ನಾಪೋಕ್ಲು ಮಾ.8 NEWS DESK : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಸಮಿತಿ ಹಾಗೂ ಕನ್ನಡ ವಿಭಾಗದ ವತಿಯಿಂದ ನಡೆದ ಜನಪದೋತ್ಸವವು ಗಮನ ಸೆಳೆಯಿತು. ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಉಪನ್ಯಾಸಕರಾದ ಕೆ.ಹರಣಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜನಪದದ ಮಹತ್ವ ಮತ್ತು ಅರಿವನ್ನು ವಿದ್ಯಾರ್ಥಿಗಳಿಗೆ ಮೂಡಿಸಲಾಯಿತು. ನಂತರ ಸಾಂಸ್ಕೃತಿಕ ಸಂಚಾಲಕರಾದ ಡಾ.ಸಹನಾ ದಿನೇಶ್ ಹಾಗೂ ಬೋಧಕ ಬೋಧಕೇತರ ವರ್ಗದವರಿಂದ ಆಯೋಜಿಸಿದ ವಿವಿಧ ಜಾನಪದ ನೃತ್ಯ, ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ಪಾಲ್ಗೊಂಡು ಜನಪದದ ಸಗಡನ್ನು ಸವಿದರು. ಈ ಸಂದರ್ಭ ಪ್ರಾಂಶುಪಾಲರಾದ ಮನೋಜ್ ಕುಮಾರ್ ಬೋಧಕ, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ
ಲೇಖಕ: admin
ಸುಂಟಿಕೊಪ್ಪ ಮಾ.8 NEWS DESK : ಗ್ರಾಮ ದೇವರ ಸಮಿತಿ ವತಿಯಿಂದ ಗ್ರಾಮ ದೇವರ 6ನೇ ವಾರ್ಷಿಕ ಪೂಜಾ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಅರ್ಚಕ ಮಂಜುನಾಥ್ ಶರ್ಮಾಬ ಅವರ ನೇತೃತ್ವದಲ್ಲಿ ಬೆಳಿಗ್ಗೆ ಸ್ಥಳ ಶುದ್ಧಿ ಕಲಶ ಪೂಜೆ ನಡೆಯಿತು. ನಂತರ ಗ್ರಾಮ ದೇವತೆಗೆ ಎಳನೀರು, ಹಾಲು, ಕುಂಕುಮ, ಜೇನು, ಗಂಧ, ತುಪ್ಪದ ಅಭಿಷೇಕ ನೆರವೇರಿತು. ಆ ಬಳಿಕ ದೇವರಿಗೆ ವಸ್ತ್ದಲಂಕಾರ ಮತ್ತು ಹೂವಿನ ಅಲಂಕಾರ ಪೂಜೆ, ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ನಂತರ ಗ್ರಾಮ ದೇವತೆಗೆ ಅರ್ಪಣೆ ನಡೆದು, ಮದ್ಯಾಹ್ನದ ನೆರೆದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು. ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಸ್ಥಾನ ಸಮಿತಿ, ಶ್ರೀ ರಾಮ ಸೇವಾ ಸಮಿತಿ, ಶ್ರೀಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರ ಸಮಿತಿ, ಗೌರಿ ಗಣೇಶೋತ್ಸವ ಸಮಿತಿ, ಮಸಣಿಕಮ್ಮ ದೇವಸ್ಥಾನ ಸಮಿತಿ, ವೃಕ್ಷೋದ್ಭವ ಮಹಾಗಣಪತಿ ದೇವಾಲಯ ಸಮಿತಿ, ಟಿಸಿಎಲ್ ಚಾಮುಂಡೇಶ್ವರಿ ದೇವಸ್ಥಾನ ಸಮಿತಿ, ಶ್ರೀ ದೇವಿಯ ಅಣ್ಣಪ್ಪ ದೇವಸ್ಥಾನ ಸಮಿತಿ, ಬಾಳೆಕಾಡು ಮುತ್ತಪ್ಪ ದೇವಸ್ಥಾನ, ಗದ್ದೆಹಳ್ಳ…
