ಮಡಿಕೇರಿ ಫೆ.11 NEWS DESK : ಡಾ.ಬಿ.ಆರ್.ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಎದುರು ಸೋಮವಾರ ನಡೆದ ಧರಣಿಯ ಸಂದರ್ಭ ಅಳವಡಿಸಲಾಗಿದ್ದ ಬ್ಯಾನರ್ ಗಳಿಗೆ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ನಾಶ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟ ಸಮಿತಿಯ ಪ್ರಮುಖರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬ್ಯಾನರ್ ಗಳಿಗೆ ಬೆಂಕಿ ಹಚ್ಚಿರುವ ಕುರಿತು ಮಂಗಳವಾರ ಬೆಳಿಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಹೋರಾಟ ಸಮಿತಿಯ ಅಧ್ಯಕ್ಷ ಹೆಚ್.ಎಲ್.ದಿವಾಕರ್, ಪ್ರಮುಖರಾದ ಮೋಹನ್ ಮೌರ್ಯ, ಹೆಚ್.ಸಿ.ಸತೀಶ್, ಎ.ಪಿ.ದೀಪಕ್, ಕುಮಾರ್ ಮತ್ತಿತರರು ಪ್ರಕರಣವನ್ನು ತೀವ್ರವಾಗಿ ಖಂಡಿಸಿದರು. ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕೆಲ ಕಾಲ ಪ್ರತಿಭಟನೆ ನಡೆಸಿದರು. ::: ತಕ್ಷಣ ಬಂಧಿಸಿ ::: ಅಧ್ಯಕ್ಷ ಹೆಚ್.ಎಲ್.ದಿವಾಕರ್ ಮಾತನಾಡಿ, ಅಂಬೇಡ್ಕರ್ ಭವನ ಕೆಲವೇ ಕೆಲವು ಮಂದಿಯ ಹಿಡಿತದಲ್ಲಿದೆ. ಇದನ್ನು ಕರ್ನಾಟಕ ದಲಿತ ಸಂಷರ್ಷ ಸಮಿತಿಯ ಮಡಿಕೇರಿ ಶಾಖೆಗೆ ನೀಡಬೇಕೆನ್ನುವ ಬೇಡಿಕೆಯೊಂದಿಗೆ ಹೋರಾಟಕ್ಕಿಳಿದಿದ್ದೇವೆ. ಇದನ್ನು ಸಹಿಸದವರು ನನ್ನ…
ಲೇಖಕ: admin
ಮಡಿಕೇರಿ ಫೆ.11 NEWS DESK : ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ದಕ್ಷಿಣ ಕನ್ನಡದ ಬೆಳ್ತಂಗಡಿಯ ಸೇವಾಭಾರತಿ ಸಂಸ್ಥೆಯ ವತಿಯಿಂದ ಫೆ.13 ರಿಂದ 15ರ ವರೆಗೆ ಮಡಿಕೇರಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ ಮತ್ತು ಗಾಲಿಕುರ್ಚಿ ಜಾಥಾ ನಡೆಯಲಿದೆ ಎಂದು ಸೇವಾ ಭಾರತಿ ಖಜಾಂಚಿ ಹಾಗೂ ಸೇವಾ ಧಾಮ ಸಂಸ್ಥೆಯ ಸ್ಥಾಪಕ ಕೆ.