ಲೇಖಕ: admin

ನಾಪೋಕ್ಲು ಫೆ.13 NEWS DESK : ಪಂಚಾಯತಿ ವ್ಯಾಪ್ತಿಯ ಮಾರುಕಟ್ಟೆ ಬಳಿ ನೂತನವಾಗಿ ಅಳವಡಿಸಿರುವ ಹೈ ಮಾಸ್ಟ್ ಸೋಲಾರ್ ದೀಪವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಲೋಕಾರ್ಪಣೆ ಮಾಡಿದರು.    ಈ ಭಾಗದಲ್ಲಿ ಹಲವು ಕಾಲದಿಂದ ರಾತ್ರಿ ಹೊತ್ತು ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಇದನ್ನು ಗಮನಿಸಿ ಪಂಚಾಯತಿ ವತಿಯಿಂದ ಮೂರು ಲಕ್ಷ ರೂ.ವೆಚ್ಚದಲ್ಲಿ 3 ಹೈ ಮಾಸ್ಟ್ ಸೋಲಾರ್ ದೀಪ ವ್ಯವಸ್ಥೆ ಕಲ್ಪಿಸಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಕಾಂಗ್ರೆಸ್ ವಲಯ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ, ಕಾಂಗ್ರೆಸ್ ಪ್ರಮುಖ ಬಿದ್ದಾತಂಡ ತಮ್ಮಯ್ಯ, ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ, ಹೇಮಾ ಅರುಣ್, ಬಿ.ಆರ್.ಗಂಗಮ್ಮ ನಾಯಕಂಡ ಕುಞ್ಞಣ್ಣ,  ಎಲ್ತಂಡ ಶಾಂತಿ ಸೇರಿದಂತೆ ಇನ್ನಿತರರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ 

Read More

ವಿರಾಜಪೇಟೆ ಫೆ.13 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿರಾಜಪೇಟೆ ಬಿಸಿ ಟ್ರಸ್ಟ್  ವತಿಯಿಂದ ನೆಲ ಜಲ ಸಂರಕ್ಷಣೆ ಮಾಹಿತಿ ಕಾರ್ಯಕ್ರಮ ಪೊನ್ನಂಪೇಟೆ ವಲಯದ ಅರವತ್ತೊಕ್ಲು ಕಾರ್ಯಕ್ಷೇತ್ರದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸಂತ ಅಂತೋಣಿ ಪ್ರೌಢಶಾಲೆ ಸಹ ಶಿಕ್ಷಕಿ ಬೆಂಜಂಡ ರಶ್ಮಿ ದೇವಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನೆಲ-ಜಲ ಸಂರಕ್ಷಣೆ ಮಾಡುವುದು ನಮ್ಮ ಆದ್ಯ ಕರ್ತವ್ಯ. ಜಲಜೀವನ್ ಮಿಷನ್ ಯೋಜನೆಯಲ್ಲಿ ಮನೆ ಮನೆಗೂ ನೀರು ಕೊಡುವ ಯೋಜನೆ ಇದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು. ನೆಲ ಜಲ ಸಂರಕ್ಷಣೆ ಪರಿಸರ ಸಂರಕ್ಷಣೆಯ ಅಂಶವಾಗಿದೆ. ನೆಲ ಸಂರಕ್ಷಣೆಯು ಮಣ್ಣಿನ ಸಾರವನ್ನು ಉಳಿಸುವುದು, ನೀರಾವರಿ ಮತ್ತು ನೀರು ಸಂಗ್ರಹಣೆಯನ್ನು ಉತ್ತೇಜಿಸುವುದು, ಮಣ್ಣಿನ ಕ್ಷಯ ಮತ್ತು ಮಾಲಿನ್ಯವನ್ನು ತಡೆಯುವ ಬಗ್ಗೆ ಉತ್ತಮ ಮಾಹಿತಿ ಮಾರ್ಗದರ್ಶನ ನೀಡಿದರು. ಕೃಷಿ ಮೇಲ್ವಿಚಾರಕರಾದ ವಸಂತ್ ನೆಲ ಜಲ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷರಾದ ಗಣೇಶ್ ಹಾಗೂ ಪದಾಧಿಕಾರಿಗಳಾದ ಪಿ.ಕೆ.ರೇಷ್ಮಾ, ಶೋಭ ಮೋಹನ್, ಶಕುಂತಲಾ,…

