ಮಡಿಕೇರಿ ಮಾ.11 NEWS DESK : ಕುಶಾಲನಗರ ಕಾವೇರಿ ಜೆ.ಸಿ.ಐ.ಸಂಸ್ಥೆಯ ವತಿಯಿಂದ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ ವಾಟರ್ ಫಿಲ್ಟರ್ ಅನ್ನು ಕೊಡುಗೆಯಾಗಿ ನೀಡಲಾಯಿತು. ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾವೇರಿ ಜೆಸಿಐ ಸಂಸ್ಥೆಯ ಮಾಜಿ ಅಧ್ಯಕ್ಷರು ಹಾಗೂ ಜೇಸೀ ಜೆ.ಎಫ್.ಪಿ. ಎಸ್.ಎನ್.ರಾಜೇಂದ್ರ ವೈಯಕ್ತಿಕವಾಗಿ ಬಾಲಕಿಯರ ಪ್ರೌಢಶಾಲೆಗೆ ಶಾಲೆಗೆ ಕೊಡುಗೆಯಾಗಿ ನೀಡಿದ ವಾಟರ್ ಫಿಲ್ಟರ್ ಅನ್ನು ಮುಖ್ಯ ಶಿಕ್ಷಕ ಪಿ.ನವೀನ್ ಕುಮಾರ್ ಅವರಿಗೆ ಹಸ್ತಾಂತರಿಸಿದರು. ಸಂಸ್ಥೆಯ ಅಧ್ಯಕ್ಷೆ ತಂಬಂಡ ತೇಜ ದಿನೇಶ್ ಕಾರ್ಯದರ್ಶಿ ಎ.ಸಿ.ಕಾವ್ಯಶ್ರೀ, ಜೇಸೀಗಳಾದ ಎಂ.ಜೆ.ರಜನೀಕಾಂತ್, ಬಿ.ಜಗದೀಶ್, ಶಿಕ್ಷಕರು ಇದ್ದರು.
ಲೇಖಕ: admin
ಮಡಿಕೇರಿ ಮಾ.11 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ 2 ಪಂದ್ಯಾವಳಿ ಏ.1 ರಿಂದ ಪಾಲಿಬೆಟ್ಟದ ಟಾಟಾ ಕಾಫಿ ಸಂಸ್ಥೆಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಟಿ-20 ಮಾದರಿಯಲ್ಲಿ ನಡೆಯುವ ಪಂದ್ಯಾವಳಿಯಲ್ಲಿ ಸೀಸನ್ 1 ರ ಪ್ರಾಂಚೈಸಿಗಳು ಮುಂದುವರೆಯಲಿದ್ದು, ಇವರೊಂದಿಗೆ ಮತ್ತಷ್ಟು ಪ್ರಾಂಚೈಸಿಗಳು ಪಾಲ್ಗೊಳ್ಳಲಿದ್ದಾರೆ. ಕ್ಯಾಶ್ ಬಿಡ್ಡಿಂಗ್ ಮೂಲಕ ಕ್ರೀಡಾಪಟುಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಇತ್ತೀಚೆಗೆ ಮೈಸೂರಿನ “ದಿ ರೂಸ್ಟ್” ಹೊಟೇಲ್ ಸಭಾಂಗಣದಲ್ಲಿ ನಡೆಯಿತು. 10 ಪ್ರಾಂಚೈಸಿಗಳು 175 ಆಟಗಾರರ ಆಯ್ಕೆಯಲ್ಲಿ ತೊಡಗಿಸಿಕೊಂಡರು. ಈ ಬಾರಿಯ ಸೀಸನ್-2 ಕ್ರಿಕೆಟ್ ಪಂದ್ಯಾವಳಿಯಲ್ಲಿ ರಣಜಿ ಆಟಗಾರರು ಹಾಗೂ ಓಮನ್ ದೇಶಕ್ಕೆ ಆಟವಾಡಿದ ಆಟಗಾರರು ಕೂಡ ಪಾಲ್ಗೊಳ್ಳುತ್ತಿರುವುದು ವಿಶೇಷ. ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೂರ್ಗ್ ಕ್ರಿಕೆಟ್ ಫೌಂಡೇಶನ್ ನ ಅಧ್ಯಕ್ಷ ಪೊರುಕೊಂಡ ಸುನಿಲ್, ಪಾಲಿಬೆಟ್ಟದ ಟಾಟಾ ಕಾಫಿ ಸಂಸ್ಥೆಯ ಕ್ರಿಕೆಟ್ ಮೈದಾನದಲ್ಲಿ ಏ.1 ರಿಂದ 15 ದಿನಗಳ ಕಾಲ ಪಂದ್ಯಾವಳಿ…
