ಲೇಖಕ: admin

ಬರೇಲಿ ಫೆ.7 NEWS DESK : ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಕ್ವಿಲಾ ಪ್ರದೇಶದಲ್ಲಿ ಗಾಳಿಪಟದ ದಾರ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಸಂಭವಿಸಿದ ಈ ಸ್ಫೋಟದಲ್ಲಿ ಕಾರ್ಖಾನೆ ಮಾಲೀಕರು ಸಹ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ. ಗಾಳಿಪಟದ ದಾರಗಳಿಗೆ ಲೇಪಿಸಲು ಸಲ್ಫರ್, ಪೊಟ್ಯಾಶ್ ಮತ್ತು ಗಾಜು ಮಿಶ್ರಣ ಮಾಡುವಾಗ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ಸಂಚಾರ) ತಿಳಿಸಿದ್ದಾರೆ.  

Read More

https://youtu.be/fClFWQoeASo?si=NtLsMYhmcMFh6zIs ಮಡಿಕೇರಿ ಫೆ.7 NEWS DESK : ಕೊಡವ ಜನಾಂಗ ಹಾಗೂ ಕೊಡವ ಸಂಸ್ಕೃತಿಯ ಸಮಗ್ರ ಅಸ್ತಿತ್ವದ ಮೇಲೆ ನಡೆಯುತ್ತಿರುವ ಜನಾಂಗೀಯ ತಾರತಮ್ಯ, ದಬ್ಬಾಳಿಕೆ ಮತ್ತು ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯುವ ಯತ್ನದ ವಿರುದ್ಧ ಪಾದಯಾತ್ರೆ ನಡೆಸಲಾಗಿದೆ ಎಂದು ಅಖಿಲ ಕೊಡವ ಸಮಾಜ ಜಿಲ್ಲಾಡಳಿತಕ್ಕೆ ನೀಡಿದ ಮನವಿ ಪತ್ರದಲ್ಲಿ ತಿಳಿಸಿದೆ. ಸುಳ್ಳು ಇತಿಹಾಸವನ್ನು ಸೃಷ್ಟಿಸಿ ಕೊಡವರ ಅಸ್ತಿತ್ವಕ್ಕೆ ದಕ್ಕೆ ತರುವ ಪ್ರಯತ್ನ ನಡೆದಿದೆ. ದೇಶಕಂಡ ಅಪ್ರತಿಮ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಗಳಿಗೆ ಅಗೌರವ ತೋರಲಾಗಿದೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ಮಹಾನ್ ಸೇನಾನಿಗಳನ್ನು ಕೊಡವರು ಎಂಬ ಏಕೈಕ ಕಾರಣಕ್ಕೆ ಅವಹೇಳನ ಮಾಡಲಾಗಿದೆ. ಕೊಡವರನ್ನು ದ್ವೇಷಿಸುವ ಉದ್ದೇಶ ಇದರಲ್ಲಿ ಅಡಗಿದೆ. ದುಷ್ಟಕೂಟ ಸಾಮಾಜಿಕ ಮಾಧ್ಯಮವನ್ನು ಬಳಸಿಕೊಂಡು ನಿರಂತರವಾಗಿ ಕೊಡವ ಮಹಿಳೆಯರು, ಮಕ್ಕಳ ಅವಹೇಳನ ಮಾಡಲಾಗುತ್ತಿದೆ. ಕೊಡವರ ಸಾಂಪ್ರದಾಯಿಕ ಉಡುಪು ಮತ್ತು ಆಭರಣಗಳನ್ನು ವಿಡಂಬನಾತ್ಮಕವಾಗಿ ದುರ್ಬಳಕೆ ಹಾಗೂ ಉದ್ದೇಶಪೂರ್ವಕವಾಗಿ ಕೊಡವರಿಗೆ ಮತ್ತು ಕೊಡವ ಸಂಸ್ಕೃತಿಗೆ ಅವಮಾನ ಮಾಡಲಾಗುತ್ತಿದೆ. ಕೊಡಗಿನ…

