ಕುಶಾಲನಗರ ಫೆ.12 NEWS DESK : ಕುಶಾಲನಗರ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ. ಸಭೆಯು ಕೂಡುಮಂಗಳೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸರಕಾರದ ಎಲ್ಲಾ ಇಲಾಖೆಯ ಸಂಪೂರ್ಣವಾದ ಸಮಗ್ರ ಮಾಹಿತಿಯನ್ನು ಸಾರ್ವಜನಿಕರಿಗೆ ಸಂಬಂಧಿಸಿದ ಇಲಾಖೆಯವರು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ಸಭೆಗೆ ಬರದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಕಾರ್ಯನಿರ್ವಾಹಣಾಧಿಕಾರಿಗೆ ಸೂಚಿಸಿದರು. ಆಹಾರ ಇಲಾಖೆಗೆ ಸಂಬಂಧಿಸಿದಂತೆ ತಾಲ್ಲೂಕಿನಲ್ಲಿರುವ ನ್ಯಾಯ ಬೆಲೆ ಅಂಗಡಿಗಳಿಗೆ ಪಡಿತರ ವಸ್ತುಗಳ ಫಲಾನುಭವಿಗಳಿಗೆ ವಿತರಣೆ ಅಗುವ ಬಗ್ಗೆ ಮತ್ತು ಪಡಿತರ ಚೀಟಿಯ ವ್ಯವಸ್ಥೆ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಾಲ್ಲೂಕು ಅಹಾರ ನಿರೀಕ್ಷಣಾಧಿಕಾರಿ ಸಭೆಗೆ ಮಾಹಿತಿ ಒದಗಿಸಿದರು. ಹಿರಿಯ ಕಾರ್ಮಿಕ ಇಲಾಖೆ ಅಧಿಕಾರಿ ಸಭೆಗೆ ಬರದೆ ಸಹಾಯಕ ಅಧಿಕಾರಿಯನ್ನು ಕಳುಹಿಸಿದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕಟ್ಟಡ ಕಾರ್ಮಿಕರು ಸೇರಿದಂತೆ ವಿವಿಧ ವಿಭಾಗದ ಕಾರ್ಮಿಕರಿಗೆ ಸಂಪೂರ್ಣವಾದ ಮಾಹಿತಿಯನ್ನು ಮತ್ತು ಸರಕಾರದ ಹಣವನ್ನು ವಿವಿದ ವಿಭಾಗದ ಸೌಲಭ್ಯಗಳಿಗೆ ನೀಡಿದ ವರದಿಯನ್ನು…
ಲೇಖಕ: admin
ಮಡಿಕೇರಿ ಫೆ.12 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು, ನಾಪೋಕ್ಲು ಬ್ಲಾಕ್-ಭಾಗಮಂಡಲ ಹೋಬಳಿಯ ಅಯ್ಯಂಗೇರಿಯಲ್ಲಿ ರಸ್ತೆ ಕಾಮಗಾರಿ ಚಾಲನೆ ದೊರೆಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಅನುದಾನದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದ್ದು, ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಕಾಮಗಾರಿಯ ಗುಣಮಟ್ಟ ಕಾಯ್ದುಕೊಂಡು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರಿಗೆ ಹೇಳಿದರು. ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಕಾಂಗ್ರೆಸ್ ಮುಖಂಡರು, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಫೆ.12 NEWS DESK : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಗೆ ಸೇರಿರುವ ಮಡಿಕೇರಿ ನಗರದ ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ಒಳಪಡುವ ಶ್ರೀ ಆಂಜನೇಯ ಮತ್ತು ಕೋಟೆ ಗಣಪತಿ ದೇವಾಲಯದ ಕಾರ್ಯಗಳಿಗೆ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಲು 3 ‘ಡಿ’ ಗ್ರೂಪ್ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರ ವಯೋಮಿತಿ 18 ವರ್ಷ ತುಂಬಿರಬೇಕು. 35 ವರ್ಷ ಮೀರಿರಬಾರದು(ವಯಸ್ಸಿನ ಬಗ್ಗೆ ಶಾಲಾ ದಾಖಲೆ ನೀಡಬೇಕು). ದೇವಾಲಯದ ಹೊರಾಂಗಣದ ನೌಕರರು ‘ಡಿ’ ಗ್ರೂಪ್ ಹುದ್ದೆ-3 (ಸ್ವಚ್ಛತಗಾರ ಮತ್ತು ಕಾವಲುಗಾರರು) ವೇತನ ರೂ.9,600 ಮತ್ತು ಇತರೆ, ದೇವಾಲಯದ ಕರ್ತವ್ಯದ ಅವಧಿ ಬೆಳಗ್ಗೆ 7.30 ರಿಂದ ಮಧ್ಯಾಹ್ನ 1 ಗಂಟೆ, ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆವರೆಗೆ. ದೇವಾಲಯದ ಕೆಲಸ ಕಾರ್ಯಗಳು ಮುಜರಾಯಿ ಇಲಾಖೆ ಸೂಚಿಸಿದ ನಿಯಮಗಳು ಹಾಗೂ ಶಿಸ್ತು ಪಾಲನೆಗೆ ಒಳಪಟ್ಟಿರುತ್ತದೆ. ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಿಂದ ಪಡೆದ ದೇಹ ದಾಢ್ರ್ಯ ಪ್ರಮಾಣ ಪತ್ರವನ್ನು ಹಾಜರುಪಡಿಸಬೇಕು. ಯಾವುದೇ…
ಮಡಿಕೇರಿ ಫೆ.12 NEWS DESK : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2024-25ನೇ ಜನವರಿ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾಸುಬ್ಬಯ್ಯ ತಿಳಿಸಿದ್ದಾರೆ. ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯ ವಾಕ್ಯದೊಂದಿಗೆ ಯು.ಜಿ.ಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ. ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ (ಬಿಎ, ಬಿಕಾಂ, ಬಿಲಿಬ್ ಐಎಸ್ಸಿ, ಬಿಬಿಎ, ಬಿಸಿಎ, ಬಿಎಸ್ಸಿ, ಬಿಎಸ್ಡಬ್ಲ್ಯೂ) ಹಾಗು ಸ್ನಾತಕೋತ್ತರ ಪಿಜಿ ಕೋರ್ಸ್ಗಳಾದ(ಎಂಎ, ಎಂಎ-ಪತ್ರಿಕೋದ್ಯಮ, ಎಂಕಾಂ, ಎಂಬಿಎ, ಎಂಲಿಬ್ಐ.ಎಸ್ಸಿ, ಎಂಎಸ್ಸಿ, ಎಂಸಿಎ, ಎಂಎಸ್ಡಬ್ಲೂ) (ಪಿಜಿ ಡಿಪ್ಲೋಮಾ ಪ್ರೋಗ್ರಾಮ್ಸ್ ಸರ್ಟಿಫಿಕೇಟ್ ಪ್ರೋಗ್ರಾಮ್ಸ್) ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿರುತ್ತದೆ. ಪ್ರವೇಶಾತಿಗೆ ಎಸ್ಎಸ್ಎಲ್ಸಿ ಅಂಕಪಟ್ಟಿ ಜೆರಾಕ್ಸ್, ಪಿಯುಸಿ ಅಥವಾ ತತ್ಸಮಾನ ಅಂಕಪಟ್ಟಿ ಜೆರಾಕ್ಸ್, ಪದವಿ…
