ಸುಂಟಿಕೊಪ್ಪ ಫೆ.6 NEWS DESK : ಬಾಳೆಕಾಡು ಶ್ರೀ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ತೆರೆ ಮಹೋತ್ಸವ ಸೇವಾ ಸಮಿತಿಯ 2025-26ನೇ ಸಾಲಿನ ಅಧ್ಯಕ್ಷರಾಗಿ ಪ್ರಶಾಂತ್ (ಪ್ರಶು), ಪ್ರಧಾನ ಕಾರ್ಯದರ್ಶಿಯಾಗಿ ಶ್ರೀನಿವಾಸ ಆಯ್ಕೆಯಾಗಿದ್ದರೆ. ಸೇವಾ ಸಮಿತಿಯ ಉಪಾಧ್ಯಕ್ಷರಾಗಿ ಹರೀಶ, ಖಜಾಂಚಿಯಾಗಿ ಸತೀಶ, ಸಹಕಾರ್ಯದರ್ಶಿಯಾಗಿ ಪ್ರಕಾಶ್, ಸಹ ಖಜಾಂಚಿಯಾಗಿ ವಸಂತ, ಸಲಹೆಗಾರರುಗಳಾಗಿ ಸಂದೀಪ್, ಸುಧಿ, ಪ್ರವೀಣ್, ಮೋಹನ್, ವಿನು, ಮನೋದ್, ಪ್ರದೀಪ್, ಸಂದೀಪ್, ಅಶೋಕ, ರವಿ, ರಾಮಚಂದ್ರ. ಅಭಿಷೇಕ್, ಸಂಜು, ಸಚಿನ್ ಚಂದ್ರ ಅವರುಗಳನ್ನು ನೇಮಕಗೊಳಿಸಲಾಯಿತು. ನಂತರ ನಡೆದ 60ನೇ ವರ್ಷದ ತೆರೆ ಮಹೋತ್ಸವ ಸೇವಾ ಸಮಿತಿಯ ವತಿಯಿಂದ ಶ್ರೀ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ತೆರೆ ಮೆರವಣಿಗೆ ನಡೆಸುವ ಬಗ್ಗೆ ಚರ್ಚಿಸಲಾಯಿತು.
ಲೇಖಕ: admin
ವಿರಾಜಪೇಟೆ ಫೆ.6 NEWS DESK : ಇತ್ತೀಚಿಗೆ ಮಡಿಕೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಎ.ಹನಿಯ ಭಾಗವಹಿಸಿ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ಚಿತ್ರದುರ್ಗದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ಇವಳು ಅಮ್ಮತ್ತಿಯ ಕಂದಾಯ ಇಲಾಖೆಯ ಪರಿವೀಕ್ಷಕರಾದ ಅನಿಲ್ ಹಾಗೂ ರಂಜಿನಿ ದಂಪತಿಯ ಪುತ್ರಿ. ಖ್ಯಾತ ಚಿತ್ರಕಲಾವಿದರು ಹಾಗೂ ಚಿತ್ರಕಲಾ ಶಿಕ್ಷಕ ಕ್ಲಿಫರ್ಡ್ ಡಿ ಮೆಲ್ಲೋ ಅವರಲ್ಲಿ ಚಿತ್ರಕಲೆಯ ತರಬೇತಿ ಪಡೆಯುತ್ತಿದ್ದಾಳೆ.
ಮಡಿಕೇರಿ ಫೆ.6 NEWS DESK : ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸರ್ಕಾರದ ವಿಶೇಷ ಅತಿಥಿಯಾಗಿ ಭಾಗವಹಿಸಿ, ಮರಳಿ ಗ್ರಾಮಕ್ಕೆ ಬಂದಿರುವ ಹೊದ್ದೂರು ಗ್ರಾ.ಪಂ ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಕೊಟ್ಟಮುಡಿ ಅವರನ್ನು ವಾಟೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಮತ್ತು ಅಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯರಾದ ಕುಮಾರಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸುಮತಿ, ಬಾಲ ಕಾರ್ಮಿಕ ಅಧಿಕಾರಿ ಸಿರಾಜ್, ಮೂರ್ನಾಡು ಪೊಲೀಸ್ ಠಾಣಾಧಿಕಾರಿ ಶ್ರೀನಿವಾಸ್, ಹೊದ್ದೂರು ಗ್ರಾಮ ಪಂಚಾಯಿತಿ ಪಿಡಿಓ ಅಬ್ದುಲ್ಲಾ ಮತ್ತು ಎಸ್.ಡಿ.ಎಂಸಿ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.
