ಮಡಿಕೇರಿ NEWS DESK ಫೆ.13 : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾಮದ ಜವಾಹರ್ ನವೋದಯ ವಿದ್ಯಾಲಯದ ವಿದ್ಯಾರ್ಥಿ ಎಂ.ಅಮಿತ್(17)ನ ಮೃತದೇಹ ಸಮೀಪದ ಕುಟುಹೊಳೆಯಲ್ಲಿ ಗುರುವಾರ ಪತ್ತೆಯಾಗಿದೆ. ನವೋದಯ ವಿದ್ಯಾಸಂಸ್ಥೆಯ ಸಿಬ್ಬಂದಿ ಆನಂದ್ ಎಂಬುವವರ ಪುತ್ರ ಎಂ.ಎ.ಅಮಿತ್ ಫೆ.11ರಂದು ಬೆಳಗ್ಗೆ 7 ಗಂಟೆಗೆ ಶಾಲಾ ಆವರಣದಲ್ಲಿರುವ ಸಿಬ್ಬಂದಿಗಳ ವಸತಿ ಗೃಹದಿಂದ ಶಾಲೆಗೆಂದು ತೆರಳಿದಾತ ಮುಖ್ಯ ದ್ವಾರದ ಮೂಲಕ ರಸ್ತೆಯತ್ತ ಸಾಗಿದ್ದಾನೆ ಎಂದು ತಿಳಿದು ಬಂದಿತ್ತು. ಇದನ್ನು ಗಮನಿಸಿದ ವಿದ್ಯಾಸಂಸ್ಥೆಯ ರಕ್ಷಣಾ ಸಿಬ್ಬಂದಿಯೊಬ್ಬರು, ಆನಂದ್ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಆನಂದ್ ಸ್ಥಳಕ್ಕೆ ಆಗಮಿಸಿದರಾದರು, ಪುತ್ರನ ಪತ್ತೆಯಾಗಿರಲಿಲ್ಲ. ಬಳಿಕ ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ವಿದ್ಯಾಸಂಸ್ಥೆಯ ಬಳಿಯಲ್ಲೆ ಮಡಿಕೇರಿ ನಗರಕ್ಕೆ ನೀರು ಸರಬರಾಜು ಮಾಡುವ ಕೂಟುಹೊಳೆ ಜಲಾಗಾರವಿದೆ. ಇದರ ಹಿನ್ನೇರಿನ ದಡದಲ್ಲಿ ವಿದ್ಯಾರ್ಥಿ ಅಮಿತ್ನ ಚಪ್ಪಲಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ರ್ಯಾಫ್ಟರ್ ಮೂಲಕ ಕಾರ್ಯಾಚರಣೆ ನಡೆಸಿದರು.…
ಲೇಖಕ: admin
ವಿರಾಜಪೇಟೆ ಫೆ.13 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರಾಜಪೇಟೆ ಬಿ,ಸಿ ಟ್ರಸ್ಟ್ ಹಾಗೂ ಸ್ವಸಹಾಯ ಸಂಘಗಳ ಒಕ್ಕೂಟಗಳ ಆಶ್ರಯದಲ್ಲಿ ಪೊನ್ನಂಪೇಟೆ ವಲಯದ ಟಿ-ಶೆಟ್ಟಿಗೇರಿ ಕಾರ್ಯಕ್ಷೇತ್ರದಲ್ಲಿ ನೆಲ ಜಲ ಸಂರಕ್ಷಣೆ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾತನಾಡಿದ ತಡಿಯಂಗಡ ಸೌಮ್ಯ, ನೀರು ಮಾನವನ ಆರೋಗ್ಯವನ್ನು ಕಾಪಾಡುವ ಅವಶ್ಯಕವಾದ ಜೀವ. ಹನಿ ನೀರಿಲ್ಲದೆ ಸಕಲ ಜೀವಿಗಳ ಬದುಕು ಅಸಾಧ್ಯ. ನೆಲ ಜಲ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಹಿತಿ ನೀಡಿದರು. ಕೃಷಿ ಮೇಲ್ವಿಚಾರಕರಾದ ವಸಂತ್ ಪ್ರಾಸ್ತವಿಕವಾಗಿ ಮಾತನಾಡಿದರು. ಒಕ್ಕೂಟದ ಅಧ್ಯಕ್ಷರಾದ ಸುಶೀಲ, ಒಕ್ಕೂಟದ ಪದಾಧಿಕಾರಿಗಳಾದ ಸರಸ್ವತಿ, ಎಂ.ಡಿ.