ವಿರಾಜಪೇಟೆ ಫೆ.12 NEWS DESK : ಸಮಾಜದಲ್ಲಿ ಇಂದು ನೆಮ್ಮದಿಯಿಂದ ಬದುಕಲು ಪರಸ್ಪರ ಸೌಹಾರ್ದತೆ ಅಗತ್ಯ. ಜನರು ತಮ್ಮ ತಮ್ಮ ಧರ್ಮಗಳ ಮೂಲ ಆಶಯಗಳನ್ನು ಅರಿತುಕೊಂಡರೆ ದ್ವೇಷಗಳಿಗೆ ಅವಕಾಶವೇ ಇರುವುದಿಲ್ಲ. ದ್ವೇಷ ಸಂಪೂರ್ಣವಾಗಿ ದೂರವಾದರೆ ಸಹಜವಾಗಿ ಸೌಹಾರ್ದತೆ ಮೂಡುತ್ತದೆ. ಸೌಹಾರ್ತೆಯಿಂದ ಮಾತ್ರ ಸರ್ವ ಜನಾಂಗದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.)ನ ಅಧ್ಯಕ್ಷ ದುದ್ದಿಯಂಡ ಹೆಚ್.ಸೂಫಿ ಹಾಜಿ ಅಭಿಪ್ರಾಯಪಟ್ಟರು. ಇತಿಹಾಸ ಪ್ರಸಿದ್ಧ ಅಂಬಟ್ಟಿ ಮಖಾಂ ಉರೂಸ್ ನ ಪ್ರಮುಖ ದಿನದ ಅಂಗವಾಗಿ ಮಖಾಂ ಆವರಣದಲ್ಲಿ ನಡೆದ ಸಾರ್ವಜನಿಕ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಕೊಡಗಿನ ಕೋಮು ಸೌಹಾರ್ದತೆಯ ಅಸ್ಮಿತೆಯನ್ನು ಉಳಿಸಿಕೊಳ್ಳುವುದರಲ್ಲಿ ಉರೂಸ್ ಗಳ ಪಾತ್ರ ಮಹತ್ವದ್ದಾಗಿದೆ. ಸೂಫಿ ಸಂತರ ಹೆಸರಿನಲ್ಲಿ ನಡೆಯುವ ಜಿಲ್ಲೆಯ ಎಲ್ಲಾ ಉರೂಸ್ ಗಳು ಮನುಷ್ಯ ಸ್ನೇಹದ ಮೂಲಕ ಎಲ್ಲ ಧರ್ಮದ ಜನರನ್ನು ಪರಸ್ಪರ ಒಗ್ಗೂಡಿಸುವಲ್ಲಿ ದೊಡ್ಡ ಕೊಡುಗೆಗಳನ್ನು ನೀಡುತ್ತಿದೆ ಎಂದು ಹೇಳಿದರು. ಧಾರ್ಮಿಕ ಆಚರಣೆಯಾಗಿರುವ ಉರೂಸ್ ಗಳು ಸಂವಿಧಾನದ…
ಮಡಿಕೇರಿ ಫೆ.12 NEWS DESK : ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪಲ್ಲವಿ ಅವರು ಫೆಬ್ರವರಿ, 14 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಫೆ.14 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸಂಘ ಸಂಸ್ಥೆಗಳು ಮತ್ತು ಸಾಮಾನ್ಯ ಅಲೆಮಾರಿ ಸಮುದಾಯದ ಜನರಿಂದ ಕುಂದು ಕೊರತೆಗಳ ಅಹವಾಲು ಸ್ವೀಕರಿಸಲಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯ ಮುಖಂಡರು ಮತ್ತು ಸಮುದಾಯದ ಜನರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ನಂತರ ಬೆಳಗ್ಗೆ 11.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
