ಮಡಿಕೇರಿ ಮಾ.7 NEWS DESK : ಮಡಿಕೇರಿ-ಪಾಣತ್ತೂರು (ಕೇರಳ ಗಡಿ) ಮಾರ್ಗದಲ್ಲಿ ಬಾಕಿ ಉಳಿದಿರುವ ರಸ್ತೆ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲೆಯ ಕುಂದಚೇರಿ, ಭಾಗಮಂಡಲ ಹೋಬಳಿ ಪ್ರದೇಶಗಳಲ್ಲಿ ನಡೆಯುತ್ತಿರುವ ಕಾಮಗಾರಿ ವಿಳಂಬ ವಾಗುತ್ತಿರುವುದರಿಂದ ಸ್ಥಳೀಯ ಪ್ರಯಾಣಿಕರಿಗೆ ಮತ್ತು ಅಂತರರಾಜ್ಯ ಪ್ರಯಾಣಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ನಿರ್ಮಾಣ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಮತ್ತು ಅದನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತೀನ್ ಗಡ್ಕರಿ ಅವರಿಗೆ ಸಂಸದ ಯದುವೀರ್ ಮನವಿ ಸಲ್ಲಿಸಿದ್ದಾರೆ.
ಲೇಖಕ: admin
ಕುಶಾಲನಗರ ಮಾ.6 NEWS DESK : ಕುಶಾಲನಗರ ಸಂಸ್ಕೃತ ಭಾರತಿ ಮತ್ತು ರಂಗಭಾರತಿ ಕಲಾಮಂದಿರಂ ಸಹಯೋಗದೊಂದಿಗೆ ಕುಶಾಲನಗರದ ರಂಗಭಾರತಿ ಕಲಾಮಂದಿರಂನಲ್ಲಿ ಹತ್ತು ದಿನಗಳ ಕಾಲ ನಡೆಯಲಿರುವ ಉಚಿತ ಸಂಸ್ಕೃತ ಸಂಭಾಷಣಾ ಶಿಬಿರವನ್ನು ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಯಾವುದೇ ಅಧ್ಯಯನಕ್ಕೆ ವಯಸ್ಸಿನ ಮಿತಿ ಇರುವುದಿಲ್ಲ. ಹುಟ್ಟಿನಿಂದ ಸಾಯುವ ತನಕ ನಿರಂತರ ಕಲಿಕೆಯ ಅಗತ್ಯತೆ ಇರುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು. ಉದ್ಯಮಿ ಹಾಗೂ ಸಂಸ್ಕೃತ ವಿದ್ವಾಂಸರಾಗಿರುವ ವೇದ ವಿಜ್ಞಾನ ಗುರುಕುಲದ ಶಶಾಂಕ್ ಹತ್ವಾರ್ ಸಂಸ್ಕೃತ ಪದಗಳನ್ನು ಬಳಸುವ ಮೂಲಕ ಶಿಬಿರಾರ್ಥಿಗಳ ಪರಿಚಯ ಮಾತುಗಳೊಂದಿಗೆ ಹತ್ತು ದಿನಗಳ ಕಾಲ ನಡೆಯುವ ಉಚಿತ ತರಗತಿ ಆರಂಭಿಸಿದರು. ಸಂಸ್ಕೃತ ಭಾರತಿ ಮಂಗಳೂರು ವಿಭಾಗ ಸಂಯೋಜಕ ಮಧುಸೂದನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಂಗಭಾರತಿಯ ಕಾರ್ಯದರ್ಶಿ ದೀಪ ಕಾರ್ಯಕ್ರಮ ನಿರೂಪಿಸಿದರು. ರಶ್ಮಿ ಸಂಜಯ್ ಪ್ರಾರ್ಥಿಸಿದರು. ಶಿಕ್ಷಕಿ ಕೃತಿಕ ಸ್ವಾಗತಿಸಿದರು. ಮಧುಸೂದನ್ ವಂದಿಸಿದರು.
ಮಡಿಕೇರಿ ಮಾ.6 NEWS DESK : ಕೋದಂಡ ರಾಮ ದೇವಾಲಯದಲ್ಲಿ 35ನೇ ವರ್ಷದ ರಾಮೋತ್ಸವವನ್ನು ಅದ್ದೂರಿಯಾಗಿ ನಡೆಸುವ ಪ್ರಯುಕ್ತ ರಾಮೋತ್ಸವ ಮಹಿಳಾ ಸಮಿತಿಯ ಸಭೆ ನಡೆಯಿತು. ಕೋದಂಡ ರಾಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಂತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಿತಿಯ ಅಧ್ಯಕ್ಷತೆ ಭಾರತಿ ರಮೇಶ್ ರಾಮೋತ್ಸವದಲ್ಲಿ ಮಹಿಳಾ ಸಮಿತಿಯ ಪಾತ್ರದ ಕುರಿತು ವಿವರಿಸಿದರು. ಉದ್ಯಮಿ ಜಯಂತಿ ಶೆಟ್ಟಿ ಮಾತನಾಡಿ, ರಾಮೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಕಡೆಯಿಂದಲೂ ಮಹಿಳೆಯರು ಬರಬೇಕು, ಮಡಿಕೇರಿಯ ಕೋದಂಡ ರಾಮ ದೇವಾಲಯದಲ್ಲಿ ಈ ರಾಮೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಜಾತಿಗಳನ್ನು ಮೀರಿ ನಡೆಯುತ್ತಿದೆ. ಇಲ್ಲಿ ಎಲ್ಲರೂ ಸಮಾನರು ಎಂದರು.ರಾಮೋತ್ಸವ ಸಮಿತಿಯ ಅಧ್ಯಕ್ಷ ಕೆ.ಎಂ.ಗಣೇಶ್, ಈ ಉತ್ಸವ ಸಂಪೂರ್ಣವಾಗಿ ಯಶಸ್ವಿಯಾಗಬೇಕು. ಯಶಸ್ವಿಯಾಗಲು ಮಹಿಳಾ ಸಮಿತಿಯ ಪಾತ್ರ ಬಹಳಾ ಮುಖ್ಯವಾಗಿರುತ್ತದೆ. ಪ್ರತಿಯೊಂದು ಹಂತದಲ್ಲೂ ಮಹಿಳೆಯರ ಪ್ರಾತಿನಿಧ್ಯ ನಮಗೆ ಶಕ್ತಿ ನೀಡುತ್ತದೆ ಎಂದರು. ಅಲ್ಲದೆ ಉತ್ಸವದ ಸಂಪೂರ್ಣ ತಯಾರಿಯ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ರಾಮೋತ್ಸವ ಸಮಿತಿಯ ಮಹಿಳಾ ಸಮಿತಿಯ ಉಪಾಧ್ಯಕ್ಷರಾದ…
ಮಡಿಕೇರಿ ಮಾ.6 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಮಾರ್ಚ್, 12 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಡ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂರವಾಣಿ ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಮಾ.6 NEWS DESK : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಏಪ್ರಿಲ್ 03 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ನ್ನು ಹೊಂದಿರಬೇಕು ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ…
ಗೋಣಿಕೊಪ್ಪ ಮಾ.6 NEWS DESK : ಗೋಣಿಕೊಪ್ಪ ಪಟ್ಟಣದ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಬೆಂಗಳೂರಿನಿಂದ ಟ್ರಾಫಿಕ್ ತಜ್ಞರ ಸಲಹೆ ಪಡೆದು ಬಗೆಹರಿಸಲಾಗುವುದು ಎಂದು ವಿರಾಜಪೇಟೆ ತಾಲ್ಲೂಕು ಪೊಲೀಸ್ ಉಪಾಧೀಕ್ಷಕ ಜಯಕುಮಾರ್ ಭರವಸೆ ನೀಡಿದರು. ಪರಿಮಳ ಮಂಗಳ ವಿಹಾರದಲ್ಲಿ ನಡೆದ ಜನಸಂಪರ್ಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಟೋ ರಿಕ್ಷಗಳು, ಬಸ್ಸುಗಳ ಸಂಚಾರ ಮತ್ತು ನಿಲುಗಡೆ ಟ್ರಾಫಿಕ್ ಸಮಸ್ಯೆಗೆ ಕಾರಣವಾಗುತ್ತಿದೆ. ಈ ಬಗ್ಗೆ ಚಾಲಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಗುವುದು. ಅಗಲಿಕರಣಗೊಳ್ಳದ ಕಿರಿದಾದ ರಸ್ತೆಗಳಿಂದ ಮತ್ತು ಹೆಚ್ಚಾಗುತ್ತಿರುವ ವಾಹನಗಳ ಸಂಖ್ಯೆಯಿಂದ ಟ್ರಾಫಿಕ್ ಸಮಸ್ಯೆ ಉಲ್ಬಣಿಸುತ್ತಿದೆ. ಇದನ್ನು ನಿಯಂತ್ರಿಸಲು ಸ್ಥಳೀಯ ವರ್ತಕರ ಸಹಕಾರ ಅಗತ್ಯ ಎಂದು ಡಿವೈಎಸ್ಪಿ ಮನವಿ ಮಾಡಿದರು. ಚಾಲಕರು ಹಾಗೂ ವ್ಯಾಪಾರಿಗಳು ತಮ್ಮ ವೈಯಕ್ತಿಕ ಇಚ್ಚೆಗಳ ನಡುವೆಯೂ ಸಾಮಾಜಿಕ ಬದ್ಧತೆ ಮತ್ತು ಕಳಕಳಿ ಹೊಂದಿದಾಗ ಪಟ್ಟಣದ ಬಹುತೇಕ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತದೆ. ಪೊಲೀಸರ ಜತೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮನವಿ ಮಡಿದರು. ಪೊನ್ನಂಪೇಟೆ ತಿರುವಿನಲ್ಲಿ ಸಿಗ್ನಲ್ ಅಳವಡಿಕೆ, ಸಿ.ಸಿ. ಕ್ಯಾಮೆರ ಅಳವಡಿಕೆ,…
ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು ಭಾರತದ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಬಳಿಯ ಇರುವೈಲು ಗ್ರಾಮದಲ್ಲಿರುವ ಒಂದು ಪೂಜ್ಯ ಹಿಂದೂ ದೇವಾಲಯವಾಗಿದೆ. ಈ ದೇವಾಲಯವು ದುರ್ಗಾಪರಮೇಶ್ವರಿ ದೇವಿಗೆ ಸಮರ್ಪಿತವಾಗಿದ್ದು ಇದನ್ನು ಶಕ್ತಿ, ರಕ್ಷಣೆ ಮತ್ತು ಸಮೃದ್ಧಿಯ ಸಾಕಾರರೂಪವಾಗಿ ಪೂಜಿಸಲಾಗುತ್ತದೆ. ಇದು ಸ್ಥಳೀಯ ಸಮುದಾಯಕ್ಕೆ ಪ್ರಮುಖ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರವಾಗಿದೆ. ಇತಿಹಾಸ :: ಶ್ರೀ ದುರ್ಗಾ ಪರಮೇಶ್ವರಿ ದೇವಾಲಯದ ನಿಖರವಾದ ಮೂಲವನ್ನು ಸ್ಪಷ್ಟವಾಗಿ ದಾಖಲಿಸಲಾಗಿಲ್ಲ ಆದರೆ ಹಲವಾರು ಶತಮಾನಗಳಷ್ಟು ಹಳೆಯದು ಎಂದು