Read More

ಕಾರವಾರ ಫೆ.13 NEWS DESK  : ಪದ್ಮಶ್ರೀ, ನಾಡೋಜಾ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ಅವರು ಅನಾರೋಗ್ಯದಿಂದ (91) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ‌ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಅವರನ್ನು ಜಾನಪದ ಕೋಗಿಲೆ ಅಂತಲೂ ಕರೆಯಲಾಗುತ್ತಿತ್ತು.  ಸುಕ್ರಿ ಬೊಮ್ಮಗೌಡ ಬಾಲ್ಯದಲ್ಲಿದ್ದಾಗ ತಮ್ಮ ತಾಯಿ ಮೂಲಕ ಜಾನಪದ ಹಾಡುಗಳನ್ನು ಕಲಿತಿದ್ದರು. ಜಾನಪದ ಹಾಡು, ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರದಾಯಿಕ ಸಂಗೀತ ಹಾಡುಗಳನ್ನು ಸಂರಕ್ಷಿಸಿಕೊಂಡು ಹೋಗುವಲ್ಲಿ ಶ್ರಮಿಸಿದ್ದರು. ಹಾಡುಗಳು ಮಾತ್ರವಲ್ಲದೇ ವಿವಿಧ ಸಾಮಾಜಿಕ ಹೋರಾಟಗಳಲ್ಲಿಯೂ ಮುಂಚೂಣಿಯಲ್ಲಿದ್ದರು. ಇತ್ತೀಚೆಗೆ ಶಿರೂರಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತಕ್ಕೆ ಮರುಗಿದ್ದರು.ಇವರಲ್ಲಿರುವ ಅದ್ಭುತ ಹಾಡುಗಾರಿಕೆ ಕಲೆಯನ್ನು ಗುರುತಿಸಿದ್ದ ಭಾರತ ಸರ್ಕಾರ, 2017ರಲ್ಲಿ ಪದ್ಮಶ್ರೀ…

Read More

ನಾಪೋಕ್ಲು ಫೆ.13 NEWS DESK : ವಿದ್ಯಾರ್ಥಿಗಳು ನಿರಂತರವಾದ ಅಧ್ಯಯನ ಮತ್ತು ಪರಿಶ್ರಮದಿಂದ ಮಾತ್ರ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಬೆಂಗಳೂರು ಗೌಡ ಸಮಾಜದ ಅಧ್ಯಕ್ಷ ಕೇಕಡ ನಾಣಯ್ಯ ಹೇಳಿದರು. ಚೇರಂಬಾಣೆ ಅರುಣ ವಿದ್ಯಾ ಸಂಸ್ಥೆಯಲ್ಲಿ ಓಜಸ್ವಿ ಚೈತನ್ಯ ಫೌಂಡೇಶನ್ ವತಿಯಿಂದ ಬೆಂಗಳೂರು ಕೊಡಗು ಗೌಡ ಸಮಾಜ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ “ನಾನು ಮತ್ತು ನನ್ನ ಭವಿಷ್ಯ” ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಗುರಿಯ ಸ್ಪಷ್ಟತೆಯನ್ನು ಹೊಂದಿರಬೇಕು ಎಂದ ಅವರು ಜೀವನದಲ್ಲಿ ಯಾವುದೇ ವ್ಯಸನಕ್ಕೆ ಬಲಿಯಾಗದೆ ಸಮಾಜ ಮತ್ತು ದೇಶದ ಹಿತವನ್ನು ಕಾಪಾಡುವ ಸಜ್ಜನಿಕೆಯನ್ನು ಬೆಳೆಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಸಮಾರಂಭದಲ್ಲಿ ಬೆಂಗಳೂರು ಗೌಡ ಸಮಾಜದ ಉಪಾಧ್ಯಕ್ಷರಾದ ಅಯ್ಯಟಿರ ಮೋಹನ್, ಬೇಕಲ್ ಬಿಪಿನ್, ಅಳ್ಮಂಡ ಮೋಹನ್ ದೇವಯ್ಯ, ಅರುಣ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಪಿ.ಎಸ್.ಸುಬ್ಬಯ್ಯ, ಬೋಧಕರು, ಸಿಬ್ಬಂದಿ ಹಾಗೂ ಮಕ್ಕಳು ಉಪಸ್ಥಿತರಿದ್ದರು. ಓಜಸ್ವಿ ಚೈತನ್ಯ ಫೌಂಡೇಶನ್ ಸಂಪನ್ಮೂಲ ವ್ಯಕ್ತಿಗಳಾದ…

