ಲೇಖಕ: admin

https://www.youtube.com/watch?v=BYsC2nQ2Lpc&authuser=0 ಮಡಿಕೇರಿ NEWS DESK ಫೆ.9 : ಸೋಮವಾರಪೇಟೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಅಭಿವೃದ್ಧಿಗೆ ಯೋಜನೆ ರೂಪಿಸುವಂತೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸೂಚನೆ ನೀಡಿದ್ದಾರೆ. ಶಾಸಕರು ಇಂದು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದ ಅವರು ಆಸ್ಪತ್ರೆಯ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಸೇವೆ ಲಭಿಸಬೇಕು, ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ವೈದ್ಯಾಧಿಕಾರಿಗಳಿಗೆ ತಿಳಿಸಿದರು. ಚಿಕಿತ್ಸೆಗಾಗಿ ಬಂದ ಸಾರ್ವಜನಿಕರ ಆರೋಗ್ಯ ವಿಚಾರಿಸಿದ ಶಾಸಕರು, ವೈದ್ಯ ಡಾ.ಜಮೀರ್ ಅಹಮ್ಮದ್ ಅವರೊಂದಿಗೆ ಆಸ್ಪತ್ರೆಯ ಪ್ರತಿ ವಿಭಾಗಗಳಿಗೆ ತೆರಳಿ ಮಾಹಿತಿ ಪಡೆದರು. ಒಳರೋಗಿಗಳ ಬಳಿಗೆ ಹೋದ ಅವರು ಚಿಕಿತ್ಸೆಯ ಕುರಿತು ವಿಚಾರಿಸಿದರು. ಸೋಮವಾರಪೇಟೆ ಪ.ಪಂ ನಾಮ ನಿರ್ದೇಶಿತ ಸದಸ್ಯ ಡಿ.ಯು.ಕಿರಣ್ ಮತ್ತಿತರರು ಹಾಜರಿದ್ದರು.

Read More

ಮಡಿಕೇರಿ NEWS DESK ಫೆ.9 : ಮಡಿಕೇರಿ ನಗರ ಪೋಲೀಸ್ ಠಾಣೆಯಲ್ಲಿ ಕಳೆದ ಒಂದೂವರೆ ವರ್ಷಗಳಿಂದ ಠಾಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಇದೀಗ ಮಂಡ್ಯ ಜಿಲ್ಲೆಯ ಮಳವಳ್ಳಿ ಹುಲಗೂರು ಠಾಣೆಗೆ ವರ್ಗಾವಣೆಯಾಗಿರುವ ಲೋಕೇಶ್ ಅವರನ್ನು ನಗರದ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಗೂ ಸಾರ್ವಜನಿಕರು ಆತ್ಮೀಯವಾಗಿ ಬೀಳ್ಕೊಟ್ಟರು. ನಗರ ಠಾಣೆಯಲ್ಲಿ ಲೋಕೇಶ್ ಅವರನ್ನು ಸನ್ಮಾನಿಸಿ ಗೌರವಿಸಿದ ಪ್ರಮುಖರು ಮುಂದಿನ ವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿ ಲೋಕೇಶ್ ಅವರು 2023 ರಲ್ಲಿ ಮಡಿಕೇರಿ ನಗರ ಠಾಣೆಯಲ್ಲಿ ಅಧಿಕಾರ ವಹಿಸಿಕೊಂಡು ಜನಸ್ನೇಹಿ ಅಧಿಕಾರಿಯಾಗಿ ದಕ್ಷತೆಯಿಂದ ಸೇವೆ ಸಲ್ಲಿಸಿದ್ದಾರೆ ಎಂದರು. ವಿಶ್ವವಿಖ್ಯಾತ ಮಡಿಕೇರಿ ದಸರಾ ಸೇರಿದಂತೆ ಅನೇಕ ಜನದಟ್ಟಣೆಯ ಕಾರ್ಯಕ್ರಮಗಳ ಸಂದರ್ಭ ಲೋಕೇಶ್ ಹಾಗೂ ಅವರ ಸಿಬ್ಬಂದಿಗಳ ತಂಡ ಉತ್ತಮ ರೀತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಆದ್ದರಿಂದ ಅವರನ್ನು ಆತ್ಮೀಯವಾಗಿ ಬೀಳ್ಕೋಡುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು.…

