ಮಡಿಕೇರಿ ಫೆ.15 NEWS DESK : ನೊಬೆಲ್ ಪ್ರಶಸ್ತಿ ವಿಜೇತ ಟಿಬೆಟಿಯನ್ ಧಾರ್ಮಿಕ ಗುರು 14ನೇ ದಲಾಯಿಲಾಮ ಅವರ ಆಶೀರ್ವಾದ ಪಡೆಯಲು ರಾಜ್ಯ ಗೃಹ ಸಚಿವ ಪರಮೇಶ್ವರ್ ಕುಶಾಲನಗರ ಸಮೀಪ ಬೈಲುಕುಪ್ಪೆಗೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದರು. ದಂಪತಿ ಸಮೇತರಾಗಿ ಆಗಮಿಸಿದ ಪರಮೇಶ್ವರ್ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಕ್ಕೆ ಅವರ ಭೇಟಿ ಸಂದರ್ಭ ಪ್ರತಿ ಬಾರಿ ಆಶೀರ್ವಾದ ಪಡೆದಿದ್ದೇನೆ ಎಂದ ಗೃಹ ಸಚಿವ ಪರಮೇಶ್ವರ್ ಬೈಲುಕುಪ್ಪೆಗೆ ಏಳು ವರ್ಷಗಳ ನಂತರ ದಲೈಲಾಮ ಅವರು ಭೇಟಿ ನೀಡಿದ್ದಾರೆ. 90 ವರ್ಷ ದಾಟಿರುವ ದಲೈಲಾಮ ಅವರಿಗೆ ಅಲ್ಪಸ್ವಲ್ಪ ಆರೋಗ್ಯದ ಸಮಸ್ಯೆ ಇರುವುದಾಗಿ ಮಾಹಿತಿ ನೀಡಿದ ಅವರು, ಭಗವಂತ ಇನ್ನೂ ಹೆಚ್ಚಿನ ಆಯಸ್ಸು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು. ದಲೈಲಾಮ ಅವರಿಗೆ ಜೀವ ಬೆದರಿಕೆ ಬಗ್ಗೆ ಗುಪ್ತಚರ ಇಲಾಖೆಯಿಂದ ಬಂದ ಮಾಹಿತಿ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚಿನ ಭದ್ರತೆಯನ್ನು ನೀಡಲಾಗುತ್ತಿದೆ ರಾಜ್ಯದ ಅತಿಥಿಯಾಗಿ ಬಂದಿರುವ ಕಾರಣ ರಾಜ್ಯ ಸರ್ಕಾರ…
ಲೇಖಕ: admin
ಮಡಿಕೇರಿ NEWS DESK ಫೆ.14 : ಇತ್ತೀಚೆಗೆ ಕೂಟುಹೊಳೆಯಲ್ಲಿ ಮೃತಪಟ್ಟ ಮಡಿಕೇರಿ ನವೋದಯ ಶಾಲೆಯ ಪಿಯುಸಿ ವಿದ್ಯಾರ್ಥಿ ಅಮಿತ್ ನ ಮನೆಗೆ ಶಾಸಕ ಡಾ.ಮಂತರ್ ಗೌಡ ಇಂದು ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.
