆಯ್ಕೆಯಾದ ತಡಿಯಂಗಡ ಪ್ರೇಮಾ ತಿಮ್ಮಯ್ಯ ಅವರನ್ನು ಶಾಲಾ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಕೇಕಡ ವಿಜುದೇವಯ್ಯ, ಸಂಚಾಲಕಿ ಕನ್ನಂಡ ಕವಿತ ಬೊಳ್ಳಪ್ಪ, ನಿರ್ದೇಶಕರಾದ ಕನ್ನಂಡ ಸಂಪತ್ ಕುಮಾರ್, ನಂದಿನೆರವಂಡ ದಿನೇಶ್, ಬೊಪ್ಪಂಡ ಸರಳಾ ಕರುಂಬಯ್ಯ, ಮಂಡಿರ ಸದಾಮುದ್ದಪ್ಪ, ಪುತ್ತರಿರ ಕರುಣ್ ಕಾಳಯ್ಯ, ಪ್ರಾಂಶುಪಾಲರಾದ ಬಾಳೆಯಡ ಸವಿತ ಪೂವಯ್ಯ ಹಾಜರಿದ್ದರು.

Read More

ಕುಶಾಲನಗರ, ಫೆ.20 NEWS DESK : ಖುದ್ದು ಮುಖ್ಯಮಂತ್ರಿಗಳು ಭೇಟಿ ನೀಡಿದರೂ ಇದುವರೆಗೆ ತಮಗೆ ಇನ್ನೂ ಶಾಶ್ವತ ಪರಿಹಾರ ದೊರಕಿಲ್ಲ ಎಂದು ಮಳೆಗಾಲದಲ್ಲಿ ಮನೆ ಹಾನಿಗೊಳಗಾದ ಸಂತ್ರಸ್ತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕುಶಾಲನಗರದ ಮಾದಾಪಟ್ಟಣ ಗ್ರಾಮದಲ್ಲಿ ಸಂತ್ರಸ್ತರಾದ ಬಿ.ಎಸ್.ಬಸವರಾಜು ಕುಟುಂಬ ಸದಸ್ಯರು ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಅತಿಯಾದ ಮಳೆಯಿಂದ ಕಳೆದ ಜೂನ್ ತಿಂಗಳಲ್ಲಿ ನಮ್ಮ ಮನೆ ಸಂಪೂರ್ಣ ಕುಸಿದು ಹೋಗಿತ್ತು. ಆಗಸ್ಟ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕರು, ಅಧಿಕಾರಿಗಳು ಬಂದು ಮನೆ ಪರಿಶೀಲನೆ ಮಾಡಿ ಸಾಂತ್ವನ ಹೇಳಿದರು. ನೀವು ಚಿಂತಿಸಬೇಡಿ ನಿಮಗೆ ವಾಸಿಸಲು ಯೋಗ್ಯವಾದ ಹೊಸ ಮನೆ ನಿರ್ಮಿಸಿ‌ಕೊಡುತ್ತೇವೆ ಎಂದು ಭರವಸೆ ನೀಡಿದರು. ಆದರೆ ಆರೇಳು ತಿಂಗಳು ಕಳೆದರೂ ಮನೆ ನಿರ್ಮಾಣಗೊಂಡಿಲ್ಲ. ಇದುವರೆಗೆ ಕೇವಲ ರೂ.1.20 ಲಕ್ಷ ಅನುದಾನ ನೀಡಲಾಗಿದೆ. ಈ ಹಣದೊಂದಿಗೆ ಸಾಲ ಮಾಡಿ ರೂ.1.60 ಲಕ್ಷ ವೆಚ್ಚದಲ್ಲಿ ಫೌಂಡೇಷನ್ ನಿರ್ಮಾಣ ಮಾಡಿದ್ದೇವೆ. ಆದರೂ ಮನೆ ನಿರ್ಮಾಣಕ್ಕೆ ಅನಾನುಕೂಲವಾಗಿದೆ. ಈ ಬಗ್ಗೆ ಶಾಸಕರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಿ…

