ಮಡಿಕೇರಿ ಫೆ.11 NEWS DESK : 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿಗೆ ಉಚಿತ (ಸಿಬಿಎಸ್ಇ) (ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ, ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75 ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ಶೇ.25 ಸೀಟುಗಳು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, https://sevasindhuservices.karnataka.gov.in ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಅರ್ಜಿ ಸಲ್ಲಿಸಲು ಮಾ.10 ಕೊನೆಯ ದಿನವಾಗಿದೆ. ವಸತಿ ಶಾಲೆಯಲ್ಲಿ ದೊರೆಯುವ ಪ್ರತಿ ವಿದ್ಯಾರ್ಥಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಉಚಿತ ಶಿಕ್ಷಣ, ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ವರ್ಷಕ್ಕೆ ಸಮವಸ್ತ್ರ, ಬೂಟು, ಕಾಲು ಚೀಲ ಪೂರೈಕೆ,…
ಲೇಖಕ: admin
ಮಡಿಕೇರಿ ಫೆ.11 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಫೆ.12 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, ಪೂಜೆಯನ್ನು ಯಶಸ್ವಿಗೊಳಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ತಿಳಿಸಿದ್ದಾರೆ.
ಮಡಿಕೇರಿ ಫೆ.11 NEWS DESK : ಕರ್ನಾಟಕ ಲೋಕಾಯುಕ್ತ ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಫೆ.12 ರಂದು ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ದೂರು ಅರ್ಜಿ ಸ್ವೀಕಾರ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಫೆ.13 ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ವಿರಾಜಪೇಟೆ ಫೆ.11 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವಿರಾಜಪೇಟೆ ವತಿಯಿಂದ ಬಿರುನಾಣಿ ಮರೆನಾಡು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಾಗೂ ಬೆಂಚ್ ಡೆಸ್ಕ್ ವಿತರಣೆ ಕಾರ್ಯಕ್ರಮ ನಡೆಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಶೀಕ್ ಕಾವೇರಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಪ್ತ ಸಮಾಲೋಚಕಿ ರಮ್ಯಾ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ದೇಶ, ಪ್ರೌಢಾವಸ್ಥೆಯ ಮಕ್ಕಳು ಸಾಮಾಜಿಕವಾಗಿ, ಮಾನಸಿಕವಾಗಿ ಹೇಗೆ ಬಲಿಷ್ಟರಾಗಿರಬೇಕು, ದುಶ್ಚಟಗಳ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಮಾಹಿತಿ ನೀಡಿದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು. ಕಾರ್ಯಕ್ರಮದಲ್ಲಿ ಮರೆನಾಡು ಪ್ರಾಢ ಶಾಲೆಯ ಗೌರವ ಕಾರ್ಯದರ್ಶಿ ಬೇಬಿ ನಂಜಮ್ಮ, ಶಾಲಾ ಆಡಳಿತ ಮಂಡಳಿ ನಿರ್ದೇಶಕರುಗಳಾದ ಸುನಂದ, ಬೋಪಣ್ಣ, ಕೊಡಗು ಜಿಲ್ಲಾ ಜನ ಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ಬಾನಂಗಡ ಅರುಣ್, ಗ್ರಾಮ ಪಂಚಾಯ್ತಿ ಸದಸ್ಯರಾದ ಸರಸ್ವತಿ, ಮುಖ್ಯ ಶಿಕ್ಷಕರಾದ, ಕಿಶೋರ್, ಮೇಲ್ವಿಚಾರಕ…
ಮಡಿಕೇರಿ ಫೆ.11 NEWS DESK : ಕೊಡಗು ಜಿಲ್ಲಾ ಕಂದಾಯ ಇಲಾಖೆ ವತಿಯಿಂದ ನಡೆದ ರೆವಿನ್ಯೂ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪೊನ್ನಂಪೇಟೆ ವಾರಿಯರ್ಸ್ ತಂಡ ಗೆಲುವು ಸಾಧಿಸಿತು. ಸೋಮವಾರಪೇಟೆ ಕಂದಾಯ ಇಲಾಖೆ ತಂಡ ದ್ವಿತೀಯ ಸ್ಥಾನ ಪಡೆಯಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ 2 ದಿನಗಳ ಕಾಲ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ, ಸೋಮವಾರಪೇಟೆ, ಕುಶಾಲನಗರ ತಾಲ್ಲೂಕುಗಳ ಕಂದಾಯ ಇಲಾಖೆ ತಂಡಗಳು ಹಾಗೂ ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಕಚೇರಿ ಸಿಬ್ಬಂದಿ ತಂಡ ಸೇರಿದಂತೆ ಒಟ್ಟು 6 ತಂಡಗಳು ಪಾಲ್ಗೊಂಡಿದ್ದವು. ಲೀಗ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಿತು. ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಸೋಮವಾರಪೇಟೆ ಕಂದಾಯ ಇಲಾಖೆ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಪೊನ್ನಂಪೇಟೆ ವಾರಿಯರ್ಸ್ ನಿಗದಿತ 5 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 74 ರನ್ ಗಳಿಸಿತು. ತಂಡದ ಪರ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ ತರುಣ್ ನಂಜಪ್ಪ ಕೇವಲ 21…
ಮಡಿಕೇರಿ ಫೆ.11 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಕಾಯಕ ಶರಣರ ಜಯಂತಿ ಕಾರ್ಯಕ್ರಮವು ನಗರದ ಗಾಂಧಿ ಭವನದಲ್ಲಿ ನಡೆಯಿತು. ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕವಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಯಕ ದಾಸೋಹ ವಚನಗಳಿಂದ ಹೆಸರುವಾಸಿಯಾಗಿರುವ ಕಾಯಕ ಶರಣರು ವಚನಗಳ ಮೂಲಕ ಬಹಳ ಸರಳವಾಗಿ ಕನ್ನಡ ಸಾಹಿತ್ಯದಲ್ಲಿ ಜನರಿಗೆ ಸಂದೇಶಗಳನ್ನು ತಿಳಿಸುತ್ತಿದ್ದವರು ಎಂದು ಹೇಳಿದರು. ಕಾಯಕದಿಂದ ದೇವರನ್ನು ಪೂಜಿಸುವ ಬದಲಾಗಿ ಕಾಯಕವನ್ನು ಮಾಡುತ್ತಾ ದೇವರನ್ನು ಕಂಡವರು ಅಲ್ಲದೇ ಕಾಯಕಗಳಿಂದ ಯಾವುದೇ ಜಾತಿಯನ್ನು ಗುರುತಿಸಬಾರದು ಯಾವ ಕಾಯಕವು ದೊಡ್ಡದಲ್ಲ ಎಂದು ತಿಳಿಸಿಕೊಟ್ಟವರು