Read More

ಮೈಸೂರು NEWS DESK ಫೆ.9 : ಪ್ರಾಚೀನ ಕಲೆಯಾದ “ಯೋಗಕ್ಕೆ” ನಮ್ಮ ಮೈಸೂರು ಮಹಾರಾಜರು ಹೆಚ್ಚು ಆದ್ಯತೆ ನೀಡಿ, ಬೆಳವಣಿಗೆಗೆ ಕಾರಣಕರ್ತರಾಗಿದ್ದಾರೆ. ಮೈಸೂರು ಯೋಗದ ರಾಜಧಾನಿ ಎಂಬಂತಾಗಿದೆ. ಈ ನಿಟ್ಟಿನಲ್ಲಿ ಮೈಸೂರಿನ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯನ್ನು “ಯೋಗ ಮ್ಯೂಸಿಯಂ” ಆಗಿ ಪರಿವರ್ತಿಸಬೇಕು ಎಂಬ ಪ್ರಸ್ತಾವನೆ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌  ಅವರಿಗೆ ಮೈಸೂರು ಯೋಗ ಅಸೋಸಿಯೇಷನ್‌ ಪದಾಧಿಕಾರಿಗಳು ಧನ್ಯವಾದ ಸಲ್ಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂಸದ ಯದುವೀರ್‌, ಮೈಸೂರು ಜಿಲ್ಲಾ ಯೋಗ ಅಸೋಸಿಯೇಷನ್ ಪ್ರತಿನಿಧಿಗಳು ನನ್ನನ್ನು ಭೇಟಿಯಾಗಿ ಯೋಗ ಸಂಬಂಧಿತ ಕೆಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಯೋಗ ವಿಶ್ವವಿದ್ಯಾನಿಲಯ ಸ್ಥಾಪನೆ, ಮೈಸೂರಿನ ಹಿರಿಯ ಯೋಗಾಚಾರ್ಯರಾದ ಕೃಷ್ಣಮಾಚಾರ್ಯ ಪುತ್ಥಳಿ ಸ್ಥಾಪನೆ, ಮೈಸೂರಿನ ಹಿರಿಯ ಯೋಗಾಚಾರ್ಯ ಪಟ್ಟಾಭಿ ಜೋಯಿಸರ ಪುತ್ಥಳಿ ಇಲ್ಲವೇ ರಸ್ತೆ ಅಥವಾ ವೃತ್ತಕ್ಕೆ ಅವರ ಹೆಸರು ನಾಮಕರಣ ಮಾಡುವುದು,…

Read More

ಕುಶಾಲನಗರ NEWS DESK ಫೆ.9 : ಕುಶಾಲನಗರದ ರಥ ಬೀದಿಯಲ್ಲಿರುವ ಗೋಲ್ಡನ್ ಟೆಂಪಲ್ ಎಂದೇ ಖ್ಯಾತಿ ಗಳಿಸಿರುವ ಶ್ರೀಮದ್ ವಾಸವಿ ಕನ್ನಿಕಾಪರಮೇಶ್ವರಿ ದೇವಸ್ಥಾನದ 11 ನೇ ವಾರ್ಷಿಕೋತ್ಸವ ಫೆ.11 ರಂದು ನಡೆಯಲಿದೆ ಎಂದು ಶ್ರೀ ವಾಸವಿ ಕನ್ನಿಕಾಪರಮೇಶ್ವರಿ ಟ್ರಸ್ಟ್ ನ ಅಧ್ಯಕ್ಷ ಬಿ.ಎಲ್.ಉದಯ್ ಕುಮಾರ್ ತಿಳಿಸಿದ್ದಾರೆ. ಮಂಗಳವಾರ ಬೆಳಿಗ್ಗೆ 6.30 ಕ್ಕೆ ವಾಸವಿ ಸುಪ್ರಭಾತ, 7.30 ಕ್ಕೆ ದೇವತಾ ಪ್ರಾರ್ಥನೆ, ಮಹಾಸಂಕಲ್ಪ ಗಣಪತಿ ಪೂಜೆ, ಪುಣ್ಯಾಹ, ನಾಂದಿ, ಗೋ ಪೂಜೆ, ಧ್ವಜಾರೋಹಣ, ಕಳಸ ಸ್ಥಾಪನೆ, ಪಂಚಾಮೃತ ಅಭಿಷೇಕ, 9 ಗಂಟೆಗೆ ಚಂಡಿಕಾ ಹೋಮ, ಕಲಾತ್ವತ ಹೋಮ, ಕಳಸ ಪೂಜೆ, 1 ಗಂಟೆಗೆ ಪೂರ್ಣಾಹುತಿ, ಮಹಾ ಮಂಗಳಾರತಿ ದೇವಸ್ಥಾನದ ಅರ್ಚಕರಾದ ಗಿರೀಶ್ ಭಟ್ ಮತ್ತು ಯೋಗೀಶ್ ಭಟ್ ನೇತೃತ್ವದಲ್ಲಿ ನಡೆಯಲಿದೆ. ಸಂಜೆ 6 ಗಂಟೆಯಿಂದ 7 ಗಂಟೆ ವರೆಗೆ ಆರ್ಯವೈಶ್ಯ ಮಹಿಳಾ ಮಂಡಳಿ ವತಿಯಿಂದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅಧ್ಯಕ್ಷೆ ಲಕ್ಷ್ಮಿ ಶ್ರೀನಿವಾಸ್ ತಿಳಿಸಿದ್ದಾರೆ. 7 ಗಂಟೆಯ ನಂತರ ದೀಪಾರಾಧನೆ, ಪ್ರಾಕಾರೋತ್ಸವ, ಮಹಾಪೂಜೆ, ಅಷ್ಟಾವಧಾನ,…