ಮಡಿಕೇರಿ NEWS DESK ಫೆ.14 : ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ “ಸಂಘ” ವರ್ಚುವಲ್ ಇಂಟ್ಯಾಂಜಿಬಲ್ (ಅದೃಶ್ಯ) ಮತ ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ರಾಜ್ಯ ವಿಧಾನಸಭೆಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಿ ಕೊಡವರ ಹಕ್ಕೊತ್ತಾಯಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು. ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ “ಸಂಘ” ವರ್ಚುವಲ್, ಅಮೂರ್ತ (ಅದೃಶ್ಯ) ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ಅಸೆಂಬ್ಲಿಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ನೀಡಬೇಕು. ಕೊಡವರಿಗೆ ಕೊಡವ ಸಂಪ್ರದಾಯಿಕ ಜನ್ಮಭೂಮಿಯಲ್ಲಿ ಪ್ರತ್ಯೇಕ ಲೋಕಸಭೆ ಮತ್ತು ಅಸಂಬ್ಲಿ ಕೊಡವ ಮತ ಕ್ಷೇತ್ರವನ್ನು ರಚಿಸಬೇಕು ಎಂದು ಎನ್.ಯು.ನಾಚಪ್ಪ ಒತ್ತಾಯಿಸಿದರು. 2026ರಲ್ಲಿ ಸಂಸತ್ತಿನ ಮತ್ತು ಅಸೆಂಬ್ಲಿಯ ಕ್ಷೇತ್ರದ ಗಡಿ ಹಾಗೂ ಸಂಖ್ಯೆ ಪುನರ್ ನಿರ್ಣಯಿಸಲಾಗುತ್ತಿದ್ದು, ಇದಕ್ಕಾಗಿ ಪ್ರಕ್ರಿಯೆಯು ಪ್ರಾರಂಭವಾಗಿದೆ. ರಾಜ್ಯದಲ್ಲಿ ಗರಿಷ್ಠ ಪ್ರಾತಿನಿಧ್ಯವನ್ನು ಹೊಂದಿರುವ…
ಮಡಿಕೇರಿ ಫೆ.14 NEWS DESK : ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಮಡಿಕೇರಿ ತಾಲ್ಲೂಕಿನ ಮೂರು ಸಾಮಾನ್ಯ ಹಾಗೂ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕಾಗಿ ಫೆ.16 ರಂದು ಚುನಾವಣೆ ನಡೆಯಲಿದೆ. ಸುಮಾರು 9 ಸಾವಿರಕ್ಕಿಂತಲೂ ಅಧಿಕ ಸದಸ್ಯರಿರುವ ಈ ಸಂಘದಲ್ಲಿ ಮತ ಚಲಾಯಿಸಲು ಕೇವಲ 487 ಮಂದಿಗೆ ಮಾತ್ರ ಅವಕಾಶ ಲಭಿಸಿರುವುದು ಹಾಸ್ಯಾಸ್ಪದ ಮತ್ತು ಸಂಘದ ಹಿನ್ನಡೆಗೆ ಸಾಕ್ಷಿಯಾಗಿದೆ ಎಂದು ಕೊಡಗು ಏಲಕ್ಕೆ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಸೂದನ ಎಸ್.ಈರಪ್ಪ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಾಜಿ ನಿರ್ದೇಶಕ ಕಿಮ್ಮುಡಿರ ಜಗದೀಶ್ ಆರೋಪಿಸಿದ್ದಾರೆ. ಜಂಟಿ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂಘದ ಹಾಲಿ ಆಡಳಿತ ಮಂಡಳಿಯವರ ನಿಷ್ಕ್ರಿಯ ಆಡಳಿತವೇ ಈ ಸಂಘದ ಹಿನ್ನಡೆಗೆ ಕಾರಣವಾಗಿದೆ. ಸದಸ್ಯರು ಮತದಾನದಿಂದ ವಂಚಿತರಾಗಿರುವುದರಿಂದಲೇ 11 ಸ್ಥಾನಗಳನ್ನು ಅವಿರೋಧವಾಗಿ ಗೆಲ್ಲಲು ಸಾಧ್ಯವಾಗಿದೆ. ಕೊಡಗು ಕಾಫಿ ನಾಡಾಗಿದ್ದರೂ ಕಳೆದ ಹಲವು ವರ್ಷಗಳಿಂದ ಕಾಫಿ ಖರೀದಿಯ ವ್ಯವಹಾರ ನಿಲ್ಲಿಸಲಾಗಿದೆ. ಪರ್ಯಾಯ ವ್ಯವಸ್ಥೆಯನ್ನು…
