ಮಡಿಕೇರಿ ಫೆ.24 NEWS DESK : ನಾಡಿನ ಮೂಲ ಜನಪದ ಸಂಸ್ಕೃತಿ, ಆಚಾರ ವಿಚಾರ, ಪರಂಪರೆಗಳು ಸಮಾಜವನ್ನು ಕಟ್ಟುವುದರಲ್ಲಿ ಮಹತ್ತರ ಪಾತ್ರ ವಹಿಸುತ್ತವೆ. ಇಂತಹ ಜಾನಪದ ಕಲೆಯ ಸತ್ಯವನ್ನು ಯುವ ಪೀಳಿಗೆ ಒಳಗಣ್ಣಿನ ಮೂಲಕ ಅರಿತುಕೊಂಡು ಮುಂದಿನ ಭವಿಷ್ಯವನ್ನು ರೂಪಿಸಬೇಕು ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಗೊಲ್ಲಹಳ್ಳಿ ಶಿವಪ್ರಸಾದ್ ಕರೆ ನೀಡಿದ್ದಾರೆ. ಕರ್ನಾಟಕ ಜಾನಪದ ಅಕಾಡೆಮಿ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಕನ್ನಡ ವಿಭಾಗದ ಸಂಯುಕ್ತಾಶ್ರಯದಲ್ಲಿ ನಡೆದ ‘ಕೊಡಗು ಜಾನಪದ ಬೆಡಗು’ ಜಾನಪದ ನಡೆ ವಿದ್ಯಾರ್ಥಿಗಳ ಕಡೆ ಎನ್ನುವ ವಿಶಿಷ್ಟ ಕಾರ್ಯಕ್ರಮವನ್ನು ಕಾಲೇಜು ಸಭಾಂಗಣದಲ್ಲಿ ದುಡಿಯನ್ನು ನುಡಿಸಿ ಉದ್ಘಾಟಿಸಿ ಅವರು ಮಾತನಾಡಿದರು. ದಕ್ಷತೆ, ಪ್ರಾಮಾಣಿಕತೆ ಮತ್ತು ಸಮರ್ಪಣಾ ಭಾವಗಳಿಂದ ಪುಟ್ಟ ‘ಕೊಡಗು’ ಅತ್ಯಂತ ವಿಶೇಷವಾಗಿ ಕಾಣುತ್ತದೆ. ಅನುಮಾನಗಳೇ ತುಂಬಿರುವ ಸಮಾಜದಲ್ಲಿ ನೆಲ, ಜಲ, ಗಾಳಿ ವಿಷಯುಕ್ತವಾಗುತ್ತಿದೆ. ಅಭಿವೃದ್ಧಿ ಎನ್ನುವುದು ಎಂದಿಗೂ ಅವಸಾನಕ್ಕೆ ಕಾರಣವಾಗಬಾರದು. ಕಟ್ಟಲು ಸಾವಿರ ಕೈ…ಮುರಿಯಲು ಒಂದು ಕೈ ಸಾಕು’ ಎನ್ನುವ ನಾಣ್ನುಡಿಯಂತೆ ವಿದ್ಯಾರ್ಥಿಗಳು ಸಮಾಜವನ್ನು…
ಲೇಖಕ: admin
ಮಡಿಕೇರಿ ಫೆ.24 NEWS DESK : ಎನ್ಐಎಂಎ ಕೊಡಗು (ನೀಮಾ) ಇದರ 25ನೇ ವರ್ಷದ ಆಚರಣೆಯ ಸಲುವಾಗಿ ಮೇಕೇರಿ ಗ್ರಾಮದ ಶ್ರೀ ಸತ್ಯಸಾಯಿ ಮಂದಿರದಲ್ಲಿ ಉಚಿತ ಆಯುರ್ವೇದ ಹಾಗೂ ದಂತ ತಪಾಸಣಾ ಶಿಬಿರ ನಡೆಯಿತು. ಕೊಡಗು ಮಹಿಳಾ ಎನ್ಐಎಮ್ಎ ಘಟಕದ ಅಧ್ಯಕ್ಷೆ ಡಾ. ಶೈಲಜಾ ರಾಜೇಂದ್ರ, ಕಾರ್ಯದರ್ಶಿ ಡಾ.ಸೌಮ್ಯ ಗಣರಾಜ್, ಮಡಿಕೇರಿ ತಾಲೂಕು ಮುಖ್ಯಸ್ಥರಾದ ಡಾ.ಸಾವಿತ್ರಿ ರಾಜಗೋಪಾಲ್ ತಪಾಸಣೆಯನ್ನು ಉಚಿತವಾಗಿ ನಡೆಸಿಕೊಟ್ಟರು. ದಂತವೈದ್ಯೆ ಶಾಂಭವಿ ದಂತ ಚಿಕಿತ್ಸಾಲಯದ ವೈದ್ಯರಾದ ಡಾ.ಶ್ರೇಯಾ ರಾಜಗೋಪಾಲ್ ಭಾಗವಹಿಸಿದ್ದರು. ಶ್ರೀ ಸತ್ಯಸಾಯಿ ಮಂದಿರದ ಮುಖ್ಯಸ್ಥ ಗಜರಾಜ ನಾಯ್ಡು, ನೀಮಾ ಕೊಡಗು ಅಧ್ಯಕ್ಷ ಡಾ. ರಾಜಾರಾಮ್ ಉಪಸ್ಥಿತರಿದ್ದರು. ಮೇಕೇರಿ ಗ್ರಾಮಸ್ಥರು, ವಿದ್ಯಾರ್ಥಿಗಳು, ವತ೯ಕರು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