ಕಾಯಕ ಶರಣರು ಎಂದರು. ಯಾವುದೇ ಕೆಲಸವನ್ನು ಮಾಡಿದರು ಆ ಕೆಲಸದ ಮೇಲೆ ನಮಗೆ ಪ್ರೀತಿ ಇರಬೇಕು. ಪ್ರೀತಿ ಇದ್ದಾಗ ಮಾತ್ರ ನಾವು ಉತ್ತಮ ರೀತಿಯಲ್ಲಿ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಾಗುತ್ತದೆ. ಎಲ್ಲಾ ಪೋಷಕರು ಹಾಗೂ ಶಿಕ್ಷಕರು ತಮ್ಮ ಮಕ್ಕಳಿಗೆ ಶಿಕ್ಷಣದ ಜೊತೆಗೆ ವ್ಯಕ್ತಿತ್ವವನ್ನು ರೂಪಿಸುವ ಹಾಗೂ ವ್ಯಕ್ತಿತ್ವವನ್ನು…
ಮಡಿಕೇರಿ ಫೆ.11 NEWS DESK : ಪ್ರತಿನಿತ್ಯವೂ ದೇವರ ಭಜನೆ ಮಾಡುವುದರಿಂದ ವ್ಯಕ್ತಿಯ ಏಕಾಗ್ರತೆಯ ಜೊತೆಗೆ ಹಲವು ರೀತಿಯಲ್ಲಿ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಿಲ್ಲಾ ಕಾರ್ಯಕಾರಿ ಸದಸ್ಯ ಕೆ.ಕೆ. ದಿನೇಶ್ ಕುಮಾರ್ ಅಭಿಪ್ರಾಯಪಟ್ಟರು. ಕತ್ತಲೆಕಾಡು-ಜೇನುಕೊಲ್ಲಿ ಶ್ರೀ ವಿನಾಯಕ ಸೇವಾ ಟ್ರಸ್ಟ್ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು. ಮಕ್ಕಳು ಎಳೆಯ ಪ್ರಾಯದಿಂದಲೇ ಭಜನೆ ಮುಂತಾದ ಧಾರ್ಮಿಕ ಚಟುವಟಿಕೆಯಲ್ಲಿ ಭಾಗಿಯಾಗಬೇಕು. ಇದರಿಂದಾಗಿ ಭವಿಷ್ಯದಲ್ಲಿ ಅವರು ಸಮಾಜಕ್ಕಾಗಿ ತೊಡಗಿಸಿಕೊಳ್ಳಲು ಪ್ರೇರೇಪಣೆಯಾಗುತ್ತದೆ. ಮನುಷ್ಯ ಯಾವತ್ತೂ ಒಂಟಿಯಾಗಿ ಬದುಕಲು ಸಾಧ್ಯವಿಲ್ಲ. ಸಂಘಟನಾತ್ಮಕವಾಗಿ ಇದ್ದಾಗ ಮಾತ್ರ ಸಮಾಜದಲ್ಲಿ ಮುಂದುವರೆಯಲು ಸಹಕಾರಿಯಾಗುತ್ತದೆ ಎಂದರು. ಸಂಘಟನೆಯಲ್ಲಿ ತೊಡಗಿಸಿಕೊಂಡಾಗ ನಮ್ಮ ವಿಚಾರಧಾರೆಗಳನ್ನು ಇತರರೊಡನೆ ಹಂಚಿಕೊಳ್ಳಲು ಸಾಧ್ಯವಾಗುತ್ತದೆ. ಗ್ರಾಮೀಣ ಭಾಗದಲ್ಲಿ ಸಂಘಟನೆ ಕಟ್ಟಿಕೊಂಡು ಸಾಮಾಜಿಕ ಕಾರ್ಯದಲ್ಲಿ ನಿರಂತರವಾಗಿ ಭಾಗಿಯಾಗುವುದು ಸುಲಭದ ಕೆಲಸ ಅಲ್ಲ. ನಮ್ಮ ಸಂಸ್ಕೃತಿಯ ಉಳಿವಿಗೆ ಶ್ರಮಿಸುವ ಜೊತೆಗೆ ಮುಂದಿನ ಪೀಳಿಗೆಗೆ ಪರಿಚಯಿಸುವ ನಿರಂತರ ಪ್ರಕ್ರಿಯೆ ನಮ್ಮಿಂದ ಆಗಬೇಕೆಂದು ಆಶಯ ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ…
ಮಡಿಕೇರಿ NEWS DESK ಫೆ.10 : ವಸ್ತ್ರ ಸಂಹಿತೆ ಕುರಿತು ಎರಡು ಸಮುದಾಯಗಳ ನಡುವೆ ಮೂಡಿರುವ ಭಿನ್ನಾಭಿಪ್ರಾಯದಿಂದ ಗೊಂದಲ ಸೃಷ್ಟಿಯಾಗಿರುವ ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಾಲಯದ 200 ಮೀಟರ್ ವ್ಯಾಪ್ತಿಯಲ್ಲಿ ಮತ್ತೆ ಮಾ.13 ರವರೆಗೆ ನಿರ್ಬಂಧ ವಿಧಿಸಿ ಕೊಡಗು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಕಳೆದ ಒಂದು ತಿಂಗಳಿನಿಂದ ಈ ಪ್ರದೇಶದಲ್ಲಿ ನಿರ್ಬಂಧಕಾಜ್ಞೆ ಜಾರಿಯಲ್ಲಿದ್ದು, ಇದೀಗ ಮತ್ತೆ ಫೆ.11 ರಿಂದ ಮಾ.13 ರವರೆಗೆ ವಿಸ್ತರಿಸಲಾಗಿದೆ. ಈ ಅವಧಿಯಲ್ಲಿ 5ಕ್ಕೂ ಅಧಿಕ ಮಂದಿ ಸೇರಬಾರದು, ರ್ಯಾಲಿ, ಜಾಥ, ಪ್ರತಿಭಟನೆ ನಡೆಸಬಾರದು, ಪ್ರಚೋದನಾತ್ಮಕ ಘೋಷಣೆ ಕೂಗಬಾರದು ಎಂದು ಆದೇಶಿಸಲಾಗಿದೆ.
