ಲೇಖಕ: admin

ಮಡಿಕೇರಿ ಜ.14 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಆಚರಿಸಲಾಯಿತು. ನಗರದ ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ತಹಶೀಲ್ದಾರರಾದ ಶ್ರೀಧರ ಅವರು ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ತಹಶೀಲ್ದಾರರು, ಶಿವಯೋಗಿ ಸಿದ್ದರಾಮೇಶ್ವರರ ವೈಚಾರಿಕ ಪೂರ್ಣ ವಿಚಾರಗಳನ್ನು ಇಂದು ನಾವು ಅರಿಯುವ ಅಗತ್ಯವಿದೆ ಎಂದರು. ಸಿದ್ದರಾಮೇಶ್ವರರ ಜೀವನಾದರ್ಶಗಳನ್ನು ಜನರಿಗೆ ತಲುಪಿಸಬೇಕಿದೆ. ಸಿದ್ದರಾಮೇಶ್ವರರು ಜನಾಂಗವೊಂದಕ್ಕೆ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ಆದರ್ಶನೀಯರು ಎಂದು ನುಡಿದರು. ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರಾದ ಉಷಾರಾಣಿ ಅವರು ಮಾತನಾಡಿ ಶಿವಯೋಗಿ ಸಿದ್ದರಾಮೇಶ್ವರರು ಜಗತ್ತಿಗೆ ಬೇಕಾದ ಒಬ್ಬ ಶ್ರೇಷ್ಠ ಸಂತ. ಯುವ ಜನಾಂಗದವರು ಇವರ ಆದರ್ಶನೀಯ, ಕಾಯಕಪೂರ್ಣ ಜೀವನವನ್ನು ಪಾಲಿಸುವಂತಾಗಬೇಕು ಎಂದರು. ಸಿದ್ದರಾಮೇಶ್ವರರು ಕೆರೆ-ಕಟ್ಟೆಗಳನ್ನು ನಿರ್ಮಿಸಿ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ. ವಚನಗಳ ಮೂಲಕ ಸಮಾಜವನ್ನು ಅಂದೇ ತಿದ್ದುವ ಕಾರ್ಯವನ್ನೂ ಸಹ ಮಾಡಿದ್ದಾರೆ ಎಂದು ನುಡಿದರು. ಶಿವಯೋಗಿ ಸಿದ್ದರಾಮೇಶ್ವರ 12ನೇ ಶತಮಾನದಲ್ಲಿ…

Read More

ಮಡಿಕೇರಿ ಜ.14 NEWS DESK : ವಾಹನ ಚಲಾಯಿಸುವ ಪ್ರತಿಯೊಬ್ಬರಲ್ಲಿಯೂ ಸಹ ಸಂಚಾರ ನಿಯಮವನ್ನು ಪಾಲಿಸುತ್ತೇವೆ ಎಂಬ ದೃಢಸಂಕಲ್ಪ ಮಾಡಬೇಕು. ಇದರಿಂದ ಅಪಘಾತವನ್ನು ತಡೆಯಬಹುದು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಪ್ರಾದೇಶಿಕ ಸಾರಿಗೆ,ಕಾನೂನು ಸೇವಾ ಪ್ರಾಧಿಕಾರ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಡೆದ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸಂಭವಿಸುವ ವಿವಿಧ ರೀತಿಯ ಅಪಘಾತಗಳ ಬಗ್ಗೆ ಪಿಪಿಟಿ ಮೂಲಕ ಮಾಹಿತಿ ನೀಡಿ ಯುವ ಜನರಲ್ಲಿ  ಜಾಗೃತಿ ಮೂಡಿಸಿದರು.  ವಾಹನ ಸಂಚಾರ ಸಂಬಂಧಿಸಿದಂತೆ ಎಲ್ಲಾ ನಿಯಮಗಳು ಗೊತ್ತಿದೆ ಎಂದು ಉದಾಸೀನ ಮಾಡಬಾರದು. 18 ವರ್ಷದೊಳಗಿನವರು ಸಾರ್ವಜನಿಕ ಸ್ಥಳಗಳಲ್ಲಿ ವಾಹನ ಚಲಾಯಿಸಬಾರದು. 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಜೊತೆಗೆ ವಾಹನದ ವಿಮೆ ಇರಬೇಕು ಎಂದು ದಿನೇಶ್ ಕುಮಾರ್ ಅವರು ಸಲಹೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿ ವೀಲಿಂಗ್ ಸಂಚಾರ ಬೈಕ್ ಓಡಿಸುವುದು…

