ಲೇಖಕ: admin

ಸುಂಟಿಕೊಪ್ಪ NEWS DESK ಮಾ.12 : ಕಾರೊಂದು ಡಿಕ್ಕಿಯಾದ ಪರಿಣಾಮ ಇಬ್ಬರು ವ್ಯಕ್ತಿಗಳು ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪ 7ನೇ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಡೆದಿದೆ. ಹೆದ್ದಾರಿ ಬದಿಯಲ್ಲಿ ನಿಂತಿದ್ದ ನಿಜಾಮುದ್ದೀನ್ ಹಾಗೂ ಹರ್ಬಜ್ ಅವರಿಗೆ ಕಾರು ಡಿಕ್ಕಿಯಾಗಿದೆ. ಇದರ ಪರಿಣಾಮ ನಿಜಾಮುದ್ದೀನ್ ಅವರ ಕಾಲು ಮುರಿತಗೊಂಡಿದ್ದು, ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಸುಂಟಿಕೊಪ್ಪ NEWS DESK ಮಾ.12 : ಕೆದಕಲ್ ಗ್ರಾಮದ ಶ್ರೀಭದ್ರಕಾಳೇಶ್ವರಿ ದೇವಾಲಯದ 25ನೇ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು. ದೇವಾಲಯದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಭಟ್ ಅವರ ನೇತೃತ್ವದಲ್ಲಿ ಗಣಪತಿ ಹೋಮದೊಂದಿಗೆ ಧಾರ್ಮಿಕ ವಿಧಿವಿಧಾನಗಳಿಗೆ ಚಾಲನೆ ನೀಡಲಾಯಿತು. ಕುಂಭಾಭಿಷೇಕ, ಕಳಶ ಪೂಜೆ, ಹೂವಿನ ಪೂಜೆ, ಕುಂಕುಮಾರ್ಚನೆ ನಡೆಯಿತು. ವಿಶೇಷ ಪೂಜೆ, ಆರಾಧನೆ, ಮಹಾಪೂಜೆ, ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗವಾಯಿತು. ಭಕ್ತರಿಗೆ ದೇವಾಲಯದ ವತಿಯಿಂದ ಅನ್ನಸಂತರ್ಪಣೆ ಏರ್ಪಾಡಿಸಲಾಗಿತ್ತು. ದೇವಾಲಯ ಸಮಿತಿಯ ಅಧ್ಯಕ್ಷ ಸಿ.ಎ.ಕರುಂಬಯ್ಯ, ಕಾರ್ಯದರ್ಶಿ ಕೆ.ಎಂ.ಸತೀಶ್, ತಕ್ಕ ಮುಖ್ಯಸ್ಥ ಪುಲ್ಲೇರ ತಿಮ್ಮಯ್ಯ, ಪುಲ್ಲೇರ, ಕಾಳಪ್ಪ, ಪಿ.ಬಿ.ವಸಂತ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು. ಕೆದಕಲ್, ಬೋಯಿಕೇರಿ, ಹಾಲೇರಿ, ಕಾಂಡನಕೊಲ್ಲಿ, ಸುಂಟಿಕೊಪ್ಪ, ಬಾಳೆಕಾಡು, ಮಡಿಕೇರಿ, ಹೊರೂರು ಸೇರಿದಂತೆ ಹೊರ ಜಿಲ್ಲೆಗಳ ನೂರಾರು ಭಕ್ತರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಮಾ.12 NEWS DESK : ಜಿಲ್ಲೆಯ ಪ್ರವಾಸಿ ಸ್ಥಳ, ಹೋಂಸ್ಟೇ ಹಾಗೂ ಹೋಟೆಲ್‍ಗಳು ಸೇರಿದಂತೆ ಎಲ್ಲೆಡೆ ಪ್ರವಾಸಿಗರ ಸುರಕ್ಷತೆ ಮತ್ತು ರಕ್ಷಣೆಗೆ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇದುವರೆಗೆ ನೋಂದಣಿ ಆಗದಿರುವ ಹೋಂಸ್ಟೇಗಳು ಕಡ್ಡಾಯವಾಗಿ ನೋಂದಣಿ ಆಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆ ನಿರ್ವಹಿಸುವ ಕುರಿತು ಜಿಲ್ಲೆಯ ಹೋಟೆಲ್, ರೆಸಾರ್ಟ್, ಹೋಂ-ಸ್ಟೇ ಹಾಗೂ ಟ್ರಾವೆಲ್ಸ್ ಏಜೆನ್ಸಿ ಸಂಸ್ಥೆಯ ಪ್ರತಿನಿಧಿಗಳ ಜತೆ ಇಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸ್ತುತ ಹೋಂ-ಸ್ಟೇ ನೋಂದಣಿ ಪ್ರಕ್ರಿಯೆಯು ಅತ್ಯಂತ ಸರಳೀಕರಣವಾಗಿದ್ದು, ಕಡಿಮೆ ಅವಧಿಯಲ್ಲಿ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿ ಪ್ರಮಾಣ ಪತ್ರ ನೀಡಲಾಗುತ್ತದೆ. ಆ ದಿಸೆಯಲ್ಲಿ ಪ್ರವಾಸೋದ್ಯಮ ಇಲಾಖೆಯಲ್ಲಿ ಜಿಲ್ಲೆಯ ಎಲ್ಲಾ ಹೋಂ-ಸ್ಟೇಗಳು ಕಡ್ಡಾಯವಾಗಿ ಹೆಸರು ನೋಂದಾಯಿಸುವಂತೆ ಜಿಲ್ಲಾಧಿಕಾರಿ ಕೋರಿದರು. ಪ್ರವಾಸಿ ಸ್ಥಳಗಳಲ್ಲಿ, ಹೋಂಸ್ಟೇ, ಹೋಟೆಲ್‍ಗಳು ಸೇರಿದಂತೆ ಎಲ್ಲೆಡೆ ಸಿಸಿಟಿವಿ ಅಳವಡಿಸುವುದು, ಹೋಂಗಾರ್ಡ್‍ಗಳ ನಿಯೋಜನೆ, ರಾತ್ರಿ…