ಮಡಿಕೇರಿ ಫೆ.6 NEWS DESK : ಮಡಿಕೇರಿ ನಗರದಲ್ಲಿರುವ ಡಾ.ಅಂಬೇಡ್ಕರ್ ಭವನ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಶತಮಾನೋತ್ಸವ ಭವನ ನಿರ್ಮಾಣ ಸಮಿತಿಯ ನೇತೃತ್ವದಲ್ಲಿ ನಿಯಮಾನುಸಾರ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದನ್ನು ಸಹಿಸದ ಕೆಲವು ವ್ಯಕ್ತಿಗಳು ಡಾ.ಅಂಬೇಡ್ಕರ್ ಭವನ ಸಮಿತಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಹಾಗೂ ಅಶೋಕಪುರ ಸಮಿತಿಯ ಸದಸ್ಯ ಹೆಚ್.ಎನ್.ಯೋಗೇಶ್ ಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಡಾ.ಅಂಬೇಡ್ಕರ್ ಭವನ ಸಮಿತಿಯ ಅಧ್ಯಕ್ಷ ಹೆಚ್.ಎಂ.ನಂದಕುಮಾರ್ ಅವರು ಸಾಮಾಜಿಕ ಕಳಕಳಿ ಇರುವ ವ್ಯಕ್ತಿಯಾಗಿದ್ದಾರೆ. ಡಾ.ಅಂಬೇಡ್ಕರ್ ಭವನವನ್ನು ದಲಿತರು ಸೇರಿದಂತೆ ಎಲ್ಲಾ ವರ್ಗದವರಿಗೂ ಸಾಮಾಜಿಕ ಚಟುವಟಿಕೆ ಮತ್ತು ಸಭೆಗಳನ್ನು ನಡೆಸಲು ಯಾವುದೇ ಆಕ್ಷೇಪಣೆ ಇಲ್ಲದೆ ನೀಡುತ್ತಾ ಬಂದಿದ್ದಾರೆ. ಭವನದ ಕಾರ್ಯಚಟುವಟಿಕೆ ನಿಯಮಾನುಸಾರ ನಡೆಯುತ್ತಿದ್ದು, ಎಲ್ಲಾ ದಾಖಲೆ ಮತ್ತು ಲೆಕ್ಕಪತ್ರಗಳು ಸಮಿತಿಯ ಬಳಿ ಇದೆ. ಈ ಬಗ್ಗೆ ಸಮಿತಿಯನ್ನು ನೇರವಾಗಿ ಸಂಪರ್ಕಿಸಿ ಮಾಹಿತಿ ಪಡೆಯದೆ ದುರುದ್ದೇಶದಿಂದ ಕೆಲವರು ತೇಜೋವಧೆ ಮಾಡುವ ರೀತಿಯ…
NEWS DESK *ಕೊಡವರ ಪಾದಯಾತ್ರೆ : ಫೆ.7 ರಂದು ಮಡಿಕೇರಿಯಲ್ಲಿ 700 ಕ್ಕೂ ಅಧಿಕ ಪೊಲೀಸರ ನಿಯೋಜನೆ : ಮದ್ಯ ಮಾರಾಟ ನಿಷೇಧ* ದಿನಾಂಕ: 07-02-2025 ರಂದು ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬೆಳಿಗ್ಗೆ 06 ರಿಂದ ರಾತ್ರಿ 12 ಘಂಟೆ ವರೆಗೆ ಮಧ್ಯ ಮಾರಾಟವನ್ನು ನಿಷೇಧಿಸಲಾಗಿದೆ. > ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವವರು ಶಾಂತಿಯುತವಾಗಿ ರಸ್ತೆಯ ಒಂದು ಬದಿಯಲ್ಲಿ ತೆರಳುವುದು. > ಪಾದಯಾತ್ರೆಯ ಆಯೋಜಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸುವವರ ವಾಹನಗಳನ್ನು ಪಾರ್ಕಿಂಗ್ಗೆ ನಿಗಧಿಪಡಿಸಿರುವ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡುವ ಬಗ್ಗೆ ಕ್ರಮ ಕೈಗೊಳ್ಳುವುದು ಹಾಗೂ ಪಾದಯಾತ್ರೆಯೊಂದಿಗೆ ವಾಹನಗಳು ಬರದಂತೆ ನೋಡಿಕೊಳ್ಳವುದು. > ಪಾದಯಾತ್ರೆಯಲ್ಲಿನ ಸ್ವಯಂ ಸೇವಕರು ಸಾರ್ವಜನಿಕರಿಗೆ ಹಾಗೂ ತುರ್ತು ಸೇವೆಗಳ ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳುವುದು. > ಪಾದಯಾತ್ರೆ ಸಮಯದಲ್ಲಿ ಎಲ್ಲಿಯು ರಸ್ತೆ ತಡೆ ಮಾಡದಂತೆ ಸ್ವಯಂ ಸೇವಕರು ನೋಡಿಕೊಳ್ಳವುದು. > ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಆಯೋಜಕರು ಸೂಕ್ತ ಕ್ರಮ ಕೈಗೊಳ್ಳುವುದು. ವಿಶೇಷ ಸೂಚನೆ:- ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿಗೆ ಸಂಖ್ಯೆ: 08272-228330…
