ನವದೆಹಲಿ ಫೆ.7 NEWS DESK : ಮೈಸೂರು ಸಮೀಪದ ಸಿದ್ಧಲಿಂಗಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆ ಕೆಸರೆ ಗ್ರಾಮದಲ್ಲಿ ಅವೈಜ್ಞಾನಿಕ ಘನತ್ಯಾಜ್ಯ ಘಟಕ ನಿರ್ಮಾಣ ಹಾಗೂ ಈ ಪ್ರದೇಶದಲ್ಲಿ ಕೆಲವರು ತ್ಯಾಜ್ಯವನ್ನು ಸುಡುತ್ತಿರುವುದರಿಂದ ವರುಣಾ ನಾಲಾ ಪಿಲ್ಲರ್ ಗಳಿಗೆ ಭಾರಿ ಅನಾಹತವಾಗಲಿದೆ ಕೂಡಲೇ ಇದನ್ನು ತೆರವುಗೊಳಿಸಿ ಪರಿಸರವನ್ನು ಹಾಗೂ ಜನರನ್ನು ರಕ್ಷಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದರು, ಜನರಿಗೆ ಹಾಗೂ ತ್ಯಾಜ್ಯವನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿರುವುದರಿಂದ ಪರಿಸರಕ್ಕೆ ಆಗುತ್ತಿರುವ ತೊಂದರೆಗಳ ಬಗ್ಗೆ ಸಂಸತ್ತಿನ ಗಮನಕ್ಕೆ ತರಲಾಗುವುದು ಎಂದರು. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಸಚಿವರ ಗಮನಕ್ಕೆ ಸಮಸ್ಯೆಯನ್ನು ಮನವರಿಕೆ ಮಾಡಿಕೊಡುತ್ತೇನೆ ಎಂದೂ ವಿವರಿಸಿದ್ದಾರೆ. ಈ ಪ್ರದೇಶದಲ್ಲಿ ಕೆಲವು ವ್ಯಕ್ತಿಗಳು ಶೆಡ್ ಗಳನ್ನು ಕಟ್ಟಿಕೊಂಡು ತ್ಯಾಜ್ಯವನ್ನು ಸುಡುತ್ತಿದ್ದಾರೆ. ವರುಣಾ ನಾಲೆಯ ಸಮೀಪವೇ ತ್ಯಾಜ್ಯ ವಿಲೇವಾರಿ ಮಾಡುತ್ತಿರುವುದರಿಂದ ಪಿಲ್ಲರ್ ಗಳಿಗೆ ಭಾರಿ ತೊಂದರೆ ಆಗುವ…
ಲೇಖಕ: admin
ನಾಪೋಕ್ಲು ಫೆ.7 NEWS DESK : ಅಖಿಲ ಕೊಡವ ಸಮಾಜ ನೇತೃತ್ವದಲ್ಲಿ ವಿವಿಧ ಕೊಡವ ಸಮಾಜ ಹಾಗೂ ಸಂಘ ಸಮಸ್ಯೆಗಳು ಸೇರಿದಂತೆ ಕೊಡವ ಭಾಷೆಕ ಸಮುದಾಯಗಳು ಕುಟ್ಟದಿಂದ ಮಡಿಕೇರಿಯ ವರೆಗೆ ಕೈಗೊಂಡ ಕೊಡವಾಮೆ ಬಾಳೋ ಪಾದಯಾತ್ರೆಯಲ್ಲಿ ಕಲಿಯಂಡ ಕುಟುಂಬಸ್ಥರು ಎಲ್ಲಾ ರೀತಿಯಲ್ಲಿ ಸಂಪೂರ್ಣ ಸಹಕಾರದೊಂದಿಗೆ ಭಾಗವಹಿಸುತ್ತಿದ್ದೇವೆ ಎಂದು ಕಲಿಯಂಡ ವಿಜಯ ತಿಳಿಸಿದ್ದಾರೆ. ಕೊಳಕೇರಿ ಗ್ರಾಮದ ಕಲಿಯಂಡ ಐನ್ ಮನೆಯಲ್ಲಿ ಕುಟುಂಬ ಅಭಿವೃದ್ಧಿ ಸಂಘದ ಅಧ್ಯಕ್ಷ ಕಲಿಯಂಡ ವಿಜಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಮಡಿಕೇರಿಯಲ್ಲಿ ಜರುಗುವ ಸಮಾವೇಶದಲ್ಲಿಯೂ ಕುಟುಂಬ ಸದಸ್ಯರೆಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಲು ಸಹಕರಿಸುವ ನಿಟ್ಟಿನಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿಜಯ ಹಾಗೂ ಕುಟುಂಬದ ಪ್ರಮುಖ ಪ್ರಕಾಶ್ ತಿಳಿಸಿದರು. ನಾಪೋಕ್ಲು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಪ್ರತಿಕ್ರಿಯಿಸಿ ಪಾದಯಾತ್ರೆಯ ಪ್ರಯುಕ್ತ ನಮ್ಮ ಶಾಲೆಗೆ ಒಂದು ದಿನದ ರಜೆಯನ್ನು ಘೋಷಿಸಲಾಗಿದೆ ಎಂದರು. ಈ ಸಂದರ್ಭ ಅಭಿವೃದ್ಧಿ ಸಂಘದ ಪದಾಧಿಕಾರಿಗಳು…
ಮಡಿಕೇರಿ ಫೆ.7 NEWS DESK : ಮಡಿಕೇರಿ ತಾಲ್ಲೂಕು ಸವಿತಾ ಸಮಾಜದ ವತಿಯಿಂದ ಸವಿತಾ ಮಹರ್ಷಿ ಜಯಂತಿ ಹಿನ್ನಲೆಯಲ್ಲಿ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾಟದಲ್ಲಿ ಅಪ್ಪಂಗಳ ರಾಕರ್ಸ್ ತಂಡ ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. ಮಡಿಕೇರಿ ತಾಲೂಕಿನ ಸಮಾಜಬಾಂಧವರಿಗೆ ಆಯೋಜಿಸಿದ್ದ ಸೂಪರ್ ನೈನ್ ಆಟಗಾರರ ಪಂದ್ಯಾಟದಲ್ಲಿ 4 ತಂಡಗಳು ಪಾಲ್ಗೊಂಡಿತ್ತು. ಲೀಗ್ ಮಾದರಿಯಲ್ಲಿ ನಡೆದ ಪಂದ್ಯಾಟದ ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಎಂಸಿಬಿ(ಮಡಿಕೇರಿ ಕಜ್ಹೀನ್ ಬದರ್ಸ್) ತಂಡ ನಿಗದಿತ 4 ಓವರ್ನಲ್ಲಿ 2 ವಿಕೆಟ್ ಕಳೆದುಕೊಂಡು 58 ರನ್ ಕಲೆಹಾಕಿತು. ಗುರಿಬೆನ್ನಟ್ಟಿದ ಅಪ್ಪಂಗಳ ರಾಕರ್ಸ್ ತಂಡ 3.2. ಓವರ್ನಲ್ಲಿ 2 ವಿಕೆಟ್ ಕಳೆದುಕೊಂಡು ಚಾಂಪಿಯನ್ ಪಟ್ಟ ಅಲಂಕರಿಸಿತು. ಎಂಸಿಬಿ ತಂಡ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿ ಪಟ್ಟುಕೊಂಡಿತು. ಇದಕ್ಕೂ ಮುನ್ನ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಸೋತ ಎಂಎಂಎಸ್(ಮಡಿಕೇರಿ ಸವಿತಾ ಸಮಾಜ) ತಂಡ ನಿಗದಿತ 4 ಓವರ್ನಲ್ಲಿ 6 ವಿಕೆಟ್ ನಷ್ಟಕ್ಕೆ 37ರನ್ ಕಲೆ ಹಾಕಿತು. ಅಲ್ಪ ಮೊತ್ತದ…
ಮಡಿಕೇರಿ NEWS DESK ಫೆ.6 : ಕೊಡವರ ಹಾಗೂ ಕೊಡವ ಭಾಷಿಕರ ಹಕ್ಕುಗಳ ಪ್ರತಿಪಾದನೆಯ ಮೂಲಕ ರಾಜ್ಯ ಸರ್ಕಾರದ ಗಮನ ಸೆಳೆೆಯುವ ಸಲುವಾಗಿ ನಡೆಯುತ್ತಿರುವ ಕೊಡವರ ‘ಕೊಡವಾಮೆ ಬಾಳೋ’ ಪಾದಯಾತ್ರೆ 5ನೇ ದಿನವನ್ನು ಯಶಸ್ವಿಯಾಗಿ ಪೂರೈಸಿ ಜಿಲ್ಲಾ ಕೇಂದ್ರ ಮಡಿಕೇರಿ ಸಮೀಪದ ಕಗ್ಗೋಡ್ಲು-ಮೇಕೇರಿಗೆ ಆಗಮಿಸಿದೆ. ಬೇತ್ರಿ ಗ್ರಾಮದಿಂದ ಗುರುವಾರ ಬೆಳಗ್ಗೆ ಆರಂಭಗೊAಡ 5ನೇ ದಿನದ ಪಾದಯಾತ್ರೆ ಮೂರ್ನಾಡು ಪಟ್ಟಣವನ್ನು ತಲುಪಿದ ಸಂದರ್ಭ, ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ಸಹಸ್ರಾರು ಕೊಡವ ಸಮುದಾಯ ಬಾಂಧವರು ಮುಖ್ಯ ಪಾದಯಾತ್ರೆಗೆ ಸೇರ್ಪಡೆಗೊಂಡರು. ಸಾಂಪ್ರದಾಯಿಕ ಕೊಡವ ಉಡುಪಿನಲ್ಲಿದ್ದ ಕೊಡವ ಕೊಡವತಿಯರು ಮೆರವಣಿಗೆಯ ಉದ್ದಕ್ಕೂ ಗಮನ ಸೆಳೆಯುತ್ತಿದ್ದು, ಉರಿಬಿಸಿಲ ಬೇಗೆಯ ನಡುವೆಯೂ ಪಾದಯಾತ್ರೆ ಮೂರ್ನಾಡಿನಿಂದ ಹಾಕತ್ತೂರು ಗ್ರಾಮವನ್ನು ಹಾದು ಕಗ್ಗೊಡ್ಲು-ಮೇಕೇರಿ ಗ್ರಾಮಕ್ಕೆ ಸಂಜೆ ತಲುಪಿತು. ಸುಮಾರು 13 ಕಿ.ಮೀ ಪಾದಯಾತ್ರೆ ಇಂದು ನಡೆಯಿತು. ಶುಕ್ರವಾರ ಬೆಳಗ್ಗೆ 10 ಗಂಟೆಗೆ ಮತ್ತೆ ಆರಂಭಗೊಳ್ಳುವ ಪಾದಯಾತ್ರೆ ಮಡಿಕೇರಿಗೆ ಆಗಮಿಸಲಿದೆ. ಪಾದಯಾತ್ರೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತ ತಲುಪುವ ಹಂತದಲ್ಲಿ, ಕ್ರಮವಾಗಿ ಗಾಳಿಬೀಡು, ತಾಳತ್ತಮನೆ,…
ಮಡಿಕೇರಿ ಫೆ.6 NEWS DESK : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಡಾ.ಬಾಬು ಜಗಜೀವನ್ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ, 28 ಕೊನೆಯ ದಿನವಾಗಿದೆ. ಪ್ರಶಸ್ತಿ ಪಡೆಯಲು ಯಾವುದೇ ಜನಾಂಗ, ಲಿಂಗ, ಜಾತಿ ಅಥವಾ ಸಮುದಾಯದ ವ್ಯತ್ಯಾಸವಿಲ್ಲದೆ ಅಥವಾ ತಾರತಮ್ಯವಿಲ್ಲದೆ ಈ ಪ್ರಶಸ್ತಿಗೆ ಯಾವುದೇ ಭಾರತೀಯರು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿಯವರ ಮೇಲೆ ನಡೆಯುತ್ತಿರುವ ಅಸ್ಪøಶ್ಯತೆ ನಿವಾರಣೆ ಮಾಡಲು ಹಾಗೂ ದೌರ್ಜನ್ಯ ಅಪರಾಧಗಳ ನಿಯಂತ್ರಣದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳಾಗಿರಬೇಕು. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ 08272-225531, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ 08272-223552, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ 08276-281115 ಹಾಗೂ ಸಹಾಯಕ ನಿರ್ದೇಶಕರ ಕಚೇರಿ,…
