ಸೋಮವಾರಪೇಟೆ ಫೆ.15 NEWS DESK : ಜಾನಪದ ಪ್ರತಿಭೆಗಳು ಎಲೆಮರೆ ಕಾಯಿಯಂತಾಗಬಾರದು ಅವರ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಡಾ.ಮಂತರ್ಗೌಡ ಅಭಿಪ್ರಾಯಿಸಿದರು. ಕೊಡಗು ಜಿಲ್ಲಾ ಜಾನಪದ ಪರಿಷತ್ ಸೋಮವಾರಪೇಟೆ ಘಟಕ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಯಡೂರು ಗ್ರಾಮದ ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಜಾನಪದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಜಾನಪದ ಕಲೆ ಮತ್ತು ಕ್ರೀಡೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಗ್ರಾಮೀಣ ಹಾಗು ನಗರ ಪ್ರದೇಶಗಳಲ್ಲಿ ಜಾನಪದ ಕ್ರೀಡಾಕೂಟಗಳು ನಡೆಯುತ್ತಿರಬೇಕು. ಪ್ರತಿಯೊಬ್ಬರು ಭಾಗವಹಿಸಬೇಕು ಎಂದರು. ಗ್ರಾಮೀಣ ಭಾಗದಲ್ಲಿ ಮಾತ್ರ ಜಾನಪದ ಕಲೆ ಮತ್ತು ಕ್ರೀಡೆಯಲ್ಲಿ ಮಕ್ಕಳು ತೊಡಗಿಸಿಕೊಳ್ಳುತ್ತಿದ್ದಾರೆ. ಪ್ರತಿ ಶಾಲಾ ಕಾಲೇಜಿನಲ್ಲಿ ಜಾನಪದ ಕ್ರೀಡಾಕೂಟಗಳನ್ನು ಅಯೋಜಿಸಬೇಕು ಎಂದು ಹೇಳಿದರು. ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಅನಂತಶಯನ ಮಾತನಾಡಿ, ಜಾನಪದ ಸೊಗಡಿನ ಆಟಗಳು ಜನ ಮಾನಸದಿಂದ ದೂರ ಸರಿಯದಂತೆ ಮಾಡುವುದೆ ಜಾನಪದ ಪರಿಷತ್ನ ಕಾಯಕವಾಗಿದೆ ಎಂದು ಹೇಳಿದರು. ಜಾನಪದ ಆಟಗಳಲ್ಲಿ…
ಲೇಖಕ: admin
ಮಡಿಕೇರಿ ಫೆ.15 NEWS DESK : ನಗರದ ‘ಅಂಬೇಡ್ಕರ್ ಭವನ’ದ ಕುರಿತು ಅನಗತ್ಯ ಗೊಂದಲಗಳನ್ನು ಹುಟ್ಟು ಹಾಕಿ, ಹೋರಾಟಕ್ಕೆ ಮುಂದಾಗುವುದಕ್ಕೆ ಬದಲಾಗಿ ಅದನ್ನು ಕೈಬಿಟ್ಟು ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ದಲಿತ ಮುಖಂಡರು ಮುಂದಾಗಬೇಕೆಂದು ಮೂರ್ನಾಡಿನ ಜೈ ಭೀಮ್ ಯುವಕ ಸಂಘದ ಅಧ್ಯಕ್ಷರಾದ ಈರ ಸುಬ್ಬಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಅಂಬೇಡ್ಕರ್ ಭವನಕ್ಕೆ ಸಮಬಂಧಿಸಿದಂತೆ ಇತ್ತೀಚೆಗೆ ನಿರಾಧಾರ ಆರೋಪಗಳನ್ನು ಮಾಡಲಾಗುತ್ತಿದೆ. ಭವನವನ್ನು ಉತ್ತಮವಾಗಿ ನಿರ್ವಹಣೆ ಮಾಡಿಕೊಂಡು ಬರಲಾಗುತ್ತಿದ್ದು, ಸಮುದಾಯ ಬಾಂಧವರ ಕಾರ್ಯಕ್ರಮಗಳಿಗೆ, ಅಂಬೇಡ್ಕರ್ ಕುರಿತ ಸರ್ಕಾರಿ ಕಾರ್ಯಕ್ರಮಗಳಿಗೆ ಉಚಿತವಾಗಿ ಒದಗಿಸಲಾಗುತ್ತಿದೆ ಎಂದು ಹೇಳಿದರು. ಅಂಬೇಡ್ಕರ್ ಭವನ ನಿರ್ಮಾಣದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಹೆಚ್.