ಮಡಿಕೇರಿ ಫೆ.14 NEWS DESK : ವೈದ್ಯಕೀಯ ವ್ಯಾಸಂಗ ಮಾಡಿರುವ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಮೂಲತಃ ವಿಜ್ಞಾನದ ವಿದ್ಯಾರ್ಥಿಯೇ ಆಗಿದ್ದಾರೆ. ಇವರಿಂದು ಕೆಲ ಕಾಲ ತಮ್ಮೆಲ್ಲ ಕೆಲಸ ಕಾರ್ಯಗಳ ಜಂಜಡ ಮರೆತು ಶಿಕ್ಷಕರಾಗಿ ವಿಜ್ಞಾನ ವಿಷಯವನ್ನು ಮಕ್ಕಳಿಗೆ ಬೋಧಿಸಿದ ಕುತೂಹಲಕಾರಿ ವಿದ್ಯಮಾನ ಸೋಮವಾರಪೇಟೆಯಲ್ಲಿ ನಡೆಯಿತು. ಸೋಮವಾರಪೇಟೆಯ ಸಮಾಜ ಕಲ್ಯಾಣ ಇಲಾಖೆ ಅಧೀನದ ಬಾಲಕರ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಕಲಿಕೆಯಲ್ಲಿ ನಿರತರಾಗಿದ್ದ ಮಕ್ಕಳನ್ನು ಗಮನಿಸಿದರು. ಮಕ್ಕಳ ಓದಿನ ಬಗ್ಗೆ ಕುತೂಹಲಿಗಳಾದ ಶಾಸಕರು ಕೆಲ ಕಾಲ ತಾವೇ ಪುಸ್ತಕ ಹಿಡಿದು ಮಕ್ಕಳಿಗೆ ವಿಜ್ಞಾನ ಪಾಠ ಮಾಡುವ ಮೂಲಕ ಅಚ್ಚರಿ ಮೂಡಿಸಿದರು. ಪಾಠ ಮಾಡಿದ್ದಷ್ಟೆ ಅಲ್ಲ, ಮಕ್ಕಳಿಗೆ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಿದ್ದು ವಿಶೇಷ. ಶಾಸಕರಾದ ಡಾ. ಮಂತರ್ ಗೌಡ, ಮಕ್ಕಳೊಂದಿಗೆ ಬೆರೆತು, ಕೆಲ ಕಾಲ ತಾವೊಬ್ಬ ಉತ್ತಮ ಶಿಕ್ಷಕರೂ ಹೌದೆಂಬುದನ್ನು ಸಾಬೀತು ಪಡಿಸಿದ್ದು ವಿಶೇಷ. ಈ ಸಂದರ್ಭ…
ಮಡಿಕೇರಿ ಫೆ.14 NEWS DESK : ಅಂದು ಇಡೀ ಭಾರತಕ್ಕೇ ಕತ್ತಲು ಕವಿದಿತ್ತು. ಬೇಸರ, ದುಃಖ ಭಾರತೀಯರ ಹೃದಯದಲ್ಲಿ ಮಡುಗಟ್ಟಿತ್ತು. ಹೌದು 2019ರ ಫೆಬ್ರವರಿ ತಿಂಗಳ 14 ರಂದು ಬೆಚ್ಚಿಬೀಳಿಸುವ ಸುದ್ದಿಯೊಂದು ಗಾಳಿಗಿಂತ ವೇಗವಾಗಿ ಹರಡಿತ್ತು. ಮಧ್ಯಾಹ್ನ ಎಲ್ಲರೂ ಕೆಲಸ ಕಾರ್ಯಗಳಲ್ಲಿ ತೊಡಗಿರುವ ವೇಳೆಯಲ್ಲಿ ಭಾರತೀಯ ಯೋಧರಿದ್ದ ಬಸ್ಸನ್ನು ಟಾರ್ಗೆಟ್ ಮಾಡಿ ಕುಳಿತಿದ್ದ ಪಾಪಿಸ್ತಾನಿ ಭಯೋತ್ಪಾದಕರು ಅವರ ಗುರಿಯನ್ನು ಯಶಸ್ವಿಯಾಗಿ ತಲುಪಿದ್ದರು. ಯಾವುದು ಸಂಭವಿಸಬಾರದಾಗಿತ್ತೋ ಅಂತಹ ಒಂದು ದುರ್ಘಟನೆ ಸಂಭವಿಸಿಯಾಗಿತ್ತು. ೪೦ ಮಂದಿ ದೇಶವನ್ನು ರಕ್ಷಿಸುವ ಹೊಣೆಹೊತ್ತವರು ಏನನ್ನೂ ಅರಿಯದೆ ವೀರಮರಣವನ್ನಪ್ಪಿದ್ದರು. ಇದೆಲ್ಲ ನಡೆದು ವರ್ಷಗಳು ಸಂದರೂ ಆ ಕಹಿನೆನಪು ಮನಸ್ಸಿನಿಂದ ಮರೆಯಾಗುವುದಿಲ್ಲ. ಸೇನೆ, ಸೇವೆ ಎಂದಾಗ ಪದೇ ಪದೇ ನೆನಪಾಗುತ್ತಲೇ ಇರುತ್ತದೆ. ತಾಯಿ ಭಾರತಿಯ ಮಡಿಲಲ್ಲಿ ಮಲಗಿರುವ ಆ ನಲವತ್ತು ಮಂದಿಗೆ ಅದು ಹೇಗೆ ಕೃತಜ್ಞತೆ ಸಲ್ಲಿಸಬೇಕು ಎಂದು ತಿಳಿಯುತ್ತಿಲ್ಲ. ಭಾರತದ ನೆಲದ ರಕ್ಷಣೆಗೆಂದು ತಮ್ಮ ಜೀವವನ್ನೇ ಮುಡಿಪಾಗಿಟ್ಟವರ ಚಿತ್ರಣ ಕಣ್ಣೆದುರು ಮಿಂಚಿ ಮರೆಯಾಗುತ್ತಲೇ ಇರುತ್ತದೆ. ಹುತಾತ್ಮರಾದ ಅಷ್ಟೂ ವೀರರಿಗೆ…