Read More

ಮಡಿಕೇರಿ NEWS DESK ಫೆ.9 : ಆದಿಮಸಂಜಾತ ಕೊಡವ ಬುಡಕಟ್ಟು ಜನರ ಸಾಂಪ್ರದಾಯಿಕ ಉಡುಪಿನ ಮಹತ್ವದ ಕುರಿತು ಕಳೆದ 35 ವರ್ಷಗಳಿಂದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಾಗೃತಿ ಮೂಡಿಸುತ್ತಲೇ ಬಂದಿದ್ದು, ನಮ್ಮ ಪ್ರಯತ್ನ ಫಲ ನೀಡಿರುವುದಕ್ಕೆ ಕೊಡವರ ಬೃಹತ್ ಪಾದಯಾತ್ರೆಯಲ್ಲಿ ಸಾಂಪ್ರದಾಯಿಕ ಉಡುಪಿನಲ್ಲಿ ಕೊಡವರು ರಾರಾಜಿಸಿರುವುದೇ ಸಾಕ್ಷಿಯಾಗಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ. ಫೆ.7 ರಂದು ಮಡಿಕೇರಿಯಲ್ಲಿ ನಡೆದ ಬೃಹತ್ ಪಾದಯಾತ್ರೆಯಲ್ಲಿ ಪಾಲ್ಗೊಂಡ ಸಹಸ್ರ ಸಹಸ್ರ ಕೊಡವರು ಕೆಂಪು ತಲೆವಸ್ತ್ರ, ಕುಪ್ಯಚೇಲೆ ಮತ್ತು ಕೊಡವ ಪೊಡೆಯ ಉಡುಪಿನಲ್ಲಿ ಸಾಗುವ ಮೂಲಕ ಧೀರ ಕೊಡವರ ಗಾಂಭೀರ್ಯವನ್ನು ಪ್ರದರ್ಶಿಸಿದ್ದಾರೆ. ಇದಕ್ಕಾಗಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲಾ ಕೊಡವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕಳೆದ 35 ವರ್ಷಗಳಿಂದ ಆದಿಮಸಂಜಾತ ಕೊಡವ ಲೋಕದ ಅದಮನೀಯ ಧ್ವನಿ ಮತ್ತು ಸ್ಥಿತಿ ಸ್ಥಾಪಕತ್ವದ ಚಳುವಳಿಯ ಮೂಲಕ ಸಿಎನ್‌ಸಿ ಸಂಘಟನೆ ಶ್ರಮಿಸುತ್ತಿದೆ. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ, ಸ್ವ-ಆಡಳಿತ ಮತ್ತು ಸ್ವ-ನಿರ್ಣಯದ ಹಕ್ಕು ಹಾಗೂ ಎಸ್‌ಟಿ ಟ್ಯಾಗ್…