ಮಡಿಕೇರಿ ಫೆ.6 NEWS DESK : ಕೊಡವ ಹಾಗೂ ಕೊಡವ ಭಾಷಿಕ ಸಮುದಾಯಗಳ ಸಂಸ್ಕೃತಿಯ ಭದ್ರತೆ ಮತ್ತು ಹಕ್ಕುಗಳಿಗಾಗಿ ಒತ್ತಾಯಿಸಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕುಟ್ಟದಿಂದ ಮಡಿಕೇರಿಯವರೆಗೆ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ನಡೆಯುತ್ತಿರುವ ‘ಕೊಡವಾಮೆ ಬಾಳೋ’ ಕೊಡವರ ಬೃಹತ್ ಪಾದಯಾತ್ರೆ ಅಂತಿಮ ಹಂತಕ್ಕೆ ತಲುಪಿದ್ದು, ಫೆ.7 ರಂದು ಮಡಿಕೇರಿಯಲ್ಲಿ ಸಮಾರೋಪಗೊಳ್ಳಲಿದೆ. ಪಾದಯಾತ್ರೆ ಶುಕ್ರವಾರ ಮೇಕೇರಿಯಿಂದ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತ ತಲುಪಲಿದೆ. ಕ್ರಮವಾಗಿ ಗಾಳಿಬೀಡು ಮಾರ್ಗವಾಗಿ ಒಂದು, ತಾಳತ್ತಮನೆ ಮಾರ್ಗವಾಗಿ ಎರಡು ತಂಡಗಳು ತಿಮ್ಮಯ್ಯ ವೃತ್ತ ತಲುಪಲಿದೆ. ಕುಶಾಲನಗರ ಸುಂಟಿಕೊಪ್ಪ, ಸಂಪಿಗೆಕಟ್ಟೆ ಮಾರ್ಗವಾಗಿ ಒಂದು ತಂಡ, ಮಕ್ಕಂದೂರು ಸಂಪಿಗೆಕಟ್ಟೆ ಮಾರ್ಗವಾಗಿ ಒಂದು ತಂಡ, ಸಿದ್ದಾಪುರ ಚೆಟ್ಟಳ್ಳಿ ಮಾರ್ಗವಾಗಿ ಮತ್ತೊಂದು ತಂಡ ಬಂದು ಫೀ.ಮಾ.ಕಾರ್ಯಪ್ಪ ವೃತ್ತವನ್ನು ತಲುಪಲಿದೆ. ಫೀ.ಮಾ.ಕಾರ್ಯಪ್ಪ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಜನರಲ್ ತಿಮ್ಮಯ್ಯ ವೃತ್ತದ ಬಳಿ ಯಾತ್ರೆ ಸೇರಿಲಿದೆ. ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸಮಾಗಮವಾಗುವ ಎಲ್ಲಾ ತಂಡಗಳು ಒಟ್ಟಾಗಿ ಸೇರಿ ಮಡಿಕೇರಿಯ ಮಂಗೇರಿರ ಮುತ್ತಣ್ಣ ವೃತ್ತ,…
ಮಡಿಕೇರಿ ಫೆ.6 NEWS DESK : ನಾಪೋಕ್ಲು ಗ್ರಾ.ಪಂ ಕಟ್ಟಡದಲ್ಲಿರುವ ಶೌಚಾಲಯದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ‘ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು’ ಎಂಬ ವಾಟ್ಸ್ ಆಪ್ ಗ್ರೂಪ್ ನಲ್ಲಿ ನಡೆದ ಚರ್ಚೆಗೆ ಸಂಬಂಧಿಸಿದಂತೆ ಗ್ರೂಪ್ ಅಡ್ಮಿನ್ ಗಳ ವಿರುದ್ಧ ಕಾಂಗ್ರೆಸ್ ಪಕ್ಷ ದೂರು ನೀಡಿರುವುದು ಖಂಡನೀಯವೆಂದು ಕೊಡಗು ಜಿಲ್ಲಾ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ದೇಶದಲ್ಲಿ ಸ್ವಚ್ಛ ಭಾರತ್ ಅಭಿಯಾನ ಹೆಚ್ಚು ಪರಿಣಾಮಕಾರಿಯಾಗಿದೆ. ಆದರೆ ಕೊಡಗು ಜಿಲ್ಲೆಯ ನಾಪೋಕ್ಲು ಗ್ರಾ.