ಮಡಿಕೇರಿ ಫೆ.14 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ, ಮಡಿಕೇರಿ ತಾಲೂಕು ಎಡಪಾಲದಲ್ಲಿ ನೂತನ ರಸ್ತೆ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭ ಈ ಭಾಗದಲ್ಲಿ ಶಾಸಕರ ಅನುದಾನದಲ್ಲಿ ಪೂರ್ಣಗೊಂಡಿದ್ದ ನೂತನ ರಸ್ತೆಯನ್ನು ಲೋಕಾರ್ಪಣೆ ಮಾಡಿದರು. ಭೂಮಿ ಪೂಜೆ ಬಳಿಕ ಮಾತನಾಡಿದ ಶಾಸಕರು, ಎಡಪಾಲ ಭಾಗದ ಜನರು ತನ್ನ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಕಾರ್ಯಗಳನ್ನು ಮಾಡಿಕೊಡುವುದಾಗಿ ಭರವಸೆ ನೀಡಿದರು. ಬಳಿಕ ಎಡಪಾಲ ಬಳಿ ಇರುವ ಸೇತುವೆಯನ್ನು ವೀಕ್ಷಣೆ ಮಾಡಿದರು. ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷರು, ಕಾಂಗ್ರೆಸ್ ಮುಖಂಡರು, ಸ್ಥಳೀಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಫೆ.14 NEWS DESK : ಕನ್ನಡ ಸಾರಸ್ವತ ಲೋಕದಲ್ಲಿ ಸಾಹಿತ್ಯ ಕೃಷಿಯ ಮೂಲಕ ಶಾಶ್ವತ ಸ್ಥಾನ ಪಡೆದ, ಕೊಡಗಿನ ವಿಶಿಷ್ಟ ಸಂಸ್ಕೃತಿಯನ್ನು ತಮ್ಮ ಹುತ್ತರಿ ಹಾಡಿನ ಮೂಲಕ ಕಟ್ಟಿಕೊಟ್ಟ ಹಿರಿಯ ಚೇತನ ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದಲ್ಲಿ ಫೆ.20 ರಂದು ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ, 1874ರ ಫೆ.22 ರಂದು ಜನಿಸಿದ ಪಂಜೆ ಮಗೇಶರಾಯರು ತಮ್ಮ 48ನೇ ವಯಸ್ಸಿನಲ್ಲಿ ಮಡಿಕೇರಿಯ ಅಂದಿನ ಸೆಂಟ್ರಲ್ ಹೈಸ್ಕೂಲ್ಗೆ ಪ್ರಥಮ ಭಾರತೀಯ ಕನ್ನಡ ಮುಖ್ಯೋಪಾಧ್ಯಾಯರಾಗಿ ನೇಮಕಗೊಂಡು ಸುಮಾರು 3 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರೆಂದು ತಿಳಿಸಿದರು. ಪಂಜೆ ಮಂಗೇಶರಾಯರು ‘ಕವಿಶಿಷ್ಯ’ ಎನ್ನುವ ಕಾವ್ಯನಾಮದಲ್ಲಿ ಕಥೆ, ಸಣ್ಣಕಥೆ, ಶಿಶು ಸಾಹಿತ್ಯ, ಇರಿಹಾಸವನ್ನು ಆಧರಿಸಿದ ಕಥೆಗಳು, ಕಾದಂಬರಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ. ಇವರ 125ನೇ ವರ್ಷಾಚರಣೆಯನ್ನು ಜಿಲ್ಲಾ ಕಸಾಪದಿಂದ ಈ ಹಿಂದೆ ಅವರು ಮುಖ್ಯೋಪಾಧ್ಯಾಯರಾಗಿದ್ದ ಶಾಲೆಯಾದ ಇಂದಿನ ಸರ್ಕಾರಿ…