Read More

ಕುಶಾಲನಗರ ಫೆ.20 NEWS DESK :  ರಾಜ್ಯ ಸರ್ಕಾರ ನೂತನ ವಿಶ್ವವಿದ್ಯಾಲಯಗಳನ್ನು ರದ್ದುಗೊಳಿಸುವ ಚಿಂತನೆ ವಿರೋಧಿಸಿ ಕುಶಾಲನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯಿತು. ಕುಶಾಲನಗರ ಪಟ್ಟಣದ ಗಣಪತಿ ದೇವಾಲಯ ಮುಂಭಾಗ ಸೇರಿದ ನೂರಾರು ವಿದ್ಯಾರ್ಥಿಗಳು ಸರ್ಕಾರದ ನೀತಿಯನ್ನು ಖಂಡಿಸಿ ಘೋಷಣೆ ಕೂಗಿದರು. ಜಿಲ್ಲೆಯಲ್ಲಿ ಹಿಂದುಳಿದ ಮತ್ತು ಬಡ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡುವ ಸಂಬಂಧ ಕೊಡಗು ವಿಶ್ವವಿದ್ಯಾಲಯ ಸ್ಥಾಪಿಸಲಾಗಿದ್ದು, ಇದೀಗ ಅದನ್ನು ಮುಚ್ಚುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಪ್ರಮುಖರಾದ ಚಂದ್ರಶೇಖರ್ ಮಾತನಾಡಿ ಸರ್ಕಾರ ತನ್ನ ಗ್ಯಾರಂಟಿಗಳಿಗೆ ಪ್ರತಿವರ್ಷ 50,000 ಕೋಟಿ ರೂಗಳನ್ನು ವೆಚ್ಚ ಮಾಡುತ್ತಿದೆ ಅದರಲ್ಲಿ ಶೇಕಡ ಒಂದರಷ್ಟು ಪ್ರಮಾಣದ ಹಣವನ್ನು ರಾಜ್ಯದ ಶಿಕ್ಷಣ ರಂಗಕ್ಕೆ ನೀಡಿದರೆ ಎಲ್ಲಾ ವಿಶ್ವವಿದ್ಯಾಲಯಗಳ ಸ್ಥಿತಿಗತಿ ಸುಧಾರಿಸುತ್ತದೆ ಎಂದರು. ಹಿಂದಿನ ಸರ್ಕಾರ ಜಿಲ್ಲೆಗೊಂದು ವಿಶ್ವವಿದ್ಯಾಲಯ ಪ್ರಾರಂಭಿಸಿದರೆ ಈಗ ಪ್ರಸಕ್ತ ಸರ್ಕಾರ ಅದನ್ನು ಮುಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು. ಸರ್ಕಾರ ವಿಶ್ವವಿದ್ಯಾಲಯಗಳನ್ನು…

Read More

ಬೆಳಗಾವಿ ಫೆ.20 NEWS DESK : ಬೆಳಗಾವಿ-ಬೈಲಹೊಂಗಲ ಹೆದ್ದಾರಿಯ ಭರತೇಶ್ ಶಾಲೆಯ ಬಳಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಅದೃಷ್ಟವಶಾತ್, ಪೊಲೀಸರು ಮತ್ತು ಅಗ್ನಿಶಾಮಕ ದಳದವರು ತಕ್ಷಣ ಕಾರ್ಯಪ್ರವೃತ್ತರಾದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಬೆಳಗಾವಿ ತಾಲ್ಲೂಕಿನ ದೇಸೂರಿನಿಂದ ಬೈಲಹೊಂಗಲದ ಕಡೆ ಹೊರಟಿದ್ದ ಟ್ಯಾಂಕರ್‌ (ಕೆಎ-23 ಎ 8171) ವೇಗವಾಗಿ ಸಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದು, ಹೆದ್ದಾರಿಯ ಮತ್ತೊಂದು ಬದಿಯಲ್ಲಿ ಬಿದ್ದಿದೆ. ಘಟನೆಯಲ್ಲಿ ಸಾವಿರಾರು ಲೀಟರ್ ಪೆಟ್ರೋಲ್ ಮಣ್ಣು ಪಾಲಾಗಿದೆ.

Read More

ನಾಪೋಕ್ಲು ಫೆ.20 NEWS DESK : ಹೊದ್ದೂರು ಗ್ರಾಮದ ಶ್ರೀ ಶಾಸ್ತ ಈಶ್ವರ ದೇವಾಲಯದ ನಾಲ್ಕನೇ ವಾರ್ಷಿಕೋತ್ಸವ ಹಾಗೂ ವಿಷ್ಣುಮೂರ್ತಿ ಕೋಲ ಶ್ರದ್ಧಾಭಕ್ತಿಯಿಂದ ನೆರವೇರಿತು. ವಾರ್ಷಿಕೋತ್ಸವದ ಅಂಗವಾಗಿ ಶಾಸ್ತ ಈಶ್ವರ ದೇವರ ಬಲಿ ಗಣಪತಿ ಹೋಮ, ಅಲಂಕಾರ ಪೂಜೆ, ಬೇಟೆ ಅಯ್ಯಪ್ಪ ಸನ್ನಿಧಿಗೆ ಅಭಿಷೇಕ ಪೂಜೆ, ವಿಷ್ಣುಮೂರ್ತಿ ದೈವ ನೆಲೆಗೆ ಅಭಿಷೇಕ ಪೂಜೆ ಜರುಗಿತು. ಮಧ್ಯಾಹ್ನ ಶ್ರೀ ಶಾಸ್ತ ಈಶ್ವರ ದೇವರ ನೆನಪು ಬಲಿ ಬಳಿಕ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಿತು. ಸಂಜೆ ಶ್ರೀ ಶಾಸ್ತ ಈಶ್ವರ ದೇವರ ಆವೃತ ಸ್ನಾನ ಜರಗಿತು. ವಿವಿಧ ನೃತ್ಯ ಸಂಪ್ರೊಕ್ಷಣೆಯೊಂದಿಗೆ ದೈವಿಕ ವಿಧಿ ವಿಧಾನಗಳು ಜರುಗಿದವು. ಬಳಿಕ ವಿಷ್ಣುಮೂರ್ತಿ ದೇವರ ತಾಯತ ತೆರೆ ಹಾಗೂ ಮೇಲೇರಿಗೆ ಅಗ್ನಿ ಸ್ಪರ್ಶ ನೆರವೇರಿತು. ಪ್ರಧಾನ ಅರ್ಚಕ ಜಯರಾಮ ತಂತ್ರಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿಕೊಟ್ಟರು. ಈ ಸಂದರ್ಭ ಗ್ರಾಮದ ದೇವ ತಕ್ಕ ನೆರವಂಡ ಸಂಜಯ್ ಪೂಣಚ್ಚ, ದೇವಾಲಯ ಸಮಿತಿ ಅಧ್ಯಕ್ಷ ಕೂಡಂಡ…