ಮೈಸೂರು, ಮಾ.8 NEWS DESK : ನಾಡಿನ ಎಲ್ಲ ನಾಗರಿಕರು ಆರೋಗ್ಯದಿಂದಿರಬೇಕು ಮತ್ತು ಔಷಧಿಗಳ ಖರೀದಿ ಜನರಿಗೆ ಹೊರೆಯಾಗಬಾರದು ಎಂಬ ದಿವ್ಯ ಆಲೋಚನೆಯೊಂದಿಗೆ ಆರಂಭಿಸಲಾಗಿರುವ ಜನೌಷಧಿ ಕೇಂದ್ರಗಳು ಜನೋಪಕಾರಿಯಾಗಿವೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಚಾಮರಾಜ ಕೃಷ್ಣದತ್ತ ಒಡೆಯರ್ ತಿಳಿಸಿದ್ದಾರೆ. ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರದಲ್ಲಿ ಜನೌಷಧಿ ಕೇಂದ್ರಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಡ ಹಾಗೂ ಮಧ್ಯಮ ವರ್ಗ ಹಾಗೂ ಸಾಮಾನ್ಯ ಜನರಿಗೆ ಜನೌಷಧಿ ಕೇಂದ್ರಗಳಿಂದ ಭಾರಿ ಪ್ರಯೋಜನಗಳಾಗಿವೆ. ಜನೌಷಧಿಗಳ ಬಳಕೆ ಮತ್ತು ಉಪಯೋಗಗಳ ಬಗ್ಗೆ ಈಗಾಗಲೇ ಸಾಕಷ್ಟು ಅಭಿಯಾನ ನಡೆಸಲಾಗಿದೆ ಎಂದು ಒಡೆಯರ್ ತಿಳಿಸಿದರು. ಜನೌಷಧಿ ಕೇಂದ್ರಗಳು ಆರಂಭವಾದ ನಂತರ ಮಧ್ಯಮ ವರ್ಗದವರ ಮೇಲೆ ಹೆಚ್ಚಿನ ಹೊರೆ ಆಗುತ್ತಿಲ್ಲ. ಈ ಮೊದಲು ಔಷಧಿಗಳಿಗೆ ಹೆಚ್ಚು ವ್ಯಯಿಸುತ್ತಿದ್ದ ಜನರು ಈಗ ಜನೌಷಧಿ ಕೇಂದ್ರಗಳಲ್ಲಿ ಔಷಧಿಗಳನ್ನು ಖರೀದಿ ಮಾಡುವ ಮೂಲಕ ಸಾಕಷ್ಟು ಹಣ ಉಳಿಸುತ್ತಿದ್ದಾರೆ ಎಂದು ಹೇಳಿದರು. ಕಡಿಮೆ ಬೆಲೆಯಿಂದಾಗಿ ಬಡ ರೋಗಿಗಳಿಗೆ ಜನೌಷಧಿ ಕೇಂದ್ರಗಳು ಅನುಕೂಲವಾಗಿದೆ. ಜನೌಷಧಿ…
ಮಡಿಕೇರಿ ಮಾ.8 NEWS DESK : ಗೋಣಿಕೊಪ್ಪ ಠಾಣಾ ವ್ಯಾಪ್ತಿಯ ಬಂಬುಕಾಡು ಹಾಡಿಗೆ ಗೋಣಿಕೊಪ್ಪ ಸಿಪಿಐ ಶಿವರಾಜ್ ಮುದೋಳ್ ಮತ್ತು ಅಧಿಕಾರಿಗಳು ಭೇಟಿ ನೀಡಿ ಕಾನೂನು ಅರಿವು ಮೂಡಿಸಿದರು. ಪ್ರತಿ ಮನೆಗೆ ತೆರಳಿ ಸಾರ್ವಜನಿಕರ ಸಭೆ ನಡೆಸಿ ಹಾಡಿಗೆ ಇರುವ ಸರ್ಕಾರದ ಯೋಜನೆಗಳು, 112, ಮದ್ಯಪಾನ, ಮಾದಕ ವಸ್ತುಗಳ ಬಗ್ಗೆ, ಮಹಿಳೆಯರಿಗೆ ಕಾನೂನು ಅರಿವು, ಮಕ್ಕಳಿಗೆ ರಸ್ತೆ ಸುರಕ್ಷತೆ ಮತ್ತು ಜಾಗೃತಿ, ಪೋಕ್ಸೋ ಕಾಯ್ದೆ, ಸೈಬರ್ ಜಾಗೃತಿ, ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.
