ಚೆಟ್ಟಳ್ಳಿ ಫೆ.27 NEWS DESK : ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶ್ರೀ ವೀರಾಂಜನೇಯ ಯುವಕ ಸಂಘದ ಸಂಯುಕ್ತ ಆಶ್ರಯದಲ್ಲಿ ಚೆಟ್ಟಳ್ಳಿಯಲ್ಲಿ 5ನೇ ವರ್ಷದ ಮಹಾ ಶಿವರಾತ್ರಿ ಹಬ್ಬದ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಸಂಜೆ ಈರಳೆ ವಳಮುಡಿ ಗ್ರಾಮದಲ್ಲಿರುವ ಪಂಚಮುಖಿ ವಾಯುಪುತ್ರ ಮೂರ್ತಿಗೆ ಹಾಗೂ ಸಂಘದ ಮುಖ್ಯ ಕಛೇರಿಯ ಮುಂದಿರುವ ಪಶುಪತಿನಾಥನಿಗೆ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಹಾಗೂ ಪುತ್ತರಿರ ಕರುಣ್ ಕಾಳಯ್ಯ ಆರತಿ ಬೆಳಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶ್ರೀ ವಿನಾಯಕ, ಶ್ರೀ ಕಾವೇರಿಮಾತೆ, ಶ್ರೀ ಕೃಷ್ಣ, ಗೋಮಾತೆ, ಶ್ರೀ ಆಂಜನೇಯ ಮತ್ತು ಶ್ರೀ ಮಹಾವಿಷ್ಣು ಮೂರ್ತಿಗಳಿಗೆ ಅರ್ಚಕರಾದ ಯೋಗೆಶ್ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು. ನಂತರ ಭಕ್ತಾಧಿಗಳಿಗೆ ಪ್ರಸಾದ ವಿತರಿಸಲಾಯಿತು. ಬಲ್ಲಾರಂಡ ಮಣಿ ಉತ್ತಪ್ಪ ಮಾತನಾಡಿ, ಕಳೆದ 5 ವರ್ಷಗಳಿಂದ ಚೆಟ್ಟಳ್ಳಿಯಲ್ಲಿ ಶಿವರಾತ್ರಿ ಅಚರಣೆಯನ್ನು ಮಾಡಲಾಗುತಿದ್ದು ಎಲ್ಲರಿಗೂ ಒಳಿತನ್ನು ಮಾಡಲೆಂದು ಬೇಡಿಕೊಂಡರು. ಕಾರ್ಯಕ್ರಮದ ಅಂಗವಾಗಿ ಮಹಿಳೆಯರು ಅಣತೆ ಬೆಳಗಿದರು. ರಾತ್ರಿ ಪಂಜ…
ಲೇಖಕ: admin
ನಾಪೋಕ್ಲು ಫೆ.27 NEWS DESK : ಪೇರೂರು ಗ್ರಾಮದ ಶ್ರೀ ಇಗ್ಗುತ್ತಪ್ಪ ದೇವಾಲಯದ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಉತ್ಸವದ ಅಂಗವಾಗಿ ವಿಶೇಷ ಪೂಜೆ, ರುದ್ರಾಭಿಷೇಕ ಮತ್ತು ಮಹಾಪೂಜೆ ಜರುಗಿತು. ಮಧ್ಯಾಹ್ನ ಭಕ್ತರಿಂದ ತುಲಾಭಾರ ಸೇವೆ ನೆರವೇರತು. ಬಳಿಕ ಭಕ್ತರಿಗೆ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ನಂತರ ದೇವಾಲಯದ ಆವರಣದಲ್ಲಿ ಗ್ರಾಮಸ್ಥರಿಂದ ಬೊಳಕಾಟ್ ಪ್ರದರ್ಶನ ನಡೆಯಿತು. ಬಳಿಕ ಇಗ್ಗುತ್ತಪ್ಪ ದೇವರ ಪ್ರದರ್ಶನ, ನೃತ್ಯ ಬಲಿ ಹಾಗೂ ಭಕ್ತಾದಿಗಳಿಂದ ಹರಕೆ ಕಾಣಿಕೆ ಒಪ್ಪಿಸುವುದು, ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಎಲ್ಲರಿಗೂ ಆರೋಗ್ಯ ಭಾಗ್ಯ ಹಾಗೂ ಸಕಾಲದಲ್ಲಿ ಮಳೆ ಬೆಳೆ ಬಂದು ನಾಡಿನಲ್ಲೆಡೆ ಭಕ್ತಾದಿಗಳಿಗೆ ಸುಭಿಕ್ಷೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು. ದೇವಾಲಯದ ಅರ್ಚಕ ಗಿರೀಶ್ ನೇತೃತ್ವದಲ್ಲಿ ತಂತ್ರಿಗಳಾಗಿ ಗೋಪಾಲಕೃಷ್ಣ ಕೆದಿಲಾಯ ರುದ್ರಾಭಿಷೇಕ ಸೇರಿದಂತೆ ಇನ್ನಿತರ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿಕೊಟ್ಟರು. ವಿವಿಧೆಡೆಯಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಆಡಳಿತ…