Read More

ಪೊನ್ನಂಪೇಟೆ ಮಾ.12 NEWS DESK : ಪಠ್ಯೇತರ ಚಟುವಟಿಕೆಗಳ ಭಾಗವಾಗಿ ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಎಂ.ಕಾಂ. ವಿಭಾಗದ ವಿದ್ಯಾರ್ಥಿಗಳು ವಿರಾಜಪೇಟೆ ಸಮೀಪದ ಹೆಗ್ಗಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ್ದರು. ಸಂತ ಅನ್ನಮ್ಮ ಪದವಿ ಕಾಲೇಜಿನ ಎಂ.ಕಾಂ.ವಿಭಾಗದ ಉಪನ್ಯಾಸಕರೊಂದಿಗೆ ಶಾಲೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಪ್ರಾಥಮಿಕ ಹಂತದ ವಿದ್ಯಾರ್ಥಿಗಳೊಂದಿಗೆ ವಿವಿಧ ಚಟುವಟಿಕೆಗಳನ್ನು ನಡೆಸಿದರು. ಇದಕ್ಕೂ ಮೊದಲು ನಡೆದ ಸಭಾ ಕಾರ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಲ್ತೋಡು ಕ್ಲಸ್ಟರಿನ ಸಂಪನ್ಮೂಲ ವ್ಯಕ್ತಿ ವೆಂಕಟೇಶ್  ಉದ್ಘಾಟಿಸಿದರು. ಎಂ.ಕಾಂ. ವಿದ್ಯಾರ್ಥಿಗಳ ಭೇಟಿಯ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಆಟೋಟಗಳ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಅಲ್ಲದೆ, ಶಾಲೆಯ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಫಿಲ್ಟರ್, ನೋಟ್ ಬುಕ್, ಜಾಮಿಟ್ರಿ ಬಾಕ್ಸ್, ತಟ್ಟೆ ಮತ್ತು ಲೋಟಗಳನ್ನು ಸೇರಿದಂತೆ ಕಲಿಕಾ ಸಾಮಾಗ್ರಿಗಳನ್ನು ಇದೇ ಸಂದರ್ಭದಲ್ಲಿ ಉಚಿತವಾಗಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಂತ ಅನ್ನಮ್ಮ ಕಾಲೇಜಿನ ಉಪನ್ಯಾಸಕ ಪೂಜ, ದೃಶ್ಯ ಅವರನ್ನು ಶಾಲೆಯ ಪರವಾಗಿ…