Read More

ಮಡಿಕೇರಿ ಜ.14 NEWS DESK : ಮಹಿಳಾ ಶಕ್ತಿಯನ್ನು ಒಗ್ಗೂಡಿಸುವ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸುವುದಾಗಿ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷೆ ಶಶಿಕಲಾ ತಿಳಿಸಿದ್ದಾರೆ. ಮಡಿಕೇರಿ ನಗರದಲ್ಲಿ ಮಹಿಳಾ ಸಂಘಟನೆಯನ್ನು ಬಲಪಡಿಸಲಾಗುವುದು, ಮಹಿಳೆಯರಿಗೆ ಹೆಚ್ಚು ಸಹಕಾರಿಯಾಗಿರುವ ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಮನವರಿಕೆ ಮಾಡಿಕೊಡಲಾಗುವುದು. ಪ್ರತಿ ವಾರ್ಡ್‍ಗಳಲ್ಲಿ ಮಹಿಳಾ ಕಾಂಗ್ರೆಸ್ ನ್ನು ಬಲಪಡಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ನನ್ನ ಪಕ್ಷ ನಿಷ್ಠೆಯನ್ನು ಗುರುತಿಸಿ ಮಹಿಳಾ ಕಾಂಗ್ರೆಸ್ ನ ರಾಜ್ಯಾಧ್ಯಕ್ಷರಾದ ಸೌಮ್ಯ ರೆಡ್ಡಿ, ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾದ ಪುಷ್ಪಲತಾ ಜಿ.ಆರ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ.ಹಂಸ ಹಾಗೂ ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ ಅವರು ನನಗೆ ಅಧ್ಯಕ್ಷ ಸ್ಥಾನವನ್ನು ನೀಡಿದ್ದು,…

Read More

ವಿರಾಜಪೇಟೆ ಜ.14 NEWS DESK : ವಿರಾಜಪೇಟೆಯ ಕೆದಮುಳ್ಳೂರು ಗ್ರಾಮದ ಅಯ್ಯಪ್ಪ ದೇವರ ಬನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಮಕರ ಜ್ಯೋತಿ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕೆದಮುಳ್ಳೂರು ಮಹಾದೇವರ ದೇವಾಸ್ಥಾನದ ಅರ್ಚಕರಾದ ರಾಧಕೃಷ್ಣ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮುಂಜಾನೆ ದೇವತಾ ಪ್ರಾರ್ಥನೆ ಹಾಗೂ ಶ್ರೀ ಮಹಾಗಣಪತಿ ಹೋಮ ನೆರವೇರಿತು. ನಂತರ ವಿಶೇಷ ಪ್ರಾರ್ಥನೆ ಹಾಗೂ ಚಾಮುಂಡಿ, ಗುಳಿಗ ದೈವ, ಅಯ್ಯಪ್ಪ ದೇವರ ವಾರ್ಷಿಕ ಪೂಜೆ ನಡೆಯಿತು. ಮಧ್ಯಾಹ್ನ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ಬಳಿಕ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು. ಈ ಸಂದರ್ಭ ಪಾಲೇಕಂಡ ಕುಟುಂಬಸ್ಥರು, ಸ್ಥಳೀಯ ಭಕ್ತಾದಿಗಳು ಹಾಜರಿದ್ದರು.

