ಲೇಖಕ: admin

ನವದೆಹಲಿ NEWS DESK ಫೆ.17 : ಪರವಾನಗಿ ರಹಿತ ತಂಬಾಕು ಬೆಳಡಗಾರರಿಗೆ ಮಾರಾಟಕ್ಕೆ ಅವಕಾಶ ನೀಡಬೇಕು ಹಾಗೂ ಅವರಿಗೆ ವಿಧಿಸಲಾಗುತ್ತಿದ್ದ ದಂಡ ಮನ್ನಾ ಮಾಡಬೇಕೆಂದು *ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್* ಮಾಡಿ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ, ಕರ್ನಾಟಕದ ಬೆಳಗಾರರಿಗೆ ಖುಷಿ ಸುದ್ದಿ ನೀಡಿದೆ. ಪರವಾನಗಿ ರಹಿತ ತಂಬಾಕು ಬೆಳೆಗಾರರು ಎಫ್ ಸಿ ವಿ ತಂಬಾಕು ಮಾರಾಟ ಮಾಡಲು ಅವಕಾಶ ನೀಡಲು ಹಾಗೂ ದಂಡ ವಿಧಿಸದೆ ಇರಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ನವದೆಹಲಿಯಲ್ಲಿ ಸಂಸದ ಯದುವೀರ್ ಈ ಕುರಿತು ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರದ ಈ ನಿರ್ಧಾರ ಸ್ವಾಗತಾರ್ಹವಾಗಿದೆ. ಇದರಿಂದ ಸಾವಿರಾರು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ. ಎಫ್.ಸಿ.ವಿ. ತಂಬಾಕನ್ನು 53,325 ಹೆಕ್ಟೇರ್ ಪ್ರದೇಶದಲ್ಲಿ ಬೆಳಯಲಾಗುತ್ತಿದ್ದು 40,487 ನೋಂದಾಯಿತ ಹಾಗೂ 12,838 ಪರವಾನಗಿ ರಹಿತ ಬೆಳೆಗಾರರು ಬೆಳೆಯುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರದಿಂದಾಗಿ ಪ್ರಮುಖವಾಗಿ 12,838 ತಂಬಾಕು ಬೆಳೆಗಾರರಿಗೆ ಅನುಕೂಲವಾಗಲಿದೆ. ಕರ್ನಾಟಕ ತಂಬಾಕು ಬೆಳೆಗಾರರ ಸಂಕಷ್ಟವನ್ನು  ನಿವಾರಿಸಲು ಕೇಂದ್ರ ಬಿಜೆಪಿ ಸರ್ಕಾರ…

Read More

ಮಡಿಕೇರಿ NEWS DESK ಫೆ.17 : ವಿವಾಹ ವಾರ್ಷಿಕೋತ್ಸವದ ದಿನದ ಹಿನ್ನೆಲೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಕುಂಭಮೇಳದಲ್ಲಿ ಕುಟುಂಬ ಸಹಿತ ಭಾಗಿಯಾದರು. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ತಮ್ಮ ಪತ್ನಿ ದಿವ್ಯಾ ಮಂತರ್ ಹಾಗೂ ಕುಟುಂಬದ ಸದಸ್ಯರುಗಳೊಂದಿಗೆ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ನೆರವೇರಿಸಿದರು. 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ನನ್ನ ವಿವಾಹ ವಾರ್ಷಿಕೋತ್ಸವದ ಸುದಿನದಂದೇ ಅವಕಾಶ ಸಿಕ್ಕಿದ್ದು, ನಿಜಕ್ಕೂ ಸಂತಸ ತಂದಿದೆ ಎಂದು ಡಾ.ಮಂತರ್ ಗೌಡ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