ಎಂ.ನಂದಕುಮಾರ್ ಅವರ ಪಾತ್ರ ಮಹತ್ವದ್ದೆಂದು ತಿಳಿಸಿದ ಈರ ಸುಬ್ಬಯ್ಯ, ಉತ್ತಮವಾಗಿ ನಡೆಯುತ್ತಿರುವ ಅಂಬೇಡ್ಕರ್ ಭವನದ ಕುರಿತು ಗೊಂದಲದ ಹೇಳಿಕೆ ನೀಡುವ ಬದಲಾಗಿ, ವಿವಿಧೆಡೆಗಳಲ್ಲಿ ನಿರ್ವಹಣೆ ಇಲ್ಲದೆ ಹಾಳಾಗುತ್ತಿರುವ ಭವನಗಳ ನಿರ್ವಹಣೆಗೆ ಆರೋಪ ಮಾಡುವವರು ಮುಂದಾದಲ್ಲಿ ತಮ್ಮ ಬೆಂಬಲವೂ ಇರುವುದಾಗಿ ತಿಳಿಸಿದರು. ಮೂರ್ನಾಡು ಜೈ ಭೀಮ್ ಯುವಕ…
ಸಿದ್ದಾಪುರ ಫೆ.15 NEWS DESK : ಅಮ್ಮತ್ತಿಯ ಶ್ರೀ ಚಾಮುಂಡೇಶ್ವರಿ ಪಾಷಣ ಮೂರ್ತಿ ದೇವಾಲಯದ 25ನೇ ವಾರ್ಷಿಕೋತ್ಸವ ಹಾಗೂ ನೇಮೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದಲ್ಲಿ ದೈವ ದೇವರಿಗೆ ವಾದ್ಯದೊಂದಿಗೆ ಅಭಿಷೇಕ ಪೂಜೆ, ಅಲಂಕಾರ ಪೂಜೆ, ನಾಗ ಪೂಜೆ, ನಾಗಹೋಮ, ಅಶ್ಲೇಷ ಬಲಿ, ದುರ್ಗಾ ಪೂಜೆ, ದುರ್ಗ ಹೋಮ ನಡೆಯಿತು. ರಾತ್ರಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ನಂತರ ಪಂಜುರ್ಲಿ, ಪಾಷಾಣ ಮೂರ್ತಿ ಹಾಗೂ ಗುಳಿಗ ದೇವರುಗಳ ತೆರೆಮೋತ್ಸವ ಬೆಳಗಿನವರೆಗೆ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ರಾತ್ರಿ ಹಾಗೂ ಹಗಲು ದೇವಾಲಯದ ಆಡಳಿತ ಮಂಡಳಿ ವತಿಯಿಂದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ವಾರ್ಷಿಕೋತ್ಸವ ಅಂಗವಾಗಿ ದೇವಾಲಯವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಬಾನಂಗಲದಲ್ಲಿ ಆಕರ್ಷಕ ಪಟಾಕಿಗಳ ಶಬ್ದ ಉತ್ಸವ ಕ್ಕೆ ಮೆರಗು ತಂದಿತು. ಜಿಲ್ಲೆಯ ವಿವಿಧೆಡೆಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ತೆರೆ ಮಹೋತ್ಸವಕ್ಕೆ ಆಗಮಿಸಿದ್ದರು. ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿಯ ಪ್ರಮುಖರಾದ ಕುಟ್ಟಂಡ ಸರಸ್ವತಿ ಹಾಗೂ ಲೋಕೇಶ್ ಮುತ್ತಪ್ಪ. ಖಜಾಂಜಿ…
