ಮಡಿಕೇರಿ ಫೆ.13 NEWS DESK : ನಗರದಲ್ಲಿ ಮೂರು ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಶಾಸಕರ ವಿಶೇಷ ಅನುದಾನದಲ್ಲಿ ಒಟ್ಟು ಮೂರು ಕೋಟಿ ರೂ ಗಳನ್ನು ಮಡಿಕೇರಿ ನಗರದ ಅಭಿವೃದ್ಧಿಗೆ ಮೀಸಲಿರಿಸುವುದಾಗಿ ಶಾಸಕರಾದ ಡಾ.ಮಂತರ್ ಗೌಡ ತಿಳಿಸಿದ್ದಾರೆ. ನಗರದ ಎಲ್ಲಾ ರಸ್ತೆಗಳನ್ನು ಉತ್ತಮ ಗುಣಮಟ್ಟದ ಸರ್ವಖುತು ರಸ್ತೆ ನಿರ್ಮಾಣದ ಆಶಯ ತಮ್ಮದಾಗಿದ್ದು, ಅದನ್ನು ಈಡೇರಿಸಲು ಬದ್ದನಾಗಿದ್ದೇನೆ ಎಂದು ಡಾ.ಮಂತರ್ ಗೌಡ ಅವರು ಹೇಳಿದರು. ನಗರದ ಕಾನ್ವೆಂಟ್ ಸಮೀಪ ರಸ್ತೆ, ಎಫ್.ಎಂ.ಸಿ. ಕಾಲೇಜು ಹಿಂಭಾಗದ ರಸ್ತೆ, ಮುಳಿಯ ಬಡಾವಣೆ ರಸ್ತೆ, ಮೋಣಪ್ಪ ಗ್ಯಾರೆಜ್ ರಸ್ತೆ, ಕೋಟೆ ಮಾರಿಯಮ್ಮ ದೇವಾಲಯ ಮುಂಭಾಗದ ರಸ್ತೆ, ಗೌಳಿಬೀದಿ ರಸ್ತೆ , ಬಸಪ್ಪ ಶಿಶುವಿಹಾರ ರಸ್ತೆ, ಅಬ್ದುಲ್ ಕಲಾಂ ಬಡಾವಣೆ ಮೈದಾನದ ಕಾಮಗಾರಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಏಪ್ರಿಲ್ ಅಂತ್ಯದ ವೇಳೆಗೆ ಎಲ್ಲಾ ಕಾಮಗಾರಿಗಳು ಮುಗಿಯಬೇಕು…
ಲೇಖಕ: admin
ಮಡಿಕೇರಿ ಫೆ.13 NEWS DESK : ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ “ಸಂಘ” ವರ್ಚುವಲ್ ಇಂಟ್ಯಾಂಜಿಬಲ್ (ಅದೃಶ್ಯ) ಮತ ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ರಾಜ್ಯ ವಿಧಾನಸಭೆಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಫೆ.14 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶುಕ್ರವಾರ ಬೆಳಿಗ್ಗೆ 10.30 ಗಂಟೆಯಿಂದ 11.30ರ ವರೆಗೆ ಸತ್ಯಾಗ್ರಹ ನಡೆಸಿ ಕೊಡವರ ಹಕ್ಕೊತ್ತಾಯಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ “ಸಂಘ” ವರ್ಚುವಲ್, ಅಮೂರ್ತ (ಅದೃಶ್ಯ) ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ಅಸೆಂಬ್ಲಿಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ನೀಡಬೇಕು. ಕೊಡವರಿಗೆ ಕೊಡವ ಸಂಪ್ರದಾಯಿಕ ಜನ್ಮಭೂಮಿಯಲ್ಲಿ ಪ್ರತ್ಯೇಕ ಲೋಕಸಭೆ ಮತ್ತು ಅಸಂಬ್ಲಿ ಕೊಡವ ಮತ ಕ್ಷೇತ್ರವನ್ನು ರಚಿಸಬೇಕು ಎಂದು ಒತ್ತಾಯಿಸಿದ್ದಾರೆ. 2026ರಲ್ಲಿ ಸಂಸತ್ತಿನ ಮತ್ತು…