ಲತಾ, ಉಷಾ, ಸೇವಾ ಪ್ರತಿನಿಧಿ ಗೀತಾ, ರಂಜಿತಾ ಸಂಘದ ಸದಸ್ಯರು ಊರಿನ ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿ ಫೆ.13 NEWS DESK : ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದ ಶ್ರೀ ಜ್ಯೋತಿ ಯುವಕ ಸಂಘದ ವತಿಯಿಂದ ಇದೇ ಪ್ರಥಮ ಬಾರಿಗೆ, ನಗರದ ದಶಮಂಟಪಗಳಿಗೆ ಸಂಬಂಧಿಸಿದಂತೆ ‘ದಶಮಂಟಪ ಪ್ರೀಮಿಯರ್ ಲೀಗ್’ (ಡಿಪಿಎಲ್) ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಫೆ.15 ಮತ್ತು 16 ರಂದು ನಗರದ ಪೊಲೀಸ್ ಮೈದಾನದಲ್ಲಿ ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಶ್ರೀಜ್ಯೋತಿ ಯುವಕ ಸಂಘದ ಉಪಾಧ್ಯಕ್ಷ ಹೆಚ್.ಎನ್.ಮಹೇಶ್ ಪಂದ್ಯಾವಳಿ ಬಗ್ಗೆ ಮಾಹಿತಿ ನೀಡಿ, ದೇಚೂರು ಶ್ರೀ ಬಾಲಕ ಬಲರಾಮಮಂದಿರ ಸಮಿತಿ, ಶ್ರೀ ಕೋದಂಡ ರಾಮ ದೇವಾಲಯ, ಶ್ರೀ ಕಂಚಿಕಾಮಾಕ್ಷಿಯಮ್ಮ, ಶ್ರೀ ಕೋಟೆ ಮಾರಿಯಮ್ಮ, ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ, ಶ್ರೀ ಕೊಟೆ ಮಹಾ ಗಣಪತಿ ದೇವಾಲಯ, ಶ್ರೀ ಕರವಲೆ ಭಗವತಿ ಮಹಿಷಮರ್ಧಿನಿ ದೇವಸ್ಥಾನದ ಮಂಟಪ ಸಮಿತಿಗಳು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿವೆ. ಅನಿವಾರ್ಯ ಕಾರಣಗಳಿಂದ ಪೇಟೆ ಶ್ರೀ ರಾಮಮಂದಿರ, ಶ್ರೀ ದಂಡಿನ ಮಾರಿಯಮ್ಮ ಹಾಗೂ ಶ್ರೀ ಚೌಡೇಶ್ವರಿ ದೇವಸ್ಥಾನದ ಮಂಟಪ ಸಮಿತಿಗಳು ಪಾಲ್ಗೊಳ್ಳುತ್ತಿಲ್ಲವೆಂದು ತಿಳಿಸಿದರು. ಪಂದ್ಯಾವಳಿಯಲ್ಲಿ ಮಡಿಕೇರಿ ತಾಲ್ಲೂಕಿಗೆ…
ಮಡಿಕೇರಿ ಫೆ.13 NEWS DESK : ದುರ್ಬಲ ವರ್ಗದ ಮತ್ತು ಬಡ ಮಂದಿಯ ಮೂಲಭೂತ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಹೋರಾಟ ನಡೆಸಬೇಕಾದ ದಲಿತ ಸಂಘಟನೆಗಳ ಮುಖಂಡರು, ಮಡಿಕೇರಿಯಲ್ಲಿರುವ ‘ಡಾ.ಅಂಬೇಡ್ಕರ್ ಭವನ’ದ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುವುದು ಸರಿಯಲ್ಲ. ಈ ಹೋರಾಟವನ್ನು ತಕ್ಷಣ ಕೈಬಿಡಬೇಕು ಎಂದು ಕರ್ನಾಟಕ ಸಲಿತ ಸಂಘರ್ಷ ಸಮಿತಿ(ನಾಗರಾಜು ಬಣ)ಯ ರಾಜ್ಯ ಸಂಘಟನಾ ಸಂಚಾಲಕ ರಾಜಶೇಖರ್ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಸುದರ್ಶನ ವೃತ್ತದಲ್ಲಿರುವ ಡಾ.