ವಿನಾಯಕ ರಾವ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿಯ ವಿಕಾಸ್ ಜನ ಸೇವಾ ಟ್ರಸ್ಟ್ ಆಶ್ರಮ, ಸ್ವಾಮಿ ವಿವೇಕಾನಂದ ಯೂತ್ ಮೂಮ್ ಮೆಂಟ್ ಕೊಡಗು ಶಾಖೆ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋದಕ ಆಸ್ಪತ್ರೆಯ ಸಹಯೋಗದಲ್ಲಿ ನಗರದ ಅಶ್ವಿನಿ ಆಸ್ಪತ್ರೆಯಲ್ಲಿ ಮೂರು ದಿನಗಳ ಕಾಲ ಶಿಬಿರವನ್ನು ಆಯೋಜಿಸಲಾಗಿದೆ ಎಂದರು. ಶಿಬಿರದಲ್ಲಿ ಫಲಾನುಭವಿಗಳಿಗೆ ಉಚಿತ ವೈದ್ಯಕೀಯ ತಪಾಸಣೆಯ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅವರಿಗೆ ಯೋಗ, ಪ್ರಾಣಾಯಾಮ, ಒತ್ತಡ ಗಾಯ ನಿರ್ವಹಣೆ, ಆಪ್ತ ಸಮಾಲೋಚನೆ, ಮನೋರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಅರ್ಹ ಫಲಾನುಭವಿಗಳಿಗೆ ಸೆಲ್ಪ್ ಕೇರ್ ಕಿಟ್,…
ಮಡಿಕೇರಿ ಫೆ.11 NEWS DESK : ಕತ್ತಲೆಯಲ್ಲೇ ದಿನ ದೂಡುತ್ತಿದ್ದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ನಾಲ್ಕೇರಿ ಗ್ರಾಮ ಪಂಚಾಯಿತಿಗೆ ಒಳಪಡುವ ನಾಗರಹೊಳೆ ಮತ್ತು ಗದ್ದೆ ಹಾಡಿಯ ನಿವಾಸಿಗಳಿಗೆ ವಿದ್ಯುತ್ ಭಾಗ್ಯ ಸಿಕ್ಕಿದೆ. ಹಲವು ವರ್ಷಗಳಿಂದ ಹಾಡಿಗೆ ವಿದ್ಯುತ್ ಸಂಪರ್ಕವಿಲ್ಲದೆ ಪರದಾಡುತ್ತಿದ್ದ ನಿವಾಸಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ವಿದ್ಯುತ್ ಸಂಪರ್ಕ ಕಲ್ಪಿಸಲು ಸೂಚನೆ ನೀಡಿದ್ದು, ಅದರಂತೆ ತ್ವರಿತ ರೀತಿಯಲ್ಲಿ ಕಾಮಗಾರಿ ನಡೆಯುತ್ತಿದೆ. ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಶಾಸಕರು ತೋರಿದ ಕಾಳಜಿಗೆ ಹಾಡಿ ನಿವಾಸಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕಾಮಗಾರಿಯ ಜವಾಬ್ದಾರಿ ಹೊತ್ತಿರುವ ವಿಶೇಷ ಕರ್ತವ್ಯ ಅಧಿಕಾರಿ ಬಿ.ಪಿ.ಮುತ್ತಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೆರಿರ ನವೀನ್ ಅವರಿಗೆ ನಾಗರಹೊಳೆ, ಗದ್ದೆ ಹಾಡಿ ನಿವಾಸಿಗಳು ಹಾಗೂ ಸಾರ್ವಜನಿಕರ ಪರವಾಗಿ, ನಾಲ್ಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಕಟ್ಟಿ ಕಾರ್ಯಪ್ಪ ಅಭಿನಂದನೆ ಸಲ್ಲಿಸಿದ್ದಾರೆ.