https://www.youtube.com/watch?v=iMuSRWRbQeo&authuser=0 ಮಡಿಕೇರಿ ಫೆ.10 NEWS DESK : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘ 2ನೇ ಹಂತದ ಪ್ರತಿಭಟನೆ ನಡೆಸಿತು. ಕೆಲಸ ಸ್ಥಗಿತಗೊಳಿಸಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕಪ್ಪು ಪಟ್ಟಿಧರಿಸಿ ಶಾಂತಿಯುತ ಪ್ರತಿಭಟನೆ ನಡೆಸಿದ ಜಿಲ್ಲೆಯ ಗ್ರಾಮ ಆಡಳಿತಾಧಿಕಾರಿಗಳು ಮೂಲಭೂತ ಸೌಲಭ್ಯಕ್ಕಾಗಿ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷೆ ಅಕ್ಷತಾ ಬಿ.ಶೆಟ್ಟಿ, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾ ಭವನ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಎಲ್ಲಾ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಅಧಿಕಾರಿಗಳು ಹಾಗೂ ಸದಸ್ಯರ ಒಪ್ಪಿಗೆಯಂತೆ ಸರ್ವಾನುಮತದಿಂದ ರಾಜ್ಯಾದ್ಯಂತ ಮುಷ್ಕರ ನಡೆಸಿದ ಕಾರಣ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಡೆದ ಗ್ರಾಮ…
ಮಡಿಕೇರಿ 10 NEWS DESK : ಹಾರಂಗಿ ಅಣೆಕಟ್ಟೆಯ ಸ್ವಾಗತ ಕಮಾನು ಸಂಪೂರ್ಣ ಆಂಗ್ಲಭಾಷೆಯಲ್ಲಿದ್ದು, ಕನ್ನಡ ಭಾಷೆಯಲ್ಲಿ ಅಳವಡಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು. ಕುಶಾಲನಗರದ ತಾಲ್ಲೂಕು ಅಧ್ಯಕ್ಷ ಬಿ.ಜೆ.ಅಣ್ಣಯ್ಯ ನೇತೃತ್ವದಲ್ಲಿ ಜಲಾಶಯದ ಸ್ವಾಗತ ಕಮಾನು ಮುಂಭಾಗ ಜಮಾಯಿಸಿದ ಕರವೇ ಕಾರ್ಯಕರ್ತರು, ಕನ್ನಡ ವಿರೋಧಿಗಳು ಹಾಗೂ ನೀರಾವರಿ ನಿಗಮದ ವಿರುದ್ಧ ಧಿಕ್ಕಾರ ಕೂಗಿದರು. ಕನ್ನಡ ಭಾಷೆ ಬಳಸುವಂತೆ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ದೀಪಕ್, ರಾಜ್ಯ ಸರಕಾರ ಈಗಾಗಲೆ ಕನ್ನಡ ಭಾಷೆಗೆ ಪ್ರಾತಿನಿಧ್ಯ ನೀಡುವಂತೆ ಆದೇಶ ಹೊರಡಿಸಿದೆ. ಆದರೆ ಸರಕಾರದ ಭಾಗವಾಗಿರುವ ನೀರಾವರಿ ನಿಗಮದ ಅಧಿಕಾರಿಗಳು ಇತರರಿಗೆ ಮಾದರಿಯಾಗುವ ಬದಲು ಕನ್ನಡ ವಿರೋಧಿ ನೀತಿ ಅನುಸರಿಸಿದ್ದಾರೆ ಎಂದು ಆರೋಪಿಸಿದರು. ಈಗಾಗಲೆ ನಮ್ಮ ಪದಾಧಿಕಾರಿಗಳು ಕನ್ನಡ ಬಳಕೆಗೆ ಸೂಚನೆ ನೀಡಿದರೂ ಕೂಡ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಮುಂದಿನ 7 ರಿಂದ 15 ದಿನಗಳ ಒಳಗಾಗಿ ಕನ್ನಡ ನಾಮಫಲಕ ಅಳವಡಿಸದಿದ್ದರೆ ನಿಗಮದ ಕಛೇರಿ ಮುಂದೆ ಉಗ್ರ…






