ಮಡಿಕೇರಿ ಫೆ.12 NEWS DESK : ನೂತನವಾಗಿ ಕಾರ್ಯಾರಂಭಗೊಂಡಿರುವ ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಚಿಕ್ಕಪೇಟೆ ಬಳಿ ಇರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಹಿಂದೆ ಸಾರ್ವಜನಿಕ ಹಿತಾಸಕ್ತಿಯಲ್ಲಿ ಪುರಸಭೆ ಸದಸ್ಯರು ಶಾಸಕರಲ್ಲಿ ಶುದ್ಧ ನೀರಿನ ಘಟಕ ಮಂಜೂರು ಮಾಡುವಂತೆ ಮನವಿ ಮಾಡಿದ ಹಿನ್ನೆಲೆ ಶಾಸಕರು ವಿಶೇಷ ಅನುದಾನ ಒದಗಿಸಿದ್ದು, ನೀರಿನ ಘಟಕವನ್ನು ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಶಾಸಕರು, ಇಂದಿನ ದಿನದಲ್ಲಿ ನೀರಿನ ಮಹತ್ವವನ್ನು ಪ್ರತಿಯೊಬ್ಬರು ಅರಿಯಬೇಕು. ಅದರಲ್ಲೂ ಶುದ್ಧ ನೀರು ಸಿಗುವುದು ದುಸ್ತರ ಎಂಬಂತಾಗಿರುವ ದಿನಗಳಲ್ಲಿ ಶುದ್ಧ ನೀರಿನ ಘಟಕದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಚಿಕ್ಕಪೇಟೆಯ ಶಾಲೆಯ ಮುಖ್ಯ ಶಿಕ್ಷಕರು ಶಾಸಕರಿಗೆ ಮನವಿ ಸಲ್ಲಿಸಿದರು. ಶಾಸಕರು ಶಾಲಾ ಮಕ್ಕಳೊಂದಿಗೆ ಕೆಲ ಕ್ಷಣ ಕಳೆದರು. ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷರು, ಪುರಸಭಾ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಟೌನ್ ಕಾಂಗ್ರೆಸ್ ಅಧ್ಯಕ್ಷರು…
ಲೇಖಕ: admin
ಕೂಡಿಗೆ ಫೆ.12 NEWS DESK : ಆಧುನಿಕತೆ ಎಲ್ಲೆಡೆ ವಿಜೃಂಭಿಸುತ್ತಿರುವ ಈ ಕಾಲಘಟ್ಟದಲ್ಲಿ ಎಲ್ಲಿ ನೋಡಿದರಲ್ಲಿ ಟಿವಿ, ಕಂಪ್ಯೂಟರ್ ಹಾಗೂ ಮೊಬೈಲ್ ಗಳಿಂದಾಗಿ ಪುಸ್ತಕಗಳನ್ನು ಓದುವ ಹವ್ಯಾಸವೇ ಮಾಯವಾಗುತ್ತಿದೆ ಎಂದು ಸಾಹಿತಿ ಹಾಗೂ ಕುಶಾಲನಗರದ ಮಹಾತ್ಮ ಗಾಂಧಿ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಲೀಲಾಕುಮಾರಿ ತೊಡಿಕಾನ ವಿಷಾದಿಸಿದರು. ಸಾಹಿತ್ಯಾಸಕ್ತರ ವೇದಿಕೆ ವತಿಯಿಂದ ಹಾರಂಗಿ ರಸ್ತೆಯ ಮೂಕಾಂಬಿಕಾ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತಮ ಪುಸ್ತಕಗಳನ್ನು ಓದುವುದರಿಂದ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ನಾಡಿನ ಅಗ್ರಮಾನ್ಯ ಕವಿ, ಸಾಹಿತಿಗಳ, ಶರಣರ ವಿಚಾರಧಾರೆಗಳನ್ನು ಅರಿತು ನಮ್ಮಗಳ ಜ್ಞಾನವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ. ಇದರಿಂದಾಗಿ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ನಾಡು ಕಂಡ ಹೆಸರಾಂತ ನವ್ಯ ಕವಿ ಡಾ. ಶಿವರುದ್ರಪ್ಪ ಅವರು ರಚಿಸಿರುವ ಎದೆ ತುಂಬಿ ಹಾಡುವೆನು, ಕಾಣದಾ ಕಡಲಿಗೆ ಹಂಬಲಿಸಿದೇ ಮನಾ ಇತ್ಯಾದಿ ರಚನೆಗಳು ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿವೆ. ಇಂದಿನ ವಿದ್ಯಾರ್ಥಿಗಳೂ ಕೂಡ ಕಥೆ, ಕವನಗಳನ್ನು ಬರೆಯುವ ಮೂಲಕ ಸಾಹಿತ್ಯದ ಅಭಿರುಚಿ…
ಮಡಿಕೇರಿ ಫೆ.12 NEWS DESK : ಬಾಳುಗೋಡು ಕೊಡವ ಸಮಾಜದ ಮೈದಾನ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಬಾಳುಗೋಡು ಕೊಡವ ಸಮಾಜ ಇದೇ ರೀತಿ ಕಾರ್ಯನಿರ್ವಹಿಸುತ್ತ ಮುಂದಿನ ದಿನಗಳಲ್ಲಿ ಸಮಾಜದ ಯುವಕರಿಗೆ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಸಹಕಾರಿಯಾಗುವ ನಿಟ್ಟಿನಲ್ಲಿ ಮೈದಾನದ ಅಭಿವೃದ್ಧಿ ಕೈಗೊಂಡಿರುವುದಾಗಿ ತಿಳಿಸಿದರು. ಸಮಾಜ ಬಾಂಧವರು ಇದರ ಸದುಪಯೋಗ ಪಡೆದುಕೊಳ್ಳವಂತೆ ಸಲಹೆ ನೀಡಿದರು. ಗುತ್ತಿಗೆದಾರರಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಇದೇ ಸಂದರ್ಭ ಸೂಚಿಸಿದರು. ಸಮಾಜದ ಪ್ರಮುಖರ ಕೋರಿಕೆ ಮೇರೆಗೆ ಸಮಾಜದ ಮೈದಾನ ಅಭಿವೃದ್ಧಿಗೆ ಈಗ ವಿಶೇಷ ಅನುದಾನ ಬಿಡುಗಡೆ ಮಾಡಿದ್ದು, ಕೊಡವ ಸಮಾಜದ ಅಭಿವೃದ್ಧಿ ಕಾಮಗಾರಿಗಳಿಗೆ ಈ ಹಿಂದಿನಿಂದಲೂ ಅನೇಕ ಅನುದಾನಗಳನ್ನು ನೀಡುತ್ತಾ ಬಂದಿರುವುದಾಗಿ ಸಮಾಜದ ಪ್ರಮುಖರು ಮೆಚ್ಚುಗೆ ವ್ಯಕ್ತಪಡಿದರು. ಈ ಸಂದರ್ಭ ವಿಧಾನಪರಿಷತ್ ಸದಸ್ಯ ಸುಜಾಕುಶಾಲಪ್ಪ, ಬಾಳುಗೋಡು ಕೊಡವ ಸಮಾಜ ಅಧ್ಯಕ್ಷರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಕುಶಾಲನಗರ ಫೆ.12 NEWS DESK : ಎನ್ಸಿಸಿಯ ವಿಶೇಷ ಸಾಧನೆಗಳಿಗಾಗಿ ಕುಶಾಲನಗರ ತಾಲ್ಲೂಕಿನ ಹುಲುಸೆ ಗ್ರಾಮದ ಎನ್.ಸಿ.ಸಿ ಕೆಡೆಟ್ ಕ್ಯಾಪ್ಟನ್ ಹೆಚ್.ಎಸ್.