Read More

ನಾಪೋಕ್ಲು ಫೆ.13 NEWS DESK : ಧಾರ್ಮಿಕ ಕೇಂದ್ರಗಳಲ್ಲಿ ಆಚರಿಸಲ್ಪಡುವ ಹಬ್ಬಗಳು ದೇಶದ ನೈಜ ಸಂಸ್ಕೃತಿಯನ್ನು ಬಿಂಬಿಸುತ್ತವೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಕಕ್ಕಬೆ ಗ್ರಾಮ ಪಂಚಾಯಿತಿಯ ಕುಂಜಿಲ ಗ್ರಾಮದ ಪಯ್‍ನರಿ ದರ್ಗಾದ ವಾರ್ಷಿಕ ಉರುಸ್ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದಲ್ಲಿ ಎಲ್ಲರೂ ಅವರವರ ಧರ್ಮ ಪಾಲನೆ ಮತ್ತು ಆಚರಣೆಗಳನ್ನು ಸ್ವತಂತ್ರವಾಗಿ ಆಚರಿಸುವಂತಾಗಬೇಕು ಎಂಬುದೇ ಈ ದೇಶದ ಸಂವಿಧಾನದ ಮೂಲ ಉದ್ದೇಶ. ಒಂದೂವರೆ ವರ್ಷದಲ್ಲಿ ರಾಜ್ಯಾದ್ಯಂತ ಹಲವಾರು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ನ್ಯಾಯ ಒದಗಿಸುವಂತಹ ಯೋಜನೆಗಳನ್ನು ಸರ್ಕಾರ ರೂಪಿಸಿದೆ. ವಿರಾಜಪೇಟೆ ಕ್ಷೇತ್ರದಲ್ಲೂ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಇದರಲ್ಲಿ ಹಲವು ಕಾಮಗಾರಿಗಳು ಮುಕ್ತಾಯವಾಗಿದೆ. ಕುಂಜಿಲ ವ್ಯಾಪ್ತಿಯಲ್ಲಿ ಚುನಾವಣೆಗೆ ಮುನ್ನ ಜನರಿಗೆ ಕೊಟ್ಟ ಭರವಸೆಯಂತೆ ರಸ್ತೆ ಹಾಗೂ ವಿವಿಧ ಕಾಮಗಾರಿಗಳು ನಡೆಸಲಾಗಿದೆ. ಮುಂದೆಯೂ ಕ್ಷೇತ್ರದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಎಲ್ಲರೂ…

Read More

ಸುಂಟಿಕೊಪ್ಪ ಫೆ.13 NEWS DESK : ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎ.ಎಸ್.ಶ್ರೀಶಾ ಭಾಗವಹಿಸಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಜಿಲ್ಲೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾಳೆ.

Read More

ಸುಂಟಿಕೊಪ್ಪ ಫೆ.13 NEWS DESK : ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ವಾಹನ ಚಾಲಕರ ಸಂಘದ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ನೋಂದಣಿ ಅಭಿಯಾನ ನಡೆಯಿತು. ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಕಚೇರಿಯಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಹಾಗೂ ವಾಹನ ಚಾಲಕರ ಸಂಘದವರು ನಿಗಧಿತ ದಾಖಲಾತಿಗಳನ್ನು ಪರಿಶೀಲಿಸುವ ಮೂಲಕ ಚಾಲಕರಿಗೆ, ವರ್ಕ್‍ಶಾಪ್ ಸಿಬ್ಬಂದಿಗಳಿಗೆ ಸೇರಿದಂತೆ ಇತರೆ ಕಾರ್ಮಿಕರಿಗೆ ಇಲಾಖೆಯ ವತಿಯಿಂದ ಕರ್ನಾಟಕ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಫಲಾನುಭವಿಗಳಿಗೆ ಇಲಾಖೆಯಿಂದ ನೀಡಲಾಗುವ ಸೌಲಭ್ಯಗಳ ಮಾಹಿತಿ ನೀಡಲಾಯಿತು. ಅಲ್ಲದೇ ಸ್ಥಳದಲ್ಲೇ ನೋಂದಾವಣೆ ಪ್ರಕ್ರಿಯೆಯನ್ನು ನಡೆಸಿದರು. ಈ ಸಂದರ್ಭ 50ಕ್ಕೂ ಹೆಚ್ಚು ಮಂದಿ ನೋಂದಾಯಿಸಿಕೊಂಡರು. ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಪದಾಧಿಕಾರಿಗಳು ಹಾಗೂ ಕಾರ್ಮಿಕರ ಕಲ್ಯಾಣ ಮಂಡಳಿಯ ಅಧಿಕಾರಿಗಳು ಇದ್ದರು.