Read More

ಮಡಿಕೇರಿ ಜ.14 NEWS DESK : ನಗರದ ಬಾಲಕರ ಬಾಲಮಂದಿರಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಬಾಲಕರ ಬಾಲಮಂದಿರದಲ್ಲಿರುವ ಮಕ್ಕಳಿಂದ ವಿದ್ಯಾಭ್ಯಾಸ, ಊಟೋಪಚಾರ, ಬಿಸಿನೀರು ವ್ಯವಸ್ಥೆ, ಗ್ರಂಥಾಲಯ ಸೌಲಭ್ಯ ಮತ್ತಿತರ ಬಗ್ಗೆ ಮಾಹಿತಿ ಪಡೆದರು.  ಕುಂದುಕೊರತೆಗಳಿದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರುವಂತೆ ಸಲಹೆ ನೀಡಿದು. ಮೆನು ಪ್ರಕಾರ ಗುಣಮಟ್ಟದ ಆಹಾರ ಪೂರೈಸಬೇಕು. ಸ್ವಚ್ಛತೆಗೆ ಒತ್ತು ನೀಡಬೇಕು. ಪ್ರತೀ ತಿಂಗಳು ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಬೇಕು. ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಉತ್ತೇಜಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  ವಿದ್ಯಾರ್ಥಿಗಳು ಪ್ರತೀ ನಿತ್ಯ ದಿನಪತ್ರಿಕೆಯನ್ನು ಓದಬೇಕು. ಗ್ರಂಥಾಲಯ ಸೌಲಭ್ಯವನ್ನು ಪಡೆದು ಒಳ್ಳೆಯ ಪುಸ್ತಕಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದರು. ಪಾಠದ ಜೊತೆಗೆ ಆಟ ಇರಬೇಕು. ಹೆಚ್ಚು ಅಧ್ಯಯನ ಮಾಡುವುದರಿಂದ ಉನ್ನತ ವ್ಯಾಸಂಗ ಪಡೆಯಲು ಸಾಧ್ಯ. ಆ ನಿಟ್ಟಿನಲ್ಲಿ ಪ್ರಯತ್ನ ಇರಬೇಕು ಎಂದು ಜಿಲ್ಲಾಧಿಕಾರಿ ಅವರು ನುಡಿದರು.  ವಿದ್ಯಾರ್ಥಿಗಳು ಲಭ್ಯವಿರುವ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ವೃತ್ತಿಪರ ಶಿಕ್ಷಣ…

Read More

ಮಡಿಕೇರಿ ಜ.14 NEWS DESK : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳಲ್ಲಿ ಕಾಡಾನೆ ಸೇರಿದಂತೆ ವನ್ಯಜೀವಿಗÀಳ ಉಪಟಳ ಮಿತಿ ಮೀರಿದೆ. ಕೃಷಿ ಫಸಲನ್ನು ಸಂರಕ್ಷಿಸಿಕೊಳ್ಳಲು ಮತ್ತು ಜೀವ ಉಳಿಸಿಕೊಳ್ಳಲು ಬೆಳೆಗಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಈ ಹಿಂದೆ ನಿರ್ಮಿಸುತ್ತಿದ್ದ ‘ಕಂದಕ’ಗಳು ನಂತರ ಬಂದ ‘ಸೌರಬೇಲಿ’ ಯೋಜನೆಗಳೆಲ್ಲವು ಇಂದು ವಿಫಲವಾಗಿದೆ. ಪ್ರಸ್ತುತ ಜಾರಿಗೆ ತಂದಿರುವ ‘ರೈಲ್ವೆ ಹಳಿಗಳ ಬೇಲಿ’ ಒಂದಷ್ಟು ಪ್ರಯೋಜನಕಾರಿಯಾಗಿದ್ದರು, ಇದು ಬೆಟ್ಟಗುಡ್ಡದ ಪ್ರದೇಶಗಳಲ್ಲಿ ಪ್ರಯೋಜನಕ್ಕೆ ಬಾರದಾಗಿದೆ. 2015 ರಿಂದ ಈಚೆಗೆ ಬರಪೊಳೆÉ ಮತ್ತು ಬ್ರಹ್ಮಗಿರಿ ಅರಣ್ಯ ಪ್ರದೇಶದ ಆನೆಗಳು ಬೇಗೂರು, ಚೀನಿವಾಡ, ಕೊಂಗಣ, ಬಿ.ಶೆಟ್ಟಿಗೇರಿ, ಕುಟ್ಟಂದಿ, ವಿ.ಬಾಡಗ, ಈಚೂರು, ಕುಂದ, ಹಳ್ಳ್ಳಿಗಟ್ಟು, ಹುದೂರು ವ್ಯಾಪ್ತಿಯಲ್ಲಿ ಅತಿಯಾಗಿ ಉಪಟಳ ನೀಡುತ್ತಿವೆ. ಕಾಡಾನೆಗಳ ಹಿಂಡು ಭತ್ತದ ಕೃಷಿಯ ಮೇಲೆ ದಾಳಿ ನಡೆಸುತ್ತಾ ಬಂದಿರುವುದಲ್ಲದೆ, ಕಾಫಿ, ಕರಿಮೆಣಸು, ಅಡಿಕೆ, ಬಾಳೆ ಕೃಷಿಯನ್ನೂ ನಾಶ ಮಾಡಿದೆ. ನಾಗರಹೊಳೆ ಅರಣ್ಯ ಪ್ರದೇಶದಲ್ಲೇ ಅತೀ ಹೆಚ್ಚು 146 ಹುಲಿಗಳಿದ್ದು, ಈ…