Read More

ಮಡಿಕೇರಿ NEWS DESK ಮಾ.12 : ಕೊಡಗು ಜಿಲ್ಲೆಯಲ್ಲೇ ಮಾದರಿ ರಾಮೋತ್ಸವವನ್ನು ಆಚರಿಸಲು ಮಡಿಕೇರಿಯ ಶ್ರೀ ಕೋದಂಡ ರಾಮೋತ್ಸವ ಸಮಿತಿ ತಯಾರಿ ನಡೆಸಿದೆ. ಏ.5 ಮತ್ತು 6ರಂದು ಅದ್ಧೂರಿಯಾಗಿ ರಾಮೋತ್ಸವ ನಡೆಯಲಿದ್ದು, ಮೆರವಣಿಗೆ ಸಮಿತಿಯ ಅಧ್ಯಕ್ಷರಾಗಿ ಪರಮೇಶ್, ಮಲ್ಲಿಕಾರ್ಜುನ ನಗರ ಆಯ್ಕೆಯಾಗಿದ್ದಾರೆ.  ಉಪಾಧ್ಯಕ್ಷರಾಗಿ ಪ್ರಜ್ಞ ಜಿ.ಆರ್, ಪ್ರಶಾಂತ್, ಅಭಿಷೇಕ್, ಪ್ರಧಾನ ಕಾರ್ಯದರ್ಶಿಯಾಗಿ ಗೋಪಿನಾಥ್, ಕಾರ್ಯದರ್ಶಿಯಾಗಿ ಚಂದ್ರಶೇಖರ್, ಖಜಾಂಚಿಯಾಗಿ ಕುಶಾಲ್, ಗೌರವಾಧ್ಯಕ್ಷರಾಗಿ ಅರುಣ್ ಶೆಟ್ಟಿ, ಜಯಂತಿ ಆರ್.ಶೆಟ್ಟಿ, ಮಿಥುನ್ ಶೆಟ್ಟಿ, ಸಹ ಕಾರ್ಯದರ್ಶಿಗಳಾಗಿ ಮದನ್, ಗಣೇಶ್, ಶರತ್, ಸಂಪತ್, ಸಂಚಾಲಕರಾಗಿ ಕುಮಾರ್ ಮೇಕೇರಿ, ಸಂಘಟನಾ ಕಾರ್ಯದರ್ಶಿ ಚರಣ್, ಸದಸ್ಯರಾಗಿ ಸತೀಶ್, ಸುರೇಶ್ ಟಿ.ಆರ್, ಧನಂಜಯ ಆಚಾರ್ಯ, ಬಾಲಕೃಷ್ಣ, ಕಿಶೋರ್, ರವಿಕಿರಣ್, ಧ್ರುವ, ಚಂದ್ರು, ಅಭಿಷೇಕ್, ಸಲಹೆಗಾರರಾಗಿ ಟ್ರಸ್ಟ್ ನ ಅಧ್ಯಕ್ಷ ಹೆಚ್.ಎನ್.ನಂಜುಂಡ, ತಿಮ್ಮಯ್ಯ, ಜಿ.ರಾಜೇಂದ್ರ, ಹೆಚ್.ಮಂಜುನಾಥ್ ಕಾರ್ಯನಿರ್ವಹಿಸಲಿದ್ದಾರೆ.