Read More

ಮಡಿಕೇರಿ ಫೆ.19 NEWS DESK : ಕರ್ನಾಟಕ ಸರ್ಕಾರದ ಸಚಿವರ ದರ್ಜೆಯ ಸ್ಥಾನಮಾನ ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ಫೆಬ್ರವರಿ, 20 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಧ್ಯಕ್ಷರು ಫೆಬ್ರವರಿ, 20 ರಂದು ಬೆಳಗ್ಗೆ 10 ಗಂಟೆಗೆ ನಗರದ ಜೂನಿಯರ್ ಕಾಲೇಜು ಆವರಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತ ಆಶ್ರಯದಲ್ಲಿ ನಡೆಯುವ ಪಂಜೆ ಮಂಗೇಶರಾಯರ 150 ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಬಿ.ರವಿಕುಮಾರ್ ತಿಳಿಸಿದ್ದಾರೆ.

Read More

ಮಡಿಕೇರಿ ಫೆ.19 NEWS DESK : ನೇರುಗಳಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಯಲಕನೂರು ಹೊಸಳ್ಳಿ ಗ್ರಾಮದಲ್ಲಿ ಅನುಷ್ಠಾನಗೊಳಿಸಿದ್ದ ಕೃಷಿ ಇಲಾಖೆಯ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಜಲಾನಯನ ಅಭಿವೃದ್ಧಿ ಘಟಕ 2 ಯೋಜನೆಯಡಿ ಜಲಾನಯನ ಯಾತ್ರೆಗೆ ನೇರುಗಳಲೆ ಗ್ರಾಮ ಪಂಚಾಯತಿ ಅಧ್ಯಕ್ಷ ಹೆಚ್.ಕೆ.ವಿನೋದ್ ಕುಮಾರ್, ಜಂಟಿ ಕೃಷಿ ನಿರ್ದೇಶಕ ಡಾ.ಚಂದ್ರಶೇಖರ್, ಉಪ ಕೃಷಿ ನಿರ್ದೇಶಕರು ಡಾ.ಸೋಮಶೇಖರ್ ಚಾಲನೆ ನೀಡಿದರು. ನಂತರ ಮಣ್ಣು ಮತ್ತು ನೀರಿನ ಮಹತ್ವದ ಬಗ್ಗೆ ಕಲಾವಿದ ಈ.ರಾಜು ಮತ್ತು ತಂಡದಿಂದ ಬೀದಿನಾಟಕ ಮೂಲಕ ರೈತರಲ್ಲಿ ಸ್ವ ಸಹಾಯ ಸಂಘದ ಸದಸ್ಯರಿಗೆ ಅರಿವು ಮೂಡಿಸಲಾಯಿತು. ಮಹಿಳೆಯರಿಂದ ಕಳಸಹೊತ್ತು ಮುಖ್ಯ ಬೀದಿಯಲ್ಲಿ ಯಾತ್ರೆ ಸಾಗಿ ಸಭೆ ಕಾರ್ಯಕ್ರಮ ನಡೆಯಿತು. ಪ್ರಾಸ್ತಾವಿಕ ಮಾತನಾಡಿದ ಕೃಷಿ ಇಲಾಖೆಯ ಉಪ ನಿರ್ದೇಶಕ ಡಾ.ಸೋಮಸುಂದರ್ ಜಲಾನಯನದ ಮಹತ್ವ ಮಣ್ಣು ನೀರು ಅರಣ್ಯ ಗಿಡಗಳ ರಕ್ಷಣೆ ಬಗ್ಗೆ ಸಭೆಯಲ್ಲಿ ತಿಳಿಸಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಡಾ.ಚಂದ್ರಶೇಖರ್ ಜಲಾನಯನ ಇಲಾಖೆ ಕಡೆಯಿಂದ ನೀಡಲಾದ ಸೌಲಭ್ಯ ಬಗ್ಗೆ ಮಾಹಿತಿ ನೀಡಿದರು.…

Read More