ವಿರಾಜಪೇಟೆ ಫೆ.11 NEWS DESK : ಕೆದಮುಳ್ಳೂರು ತೆರ್ಮೆಮೊಟ್ಟೆ ಶ್ರೀ ಆಧಿಶಕ್ತಿ ಮತ್ತು ಧರ್ಮದೈವ ಹಾಗೂ ಪಾಷಣ ಮೂರ್ತಿ ಪರಿವಾರ ದೈವಗಳ ಪುನರ್ ಪ್ರತಿಷ್ಠಾಪನೆ ಮತ್ತು ಧರ್ಮ ದೈವಗಳ ನೇಮೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಕಾವಾಡಿಯ ಗೋ ಶಾಲೆಯ ತಂತ್ರಿಗಳಾದ ರಾಮಚಂದ್ರ ಭಟ್ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ದೈವದ ಭಂಡಾರ ಇಳಿಯುವುದು, ಕಲ್ಲಾಲ್ದ ಗುಳಿಗ, ಪೊಸ ಭೂತ, ದೈವ ವರ್ನರ, ಪಂಜುರ್ಲಿ, ಕುಪ್ಪೆ, ಕಲ್ಲುರ್ಟಿ ಮತ್ತು ಕಲ್ಕೂಡ, ಗೂಡು ಪಂಜುರ್ಲಿ, ಅಣ್ಣಪ್ಪ ಪಂಜುರ್ಲಿ ಮಂತ್ರ ದೇವತೆ, ಮಂತ್ರವಾದಿ ಗುಳಿಗ, ಕೊರಗಜ್ಜ ದೈವದ ನೇಮೋತ್ಸವ ನಡೆಯಿತು. ಪ್ರತಿದಿನ ಆಗಮಿಸಿದ ಭಕ್ತಾದಿಗಳಿಗೆ ದೇವಾಲಯದ ವತಿಯಿಂದ ಅನ್ನ ಸಂತರ್ಪಣೆ ನೆರವೇರಿತು. ಈ ಸಂದರ್ಭ ದೈವ ದೇವರ ಆರಾಧಕರಾದ ಬಿ.ಜೆ.ಹರೀಶ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿ ಫೆ.11 NEWS DESK : ಹೊದ್ದೂರು ಗ್ರಾಮದ ರಕ್ಷಕ, ಐತಿಹಾಸಿಕ ಹಿನ್ನಲೆಯುಳ್ಳ, ಪವಾಡ ಸದೃಶ ಮಹಿಮೆಯುಳ್ಳ ಶ್ರೀ ಶಾಸ್ತ-ಈಶ್ವರ ಕ್ಷೇತ್ರದಲ್ಲಿ ಶ್ರೀ ಶಾಸ್ತ-ಈಶ್ವರ, ಮಹಾಗಣಪತಿ, ಶ್ರೀ ಬೇಟೆ ಅಯ್ಯಪ್ಪ ಹಾಗೂ ಶ್ರೀ ವಿಷ್ಣುಮೂರ್ತಿ ದೇವತೆಗಳ 4ನೇ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.16 ರಿಂದ 18ರ ವರೆಗೆ ನಡೆಯಲಿದೆ. ದೇವಾಲಯದಲ್ಲಿ ಮೂರು ದಿನಗಳ ಕಾಲ ಜಯರಾಜ್ ತಂತ್ರಿಗಳ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಫೆ.16 ರಂದು ಸಂಜೆ 7 ಗಂಟೆಗೆ ಶ್ರೀ ಶಾಸ್ತ-ಈಶ್ವರ ದೇವಸ್ಥಾನದಲ್ಲಿ ಅಂದಿಬೊಳಕ್ ನಡೆಯಲಿದೆ. ಫೆ.17 ರಂದು ಬೆಳಿಗ್ಗೆ 7 ಗಂಟೆಗೆ ದೇವರ ತೂಚಂಬಲಿ, 8 ಗಂಟೆಗೆ ಗಣಪತಿ ಹೋಮ, 10 ಗಂಟೆಗೆ ಪ್ರತಿಷ್ಠಾ ಅಲಂಕಾರ ಪೂಜೆ, 11.30ಕ್ಕೆ ಶ್ರೀ ಬೇಟೆ ಅಯ್ಯಪ್ಪ ಸನ್ನಿಧಿಯಲ್ಲಿ ಅಭಿಷೇಕ, 11.45ಕ್ಕೆ ಶೀ ವಿಷ್ಣು ಮೂರ್ತಿ ದೇವ ಸನ್ನಿಧಿಯಲ್ಲಿ ಅಭಿಷೇಕ ಪೂಜೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಈಶ್ವರ ದೇವರ ನೆರ್ಪು ಬಲಿ, ಮಹಾಪೂಜೆ, ಮಂಗಳಾರತಿ ಹಾಗೂ ತೀರ್ಥ…