ಮಡಿಕೇರಿ ಫೆ.12 : ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರಸಂತೆಯಲ್ಲಿ ನಡೆದಿದೆ. ಶನಿವಾರಸಂತೆಯ ಗುಂಡೂರಾವ್ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹಸೀನಾ(50) ಎಂಬುವವರೇ ಮೃತಪಟ್ಟ ಮಹಿಳೆಯಾಗಿದ್ದಾರೆ. ಸಾಲದ ಬಾಧೆ ತಾಳಲಾರದೆ ಸಾವಿಗೆ ಶರಣಾಗಿರುವುದಾಗಿ ಆರೋಪಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಹಸೀನಾ ಸಾಲ ಮಾಡಿಕೊಂಡಿದ್ದರು ಎಂದು ಹೇಳಲಾಗಿದೆ. ಮೃತ ಮಹಿಳೆ ಪತಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಮಡಿಕೇರಿ NEWS DESK ಜ.12 : ಬ್ರೈನೋಬ್ರೈನ್ ಇಂಟರ್ ನ್ಯಾಷನಲ್ ದುಬೈ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ 13ನೇ ಅಂತರಾಷ್ಟ್ರೀಯ ಆನ್ಲೈನ್ ಬ್ರೈನೋಬ್ರೈನ್ ಸ್ಪರ್ಧೆ-2025”ರಲ್ಲಿ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ 89 ವಿದ್ಯಾರ್ಥಿಗಳು ಕೇವಲ 4 ನಿಮಿಷಗಳಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತೀ ಚುರುಕಾಗಿ ಮಾಡುವ ಮೂಲಕ ಅತ್ಯುತ್ತಮ ಸಾಧನೆ ಮೆರೆದಿದ್ದಾರೆ. 38 ಚಾಂಪಿಯನ್ ಟ್ರೋಫಿ, 34 ಚಿನ್ನದ ಪದಕ ಮತ್ತು 17 ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 78 ರಾಷ್ಟ್ರಗಳ ಒಟ್ಟು 23,128 ವಿದ್ಯಾರ್ಥಿಗಳು ವಿವಿಧ ರಾಷ್ಟ್ರದ ಬ್ರೈನೋಬ್ರೈನ್ ಕೇಂದ್ರಗಳಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕೊಡಗು ಜಿಲ್ಲೆಯ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದಿಂದ ಒಟ್ಟು 89 ವಿದ್ಯಾರ್ಥಿಗಳು ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರ ನೇತೃತ್ವದಲ್ಲಿ ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿದ್ದರು. ಆನ್ಲೈನ್ ಸ್ಪರ್ಧೆಯಲ್ಲಿ 4 ನಿಮಿಷಗಳ ನಿಗಧಿತ ಸಮಯ ಮಾತ್ರವಿದ್ದು, ಮಡಿಕೇರಿ ಗುಡ್ಡಗಾಡು ಪ್ರದೇಶವಾಗಿದ್ದರಿಂದ ಇಂಟರ್ನೆಟ್ ಕನೆಕ್ಷನ್ ಹಾಗೂ ನೆಟ್ವರ್ಕ್ ಸಮಸ್ಯೆ ಇದ್ದರು ಸಹ ಸವಾಲಾಗಿ ಸ್ವೀಕರಿಸಿ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ತೋರಿ ಭಾಗವಹಿಸಿದ ಎಲ್ಲಾ 89 ಮಕ್ಕಳು…