ಕಿಶನ್ಗೆ ಮುಖ್ಯಮಂತ್ರಿಗಳ ಪ್ರಶಂಸಾ ಪದಕ ಲಭಿಸಿದೆ. ಮೈಸೂರಿನ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ನಲ್ಲಿ ಬಿಇ ವಿದ್ಯಾರ್ಥಿಯಾಗಿರುವ ಕೆಡೆಟ್ ಕ್ಯಾಪ್ಟನ್ ಕಿಶನ್ ಎಚ್. ಎಸ್. ರಾಷ್ಟ್ರೀಯ ಕೆಡೆಟ್ ಕಾಪ್ರ್ಸ್ (ಎನ್ಸಿಸಿ)ಗೆ ನೀಡಿದ ಅಸಾಧಾರಣ ಕೊಡುಗೆಗಳಿಗಾಗಿ ಮುಖ್ಯಮಂತ್ರಿಗಳ ಪ್ರಶಂಸೆ ದೊರೆತಿದೆ. ಈ ಪ್ರಶಸ್ತಿಯನ್ನು ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಮುಖ್ಯಮಂತ್ರಿಗಳ ಪರವಾಗಿ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪ್ರದಾನ ಮಾಡಿದರು. ಕೆಡೆಟ್ ಕ್ಯಾಪ್ಟನ್ ಕಿಶನ್ ಎನ್ಸಿಸಿ ಪ್ರಯಾಣವು ಹಲವಾರು ಪ್ರತಿಷ್ಠಿತ ಸಾಧನೆಗಳಿಂದ ಗುರುತಿಸಲ್ಪಟ್ಟಿದೆ. 2023 ರಲ್ಲಿ ಉಡುಪಿಯ ಅರೇಬಿಯನ್ ಸಮುದ್ರದಲ್ಲಿ ಸಾಗರ ನೌಕಾಯಾನ ದಂಡಯಾತ್ರೆಯಲ್ಲಿ ಭಾಗವಹಿಸಿ 240 ಕಿಮೀ (Whaler) ವೇಲರ್ ನೌಕಾಯಾನವನ್ನು ಯಶಸ್ವಿಯಾಗಿ ಕ್ರಮಿಸಿದ್ದರು. ಕರಾವಳಿಯುದ್ದಕ್ಕೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, 2024 ರಲ್ಲಿ ಆಲ್ ಇಂಡಿಯಾ ನೌಕಾ ಸೈನಿಕ್ ಕ್ಯಾಂಪ್ (INS ಶಿವಾಜಿ, ಲೋನಾವಾಲ) ನಲ್ಲಿ ಕರ್ನಾಟಕ…
ಮಡಿಕೇರಿ ಫೆ.12 NEWS DESK : ಅಧಿಕಾರಿಗಳ ತಂಡದ ಸಮೇತ ಗ್ರಾಮಸ್ಥರ ಅಳಲನ್ನು ಸ್ವತಃ ಆಲಿಸಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನಡೆಗೆ ಗಾಳಿಬೀಡು ಪಂಚಾಯತ್ ವ್ಯಾಪ್ತಿಯ ಕಾಲೂರು ಗ್ರಾಮದ ನಿವಾಸಿಗಳು ಮೆಚ್ಚಗೆ ವ್ಯಕ್ತಪಡಿಸಿದರು. ಗ್ರಾಮಕ್ಕೆ ಭೇಟಿ ನೀಡಿ ತಮ್ಮ ಅಹವಾಲುಗಳನ್ನು ಆಲಿಸಬೇಕು ಎಂದು ಕಾಲೂರು ಗ್ರಾಮಸ್ಥರು ಸಲ್ಲಿಸಿದ ಮೇರೆಗೆ ಡಾ.ಮಂತರ್ ಗೌಡ ಕಂದಾಯ ಇಲಾಖೆ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಕುಡಿಯುವ ನೀರಿನ ಇಲಾಖೆ, ಚೆಸ್ಕಾಂ , ತಾಲ್ಲೂಕು ಪಂಚಾಯತ್ ಇ.ಒ, ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳ ದಂಡಿನೊಂದಿಗೆ ತೆರಳಿ ಸುಮಾರು ಎರಡು ಗಂಟೆಗಳ ಕಾಲ ಜನ ಸ್ಪಂದನ ಸಭೆ ನಡೆಸಿ ವಸ್ತುಸ್ಥಿತಿಯ ವಿವರ ಪಡೆದರು. ಆಡಳಿತ ವ್ಯವಸ್ಥೆಯೇ ಶಾಸಕರೊಂದಿಗೆ ತಮ್ಮ ಬಳಿ ಬಂದಿದ್ದನ್ನು ಕಂಡು ಗ್ರಾಮದ ಜನತೆ ತಮ್ಮ ಬಹುಕಾಲದ ಸಮಸ್ಯೆಗಳನ್ನು ಶಾಸಕರ ಮುಂದಿಟ್ಟರು. ಹದಿನೈದು ವರ್ಷಗಳಿಂದ ಕಾಮಗಾರಿ ಆರಂಭಗೊಂಡು ಪೂರ್ಣಗೊಳ್ಳದ ಸೇತುವೆ ಕಾಮಗಾರಿ, ದಶಕಗಳ ಕಾಲದಿಂದ ಹದಗೆಟ್ಟಿರುವ ರಸ್ತೆಗಳು, ವಿಪುಲವಾಗಿ ಜಲಮೂಲ…