ಮಡಿಕೇರಿ ಮಾ.11 NEWS DESK : ಕೊಡಗು ವಿವಿ ವಿಲೀನಗೊಳಿಸುವ ಪ್ರಕ್ರಿಯೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ವತಿಯಿಂದ ಸರ್ಕಾರದ ನೀತಿಯನ್ನು ಖಂಡಿಸಿ ಕೊಡಗು ಬಂದ್ ಮಾಡುವುದು ನಿಶ್ಚಿತ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಕುಶಾಲನಗರದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡಗು ವಿವಿ ರದ್ದುಪಡಿಸಲು ಹೊರಟಿರುವುದು ಪರಿಶಿಷ್ಟ ಜಾತಿ ಮತ್ತು ಪಂಗಡದ ಹಣ ದುರುಪಯೋಗ ಸಿ ಮತ್ತು ಡಿ ಜಾಗವನ್ನು ಅರಣೀಕರಣ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮಗಳು ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಜೆಟ್ ನಲ್ಲಿ ವಿಶೇಷ ಯೋಜನೆಗಳನ್ನು ಜಾರಿಗೊಳಿಸುತ್ತಿರುವುದು ಈ ಎಲ್ಲ ನೀತಿಗಳ ವಿರುದ್ಧ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಜೆಟ್ ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಶ್ವವಿದ್ಯಾಲಯಗಳನ್ನು ವಿಲೀನಗೊಳಿಸುವ ಬಗ್ಗೆ ಹೇಳಿಕೆ ನೀಡಿರುವುದು ನಂತರ ಬೆಂಗಳೂರಿಗೆ ತೆರಳಿದ ನಿಯೋಗಕ್ಕೆ ಉತ್ತರಿಸಿರುವ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಮಡಿಕೇರಿ ಮಾ.11 NEWS DESK : ‘ಇತಿಹಾಸ’ದ ಊರುಗೋಲನ್ನು ಇರಿಸಿಕೊಂಡು ಇಂದಿನ ಪರಿಸ್ಥಿತಿಗಳ ಅವಲೋಕನ ನಡೆಯಬೇಕಾಗಿದೆಯೆಂದು ಖ್ಯಾತ ಸಂಶೋಧಕರು, ಸಾಹಿತಿಗಳಾದ ಡಾ. ಎಂ.ಜಿ. ನಾಗರಾಜ್ ಅನಿಸಿಕೆ ವ್ಯಕ್ತ್ತಪಡಿಸಿದ್ದಾರೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಸಂಯುಕ್ತಾಶ್ರಯದಲ್ಲಿ, ಸುಲೋಚನಾ ಡಾ.ಎಂ.ಜಿ.ನಾಗರಾಜ್ ದಂಪತಿಗಳ ದತ್ತಿಯ ಸಹಕಾರದಿಂದ ನಗರದ ಎಫ್ಎಂಕೆಎಂಸಿ ಕಾಲೇಜು ಸಭಾಂಗಣದಲ್ಲಿ ಆಯೋಜಿತ ‘ಜಿಲ್ಲೆಯ ಪುರಾತತ್ವ ಜಾನಪದ ಮತ್ತು ಪರಿಸರ ವಿಚಾರಗೋಷ್ಠಿ-ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ’ದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ನಾನು ಕನ್ನಡಿಗನಾಗಿದ್ದು, ಕೊಡಗು ಕನ್ನಡದ ಭಾಗವೇ ಆಗಿರುವ ನೆಲೆಗಟ್ಟಿನಲ್ಲಿ, ಇಲ್ಲಿನ ಇತಿಹಾಸ, ಶಾಸನಗಳು, ಅಪರೂಪದ ಸಂಸ್ಕೃತಿಯ ಬಗ್ಗೆ ಅಧ್ಯಯನ ಮತ್ತು ಸಂಶೋಧನಾ ಗ್ರಂಥಗಳನ್ನು ನಾನು ರಚಿಸಿದ್ದೇನೆ. ಅಶೋಕ ಚಕ್ರವರ್ತಿಯ ಕಾಲದ ಅತ್ಯಪರೂಪದ ಶಾಸನಗಳ ಬಗ್ಗೆ ದಶಕಗಳ ಹಿಂದೆ ಸಂಶೋಧನೆಗಳನ್ನು ನಡೆಸಿ ಕೃತಿ ರಚಿಸಿರುವ ಬಗ್ಗೆ ತಿಳಿಸಿದರು. ನಮಗಿದರ ಅರಿವಿಲ್ಲ :: ಕೊಡಗಿನ ವಿಶಿಷ್ಟ ಸಂಸ್ಕೃತಿ, ಇಲ್ಲಿನ ಆಚರಣೆಗಳು…