Read More

ಕುಶಾಲನಗರ ಫೆ.7 NEWS DESK : ಸ್ವಾಮಿ ವಿವೇಕಾನಂದ ಯುವ ಒಕ್ಕೂಟಗಳ ರಾಜ್ಯ ಸಮಿತಿ ವತಿಯಿಂದ ಮುದ್ದೇಬಿಹಾಳದ ಅಕ್ಕಮಹಾದೇವಿ ಮಹಿಳಾ ವಿವಿ ಆವರಣದಲ್ಲಿ ಕೊಡಮಾಡಿದ ರಾಜ್ಯ ಮಟ್ಟದ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿಯನ್ನು ಕೊಡಗು ಜಿಲ್ಲೆಯ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಾಗೂ ಸಾಹಿತ್ಯಪರ ಸಂಘಟನೆಗಳ ಸಂಚಾಲಕ ಕೆ.ಎಸ್.ಮೂರ್ತಿ ಅವರಿಗೆ ನೀಡಿ ಗೌರವಿಸಲಾಯಿತು‌. ಬಿಜಾಪುರ ಜಿಲ್ಲೆಯ ಸಿದ್ಧನ ಕೊಳ್ಳದ ನಿರಂತರ ದಾಸೋಹ ಮಠದ ಪೀಠಾಧಿಪತಿ ಡಾ.ಶಿವಕುಮಾರ ಮಹಾಸ್ವಾಮೀಜಿ ಸಾನಿಧ್ಯದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುದ್ದೇಬಿಹಾಳ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಸರ್ಕಾರದ ಸಾಬೂನು ಮತ್ತು ಮಾರ್ಜಕ ಮಂಡಳಿ ಅಧ್ಯಕ್ಷ ಸಿ.ಎಸ್.ನಾಡಗೌಡ ಅಪ್ಪಾಜಿ, ವಿಜಯಪುರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಚಲನ ಚಿತ್ರ ನಟ ಡಾ.ಗುರುರಾಜ ಹೊಸಕೋಟೆ, ಕಿತ್ತೂರು ಕರ್ನಾಟಕ ವೀರಶೈವ ಲಿಂಗಾಯಿತ ಸಂಘಟನಾ ವೇದಿಕೆ ಅಧ್ಯಕ್ಷೆ ಕಾಶಿಬಾಯಿ ರಾಂಪುರ, ಸ್ವಾಮಿ ವಿವೇಕಾನಂದ ಯುವ ಒಕ್ಕೂಟಗಳ ರಾಜ್ಯಾಧ್ಯಕ್ಷ ಡಾ.ಜಾ‌ನಪದ ಎಸ್.ಬಾಲಾಜಿ, ಬಿಜಾಪುರದ ಅಕ್ಕಮಹಾದೇವಿ ವಿವಿ ಕುಲಪತಿ ಡಾ.ಶಂಕರೇಗೌಡ…

Read More

ಮಡಿಕೇರಿ ಫೆ.7 NEWS DESK : ಬಿಟ್ಟಂಗಾಲದಲ್ಲಿರುವ ಕೊಡಗು ಹೆಗ್ಗಡೆ ಸಮಾಜದ ಕಟ್ಟಡ ಅಭಿವೃದ್ಧಿಯ ಮುಂದುವರಿದ ಕಾಮಗಾರಿಗೆ ಅನುದಾನ ಕೋರಿ ಕೊಡಗು ಹೆಗ್ಗಡೆ ಸಮಾಜದ ನಿಯೋಗವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್.ತಂಗಡಗಿ ಅವರನ್ನು ಭೇಟಿ ಮಾಡಿತು. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗದ ಪ್ರಮುಖರು, ತಮ್ಮ ಬೇಡಿಕೆಗಳ ಮನವಿಯನ್ನು ಸಚಿವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೊಡಗು ಹೆಗ್ಗಡೆ ಸಮಾಜದ ಅಧ್ಯಕ್ಷ  ಪಡಿಞರಂಡ ಅಯ್ಯಪ್ಪ, ಉಪಾಧ್ಯಕ್ಷ ಕೊರಕುಟ್ಟಿರ ಸರಚಂಗಪ್ಪ, ನಿರ್ದೇಶಕ ಕೊರಂಡ ಪ್ರಕಾಶ್ ನಾಣಯ್ಯ, ಪ್ರಮುಖರಾದ ಪಡಿಞರಂಡ ಗಿರೀಶ್, ಕಾಕೇರ ರವಿ ಮತ್ತಿತರರು ಹಾಜರಿದ್ದರು.