ಮಡಿಕೇರಿ, ಮಾ.8 NEWS DESK : ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕೊಡಗು ಬಿಜೆಪಿ ಘಟಕ ನಡೆಸಿದ ಅಹೋರಾತ್ರಿ ಧರಣಿಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಚಾಮರಾಜ ಕೃಷ್ಣದತ್ತ ಒಡೆಯರ್ ಪಾಲ್ಗೊಂಡರು. ಕೊಡಗು ವಿಶ್ವವಿದ್ಯಾಲಯ ಮುಚ್ಚಬಾರದು, ಪರಿಶಿಷ್ಟ ಜಾತಿ/ಪಂಗಡಕ್ಕೆ ಮೀಸಲಿರುವ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸಬಾರದು, ಸರ್ಕಾರಿ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಬಾರದು ಎಂಬುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸಲು ಬಿಜೆಪಿ ಕಾರ್ಯಕರ್ತರು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಸಂಸದ ಯದುವೀರ್, ಮಾಜಿ ಸಚಿವರಾದ ಡಾ. ಅಶ್ವತ್ಥನಾರಾಯಣ ಸೇರಿದಂತೆ ಹಲವಾರು ಮುಖಂಡರು ಭೇಟಿ ನೀಡಿ ತಮ್ಮ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಯದುವೀರ್, ನನ್ನ ಕ್ಷೇತ್ರ ವ್ಯಾಪ್ತಿಯ ಕೊಡಗು ಜಿಲ್ಲೆಯ ವತಿಯಿಂದ ಜಿಲ್ಲೆಯ ಜನತೆಯ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೂ ನಾವು ವಿರಮಿಸುವುದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರದ ಗಮನಕ್ಕೆ ತಂದು ಪರಿಹಾರ ಸಿಗುವವರೆಗೆ ಹೋರಾಟ ನಡೆಸುತ್ತೇವೆ ಎಂದರು. ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದೆ.…
ಮಡಿಕೇರಿ NEWS DESK ಮಾ.8 : ಮಡಿಕೇರಿ- ಸೋಮವಾರಪೇಟೆ ಜನತೆಯ ದಶಕಗಳ ಕನಸು ನನಸಾಗಿದೆ. ಮಡಿಕೇರಿ- ದೋಣಿಗಲ್ ನಡುವೆ ಅಂತರರಾಷ್ಟಿçÃಯ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ 900 ಕೋಟಿ ರೂ. ಯೋಜನೆಯನ್ನು ರಾಜ್ಯ ಬಜೆಟ್ ನಲ್ಲಿ ಘೋಷಿಸಲಾಗಿದೆ. ಇದಕ್ಕೆ ಕಾರಣಕರ್ತರಾದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅಭಿನಂದನಾರ್ಹರು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಹಾಗೂ ಬಗರ್ ಹುಕುಂ ತಾಲ್ಲೂಕು ಸಮಿತಿ ಸದಸ್ಯ ಜೆ.ಎಲ್.ಜನಾರ್ಧನ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜನರ ಹಲವು ವರ್ಷಗಳ ಬೇಡಿಕೆಗೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಿದೆ. ಮಡಿಕೇರಿ – ದೋಣಿಗಲ್ -ಮಾದಾಪುರ – ಸೋಮವಾರಪೇಟೆ – ಶನಿವಾರಸಂತೆ – ಕೊಡ್ಲಿಪೇಟೆಯ 95 ಕಿ.ಮೀ ಅಂತರದ ಮಾರ್ಗ ಸರ್ವಋತು ರಸ್ತೆಯಾಗಿ ಅಭಿವೃದ್ಧಿಯಾಗಲಿದೆ. ಇದು ಡಾ.ಮಂತರ್ ಗೌಡ ಅವರ ಪ್ರಯತ್ನದ ಫಲವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕುಶಾಲನಗರ ತಾಲ್ಲೂಕು ಆಸ್ಪತ್ರೆಯ ನವೀಕರಣ, ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ 12 ಬುಡಕಟ್ಟು ಸಮುದಾಯಗಳ…