https://www.youtube.com/watch?v=14sM4vdK_tY&authuser=0 ಮಡಿಕೇರಿ ಫೆ.24 NEWS DESK : ಕರ್ನಾಟಕ ಸರಕಾರದ ಅಬಕಾರಿ ಇಲಾಖೆಯ ಉಪ ಆಯುಕ್ತರು ಹೊರಡಿಸಿರುವ ಸುತ್ತೊಲೆಯನ್ನು ಹಿಂಪಡೆದು ರಕ್ಷಣಾ ಮದ್ಯವನ್ನು ಶುಭ ಸಮಾರಂಭಗಳಲ್ಲಿ ಉಪಯೋಗಿಸಲು ಅನುವು ಮಾಡಿಕೊಡಬೇಕೆಂದು ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಕಾರ್ಯದರ್ಶಿ ಓಡಿಯಂಡ ಚಿಂಗಪ್ಪ, ಜಿಲ್ಲೆಯಲ್ಲಿ ರಕ್ಷಣಾ ಮದ್ಯ, ಹೊರ ರಾಜ್ಯದ ಮದ್ಯ, ನಕಲಿ ಮತ್ತು ಅಕ್ರಮ ಸರಬರಾಜು ಆಗುತ್ತಿದೆ ಎಂಬ ಕಾರಣಕ್ಕೆ ಶುಭ ಸಮಾರಂಭಗಳಿಗೆ ಮದ್ಯ ಸರಬರಾಜು ಮಾಡಲು ಸನ್ನದು ಪಡೆಯುವುದು ಕಡ್ಡಾಯ ಎಂದು ಇಲಾಖೆ ಸುತ್ತೋಲೆ ಹೊರಡಿಸಿರುವುದು ಖಂಡನೀಯ ಎಂದರು. ಜಿಲ್ಲೆಯಲ್ಲಿ 8-10 ಸಾವಿರ ಮಾಜಿ ಸೈನಿಕರಿದ್ದಾರೆ, ಅವರಿಗೂ ಕುಟುಂಬಗಳಿವೆ. ತಮ್ಮ ಮಕ್ಕಳ ಶುಭ ಕಾರ್ಯಕ್ರಮಕ್ಕೆ ಮದ್ಯ ಸಂಗ್ರಹ ಮಾಡಿಕೊಳ್ಳುತ್ತಾರೆ. ಇದನ್ನು ಅಕ್ರಮ ಮದ್ಯ ಎಂದು ಹೇಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಜಿಲ್ಲೆಯ ವಿವಿಧೆಡೆ ಕಳ್ಳಭಟ್ಟಿ, ಅಕ್ರಮ ಮದ್ಯ ಸರಬರಾಜಾಗುತ್ತಿದೆ ಅದನ್ನು ಮೊದಲು ತಡೆಹಿಡಿಯುವ ಕೆಲಸ ಮಾಡಲಿ…
ಮಡಿಕೇರಿ ಫೆ.24 NEWS DESK : ರಾಜ್ಯ ಸರ್ಕಾರ ಕೊಡಗು ವಿವಿಯನ್ನು ಮುಚ್ಚುವ ನಿರ್ಧಾರದಿಂದ ಹಿಂದಕ್ಕೆ ಸರಿಯದಿದ್ದಲ್ಲಿ ಕೊಡಗು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲಾ ವಿದ್ಯಾರ್ಥಿಗಳು ಸೇರಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಬಿ.ಸಿ.ಮಂದಾರ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಶಿಕ್ಷಣ ತಜ್ಞರ ಸಲಹೆಯನ್ನು ಪಡೆಯದೆ ರಾಜ್ಯ ಸರಕಾರ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಹೊರಟಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೊಡಗು ವಿಶ್ವವಿದ್ಯಾಲಯದಡಿಯಲ್ಲಿ ಸುಮಾರು 