Read More

ಮಡಿಕೇರಿ NEWS DESK ಫೆ.17 : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಮಾನವ ಹಕ್ಕುಗಳ ಅಂತರ ರಾಷ್ಟ್ರೀಯ  ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಬೆಂಬಲ ಸೂಚಿಸಿದ್ದಾರೆ. ಮಡಿಕೇರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಹಿಂದೆಯೇ ನೌಕರರು ಕರ್ನಾಟಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಸರಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ದೊರೆತ್ತಿತ್ತು. ಈ ಕಾರಣದಿಂದ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರವನ್ನು ಕೈ ಬಿಟ್ಟಿದ್ದರು. ಆದರೆ ಕೊಟ್ಟ ಭರವಸೆ ಇಲ್ಲಿಯವರೆಗೆ ಈಡೇರಿಲ್ಲ, ಇದರಿಂದ ಬೇಸರಗೊಂಡಿರುವ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರ ಕೆಲಸಗಳಿಗೆ ತೊಂದರೆಯಾಗುತ್ತಿದೆ. ಇವರಿಗೆ ಕೆಲವು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದೆ ಸರ್ಕಾರ ಹಿಂದೆ ಸರಿದಿದೆ. ಇವರುಗಳು ಕೆಲಸಕ್ಕೆ ಸೇರಿದ ನಂತರ ಇಂತಿಷ್ಟು ಸಮಯದ ಬಳಿಕ ವರ್ಗಾವಣೆಯನ್ನು ಮಾಡಬೇಕು. ವಯಸ್ಸಾದ…

Read More

https://www.youtube.com/watch?v=VMYbqxE7QmY&authuser=0 ಮಡಿಕೇರಿ ಫೆ.17 NEWS DESK : ಯಾವುದೇ ಅಧಿಕೃತ ದಾಖಲಾತಿಗಳನ್ನು ಹೊಂದದೆ ವಂಚನೆ ಮಾಡುವ ಉದ್ದೇಶದಿಂದ ಗ್ರಾಹಕರಿಂದ ಹಣವನ್ನು ಸಂಗ್ರಹಿಸುತ್ತಿದ್ದ ಆರೋಪದಡಿ ಎಸ್.ವಿ ಸ್ಮಾರ್ಟ್ ವಿಷನ್ ಎಂಬ ಸ್ಕೀಂನ ಮಾಲೀಕ ಸೇರಿದಂತೆ ಐವರು ಆರೋಪಿಗಳನ್ನು ಮಡಿಕೇರಿ ನಗರ ಪೊಲೀಸರು ಬಂಧಿಸಿದ್ದಾರೆ. ಸ್ಕೀಂ ಮಾಲೀಕ ಮಂಗಳೂರು ಸುರತ್ಕಲ್ ಮೂಲದ ಮಹಮದ್ ಅಶ್ರಫ್(37), ಮಡಿಕೇರಿಯ ಮಲ್ಲಿಕಾರ್ಜುನ ನಗರದ ನಿವಾಸಿ ಎಂ.ವೈ.ಸುಲೈಮಾನ್(37), ತ್ಯಾಗರಾಜ ಕಾಲೋನಿಯ ಅಬ್ದುಲ್ ಗಫೂರ್(34), ಮೊಹಮದ್ ಅಕ್ರಮ್(34) ಹಾಗೂ ಕುಂಬಳಕೇರಿ ನಿವಾಸಿ ಹೆಚ್.ಎನ್.ಕಿಶೋರ್(41) ಬಂಧಿತ ಆರೋಪಿಗಳಾಗಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಣಿಪೇಟೆಯಲ್ಲಿ ಜನವರಿ 30ರಿಂದ ಎಸ್.ವಿ. ಸ್ಮಾರ್ಟ್ ವಿಷನ್ ಸ್ಕೀಂ ನಡೆಸಲಾಗುತ್ತಿದ್ದು, ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸುತ್ತಿದ್ದರು. ಈ ಸ್ಕೀಂನಲ್ಲಿ ಈಗಾಗಲೇ 1100ಕ್ಕೂ ಅಧಿಕ ಮಂದಿ ಸೇರಿಕೊಂಡಿದ್ದಾರೆ. ಸ್ಕೀಂಗೆ ಸೇರಲು ಪ್ರತಿ ತಿಂಗಳು ರೂ. 1 ಸಾವಿರದಂತೆ 24 ಕಂತುಗಳನ್ನು ಗ್ರಾಹಕರು ಕಟ್ಟಬೇಕಾಗಿರುತ್ತದೆ. ಪ್ರತಿ ತಿಂಗಳ 30ನೇ ತಾರೀಖಿನಂದು…