Read More

https://youtu.be/fClFWQoeASo?si=NtLsMYhmcMFh6zIs ಮಡಿಕೇರಿ ಫೆ.7 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕಳೆದ ಆರು ದಿನಗಳಿಂದ ನಡೆದ ‘ಕೊಡವಾಮೆ ಬಾಳೋ’ ಬೃಹತ್ ಪಾದಯಾತ್ರೆ ಮಡಿಕೇರಿಯಲ್ಲಿ ಸಮಾರೋಪಗೊಂಡಿತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಕೊಡವರು ಪಾದಯಾತ್ರೆಯ ಮೂಲಕ ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿದರು. ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿ ಇರುವ ಕೊಡವ ಮಂದ್‍ನಲ್ಲಿ ಜಿಲ್ಲಾಧಿಕಾರಿ ವೆಂಕಟರಾಜ್ ಅವರಿಗೆ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಅವರು ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರ ನೇತೃತ್ವದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು. :: ಬೇಡಿಕೆಗಳು ::  ಸೂಕ್ಷ್ಮಾತಿ ಸೂಕ್ಷ್ಮ ಅಲ್ಪಸಂಖ್ಯಾತ ಕೊಡವ ಜನಾಂಗದ ಸಂವಿಧಾನಬದ್ಧ ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು. ಕೊಡವ ಜನಾಂಗದ ಪರಂಪರೆ, ಧಾರ್ಮಿಕ ಆಚರಣೆಗಳು, ಸಾಮಾಜಿಕ ಭದ್ರತೆಗೆ ಪೂರಕವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೊಡವರು ಹಾಗೂ ಜಮ್ಮಾ…

Read More

https://www.youtube.com/watch?v=tDf31OOg6xU&authuser=0 ಮಡಿಕೇರಿ ಫೆ.7 NEWS DESK : ಮಡಿಕೇರಿಯಲ್ಲಿ ‘ಕೊಡವಾಮೆ ಬಾಳೋ’ ಕೊಡವರ ಬೃಹತ್ ಪಾದಯಾತ್ರೆ

Read More

ಮಡಿಕೇರಿ ಫೆ.7 NEWS DESK : ನಗರಸಭೆ ವ್ಯಾಪ್ತಿಯಲ್ಲಿ 2 ಲೀ.ಗಿಂತಲೂ ಕಡಿಮೆ ಪ್ರಮಾಣದ ಪ್ಲಾಸ್ಟಿಕ್ ಕುಡಿಯುವ ನೀರಿನ ಬಾಟಲಿಗಳ ಬಳಕೆ ಹಾಗೂ ಮಾರಾಟವನ್ನು ಸಂಪೂರ್ಣ ನಿಷೇಧಿಸಿದ್ದು, ಸಾರ್ವಜನಿಕರು ಹಾಗೂ ಉದ್ದಿಮೆದಾರರು ಮಡಿಕೇರಿ ನಗರಸಭೆಯವರೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತ ಹೆಚ್.ಆರ್.ರಮೇಶ್ ತಿಳಿಸಿದ್ದಾರೆ.