ಬೆಂಗಳೂರು ಫೆ.5 NEWS DESK : ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದೆ. ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000/- ರೂ., 25,000/- ರೂ. ಹಾಗೂ 15,000/- ರೂ. ನಗದು ಬಹುಮಾನ ನೀಡಲಾಗುವುದು. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್ ತಿಂಗಳಲ್ಲಿ ಅಕಾಡೆಮಿ ವತಿಯಿಂದ ಏರ್ಪಡಿಸಲಾಗುವ ಸುದ್ದಿ ಛಾಯಾಗ್ರಹಣ ಕುರಿತ ಕಾರ್ಯಾಗಾರದ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಇರಿಸಲಾಗುವುದು. ಸ್ಪರ್ಧೆಯ ಷರತ್ತುಗಳು: • ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ದಿನಾಂಕ :01-01-.202 4 ರಿಂದ 31-01-2025 ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು. ಪ್ರತಿ ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು. • ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ. • ಪ್ರತಿ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ…
ಮಡಿಕೇರಿ ಫೆ.6 NEWS DESK : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು(ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA Via/CET/NEET ಮುಖಾಂತರ) ಎಂಬಿ, ಎಂಎಸ್, ಎಂಡಿ, ಎಂಎಸ್, ಬಿಡಿಎಸ್, ಎಂಡಿಎಸ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಟೆಕ್ನಾಲಜಿ (ಬಿಇ/ಬಿಟೆಕ್), ಎಂ ಟೆಕ್ ಎಂಇಬಿ ಆರ್ಕ್, ಎಂಆರ್ಕ್, ಎಂಬಿಎ, ಎಂಸಿಎ, ಎಲ್ಎಲ್ಬಿ, ಬಿಎಸ್ಸಿ ಇನ್ ಆರ್ಟಿಕಲ್ಚರ್, ಕೃಷಿ, ಡೈರಿ ಟೆಕ್ನಾಲಜಿ, ಪಾರೆಸ್ಟ್ರೀ, ವೆಟರ್ನರಿ, ಅನಿಮಲ್ ಸೈನ್ಸ್, ಫುಡ್ ಟೆಕ್ನಾಲಜಿ, ಬಯೋ ಟೆಕ್ನಾಲಜಿ, ಫಿಶರಿಸ್, ಸೆರಿಕಲ್ಚರ್, ಹೋಮ್, ಕಮ್ಯುನಿಟಿ ಸೈನ್ಸ್, ಫುಡ್ ನ್ಯೂಟ್ರೀಷ್ಯನ್ ಮತ್ತು ಡಯಾಟಿಕ್ಸ್ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ “ಅರಿವು” (ರಿನಿವಲ್) ಯೋಜನೆಯಡಿ ಶೈಕ್ಷಣಿಕ…