ಮಡಿಕೇರಿ ಫೆ.14 NEWS DESK : ಕೊಡಗು ಜಿಲ್ಲಾ ನಿವೃತ್ತ ಪೊಲೀಸರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ ಫೆ.18ರಂದು ನಗರದ ಮೈತ್ರಿ ಪೊಲೀಸ್ ಭವನದಲ್ಲಿ ನಡೆಯಲಿದ್ದು, ಸಭೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಎಂಬತ್ತು ವರ್ಷ ಮೀರಿದ ಹಿರಿಯರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಅಧ್ಯಕ್ಷ ಎಂ.ಕೆ.ಉತ್ತಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಸಭೆಯನ್ನು ಅಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಡಾ.ಮಂತರ್ ಗೌಡ ಅವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು. ಸಂಘದ ಗೌರವಾಧ್ಯಕ್ಷರಾದ ಎಂ.ಕೆ.ಅಪ್ಪಯ್ಯ ಅವರು ಮಾತನಾಡಿ, ಮಹಾಸಭೆಯಲ್ಲಿ ಸಂಘದಲ್ಲಿರುವ 80 ವರ್ಷ ಮೇಲ್ಪಟ್ಟ ಹಿರಿಯರನ್ನು ಸನ್ಮಾನಿಸಲಾಗುತ್ತದೆ. ಇದರೊಂದಿಗೆ ವೀರಪ್ಪನ್ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕೊಡಗಿನ ಮಣವಟ್ಟೀರ ಪೊನ್ನಪ್ಪ ಅವರ ಜ್ಞಾಪಕಾರ್ಥ ಪೊಲೀಸ್ ಅಧಿಕಾರಿ ಶಂಕರಿ ಬಿದರಿ ಅವರು ಸಂಘಕ್ಕೆ ನೀಡಿರುವ 1 ಲಕ್ಷ ರೂ. ಮತ್ತು ಹಿರಿಯರಾದ ಪಿ.ಕೆ.ರಾವ್ ಅವರು ತಮ್ಮ ತಾಯಿಯ ಸ್ಮರಣಾರ್ಥ…
ಮಡಿಕೇರಿ ಫೆ.14 NEWS DESK : ಮೈಸೂರಿನ ಉದಯಗಿರಿಯಲ್ಲಿ ಉದ್ದೇಶ ಪೂರ್ವಕವಾಗಿ ಕೆಲವು ಕಿಡಿಗೇಡಿಗಳು ನಡೆಸಿದ ಗಲಭೆಯನ್ನು ಆರ್ಎಸ್ಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಮಾಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಅವರು ನೀಡಿರುವ ಹೇಳಿಕೆ ಖಂಡನೀಯವೆಂದು ಕೊಡಗು ಜಿಲ್ಲಾ ಬಿಜೆಪಿಯ ಪಧಾನ ಕಾರ್ಯದರ್ಶಿ ಮಹೇಶ್ ಜೈನಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸುಳ್ಳು ಆರೋಪಗಳನ್ನು ಮಾಡಿ ಸಮಾಜದ ಶಾಂತಿ ಕದಡುತ್ತಿರುವ ಎಂ.ಲಕ್ಷ್ಮಣ್ ಅವರನ್ನು ತಕ್ಷಣ ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರುಗಳ ಕುರಿತು ಕಾರ್ಟೂನ್ ರೂಪದಲ್ಲಿ ವ್ಯಕ್ತಿಯೊಬ್ಬರು ಪೋಸ್ಟ್ ಮಾಡಿರುವುದನ್ನು ವಿರೋಧಿಸುವ ನೆಪದಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ದಾಳಿ ಮಾಡಲಾಗಿದೆ. ಅಲ್ಲದೆ ಪೂರ್ವನಿಯೋಜಿತರಾಗಿ ಠಾಣೆ ಮತ್ತು ಸಾರ್ವಜನಿಕರ ಮೇಲೂ ದಾಳಿ ಮಾಡಿದ್ದಾರೆ. ಈ ಗಲಭೆಕೋರರನ್ನು ರಕ್ಷಿಸುವ ಸಲುವಾಗಿ ಲಕ್ಷ್ಮಣ್ ಅವರು…