Read More

ಮಡಿಕೇರಿ ಜ.14 NEWS DESK : ಸಾಧಕರು ಮತ್ತು ಸೇವಾ ಕಾಯ೯ಗಳ ಯಶಸ್ಸಿನ ಕಥೆಗಳು ರೋಟರಿಯಲ್ಲಿ ದಾಖಲೆಯಾಗಿಸಬೇಕು. ಈ ಮೂಲಕ ಇಂಥ ಕಥೆಗಳು ಮತ್ತಷ್ಟು ಸಮಾಜಸೇವೆಗೆ ಜನರಿಗೆ ಪ್ರೇರಣೆಯಾಗಬೇಕೆಂದು ರೋಟರಿ ಜಿಲ್ಲೆ 3181 ರ ಗವನ೯ರ್ ಪಿ.ಕೆ.ರಾಮಕೃಷ್ಣ ಕರೆ ನೀಡಿದ್ದಾರೆ.  ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಸಾಧಕರನ್ನು ಸನ್ಮಾನಿಸಿ ಮಾತನಾಡಿದ ರಾಮಕೖಷ್ಣ, ರೋಟರಿ ಸಂಸ್ಥೆಗಳು ಪ್ರತೀ ವಷ೯ ಸಾಕಷ್ಟು ಸೇವಾ ಕಾಯ೯ಯೋಜನೆಗಳ ಮೂಲಕ ನೂರಾರು ಜನರಿಗೆ ಜೀವನಾಧಾರ ಕಲ್ಪಿಸುತ್ತಿವೆ. ಇಂಥ ಯೋಜನೆಗಳನ್ನು ಯಶಸ್ವಿ ಕಥೆಯ ದಾಖಲೆಯಾಸಿದ್ದೇ ಆದಲ್ಲಿ ಮತ್ತಷ್ಟು ಮಂದಿಗೆ ಇದರಿಂದ ಸಾಮಾಜಿಕ ಸೇವಾ ಕಾಯ೯ಕ್ಕೆ ಸ್ಪೂತಿ೯ ದೊರಕುವಂತಾಗುತ್ತದೆ ಎಂದು ಕರೆ ನೀಡಿದರು. ಭಾರತದಲ್ಲಿ ಪ್ರತೀ ವಷ೯ವೂ 30 ಸಾವಿರ ಕೋಟಿ ರು. ಗಳಷ್ಟು ಸಿ.ಎಸ್. ಆರ್ ಫಂಡ್ ವಿವಿಧ ಸಂಸ್ಥೆಗಳಿಂದ ಸಾಮಾಜಿಕ ಸೇವಾ ಕಾಯ೯ಗಳಿಗೆ ಮೀಸಲಾಗಿದೆ. ಇಂಥ ಆಥಿ೯ಕ ಮೂಲವನ್ನು ರೋಟರಿ ಸಂಸ್ಥೆಗಳು ಸದುಪಯೋಗ ಪಡಿಸಿಕೊಳ್ಳುವಂತೆಯೂ ಅವರು ಸಲಹೆ ನೀಡಿದರು. ರೋಟರಿ…