ನಂಬಲಾಗಿದೆ. ಈ ದೇವಾಲಯವು ಈ ಪ್ರದೇಶದ ಪ್ರಮುಖ ಪೂಜಾ ಸ್ಥಳವಾಗಿದೆ ಮತ್ತು ಕರಾವಳಿ ಕರ್ನಾಟಕ ಪ್ರದೇಶದ ಆಳವಾದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಂಪ್ರದಾಯಗಳನ್ನು ಪ್ರತಿಬಿಂಬಿಸುತ್ತದೆ. ವರ್ಷಗಳಲ್ಲಿ ಇದು ತನ್ನ ಪರಂಪರೆಯನ್ನು ಸಂರಕ್ಷಿಸಲು ಮತ್ತು ಹೆಚ್ಚುತ್ತಿರುವ ಸಂಖ್ಯೆಯ ಭಕ್ತರಿಗೆ ಸ್ಥಳಾವಕಾಶ ಕಲ್ಪಿಸಲು ನವೀಕರಣಗಳಿಗೆ ಒಳಗಾಗಿದೆ. ಮೂಡಬಿದ್ರೆಯ ಚೌಟರ ಸೀಮೆಗೆ ಒಳಪಟ್ಟ ಇರುವೈಲಿನ ದೇವಗಿರಿ, ವಜ್ರಗಿರಿ, ಕನಕಗಿರಿ ಎಂಬ ಪರ್ವತಗಳ ಮಧ್ಯದಲ್ಲಿ ಇರುವ ಈ ದೇವಾಲಯವು ಪುರಾತನದಲ್ಲಿ ಪ್ರಸ್ತುತ್ತ ದೇವಾಲಯವಿರುವ ಪೂರ್ವಕ್ಕೆ…
ಮಡಿಕೇರಿ ಮಾ.6 NEWS DESK : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಜಿ ಅವರನ್ನು ಬಂಧಿಸಿದ ಕ್ರಮವನ್ನು ಖಂಡಿಸಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಎಸ್ಡಿಪಿಐ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಎಸ್ಡಿಪಿಐ ಪಕ್ಷದ ಜನಪರ ಹೋರಾಟಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದರು. ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಅಮೀನ್ ಮೊಹಿಸಿನ್ ಮಾತನಾಡಿ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಜಿ ಅವರ ಬಂಧನ ಕಾನೂನುಬಾಹಿರ ಕ್ರಮವಾಗಿದ್ದು, ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು. ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ನಡೆಸಲಾಗುತ್ತಿರುವ ಹೋರಾಟ ಕೇಂದ್ರ ಸರ್ಕಾರದ ನಿದ್ದೆಗೆಡಿಸಿದೆ. ಹೋರಾಟವನ್ನು ಹತ್ತಿಕ್ಕುವ ಭಾಗವಾಗಿ ಎಸ್ಡಿಪಿಐ ರಾಷ್ಟ್ರೀಯ ಅಧ್ಯಕ್ಷರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದರು. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸುಂಟಿಕೊಪ್ಪ ಮಾತನಾಡಿ ಎಸ್ಡಿಪಿಐ…