ಮಡಿಕೇರಿ ಫೆ.12 NEWS DESK : ಮಡಿಕೇರಿ 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ, ರಾಜಸೀಟ್, ಗದ್ದಿಗೆ, ಮೇಕೇರಿ, ಕೋಟೆ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಕುಂಡಾಮೇಸ್ತ್ರಿ, ಗಾಳಿಬೀಡು, ಓಂಕರೇಶ್ವರ, ಜಿ.ಟಿ ರಸ್ತೆ, ಮಕ್ಕಂದೂರು, ಕೆ.ಎಸ್.ಆರ್.ಟಿ.ಸಿ, ಫೀಡರ್ನಲ್ಲಿ ವಿದ್ಯುತ್ ಸಹ ನಿರ್ವಾಹಣಾ ಕಾಮಗಾರಿಯನ್ನು ಫೆಬ್ರವರಿ, 13 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ನಿರ್ವಹಿಸಲಾಗುವುದು. ಆದ್ದರಿಂದ ಮಡಿಕೇರಿ ನಗರ, ಮೇಕೇರಿ, ಭಾಗಮಂಡಲ, ಸಂಪಾಜೆ, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳತ್ಮನೆ, ಬೆಟ್ಟಗೇರಿ, ಗಾಳಿಬೀಡು, ಚೆಟ್ಟಿಮಾನಿ. ಚೇರಂಬಾಣೆ, ಮಕ್ಕಂದೂರು, ಬೋಯಿಕೇರಿ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. ಕುಶಾಲನಗರ 220/66/11 ಕೆವಿ, ಸುಂಟಿಕೊಪ್ಪ 66/11 ಕೆವಿ, 66/11 ಕೆವಿ ಆಲೂರು ಸಿದ್ದಾಪುರ ಹಾಗೂ 33/11 ಕೆವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಫೆಬ್ರವರಿ, 13 ರಂದು ಬೆಳಗ್ಗೆ 10 ರಿಂದ ಸಂಜೆ 5…
ಪೊನ್ನಂಪೇಟೆ ಫೆ.12 NEWS DESK : ಪೊನ್ನಂಪೇಟೆ ವ್ಯಾಪ್ತಿಯ ಬಿರುನಾಣಿ ಗ್ರಾಮದ ಅಣ್ಣಳಮಾಡ ಕುಟುಂಬಸ್ಥರ ಐನ್ ಮನೆ ಅಭಿವೃದ್ಧಿಗೆ ಹಾಗೂ ಐನ್ ಮನೆಗೆ ತೆರಳುವ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಐನ್ ಮನೆ ಮುಖ್ಯಸ್ಥರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಅಗತ್ಯ ಕ್ರಮ ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.
ಮಡಿಕೇರಿ ಫೆ.12 NEWS DESK : ಕ್ಷಯ ಮುಕ್ತ ಜಿಲ್ಲೆಯಾಗಿಸುವತ್ತ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕ್ಷಯ ರೋಗದ ಕುರಿತು ಅರಿವು ಕಾರ್ಯಾಗಾರ ಜಿ.ಪಂ.ಸಭಾಂಗಣದಲ್ಲಿ ನಡೆಯಿತು. ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಕ್ಷಯ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಹಾಗೂ ಜನರು ಸಹಕಾರ ನೀಡುವಂತಾಗಬೇಕು ಎಂದು ತಿಳಿಸಿದರು. ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರರಧ ಡಾ.ಜೋಶ ತೋಮಸ್ ಅವರು ಕಾರ್ಯಕ್ರಮದ ಬಗ್ಗೆ ಮಾತನಾಡಿ ಕ್ಷಯ ರೋಗ ನಿರ್ಮೂಲನೆಗಾಗಿ ಕೈಗೊಂಡ ಕ್ರಮಗಳನ್ನು ಪ್ರಶಂಸಿಸಿ ಕೊಡಗು ಜಿಲ್ಲೆಗೆ ಕಂಚಿನ ಪದಕ ಲಭಿಸುವಂತೆ ಕಾರ್ಯನಿರ್ವಹಿಸಿದ ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಕಚೇರಿ ಇದೀಗ 2025ರ ವೇಳೆಗೆ ಕ್ಷಯ ಮುಕ್ತ ಜಿಲ್ಲೆಯಾಗಿರುವ ಉದೇಶ ಹೊಂದಿದೆ ಎಂದರು. ಕೊಡಗು ಜಿಲ್ಲೆ 2015ಕ್ಕೆ ಹೋಲಿಸಿದರೆ 2023 ಕ್ಷಯ ರೋಗದ ಪ್ರಕರಣಗಳಲ್ಲಿ ಶೇ.20ರಷ್ಟು ಕಡಿಮೆ. ಆದ್ದರಿಂದ ಕ್ಷಯ ರೋಗ ನಿರ್ಮೂಲನೆಗೆ…
ವಿರಾಜಪೇಟೆ ಫೆ.12 NEWS DESK : ವಿರಾಜಪೇಟೆ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕೋತ್ಸವ ಹಾಗೂ ಸಂತ ಲೂರ್ದು ಮಾತೆಯ ವಾರ್ಷಿಕ ಮಹೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಹಬ್ಬದ ಹಿಂದಿನ ಮೂರು ದಿವಸಗಳಿಂದಲೇ ಧ್ವಜಾರೋಹಣ, ಬಲಿಪೂಜೆ, ಪ್ರಭೋದನೆ ಹಾಗೂ ನವೇನಾ ಪ್ರಾರ್ಥನೆ ಜರುಗಿತು. ನಂತರ ವಾರ್ಷಿಕೋತ್ಸವದ ಅಂಗವಾಗಿ ಸಂಜೆ ಕೆ.ಆರ್.ಪೇಟೆಯ ಬಾಲ ಯೇಸು ದೇವಾಲಯದ ಧರ್ಮಗುರುಗಳಾದ ವಂದನೀಯ ಫಾದರ್ ಪೌಲೋಸ್ ಥಾಮಸ್ ಆಡಂಬರ ಗಾಯನ ಬಲಿಪೂಜೆ ನೆರವೇರಿಸಿದರು. ಈ ಸಂದರ್ಭ ಗಾಯನ ವೃಂದದವರಿಂದ ದೇವರ ಗಾಯನ ಹಾಗೂ ಪ್ರಾರ್ಥನೆ ಜರುಗಿತು. ದೀಪಾರಾಧನೆ, ಬೈಬಲ್ ವಾಚನ ನಡೆಸಲಾಯಿತು. ನಂತರ ಸಂತ ಅನ್ನಮ್ಮ ಹಾಗೂ ಸಂತ ಲೂರ್ದು ಮಾತೆಯ ಪ್ರತಿಮೆಗಳನ್ನು ವಿದ್ಯುತ್ ಹಾಗೂ ಹೂವು ಅಲಂಕೃತ ತೇರಿನಲ್ಲಿ ಪ್ರತಿಷ್ಠಾಪಿಸಿ ವಿರಾಜಪೇಟೆ ನಗರದಾದ್ಯಂತ ಮೆರವಣಿಗೆ ನಡೆಸಲಾಯಿತು. ಚರ್ಚ್ ಆವರಣದಿಂದ ಹೊರಟು ತೆಲುಗರ ಬೀದಿ, ದೊಡ್ಡಟ್ಟಿ ಚೌಕಿ, ಗಡಿಯಾರ ಕಂಬ, ಖಾಸಗಿ ಬಸ್ ನಿಲ್ದಾಣ ಹಾಗೂ ಕೆ. ಎಸ್. ಆರ್. ಟಿ. ಸಿ. ಬಸ್ ನಿಲ್ದಾಣದ ಮೂಲಕವಾಗಿ ಮೆರವಣಿಗೆ…