Read More

ನಾಪೋಕ್ಲು ಫೆ.7 NEWS DESK : ಬಡ ಕುಟುಂಬದ ಮನೆಯೊಂದಕ್ಕೆ ಸುಣ್ಣ ಬಣ್ಣ ಬಳಿಯುವ ಮೂಲಕ ನಾಪೋಕ್ಲು ಶೌರ್ಯ ವಿಪತ್ತು ತಂಡ ಮಾನವೀಯತೆ ಮೆರೆದಿದೆ. ಕೂರುಳಿಯ ಮನೆಯೊಂದರಲ್ಲಿ ವಾಸವಿರುವ ಪಾರ್ಶ್ವವಾಯು ಪೀಡಿತ ಗಂಡ. ಕಾಯಿಲೆಯಿಂದ ಬಳಲುತ್ತರುವ ಹೆಂಡತಿ. ಆಸರೆಗೆ ಯಾರೂ ಇಲ್ಲದ ದಯಾನೀಯ ಪರಿಸ್ಥಿತಿಯಲ್ಲಿರುವ ಕುಟುಂಬಕ್ಕೆ ಹತ್ತು ಹಲವು ಸೇವಾ ಕಾರ್ಯದಲ್ಲಿ ಮುಂಚೂಣಿಯಲ್ಲಿರುವ ನಾಪೋಕ್ಲು ಶೌರ್ಯ ವಿಪ್ಪತ್ತು ನಿರ್ವಹಣಾ ಘಟಕದ ಸದಸ್ಯರು ಬಣ್ಣ ಖರೀದಿಸಿ ಪೂರ್ತಿಮನೆಗೆ ಬಣ್ಣ ಬಳಿದು ಕುಟುಂಬಸ್ಥರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದ್ದಾರೆ. ಸೇವಾ ಕಾರ್ಯದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲ್ಲೂಕು ಮಾಸ್ಟರ್ ಬಾಳೆಯಡ ದಿವ್ಯ ಮಂದಪ್ಪ, ಪ್ರಮುಖರಾದ ಉಮಾಲಕ್ಷ್ಮಿ, ಸೀನ, ಮಾಧವನ್, ಶಂಕರ, ಶರವಣ, ರವಿ, ಚಂದ್ರಕಲಾ, ರಮ್ಯ, ಪೊನ್ನಮ್ಮ ಮೊದಲಾದವರು ಭಾಗವಹಿಸಿದ್ದು, ಸಾರ್ವಜನಿಕರ ಪ್ರಸಂಸೆಗೆ ಪಾತ್ರರಾದರು. ವರದಿ : ದುಗ್ಗಳ ಸದಾನಂದ.  

Read More

ನವದೆಹಲಿ ಫೆ.7 NEWS DESK : ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಪರವಾನಗಿ ರಹಿತ ತಂಬಾಕು ಬೆಳೆಗಾರರಿಗೆ ಮಾರಾಟಕ್ಕೆ ಅವಕಾಶ ಮಾಡಿಕೊಡಲು ಹಾಗೂ ಅವರ ಮೇಲೆ ವಿಧಿಸಲಾಗುತ್ತಿದ್ದ ದಂಡವನ್ನು ಮನ್ನಾ ಮಾಡಬೇಕೆಂದು ಮನವಿ ಸಲ್ಲಿಸಿದ್ದೇನೆ ಎಂದು ಮೈಸೂರು-ಕೊಡಗು ಸಂಸದರಾದ ಯದುವೀರ್ ಒಡೆಯರ್ ತಿಳಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದ ನಂತರ ಸಂಸದರು ತಿಳಿಸಿದ್ದಾರೆ. ಇದಕ್ಕೆ ಸೂಕ್ತವಾಗಿ ಸ್ಪಂದನೆ ವ್ಯಕ್ತಪಡಿಸಿದ ವಾಣಿಜ್ಯ ಸಚಿವರಾದ ಪಿಯೂಷ್ ಗೋಯಲ್, ಕಾರ್ಡ್ ಹೊಂದಿರದ (ಪರವಾನಗಿ ರಹಿತ) ತಂಬಾಕು ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸುವ ಕುರಿತು ಭರವಸೆ ನೀಡಿದ್ದಾರೆ ಎಂದು ಸಂಸದರು ತಿಳಿಸಿದರು. ಪರವಾನಗಿ ತಂಬಾಕು ಬೆಳೆಗಾರರಿಗೆ ವಿಧಿಸುತ್ತಿದ್ದ ದಂಡವನ್ನು ಮನ್ನಾ ಮಾಡುವ ಸಂಬಂಧ ತಂಬಾಕು ಮಂಡಳಿಗೆ ಸೂಕ್ತ ನಿರ್ದೇಶನ ನೀಡಿವ ಭರವಸೆಯನ್ನೂ ನೀಡಿದ್ದಾರೆ ಎಂದು ಸಂಸದ ಯದುವೀರ್ ಸ್ಪಷ್ಟಪಡಿಸಿದ್ದಾರೆ. ಅತಿ ಶೀಘ್ರದಲ್ಲೇ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ ಎಂದು ಸಂಸದರು…