ಮಡಿಕೇರಿ ಫೆ.27 NEWS DESK : ತಮಿಳುನಾಡಿನ ಚೆನ್ನೈ ನಲ್ಲಿ ನಡೆದಿದ್ದ ಕರಾಟೆ ವಿಭಾಗದ ಗುಂಪಿನಲ್ಲಿ 30 ನಿಮಿಷಗಳ ತಡೆರಹಿತ ಕತಾ ಮೂಲಕ ಗಿನ್ನಿಸ್ ದಾಖಲೆ ಜೊತೆಗೆ ಕುಮಿತೆ ವೈಯುಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಪಡೆದ ನಾಪೋಕ್ಲುವಿನ ಶಝಾ ಫಾತಿಮಾ ಅವರನ್ನು ಹೊದ್ದೂರು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು. ಹೊದ್ದೂರು ಗ್ರಾಮ ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎ.ಹಂಸ ಅವರು ಸನ್ಮಾನಿಸಿ ಗೌರವಿಸಿದರು. ಶಝಾ ಫಾತಿಮಾ ಅವರಿಗೆ ವೈಯುಕ್ತಿಕವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎ ಹಂಸ ಧನ ಸಹಾಯವನ್ನು ನೀಡಿ ಪ್ರೋತ್ಸಾಹಿಸಿದರು.ಈ ಸಂದರ್ಭ ಗ್ರಾಮ ಉಪಾಧ್ಯಕ್ಷರಾದ ಅನುರಾಧ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಕೆ.ಮೊಣ್ಣಪ್ಪ, ಹೊದ್ದೂರು ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ಎಂ.ಬಿ.ಹಮೀದ್,ಗ್ರಾಮ ಪಂಚಾಯಿತಿ ಸದಸ್ಯರಾದ ಚೌರೀರ ನಾಣಯ್ಯ(ನವೀನ್), ಕುಸುಮಾವತಿ ,ಲಕ್ಷ್ಮಿ, ಟೈನಿ ಕಡ್ಲೆರ,ಚೌರೀರ ಅನಿತಾ, ತಹಶೀಲ್ದಾರ್ ಪ್ರವೀಣ್, ಕಾರ್ಯನಿರ್ವಹಣಾಧಿಕಾರಿ ಶೇಖರ್, ಸಹಾಯಕ ಕಾರ್ಯಪಾಲಕ ಅಭಿಯಂತರರು ರಘು,ಭೂ ದಾಖಲೆಗಳ…
ಮಡಿಕೇರಿ ಫೆ.27 NEWS DESK : ಪ್ರತೀ ವರ್ಷವೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ 40 ರಿಂದ 50 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುವುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸದ ಭದ್ರತೆಯೊಂದಿಗೆ ಉತ್ತಮ ಸಂಬಳ ನೀಡಲಾಗುತ್ತದೆ. ಯಾವುದೇ ಪದವಿ ಮುಗಿಸಿರುವ ವಿದ್ಯಾರ್ಥಿಗಳು ಈ ಬ್ಯಾಂಕ್ ನೇಮಕಾತಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನ್ ಪರೀಕ್ಷೆ ಮೂಲಕ ಪಾರದರ್ಶಕವಾಗಿ ನಡೆಯುವ ಈ ನೇಮಕಾತಿ ಪರೀಕ್ಷೆಗಳ ಬಗ್ಗೆ ಹೆಚ್ಚಿನ ವಿದ್ಯಾರ್ಥಿಗಳಿಗೆ ಮಾಹಿತಿ ಇರುವುದಿಲ್ಲ ಹಾಗೂ ಬ್ಯಾಂಕ್ ನೇಮಕಾತಿ ಪರೀಕ್ಷೆಗಳ ಪಠ್ಯಕ್ರಮ, ಪರೀಕ್ಷಾ ಪ್ರಕ್ರಿಯೆ, ಇದಕ್ಕೆ ಅಗತ್ಯವಿರುವ ತಯಾರಿ ಬಗ್ಗೆ ಮಾಹಿತಿ ಇರುವುದಿಲ್ಲ. ಕರ್ನಾಟಕದೆಲ್ಲೆಡೆ ಬ್ಯಾಂಕ್ಗಳಲ್ಲಿ ವ್ಯವಹರಿಸುವಾಗ ಭಾಷೆಯ ಅಡಚಣೆಯಾಗಿ ಗ್ರಾಹಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಗ್ರಾಹಕರ ಸಭೆಗಳಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಈ ವಿಷಯಗಳನ್ನು ಮನದಲ್ಲಿಟ್ಟುಕೊಂಡು ಕರ್ನಾಟಕದ ಯುವ ಜನತೆ ಬ್ಯಾಂಕ್ ಪರೀಕ್ಷೆಗಳನ್ನು ಬರೆದು ಉತ್ತೀರ್ಣರಾಗಬೇಕೆಂಬ ಉದ್ದೇಶದಿಂದ ಕೃಷಿಕ್ ಸರ್ವೋದಯ ಫೌಂಡೇಶನ್ (ರಿ) ಕೇಂದ್ರ ಕಚೇರಿ, ಬೆಂಗಳೂರಿನಲ್ಲಿ ನಡೆದ ಟ್ರಸ್ಟಿಗಳ ಸಭೆಯಲ್ಲಿ ಬ್ಯಾಂಕ್ ನೇಮಕಾತಿ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳು…
