ಮಡಿಕೇರಿ ಫೆ.27 NEWS DESK : ಚುನಾವಣಾ ಸಂದರ್ಭದಲ್ಲಿ ರಾಜಕೀಯ ಮಾಡೋಣ, ಇನ್ನುಳಿದ ಅವಧಿಯಲ್ಲಿ ಪಕ್ಷಾತೀತವಾಗಿ, ಜಾತ್ಯತೀತವಾಗಿ, ಅಭಿವೃದ್ಧಿಗಾಗಿ ಶ್ರಮಿಸೋಣ. ಪ್ರತಿಯೊಂದು ಗ್ರಾಮ ಅಭಿವೃದ್ಧಿಯಾದರೆ ಇಡೀ ಜಿಲ್ಲೆ ಅಭಿವೃದ್ಧಿಯಾಗಲಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಪಟ್ಟರು. ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಅಭಿವೃದ್ಧಿ ವಿಷಯದಲ್ಲಿ ನಾನು ಯಾರೊಂದಿಗೂ ಕೂಡ ರಾಜಕೀಯ ಮಾಡಲು ಹೋಗುವುದಿಲ್ಲ. ಗ್ರಾಮ ಪಂಚಾಯಿತಿ ಸದಸ್ಯರು ಒಗ್ಗಟ್ಟಾಗಿ ಕಾರ್ಯನಿರ್ವಹಿಸಿದರೆ ಗ್ರಾಮದ ಅಭಿವೃದ್ಧಿ ಸಾಧ್ಯ. ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ಹೊದ್ದೂರು ಗ್ರಾ.ಪಂ ಮಾದರಿ ಗ್ರಾಮ ಪಂಚಾಯಿತಿಯಾಗಿ ಕಾರ್ಯನಿರ್ವಹಿಸುತ್ತಿದೆ. ಚುನಾವಣಾ ಪೂರ್ವದಲ್ಲಿ ಪಾಲೆಮಾಡು ನಿವಾಸಿಗಳಿಗೆ ನೀಡಿದ್ದ ಭರವಸೆಯಂತೆ ಇದೀಗ 201 ಕುಟುಂಬಗಳಿಗೆ ಹಕ್ಕು ಪತ್ರವನ್ನು ನೀಡಿದ್ದೇವೆ. ನ್ಯಾಯುತವಾದ ಹೋರಾಟಕ್ಕೆ ಸದಾ ನಾನು ನಿಮ್ಮೊಂದಿಗೆ ಕೈ ಜೋಡಿಸುತ್ತೇನೆ ಎಂದರು. ಕಳೆದ ಎರಡು ದಶಕಗಳಿಂದ ಪಾಲೆಮಾಡು ನಿವಾಸಿಗಳಿಗೆ ಸಿಗದ ಹಕ್ಕು ಪತ್ರವನ್ನು ನಾನು…
ಲೇಖಕ: admin
https://youtu.be/FoVpgvJXH5U?si=gGCXaWQiWnoVsIMF ಮಡಿಕೇರಿ ಫೆ.27 NEWS DESK : ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರು ಡಿಜಿಟಲ್ ಕಂಪ್ಯೂಟರ್ ಗ್ರಾಫಿಕ್ಸ್ ಮೂಲಕ ರಚಿಸಿರುವ ಜೀವನದಿ ಮಾತೆ ಕಾವೇರಿಯ ನೂತನ ಚಿತ್ರಪಟವನ್ನು ಶಿವರಾತ್ರಿಯಂದು ಕಾವೇರಿಯ ಉಗಮಸ್ಥಾನ ತಲಕಾವೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ಶಿವರಾತ್ರಿಯ ಶುಭದಿನದಂದು ತಲಕಾವೇರಿಯ ಕಾವೇರಿ ಕುಂಡಿಕೆಯ ಬಳಿ ವಿಶೇಷ ಪೂಜೆ ಹಾಗೂ ಅರ್ಚನೆ ಸಲ್ಲಿಸಿದ ಬಿ.ಕೆ.