ಸುಂಟಿಕೊಪ್ಪ ಫೆ.15 NEWS DESK : ಕೊಡಗರಹಳ್ಳಿ ಸಮೀಪದ ಜೋಡಿ ಕೆರೆಯಲ್ಲಿರುವ ಹಿಂದೂ ರುದ್ರ ಭೂಮಿಯಲ್ಲಿ ಅಳವಡಿಸಲಾಗಿರುವ ನೂತನ ಸಿಲಿಕಾನ್ ಚೇಂಬರ್ ಅನ್ನು ಲೋಕಾರ್ಪಣೆಗೊಳಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಸೋಮವಾರಪೇಟೆ ರೋಟರಿ ಸಂಸ್ಥೆಯ ಸಹಯೋಗದೊಂದಿಗೆ ಈ ಸಿಲಿಕಾನ್ ಚೇಂಬರನ್ನು ನಿರ್ಮಿಸಲಾಗಿದೆ. ಈ ಸಂದರ್ಭ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುಡ್ಡಹೊಸೂರು ವಲಯದ ಮೇಲ್ವಿಚಾರಕ ಯತೀಶ್, ಯೋಜನೆಯ ವತಿಯಿಂದ ಗ್ರಾಮದ ಅಭಿವೃದ್ಧಿಯ ಲ್ಲಿ ತೊಡಗಿಸಿಕೊಂಡು ಸಾಮಾಜಿಕ ಕಾರ್ಯ, ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹಾರಂಗಿ ಮತ್ತು ಕೊಡಗರಹಳ್ಳಿಯಲ್ಲಿ ಸಿಲಿಕಾನ್ ಚೇಂಬರ್ ನಿರ್ಮಾಣಗೊಳಿಸಲಾಗಿದ್ದು, 7ನೇ ಹೊಸಕೋಟೆ ಮತ್ತು ಕಂಬಿಬಾಣೆ ಕಾರ್ಯಕ್ಷೇತ್ರಗಳಲ್ಲಿ ಬೇಡಿಕೆಯಿದ್ದು ಇದನ್ನು ಪರಿಶೀಲಿಸಲಾಗುವುದು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸಿಲಿಕಾನ್ ಚೇಂಬರ್ ಅಳವಡಿಕೆ ಯಲ್ಲಿ ಶ್ರಮಿಸಿದ ಯತೀಶ್, ಯೋಜನೆಯ ಸೇವಾಪ್ರತಿನಿಧಿ ಹೇಮಾವತಿ, ಬಾಬುಪೂಜಾರಿ, ಧನಂಜಯ ಮತ್ತು ಸುಮಿತ್ರ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪಿಡಿಒ ರವೀಶ್, ಕಾಫಿ ಬೆಳೆಗಾರರಾದ ಪಿ.ಹರಿಶ್ಚಂದ್ರ ಪೈ, ಪಿ.ಕೆ.ಜಗದೀಶ್, ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ…
ಮಡಿಕೇರಿ ಫೆ.15 NEWS DESK : ಕೊಡಗು ವಿಶ್ವ ವಿದ್ಯಾಲಯವನ್ನು ಮುಚ್ಚುವ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ವಿರಾಜಪೇಟೆ ಬಿಜೆಪಿ ಮಂಡಲ ತೀವ್ರ ವಿರೋಧ ವ್ಯಕ್ತಪಡಿಸಿದೆ. ರಾಜ್ಯದ ಭವಿಷ್ಯದ ದೃಷ್ಟಿಯಿಂದ ಶಿಕ್ಷಣಕ್ಕೆ ಆದ್ಯತೆ ನೀಡುವಂತೆ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು, ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಹಿಂದಿನ ಬಿಜೆಪಿ ಸರ್ಕಾರ ಜಿಲ್ಲೆಗೊಂದು ವಿಶ್ವ ವಿದ್ಯಾಲಯ ಎಂಬ ಗುರಿಯೊಂದಿಗೆ ಕೊಡಗು ಸೇರಿದಂತೆ 9 ಜಿಲ್ಲೆಗಳಲ್ಲಿ ನೂತನ ವಿವಿಯನ್ನು ಸ್ಥಾಪಿಸಿತು. ಆದರೆ ಇದೀಗ ರಾಜ್ಯವನ್ನು ಆಳುತ್ತಿರುವ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯವನ್ನು ಕಡೆಗಣಿಸಿ ವಿವಿಗಳನ್ನು ಮುಚ್ಚುವ ನಿರ್ಧಾರ ಮಾಡಿರುವುದು ಖಂಡನೀಯವೆಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅತ್ಯಂತ ಮಹತ್ವಾಕಾಂಕ್ಷೆಯಿಂದ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಿಂದಿನ ಬಿಜೆಪಿ ಸರ್ಕಾರ ನೂತನ ವಿವಿಯನ್ನು ಸ್ಥಾಪಿಸಿತು. ಈ ಹಂತದಲ್ಲೇ ವಿಧಾನಸಭಾ ಚುನಾವಣೆಯೂ ಘೋಷಣೆಯಾದ ಹಿನ್ನೆಲೆ ವಿವಿಗಳಿಗೆ ನೀಡಬೇಕಾದ ಅನುದಾನ ಮತ್ತು ಸೌಲಭ್ಯಗಳನ್ನು ಪೂರೈಸಲು ಸಾಧ್ಯವಾಗಿರಲಿಲ್ಲ. ಒಂದು ವೇಳೆ ರಾಜ್ಯದಲ್ಲಿ ಮತ್ತೆ…
ಪೊನ್ನಂಪೇಟೆ ಫೆ.15 NEWS DESK : ಚೇತನ ಫೌಂಡೇಶನ್ ಕರ್ನಾಟಕ ಇವರ ವತಿಯಿಂದ ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳ ಶೈಕ್ಷಣಿಕ ಉತ್ತೇಜನಕ್ಕಾಗಿ ಶ್ರಮಿಸಿದವರಿಗೆ ನೀಡಲಾಗುವ ‘ಶ್ರೀಕೃಷ್ಣರಾಜ ಒಡೆಯರ್ ಸದ್ಭಾವನಾ’ ಪ್ರಶಸ್ತಿಗೆ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗುಂಡಿಕೆರೆ ಕೊಟ್ಟೋಳಿ ಗ್ರಾಮದ ಮೀತಲತಂಡ ಎಂ. ಇಸ್ಮಾಯಿಲ್ ಆಯ್ಕೆಯಾಗಿದ್ದಾರೆ. ಚೇತನ ಫೌಂಡೇಶನ್ ಕರ್ನಾಟಕದ ಆಶ್ರಯದಲ್ಲಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ.) ಕರ್ನಾಟಕ ಇವರ ಸಹಯೋಗದಲ್ಲಿ ಇದೇ ತಿಂಗಳ 16ರಂದು ಭಾನುವಾರ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಭವನದ ಸಭಾಂಗಣದಲ್ಲಿ ನಡೆಯಲಿರುವ ‘ಮೈಸೂರು ನುಡಿ ಸಡಗರ’ ಕಾರ್ಯಕ್ರಮದಲ್ಲಿ ಇಸ್ಮಾಯಿಲ್ ಅವರಿಗೆ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು. ವಿರಾಜಪೇಟೆ ತಾಲೂಕಿನ ಗುಂಡಿಕೆರೆಯಲ್ಲಿರುವ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತಿರುವ ಇಸ್ಮಾಯಿಲ್, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಿವಿಧ ಯೋಜನೆಗಳನ್ನು ರೂಪಿಸಿ ಅದನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು…
ಮಡಿಕೇರಿ ಫೆ.15 NEWS DESK : ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ನಾಗದೇವರ ನೂತನ ಆಲಯ ಮತ್ತು ಪುನರ್ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ನಾಗ ದರ್ಶನ ಫೆ.22 ಮತ್ತು 23 ರಂದು ನಡೆಯಲಿದೆ. ಕ್ಷೇತ್ರ ತಂತ್ರಿಗಳಾದ ಕೆ.