Read More

ಮಡಿಕೇರಿ ಫೆ.17 NEWS DESK : ಭಾಗ್ಯಲಕ್ಷ್ಮಿ ಯೋಜನೆಯಡಿ ಹೆಣ್ಣು ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ರಕ್ಕಣೆಗಾಗಿ 2006-07 ರಲ್ಲಿ ರಾಜ್ಯದಲ್ಲಿ ಯೋಜನೆ ಜಾರಿಗೆ ತರಲಾಗಿದ್ದು, ಈ ಯೋಜನೆಗೆ 2006-07 ರಲ್ಲಿ ಜಿಲ್ಲೆಯ 1355 ಫಲಾನುಭವಿಗಳು ನೋಂದಾಯಿಸಿ ಬಾಂಡ್ ಪಡೆದಿದ್ದಾರೆ. ಈ ಸಾಲಿನಲ್ಲಿ ಬಾಂಡ್ ಪಡೆದಿರುವ 18 ವರ್ಷ ಪೂರ್ಣಗೊಂಡ ಫಲಾನುಭವಿಗಳು ತಮ್ಮ ಪೋಷಕರೊಂದಿಗೆ ದಾಖಲಾತಿ ಹಾಗೂ ಫಲಾನುಭವಿಯ ಆಧಾರ್ ಕಾರ್ಡ್ ಜೋಡಣೆಯಾಗಿರುವ ಸಂಖ್ಯೆಯ ಮೊಬೈಲ್ ನೊಂದಿಗೆ ತಮ್ಮ ವ್ಯಾಪ್ತಿಗೆ ಬರುವ ಸಿಡಿಪಿಒ ಕಚೇರಿಗೆ ಖುದ್ದಾಗಿ ಅವಶ್ಯವಿರುವ ನಮೂನೆಗಳಿಗೆ ಸಹಿ ಮಾಡಿ ಮೊತ್ತ ಪಡೆದುಕೊಳ್ಳವುದು. ದಾಖಲೆಗಳು ಎಲ್‍ಐಸಿ ಸಂಸ್ಧೆಯಿಂದ ನೀಡಲಾದ ಭರ್ತಿ ಮಾಡಿದ ನಮೂನೆ. ಚಾಲ್ತಿಯಲ್ಲಿರುವ ಬ್ಯಾಂಕ್ ಅಕೌಂಟ್ ಸಂಖ್ಯೆ, ಐಎಪ್‍ಎಸ್‍ಸಿ ಕೋಡ್ ಮತ್ತು ಆಧಾರ್ ಸಂಖ್ಯೆ ಅವಶ್ಯಕತೆ ಮೂಲ (0 ಬ್ಯಾಲನ್ಸ್ ಇದ್ದಲ್ಲಿ ಅದನ್ನು ತೆಗೆಸಬೇಕು) ಭಾಗ್ಯಲಕ್ಷ್ಮಿ ಮೂಲ ಬಾಂಟ್ ಲಗತ್ತಿಸುವುದು, ಮಗುವಿನ ಜನನ ಪ್ರಮಾಣ ಪತ್ರ ಲಗತ್ತಿಸುವುದು, ತಂದೆ-ತಾಯಿ ಪೋಷಕರ ಮಗುವಿನ ಹೆಸರು ಬದಲಾವಣೆಯಾಗಿದ್ದಲ್ಲಿ ಸಿಡಿಪಿಒ ಅವರಿಂದ ದೃಢೀಕರಣ…

