ಮಡಿಕೇರಿ ಮಾ.12 NEWS DESK : ಶ್ರೀರಾಮಚಂದ್ರನಿಗೆ ಮೇಲು ಕೀಳು, ಜಾತಿ ಮತ ಭೇದವಿಲ್ಲ. ರಾಮನ ಈ ಆದರ್ಶವನ್ನು ಮೂಲವಾಗಿರಿಸಿಕೊಂಡು ಸರ್ವ ಸಮುದಾಯದ ಮಂದಿ ಒಗ್ಗೂಡಿ ಶ್ರೀರಾಮ ನವಮಿಯಂದು ಮಡಿಕೇರಿಯ ಮಲ್ಲಿಕಾರ್ಜುನ ನಗರ ಬಡಾವಣೆಯ ಶ್ರೀಕೋದಂಡ ರಾಮ ದೇವಾಲಯದಲ್ಲಿ ಶ್ರದ್ಧಾಭಕ್ತಿ ಮತ್ತು ವಿಜೃಂಭಣೆಯ ರಾಮೋತ್ಸವವನ್ನು ಆಚರಿಸಲು ಸಿದ್ಧತೆ ನಡೆದಿದೆ. ಏ.5 ಮತ್ತು 6ರಂದು ಅದ್ಧೂರಿಯಾಗಿ ಕೊಡಗು ಜಿಲ್ಲೆಯಲ್ಲೇ ಮಾದರಿ ರಾಮೋತ್ಸವವನ್ನು ಆಚರಿಸಲು ತಯಾರಿ ನಡೆಸಿರುವ ಶ್ರೀ ಕೋದಂಡ ರಾಮೋತ್ಸವ ಸಮಿತಿಯ ಪ್ರಮುಖರು ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮಗಳ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಶ್ರೀ ಕೋದಂಡ ರಾಮೋತ್ಸವ ಸಮಿತಿಯ ಅಧ್ಯಕ್ಷ ಕೆ.ಎಂ.ಗಣೇಶ್ ಮಾತನಾಡಿ ಶ್ರೀರಾಮ ಮೆಟ್ಟಿದ ಈ ಮಣ್ಣಿನಲ್ಲಿ ಸರ್ವರೂ ಒಗ್ಗಟ್ಟಿನಿಂದ ಜೀವನ ಸಾಗಿಸಬೇಕಾಗಿದೆ. ಸರ್ವ ಜನಾಂಗಗಳ ಶಾಂತಿಯ ತೋಟದ ಹೂವುಗಳು ಶ್ರೀರಾಮನಿಗೆ ಅರ್ಪಣೆಯಾಗಬೇಕಾಗಿದೆ. ಸಮುದಾಯ ಸಮುದಾಯಗಳ ನಡುವಿನ ಭಿನ್ನಾಭಿಪ್ರಾಯಗಳು ಈ ರಾಮೋತ್ಸವದ ಮೂಲಕ ದೂರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಮಾಜದಲ್ಲಿ ಒಗ್ಗಟ್ಟನ್ನು ಮೂಡಿಸುವ ಉದ್ದೇಶದಿಂದ ಪ್ರತಿಯೊಂದು ಸಮುದಾಯದವರನ್ನು…
ಲೇಖಕ: admin
ಬೆಂಗಳೂರು ಮಾ.12 NEWS DESK : ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ನಾವು ಮುಲಾಜಿಲ್ಲದೆ ಖಂಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತಮಿಳುನಾಡು ಸಚಿವರ ನಿಯೋಗದ ಭೇಟಿಯ ನಂತರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ತಮಿಳುನಾಡಿನ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಚರ್ಚಿಸಿದರು. ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ನನ್ನ ಬೆಂಬಲ ಸದಾ ಇರಲಿದೆ. ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ನಾವು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ಹೋರಾಟಕ್ಕೂ ಬೆಂಬಲ ನೀಡುತ್ತೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಪೋರ್ಟ್ ಲೂಯಿಸ್ ಮಾ.12 NEWS DESK : ಮಾರಿಷಸ್ ದೇಶವು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತನ್ನ ಅತ್ಯುನ್ನತ ನಾಗರಿಕ ಗೌರವ ‘ದಿ ಗ್ರಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆ್ಯಂಡ್ ಕೀ ಆಫ್ ದಿ ಇಂಡಿಯನ್ ಒಷಿಯನ್’ ನೀಡಿ ಗೌರವಿಸಿದೆ. ಆ ಮೂಲಕ ನರೇಂದ್ರ ಮೋದಿ ಅವರು ಮಾರಿಷಸ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಭಾಜನರಾದ ಭಾರತದ ಮೊದಲ ಪ್ರಧಾನಿ ಎನಿಸಿದ್ದಾರೆ. ಈ ಗೌರವಕ್ಕೆ ಆಯ್ಕೆ ಮಾಡಿರುವ ದ್ವೀಪ ರಾಷ್ಟ್ರದ ಜನರು ಮತ್ತು ಸರ್ಕಾರಕ್ಕೆ ಪ್ರಧಾನಿ ಮೋದಿ ಧನ್ಯವಾದ ಸಲ್ಲಿಸಿದ್ದಾರೆ. ‘ನಾನು ಈ ಗೌರವವನ್ನು ವಿನಯಪೂರ್ವಕ ಸ್ವೀಕರಿಸುತ್ತೇನೆ. ಇದು ನನಗೆ ಸಿಕ್ಕ ಗೌರವ ಮಾತ್ರವಲ್ಲದೆ ಭಾರತ ಮತ್ತು ಮಾರಿಷಸ್ ದೇಶದ ನಡುವಣ ಚಾರಿತ್ರಿಕ ಬಾಂಧವ್ಯಕ್ಕೆ ಸಿಕ್ಕ ಗೌರವ ಆಗಿದೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ವಿರಾಜಪೇಟೆ ಮಾ.12 NEWS DESK : ವಿರಾಜಪೇಟೆ ತಾಲೂಕು ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಕುಟ್ಟ ಶ್ರೀ ಕಾಕ್ಕತ್ತೋಡು ಕ್ಷೇತ್ರದ ಎರಡು ಶಕ್ತಿಶಾಲಿ ದೇವಿಗಳಾದ ಶ್ರೀ ವನದುರ್ಗಾ ಮತ್ತು ಶ್ರೀ ಕಾಳಿ ಮಾತೆಯ ವಾರ್ಷಿಕ ಉತ್ಸವವು ಮಾ.15 ರಿಂದ 17ರ ವರೆಗೆ ಹಲವು ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ದೇವಾಲಯದಲ್ಲಿ ಮೂರು ದಿನಗಳ ಕಾಲ ದೇವಿಗೆ ಅಭಿಷೇಕ ಪೂಜೆ, ಗಣಪತಿ ಹೋಮ, ಮಧ್ಯಾಹ್ನದ ಪೂಜೆಗಳು ನಡೆಯಲಿದೆ. ಮಾ.15 ರಂದು ಉಷಾಪೂಜೆ, ಮಧ್ಯಾಹ್ನ ವಿಶೇಷ ಪೂಜೆ, ಸಂಜೆ ತೆರೆ ಮಹೋತ್ಸವ ಹಾಗೂ ರಾತ್ರಿ ಪೂಜೆ ನಡೆಯಲಿದೆ. ಮಾ.16 ರಂದು ಸಂಜೆ 6 ಗಂಟೆಗೆ ಸಹಸ್ರ ದೀಪ, ಅಲಂಕಾರ ಪೂಜೆ, ದೇವಿ ಪೂಜೆ, ಪುಷ್ಪಾಲಂಕಾರ ನಡೆಯಲಿದೆ. ಮಾ.17 ರಂದು ಬೆಳಿಗ್ಗೆ ಉಷಾಪೂಜೆ, ನವಕ ಪೂಜೆ, ಕಲಶಾಭಿಷೇಕ, ಸಂಜೆ ಭಗವತಿ ಸೇವೆ, ಸರ್ಪ ಬಲಿ, ರಾತ್ರಿ ಪೂಜೆ, ತಾಲಪ್ಪೋಲಿ ಮೆರವಣಿಗೆ, ಸ್ವೀಕಾರ ಗುರುತಿ ಪೂಜೆ ನಡೆಯಲಿದೆ. ಉತ್ಸವದ ಅಂಗವಾಗಿ ರಾತ್ರಿ 9 ಗಂಟೆಯ ನಂತರ ಮಕ್ಕಳ…
ಪುತ್ತೂರು ಮಾ.12 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗ, ಎಂಬಿಎ ವಿಭಾಗ ಮತ್ತು ಕಾಲೇಜು ಆಂತರಿಕ ದೂರು ಸಮಿತಿಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನವನ್ನು ಕಾಲೇಜಿನ ಸಾವರ್ಕರ್ ಸಭಾ ಭವನದಲ್ಲಿ ಆಚರಿಸಲಾಯಿತು. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸುಷ್ಮಾ.ಜಿ.ಭಂಡಾರಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ, ಮಹಿಳೆಯರ ಸುರಕ್ಷತೆ ಮತ್ತು ಹಕ್ಕುಗಳ ಬಗ್ಗೆ ಬೆಳಕು ಚೆಲ್ಲಿದರು. ಪೋಕ್ಸೋ ಕಾಯ್ದೆ, ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವಲ್ಲಿ ಈ ಕಾಯ್ದೆಯ ಪಾತ್ರ, ಬಾಲ್ಯ ವಿವಾಹದ ಪರಿಣಾಮಗಳು, ವರದಕ್ಷಿಣೆ ಕಾಯಿದೆಯ ನಿಬಂಧನೆಗಳು, ಆನ್ಲೈನ್ ಕಿರುಕುಳಗಳು, ಸೈಬರ್ ಸುರಕ್ಷತೆಯ ಅರಿವು ಮತ್ತು ವೈಯಕ್ತಿಕ ಸುರಕ್ಷತೆಗಾಗಿ ಸಂಚಾರ ನಿಯಮಗಳನ್ನು ಪಾಲಿಸುವ ಅಗತ್ಯತೆಗಳು ಇವೇ ಮುಂತಾದ ಪರಿಣಾಮಕಾರಿ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ವಿದ್ಯಾ.ಆರ್.ಗೌರಿ, ಮಹಿಳಾ ಸಬಲೀಕರಣವು ಒಂದು ನಿರಂತರ ಪ್ರಕ್ರಿಯೆ ಎಂದರು. ಸ್ತ್ರೀಯರು…
ಸಿದ್ದಾಪುರ ಮಾ.12 NEWS DESK : ನೆಲ್ಲಿಹುದಿಕೇರಿಯಲ್ಲಿರುವ ಕೊಡಗಿನ ಏಕೈಕ ಪುರಾತನ ಕಾಲದ ಶ್ರೀ ಸತ್ಯನಾರಾಯಣ ದೇವರ ವಾರ್ಷಿಕೋತ್ಸವವು ಮಾ.19, 20 ಮತ್ತು 21ರಂದು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಜರುಗಲಿದೆ. ಮಾ.19 ರಂದು ಬೆಳಿಗ್ಗೆ 6.30ಕ್ಕೆ ಗಣಹೋಮದ ಮೂಲಕ ಉತ್ಸವ ಪ್ರಾರಂಭವಾಗಲಿದೆ. ಸಂಜೆ 6.30 ಗಂಟೆಗೆ ತಕ್ಕರ ಮನೆಯಿಂದ ಭಂಡರಾ ಇಳಿಸುವುದು, 7 ಗಂಟೆಗೆ ಪ್ರಾರಂಭ ಶುದ್ಧ ಕಳಸ, ಶ್ರೀ ದೇವರ ಬಲಿ ಬರುವುದು, ಮಹಾಪೂಜೆ ಹಾಗೂ ಶ್ರೀ ದೇವರ ತೀರ್ಥ ಪ್ರಸಾದ ವಿತರಣೆ ನಡೆಯಲಿದೆ. ಮಾ.20 ರಂದು ಬೆಳಿಗ್ಗೆ 6.30ಕ್ಕೆ ಇರುಬೆಳಕು, 10.30 ಗಂಟೆಗೆ ಸಾಮೂಹಿಕ ಆಶ್ಲೇಷಬಲಿ, ಮಧ್ಯಾಹ್ನ 12.30 ಗಂಟೆಗೆ ಮಹಾಪೂಜೆ, ಪಟ್ಟಣಿ ಪ್ರಯುಕ್ತ ಪಲಹಾರ. ಸಂಜೆ 5 ಗಂಟೆಗೆ ಶ್ರೀ ಪೊದಮ್ಮ ದೇವಾಲಯದಲ್ಲಿ ಅಕ್ಕಿಹೇರುವುದು ಹಾಗೂ ಮಹಾಪೂಜೆ ನಡೆಯಲಿದೆ. ನಂತರ ಶ್ರೀ ಸತ್ಯನಾರಾಯಣ ದೇವಾಲಯದಲ್ಲಿ ನೆರಪು ಬಲಿ, ಮಹಾಪೂಜೆ, ಶ್ರೀ ದೇವರ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಮಾ.21 ರಂದು ಬೆಳಿಗ್ಗೆ 8.30 ಗಂಟೆಗೆ…
ಸಿದ್ದಾಪುರ ಮಾ.12 NEWS DESK : ತ್ಯಾಗತ್ತೂರು-ವಾಲ್ನೂರು ಶ್ರೀ ಭಗವತಿ ದೇವಾಲಯದ ವಾರ್ಷಿಕ ಉತ್ಸವವು ಮಾ.24 ರಿಂದ 27ರ ವರೆಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಜರುಗಲಿದೆ. ಮಾ.24 ರಂದು ಸಂಜೆ ತಕ್ಕರ ಮನೆಯಿಂದ ಭಂಡಾರ ಇಳಿಸುವುದು, ಶ್ರೀದೇವಿ ಬಲಿ, ಮಹಾಪೂಜೆ ಹಾಗೂ ತೀರ್ಥಪ್ರಸಾದ ವಿತರಣೆ ನಡೆಯಲಿದೆ. ಮಾ.25 ರಂದು ಮಧ್ಯಾಹ್ನ 3 ಗಂಟೆಯಿಂದ ಪಟ್ಟಣಿ, ಎತ್ತುಹೇರು, ಶ್ರೀದೇವಿ ಬಲಿ, ಅಲಂಕಾರ ಪೂಜೆ, ಮಹಾಪೂಜೆ, ತೀರ್ಥಪ್ರಸಾದ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ. ಮಾ.26 ರಂದು ಬೆಳಿಗ್ಗೆ 10.30 ಗಂಟೆಗೆ ತುಲಾಭಾರ ಸೇವೆ, 12 ಗಂಟೆಗೆ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ, ಮಧ್ಯಾಹ್ನ 3 ಗಂಟೆಯಿಂದ ತೆಂಗಿನಕಾಯಿಗೆ ಗುಂಡುಹೊಡೆಯುವುದು, ಶ್ರೀ ದೇವಿಬಲಿ, ಅವಭೃತ ಸ್ನಾನ, ಶ್ರೀ ದೇವಿ ಬಲಿ ನೃತ್ಯ, ಅಲಂಕಾರ ಪೂಜೆ, ಮಹಾಪೂಜೆ, ತೀರ್ಥ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಮಾ.27 ರಂದು ಬೆಳಿಗ್ಗೆ 9 ಗಂಟೆಯಿಂದ ಶುದ್ಧಕಳಶ, ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ಜರುಗಲಿದ್ದು,…