ಶ್ರೀಕೃಷ್ಣ ಉಪಾಧ್ಯ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಫೆ.22 ರಂದು ಸಂಜೆ 6 ಗಂಟೆಯಿಂದ ಗುರುಗಣಪತಿ ಪೂಜೆ, ಪುಣ್ಯಾಹ ವಾಚನ, ಮಹಾ ಸಂಕಲ್ಪ, ಮಾತೃಕಾ ಪೂಜೆ, ಋತ್ವಿಗ್ವರಣೆ, ಪ್ರಸಾದ ಪ್ರತಿಗ್ರಹ, ಸ್ಥಾನ ಶುದ್ದಿ, ಪ್ರಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತುಪೂಜೆ, ವಾಸ್ತು ಬಲಿ, ಆಶ್ಲೇಷ ಬಲಿ, ಮಹಾಮಂಗಳಾರತಿ ಜರುಗಲಿದೆ. ಫೆ.23 ರಂದು ಬೆಳಿಗ್ಗೆ 7.30 ರಿಂದ ಗುರುಗಣಪತಿ ಪೂಜೆ, ಗಣಪತಿ ಹೋಮ, 8.36ಕ್ಕೆ ನಾಗದೇವರ ಪ್ರತಿಷ್ಠೆ, ಪ್ರತಿಷ್ಠಾ ಹೋಮ, ಶಾಂತಿಹೋಮ, ಕಲಶಾಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ ನಡೆಯಲಿದ್ದು, 11.30ಕ್ಕೆ ಉಡುಪಿಯ ವೇ.ಬ್ರ.ಶ್ರೀ ಎ.ಸುಬ್ರಮಣ್ಯ ಮಧ್ಯಸ್ಥ ನಾಗಪಾತ್ರಿ ನಾಗದರ್ಶನ ಸೇವೆ ನಡೆಸಿಕೊಡಲಿದ್ದಾರೆ. ನಂತರ ಆಶೀರ್ವಾದ, ತೀರ್ಥಪ್ರಸಾದ ವಿತರಣೆ ಹಾಗೂ…
ವಿರಾಜಪೇಟೆ ಫೆ.15 NEWS DESK : ವಿರಾಜಪೇಟೆಯ ಆದಿಶಕ್ತಿ ಟ್ಯುಟೋರಿಯಲ್ ನ ಐದನೇ ವರ್ಷದ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು. ಸಂಸ್ಥೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಟ್ಯುಟೋರಿಯಲ್ ನ ಅಧ್ಯಕ್ಷ ಅರುಣ್ ಕುಮಾರ್ ಕಳೆದ ಸಾಲಿನಂತೆ ಈ ಸಾಲಿನಲ್ಲಿಯೂ ಶೇ.100ಷ್ಟು ಫಲಿತಾಂಶ ಬಂದು ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮುಖ್ಯ ಅತಿಥಿಗಳಾದ ಆರ್.ಕೆ.ಸಲಾಂ ಮಾತನಾಡಿ, ವಿದ್ಯೆ ಮಹತ್ವದ್ದಾಗಿದೆ. ವಿದ್ಯೆ ಇಲ್ಲದಿದ್ದರೆ ಮುಂದಿನ ಜೀವನ ದುಸ್ತರವಾಗಲಿದೆ. ಮುಂದೆ ನಾವು ಹೆಚ್ಚಿನ ವಿದ್ಯಾಭ್ಯಾಸ ಮಾಡಬೇಕಿತ್ತು ಎಂದು ಕೊರಗುವ ಬದಲು ಇಂದೇ ಚೆನ್ನಾಗಿ ಓದಿ ಮುಂದಕ್ಕೆ ಹೋಗುವ ಸಂಕಲ್ಪವನ್ನು ಮಾಡಿ. ಯಾರು ವಿದ್ಯೆಯನ್ನು ಕಡೆಗಣಿಸದೆ ಮುಂದೆ ಬರುವ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದು ಜೀವನವನ್ನು ಯಶಸ್ವಿಯಾಗಿ ನಡೆಸುವಂತಾಗಲಿ ಎಂದು ಕರೆ ನೀಡಿದರು. ಮರಗೋಡು ಪಿ.ಯು.ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪಿ.ಟಿ.ಶಾಜಿ ಮಾತನಾಡಿ, ತಮ್ಮ 36 ವರ್ಷಗಳ ಶಿಕ್ಷಕ ವೃತ್ತಿಯ ಬಗ್ಗೆ ಮಕ್ಕಳಿಗೆ ವಿವರಿಸಿ ಚುಟುಕು ಪ್ರಶ್ನೆಗಳನ್ನು…