ಅಂಬೇಡ್ಕರ್ ಭವನವನ್ನು ಅಲ್ಲಿನ ಭವನ ಸಮಿತಿ ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಬರುತ್ತಿದೆ. ಭವನವನ್ನು ಸಾಮಾಜಿಕ ಕಾರ್ಯಚಟುವಟಿಕೆಗಳಿಗೆ ಉಚಿತವಾಗಿಯೂ ನೀಡುತ್ತಿದ್ದಾರೆ. ಇದರ ನಡುವೆಯೇ ಅಂಬೇಡ್ಕರ್ ಭವನದ ವಿಚಾರವನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುವುದು ಸರಿಯಾದ ಕ್ರಮವಲ್ಲವೆಂದು ತಿಳಿಸಿದರು. ಅಂಬೇಡ್ಕರ್ ಭವನಕ್ಕೆ ಸಂಬಂಧಿಸಿದಂತೆ ಲೋಪಗಳಾಗಿದ್ದಲ್ಲಿ, ಭ್ರಷ್ಟಾಚಾರಗಳಿದ್ದರೆ ಜಿಲ್ಲಾಧಿಕಾರಿಗೆ ದೂರು ನೀಡಲಿ. ಜಿಲ್ಲಾಧಿಕಾರಿಗಳು ತನಿಖೆ ನಡೆಸಿ ಭ್ರಷ್ಟಾಚಾರ ಲೋಪಗಳು ಕಂಡುಬಂದರೆ ಕ್ರಮಕೈಗೊಳ್ಳುತ್ತಾರೆ. ಅದನ್ನು ಬಿಟ್ಟು ಅನಗತ್ಯವಾಗಿ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಹೋರಾಟಗಳನ್ನು ನಡೆಸಬೇಡಿ ಎಂದರು. ದಸಂಸ(ಡಿ.ಜೆ.ಸಾಗರ್ ಬಣದ)…
ಮಡಿಕೇರಿ ಫೆ.13 NEWS DESK : ಜೆಸಿಐ ನ ಪ್ರತಿಷ್ಠಿತ ಘಟಕಗಳಲ್ಲಿ ಒಂದಾದ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ 14ನೇ ಅಧ್ಯಕ್ಷರಾಗಿ ತೀತಮಾಡ ಡಿ.ನಿತನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಚಿಂಡಮಾಡ ಜೆ.ಚೇತನ್, ಖಜಾಂಚಿಯಾಗಿ ಚೋನಿರ ಬಿ.ಸೋಮಣ್ಣ ಹಾಗೂ ಸಹ ಕಾರ್ಯದರ್ಶಿಯಾಗಿ ತೀತಮಾಡ ಎಸ್.ಸುಜೀತ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ತೀತಮಾಡ ಬಿ.ಅಯ್ಯಪ್ಪ (ಘಟಕ), ಅಪ್ಪಡೇರಂಡ ಎಂ.ಬೋಪಣ್ಣ (ವ್ಯಾಪಾರ), ಪೆಮ್ಮಂಡ ಎ.ಸೋಮಣ್ಣ (ಪಿಆರ್ ಮತ್ತು ಮಾರ್ಕೆಟಿಂಗ್), ಕೊಟ್ರಮಾಡ ನಿತಿನ್ (ತರಬೇತಿ), ಬೊಜ್ಜಂಗಡ ಎಂ.ಚಂಗಪ್ಪ (ಕಮ್ಯೂನಿಟಿ ಡೆವಲಪ್ಮೆಂಟ್), ಚೇಂದಂಡ ಟಿ.ದೀಪಕ್ (ಬೆಳವಣಿಗೆ ಹಾಗೂ ಅಭಿವೃದ್ಧಿ) ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಟಿ.ಎಸ್.ಅಕ್ಷಯ್, ಬೊಜ್ಜಂಗಡ ಸಂಪತ್, ತೀತಿಮಾಡ ಲಿಖಿತ್, ತೀತಿಮಾಡ ಬೋಪಣ್ಣ, ತೀತಿಮಾಡ ಗಿರೀಶ್ ಹಾಗೂ ಜೂನಿಯರ್ ಜೆಸಿಯಾಗಿ ತಸ್ವಿ ನಿತಿನ್ ನೇಮಕಗೊಂಡಿದ್ದಾರೆ. 2024ನೇ ಸಾಲಿನ ಅಧ್ಯಕ್ಷ ಪೆಮ್ಮಂಡ ಪಿ.ಮಂಜು ಬೋಪಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪೂರ್ವಾಧ್ಯಕ್ಷರಾದ ಅಪ್ಪಂಡೇರಂಡ ದಿನು ದೇವಯ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಪೂರ್ವಾಧ್ಯಕ್ಷರುಗಳಾದ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಹಾಗೂ ಬಿ.ಇ.ಕಿರಣ್ ಚುನಾವಣಾ ಪ್ರಕ್ರಿಯೆಯಲ್ಲಿ ಸಹಕಾರ ನೀಡಿದರು. ಮಾ.7 ರಂದು…