ಮಡಿಕೇರಿ ಮಾ.12 NEWS DESK : ಭಾರತೀಯ ನೌಕಾಪಡೆಯಲ್ಲಿ ಕ್ಯಾಪ್ಟನ್ ರ್ಯಾಂಕ್ ನಲ್ಲಿರುವ ಕೊಡಗಿನ ಮಾಳೇಟಿರ ನಿತಿನ್ ಕಾರ್ಯಪ್ಪ ಅವರು ಕೋಲ್ಕತ್ತಾದ ಐಎನ್ಐನಲ್ಲಿ ಕಮಾಂಡಿಂಗ್ ಆಫೀಸರ್ ಆಗಿ ಜವಾಬ್ದಾರಿಗೆ ನಿಯೋಜಿತರಾಗಿದ್ದಾರೆ. ಮೂಲತಃ ಜಿಲ್ಲೆಯ ಕುಕ್ಲೂರುವಿನ ಇದೀಗ ಮೈಸೂರಿನ ಬೋಗಾದಿಯ ನಿವಾಸಿ ಕ್ಯಾಪ್ಟನ್ ನಿತಿನ್ ಕಾರ್ಯಪ್ಪ, ಸೇಂಟ್ ಜೋಸೆಫ್ ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ನಂತರ ರಾಷ್ಟ್ರೀಯ ಭಾರತೀಯ ಸೇನಾ ಕಾಲೇಜ್ ಡೆಹರಾಡೂನ್ನಲ್ಲಿ ತರಬೇತಿ ಹೊಂದಿ ಡಿಫೆನ್ಸ್ ಅಕಾಡೆಮಿಗೆ ಸೇರ್ಪಡೆಗೊಂಡರು. ಈ ಹಿಂದೆ ಐಎನ್ಎಸ್ ಅಜಯ್, ಐಎನ್ಎಸ್ ಕಡ್ಮಟ್ನಲ್ಲಿ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದರು. ಇಸ್ಲಮಾಬಾದ್ನ ಭಾರತೀಯ ರಾಯಭಾರಿ ಕಚೇರಿಯಲ್ಲಿ ಸಲಹೆಗಾರರಾಗಿ ಕೂಡ ಸೇವೆ ಸಲ್ಲಿಸಿದ್ದರು. ಇವರ ಪತ್ನಿ ರಾಷ್ಟ್ರೀಯ ಓಟಗಾರ್ತಿ ರೋಹಿಣಿ ಇತ್ತೀಚಿಗೆ ನಡೆದ ಟಾಟಾ ಮುಂಬೈ ಮೆರಥಾನ್ನಲ್ಲಿ ಭಾಗವಹಿಸಿ ಪೂರ್ಣ ಗುರಿ ತಲುಪಿಸಿದ್ದರು. ಇವರು ಮೈಸೂರಿನ ಬೋಗಾದಿಯಲ್ಲಿ ನೆಲೆಸಿರುವ ಮಾಳೇಟಿರ ಗಣೇಶ್ ಬೋಪಣ್ಣ ಹಾಗೂ ದಿವಂಗತ ಕಾವೇರಿ ಬೋಪಣ್ಣ ಅವರ ಪುತ್ರರಾಗಿದ್ದಾರೆ. ಇವರ ಕಿರಿಯ ಸಹೋದರ ನಯನ್ ಚಂಗಪ್ಪ ಮುಖ್ಯ ಮೆರಾಯಿನ್…
ಸುಂಟಿಕೊಪ್ಪ ಮಾ.12 NEWS DESK : ಮಂಗಳೂರಿನಿಂದ ಆರಂಭಗೊಂಡಿರುವ ನಂದಿ ರಥಯಾತ್ರೆಗೆ ಕೊಡಗಿನಲ್ಲಿ ಭವ್ಯ ಸ್ವಾಗತ ಕೋರಲಾಯಿತು. ಸುಂಟಿಕೊಪ್ಪದ ಕನ್ನಡ ವೃತ್ತದಲ್ಲಿ ಕೊಡಗು ಜಿಲ್ಲಾ ವಿಶ್ವಹಿಂದೂ ಪರಿಷತ್ ಮಾಜಿ ಕಾರ್ಯದರ್ಶಿ ಡಿ.ನರಸಿಂಹ ಹಾಗೂ ಸುಂಟಿಕೊಪ್ಪ ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ನಂತರ ಮೆರವಣಿಗೆಯೊಂದಿಗೆ ನಗರದ ಬೀದಿಗಳಲ್ಲಿ ಸಾಗಿ ಶ್ರೀ ಪುರಂ ಅಯ್ಯಪ್ಪ ದೇವಾಲಯದವರೆಗೆ ಸಾಗಿ ಅಲ್ಲಿಂದ ಕುಶಾಲನಗರ ಕಡೆಗೆ ಬಿಳ್ಕೋಡಲಾಯಿತು. ಈ ಸಂದರ್ಭ ಗ್ರಾ.ಪಂ.ಬಿ.ಎಂ.ಸುರೇಶ್, ಶಕ್ತಿ ಕೇಂದ್ರದ ಅಧ್ಯಕ್ಷ ಧನುಕಾವೇರಪ್ಪ, ಸಹದೇವ, ಹರೀಶ್, ಬಿ.ಎಸ್.ಆನಂದ, ವಾಸು, ಮುರುಳೀಧರ್ ಕಾಮತ್, ಶಾಂತಿ ನಂಜುಂಡ ಸೇರಿದಂತೆ ಮತ್ತಿತರರು ಇದ್ದರು.