Read More

ಮಡಿಕೇರಿ ಫೆ.17 NEWS DESK : ಪ್ರಧಾನಮಂತ್ರಿ ‘ವಿಶ್ವಕರ್ಮ’ ಯೋಜನೆ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಮಿತಿ ಸದಸ್ಯರಾದ ನಾಗೇಶ್ ಕುಂದಲ್ಪಾಡಿ, ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮದಡಿ ಇದುವರೆಗೆ ಜಿಲ್ಲೆಯ 103 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಷ್ಟು ಮಂದಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲಾಗಿದೆ, ಜೊತೆಗೆ ಪ್ರಮಾಣ ಪತ್ರ ವಿತರಿಸಲಾಗಿದೆ ಎಂಬ ಮಾಹಿತಿಯ ಪಟ್ಟಿ ಒದಗಿಸುವಂತೆ ಸಲಹೆ ನೀಡಿದರು. ಈ ಕುರಿತು ಮಾಹಿತಿ ನೀಡಿದ ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಶಿವಲಿಂಗಯ್ಯ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಟೈಲರ್, ಕಾರ್‍ಪೆಂಟರ್, ಬಾರ್ಬರ್ಸ್, ಲಾಂಡ್ರಿ ವರ್ಕರ್ಸ್, ಗಾರ್‍ಲೆಂಡ್ ಮೇಕರ್, ಡಾಲ್ ಆಂಡ್ ಟಾಯ್ ಮೇಕರ್, ಪೋಟರ್, ಗೋಲ್ಡ್‍ಸ್ಮಿತ್, ಮೆಟಲ್ ಸ್ಮಿತ್, ಬೋಟ್ ಮೇಕರ್, ಆರ್‍ಮೊರರ್, ಸ್ಟೋನ್ ಕಾರ್‍ವರ್, ಲಾಕ್‍ಸ್ಮಿತ್, ಕೊಬ್ಲರ್ ಮತ್ತಿತರ ಕಾರ್ಯಕ್ರಮದಡಿ ತರಬೇತಿ ನೀಡಲಾಗಿದೆ ಎಂದು ವಿವರಿಸಿದರು. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯಲ್ಲಿ 2075 ಅರ್ಜಿ…

Read More

ಮಡಿಕೇರಿ ಫೆ.17 NEWS DESK : ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ಇಬ್ಬರ ಮೇಲೆ ಕಾಡಾನೆ ದಾಳಿ ಮಾಡಿ ಗಂಭೀರ ಸ್ವರೂಪದಲ್ಲಿ ಗಾಯಗೊಳಿಸಿರುವ ಘಟನೆ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಪಂಚಾಯ್ತಿ ವ್ಯಾಪ್ತಿಯ ತೂಬನಕೊಲ್ಲಿ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟವೊಂದರ ಮೇಲ್ವಿಚಾರಕ ವಾಸುದೇವಯ್ಯ ಹಾಗೂ ಕಾರ್ಮಿಕ ಸಹರ್ ಅಲಿ ಕಾಡಾನೆ ದಾಳಿಯಿಂದ ಗಾಯಗೊಂಡು ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಭಾನುವಾರ ರಾತ್ರಿ ಕಾಫಿ ಪಲ್ಪಿಂಗ್ ಕೆಲಸ ಮುಗಿಸಿ ಬೈಕ್ ನಲ್ಲಿ ಇಬ್ಬರು ಕಾಫಿ ತೋಟದ ಮಾರ್ಗವಾಗಿ ತೆರಳುತ್ತಿದ್ದ ಸಂದರ್ಭ ಹಠಾತ್ತನೆ ಅಡ್ಡಲಾಗಿ ಕಾಡಾನೆ ದಾಳಿಗೆ ಮುಂದಾಗಿದೆ. ಕಾಡಾನೆ ದಾಳಿಯಿಂದ ಪಾರಾಗಲು ಬೈಕನ್ನು ಬಿಟ್ಟು ತೋಟದೊಳಗೆ ಓಡಿ ಹೋಗಲು ಯತ್ನಿಸಿದ್ದಾರೆ. ಈ ಸಂದರ್ಭ ಕಾಡಾನೆ ಹಿಂಬಾಲಿಸಿ ಇಬ್ಬರ ಮೇಲೂ ದಾಳಿ ಮಾಡಿದೆ. ವಾಸುದೇವಯ್ಯ ಅವರಿಗೆ ಕಾಲಿಗೆ ಗಂಭೀರ ಗಾಯ ಹಾಗೂ ಕಾರ್ಮಿಕ ಸಹರ್ ಅಲಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ವಲಯ ಅರಣ್ಯ ಅಧಿಕಾರಿ ಶಿವರಾಂ, ಉಪ ವಲಯ…