ಮಡಿಕೇರಿ ಫೆ.13 NEWS DESK : ತಾಳತ್ತಮನೆಯ ಶ್ರೀ ದುರ್ಗಾ ಭಗವತಿ ಕ್ಷೇತ್ರದಲ್ಲಿ ಶ್ರೀ ದುರ್ಗಾ ಭಗವತಿ, ಮಹಾಗಣಪತಿ ಹಾಗೂ ನಾಗ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಗಳ ನೇತೃತ್ವದಲ್ಲಿ ದೇವಾಲಯದಲ್ಲಿ ಎರಡು ದಿನಗಳ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ಫೆ.11ರ ಸಂಜೆಯಿಂದಲೇ ಹಸಿರು ಹೊರೆಕಾಣಿಕೆ, ಉಗ್ರಾಣ ಪೂಜೆ ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನೆರವೇರಿತು. ರಾತ್ರಿ ದೀಪಾರಾಧನೆ, ಮಹಾಪೂಜೆ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು. ಮರುದಿನ ಪುಣ್ಯಾಹವಾಚನ, ಗಣಪತಿ ಹೋಮ, ಕಲಶ ಪೂಜೆ, ನಾಗತಂಬಿಲ, ಗುಳಿಗ, ಚಾಮುಂಡಿ ತಂಬಿಲ, ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಜೆ ಮಡಿಕೇರಿ ವಿಜಯ ವಿನಾಯಕ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ರಂಗಪೂಜೆ, ದೇವರ ಬಲಿ ಉತ್ಸವ, ಮಹಾದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನೆರವೇರಿತು.…
ಮಡಿಕೇರಿ ಫೆ.13 NEWS DESK : ಮಾಯಮುಡಿ ಗ್ರಾಮ ಪಂಚಾಯಿತಿ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಕ್ಕಳ ಗ್ರಾಮ ಸಭೆ ನಡೆಯಿತು. ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ನಂದಿನಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಗ್ರಾ.ಪಂ ಅಧ್ಯಕ್ಷ ಎ.ಎಸ್.ಟಾಟು ಮೊಣ್ಣಪ್ಪ ಉದ್ಘಾಟಿಸಿ ಮಾತನಾಡಿ, ಗ್ರಾ.