ವಿರಾಜಪೇಟೆ ಮಾ.11 NEWS DESK : ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು ಎಂದು ಸಮಾಜ ಸೇವಕಿ ಹಾಗೂ ವಿರಾಜಪೇಟೆ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಮುಖ್ಯಸ್ಥೆ ಪೂಜಾ ಸಜೇಶ್ ಸಲಹೆ ನೀಡಿದರು. ಹೆಗ್ಗಳದಲ್ಲಿ ಏಳು ದಿನಗಳ ಕಾಲ ನಡೆದ ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ವಿದ್ಯಾರ್ಥಿಗಳು ಆದರ್ಶ ಪುರುಷರತತ್ವ ಸಿದ್ಧಾಂತಗಳನ್ನು ಅನುಸರಿಸಬೇಕು. ನಮ್ಮ ಭವಿಷ್ಯ ದ ಅಭಿವೃದ್ಧಿ ನಮ್ಮಿಂದಲೇ ಆಗಿದೆ. ಪರಸ್ಪರ ಸ್ನೇಹ, ಸಹಕಾರವಿದ್ದಾಗ ಮಾತ್ರ ಸಮಾಜ ಸೇವೆಗೆ ಅರ್ಥ ಬರುತ್ತದೆ. ಸಮಾಜದ ಸೇವೆಯು ಪುಣ್ಯ ಕೆಲಸ ಮಾಡಿದಂತೆ ಎಂದ ಅವರು, ಗುರು ಹಿರಿಯರನ್ನು ಗೌರವಿಸಿ ಎಂದು ಕರೆ ಕೊಟ್ಟರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ.ಮದಲೈ ಮುತ್ತು, ಗ್ರಾಮದ ಸರ್ವ ಜನರ ಸಹಕಾರದಿಂದ ಶಿಬಿರವು ಯಶಸ್ವಿಯಾಗಿ ನಡೆದಿದೆ. ವಿದ್ಯಾರ್ಥಿಗಳು ಶಿಬಿರದಲ್ಲಿ ಕಲಿತದನ್ನು ಜೀವನದಲ್ಲಿ ಅಳವಡಿಸುವುದರ…
ಮಡಿಕೇರಿ ಮಾ.11 NEWS DESK : ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸುವ ಸಭೆಯು ಮಾ.12 ರಂದು ಬೆಳಗ್ಗೆ 11.30 ಗಂಟೆಯಿಂದ 12.30 ಗಂಟೆವರೆಗೆ ವಿರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಚಾ.ವಿ.ಸ.ನಿ.ನಿ.,ಮಡಿಕೇರಿರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ಗೋಣಿಕೊಪ್ಪಲು ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಮಾ.12 ರಂದು ಮಧ್ಯಾಹ್ನ 2.30 ಗಂಟೆಯಿಂದ 3.30 ಗಂಟೆವರೆಗೆ ಗೋಣಿಕೊಪ್ಪಲು ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಚಾ.ವಿ.ಸ.ನಿ.ನಿ., ಮಡಿಕೇರಿರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿರಾಜಪೇಟೆ ಮತ್ತು ಗೋಣಿಕೊಪ್ಪಲು ವ್ಯಾಪ್ತಿಯ ಸಾರ್ವಜನಿಕರು/ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಮಾ.11 NEWS DESK : ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಎಸ್.ಸಿ, ಎಸ್.ಟಿ ಸಮಿತಿಯ ವತಿಯಿಂದ ನಮ್ಮ ನಡಿಗೆ ಸಮುದಾಯದ ಕಡೆಗೆ ಶೀರ್ಷಿಕೆಯಡಿಯಲ್ಲಿ ತಿತಿಮತಿ ಗ್ರಾಮ ಪಂಚಾಯಿತಿಯ ಮರಪಾಲ ಹಾಡಿಯಲ್ಲಿ ಹಾಡಿ ನಿವಾಸಿಗಳಿಗೆ ವಿಶೇಷ ಉಪನ್ಯಾಸ, ಹಾಡಿ ಭೇಟಿ ಮತ್ತು ಜಾಗೃತಿ ಕಾರ್ಯಕ್ರಮ ನಡೆಯಿತು. ಮರಪಾಲ ಅಂಗನವಾಡಿಯಲ್ಲಿ ನಡೆದ ಕಾರ್ಯಕ್ರಮವನ್ನು ಗ್ರಾಮ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ ಪಿ.ಸಿ.ರಾಮು ಉದ್ಘಾಟಿಸಿ ಭಿತ್ರಿಪತ್ರವನ್ನು ಬಿಡುಗಡೆ ಮಾಡಿದರು. ಇಂದಿನ ವಿದ್ಯಾರ್ಥಿಗಳಿಗೆ ಹಾಡಿಯ ಅರಿವು ಹಾಗೂ ಹಾಡಿಯ ಜನರಲ್ಲಿ ಜಾಗೃತಿಯನ್ನು ಮೂಡಿಸಲು ಇಂತಹ ಕಾರ್ಯಕ್ರಮ ಅಗತ್ಯ ಎಂದು ಹೇಳಿದರು. ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಆರ್.ರಘುರಾಜ್ ಸಮುದಾಯದ ಶ್ರೇಯೋಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ನೀಡಿದರು. ಶಿಕ್ಷಣದಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಹಾಡಿಯಜನರು ಒಳ್ಳೆಯ ಶಿಕ್ಷಣ ಪಡೆಯಬೇಕು. ಆಗ ಮಾತ್ರ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂದು ಕಿವಿ ಮಾತನ್ನು…
ಮಡಿಕೇರಿ ಮಾ.11 NEWS DESK : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಕೆಂದು ಒತ್ತಾಯಿಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಹಾರ್ವರ್ಡ್ ವಿದ್ವಾಂಸ, ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜರಿಯಾ ಹಾಗೂ ನ್ಯಾಯಮೂರ್ತಿ ಎಂ.ಐ.ಅರುಣ್ ಅವರ ವಿಭಾಗೀಯ ಪೀಠ ರಿಟ್ ಅರ್ಜಿಯ ವಿಚಾರಣೆಯನ್ನು ನಡೆಸಿತು. ಡಾ.