ಮಡಿಕೇರಿ ಫೆ.12 NEWS DESK : ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಮೊಗರಗಲ್ಲಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕಟ್ಟಡಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ಅಂಗನವಾಡಿಗಳ ಮಹತ್ವವನ್ನು ಪ್ರಸ್ತಾಪಿಸಿದರು. ಸರಕಾರವು ಪುಟಾಣಿ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗುವಂತೆ ಇಂದು ಅಂಗನವಾಡಿಗಳನ್ನು ತೆರೆಯುತ್ತಿದೆ. ವಿದ್ಯಾಭ್ಯಾಸದ ಮೊದಲನೇ ಹಂತವಾದ ಅಂಗನವಾಡಿ ಕೇಂದ್ರಗಳು ಮಕ್ಕಳಲ್ಲಿ ವಿದ್ಯಾಭ್ಯಾಸದ ಬಗ್ಗೆ ಆಸಕ್ತಿ ಮೂಡುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಅಂಗನವಾಡಿ ಮೇಲ್ವಿಚಾರಕರು ಕಾರ್ಯನಿರ್ವಹಿಸಬೇಕಾಗಿದೆ ಎಂದರು. ನಿಗದಿತ ಸಮಯದೊಳಗೆ ಗುಣಮಟ್ಟ ಕಾಯ್ದುಕೊಂಡು ಕಾಮಗಾರಿಯನ್ನು ಸಂದರ್ಭ ಗುತ್ತಿಗೆದಾರರಿಗೆ ಸೂಚಿಸಿದರು. ಪುರಸಭಾ ಅಧ್ಯಕ್ಷರು, ಪುರಸಭಾ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಟೌನ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಫೆ.12 NEWS DESK : ಕಾವೇರಿ ನದಿ ಪಾತ್ರದ ನೆಲ್ಯಹುದಿಕೇರಿಯಲ್ಲಿ ಹಿಂದೂ ಸಮುದಾಯಕ್ಕೆ ಸೇರಿದ ಬಡವರು, ಕೂಲಿ ಕಾರ್ಮಿಕರಿಗೆ ‘ಸ್ಮಶಾನ’ ಜಾಗವಿಲ್ಲದೆ, ಮೃತರ ಗೌರವಯುತ ಸಂಸ್ಕಾರ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಮಶಾನ ಹೋರಾಟ ಸಮಿತಿಯ ಪ್ರಮುಖರಾದ ಪಿ.ಆರ್.ಭರತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ ಹಿಂದೂ ಧರ್ಮಕ್ಕೆ ಸೇರಿದ ಮಲೆಯಾಳಿ, ತಮಿಳು ಬಾಂಧವರು, ವಿವಿಧ ಜಾತಿ ಜನಾಂಗದ ಬಡ ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು ಸೇರಿದಂತೆ ಸುಮಾರು ಹದಿನೈದು ಸಾವಿರ ಮಂದಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಇವರ ಕುಟುಂಬದಲ್ಲಿ ಸಂಭವಿಸುವ ಯಾವುದೇ ‘ಸಾವು’ ತೀವ್ರ ಆತಂಕವನ್ನು ಹುಟ್ಟು ಹಾಕುತ್ತದೆ. ಕಾರಣ, ಮೃತ ವ್ಯಕ್ತಿಗೆ ಗೌರವಯುತವಾಗಿ ಸಂಸ್ಕಾರಗಳನ್ನು ಮಾಡುವ ವ್ಯವಸ್ಥೆ ಗ್ರಾಮದಲ್ಲಿ ಇಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಕಾವೇರಿ ನದಿ ಪಾತ್ರದಲ್ಲಿ ಸುಮಾರು ಅರ್ಧ ಏಕರೆ ಜಾಗ ಸ್ಮಶಾನವಾಗಿ ಪ್ರಸ್ತುತ ಬಳಕೆಯಾಗುತ್ತಿದೆ. ವರ್ಷಂಪ್ರತಿ ಮಳೆಗಾಲದಲ್ಲಿ ಸ್ಮಶಾನದ ಜಾಗದ ಮಣ್ಣು ಕೊಚ್ಚಿ ಹೋಗುವುದರೊಂದಿಗೆ, ಅಲ್ಲಿ ದಫನ…