ಪಂ ಶೇ.20ರಷ್ಟು ಅನುದಾನವನ್ನು ಶಾಲೆಗಳ ಅಭಿವೃದ್ಧಿಗಾಗಿ ಬಳಸಲಾಗುತ್ತಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಕಡ್ಡಾಯವಾಗಿ ತರಗತಿಗಳಿಗೆ ಹಾಜರಾಗಬೇಕು ಮತ್ತು ಓದಿನ ಕಡೆ ಗಮನಹರಿಸಬೇಕು ಎಂದು ಸಲಹೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ರೀತಾ ಮಾತನಾಡಿ, ಮಕ್ಕಳ ಹಕ್ಕುಗಳು ಹಾಗೂ ಅವುಗಳ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು. ಮಕ್ಕಳು ತಮಗಾಗುವ ಅನ್ಯಾಯವನ್ನು ಶಿಕ್ಷಕರೊಂದಿಗೆ ಚರ್ಚಿಸಬೇಕೆಂದು ಕಿವಿ ಮಾತು ಹೇಳಿದರು. ಆರೋಗ್ಯ ಇಲಾಖೆ ಅಧಿಕಾರಿ ರಮ್ಯ ಮಾತನಾಡಿ, ಆರೋಗ್ಯ ಇಲಾಖೆಯಿಂದ ನೀಡಲಾಗುವ ವಿಟಮಿನ್ ಮಾತ್ರೆಗಳು ಹಾಗೂ ಇತರ ಆರೋಗ್ಯ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ಸಭೆಯಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರವಿ ಮೆಟ್ಟಲ್ಕೋಡ್, ಶಾಲೆಯ ಮುಖ್ಯೋಪಾಧ್ಯಾಯರಾದ…
ಮಡಿಕೇರಿ ಫೆ.13 NEWS DESK : ಭಾಗಮಂಡಲ ಸಮೀಪದ ಕೋರಂಗಾಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಸಂತೆ, ಛದ್ಮವೇಷ ಸ್ಪರ್ಧೆ ಹಾಗೂ ವಿಜ್ಞಾನ ಮಾದರಿ ಮತ್ತು ಕರಕುಶಲ ವಸ್ತುಗಳ ಪ್ರದರ್ಶನ ಗಮನ ಸೆಳೆಯಿತು. ಸಂಸ್ಥೆಯ ಕಾರ್ಯದರ್ಶಿ ಮಿಥುನ್ ಚಂಗಪ್ಪ ಹಾಗೂ ಮುಖ್ಯೋಪಾಧ್ಯಾಯರಾದ ಶ್ವೇತನ್ ಚಂಗಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಕ್ಕಳ ಸಂತೆಯನ್ನು ಅಯ್ಯಂಗೇರಿ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉದಿಯನ ಮಿಥುನ್ ಉದ್ಘಾಟಿಸಿದರೆ, ವಿಜ್ಞಾನ ಮಾದರಿ ಪ್ರದರ್ಶನವನ್ನು ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿಜ್ಞಾನ ಉಪನ್ಯಾಸಕಿ ಪೇರಿಯನ ಸಾಧನ ಉದ್ಘಾಟಿಸಿದರು. ಮಕ್ಕಳಿಗಾಗಿ, ಛದ್ಮವೇಷ ಸ್ಪರ್ಧೆ, ಪೋಷಕರಿಗೆ ವಿವಿಧ ಕ್ರೀಡಾಕೂಟುಗಳು ನಡೆದವು. ಕರಾಟೆ ಶಿಕ್ಷಕ ನಂಜುಂಡ, ಯೋಗ ಶಿಕ್ಷಕ ನಾಗರಾಜ್ ಹಾಗೂ ಎಲ್ಲಾ ಶಿಕ್ಷಕ ವೃಂದದವರ ಉಪಸ್ಥಿತಿಯಲ್ಲಿ ಸ್ಪರ್ಧೆಗಳು ನಡೆದವು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ವಿದ್ಯಾರ್ಥಿನಿ ಎಂ.ಎ.ಹಿಬಾ ಫಾತಿಮಾ ತಂಡ ಪ್ರಾರ್ಥನೆ ನೆರವೇರಿಸಿದರೆ, ಶಾಲೆಯ ಶಿಕ್ಷಕಿ ಎಂ.ಎ.ಚಿತ್ರ ಹಾಗೂ ಮಣವಟ್ಟಿರ ದಯಾ ಚಿನ್ನಪ್ಪ ನಿರೂಪಿಸಿದರು. ಸಂಸ್ಥೆಯ ಕಾರ್ಯದರ್ಶಿ ಮಿಥುನ್ ಚಂಗಪ್ಪ ವಂದನಾರ್ಪಣೆ ನೆರವೇರಿಸಿದರು.