ಮಡಿಕೇರಿ NEWS DESK ಫೆ.15 : ಮಡಿಕೇರಿ ನಗರದ ಡಾ.ಅಂಬೇಡ್ಕರ್ ಭವನದ ಎದುರು ಅಳವಡಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವಿದ್ದ ಬ್ಯಾನರ್ ಮತ್ತು ಅಂಬೇಡ್ಕರ್, ಬುದ್ಧ ಸಹಿತ ಹಿರಿಯ ಚೇತನರ ಭಾವಚಿತ್ರಗಳಿದ್ದ ಮತ್ತೊಂದು ಬ್ಯಾನರ್ ನ್ನು ಸುಟ್ಟ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ನ್ಯಾಯ ಕೋರಿ ಪ್ರತಿಭಟನೆ ನಡೆಸುವ ಹಕ್ಕನ್ನು ಎಲ್ಲರಿಗೂ ಸಂವಿಧಾನ ನೀಡಿದೆ. ಡಾ.ಅಂಬೇಡ್ಕರ್ ಭವನದ ವಿಚಾರವಾಗಿ ವಿವಿಧ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಇದರ ಭಾಗವಾಗಿ ಬ್ಯಾನರ್ ಅಳವಡಿಸಲಾಗಿತ್ತು. ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಕಿಡಿಗೇಡಿಗಳು ಬ್ಯಾನರ್ ನ್ನು ಸುಟ್ಟು ಹಾಕಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬ್ಯಾನರ್ ಗಳಿಗೆ ಬೆಂಕಿ ಹಚ್ಚುವ ಮೂಲಕ ಅದರಲ್ಲಿದ್ದ ಡಾ.ಬಿ.ಆರ್.ಅಂಬೇಡ್ಕರ್, ಬುದ್ಧ ಸೇರಿದಂತೆ ಮಹನೀಯರ ಭಾವಚಿತ್ರಗಳಿಗೆ ಅಗೌರವ ತೋರಲಾಗಿದೆ.…
ಮಡಿಕೇರಿ ಫೆ.15 NEWS DESK : ಮೈಕ್ರೋಫೈನಾನ್ಸ್ ಗಳಿಂದ ಸಾಲಪಡೆದವರಿಗೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು ಸರ್ಕಾರ ಸುಗ್ರೀವಾಜ್ಞೆಯನ್ನು ಜಾರಿಗೆ ತಂದು ಕೆಲವು ನಿಯಮಗಳನ್ನು ರೂಪಿಸಿರುವುದು ಸ್ವಾಗತಾರ್ಹ. ಆದರೆ ಈ ನಿಯಮಗಳ ಅನುಷ್ಠಾಕ್ಕೂ ಮೊದಲು ಬಡವರು ಪಡೆದುಕೊಂಡಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಿ ಎಂದು ಯುವ ಜಾತ್ಯತೀತ ಜನತಾದಳದ ಕೊಡಗು ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಮೈಕ್ರೋಫೈನಾನ್ಸ್ ಗಳ ಕಿರುಕುಳಕ್ಕೆ ಅಂಕುಶ ಹಾಕುವುದಾಗಿ ಹೇಳಿಕೊಂಡಿದೆ. ಆದರೆ ಸರ್ಕಾರದ ಘೋಷಣೆಯ ನಂತರವೂ ಮೈಕ್ರೋಫೈನಾನ್ಸ್ ನ ಸಿಬ್ಬಂದಿಗಳು ಸಾಲ ಪಡೆದವರ ಮನೆಗಳಿಗೆ ತೆರಳಿ ಸಾಲದ ಮೊತ್ತ ಪಾವತಿಸುವಂತೆ ಒತ್ತಡ ಹೇರುತ್ತಿರುವುದು ಕಂಡು ಬಂದಿದೆ. ಬಡವರ ಮೇಲೆ ಸರ್ಕಾರಕ್ಕೆ ನೈಜ ಕಾಳಜಿ ಇದ್ದರೆ ಮೊದಲು ಸಾಲಮನ್ನಾ ಮಾಡಲಿ, ನಂತರ ಕಾನೂನು ಕ್ರಮದ ಪ್ರಕ್ರಿಯೆಯನ್ನು ಆರಂಭಿಸಲಿ ಎಂದು ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಶನಿವಾರಸಂತೆಯಲ್ಲಿ ಸಾಲದಬಾಧೆ ತಾಳಲಾರದೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಕೆಲವು ಭಾಗಗಳಲ್ಲಿ ಸಾಲಗಾರರ ಕಿರುಕುಳದಿಂದ ಬೇಸತ್ತು ಊರು…