ಗಣೇಶ್ ರೈ ಅವರು ತಮ್ಮ ಹಲವು ವರ್ಷಗಳ ಕನಸಾಗಿದ್ದ ಮಾತೆ ಕಾವೇರಿಯ ವರ್ಣರಂಜಿತ ಚಿತ್ರಪಟವನ್ನು ಅನಾವರಣಗೊಳಿಸಿದರು. ಶ್ವೇತವರ್ಣದ ಸೀರೆಯುಟ್ಟ ಮಾತೆ ಕಾವೇರಿಯು ಕಳಸವನ್ನು ಹಿಡಿದು ಪದ್ಮಾಸನ ರೂಪದಲ್ಲಿ ದರ್ಶನ ನೀಡಿ ಭಕ್ತರನ್ನು ಹರಸುತ್ತಿರುವ ಈ ಚಿತ್ರಪಟ ಅತ್ಯಂತ ಆಕರ್ಷಕ ಮತ್ತು ಅಪರೂಪದ್ದಾಗಿದೆ. ಇದು ಅಫ್ ಸೆಟ್ ವರ್ಣರಂಜಿತ ಮುದ್ರಣವಾಗಿದ್ದು, ಎ3, ಎ4, ಪೋಸ್ಟ್ ಕಾರ್ಡ್ ಮತ್ತು ಐಡಿ ಕಾರ್ಡ್ ಅಳತೆಯಲ್ಲಿ ಲಭ್ಯವಿದೆ. ಕಾವೇರಿ ಮಾತೆಯ ಪದ್ಮಾಸನ ರೂಪದ ಶ್ಲೋಕದಿಂದ ಸ್ಫೂರ್ತಿಗೊಂಡು ಈ ಚಿತ್ರ ರಚಿಸಿರುವುದಾಗಿ ಅವರು ತಿಳಿಸಿದರು. 1980ರಲ್ಲಿ ಪ್ರಥಮ ಬಾರಿಗೆ ಮಾತೆ ಕಾವೇರಿಯ ವರ್ಣಚಿತ್ರವನ್ನು ಶಿವಕಾಶಿಯಲ್ಲಿ…
ನಾಪೋಕ್ಲು ಫೆ.27 NEWS DESK : ಕಕ್ಕಬೆಯ ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ಮಾ.13 ರಂದು ಕುಂಬ್ಯಾರ್ ಕಲಾಡ್ಚ ವಾರ್ಷಿಕೋತ್ಸವ ನಡೆಯಲಿದೆ. ಫೆ.28 ರಂದು ಅಪರಾಹ್ನ ಆದಿಸ್ಥಾನ ಮಲ್ಮದಲ್ಲಿ ದೇವಕಟ್ಟು ಜಾರಿಯಾಗಲಿದೆ. ಪಾಡಿ ನಾಲ್ಕುನಾಡಿಗೆ ಸೀಮಿತವಾಗಲಿರುವ ದೇವಕಟ್ಟು ಮಾ.13ರ ಉತ್ಸವದ ದಿನ ಅಪರಾಹ್ನ ಮಲ್ಮ ಕ್ಷೇತ್ರದಲ್ಲಿ ಸಂಪನ್ನಗೊಳ್ಳಲಿದೆ. ಪರಂಪರೆಯಂತೆ ಕುಂಬ್ಯಾರು ಕಲಾಡ್ಚ ಹಬ್ಬದ ದಿನ ಬೆಳಿಗ್ಗೆ 9.30 ಗಂಟೆಗೆ ದೇವತಕ್ಕರಾದ ಪರದಂಡ, ಪೆರಿಯಂಡ ಮನೆಯಿಂದ ಜೋಡೆತ್ತುಗಳ ಎತ್ತು ಪೋರಾಟ ಇದರೊಂದಿಗೆ ಮಾದಂಡ, ಕೋಡಿಮಣಿಯಂಡ, ಚೌರಿರ, ಅಲ್ಲಾರಂಡ ಮನೆತನದವರ ಎತ್ತು ಪೋರಾಟ ಆಗಮಿಸಲಿದೆ. ದೇವಾಲಯದಲ್ಲಿ ತುಲಾಭಾರ ಸೇವೆ, ಮಹಾಪೂಜೆಗಳು ನೆರವೇರಲಿದ್ದು, ಮಧ್ಯಾಹ್ನ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನಡೆಯಲಿದೆ. ಬಳಿಕ ದೇವರ ಉತ್ಸವ ಮೂರ್ತಿಯೊಂದಿಗೆ ಮಲ್ಮ ಬೆಟ್ಟಕ್ಕೆ ತೆರಳಿ, ನೆಲಜಿ ಪೇರೂರು ಭಾಗಗಳಿಂದ ಬರುವ ತಕ್ಕ ಮುಖ್ಯಸ್ಥರ ಜೋಡೆತ್ತು ಪೋರಾಟಗಳು ಪಾಡಿಯಿಂದ ಬಂದ ಜೋಡೆತ್ತುಪೋರಾಟ ಸೇರಿ ದೇವ ಕಟ್ಟನ್ನು ಕೊನೆಗೊಳಿಸಲಾಗುವುದು. ಪಾಡಿ ದೇವಸ್ಥಾನದಲ್ಲಿ ದೇವರ ನೃತ್ಯ ನಡೆಯಲಿದೆ. ಆ ಮೂಲಕ ಉತ್ಸವ ಸಂಪನ್ನಗೊಳ್ಳಲಿದೆ ಎಂದು…
ಮಡಿಕೇರಿ ಫೆ.27 NEWS DESK : ದೈವ ಆರಾಧನೆಯನ್ನು ಶಾಲೆಗಳ ರಂಗೋತ್ಸವ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಲು ಅವಕಾಶ ನೀಡಿ ಸುತ್ತೋಲೆ ಹೊರಡಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಫೆ.28 ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಲಿದೆ. ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ದೈವ ಆರಾಧಕರು ಮತ್ತು ದೈವ ನರ್ತಕರಿಂದ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಸುತ್ತೋಲೆ ಹಿಂಪಡೆಯುವಂತೆ ಮನವಿ ಸಲ್ಲಿಸಲಾಗುವುದು ಎಂದು ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ತಿಳಿಸಿದ್ದಾರೆ.
ಮಡಿಕೇರಿ ಫೆ.27 NEWS DESK : ಹೊದ್ದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಾಲೆಮಾಡು ಕಾಲೋನಿ ಹಾಗೂ ಕಾನ್ಶಿರಾಮ್ ನಗರದಲ್ಲಿ ಸರಕಾರದಿಂದ ಬಿಡುಗಡೆಯಾದ ರೂ.2 ಕೋಟಿ ಅನುದಾನದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಗ್ರಾ.ಪಂ ಅಧ್ಯಕ್ಷ ಹೆಚ್.ಎ ಹಂಸ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಹೊದ್ದೂರು ಗ್ರಾಮ ಪಂಚಾಯಿತಿಯ ಬಗ್ಗೆ ಶಾಸಕರಾದ ಡಾ.ಮಂತರ್ ಗೌಡ ವಿಶೇಷ ಕಾಳಜಿ ವಹಿಸಿ ಅನುದಾನವನ್ನು ನೀಡುತ್ತಿದ್ದಾರೆ. ಪಾಲೆಮಾಡು ಮತ್ತು ಕಾನ್ಶಿರಾಮ ಕಾಲೋನಿಗೆ ತಲಾ ಒಂದು ಕೋಟಿ ರೂ ಅನುದಾನವನ್ನು ನೀಡಿದ್ದಾರೆ ಎಂದು ಹೇಳಿದರು. ಈ ಸಂದರ್ಭ ಕಾಮಗಾರಿಯ ಗುಣಮಟ್ಟವನ್ನು ಕಾಪಾಡುವಂತೆ ಗುತ್ತಿಗೆದಾರರಿಗೆ ಹೆಚ್.ಎ.ಹಂಸ ಸೂಚನೆ ನೀಡಿದ್ದರು. ಗ್ರಾ.ಪಂ ಉಪಾಧ್ಯಕ್ಷ ಅನುರಾಧ, ಸದಸ್ಯರಾದ ಹಮೀದ್ , ಹೊನ್ನಪ್ಪ ಕುಸುಮಾವತ, ಮೊಣ್ಣಪ್ಪ ಹಾಗೂ ಗ್ರಾಮಸ್ಥರು ಇದ್ದರು.