ಮಡಿಕೇರಿ ಫೆ.13 NEWS DESK : ಪೊನ್ನಂಪೇಟೆ ತಾಲ್ಲೂಕು ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿಯಾರ ಗಿರೀಶ್ ಕುಟುಂಬಸ್ಥರ ಮನೆಗೆ ಹೋಗುವ ತೋಡಿಗೆ ಕಾಲು ಸೇತುವೆ ಕಾಮಗಾರಿ ನಡೆಯುತ್ತಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಲಯ ಅಧ್ಯಕ್ಷರು, ಕಣಿಯಾರ ಕುಟುಂಬಸ್ಥರು ಸಾರ್ವಜನಿಕರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು. ಸ್ಥಳದಲ್ಲಿ ಉಪಸ್ಥಿತರಿದ್ದ ಕುಟುಂಬಸ್ಥರು ಶಾಸಕರಿಗೆ ಧನ್ಯವಾದಗಳು ಅರ್ಪಿಸಿದರು. ಮಳೆಗಾಲದಲ್ಲಿ ನೀರಿನ ರಭಸ ಹೆಚ್ಚಾಗಿದ್ದು, ಈ ಭಾಗದ ನಿವಾಸಿಗಳಿಗೆ ತಮ್ಮ ಮನೆಗಳಿಗೆ ತೆರಳಲು ಅಪಾಯಕಾರಿ ಬಿದಿರಿನ ಪಾಲಗಳನ್ನು ಬಳಸಿ ಹೋಗುವ ಸನ್ನಿವೇಶ ನಿರ್ಮಾಣವಾಗಿತ್ತು. ಈ ಬಗ್ಗೆ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಶಾಸಕರು ಮಂಜೂರು ಮಾಡಿದ್ದರು.
ಬೆಂಗಳೂರು ಫೆ.13 NEWS DESK : ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಅವರ ಅಧಿಕೃತ ನಿವಾಸ `ಕಾವೇರಿ’ಯಲ್ಲಿ ಗುರುವಾರ ಒಡಂಬಡಿಕೆಗೆ ಅಂಕಿತ ಬಿದ್ದಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಉಪಸ್ಥಿತಿಯಲ್ಲಿ ಈ ಪ್ರಕ್ರಿಯೆ ನೆರವೇರಿತು. ಒಡಂಬಡಿಕೆಗೆ ಸರಕಾರದ ಪರವಾಗಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ವೋಲ್ವೊ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ ಸಹಿ ಹಾಕಿದರು. ಇಲ್ಲಿನ ಅರಮನೆ ಆವರಣದಲ್ಲಿ ನಡೆಯತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸಕ್ರಿಯವಾಗಿರುವ ವೊಲ್ವೊ ಸಂಸ್ಥೆ, ಅದರ ಭಾಗವಾಗಿ ಈ ಪ್ರಮುಖ ಒಪ್ಪಂದಕ್ಕೆ ಸಹಿ ಹಾಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, `ವೋಲ್ವೋ ಕಂಪನಿಯು 25 ವರ್ಷಗಳ ಹಿಂದೆಯೇ ರಾಜ್ಯಕ್ಕೆ ಬಂದು,…