Read More

ಮಡಿಕೇರಿ ಫೆ.17 NEWS DESK : ಕೊಡಗು ಜಿಲ್ಲಾ ಬ್ಯುಟಿಶಿಯನ್ ಅಸೋಸಿಯೇಷನ್‍ನ ವಾರ್ಷಿಕ ಮಹಾಸಭೆಯ ಅಂಗವಾಗಿ ಫೆ.18(ಇಂದು) ರಂದು ನಗರದ ಜ.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿಯ ಮೈದಾನದಲ್ಲಿ ತಾಲ್ಲೂಕು ಸಂಘಟನೆಗಳ ಸದಸ್ಯರನ್ನು ಒಳಗೊಂಡಂತೆ ಕ್ರೀಡಾಕೂಟ ನಡೆಯಲಿದೆ ಎಂದು ಸಂಘಟನೆಯ ಗೌರವ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕ್ರೀಡಾಕೂಟ ಬೆಳಗ್ಗೆ 10.30 ಕ್ಕೆ ಆರಂಭಗೊಳ್ಳಲಿದ್ದು, ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ ಕೂಡಿಗೆ ಕ್ರೀಡಾಶಾಲೆಯ ನಿವೃತ್ತ ಪ್ರಾಂಶುಪಾಲರಾದ ಕುಂತಿ ಬೋಪಯ್ಯ, ನಗರಸಭಾ ಮಾಜಿ ಉಪಾಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಸವಿತಾ ರಾಕೇಶ್, ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ.ಎನ್.ಚಂದ್ರಮೋಹನ್ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟದಲ್ಲಿ ಥ್ರೋಬಾಲ್, ಶಾಟ್ ಪುಟ್ ಸೇರಿದಂತೆ ಮನರಂಜನಾ ಸ್ಪರ್ಧೆಗಳು ನಡೆಯಲಿದೆಯೆಂದು ಮಾಹಿತಿಯನ್ನಿತ್ತರು. ಸಂಘಟನೆಯ ಜಿಲ್ಲಾಧ್ಯಕ್ಷರಾದ ರತ್ನ ಯತೀಶ್ ಮಾತನಾಡಿ, ಕೊಡಗು ಜಿಲ್ಲಾ ಬ್ಯುಟಿಶಿಯನ್ ಅಸೋಸಿಯೇಶನ್‍ನ ವಾರ್ಷಿಕ ಮಹಾಸಭೆ ಫೆ.25 ರಂದು ನಗರದ ಸಮುದ್ರ ಹೋಟೆಲ್ ಸಭಾಂಗಣದಲ್ಲಿ ಬೆಳಗ್ಗೆ 10.30 ಗಮಟೆಗೆ ನಡೆಯಲಿದೆ. ಮುಖ್ಯ…