ಮಡಿಕೇರಿ ಫೆ.11 NEWS DESK : ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ಹಾಗೂ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಹೆಗ್ಗಳ ಶಾಲಾ ಮೈದಾನದಲ್ಲಿ ಪ್ರೋ ಮ್ಯಾಟ್ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ಏ.12 ಮತ್ತು 13 ರಂದು ಆಯೋಜಿಸಲಾಗಿದೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ. ವಿರಾಜಪೇಟೆ ತಾಲೂಕು ಬೇಟೋಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಾಮನಗರ ಫ್ರೆಂಡ್ಸ್ ಪ್ರಮುಖರಾದ ಧನುಷ್, ಹೆಗ್ಗಳ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪಂದ್ಯಾವಳಿ ಲೀಗ್ ಮಾದರಿಯಲ್ಲಿ ನಡೆಯಲಿದೆ. ಪಂದ್ಯಾವಳಿಯನ್ನು ಆಯೋಜಿಸಲು ಪ್ರಾಯೋಜಕತ್ವವನ್ನು ಆಹ್ವಾನಿಸಲಾಗಿದೆ ಎಂದರು. ರಾಮನಗರದ ಪ್ರೋ ಮ್ಯಾಟ್ ಕಬಡ್ಡಿ ಪ್ರೀಮಿಯರ್ ಲೀಗ್ನ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಪ್ರಭಾಕರ್ (ಪ್ರಭು), ಪ್ರಂದ್ಯಾವಳಿಗೆ ತಂಡಗಳನ್ನು ಆಹ್ವಾನಿಸಲಾಗುತ್ತಿದ್ದು. ಕ್ರೀಡಾಪಟುಗಳು ವಿರಾಜಪೇಟೆ ತಾಲೂಕಿಗೆ ಸೀಮಿತವಾಗಿರಬೇಕು. ಕ್ರೀಡಾ ಪಟುಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಂಸ್ಥೆಯು ನಿಗದಿಗೊಳಿಸಿರುವ ಹಣವನ್ನು ಮುಂಗಡವಾಗಿ ನೀಡಬೇಕು. ತಂಡದ ನೋಂದಾಣಿಗಾಗಿ ಮಾ.20 ಅಂತಿಮ ದಿನವಾಗಿದೆ. ಕ್ರೀಡಾ ಪಟುಗಳನ್ನು ಬಿಡ್ ಮೂಲಕ ತಂಡಕ್ಕೆ ಆಯ್ಕೆಗೊಳಿಸಲಾಗುತ್ತದೆ. ಬಿಡ್ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ವಿಜೇತ…
https://youtu.be/YlhGGSLLxys?si=1BzDNXAg79HerszU ಮಡಿಕೇರಿ ಫೆ.11 NEWS DESK : ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಫೆ.7 ರಂದು ಮಡಿಕೇರಿಯಲ್ಲಿ ಬೃಹತ್ ಜಾಥಾವನ್ನು ಶಾಂತಿಯುತವಾಗಿ ನಡೆಸಿರುವುದಕ್ಕೆ ಕೊಡಗು ಗೌಡ ಸಮಾಜಗಳ ಒಕ್ಕೂಟದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇವೆ. ಆದರೆ ಜಾಥಾ ನಡೆದ ನಂತರ ಜಿಲ್ಲಾಡಳಿತಕ್ಕೆ ನೀಡಿದ ಮನವಿ ಪತ್ರದಲ್ಲಿ ಉಲ್ಲೇಖಿಸಿರುವ 9 ಅಂಶಗಳನ್ನು ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜ.20 ರಂದು ಅರೆಭಾಷೆ ಗೌಡ ಸಮುದಾಯದವರು ಶಾಂತಿಯುತ ಜಾಥಾ ನಡೆಸಿ ಸಾಮಾಜಿಕ ಜಾಲತಾಣಗಳಲ್ಲಿ ಜಾತಿ ನಿಂದನೆ ಮಾಡಿರುವ ಸಿಎನ್ಸಿ ಅಧ್ಯಕ್ಷರು ಹಾಗೂ ಕೆಲವು ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಆ ಸಂದರ್ಭ ನಾವು ನೀಡಿದ ಮನವಿ ಪತ್ರದಲ್ಲಿದ್ದ ವಿಚಾರಗಳು ಎಲ್ಲೆ ಮೀರಿರಲಿಲ್ಲ. ಆದರೆ ಅಖಿಲ ಕೊಡವ ಸಮಾಜ ನೀಡಿದ ಮನವಿಯಲ್ಲಿ ನೇರವಾಗಿ ಅರೆಭಾಷೆ ಗೌಡರನ್ನು ಉಲ್ಲೇಖಿಸಲಾಗಿದೆ ಮತ್ತು ಇಲ್ಲಸಲ್ಲದ ಆರೋಪ ಮಾಡಲಾಗಿದೆ. ಕೊಡವರ ಸಂಸ್ಕೃತಿ, ಆಚಾರ ವಿಚಾರದ ಉಳಿವಿಗಾಗಿ ಪ್ರಸ್ತಾಪಿಸುವ…
ಸುಂಟಿಕೊಪ್ಪ ಫೆ.11 NEWS DESK : ಅಪ್ರಾಪ್ತ ಮಕ್ಕಳು ಬೇಡಿಕೆ ಇಡುತ್ತಾರೆಂದು ಪೋಷಕರು ವಾಹನಗಳನ್ನು ತೆಗೆದುಕೊಡುವುದು ಮತ್ತು ಚಾಲನೆಗೆ ನೀಡುವುದು, ದ್ವಿಚಕ್ರ ವಾಹನಗಳಲ್ಲಿ ಇಬ್ಬರಿಗಿಂತ ಅಧಿಕ ಮಂದಿ ಸವಾರಿ ಮಾಡುವುದು, ವಾಹನ ಚಾಲನಾ ಪರವನಾಗಿಯನ್ನು ಹೊಂದದೆ ವಾಹನ ಚಾಲನೆ ಮಾಡುವುದು ಕಾನೂನು ರೀತಿಯಲ್ಲಿ ಅಪರಾಧ ಎಂದು ಸುಂಟಿಕೊಪ್ಪ ಪೊಲೀಸ್ ಠಾಣೆಯ ಮುಖ್ಯ ಪೇದೆ ಆಶಾ ಹೇಳಿದರು. ಸುಂಟಿಕೊಪ್ಪ ಗುಂಡುಗುಟ್ಟಿ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ವಾಹನ ಚಾಲಕರಿಗೆ ಪೊಲೀಸ್ ಇಲಾಖೆ ವತಿಯಿಂದ ನಡೆದ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಾಹನಗಳನ್ನು ಚಲಾಯಿಸುವಾಗ ದ್ವಿಚಕ್ರ ಸವಾರರು ರಸ್ತೆ ಸುರಕ್ಷತೆಯ ಬಗ್ಗೆ ಮಾಹಿತಿ ಹೊಂದಿರಬೇಕು. ಅದೇ ರೀತಿಯಲ್ಲಿ ವಾಹನ ಚಾಲನಾ ಪರವನಾಗಿ ಹಾಗೂ ಜೀವವಮೆಯನ್ನು ಪಾವತಿಸಿರಬೇಕು, ವಾಹನಕ್ಕೆ ಸಂಬಂಧಿಸಿದ ದಾಖಲಾತಿ ಪತ್ರಗಳನ್ನು ವಾಹನದಲ್ಲಿರಿಸಿಕೊಳ್ಳಬೇಕು. ವಾಹನದ ಮಿತಿಗಿಂತ ಅಧಿಕ ಮಂದಿಯನ್ನು ಕುಳ್ಳಿರಿಸಿಕೊಂಡು ಚಾಲನೆ ಮಾಡುವುದು ಅಪರಾಧ. ಅನಾಹುತಗಳು…
ನಾಪೋಕ್ಲು ಫೆ.11 NEWS DESK : ಇಂದಿನ ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅತೀ ಅಗತ್ಯ. ಫಲಿತಾಂಶ ಉತ್ತಮ ಪಡಿಸಲು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕಾರ್ಯವೈಖರಿಯನ್ನು ಕೊಡಗು ಜಿಲ್ಲೆಗೆ ವಿಸ್ತರಿಸಿರುವುದು