Read More

ಮಡಿಕೇರಿ ಮಾ.12 NEWS DESK : ಗೋಣಿಕೊಪ್ಪ-ಪೊನ್ನಂಪೇಟೆ ಮುಖ್ಯ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಅರುವತ್ತೊಕ್ಲು ಕಾಡ್ಲ್ ಅಯ್ಯಪ್ಪ ದೇವರ ವಾರ್ಷಿಕ ಉತ್ಸವವು ಮಾ.15 ಮತ್ತು 16 ರಂದು ನಡೆಯಲಿದೆ ಎಂದು  ಅಭಿವೃದ್ಧಿ ಸಮಿತಿ ಅಧ್ಯಕ್ಷ ಕಾಡ್ಯಮಾಡ ಪ್ರೀತ್ ತಿಳಿಸಿದ್ದಾರೆ.  ಉತ್ಸವಕ್ಕೆ ಫೆ.26 ರಂದು ಸಂಜೆ ಚಾಲನೆ ದೊರೆತಿದ್ದು, ಮಾ.1 ರಿಂದ ಊರಿನಲ್ಲಿ ದೇವರ ವಿವಿಧ ಕಟ್ಟುಪಾಡುಗಳನ್ನು ಆಚರಿಸಲಾಗುತ್ತಿದೆ. ಮಾ.15 ರಂದು ಸಂಜೆ ತಕ್ಕಮುಖ್ಯಸ್ಥರಾದ ಕಾಡ್ಯಮಾಡ ಐನ್ ಮನೆಯಿಂದ ಭಂಡಾರ ತರುವ ಮೂಲಕ ಎರಡು ದಿನಗಳ ಹಬ್ಬಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ವಿವಿಧ ಆಚರಣೆಯೊಂದಿಗೆ 15 ರಂದು ರಾತ್ರಿ ಹಬ್ಬ ನಡೆದು, 16 ರಂದು ಬೆಳಿಗ್ಗೆ 8 ಗಂಟೆಗೆ ಬೆಂಕಿ ಕೊಂಡ ಹಾಯುವ ಕಾರ್ಯಕ್ರಮ ನಡೆಯಲಿದೆ ಎಂದು ತಕ್ಕಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಮಾ.12 NEWS DESK : ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮದೆನಾಡು ಮತ್ತು ಗಾಳಿಬೀಡು ಗ್ರಾ.ಪಂ ಪಂಚಾಯ್ತಿ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ ಲಘು ಭೂ ಕಂಪನವಾಗಿದ್ದು, ಇದರ ತೀವ್ರತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ರಿಕ್ಟರ್ ಮಾಪಕದಲ್ಲಿ ದಾಖಲಾಗಿರುವಂತೆ 1.6 ಕಂಪನಾಂಕವನ್ನು ಹೊಂದಿತ್ತು. ಇಂದು ಬೆಳಗ್ಗೆ 10.49 ಗಂಟೆಗೆ ಮದೆ ಗ್ರಾಮ ಪಂಚಾಯ್ತಿ ಮತ್ತು ಗಾಳಿಬೀಡು ಗ್ರಾಮ ಪಂಚಾಯ್ತಿಗೆ ಒಳಪಟ್ಟ ಮೊಣ್ಣಂಗೇರಿ ಗ್ರಾಮ ವ್ಯಾಪ್ತಿಯಲ್ಲಿ ಭೂ ಕಂಪನದ ಅನುಭವವಾಗಿದೆ. ಲಘು ಭೂಕಂಪನವಾಗಿರುವುದರಿಂದ ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲವೆಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ(ಕೆಎಸ್‍ಎನ್‍ಡಿಎಂಸಿ) ತಿಳಿಸಿದೆ. ಕೆಎಸ್‍ಎನ್‍ಡಿಎಂಸಿ ದಾಖಲಿಸಿರುವ ಭೂ ಕಂಪನದ ಅಂಕಿ ಅಂಶಗಳಂತೆ ಭೂ ಕಂಪನದ ಕೇಂದ್ರವನ್ನು ಮದೆ ಪಂಚಾಯ್ತಿಯ ವಾಯುವ್ಯ ಭಾಗದ 2.4 ಕಿ.ಮೀ. ದೂರ ಮತ್ತು 5 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ. ಇದರ ಪ್ರಭಾವ ಕೇಂದ್ರ ಸ್ಥಾನದಿಂದ ಗರಿಷ್ಠ 15 ರಿಂದ 20 ಕಿ.ಮೀ. ದೂರದವರೆಗೆ ಮಾತ್ರ ಇತ್ತು. ಮದೆನಾಡು, ಮೊಣ್ಣಂಗೇರಿ,…

Read More

ಮಡಿಕೇರಿ ಮಾ.12 NEWS DESK : 2025-26ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೊಡಗು ಜಿಲ್ಲೆಗೆ ನಿರೀಕ್ಷೆಗೂ ಮೀರಿ ಅನುದಾನ ತರುವಲ್ಲಿ ಶಾಸಕದ್ವಯರು ಯಶಸ್ವಿಯಾಗಿದ್ದಾರೆ. ಅನುದಾನ ಹಂಚಿಕೆ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಬಿಜೆಪಿ ಮಂದಿ ಶಾಸಕರನ್ನು ವಿನಾಕಾರಣ ಟೀಕಿಸುವ ಬದಲು ಮುಖಾಮುಖಿ ಚರ್ಚೆಗೆ ಬರಲಿ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ವಕ್ತಾರ ತೆನ್ನಿರ ಮೈನಾ ಸವಾಲು ಹಾಕಿದ್ದಾರೆ.  ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯ ಪಾಲಿಗೆ ಹೆಚ್ಚಿನ ಅನುದಾನ ಲಭ್ಯವಾಗಿದ್ದು, ಇದು ಗೋಲ್ಡನ್ ಬಜೆಟ್ ಎಂದು ಬಣ್ಣಿಸಿದರು. ಹಿಂದಿನ ಸರ್ಕಾರಗಳು ಕೊಡಗು ಜಿಲ್ಲೆಯನ್ನು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ರೀತಿಯಲ್ಲಿ ಬಜೆಟ್ ಸಂದರ್ಭ ಕಡೆಗಣಿಸುತ್ತಿದ್ದವು. ಆದರೆ ಈ ಬಾರಿ ಕಾಂಗ್ರೆಸ್ ಸರ್ಕಾರ ವಿಶೇಷ ಕಾಳಜಿ ವಹಿಸಿ ಕೊಡಗು ಜಿಲ್ಲೆಗೆ ಬಂಪರ್ ಕೊಡುಗೆ ನೀಡಿದೆ. ಶಿಕ್ಷಣ, ಆರೋಗ್ಯ ಮತ್ತು ಮೂಲಭೂತ ಸೌಕರ್ಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಆದ್ಯತೆ ನೀಡಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಶಾಸಕದ್ವಯರ ಪರಿಶ್ರಮ, ಕ್ರಿಯಾಶೀಲತೆ ಹಾಗೂ…