Read More

ಸುಂಟಿಕೊಪ್ಪ NEWS DESK ಫೆ.8 : ದೆಹಲಿ ಚುನಾವಣೆಯಲ್ಲಿ ಬಹುಮತದೊಂದಿಗೆ ಬಿಜೆಪಿ ಪಕ್ಷ ಜಯಗಳಿಸಿದ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಬಿಜೆಪಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಶನಿವಾರ ಸಂಜೆ ಪಕ್ಷದ ಕಾರ್ಯಕರ್ತರು ಕನ್ನಡ ವೃತ್ತದಲ್ಲಿ ಜಮಾವಣೆಗೊಂಡು ಪ್ರಧಾನಿ ನರೇಂದ್ರಮೋದಿ ಪರ ಜಯಘೋಷ ಕೂಗಿ, ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಿಸಿ ಸಂಭ್ರಮಿಸಿದರು. ಶಕ್ತಿ ಕೇಂದ್ರದ ಅಧ್ಯಕ್ಷ ಧನು ಕಾವೇರಪ್ಪ, ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್‌ ಕುಮಾರ್, ಪಕ್ಷದ ಹಿರಿಯ ಮುಖಂಡರುಗಳಾದ ಡಿ.ನರಸಿಂಹ, ಲೀಲಾವತಿ, ಶಕ್ತಿ ಕೇಂದ್ರದ ನಿಕಟಪೂರ್ವ ಅಧ್ಯಕ್ಷ ಬಿ.ಕೆ.ಪ್ರಶಾಂತ್, ಗ್ರಾ.ಪಂ.ಸದಸ್ಯೆ ವಸಂತಿ, ಪಟ್ಟೆಮನೆ ಉದಯಕುಮಾರ್, ವಿ.ಎ.ಸಂತೋಷ್, ಪ್ರಶಾಂತ್ (ಪ್ರಶು), ಕೆದಕಲ್ ರಮೇಶ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

Read More

ಗೋಣೀಕೊಪ್ಪ NEWS DESK  ಫೆ.8 : ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ ಹಿನ್ನೆಲೆ ಗೋಣಿಕೊಪ್ಪ ನಗರ ಬಿಜೆಪಿ ಶಕ್ತಿಕೇಂದ್ರದ ಪ್ರಮುಖರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬಸ್ ನಿಲ್ದಾಣದಲ್ಲಿ ಜಿಲ್ಲಾ ಉಪಾಧ್ಯಕ್ಷ ಗುಮ್ಮಟ್ಟೀರ ಕಿಲನ್ ಗಣಪತಿ, ಶಕ್ತಿ ಕೇಂದ್ರದ ಪ್ರಮುಖ ಸುರೇಶ್ ರೈ ಮುಂದಾಳತ್ವದಲ್ಲಿ ಸಂಭ್ರಮಾಚರಣೆ ನಡೆಯಿತು. ದೆಹಲಿ ಚುನಾವಣಾ ಫಲಿತಾಂಶ ಮುಂದಿನ ಕರ್ನಾಟಕ ಮತ್ತು ತೆಲಂಗಾಣದ ಚುನಾವಣೆಗೆ ದಾರಿದೀಪವಾಗಿದೆ. ದೆಹಲಿಯಲ್ಲಿ ಬಿಜೆಪಿ 70 ಸ್ಥಾನಗಳ ಪೈಕಿ 47 ಸ್ಥಾನಗಳನ್ನು ಗಳಿಸಿದೆ. ಬಿಜೆಪಿ 27 ವರ್ಷಗಳ ಬಳಿಕ ಅಧಿಕಾರಕ್ಕೆ ಬಂದಿದೆ ಎಂದು ಗುಮ್ಮಟ್ಟೀರ ಕಿಲನ್ ಗಣಪತಿ ಹೇಳಿದರು. ರಾಜ್ಯ ಬಿಜೆಪಿ ಕೃಷಿಮೋರ್ಚಾ ಸದಸ್ಯೆ ಮಾಪಂಗಡ ಯಮುನಾ ಚಂಗಪ್ಪ, ಗೋಣಿಕೊಪ್ಪ ಗ್ರಾ.ಪಂ ಸದಸ್ಯರುಗಳಾದ ಕೊಣಿಯಂಡ ಬೋಜಮ್ಮ, ವಿವೇಕ್ ರಾಯ್ಕರ್, ನೂರೇರ ರತಿ ಅಚ್ಚಪ್ಪ, ಮನ್ನಕಮನೆ ಸೌಮ್ಯ ಬಾಲು, ರಾಮಕೃಷ್ಣ, ಪ್ರಮುಖರುಗಳಾದ ಚೇಂದಂಡ ಸುಮಿ ಸುಬ್ಬಯ್ಯ, ಸುಬ್ರಮಣಿ ಎಂ.ಎಸ್, ರಾಣಿ ನಾರಾಯಣ, ಪ್ರಭಾಕರ್ ನೆಲ್ಲಿತ್ತಾಯ, ಜ್ಯೋತಿ, ಮಂಜು ಮಾಯಮುಡಿ, ಸುದರ್ಶನ್ ಭಟ್,…