ಸೋಮವಾರಪೇಟೆ ಫೆ.27 NEWS DESK : ಕೇಂದ್ರ ಬಜೆಟ್ನಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳಿದ್ದು, ಹಂತ ಹಂತವಾಗಿ ಅವುಗಳನ್ನು ಅನುಷ್ಠಾನ ಮಾಡಲಾಗುವುದು ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ತಿಳಿಸಿದರು. ಗೌಡಳ್ಳಿ ಶ್ರೀ ನವದುರ್ಗಾ ಪರಮೇಶ್ವರಿ ದೇವಾಲಯದ ಜಾತ್ರೋತ್ಸವ ಹಾಗೂ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಧರ್ಮದ ಮೂಲಕ ಸಮಾಜದಲ್ಲಿ ಒಗ್ಗಟ್ಟು ಪ್ರದರ್ಶಿಸಲು ಕ್ರೀಡೆಯನ್ನು ಬಳಸಿಕೊಳ್ಳಬೇಕಿದೆ ಎಂದರು. ಕ್ರೀಡೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ. ಕೊಡಗಿನ ಜನರನ್ನು ಕ್ರೀಡಾ ಕ್ಷೇತ್ರದಿಂದ ಗುರುತಿಸುತ್ತಾರೆ. ಕೀಡೆಯ ಮೂಲಕ ಬಹುದೊಡ್ಡ ಸಾಧನೆ ಮಾಡಿದ ಕೀಡಾಪ್ರತಿಭೆಗಳು ಕೊಡಗಿನವರಾಗಿದ್ದಾರೆ. ಕೀಡೆಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ಜಾತ್ರೋತ್ಸವ ಮತ್ತು ಕ್ರೀಡಾ ಸಮಿತಿ ವತಿಯಿಂದ ಬೃಹತ್ ಕ್ರೀಡಾಕೂಟ ಆಯೋಜಿಸಿರುವುದು ಗ್ರಾಮೀಣ ಜನರ ಸಂಭ್ರಮಕ್ಕೆ ಕಾರಣವಾಗಿದೆ. ಒಂದಷ್ಟು ಮನೋರಂಜನೆ ಜನರಿಗೆ ಸಿಗುತ್ತಿದೆ. ಪ್ರತಿಭಾ ಪ್ರದರ್ಶನಕ್ಕೂ ವೇದಿಕೆಯಾಗಿದೆ ಎಂದು ಹೇಳಿದರು. ವೇದಿಕೆಯಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಬಿ.ಪಿ. ಮೊಗಪ್ಪ, ಕ್ರೀಡಾ ಸಮಿತಿ…
ಗೋಣಿಕೊಪ್ಪ ಫೆ.27 NEWS DESK : ಐವತ್ತು ಚಿನ್ನದ ಪದಕಗಳನ್ನು ಬಾಚಿಕೊಳ್ಳುವ ಮೂಲಕ ಗೋಣಿಕೊಪ್ಪದ ಸೈಕ್ಲೋನ್ ನೃತ್ಯ ಶಾಲೆಯ ವಿದ್ಯಾರ್ಥಿಗಳು ನೇಪಾಳದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ನೃತ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಗೋವಾ ರಾಜ್ಯದ ಮಾರ್ಗೋ ರವೀಂದ್ರ ಭವನ ಸಭಾಂಗಣದಲ್ಲಿ ಎರಡು ದಿನಗಳು ಸ್ಪರ್ಧೆ ನಡೆಯಿತು. ಹತ್ತನೇ ವರ್ಷದ ರಾಷ್ಟ್ರೀಯ ಸ್ಪೋರ್ಟ್ ಡಾನ್ಸ್ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ 50 ವಿದ್ಯಾರ್ಥಿಗಳು 12 ವರ್ಷದೊಳಗಿನ ವಿಭಾಗದಲ್ಲಿ, 15 ವರ್ಷದೊಳಗಿನ ಸ್ಪರ್ಧೆಯಲ್ಲಿ, 17 ವರ್ಷದ ವಿಭಾಗದ ಕ್ಲಾಸಿಕ್ ಮತ್ತು ಫೋಕ್, ಹಿಪ್ಹಾಪ್, ಪ್ರೀ ಸ್ಟೈಲ್ ನೃತ್ಯಗಳಲ್ಲಿ ಭಾಗವಹಿಸಿದರು. ಗೋವಾದ ಸ್ಪೋರ್ಟ್ ಅಸೋಸಿಯೇಷನ್, ಸ್ಪೋರ್ಟ್ ಡಾನ್ಸ್ ಫೆಡರೇಶನ್ ಆಫ್ ಇಂಡಿಯಾ, ಏಷ್ಯನ್ ಸ್ಪೋರ್ಟ್ ಡಾನ್ಸ್ ಕೌನ್ಸಿಲ್, ಇಂಟರ್ನ್ಯಾಷನಲ್ ಸ್ಪೋರ್ಟ್ ಫೆಡರೇಶನ್, ಅಂತರರಾಷ್ಟ್ರೀಯ ನೃತ್ಯ ಮಂಡಳಿ, ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ, ಇಂಟರ್ನ್ಯಾಷನಲ್ ಕೌನ್ಸಿಲ್ ಆಫ್ ಸ್ಪೋರ್ಟ್ ಸೈನ್ಸ್ ಮತ್ತು ಫಿಸಿಕಲ್ ಎಜುಕೇಶನ್ ಸಹಯೋಗದಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ನೃತ್ಯ ತರಬೇತುದಾರ ಸೈಕ್ಲೋನ್ ರಮೇಶ್, ವಿದ್ಯಾರ್ಥಿಗಳ ಪರಿಶ್ರಮಕ್ಕೆ…
ಸುಂಟಿಕೊಪ್ಪ ಫೆ.27 NEWS DESK : ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷರಾಗಿ ವಿ.ಎಂ.ಶರೀಫ್, ಪ್ರಧಾನ ಕಾರ್ಯದರ್ಶಿಯಾಗಿ ಸಿ.ಎ.ಸಚಿನ್ ಆಯ್ಕೆಯಾಗಿದ್ದಾರೆ. ಕೊಡವ ಸಮಾಜದಲ್ಲಿ ಸಂಘದ ಅಧ್ಯಕ್ಷ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಾಬೆಯಲ್ಲಿ ಚುನಾವಣೆಯ ಮೂಲಕ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಫೈರೋಜ್, ನೌಶದ್, ಪ್ರಶಾಂತ್ ಹಾಗೂ ಕೆ.ಸಂತೋಷ್ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಸಿ.ಎ.ಸಚಿನ್, ಖಜಾಂಚಿಯಾಗಿ ಬಿ.ಎಲ್.ವಿಶ್ವನಾಥ್, ಸಹ ಕಾರ್ಯದರ್ಶಿಯಾಗಿ ಸಿಕ್ಕಂದರ್ ಶರೀಫ್, ಸಹ ಖಜಾಂಚಿಯಾಗಿ ಯು.ಹರೀಶ್, ಗೌರವಾಧ್ಯಕ್ಷರುಗಳಾಗಿ ಎಸ್.ವಿ.ಫರೀದ್, ಶರೀಫ್, ಮತ್ತು ಫೆಲಿಕ್ಸ್ ಡಿಸೋಜ, ಸಂಘಟನಾ ಕಾರ್ಯದರ್ಶಿಗಳಾಗಿ ಪ್ರವೀದ್, ಕೇಶವ, ಬಿ.ಕೆ.ರಂಜೀತ್, ಪ್ರಕಾಶ್, ಶಂಶುದ್ದೀನ್, ಕನೀಶ್ ಬಾಬು ಮತ್ತು ವಿನು ಆಯ್ಕೆಯಾದರು. ಸಲಹೆಗಾರರಾಗಿ ಸುನಿಲ್, ಇಸ್ಮಾಹಿಲ್, ಪ್ರಶಾಂತ್ (ಕೊಕಾ), ಪ್ರಜ್ವಲ್, ಮೂಸ, ಅಕ್ಬರ್ಭಾಷ, ನಿದೇರ್ಶಕರುಗಳಾಗಿ ಟಿ.ಕೆ.ಪ್ರಕಾಶ್, ವಿನು, ಚೇತನ್, ಮೊಯ್ದು, ನವೀನ್ ಶಿವಪ್ಪ, ಶಾದಿಕ್ ಭಾಷ, ಅಜೀಜ್, ಆಶ್ರಫ್ ರಿಯಾಜ್, ವಿನೋದ್ ಹಾಗೂ ಪ್ರವೀಣ್ ಆಯ್ಕೆಯಾಗಿದ್ದಾರೆ.