Read More

ಮಡಿಕೇರಿ ಜ.14 NEWS DESK : ಅಂತರರಾಷ್ಟ್ರೀಯ ಖ್ಯಾತಿಯ ಲೇಖಕಿ ಸರಿತಾ ಮಂದಣ್ಣ ಅವರು ಮಡಿಕೇರಿಯ ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈಗಾಗಲೇ 14 ಭಾಷೆಗಳಿಗೆ ಅನುವಾದಗೊಂಡಿರುವ ಸರಿತಾ ಮಂದಣ್ಣ ಅವರ ಪ್ರಸಿದ್ಧ ಕಥಾಸಂಕಲನ ಟೈಗರ್ ಹಿಲ್ ಬಳಿಕ, ಇದೀಗ ಲೇಖಕಿಯವರು ದಿ ಬೋಲ್ಡ್ ಕ್ರೋನಿಕಲ್ಸ್ ಸರಣಿಯಡಿಯಲ್ಲಿ ದಿ ವಾರ್ ಎಲಿಫಂಟ್ಸ್ ಆಫ್ ಟೈಗರ್ಸ್ ಹಾಗೂ ಸೀಕ್ರೆಟ್ ಅಮಾಂಗ್ ಸ್ಟಾರ್ಸ್ ಎಂಬ ಎರಡು ಮಕ್ಕಳ ಕಥಾಸಂಕಲನಗಳನ್ನು ಪ್ರಕಟಿಸಿದ್ದಾರೆ. ಈ ಕಥಾ ಸರಣಿಗಳು ಭಾರತದ 2,500 ವರ್ಷಗಳ ಇತಿಹಾಸವನ್ನು ಪ್ರತಿಬಿಂಬಿಸುತ್ತವೆ. ಇತಿಹಾಸವನ್ನು ತಿಳಿದುಕೊಂಡು ಅದನ್ನು ಸರಳವಾಗಿ ಕಥೆಯ ರೂಪದಲ್ಲಿ ಹೇಗೆ ಬರೆಯಬೇಕು ಎಂಬ ಕುರಿತು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಲೇಖಕಿ ಸರಿತಾ ಮಂದಣ್ಣ, “ಇತಿಹಾಸ ಎಂದರೆ ಕೇವಲ ವರ್ಷಗಳು ಮತ್ತು ದಿನಾಂಕಗಳು ಮಾತ್ರವಲ್ಲ. ಆಗಿನ ಕಾಲಘಟ್ಟವನ್ನು ಮನಗಂಡು ಅದರ ಪ್ರಭಾವವನ್ನು ಅರಿಯುವುದೇ ನಿಜವಾದ ಇತಿಹಾಸ ಅಧ್ಯಯನ” ಎಂದು ಹೇಳಿದರು. ಇಂದಿನ ಮಕ್ಕಳು ಹೆಚ್ಚಿನ ಆಸಕ್ತಿಯಿಂದ ಅಧ್ಯಯನ ಮಾಡಿದರೆ, ಭವಿಷ್ಯದಲ್ಲಿ ಪ್ರತಿಯೊಬ್ಬರೂ…

Read More

ಮಡಿಕೇರಿ ಜ.14 NEWS DESK :  ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಕೊಡಗು ಜಿಲ್ಲೆಯ ವೈದ್ಯಾಧಿಕಾರಿಗಳಿಗೆ ತರಬೇತಿ ನೀಡಲಾಯಿತು. ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆರೋಗ್ಯ ಇಲಾಖೆಯ ಜಿಲ್ಲಾ ನಿಗ್ರಹದಳ ಅಧಿಕಾರಿ ಮತ್ತು ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ.ಆನಂದ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋದಕ ಆಸ್ಪತ್ರೆ ಯ ಸಹಾಯಕ ಪ್ರಾಧ್ಯಾಪಕರಾದ ಡಾ. ಮಹೇಶ್  ಹವಾಮಾನ ಬದಲಾವಣೆ ಉಷ್ಣ ಅಲೆಗಳು ಮತ್ತು ಎಚ್ಚರಿಕೆಗಳು, ಉಷ್ಣ ಒತ್ತಡದ ವರ್ಗೀಕರಣ ಕ್ಲಿನಿಕಲ್ ಲಕ್ಷಣಗಳು ಮತ್ತು ಚಿಕಿತ್ಸೆಗಳು, ಶಾಖದ ಬದಲಿಗೆ ಲಕ್ಷಣಗಳು ಮತ್ತು ಕಾರಣಗಳು, ಟ್ರೀಟ್ಮೆಂಟ್ ಪ್ರೋಟೋಕಾಲ್, ಹೀಟ್ ಸ್ಟ್ರೋಕ್ , ದುರ್ಬಲ ಗುಂಪು ( ಗರ್ಭಿಣಿ ಬಾಣಂತಿ ಮಕ್ಕಳು ವಯೋ ವೃದ್ಧರು ), ತುರ್ತು ಪರಿಸ್ಥಿತಿ ಮತ್ತು ಅನಿರೀಕ್ಷಿತ ಘಟನೆಗಳ ತುರ್ತು ಸಿದ್ಧತೆ, ಬೇಸಿಗೆ ಪೂರ್ವ, ಬೇಸಿಗೆ ಸಮಯ,…