https://youtu.be/lxmpHe1cENk?si=6swRdto4CFyd3IiV ಮಡಿಕೇರಿ ಫೆ.11 NEWS DESK : ಎರಡು ಸಮುದಾಯಗಳ ನಡುವಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿರುವ ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ದೇವಾಲಯದ ಕಟ್ಟುಪಾಡಿನ ಕುರಿತು ಮರಗೋಡು ಗ್ರಾಮದಲ್ಲಿ ನಡೆಸಿದ ಅಭಿಪ್ರಾಯ ಸಂಗ್ರಹದ ಸಭೆಯ ವರದಿಯನ್ನು ದೇವಾಲಯದ ಆಡಳಿತ ಮಂಡಳಿ ಇಂದು ಜಿಲ್ಲಾಡಳಿಕ್ಕೆ ಸಲ್ಲಿಸಿತು. ಜಿಲ್ಲಾಧಿಕಾರಿಗಳನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ದೇವಾಲಯ ಸಮಿತಿಯ ಅಧ್ಯಕ್ಷ ಕಟ್ಟೆಮನೆ ಶಶಿ ಜನಾರ್ಧನ ಅವರು ಸಭೆಯಲ್ಲಿ ವ್ಯಕ್ತವಾದ ಪರ, ವಿರೋಧ ಅಭಿಪ್ರಾಯಗಳನ್ನು ಬೈಲಾದೊಂದಿಗೆ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿಗಳಿಗೆ ನೀಡಿರುವ ವರದಿಯಲ್ಲಿ ಮುಖ್ಯವಾಗಿ ಹಾಲಿ ಇರುವ ಬೈಲಾವನ್ನು ಯಥಾಸ್ಥಿತಿ ಮುಂದುವರೆಸಿಕೊಂಡು ಹೋಗಬೇಕು ಮತ್ತು ಯಾವುದೇ ಸೇರ್ಪಡೆಯಾಗದಿರಲಿ ಎಂದು ವಿವರಿಸಲಾಗಿದೆ. ಬೈಲಾದಲ್ಲಿ ಯಾವುದೇ ಜನಾಂಗದ ಸಂಪ್ರದಾಯ, ಪದ್ಧತಿಗೆ ಅವಕಾಶ ಇರುವುದಿಲ್ಲ ಎಂಬುವುದನ್ನು ಮಾತ್ರ ನಮೂದಿಸಲಾಗಿದೆ. ದೇವಾಲಯ ಸಮಿತಿ ಹಾಲಿ ಇರುವ ಬೈಲಾಕ್ಕೆ ಬದ್ಧವಾಗಿರಲು ನಿರ್ಧರಿಸಿದ್ದು, ಊರಿನವರ ಅಪೇಕ್ಷೆಯಂತೆ ಜಿಲ್ಲಾಡಳಿತ ಸೂಕ್ತ ಆದೇಶವನ್ನು ನೀಡಲಿದೆ ಎನ್ನುವ ವಿಶ್ವಾಸವಿದೆ. ಜಿಲ್ಲಾಧಿಕಾರಿಗಳು ಹೊರಡಿಸುವ…
ಮಡಿಕೇರಿ.ಫೆ.11 NEWS DESK : ದಿನ ನಿತ್ಯ ಬಳಸುವ ವಸ್ತುವಿನ ಪ್ರಮಾಣ ಎಷ್ಟಿದೆ ಎಂಬುದಕ್ಕಿಂತ ಅದರ ಗುಣಮಟ್ಟ ಹೇಗಿದೆ ಎಂಬುದು ಮುಖ್ಯ ಎಂದು ಭಾರತೀಯ ಮಾನಕ ಬ್ಯೂರೋ ಸಂಸ್ಥೆಯ ಅಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ. ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಭಾರತೀಯ ಮಾನಕ ಬ್ಯೂರೋ ಸಂಸ್ಥೆಯವರ ಜಾಗೃತಿ ಕಾರ್ಯಾಗಾರದ ಕುರಿತು ಮಾತನಾಡಿದರು. ಮುಖ್ಯವಾಗಿ ಗ್ರಾಮ ಪಂಚಾಯಿತಿ ಮಟ್ಟಗಳಲ್ಲಿ ಹಲವು ಅಭಿವೃದ್ದಿ ಕಾರ್ಯಗಳು ನಡೆಯುತ್ತವೆ. ಆ ಕಾಮಗಾರಿಗಳಿಗೆ ಬಳಸುವ ವಸ್ತುಗಳ ಗುಣಮಟ್ಟದ ಬಗ್ಗೆ ಯಾರಿಗೂ ತಿಳಿದಿರುವುದಿಲ್ಲ, ದೀರ್ಘಕಾಲ ಬಾಳಿಕೆ ಬರುವ ರಸ್ತೆ, ಚರಂಡಿ, ಕುಡಿಯುವ ನೀರಿನ ಸಾಮಗ್ರಿಗಳು ಬೇಗ ಹಾಳಗಬಹುದು ,ಕಾಮಗಾರಿಗಳಿಗೆ ಬಳಸುವ (ಸೀಮೆಂಟ್, ಕಬ್ಬಿಣ, ಪೈಪ್, ಎಲೆಕ್ಟ್ರಾನಿಕ ಉಪಕರಣಗಳು) ವಸ್ತುಗಳ ಗುಣಮಟ್ಟದ ಕುರಿತು ಜಾಗೃತರಾಗಬೇಕು ಈ ನಿಟ್ಟಿನಲ್ಲಿ ಭಾರತೀಯ ಮಾನಕ ಬ್ಯೂರೋ ಸಂಸ್ಥೆಯು (BIS)ವಸ್ತುಗಳ ಗುಣಮಟ್ಟವನ್ನು ತಿಳಿಯಲು ISI ಮಾರ್ಕ್ ನಂತಹ ಚಿಹ್ನೆಗಳಿರುವ ವಸ್ತುಗಳನ್ನು ಬಳಸಿ ಹಾಗೂ ವಸ್ತುಗಳ ಗುಣಮಟ್ಟವನ್ನು ತಿಳಿಯಲು…