Read More

ಮಡಿಕೇರಿ ಫೆ.17 NEWS DESK : ಕೃಷಿ ಫಸಲು ನಷ್ಟ ಮತ್ತು ಜೀವಹಾನಿಗೆ ಕಾರಣವಾಗುತ್ತಿರುವ ಕಾಡಾನೆಗಳನ್ನು ಗುರುತಿಸಿ ಪುನರ್ವಸತಿ ಕಲ್ಪಿಸುವ ‘ಸಾಫ್ಟ್ ಏರಿಯಾ ರಿಲೀಸ್’ ಯೋಜನೆಯ ಅನುಷ್ಠಾನಕ್ಕೆ 2 ಸಾವಿರ ಹೆಕ್ಟೇರ್ ಪ್ರದೇಶವನ್ನು ಗುರುತಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಕಳೆದ ಮೂರು ದಶಕಗಳಿಂದ ಜಿಲ್ಲೆಯಾದ್ಯಂತ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಇವುಗಳ ನಿಯಂತ್ರಣಕ್ಕಾಗಿ ಕಳೆದ ತಿಂಗಳು ಮುಖ್ಯಮಂತ್ರಿಗಳು, ಅರಣ್ಯ ಸಚಿವರು, ಅರಣ್ಯ ಇಲಾಖಾ ಅಧಿಕಾರಿಗಳು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಉಪಸ್ಥಿತಿಯಲ್ಲಿ ನಡೆದ ವನ್ಯಜೀವಿ ಮಂಡಳಿ ಸಭೆಯಲ್ಲಿ, ಉಪಟಳ ನೀಡುವ ಕಾಡಾನೆಗಳನ್ನು ಸ್ಥಳಾಂತರಿಸುವ ಸಾಫ್ಟ್ ರಿಲೀಸ್ ಏರಿಯಾಕ್ಕೆ ಅಗತ್ಯವಾದ ಜಾಗವನ್ನು ಗುರುತಿಸಲು ಸರ್ಕಾರ ಸಮ್ಮತಿಯನ್ನು ನೀಡಿದೆ. ಗುರುತು ಮಾಡಿದ ಪುಂಡಾನೆಗಳ ಸ್ಥಳಾಂತರಕ್ಕೆ ಗುರುತಿಸುವ ಪ್ರದೇಶ ಅರಣ್ಯ ಪ್ರದೇಶವೇ ಆಗಿರಬಹುದು. ಆದರೆ, ಒಮ್ಮೆ ಜಾಗ ಗುರುತಿಸಲ್ಪಟ್ಟ ಬಳಿಕ, ಒಟ್ಟು ಪ್ರದೇಶದ ಸುತ್ತ ಕಾಡಾನೆಗಳು ಮರಳಿ ಬಾರದಂತೆ ಅಗತ್ಯ ರಕ್ಷಣಾ ವ್ಯವಸ್ಥೆಗಳನ್ನು ಅಳವಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.  ಕಾಡಾನೆ ಮತ್ತು ಮಾನವ ಸಂಘರ್ಷಕ್ಕೆ…

Read More

ಮಡಿಕೇರಿ ಫೆ.17 NEWS DESK : ಕೊಡಗು ಜಿಲ್ಲೆಗೆ ಕಳಸಪ್ರಾಯದಂತೆ ಇರುವ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶಕ್ತಿ ತುಂಬಬಲ್ಲ ಕೊಡಗು ವಿಶ್ವ ವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಹಾಗೂ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ವಿಜೇತರಾದ ಪಿ.ಪಿ.ಸುಕುಮಾರ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲೆಗೆ ಪ್ರತ್ಯೇಕವಾದ ವಿಶ್ವ ವಿದ್ಯಾಲಯ ಬೇಕು ಎನ್ನುವ ಚಿಂತಕರ, ಜ್ಞಾನದಾಹಿಗಳ ಹಾಗೂ ವಿದ್ಯಾರ್ಥಿಗಳ ಕನಸು ಸುಮಾರು ಎರಡು ವರ್ಷಗಳ ಹಿಂದೆ ನನಸಾಯಿತು. ಆದರೆ ಪ್ರಸ್ತುತ ರಾಜ್ಯದಲ್ಲಿರುವ ಸರ್ಕಾರ ವಿವಿಯನ್ನು ಮುಚ್ಚುವ ನಿರ್ಧಾರಕ್ಕೆ ಬಂದಿದ್ದು, ಇದು ಕೊಡಗಿನ ಜನರ ಭಾವನೆಗೆ ವಿರುದ್ಧವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವ ವಿದ್ಯಾಲಯವೆಂದರೆ ವಿದ್ವಾಂಸರ ಕೂಟವಿರುವ ಜ್ಞಾನದ ಒಡಲು, ಜಗತ್ತಿನ ಭೂಪಟದಲ್ಲಿ ವಿಶೇಷ ಸ್ಥಾನಮಾನ ಹೊಂದಿರುವ ಕೊಡಗು ಜಿಲ್ಲೆಯಲ್ಲಿ ಈ ವಿವಿಯನ್ನು ಉಳಿಸಿ ಬೆಳೆಸುವ ಅಗತ್ಯವಿತ್ತು. ಈ ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿಗಳಾಗಿದ್ದ ಬಸವರಾಜು ಬೊಮ್ಮಾಯಿ ಅವರು ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ…

Read More