25 ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು, 10 ಸಾವಿರ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿಯೇ ವಿವಿ ಇದ್ದಾಗ ಇಲ್ಲಿನ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ದೊರೆಯುತ್ತದೆ. ಬೇರೆ ರಾಜ್ಯಕ್ಕೆ ತೆರಳುವ ಅವಶ್ಯಕತೆ ಇರುವುದಿಲ್ಲ. ಆದ್ದರಿಂದ ವಿವಿಯನ್ನು ಮುಚ್ಚುವ ನಿರ್ಧಾರವನ್ನು ಸರಕಾರ ಕೈಬಿಡಬೇಕು ಎಂದು ಆಗ್ರಹಿಸಿದರು. ಈ ಹಿಂದಿನ ಸರಕಾರ ವಿಶ್ವವಿದ್ಯಾಲಯಗಳನ್ನು ರಾಜ್ಯಕ್ಕೆ ಕೊಡುಗೆಯಾಗಿ ನೀಡಿದೆ. ಇದನ್ನು ಅಭಿವೃದ್ಧಿ ಪಡಿಸುವ ಚಿಂತನೆಯನ್ನು ಈಗಿನ ಸರಕಾರ ಮಾಡಬೇಕು. ರಾಜ್ಯ…
ಮಡಿಕೇರಿ ಫೆ.24 NEWS DESK : ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ದೈನಂದಿನ ಜೀವನ ಸಹಾಯಕ ಸಾಧನ ಸಲಕರಣೆಗಳನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೋಮವಾರ ವಿತರಿಸಿದರು. ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆ ವಿತರಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹಿರಿಯ ನಾಗರಿಕರು ಸ್ವಾಭಿಮಾನದಿಂದ ಜೀವನ ನಡೆಸುವಂತಾಗಲು ಎಲ್ಲರೂ ಗಮನಹರಿಸಬೇಕು ಎಂದು ಕರೆ ನೀಡಿದರು. ಹಿರಿಯ ನಾಗರಿಕರ ಸಬಲೀಕರಣಕ್ಕೆ ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡುತ್ತಿದೆ. ಆ ನಿಟ್ಟಿನಲ್ಲಿ ಹಿರಿಯರನ್ನು ಗೌರವಿಸಿ ಅವರ ಮಾರ್ಗದರ್ಶನ ಮತ್ತು ಪ್ರೇರೇಪಣೆಯಿಂದ ಮುನ್ನಡೆಯಬೇಕು ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾತನಾಡಿ ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ನೀಡುವಲ್ಲಿ ಪ್ರಥಮ ಆದ್ಯತೆಯಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹೇಳಿದರು. ಹಿರಿಯ ನಾಗರಿಕರು ಮತ್ತು ವಿಕಲಚೇತನರು ಗೌರವಯುತವಾಗಿ ಉತ್ತಮ ಬದುಕು ನಡೆಸಬೇಕು. ಆ ನಿಟ್ಟಿನಲ್ಲಿ ಹಿರಿಯ ನಾಗರಿಕರಿಗೆ ಸಾಧ್ಯವಾದಷ್ಟು ಅಗತ್ಯ ಸಹಕಾರ ಕಲ್ಪಿಸಬೇಕು ಎಂದರು. …