ಸುಬ್ರಮಣಿಯನ್ ಸ್ವಾಮಿ ಹಾಗೂ ಅವರ ಕಾನೂನು ಸಹಾಯಕರು ವಿಚಾರಣೆ ಸಂದರ್ಭ ಭಾಗಿಯಾಗಿದ್ದರು. ಸಿಎನ್ಸಿ ಬೇಡಿಕೆಗೆ ಆಕ್ಷೇಪ ಸಲ್ಲಿಸಿದ ಪ್ರತಿವಾದಿಗಳ ಅಹವಾಲನ್ನು ಕೂಡ ಆಲಿಸಿದ ಮುಖ್ಯ ನ್ಯಾಯಾಧೀಶರು ವಿಚಾರಣೆಯ ಮುಂದಿನ ದಿನಾಂಕವನ್ನು 2025 ಜೂ.9ಕ್ಕೆ ನಿಗದಿಪಡಿಸಿದರು. ಸಿಎಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಅರ್ಜಿದಾರ ಸಂಖ್ಯೆ-2 ಆಗಿದ್ದಾರೆ. ಕೇಂದ್ರ ಕಾನೂನು ಸಚಿವಾಲಯ, ಕೇಂದ್ರ ಗೃಹ ಸಚಿವಾಲಯ ಮತ್ತು ಕರ್ನಾಟಕ ರಾಜ್ಯವನ್ನು ಪ್ರತಿವಾದಿ ಸಂಖ್ಯೆ ಕ್ರಮವಾಗಿ 1, 2…
ಮಡಿಕೇರಿ ಮಾ.11 NEWS DESK : ನಾಪೋಕ್ಲು ಠಾಣಾ ಆವರಣದಲ್ಲಿ ಮಡಿಕೇರಿ ಉಪ ವಿಭಾಗದ ಡಿ.ಎಸ್.ಪಿ ನೇತೃತ್ವದಲ್ಲಿ ಜನಸಂಪರ್ಕ ಸಭೆ ನಡೆಯಿತು. ಸಭೆಯಲ್ಲಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ, ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಅಪ್ರಾಪ್ತ ಬಾಲಕರ ವಾಹನ ಚಾಲನೆ, ಕುಡಿದು ವಾಹನ ಚಾಲನೆ, ಕಾಫಿ ಖರೀದಿದಾರರಿಗೆ ಸೂಚನೆಗಳು, ಅಕ್ರಮ ಮದ್ಯ ಮಾರಾಟ, ಮಾದಕ ವಸ್ತು ಮಾರಾಟ, ಸೇವನೆ ಬಗ್ಗೆ ಮುಂತಾದ ಅಂಶಗಳ ಬಗ್ಗೆ ಅರಿವು ಮೂಡಿಸಲಾಯಿತು.
ಮಡಿಕೇರಿ ಮಾ.11 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಸದಸ್ಯರಾಗಿದ್ದ ಮುಕ್ಕಾಟಿರ ಶಿವು ಮಾದಪ್ಪಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ನುಡಿ ನಮನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಶಿವು ಮಾದಪ್ಪ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಂತಾಪ ಸೂಚಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಶಿವು ಮಾದಪ್ಪ ಅವರ ವ್ಯಕ್ತಿತ್ವವನ್ನು ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರಿಗೆ ಹೋಲಿಕೆ ಮಾಡಿದರು. ದಿವಂಗತ ಗುಂಡು ರಾವ್ ರಂತೆಯೇ ಶಿವು ಮಾದಪ್ಪ ಸ್ನೇಹ ನಡೆ ಹಾಗೂ ವರ್ಣರಂಜಿತ ವ್ಯಕ್ತಿತ್ವ ಮಾತ್ರವಲ್ಲ ಅವರ ಗಂಭೀರ ವ್ಯಕ್ತಿತ್ವ ಎಲ್ಲರಿಗೂ ಅಚ್ಚುಮೆಚ್ಚು ಎಂದು ಬಣ್ಣಿಸಿದರು. ಶಿವು ಮಾದಪ್ಪ ಪಕ್ಷಕ್ಕಾಗಿ ದುಡಿದವರು. ಅವರು ಕೈಗೊಂಡ ಹಲವಾರು ಉತ್ತಮ ನಿರ್ಧಾರಗಳ ಬಗ್ಗೆ ಸ್ಮರಿಸಿದರು. ಡಿಸಿಸಿ ಉಪಾಧ್ಯಕ್ಷ ಸುಜು ತಿಮ್ಮಯ್ಯ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, RGPRS ಸಂಚಾಲಕ…