ಮಡಿಕೇರಿ ಫೆ.27 NEWS DESK : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅವರು ಮಾರ್ಚ್, 2 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾ.2 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿರುವ ‘ಅರೆಭಾಷೆ ಗಡಿನಾಡ ಉತ್ಸವ’ದಲ್ಲಿ ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಟಿ.ಎಸ್.ಫಣಿಕುಮಾರ್ ತಿಳಿಸಿದ್ದಾರೆ.
ಮಡಿಕೇರಿ ಮಾ.4 : NEWS DESK : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾ.8 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು(ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು: ರಾಜಿಯಾಗಬಲ್ಲ ಅಪರಾಧಿಕ…
ಮಡಿಕೇರಿ ಫೆ.27 NEWS DESK : ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯಲ್ಲಿ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಯು ಖಾಲಿ ಇದ್ದು, ಈ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ನಿಗಧಿತ ಅರ್ಜಿ ನಮೂನೆಯನ್ನು ಜಿಲ್ಲೆಯ ಅಧಿಕೃತ ವೆಬ್ಸೈಟ್ https://kodagu.nic.nic.in ರಲ್ಲಿ ಪಡೆದು ಭರ್ತಿ ಮಾಡಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವುದು. ಕಚೇರಿ ವಿಳಾಸ ಜಿಲ್ಲಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ, ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆ, ಹುದ್ದೆಯ ಸಂಖ್ಯೆ 01, ಶೈಕ್ಷಣಿಕ ವಿದ್ಯಾರ್ಹತೆ ಬಿ.ಈ ಅಥವಾ ಬಿಟೆಕ್, ಬಿಸಿಎ, ಎಂಸಿಎ, ಕಂಪ್ಯೂಟರ್ ಸೈನ್ಸ್ ಅಥವಾ ಇನ್ಫಾರ್ಮೇಸನ್, ಸೈನ್ಸ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ಟೆಲಿಕಾಂ, ಯಾವುದೇ ಸರ್ಕಾರಿ ಕಚೇರಿಯಲ್ಲಿ, ಕಂಪನಿ, ಸಂಸ್ಥೆಗಳಲ್ಲಿ ಕನಿಷ್ಠ 2 ವóರ್ಷಗಳ ಅನುಭವ ಹೊಂದಿರಬೇಕು. ವಯೋಮಿತಿ ಕನಿಷ್ಠ 18 ಮತ್ತು ಗರಿಷ್ಠ 40 ವರ್ಷವಾಗಿರಬೇಕು. ವೇತನ ರೂ.30,053 (ಎಲ್ಲಾ ತೆರಿಗೆ ಹಾಗೂ ಇತ್ಯಾದಿ ಕಡಿತಗೊಳಿಸಿ), ಅರ್ಜಿ…
ಮಡಿಕೇರಿ NEWS DESK ಫೆ26 : ಮಡಿಕೇರಿ ನಗರ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ಬೀಟ್ ಸದಸ್ಯ ನಾಗರಿಕರ ಸಭೆ ನಡೆಯಿತು. ಸಭೆಯಲ್ಲಿ ಅಪರಾಧ ತಡೆಗಟ್ಟುವಿಕೆ, ಸಂಚಾರ ನಿಯಮ ಪಾಲನೆ, ಸಿಸಿಟಿವಿ ಆಳವಡಿಕೆಗಳು ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಪೊಲೀಸ್ ಮತ್ತು ನಾಗರೀಕರ ಸಹಕಾರದ ಕುರಿತು ಚರ್ಚಿಸಲಾಯಿತು.