ADVT ::: ಆತ್ಮೀಯ ಗ್ರಾಹಕರೇ ::: ನಿಮ್ಮ ವಾಹನ ವಿಮೆಯನ್ನು ನವೀಕರಣಗೊಳಿಸಲು ನಾವು ನಿಮಗೆ ಸಹಾಯ ಮಾಡಲು ಬಯಸುತ್ತೇವೆ. ನಿಮ್ಮ ಎಲ್ಲಾ ವಾಹನಗಳ ನೋಂದಣಿ ಸಂಖ್ಯೆಗಳನ್ನು ನಮಗೆ ಈ ಮೂಲಕ ಕಳುಹಿಸಿ ಕೊಡಬೇಕಾಗಿ ವಿನಂತಿ. ನಾವು ಅವುಗಳ ರಿನೀವಲ್ ದಿನಾಂಕವನ್ನು ನಿಮಗೆ ಜ್ಞಾಪಿಸುತ್ತೇವೆ. ಎಲ್ಲಾ ಕಂಪೆನಿಗಳ ವಾಹನ ವಿಮೆಯನ್ನು ಗರಿಷ್ಠ ರಿಯಾಯಿತಿಯೊಂದಿಗೆ ಮತ್ತು ಕ್ಯಾಶ್ ಬ್ಯಾಕ್ ಜೊತೆಗೆ ರಿನಿವಲ್ ಮಾಡಿಕೊಡಲಾಗುವುದು. (ಸಂಪರ್ಕಿಸಿ : ಶ್ರೀ ಸಾಯಿ ಇನ್ಶುರೆನ್ಸ್ ಪಾಯಿಂಟ್, ಕೊಡವ ಸಮಾಜ ಕಾಂಪ್ಲೆಕ್ಸ್, ಮುಖ್ಯ ರಸ್ತೆ, ಮಡಿಕೇರಿ. 97429 16784, 97429 16784, 90367 80367)
ಮಡಿಕೇರಿ ಫೆ.12 NEWS DESK : ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ರೈತರಿಗೆ ಕೃಷಿ ಇಲಾಖೆಯ ವತಿಯಿಂದ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಯಿತು. ಕುಶಾಲನಗರ ರೈತ ಸಂಪರ್ಕ ಕೇಂದ್ರದ ಸಭಾಂಗಣದಲ್ಲಿ ಫಲಾನುಭವಿಗಳಿಗೆ ವಿವಿಧ ಯಂತ್ರಗಳನ್ನು ವಿತರಿಸಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ ಗ್ರಾಮೀಣ ಪ್ರದೇಶದ ವಿದ್ಯಾವಂತ ಯುವಕರು ಹುದ್ದೆಯನ್ನು ಅರಸಿ ನಗರ ಪ್ರದೇಶಗಳಲ್ಲಿ ಸುತ್ತುವುದರ ಬದಲು ಕೃಷಿಯಲ್ಲಿ ತೊಡಗುವಂತೆ ಸಲಹೆ ನೀಡಿದರು. ಅಲ್ಲದೇ ಈಗಾಗಲೇ ಅಧುನಿಕ ತಂತ್ರಜ್ಞಾನ ವ್ಯವಸ್ಥೆ ಅಡಿಯಲ್ಲಿ ಬೇಸಾಯ ಮಾಡಲು ಅನುಕೂಲವಾಗುವಂತೆ ವಿವಿಧ ಯಂತ್ರೋಪಕರಣಗಳನ್ನು ಸಂಬಂಧಿಸಿದ ಇಲಾಖೆಯ ವತಿಯಿಂದ ಸಹಾಯಧನ ನೀಡುತ್ತಿರುವುದನ್ನು ರೈತರು ಸದುಪಯೋಗಪಡೆಸಿಕೊಳ್ಳುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆ.ಪಿ.ಸಿ.ಸಿ. ಸದಸ್ಯ ನಟೇಶ್ ಗೌಡ, ಮಡಿಕೇರಿ ಕೃಷಿ ಜಂಟಿ ನಿರ್ದೇಶಕ ಬಿ.ಎಸ್.ಚಂದ್ರಶೇಖರ್, ಉಪ ಕೃಷಿ ನಿರ್ದೇಶಕ ಡಿ.ಎಸ್. ಸೋಮಶೇಖರ್, ಸೋಮವಾರಪೇಟೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಕೆ.ಪಿ.ವೀರಣ್ಣ, ಕೂಡಿಗೆ ಕೃಷಿ ಕ್ಷೇತ್ರದ…