ಶ್ಲಾಘನೀಯ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹೇಳಿದರು. ಹೊದವಾಡ ರಫೆಲ್ಸ್ ಶಿಕ್ಷಣ ಸಂಸ್ಥೆ ಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ( ಮೀಫ್ ) ವತಿಯಿಂದ ಆಯೋಜಿಸಲಾಗಿದ್ದ ನೂತನ ಕೊಡಗು ಘಟಕದ ಉದ್ಘಾಟನೆ ಮತ್ತು ಎಸ್ ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ಪಾಸಿಂಗ್ ಪ್ಯಾಕೇಜ್ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಾಗಾರವನ್ನು ಉದ್ಘಾಟಿಸಿದ ಕೊಡಗು ಜಿಲ್ಲೆ ಡಿ.ಡಿ.ಪಿ.ಐ ರಂಗಾಧಾಮಪ್ಪ ಮೀಫ್ ನೀಡುವ ತರಬೇತಿಗಳು ಕೊಡಗು ಜಿಲ್ಲೆಯ ಫಲಿತಾಂಶಕ್ಕೆ ಸಹಕಾರಿ ಎಂದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಗಳ ಗೂನಡ್ಕದ ಟಿ.ಎಂ.ಶಾಹಿದ್ ತೆಕ್ಕಿಲ್, ಭಾಗವಹಿಸಿ ಮಾತನಾಡಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ…
ನಾಪೋಕ್ಲು ಫೆ.11 NEWS DESK : ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ(ಪಕ್ಷ) ಜಯಗಳಿಸಿದ ಹಿನ್ನೆಲೆಯಲ್ಲಿ ನಾಪೋಕ್ಲುವಿನ ಬಿಜೆಪಿ ಶಕ್ತಿ ಕೇಂದ್ರದಿಂದ ವಿಜಯೋತ್ಸವ ಆಚರಿಸಲಾಯಿತು. ಪಟ್ಟಣದ ಬಸ್ ನಿಲ್ದಾಣದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಕಾರ್ಯಕರ್ತರು ಪಕ್ಷದ ಬಾವುಟವನ್ನು ಹಿಡಿದು ಜೈಕಾರ ಕೂಗಿದರು. ನಂತರ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶಿವಚಳಿಯಂಡ ಅಂಬಿ ಕಾರ್ಯಪ್ಪ ನೇತೃತ್ವದಲ್ಲಿ ಜರುಗಿದ ವಿಜಯೋತ್ಸವದಲ್ಲಿ ಅಂಬಿ ಕಾರ್ಯಪ್ಪ ಹಾಗೂ ಹಿಂದುಳಿದ ವರ್ಗ ಮೋರ್ಚಾದ ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷ ಬಿ.ಎಂ.ಪ್ರತೀಪ ಮಾತನಾಡಿ, ದೆಹಲಿಯಲ್ಲಿ 70 ಸ್ಥಾನಗಳ ಪೈಕಿ 47 ಸ್ಥಾನಗಳನ್ನು ಗಳಿಸಿ 27 ವರ್ಷಗಳ ಬಳಿಕ ಅಧಿಕಾರ ದೊರೆತಿದೆ. ಈ ಗೆಲುವಿಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿ. ಈ ಸಂದರ್ಭ ಬಿಜೆಪಿ ಪಕ್ಷದ ಪ್ರಮುಖರಾದ ಕೇಟೋಳಿರ ಹರೀಶ್ ಪೂವಯ್ಯ, ಶಿವಚಳಿಯಂಡ ಜಗದೀಶ್, ಎಂ.ಎಂ.ನರೇಂದ್ರ, ಅಪ್ಪಚ್ಚಿರ ರಮ್ಮಿ ನಾಣಯ್ಯ, ಅರೆಯಡ ರತ್ನ ಪೆಮ್ಮಯ್ಯ, ಟಿ.ಎ.ಮಿಟ್ಟು, ನಾಯಕಂಡ…