Read More

ಮಡಿಕೇರಿ ಜ.14 NEWS DESK :  ಪ್ರಾಚೀನ ಕಾಲದಿಂದಲೂ ನಮ್ಮ ಕಲೆ, ಸಂಸ್ಕೃತಿ ಸಂರಕ್ಷಣೆಯಲ್ಲಿ ದೇವಾಲಯಗಳು ಪ್ರಮುಖ ಪಾತ್ರ ವಹಿಸಿದ್ದು, ಹೀಗಾಗಿಯೇ ಭಾರತದಲ್ಲಿ ಆಲಯಗಳು ಕಲೋಪಾಸನ ಕೇಂದ್ರಗಳಾಗಿಯೂ ಕಂಗೊಳಿಸಿವೆ ಎಂದು ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಹೇಳಿದ್ದಾರೆ. ದೇವರಕೊಲ್ಲಿಯ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಉದ್ದೇಶಿತ ಶ್ರೀ ಚಾಮುಂಡೇಶ್ವರಿ ಕಲಾಮಂದಿರಕ್ಕೆ ಭೂಮಿಪೂಜೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದೇಶಗಳಲ್ಲಿ ನೆಲಸಿರುವ ಭಾರತೀಯರು ತಮ್ಮ ದೇಶದ ಸಂಸ್ಕೃತಿ, ಆಚಾರ ವಿಚಾರಗಳನ್ನು ಮಕ್ಕಳಿಗೆ ಕಲಿಸುವಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಾರೆ. ವಿದೇಶದ ನೆಲದಲ್ಲಿ ಇರುವವರಿಗೆ ಭಾರತದ ಸಂಸ್ಕೃತಿಯ ಮಹತ್ವದ ಅರಿವಾಗುತ್ತದೆ. ಭಾರತದಲ್ಲಿ ಭಜನೆ, ಹಾಡು, ನೖತ್ಯ, ಯೋಗ, ಧ್ಯಾನಗಳ ಮೂಲಕ ಸಾಂಸ್ಕೃತಿಕ ಕೇಂದ್ರಗಳಾಗಿಯೂ ದೈವಿಕ ಕೇಂದ್ರಗಳು ರೂಪುಗೊಂಡಿವೆ ಎಂದರಲ್ಲದೇ, ಮಕ್ಕಳಿಗೆ ಧಾಮಿ೯ಕ ಶಿಕ್ಷಣ ಕಲಿಸುವಲ್ಲಿ ದೇವಾಲಯಗಳ ಕಲಾಮಂದಿರಗಳು ಪ್ರಮುಖ ಪಾತ್ರ ವಹಿಸಬೇಕೆಂದು ಸಲಹೆ ನೀಡಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಅಧ್ಯಕ್ಷರಾಗಿದ್ದ ಕೇಶವಪ್ರಸಾದ್ ಮುಳಿಯ ದೇವಾಲಯದ ಮೂಲಕ ಧಾಮಿ೯ಕ ಶಿಕ್ಷಣದಂಥ ವಿನೂತನ ಕಾಯ೯ಕ್ರಮ ಆಯೋಜಿಸಿದ್ದನ್ನು…

Read More