ಮಡಿಕೇರಿ ಫೆ.6 NEWS DESK : ತಾಳತ್ತಮನೆಯ ಶ್ರೀ ದುರ್ಗಾ ಭಗವತಿ ಕ್ಷೇತ್ರದಲ್ಲಿ ಶ್ರೀ ದುರ್ಗಾ ಭಗವತಿ ಮಹಾಗಣಪತಿ ಹಾಗೂ ನಾಗ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.11 ಮತ್ತು 12 ರಂದು ನಡೆಯಲಿದೆ. ದೇವಾಲಯದಲ್ಲಿ ಎರಡು ದಿನಗಳ ನಡೆಯುವ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಗಳ ನೇತೃತ್ವದಲ್ಲಿ ಜರುಗಲಿದೆ. ಫೆ.11 ರಂದು ರಂದು ಸಂಜೆ 5 ಗಂಟೆಗೆ ಹಸಿರು ಹೊರೆಕಾಣಿಕೆ, ಉಗ್ರಾಣ ಪೂಜೆ, ಸಂಜೆ 6 ಗಂಟೆಗೆ ಮಡಿಕೇರಿ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, 7.30 ಗಂಟೆಗೆ ದೀಪಾರಾಧನೆ, ಮಹಾಪೂಜೆ ಮತ್ತು ಅನ್ನ ಸಂತರ್ಪಣೆ ನೆರವೇರಲಿದೆ. ಫೆ.12 ರಂದು ಬೆಳಿಗ್ಗೆ 10 ಗಂಟೆಯಿಂದ ಪುಣ್ಯಾಹವಾಚನ, ಗಣಪತಿ ಹೋಮ, ಕಲಶ ಪೂಜೆ, ನಾಗತಂಬಿಲ, ಗುಳಿಗ, ಚಾಮುಂಡಿ ತಂಬಿಲ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 4.30 ಗಂಟೆಗೆ ಮಡಿಕೇರಿ ವಿಜಯ ವಿನಾಯಕ ಭಜನಾ ಮಂಡಳಿಯಿಂದ ಭಜನಾ…
ಮಡಿಕೇರಿ ಫೆ.6 NEWS DESK : ಕೊಡಗು ಜಿಲ್ಲಾ ಕಂದಾಯ ಇಲಾಖೆ ವತಿಯಿಂದ ಫೆ.8 ಮತ್ತು 9 ರಂದು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ರೆವಿನ್ಯೂ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ, ಕುಶಾಲನಗರ, ಪೊನ್ನಂಪೇಟೆ ಕಂದಾಯ ಇಲಾಖೆಗಳ 5 ತಂಡ ಹಾಗೂ ಜಿಲ್ಲಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗಳ 1 ತಂಡ ಸೇರಿದಂತೆ ಒಟ್ಟು 6 ತಂಡಗಳ ನಡುವೆ ಪ್ರಶಸ್ತಿಗಾಗಿ ಸೆಣಸಾಟ ನಡೆಯಲಿದೆ. 5 ಓವರ್ಗಳಿಗೆ ಪಂದ್ಯಾವಳಿ ನಡೆಯಲಿದ್ದು, ವಿಜೇತ ತಂಡಕ್ಕೆ ಆಕರ್ಷಕ ಬಹುಮಾನ ನೀಡಲಾಗುತ್ತದೆ. ಇದರೊಂದಿಗೆ ಉತ್ತಮ ಪ್ರದರ್ಶನ ತೋರಿದ ಆಟಗಾರರಿಗೆ ವೈಯುಕ್ತಿಕ ಬಹುಮಾನವನ್ನೂ ನೀಡಲಾಗುತ್ತದೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.
ಮಡಿಕೇರಿ ಫೆ.6 NEWS DESK : ಕೇಂದ್ರ ಬಜೆಟ್ ವಿರೋಧಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್, 2025-26 ಕೇಂದ್ರ ಬಜೆಟ್ ಜನವಿರೋಧಿಯಾಗಿದ್ದು, ಜನಸಾಮಾನ್ಯರ ಪರವಾಗಿಲ್ಲ. ಅಂಬಾನಿ, ಅದಾನಿ ಪರವಾಗಿದ್ದು, ದೇಶದ ಕಾರ್ಪೊರೇಟ್ ಕಂಪೆನಿಗಳು, ಬಂಡವಾಳಶಾಹಿಗಳಿಗೆ ಶಕ್ತಿ ತುಂಬುವ ಬಜೆಟ್ ಆಗಿದೆ. ಅಸಂಘಟಿತ ಕಾರ್ಮಿಕರ ವೇತನ ಹೆಚ್ಚಳ ಸೇರಿದಂತೆ ಅವರನ್ನು ಆರ್ಥಿಕವಾಗಿ ಸಬಲರಾಗಿಸುವ ಯೋಜನೆಗಳಿಲ್ಲ. ರೈತರಿಗೂ ಯಾವುದೇ ಕೊಡುಗೆ ಕೊಟ್ಟಿಲ್ಲ ಎಂದು ದೂರಿದ ಅವರು, ಕಾರ್ಮಿಕರ ಪರವಾಗಿ ಬಜೆಟ್ ಮಂಡಿಸುವಂತೆ ಎಂದು ಆರೋಪಿಸಿದ ಭರತ್ ಕೇಂದ್ರ ಸರ್ಕಾರ ಕಾರ್ಮಿಕರ ಪರವಾದ, ರೈತರ ಪರವಾದ ಬಜೆಟ್ ಮಂಡಿಸುವಂತೆ ಒತ್ತಾಯಿಸಿದರು. ಸಿಐಟಿಯು ಪ್ರಧಾನ ಕಾರ್ಯದರ್ಶಿ ಸಾಬು, ಖಜಾಂಚಿ ಎನ್.ಡಿ.ಕುಟ್ಟಪ್ಪ, ಪದಾಧಿಕಾರಿಗಳಾದ ಶಾಜಿ ರಮೇಶ್, ಸಾವಿತ್ರಿ, ಜಾನಕಿ,…