ಪಂ ಕಟ್ಟಡದಲ್ಲಿರುವ ಶೌಚಾಲಯ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದೆ. ಇದನ್ನು ಮನಗಂಡು “ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು” ಎಂಬ ವಾಟ್ಸ್ಆಪ್ ಗ್ರೂಪ್ ನಲ್ಲಿ ಚರ್ಚೆ ನಡೆದಿದೆ. ಶೌಚಾಲಯದ ಫೋಟೋಕ್ಕೆ ಸ್ಥಳೀಯ ಶಾಸಕರ ಫೋಟೋವನ್ನು ಎಡಿಟ್ ಮಾಡಿ ಹಾಕಿದರು ಎಂಬ ಕಾರಣಕ್ಕೆ ವಾಟ್ಸ್ಆಪ್ ಗ್ರೂಪ್ ನ ಅಡ್ಮಿನ್ ಗಳ ವಿರುದ್ಧ ಕಾಂಗ್ರೆಸ್ ಪಕ್ಷ ಪ್ರಕರಣ ದಾಖಲಿಸಿರುವುದನ್ನು ಖಂಡಿಸುವುದಾಗಿ ತಿಳಿಸಿದ್ದಾರೆ. ಗ್ರಾಮ…
ಮಡಿಕೇರಿ ಫೆ.6 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಾಗೂ ಜಿಲ್ಲಾ ಮಹಿಳಾ ಸಹಾಯವಾಣಿಯ ಸಹಯೋಗದೊಂದಿಗೆ 2024-25ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಡಿ “ಬೇಟಿ ಬಚವೊ-ಬೇಟಿ ಪಡಾವೊ” ತಾಲ್ಲೂಕು ಮಟ್ಟದ ಕಾರ್ಯಕ್ರಮವು ಸೋಮವಾರಪೇಟೆಯಲ್ಲಿ ನಡೆಯಿತು. ಸೋಮವಾರಪೇಟೆಯ ಸರ್ಕಾರಿ ಪದವಿ ಪೂರ್ವ ಹಾಗೂ ಪ್ರೌಢಶಾಲಾ ಮಕ್ಕಳಿಗೆ ನಡೆದ “ಶಾಲಾ ಮತ್ತು ಕಾಲೇಜುಗಳಲ್ಲಿ ಹೆಣ್ಣು ಮಕ್ಕಳ ಹಕ್ಕು”ಗಳ ಕುರಿತು ನಡೆದ ಸಂವಹನ ಕಾರ್ಯಾಗಾರವನ್ನು ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಮುದೋಳ್ ಉದ್ಘಾಟಿಸಿ, ಮಾತನಾಡಿ ಮಕ್ಕಳು ಓದಿನೊಂದಿಗೆ ಕ್ರೀಯಾಶೀಲಾತ್ಮಕ ಮನೋಭಾವನೆಯನ್ನು ಬೆಳಸಿಕೊಳ್ಳಬೇಕು ಹಾಗೂ ಚಟುವಟಿಕೆಯಿಂದ ಕೂಡಿರಬೇಕು. ಓದಿಗೆ ಮಹತ್ವವನ್ನು ಕೊಡಬೇಕು ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮಹಿಳಾ ಸಬಲೀಕರಣ ಘಟಕದ ಜೆಂಡರ್ ಸ್ಪೆಷಲಿಸ್ಟ್ ಎಸ್.ಆರ್.ಕೇಶಿನಿ ಮಾತನಾಡಿ, ಹೆಣ್ಣು ಭ್ರೂಣ ಹತ್ಯೆ, ಗರ್ಭದಲ್ಲಿರುವ ಮಗುವಿಗೆ ಸಾಮಾಜಿಕ ದೋರಣೆ,…
ಮಡಿಕೇರಿ NEWS DESK ಫೆ.6 : ಕೊಡವ ಜನಾಂಗ ಮತ್ತು ಕೊಡವ ಭಾಷಿಕ ಸಮುದಾಯಗಳ ಕೊಡವಾಮೆ ಬಾಳೋ ಪಾದಯಾತ್ರೆ ಹಿನ್ನೆಲೆ ಮಡಿಕೇರಿ ನಗರದಲ್ಲಿ ಫೆ.7 ರಂದು ನಗರದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆಗಳನ್ನು ಮಾಡಲಾಗಿದೆ. ಸುದರ್ಶನ ರಸ್ತೆ, ಜಿಲ್ಲಾ ಆಸ್ಪತ್ರೆ ರಸ್ತೆ, ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗಳೂರು ರಸ್ತೆ, ವಿನೋದ್ ಮೆಡಿಕಲ್ ಮುಂಭಾಗ, ಬಾಲಾಜಿ ಸ್ಟೋರ್ ಮುಂಭಾಗ, ಹಳೇ ಖಾಸಗಿ ಬಸ್ ನಿಲ್ದಾಣ ಆವರಣ, ಕಾರ್ ಟ್ಯಾಕ್ಸಿ ನಿಲ್ದಾಣ, ಕಾಲೇಜು ರಸ್ತೆ, ಗಣಪತಿ ಬೀದಿ, ಮಾರುಕಟ್ಟೆ ಆವರಣ, ಜ್ಯೂನಿಯರ್ ಕಾಲೇಜು ರಸ್ತೆ ಸೇರಿದಂತೆ ಜನ ಸಂದಣಿ ಏರ್ಪಡುವ ಪ್ರದೇಶಗಳಲ್ಲಿ ಎಲ್ಲಾ ರೀತಿಯ ವಾಹನ ಪಾರ್ಕಿಂಗ್ ನಿಷೇಧ ಮಾಡಲಾಗಿದೆಯೆಂದು ಪೊಲೀಸ್ ಇಲಾಖಾ ಪ್ರಕಟಣೆ ತಿಳಿಸಿದೆ. ಎಲ್ಲೆಲ್ಲಿ ಪಾರ್ಕಿಂಗ್- ಪಾದಯಾತ್ರೆ ಮಡಿಕೇರಿಗೆ ಮೂರ್ನಾಡು ಮಾರ್ಗವಾಗಿ ಮಡಿಕೇರಿಗೆ ಬರುವ ಹಿನ್ನೆಲೆ, ಕಗ್ಗೋಡ್ಲು ಅಂಬರ ರೆಸಾರ್ಟ್ ಮೈದಾನದಲ್ಲಿ, ಮೇಕೇರಿ ಶಾಲಾ ಮೈದಾನದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಭಾಗಮಂಡಲ ಕಡೆಯಿಂದ ಬರುವವರ ವಾಹನಗಳ ನಿಲುಗಡೆಎ ತಾಳತ್ಮನೆ…
ಪುತ್ತೂರು ಫೆ.6 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವಿದ್ಯಾರ್ಥಿನಿ ಕೆ.ಸ್ನೇಹಾ ಪೈ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2023-24ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಎಂಬಿಎ ಪರೀಕ್ಷೆಯಲ್ಲಿ 9.22 ಸಿಜಿಪಿಎ ಅಂಕಗಳೊಂದಿಗೆ 5ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಹೆಚ್.ಆರ್ ಮತ್ತು ಫೈನಾನ್ಸ್ ಐಚ್ಚಿಕ ವಿಷಯಗಳನ್ನು ಅಭ್ಯಸಿಸಿರುವ ಈಕೆ ಎಂಬಿಎ ವಿಭಾಗದ ನಿರ್ದೇಶಕ ಡಾ.ರಾಬಿನ್ ಮನೋಹರ್ ಶಿಂಧೆ ಹಾಗೂ ಇತರ ಪ್ರಾಧ್ಯಾಪಕರ ಸಮರ್ಥ ಮಾರ್ಗದರ್ಶನದಲ್ಲಿ ಉನ್ನತ ಸಾಧನೆಯನ್ನು ಮಾಡಿದ್ದಾರೆ. ಈಕೆ ಪುತ್ತೂರಿನ ಶ್ರೀಮತಿ ರಾಧಿಕಾ.ಬಿ.ಪೈ ಹಾಗೂ ಶ್ರೀ.ಕೆ.ಬಾಲಕೃಷ್ಣ ಪೈ ಅವರ ಪುತ್ರಿಯಾಗಿದ್ದು, ಪ್ರಸ್ತುತ ಪುತ್ತೂರಿನ ವೆಬ್ ಪೀಪಲ್ ಸಂಸ್ಥೆಯಲ್ಲಿ ಹೆಚ್.ಆರ್. ಎಕ್ಸಿಕ್ಯೂಟಿವ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ನಿರ್ದೇಶಕರು, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು…