Read More

ವಿರಾಜಪೇಟೆ ಮಾ.12 NEWS DESK : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕೊಡವ ಕೂಟಾಳಿಯಡ ಕೂಟದ ವತಿಯಿಂದ ಹಿರಿಯ ಜಾನಪದ ಕಲಾವಿದೆ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಅವರನ್ನು ಸನ್ಮಾನಿಸಲಾಯಿತು. ಜೂನಿಯರ್ ಕಾಲೇಜಿನ ನಿವೃತ್ತ ಉಪನ್ಯಾಸಕಿಯಾಗಿ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಬಾಲ್ಯದಿಂದಲೂ ಉಮ್ಮತ್ತಾಟ್, ಕತ್ತಿಯಾಟ್, ಬೊಳಕಾಟ್, ಕೊಡವ ಹಾಡುಗಳನ್ನು ಕಲಿತು, ಇತರರಿಗೆ ಕಲಿಸುತ್ತಾ ಹೊರ ಜಿಲ್ಲೆ, ಹೊರ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರದರ್ಶನ ನೀಡಿಸುತ್ತಾ ಬಂದಿರುವುದರ ಜೊತೆಗೆ ಕೊಡವ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಇವರ ಈ ಸಾಧನೆಯನ್ನು ಗುರುತಿಸಿ ಕೊಡವ ಕೂಟಾಳಿಯಡ ಕೂಟ ಸಂಘಟನೆ ಅವರ ಮನೆ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಿತು. ಕೂಟದ ಅಧ್ಯಕ್ಷ ಚೆಟ್ಟೋಳಿರ ಶರತ್ ಸೋಮಣ್ಣ, ಕಾರ್ಯದರ್ಶಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಸಂಸ್ಥಾಪಕಿ ಚಿಮ್ಮಚ್ಚಿರ ಪವಿತ ರಜನ್, ಖಜಾಂಚಿ ಬೊಜ್ಜಂಗಡ ಭವ್ಯ ದೇವಯ್ಯ ಮತ್ತು ಸದಸ್ಯೆ ಇಟ್ಟಿರ ಭವ್ಯ ಈಶ್ವರ್ ಪಾಲ್ಗೊಂಡಿದ್ದರು.

Read More

ಮಡಿಕೇರಿ ಮಾ.12 NEWS DESK :  ನಗರದ  ಜನನಿ ಮಹಿಳಾ ಮಂಡಳಿಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ರಾಘವೇಂದ್ರ ದೇವಾಲಯದ ಬಳಿಯಿರುವ ಮಹಿಳಾ ಮಂಡಳಿಯ ಸಭಾಂಗಣದಲ್ಲಿ ಮಹಿಳಾ ಮಂಡಳಿಯ ನಿರ್ದೇಶಕರಾದ ಪ್ರೇಮಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹಿಳಾ ದಿನಾಚರಣೆ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷರಾದ ರಾಣಿ ಅರುಣ್, ಖಜಾಂಚಿ ಜಯ ಮತ್ತು  ಸದಸ್ಯರು ಹಾಜರಿದ್ದರು. ಪ್ರಧಾನ ಕಾರ್ಯದರ್ಶಿ ತಾಯಿರಾ ನಿರೂಪಿಸಿದರು. ಸಾಜಿದ ಸ್ವಾಗತಿಸಿದರು. ರೀಟಾ ಪೂಣಚ್ಚ ವಂದಿಸಿದರು.  ಕಾರ್ಯಕ್ರಮದಲ್ಲಿ ಮಂಡಳಿಯ ಸದಸ್ಯರು ಸಿಹಿ ಹಂಚಿ ಸಂಭ್ರಮಿಸಿದರು.

Read More