ಮಡಿಕೇರಿ ಫೆ.11 NEWS DESK : ಸೋಮವಾರಪೇಟೆ ಐಗೂರುನಲ್ಲಿ ನಡೆದ ಅಂಡರ್-16 ಟೂರ್ನಮೆಂಟ್ನಲ್ಲಿ, ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ತಂಡವು ವಿಜೇತರಾದರು. ವಿಜೇತ ತಂಡದ ಪರ ಹಾರ್ದಿಕ್ ಕರ್ಕೇರ, ಕೇವಲ 9 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮತ್ತು ಒಟ್ಟು 14 ಎಸೆತಗಳಲ್ಲಿ 74 ರನ್ ಗಳಿಸಿ ಟೂರ್ನಮೆಂಟ್ನ ಅತ್ಯಂತ ವೇಗದ ಅರ್ಧಶತಕದ ದಾಖಲೆಯನ್ನು ಬರೆದಿದ್ದಾರೆ. ಈ ಅದ್ಭುತ ಪ್ರದರ್ಶನಕ್ಕಾಗಿ ಅವರು ‘ಮ್ಯಾನ್ ಆಫ್ ದ ಸೀರೀಸ್’ ಪ್ರಶಸ್ತಿಯನ್ನು ಪಡೆದಿದ್ದಾರೆ. ಬೌಲಿಂಗ್ನಲ್ಲಿ ಪವನ್ ಮತ್ತು ಸುಮಿತ ತಲಾ 2 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಹಾರ್ದಿಕ್ ಕರ್ಕೇರ ಮಡಿಕೇರಿಯ ಉದ್ಯಮಿ ರವಿ ಕರ್ಕೇರ ಹಾಗೂ ಮಮತ ದಂಪತಿಯ ಪುತ್ರ.
ಮಡಿಕೇರಿ ಫೆ.11 NEWS DESK : ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘವನ್ನು ಸಾಲದ ಹೊರೆಯಿಂದ ಹೊರ ತರುವ ನಿಟ್ಟಿನಲ್ಲಿ ತನ್ನ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಪ್ರಯತ್ನಗಳನ್ನು ಮಾಡಿರುವುದಾಗಿ ಸಂಘದ ಮಾಜಿ ಅಧ್ಯಕ್ಷ ಎಂ.ಬಿ.ದೇವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ಕೆಲವು ಸದಸ್ಯರು ನನ್ನ ಅಧಿಕಾರದ ಅವಧಿಯಲ್ಲಿ ಏನೂ ಮಾಡಿಲ್ಲವೆಂದು ಆರೋಪಿಸುತ್ತಿರುವುದು ಸಮರ್ಥನೀಯವಲ್ಲ. ತಾನು ಸಂಘದಲ್ಲಿ ಸುಮಾರು 17 ವರ್ಷಗಳ ಕಾಲ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ತನ್ನ ಅಧಿಕಾರದ ಆರಂಭಿಕ ಅವಧಿಯಲ್ಲಿ ಸಂಘ ರೂ.25 ಕೋಟಿಯಷ್ಟು ಸಾಲದ ಹೊರೆಯನ್ನು ಹೊಂದಿತ್ತಾದರೆ, ಇದನ್ನು ಹಲವಾರು ಉಪ ಕ್ರಮಗಳೊಂದಿಗೆ 12 ಕೋಟಿ ರೂ.ಗಳಿಗೆ ಇಳಿಸಲಾಗಿದೆ ಮತ್ತು ಸಂಘವನ್ನು ಪ್ರಗತಿಯ ಪಥದತ್ತ ತಂದು ನಿಲ್ಲಿಸುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು. ನಾನು ಅಧ್ಯಕ್ಷನಾಗಿ ಅಧಿಕಾರಕ್ಕೆ ಬರುವ ಸಂದರ್ಭ ಸಂಘಕ್ಕೆ ಸೇರಿದ ಹುಣಸೂರು, ಹೆಬ್ಬಾಲೆ ಕ್ಯೂರಿಂಗ್ ವಕ್ರ್ಸ್ ಮತ್ತು ಅದರ ಜಾಗ ಪಾಳು ಬಿದ್ದಿತ್ತು. ಇವುಗಳನ್ನಿಂದು ಪುನಶ್ಚೇತನಗೊಳಿಸಿ, ಕಾಫಿ ಕ್ಯೂರಿಂಗ್ಗೆ ಹೊಸ ಯಂತ್ರಗಳ ಅಳವಡಿಕೆ…