*JOB OPPORTUNITY : TEACHER VACANCY* A reputed school in Virajpet is hiring for high posting positions. We are seeking teachers for all subjects kindergarten/ elementary and head positions. Attractive salary packages and accommodation provided. Join us to shape young minds and grow your career in a supportive environment. For more details, contact 8310384621, Contact:9847490000
ಮಡಿಕೇರಿ ಫೆ.12 : ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ–2025 ರ ಅಂಗವಾಗಿ ಬುಧವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ ಮಡಿಕೇರಿ ನಗರದ ಗಾಂಧಿ ಮೈದಾನದಿಂದ ಮುಖ್ಯ ರಸ್ತೆಯಲ್ಲಿ ಜಾಥಾ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾವರು ಜಾಥಾಗೆ ಚಾಲನೆ ನೀಡಿದರು. ಜಾಥವು ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳು, ಚಾಲನಾ ತರಬೇತಿ ಶಾಲೆಗಳು, ಆಟೋರಿಕ್ಷಾ/ ಟ್ಯಾಕ್ಸಿ/ ಚಾಲಕ ಮಾಲೀಕರ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜರುಗಿತು. ರಾಜು ಕಲಾವಿದರ ತಂಡದ ವತಿಯಿಂದ ರಸ್ತೆ ನಾಟಕಗಳ ಮುಖೇನ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು. ಪ್ರಮುಖ ಪಟ್ಟಣಗಳಲ್ಲಿ ಕರಪತ್ರ ಹಂಚಿಕೆ, ಬ್ಯಾನರ್ ಮತ್ತು ಫ್ಲೆಕ್ಸ್ ಅಳವಡಿಕೆ ಕಾರ್ಯಕ್ರಮಗಳು, ಶಾಲಾ-ಕಾಲೇಜುಗಳಲ್ಲಿ ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆಗಳನ್ನು ಜರುಗಿಸಿದ್ದು, ಮಕ್ಕಳಲ್ಲಿ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಯಿತು. ಜಾಥಗೆ ಚಾಲನೆ ನೀಡಿದ ಮಾತನಾಡಿದ ಜಿಲ್ಲಾಧಿಕಾರಿ ಅವರು ಸಾರ್ವಜನಿಕರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ ರಸ್ತೆ ಅಪಘಾತಗಳನ್ನು ತಡೆಯುವುದರಲ್ಲಿ ಯಶಸ್ವಿಯಾಗುವಂತೆ ಹಾಗೂ…
ಮೈಸೂರು ಫೆ.12 NEWS DESK : ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಗುಂಜಾನರಸಿಂಹ ದೇಗುಲ ಬಳಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಂಗಳವಾರ ರಾತ್ರಿ ಪುಣ್ಯಸ್ನಾನ ಮಾಡಿ, ಗಂಗಾಪೂಜೆ, ದೀಪಾರತಿ ನೆರವೇರಿಸಿದರು.