ಸುಂಡಿಕೊಪ್ಪ ಫೆ.27 NEWS DESK : ಮಹಾ ಶಿವರಾತ್ರಿ ಪ್ರಯುಕ್ತ ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ, ಆರಾಧನೆ ನಡೆಯಿತು. ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ಸಂಜೆ ಬೈತೂರಪ್ಪ ಭಜನಾ ಮಂಡಳಿಯಿಂದ 3 ಗಂಟೆಗಳ ಕಾಲ ಭಕ್ತಿಗೀತೆ ಮತ್ತು ಭಜನಾ ಕಾರ್ಯಕ್ರಮ ನಡೆಯಿತು. ರಾತ್ರಿಯ ಮಹಾಪೂಜೆಯ ಬಳಿಕ ನೇರೆದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು. ಪೂಜಾ ಧಾರ್ಮಿಕ ವಿಧಿ ವಿಧಾನಗಳನ್ನು ಪ್ರಧಾನ ಅರ್ಚಕ ರಾಘವೇಂದ್ರಭಟ್ ಮತ್ತು ಸಹಾಯಕರಾಗಿ ನರಸಿಂಹಭಟ್ ನೇರವೇರಿಸಿದರು. ದೇವಾಲಯ ಟ್ರಸ್ಟ್ ಅಧ್ಯಕ್ಷ ಕೊಕ್ಕಲೆರ ಪೂಣ್ಣಚ್ಚ, ಕಾರ್ಯದರ್ಶಿ ಬಿ.ಸಿ.ದಿನೇಶ್, ಟ್ರಸ್ಟಿ ಕೆ.ಎಸ್.ಮಂಜುನಾಥ್, ಪಾರುಪಾತ್ಯದಾರರಾದ ಅಕ್ಕಪಂಡ ಎ.ರಾಜೇಂದ್ರ, ಮುಕ್ಕಾಟಿ ಅಡಿಕೇರ ಸುಭಾಷ್, ಮಂಡುವಂಡ ಪುನೀತ್ ಪೂಣ್ಣಚ್ಚ ಸೇರಿದಂತೆ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಸಮೀಪದ ಕಂಬಿಬಾಣೆ ಮ್ಯಾಗಡೂರ್ ವಿಶ್ವನಾಥ ದೇವಾಲಯ, ನಾಕೂರು ಶಿವ ದೇವಾಲಯ, ಕೆದಕಲ್ ಭದ್ರಕಾಳಿ ದೇವಾಲಯಗಳಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಗಳು ನಡೆದವು.
ಸುಂಟಿಕೊಪ್ಪ ಫೆ.27 NEWS DESK : ಕಂಬಿಬಾಣೆ ಶ್ರೀ ರಾಮ ಮತ್ತು ಶ್ರೀ ಚಾಮುಂಡೇಶ್ವರಿ ದೇವಾಲಯದ ವತಿಯಿಂದ ಮಹಾ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ಪ್ರಭಾಕರ್ ಕುದ್ದಣ್ಣಯ್ಯ ಅವರ ನೇತೃತ್ವದಲ್ಲಿ ದೇವರಿಗೆ ವಿಶೇಷ ಪೂಜೆ, ಅಲಂಕಾರ ಪೂಜೆ, ಹೂವಿನ ಪೂಜೆ, ನೈವೇದ್ಯ ಪೂಜೆ ನಡೆಯಿತು. ನಂತರ ನೆರದಿದ್ದ ಭಕ್ತರ ಸಮ್ಮುಖದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿತು. ಮಧ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿತರಣೆ ಜರುಗಿತು. ನಂತರ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಸಹಾಯಕರಾಗಿ ಪ್ರಕಾಶ್ ಕುದ್ದಣ್ಣಯ್ಯ ಮತ್ತು ಪ್ರಜ್ವಲ್ ಕುದ್ದಣ್ಣಯ್ಯ ಸಹಕರಿಸಿದರು. ದೇವಾಲಯ ಸಮಿತಿ ಅಧ್ಯಕ್ಷ ಡಾ.ಶಶಿಕಾಂತ್ ರೈ, ಕಾರ್ಯದರ್ಶಿ ಗಣೇಶ್, ಖಜಾಂಚಿ ಅಜಿತ್, ಸಮಿತಿಯ ಪದಾಧಿಕಾರಿಗಳಾದ ಜಯಂತ್, ರವಿ, ಸುಬ್ರಯ, ಚಿದಾನಂದ, ಗಂಗಾಧರ, ಮಂಜುನಾಥ್ ರೈ ಸೇರಿದಂತೆ ಗ್ರಾಮದ ವಿವಿಧೆಡೆಯಿಂದ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.