Read More

ನಾಪೋಕ್ಲು ಫೆ.7 NEWS DESK : ಕೊಳಕೇರಿ ಗ್ರಾಮದ ಕಾಂಡಂಡ ಕುಟುಂಬಸ್ಥರ ನವೀಕರಣ ಐನ್‍ಮನೆ ಉದ್ಘಾಟನಾ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ನೂರಾರು ವರ್ಷಗಳ ಹಳೆಯ ಐನ್ ಮನೆಯನ್ನು ದಾನಿಗಳ ನೆರವಿನಿಂದ ಸುಮಾರು ಒಂದು ಕೋಟಿ ರೂಗಳಿಂದ ನವೀಕರಿಸಲಾಗಿದ್ದು ನೂತನವಾಗಿ ಕಂಗೊಳಿಸುತ್ತಿದೆ. ಕುಟುಂಬದ ಪಟ್ಟೇದಾರ ಕಾಂಡಂಡ ಎ.ಸುಬ್ಬಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಹಾಜರಿದ್ದ ಅತಿಥಿಗಳು ಮಾತನಾಡಿ, ನಶಿಸುತ್ತಿರುವ ಆಚಾರ, ವಿಚಾರ, ಸಂಸ್ಕೃತಿ-ಸಂಪ್ರದಾಯವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಕುಂಡ್ಯೋಳಂಡ ಎ.ಸುಬ್ಬಯ್ಯ, ಬೊಳಿಯಾಡಿರ ರಾಜ ಸೋಮಯ್ಯ, ಪುಚ್ಚಿಮಂಡ ಸಾಬು ಕುಟ್ಟಪ್ಪ, ಮಂಡೆಪಂಡ ಸುಂದರಿ ಕುಟ್ಟಪ್ಪ, ಬಿದ್ದಾಟಂಡ ಡಿಕ್ಕಿ ಸೋಮಯ್ಯ, ಬೊಲಿಯಾಡಿರ ಬೊಳ್ಳವ್ವ, ಕನ್ನಂಬಿರ ಚಂಗಪ್ಪ, ಬೊಟ್ಟೋಳಂಡ ಅಪ್ಪಣ್ಣ, ಕೇಟೋಳಿರ ಕುಟ್ಟಪ್ಪ, ಕಲಿಯಂಡ ಮಾದಪ್ಪ, ಅಪ್ಪಚ್ಚಿರ ಬೆಳ್ಯಪ್ಪ, ಕೊಂಬಾರನ ಚೋಮುಣಿ, ಕಾಂಡಂಡ ಜೋಯಪ್ಪ, ಕಾಂಡಂಡ ಚರ್ಮಣ, ಕಾಂಡಂಡ ಎಂ.ಬೋಪಣ್ಣ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಕುಟುಂಬದ ಕಾರ್ಯದರ್ಶಿ ಜಯ ಕರುಂಬಯ್ಯ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಪೊನ್ನಣ್ಣ ಮತ್ತು ದಾಮೋದರ…

Read More