ಮಡಿಕೇರಿ ಮಾ.7 NEWS DESK : ಕೊಡಗು ವಿಶ್ವ ವಿದ್ಯಾನಿಲಯವನ್ನು ಜಿಲ್ಲೆಯಲ್ಲೇ ಉಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮಾ.6ರಿಂದ ಆರಂಭಿಸಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಬಿಜೆಪಿ ಮುಕ್ತಾಯಗೊಳಿಸಿದೆ. ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದ ಎರಡನೇ ದಿನದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಹಣಕಾಸಿನ ವೈಫಲ್ಯಗಳ ಹಿನ್ನೆಲೆಯಲ್ಲಿ ಕೊಡಗು ವಿವಿಯನ್ನು ಒಳಗೊಂಡಂತೆ 9 ವಿವಿಗಳಿಗೆ ಅಗತ್ಯ ನೆರವನ್ನು ನೀಡದ ರಾಜ್ಯ ಸರ್ಕಾರ ವಿವಿಗಳ ‘ವಿಲೀನ’ದ ಕುರಿತು ಮಾತನಾಡುತ್ತಿದೆ. ಈ ವಿಲೀನ ಎಂಬುವುದು ಅಂತಿಮವಾಗಿ ವಿವಿಗಳನ್ನು ಮುಚ್ಚುವುದೇ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಯಾವ ಭೂಮಿ ನಿಮಗೆ ಆಶ್ರಯವನ್ನು ನೀಡಿದೆಯೋ ಅಂತಹ ನೆಲದ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು. ಈ ಹಿಂದೆ ಕೊಡಗಿನ ಜಮ್ಮಾಬಾಣೆ ಸಮಸ್ಯೆ ಸಂದರ್ಭ, ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗಲು ಶಾಸಕರಾಗಿದ್ದ ಅಪ್ಪಚ್ಚು ರಂಜನ್ ಹಾಗೂ ವಿಧಾನಸಭಾಧ್ಯಕ್ಷರಾಗಿದ್ದ ಕೆ.ಜಿ.ಬೋಪಯ್ಯ ಅವರು ಸದನದಲ್ಲೆ ಕೊಡಗಿನ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟಿಸಿದ್ದರು.…
ಮಡಿಕೇರಿ ಮಾ.7 NEWS DESK : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲಜೀವನ್ ಮಿಷನ್ ಯೋಜನೆಯ ಕುರಿತು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷದತ್ತ ಚಾಮರಾಜ ಒಡೆಯರ್ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ನಗರದ ಜಿಲ್ಲಾಡಳಿತ ಭವನದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾರ್ಯಪಾಲಕ ಎಂಜಿನಿಯರ್ ಆರ್.ಭಾಸ್ಕರ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 457 ಗ್ರಾಮೀಣ ಜನವಸತಿ ಕಾಮಗಾರಿಗಳಿದ್ದು, ಇದರಲ್ಲಿ ಒಟ್ಟು 343 ಕಾಮಗಾರಿಗಳು ಪೂರ್ಣಗೊಂಡಿದೆ. ಹಾಗೆಯೇ 112 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ವಿವರಿಸಿದರು. ನಂತರ ಸಂಸದ ಯದುವೀರ್ ಒಡೆಯರ್ ಮಾತನಾಡಿ, ಅಂಕಿ ಅಂಶಗಳ ಪ್ರಕಾರ ಪ್ರಗತಿ ಸಾಧಿಸಿದ್ದು, ಕೆಲವು ಜನವಸತಿಗಳಲ್ಲಿ ಟ್ಯಾಂಕ್, ಪೈಪ್ಲೈನ್ ಮೂಲಕ ನಲ್ಲಿ ಸಂಪರ್ಕ ಕಲ್ಪಿಸಿರುವುದಿಲ್ಲ ಎಂದು ದೂರುಗಳು ಬಂದಿರುತ್ತದೆ ಎಂದು ಅಧಿಕಾರಿಗಳಿಗೆ ತಿಳಿಸಿ ಸ್ಪಷ್ಟನೆ ಪಡೆದರು. ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್ ಮಾತನಾಡಿ ಕೊಡಗಿನಲ್ಲಿ ಯಾವುದೇ ಬಹುಗ್ರಾಮ ಕುಡಿಯುವ ನೀರು ಯೋಜನೆ ಇರುವುದಿಲ್ಲ, ಬೇಸಿಗೆಯಲ್ಲಿ ಬೋರ್ವೆಲ್ಗಳು ಬತ್ತಿ ಹೋಗುತ್ತಿದ್ದು, ಶಾಶ್ವತವಾಗಿ ನದಿ ನೀರನ್ನು ಶುದ್ಧೀಕರಿಸಿ…