ಮಡಿಕೇರಿ ಫೆ.24 NEWS DESK : ಹಜ್ರತ್ ಸೂಫಿ ಶಹೀದ್ ಮತ್ತು ಹಜ್ರತ್ ಸೈಯದ್ ಹಸನ್ ಸಕಾಫ್ ಹಾಗೂ ಇನ್ನಿತರ ಮಹಾತ್ಮರುಗಳ ಹೆಸರಿನಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಹಾಗೂ ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ಎಮ್ಮೆಮಾಡು ಉರೂಸ್ ಸಮಾರಂಭದ ಸಾರ್ವಜನಿಕ ಸಮ್ಮೇಳನ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪ್ರತಿ ವರ್ಷ ಸಾಂಪ್ರದಾಯಯುಕ್ತವಾಗಿ ನಡೆಯುವ ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಒದಗಿದ್ದಕ್ಕೆ ಹರ್ಷ ವ್ಯಕ್ತಪಡಿಸಿದರು. ಸಯ್ಯಿದ್ ಮುಈನಲಿ ಶಿಹಾಬ್ ತಂಙಳ್ ಪಾಣಕಾಡ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಗ್ಯಾರಂಟಿಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಮೆಹರೋಜ್ ಖಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ವಲಯ ಅಧ್ಯಕ್ಷ ಹಂಸ, ಕಾಂಗ್ರೆಸ್ ಮುಖಂಡರು ಹಾಗೂ ಪ್ರಮುಖರು ಹಾಜರಿದ್ದರು.
ಮಡಿಕೇರಿ ಫೆ.24 NEWS DESK : ಖ್ಯಾತ ವೈದ್ಯರು ಹಾಗೂ ಸಾಹಿತಿಗಳಾದ ಡಾ.ಕೆ.ಬಿ.ಸೂರ್ಯಕುಮಾರ್ ಅವರು ರಚಿಸಿರುವ ಕೆನಡಾ ದೇಶದ ಪ್ರವಾಸ ಕಥನ “ಪ್ರಯಾಸವಲ್ಲದ ಪ್ರವಾಸ” ಪುಸ್ತಕ ಬಿಡುಗಡೆಗೊಂಡಿದೆ.
ಮಡಿಕೇರಿ ಫೆ.24 NEWS DESK : ಕ್ರೈಸ್ತ ಧರ್ಮಗುರುಗಳಾಗಿ 25 ವರ್ಷಗಳನ್ನು ಪೂರೈಸಿದ ಮಡಿಕೇರಿಯ ಸಂತ ಮೈಕಲರ ದೇವಾಲಯದ ಧರ್ಮಗುರು ಬೆಳ್ಳಿಗುರು ಜಾರ್ಜ್ ದೀಪಕ್ ಅವರನ್ನು ಫೆ.26 ರಂದು ಸನ್ಮಾನಿಸಿ ಗೌರವಿಸಲಾಗುವುದು ಎಂದು ಸಂತ ಮೈಕಲರ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಬುಧವಾರ ಸಂಜೆ 5 ಗಂಟೆಗೆ ಸಂತ ಮೈಕಲರ ದೇವಾಲಯದಲ್ಲಿ ಆಡಂಬರ ಕೃತಜ್ಞತಾ ಗಾಯನ ಬಲಿಪೂಜೆ, 7 ಗಂಟೆಗೆ ಬೆಳ್ಳಿಗುರು ಜಾರ್ಜ್ ದೀಪಕ್ ರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ನಂತರ ಸಹಭೋಜನದ ವ್ಯವಸ್ಥೆ ಇದ್ದು ಸಂತ ಮೈಕಲರ ದೇವಾಲಯದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.