ಸುಂಟಿಕೊಪ್ಪ ಮಾ.12 NEWS DESK : ಗೃಹಿಣಿಯರು ಬ್ಯಾಂಕಿನಲ್ಲಿ ಉಳಿತಾಯ ಖಾತೆಯನ್ನು ತೆರಯುವ ಮೂಲಕ ತಿಂಗಳಿಗೆ ಇಂತಿಷ್ಟು ತಮ್ಮ ಖಾತೆಯಲ್ಲಿ ಸಂಗ್ರಹಿಸಿಡುವುದರಿಂದ ತುರ್ತು ಸಂದರ್ಭದಲ್ಲಿ ಉಪಯೋಗವಾಗುತ್ತಿದೆ. ಅಲ್ಲದೇ ಆರೋಗ್ಯ ಸಮಸ್ಯೆಗಳು ಉಲ್ಬಣಿಸಿದಾಗ ವಿಮೆಯಿಂದ ಚಿಕಿತ್ಸೆ ಪಡೆಯಬಹುದೆಂದು ಎಫ್.ಎಲ್.ಸಿ ಅಧಿಕಾರಿ ನಬಿ ಹೇಳಿದರು. ಲೀಡ್ ಬ್ಯಾಂಕ್ ಯೂನಿಯನ್ ಬ್ಯಾಂಕ್ ಅವಾರ್ಡ್ ಸಂಸ್ಥೆ ವತಿಯಿಂದ ಹೆರೂರು ಗ್ರಾಮದ ಸಮುದಾಯ ಭವನದಲ್ಲಿ ಹಣಕಾಸಿನ ಆರ್ಥಿಕ ಸಪ್ತಾಹ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಬ್ಯಾಂಕ್ಗಳಲ್ಲಿ ವ್ಯವಹಾರ ಮಾಡುವುದರಿಂದ ಸರಕಾರದ ಎಲ್ಲ ಯೋಜನೆ, ಸಾಲ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಭವಿಷ್ಯದ ಭದ್ರತೆಗೆ ಮಾಸಿಕ ಆದಾಯದಲ್ಲಿ ಒಂದಷ್ಟು ಹಣವನ್ನು ಉಳಿಸಿ ಆರ್ಡಿ ಇತರೆ ಕಟ್ಟುವುದರಿಂದ ನಿಮ್ಮ ಮಕ್ಕಳ ಶಿಕ್ಷಣ, ಮದುವೆ ಇನ್ನಿತರ ಸಂದರ್ಭದಲ್ಲಿ ಉಪಯೋಗ ಬರುತ್ತದೆ ಎಂದು ತಿಳಿಸಿದರು. ಈ ಸಂದರ್ಭ ಆರ್ಥಿಕ ಸಮಾಲೋಚಕರದ ಸಿ.ಜಿ.ಹರೀಶ್ ಇತರರು ಹಾಜರಿದ್ದರು.