ಮಡಿಕೇರಿ ಮಾ.7 NEWS DESK : ರಾಜ್ಯ ಸರ್ಕಾರದ ಬಜೆಟ್ ಒಂದು ವರ್ಗವನ್ನು ಓಲೈಸುವ ಬಜೆಟ್ ಆಗಿದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಟೀಕಿಸಿದ್ದಾರೆ. ಅಲ್ಪಸಂಖ್ಯಾತರ ಓಲೈಕೆಯ ಭಾಗವಾಗಿ ಬಜೆಟ್ನಲ್ಲಿ, ಅವರ ಅಭ್ಯುದಯಕ್ಕಾಗಿ 1800 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದೇಶಿ ಶಿಕ್ಷಣದ ನೆರವನ್ನು ರೂ.30 ಲಕ್ಷಕ್ಕೆ ಹೆಚ್ಚಿಸಿರುವುದು ಇದೇ ಕಾರಣದಿಂದ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಡಿಕೇರಿ ಮಾ.7 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್, ರಾಜ್ಯದ ಸಮಸ್ತ ಕನ್ನಡಿಗರಿಗೆ ಯೋಜನೆಗಳನ್ನು ರೂಪಿಸುವಲ್ಲಿ ವಿಫಲವಾಗಿದೆ ಎಂದು ಸಂಸದ ಯದುವೀರ್ ಒಡೆಯರ್ ಟೀಕಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು ಬಜೆಟ್ನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದೇಶಿ ಶಿಕ್ಷಣದ ನೆರವನ್ನು 20 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಿಸಿರುವುದಲ್ಲದೆ, ವಿವಿಧ ಸೌಲಭ್ಯಗಳನ್ನು ನೀಡಲಾಗಿದ್ದು, ಇದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ, ರಾಜ್ಯದ ಕನ್ನಡಿಗರೆಲ್ಲರಿಗೂ ಅನ್ವಯವಾಗುವ ರೀತಿಯ ಯೋಜನೆಗಳನ್ನು ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದರು. ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕಾಗಿ ಬಜೆಟ್ನಲ್ಲಿ ಮೀಸಲಿಟ್ಟ ಹಣವನ್ನು ನೂತನ ವಿವಿಗಳಿಗೆ ನೀಡಿದ್ದಲ್ಲಿ, ಅವುಗಳನ್ನು ಉಳಿಸಿಕೊಳ್ಳಲು ಸಾಧ್ಯವಿತ್ತು. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಹಣ ಬಂದಿಲ್ಲವೆಂದು ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಮತ್ತು ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನವನ್ನು ಸರ್ಕಾರ ಮಾಡಿದೆ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ನ್ಯಾಯಯುತವಾಗಿ ನೀಡಬೇಕಾದ ಹಣವನ್ನು ನೀಡಿದೆ ಎಂದು ತಿಳಿಸಿದರು. ಕೊಡಗಿಗೆ ರೈಲ್ವೆ ಸಂಪರ್ಕಕ್ಕೆ ಅಗತ್ಯ ನೆರವನ್ನು ಕೇಂದ್ರ ನೀಡಿದೆ, ಆದರೆ ರಾಜ್ಯ ಸರ್ಕಾರ…