ಪನೀರ್ ಕ್ಯಾಲ್ಸಿಯಂ, ಮೆಗ್ನೀಸಿಯಮ್, ತಾಮ್ರ, ವಿಟಮಿನ್ ಎ, ಮ್ಯಾಂಗನೀಸ್, ಪ್ರೋಟೀನ್, ವಿಟಮಿನ್ಗಳು ಮತ್ತು 9 ಅಗತ್ಯ ಅಮೈನೋ ಆಮ್ಲಗಳನ್ನು ಹೊಂದಿರುತ್ತದೆ. ಇದು ಕ್ಯಾಲ್ಸಿಯಂ ಮತ್ತು ಕಬ್ಬಿಣದ ಅತ್ಯುತ್ತಮ ಮೂಲವಾಗಿದೆ. ಕೊಲೆಸ್ಟ್ರಾಲ್ ಮುಕ್ತವಾದ ಆಹಾರವೂ ಹೌದು. ಇದು ತೂಕ ಇಳಿಕೆಗೂ ಸಹಾಯ ಮಾಡುತ್ತದೆ ಮತ್ತು ಮೂಳೆಗಳನ್ನು ಬಲಪಡಿಸುತ್ತದೆ. ಬೇಕಾಗುವ ಪದಾರ್ಥಗಳು :: ಎಣ್ಣೆ- 2 ಚಮಚ, ಜೀರಿಗೆ- 1 ಚಮಚ, ಈರುಳ್ಳಿ- 1 ಸಣ್ಣಗೆ ಹೆಚ್ಚಿದ್ದು, ಉಪ್ಪು- ರುಚಿಗೆ ತಕ್ಕಷ್ಟು, ಹಸಿಮೆಣಸಿನಕಾಯಿ- 1 ಸಣ್ಣಗೆ ಹೆಚ್ಚಿದ್ದು, ಶುಂಠಿ-ಬೆಳ್ಳುಳ್ಳಿ ಪೇಸ್ಟ್- 1 ಚಮಚ, ಅಚ್ಚಖಾರದ ಪುಡಿ- ಅರ್ಧ ಚಮಚ, ಟೊಮೆಟೋ- 1 ಸಣ್ಣಗೆ ಹೆಚ್ಚಿದ್ದು, ಅರಿಶಿನ- ಸ್ವಲ್ಪ, ಗರಂ ಮಸಾಲಾ- ಅರ್ಧ ಚಮಚ, ಪನೀರ್- 2 ಕಪ್ ನಷ್ಟು ಸಣ್ಣಗೆ ಪುಡಿಪುಡಿ ಮಾಡಿದ್ದು, ಕಸೂರಿ ಮೇಥಿ- 1 ಚಮಚ, ಕೊತ್ತಂಬರಿ ಸೊಪ್ಪು- ಸ್ವಲ್ಪ ಮಾಡುವ ವಿಧಾನ :: ದೊಡ್ಡ ಬಾಣಲೆ ತೆಗೆದುಕೊಂಡು ಎಣ್ಣೆ ಬಿಸಿ ಮಾಡಿಕೊಳ್ಳಿ. ಅದಕ್ಕೆ ಜೀರಿಗೆ ಹಾಕಿ. ಅದು ಚಟಪಟ ಅಂದಮೇಲೆ ಹೆಚ್ಚಿದ ಈರುಳ್ಳಿ, ಹಸಿಮೆಣಸು…
ಮಡಿಕೇರಿ ಮಾ.6 NEWS DESK : ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ಸಕಾಲ ಮಾಹಿತಿ ತಂತ್ರಜ್ಞಾನ ಸಮಾಲೋಚಕರ 1 ಹುದ್ದೆಯು ಖಾಲಿ ಇದ್ದು, ಈ ಹುದ್ದೆಗೆ ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂಬಂಧ ಅರ್ಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲೆಯ ಅಧಿಕೃತ ವೆಬ್ ಸೈಟ್ https://kodagu.nic.in ರಲ್ಲಿ ಪಡೆದು ಭರ್ತಿಮಾಡಿ, ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ವಿಳಾಸಕ್ಕೆ ಅಂಚೆ/ ಟಪಾಲು ಮುಖೇನ ಸಲ್ಲಿಸಬಹುದೆಂದು ಅಪರ ಜಿಲ್ಲಾಧಿಕಾರಿ ಹಾಗೂ DITC ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ. ಶೈಕ್ಷಣಿಕ ವಿದ್ಯಾರ್ಹತೆ :: B.E. or B.Tech / BCA Stream : Computer Science or Information Science Enginnering, Electronic and Communication Telecom, ಅನುಭವ :: ಯಾವುದೇ ಸರ್ಕಾರಿ ಕಚೇರಿಯಲ್ಲಿ / ಕಂಪನಿ/ ಸಂಸ್ಥೆಗಳಲ್ಲಿ ಅನುಭವ ಹೊಂದಿದ್ದಲ್ಲಿ ಪ್ರಮಾಣ ಪತ್ರ (Freshers…