Read More

ಮಡಿಕೇರಿ ಫೆ.8 NEWS DESK : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಸಂಭ್ರಮಾಚರಣೆ ನಡೆಯಿತು. ನಗರದ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಜೈಕಾರ ಹಾಕಿ ಸಂಭ್ರಮಿಸಿದರು.  ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ  ಕಾರ್ಯದರ್ಶಿ ಮಹೇಶ್ ಜೈನಿ, ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್, ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಪಕ್ಷದ ಪ್ರಮುಖರಾದ ಮನು ಮಂಜುನಾಥ್, ಬೊಳ್ಳಜಿರ ಬಿ.ಅಯ್ಯಪ್ಪ ಸೇರಿದಂತೆ ನಗರಸಭೆ ಸದಸ್ಯರು, ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಫೆ.8 NEWS DESK : ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಮತ್ತು ಚಿಲ್ ಬಾಯ್ಸ್ ಮಡಿಕೇರಿ ಇವರ ವತಿಯಿಂದ 20ನೇ ವರ್ಷದ “ಮುಸ್ಲಿಂ ಕಪ್” ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫೆ.10ರಿಂದ 16ರ ವರೆಗೆ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಚಿಲ್ ಬಾಯ್ಸ್ ಸಂಸ್ಥೆಯ ಅಧ್ಯಕ್ಷ ಎಂ.ಎ.ಉನೈಸ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಈಗಾಗಲೇ ತಂಡಗಳು ಹೆಸರು ನೋಂದಾಯಿಸಿಕೊಂಡಿದ್ದು, ಸೋಮವಾರ ಬೆಳಿಗ್ಗೆ 9 ಗಂಟೆಗೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಮುಸ್ಲಿಂ ಸ್ಪೋಟ್ರ್ಸ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಅಬ್ದುಲ್ ರಶೀದ್ ಎಡಪಾಲ, ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಖಾದರ್ ಹಾಕತ್ತೂರು, ಪ್ರಧಾನ ಕಾರ್ಯದರ್ಶಿ ಆದಂ ಎಸ್, ಉದ್ಯಮಿಗಳಾದ ಟಿ.ಪಿ.ಮಂಜೇಶ್, ಮಕ್ಬೂಲ್, ಸುಂಟಿಕೊಪ್ಪ ಯುವ ಕಾಂಗ್ರೆಸ್ ಮುಖಂಡ ಹರ್ಷದ್ ಲತೀಫ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಸಮಾರೋಪ ಸಮಾರಂಭ ಫೆ.16 ರಂದು ನಡೆಯಲಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು…

Read More

ಮೈಸೂರು ಫೆ.8 NEWS DESK : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದೆ. ಇದರೊಂದಿಗೆ ಎರಡೂವರೆ ದಶಕಗಳ ಬಳಿಕ ದಿಲ್ಲಿ ಗದ್ದುಗೆ ಮೇಲೆ ಕಮಲ ಅರಳಿದೆ. ಈ ಬಾರಿಯ ನವದೆಹಲಿ ಚುನಾವಣೆಗೂ ಮತ್ತು ಮೈಸೂರಿಗೂ ಅವಿನಾಭಾವ ಸಂಬಂಧ ಕೂಡ ಇದೆ. ಏಕೆಂದರೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನಡೆಸಿದ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಯದುವೀರ್ ಒಡೆಯರ್ ಅವರು ಕಳೆದ ವಾರ ನವದೆಹಲಿಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ತೆರಳಿದ ಸಂದರ್ಭದಲ್ಲಿ ಪಕ್ಷದ ಪರ ಪ್ರಚಾರ ನಡೆಸಿದ್ದರು. ಫೆಬ್ರವರಿ ಎರಡರಂದು ಪ್ರಚಾರ ::  ನವದೆಹಲಿಯ ಪ್ರತಿಷ್ಠಿತ ರೊಹ್ತಾಸ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಜಿತೇಂದ್ರ ಮಹಾಜನ್ ಅವರ ಪರ ಪ್ರಚಾರ ನಡೆಸಿದ್ದರು. ಈ ವಿಧಾನಸಭೆ ಮತಕ್ಷೇತ್ರದ ಅಶೋಕ ಮಂಡಲದಲ್ಲಿ ಯದುವೀರ್ ಕಳೆದ ಫೆಬ್ರವರಿ ಎರಡರಂದು ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದ್ದರು. ಈ ಮತ…

Read More