ಮಡಿಕೇರಿ NEWS DESK ಫೆ.26 : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ಹಬ್ಬ ಶ್ರದ್ಧಾಭಕ್ತಿಯಿಂದ ನಡೆಯಿತು. ಬೆಳಿಗ್ಗೆಯಿಂದಲೇ ರುದ್ರಹೋಮ, ಏಕಾದಶ ರುದ್ರಾಭಿಷೇಕ ಹಾಗೂ ಅಲಂಕಾರ ಪೂಜೆ ನಡೆಯಿತು. ಅಲ್ಲದೆ ವಿವಿಧ ವಿಶೇಷ ಪೂಜಾ ಕೈಂಕರ್ಯ ಮತ್ತು ಅರ್ಚನೆಗಳಿಗೆ ಸಾಕ್ಷಿಯಾದ ನೂರಾರು ಭಕ್ತರಿಗೆ ಪ್ರಸಾದ ವಿತರಿಸಲಾಯಿತು.
ಮಡಿಕೇರಿ NEWS DESK ಫೆ.26 : ನಗರದ ಕೊಡಗು ವಿದ್ಯಾಲಯದಲ್ಲಿ ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಪ್ರಾಂಶುಪಾಲರುರಾದ ಸುಮಿತ್ರಾ, ಆಡಳಿತ ನಿರ್ವಹಣಾಧಿಕಾರಿ ಪಿ.ರವಿ ಮತ್ತು ವಿಜ್ಞಾನ ಶಿಕ್ಷಕರು ಸಸಿಗೆ ನೀರು ಸಿಂಪಡಿಸುವ ಮೂಲಕ ಉದ್ಘಾಟಿಸಿದರು. ವಿಜ್ಞಾನ ದಿನಾಚರಣೆಯ ಮುಖ್ಯ ಆಕರ್ಷಣೆಯಾಗಿ 3 ರಿಂದ 5ನೇ ತರಗತಿಯ ವಿದ್ಯಾರ್ಥಿಗಳು ವೈವಿಧ್ಯಮಯ ವಿಜ್ಞಾನ ಪ್ರದರ್ಶನ ನಡೆಸಿದರು. ಪ್ರತಿ ತರಗತಿಯ ವಿದ್ಯಾರ್ಥಿಗಳು ತಮ್ಮ ತರಗತಿ ಕೊಠಡಿಗಳಲ್ಲಿ ವೈಜ್ಞಾನಿಕ ಮಾದರಿಗಳನ್ನು ನಿರ್ಮಿಸಿ, ಅವುಗಳ ಕಾರ್ಯವಿಧಾನವನ್ನು ವಿವರಿಸಿದರು. ಈ ಮಾದರಿಗಳು ವಿಜ್ಞಾನ ಪ್ರಕ್ರಿಯೆಗಳ ತಿಳುವಳಿಕೆಯನ್ನು ಜಾಗೃತಗೊಳಿಸಿ, ವಿದ್ಯಾರ್ಥಿಗಳ ಉತ್ಸಾಹ ಮತ್ತು ಸೃಜನಶೀಲತೆಯನ್ನು ಪ್ರತಿಬಿಂಬಿಸಿದವು. 6 ರಿಂದ 9ನೇ ತರಗತಿಯ ವಿದ್ಯಾರ್ಥಿ ತಂಡಗಳು ಫ್ರಾತ್ಯಕ್ಷಿಕೆಗಳ ಮೂಲಕ ವ್ಯಜ್ಯಾನಿಕ ವಿಚಾರಗಳನ್ನು ವಿವರಿಸಿದರು. ವಿಶೇಷವಾಗಿ, ಕೊಡಗಿನ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಿ, ಅದಕ್ಕೆ ಸುಧಾರಿತ ಪರಿಹಾರಗಳನ್ನು ಕಂಡುಹಿಡಿದ ವಿದ್ಯಾರ್ಥಿಗಳ ತಂಡದ ಪ್ರಸ್ತುತಿ ನೋಡುಗರ ಮೆಚ್ಚುಗೆ ಪಡೆಯಿತು. ವಿಜ್ಞಾನ ಶಿಕ್ಷಕಿ ಶ್ರುತಿ ವಿಜ್ಞಾನ ದಿನದ ಮಹತ್ವವನ್ನು ವಿವರಿಸಿದರು. ಶಾಲಾ…