Read More

ಸೋಮವಾರಪೇಟೆ ಫೆ.13 NEWS DESK : 10 ಕೋಟಿ ರೂ.ಗಳ ವೆಚ್ಚದ ಐಗೂರು ಸೇತುವೆ ಕಾಮಗಾರಿಯನ್ನು ಒಂದು ವಾರದಲ್ಲಿ ಪ್ರಾರಂಭಿಸದಿದ್ದರೆ, ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಲಾಗುವುದು ಎಂದು ಶಾಸಕ ಡಾ.ಮಂತರ್‍ಗೌಡ ಎಚ್ಚರಿಸಿದರು. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲೋಕೋಪಯೋಗಿ ಇಲಾಖೆ ತಾಲ್ಲೂಕಿನಲ್ಲಿ ವೈಪಲ್ಯಗೊಂಡಿದೆ. ಅಧಿಕಾರಿಗಳು ಕೆಲಸ ಮಾಡಲು ಇಷ್ಟವಿಲ್ಲದಿದ್ದರೆ ವರ್ಗಾವಣೆ ಮಾಡಿಕೊಂಡು ಹೋಗಬಹುದು ಎಂದರು. ಸೋಮವಾರಪೇಟೆ ತಾಲ್ಲೂಕಿನಲ್ಲಿ 90 ಕೋಟಿ ರೂ.ಗಳ ಅನುದಾನದ ಕಾಮಗಾರಿಗಳು ಮಳೆಗಾಲದೊಳಗೆ ಮುಗಿಯಬೇಕಿದೆ. ಕಾಮಗಾರಿ ಪೂರ್ಣಗೊಂಡರೆ ಮಾತ್ರ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತದೆ. ಆದರೆ ಲೋಕೋಪಯೋಗಿ ಇಲಾಖೆಯ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿಲ್ಲ ಎಂದು ಹೇಳಿದರು. 20 ಕೋಟಿ ರೂ.ಗಳ ವೆಚ್ಚದ ತೋಳೂರುಶೆಟ್ಟಳ್ಳಿ, ಕೂತಿ ಮಾರ್ಗದ ರಸ್ತೆ ಮಾರ್ಗ ಸ್ನೈಲ್ಸ್(ಗೊಣ್ಣೆಹುಳ) ವೇಗದಲ್ಲಿದೆ. 15 ಕೋಟಿ ರೂ.ಗಳ ವೆಚ್ಚದ ಅರೆಯೂರು ಹೊಸಳ್ಳಿ, ಸೀಗೆಹೊಸೂರು ರಸ್ತೆ ಕಾಮಗಾರಿ ಪ್ರಾರಂಭವಾಗಿಲ್ಲ. ಮಳೆಗಾಲ ಪ್ರಾರಂಭವಾಗುವ ಮೊದಲು 90 ಕೋಟಿ ರೂ.ಗಳ…

Read More

ಮಡಿಕೇರಿ ಫೆ.13 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವು ಫೆಬ್ರವರಿ, 15 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ  ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಹೆಬ್ಬಾಲೆ ಸಂಯುಕ್ತ ಪದವಿಪೂರ್ವ ಕಾಲೇಜಿನ ಶಿಕ್ಷಕರಾದ ಮೆ.ನ.ವೆಂಕಟನಾಯಕ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಫೆ.13 NEWS DESK :  ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುರಕ್ಷಿತ ಅಂತರ್ಜಾಲ ದಿನ (safer internet day) ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಉದ್ಘಾಟಿಸಿ ಮಾತನಾಡಿ, ಸುರಕ್ಷಿತ ಅಂತರ್ಜಾಲ ದಿನದ ಬಗ್ಗೆ ಮಾಹಿತಿಯನ್ನು ನೀಡಿದರು. ಎನ್‍ಐಸಿ ಅಧಿಕಾರಿಗಳಾದ ಸಿಂಧೂರ ತಳವಾರ ಅವರು ಸುರಕ್ಷಿತ ಇಂಟರ್ನೆಟ್ ಬಳಕೆ ಹಾಗೂ ಉಪಯೋಗದ ಬಗ್ಗೆ ಮಾತನಾಡಿದರು.  ಜಿಲ್ಲೆಯ ಅಧಿಕಾರಿಗಳು ಹಾಗೂ ಆಡಳಿತ ಸಿಬ್ಬಂದಿಗಳು ಮತ್ತು ಎನ್‍ಐಸಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Read More