ವಿರಾಜಪೇಟೆ, ಫೆ.24 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರನ್ನು ನೇಮಕಮಾಡಿ, ಜಿಲ್ಲಾ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಆದೇಶಿಸಿದ್ದಾರೆ. ಮಡಿಕೇರಿ ತಾಲ್ಲೂಕು ಅಧ್ಯಕ್ಷರಾಗಿ ಪಾಲೇರ ಮಂದಣ್ಣ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾಗಿ ಅಪ್ಪುಡ ಸುದೀಶ್ ಕುಶಾಲಪ್ಪ, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷರಾಗಿ ವಿಜಯ್ ಪೂಜಾರಿ, ಪೊನ್ನಂಪೇಟೆ ತಾಲ್ಲೂಕು ಅಧ್ಯಕ್ಷರಾಗಿ ಬೊಟ್ಟಂಗಡ ಸುಮನ್ ಸೀತಮ್ಮ, ಕುಶಾಲನಗರ ತಾಲ್ಲೂಕು ಅಧ್ಯಕ್ಷರಾಗಿ ಸಿಂಚನ ಸಿ.ಮೋಹನ್ ಅವರುಗಳನ್ನು ಆಯ್ಕೆ ಮಾಡಲಾಗಿದ್ದು, ತಕ್ಷಣದಿಂದ ತಾಲ್ಲೂಕು ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳನ್ನು ಒಳಗೊಂಡಂತೆ ಸದಸ್ಯರನ್ನು ನೇಮಿಸಿ, ಜಿಲ್ಲೆಯಲ್ಲಿ ಮಕ್ಕಳ ಸಾಹಿತ್ಯ ಪರಿಷತ್ ಬೆಳವಣಿಗೆಗೆ ಪೂರಕ ಕಾರ್ಯಯೋಜನೆ ಸಿದ್ದಪಡಿಸುವಂತೆ ತಿಳಿಸಲಾಗಿದೆ ಎಂದು ಚಾಮೆರ ದಿನೇಶ್ ಬೆಳ್ಯಪ್ಪ ಹೇಳಿದ್ದಾರೆ.
ಮಡಿಕೇರಿ ಫೆ.24 NEWS DESK : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ರೋಟರಿ ಜಿಲ್ಲಾ ಮಟ್ಟದ ಪ್ರಥಮ ವಷ೯ದ ಕಬ್ಬಡಿ ಪಂದ್ಯಾವಳಿಯಲ್ಲಿ ಮಿಸ್ಟಿ ಹಿಲ್ಸ್ ತಂಡವು ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. ನಗರದ ಗಾಂಧಿ ಮೈದಾನದಲ್ಲಿ ಆಯೋಜಿತ ರೋಟರಿ ಜಿಲ್ಲೆ 3181 ನ ರೋಟರಿ ಸದಸ್ಯರಿಗಾಗಿನ ಕಬ್ಬಡಿ ಪಂದ್ಯಾಟದಲ್ಲಿ ಮಿಸ್ಟಿ ಹಿಲ್ಸ್ ತಂಡವು ತಂಡದನಾಯಕ ಕಪಿಲ್ ನೇತೖತ್ವದಲ್ಲಿ ಪಿರಿಯಾಪಟ್ಟಣ ಮಿಡ್ ಟೌನ್ ತಂಡವನ್ನು ಮಣಿಸಿ ಕಬ್ಬಡಿ ಚಾಂಪಿಯನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. 25 ಸಾವಿರ ನಗದು ಮತ್ತು ಟ್ಪೋಫಿಯನ್ನು ಮಿಸ್ಟಿ ಹಿಲ್ಸ್ ಪಡೆದುಕೊಂಡಿದೆ. ದ್ವಿತೀಯ ಬಹುಮಾನವನ್ನು ಪಿರಿಯಾಪಟ್ಟಣ ಮಿಡ್ ಟೌನ್ ತಂಡ ಪಡೆದುಕೊಂಡು 15 ಸಾವಿರ ರು. ನಗದು ಮತ್ತು ಟ್ರೋಫಿಯನ್ನು ಪಡೆದರೆ, ಸೆಂಟ್ರಲ್ ಪುತ್ತೂರು ತಂಡವು ತೖತೀಯ ಮತ್ತು ಹುಣಸೂರು ರೋಟರಿ ತಂಡವು ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಮಡಿಕೇರಿ ರೋಟರಿ ವುಡ್ಸ್ ತಂಡವು ಅತ್ಯಂತ ಶಿಸ್ತು ಬದ್ದ ತಂಡಕ್ಕಾಗಿನ ಪ್ರಶಸ್ತಿ ಪಡೆಯಿತು. ಆಲ್ ರೌಂಡರ್ ಆಟಗಾರ ಪ್ರಶಸ್ತಿಯನ್ನು ಪಿರಿಯಾಪಟ್ಟಣ ಮಿಡ್…






