ಲೇಖಕ: admin

ಮಡಿಕೇರಿ ಫೆ.4 NEWS DESK : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀಮಹಾ ಮೃತ್ಯುಂಜಯ ದೇವಾಲಯದ ವಿಚಾರದಲ್ಲಿ ಎರಡು ಜನಾಂಗಗಳ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯ ಮತ್ತು ಗೊಂದಲ ನಿವಾರಣೆಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರುಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇವಾಲಯದಲ್ಲಿ ಗೊಂದಲ ಏರ್ಪಟ್ಟು ಹಲವು ದಿನಗಳೇ ಕಳೆದಿದೆ, ಈ ವಿಚಾರವಾಗಿ ಎರಡು ಜನಾಂಗಗಳ ನಡುವೆ ಮನಸ್ತಾಪಗಳು ಏರ್ಪಟ್ಟು ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಕೊಡಗಿನ ಕುರಿತು ಕೆಟ್ಟ ಅಭಿಪ್ರಾಯ ಮೂಡುತ್ತಿದೆ. ಶಾಂತಿ ಮತ್ತು ಸಾಮರಸ್ಯ ಕಾಪಾಡಬೇಕಾದ ದೊಡ್ಡ ಜವಾಬ್ದಾರಿ ಹೊಂದಿರುವ ಚುನಾಯಿತ ಪ್ರತಿನಿಧಿಗಳು ಮೌನಕ್ಕೆ ಶರಣಾಗಿರುವುದು ಸರಿಯಾದ ಕ್ರಮವಲ್ಲವೆಂದು ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲೆಯ ಸಮಗ್ರ ಅಭ್ಯುದಯಕ್ಕಾಗಿ ಇಲ್ಲಿ ಜೀವನ ಸಾಗಿಸುತ್ತಿರುವ ಪ್ರತಿಯೊಂದು ಜನಾಂಗವೂ ಪರಸ್ಪರ ಪ್ರೀತಿ ವಿಶ್ವಾಸದಿಂದ ಇರಬೇಕಾಗಿದೆ. ಜನಾಂಗ ಜನಾಂಗಗಳ ನಡುವೆ ಬಿರುಕು ಮೂಡಿದಾಗ ಅದನ್ನು ಸರಿಪಡಿಸಿ ಶಾಂತಿ…

Read More

ಮಡಿಕೇರಿ ಫೆ.4 NEWS DESK :  ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್‌ ಅಸೋಸಿಯೇಷನ್ (ಎನ್.ಐ.ಎಂ.ಎ), ಕೊಡಗು ಸಂಘದ ವತಿಯಿಂದ ಮಡಿಕೇರಿಯಲ್ಲಿ ಆಯುರ್ವೇದ ವೈದ್ಯರಿಗೆ ನಿರಂತರ ಶಿಕ್ಷಣ ನಡೆಯಿತು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜೆಡ್ಡು ಆಯುರ್ವೇದ ಆಸ್ಪತ್ರೆ ಮತ್ತು ಜೆಡ್ಡು ಫಾರ್ಮಸಿ ಸ್ಥಾಪಕರಾದ ಡಾ.ಗಣಪತಿ ಭಟ್ ಜೆಡ್ಡು, ಮಾತನಾಡಿ “ಆರೋಗ್ಯ ಕಾಪಾಡಲು ಆಯುರ್ವೇದ ಇಂದಿನ ಅಗತ್ಯವಾಗಿದೆ. ವೃದ್ಯಾಪ್ಯದಲ್ಲಿ ಯೌವನ ಕಾಪಾಡುವಲ್ಲಿ ಆಯುರ್ವೇದದ ಮಹತ್ವ” ಎಂಬ ಬಗ್ಗೆ ಮಾಹಿತಿ ನೀಡಿದರು. ಸಮಯಕ್ಕೆ ಸರಿಯಾದ ಭೋಜನ, ನಮ್ಮ ಜೀವನಶೈಲಿ, ಮಾನಸಿಕ ಸುಸ್ಥಿತಿ, ಹೀಗೆ ಯಾವ ಬದಲಾವಣೆ ಹೇಗೆ ನಮ್ಮ ದೀಘಾ೯ಯಷ್ಯವನ್ನು ಆರೋಗ್ಯಕರವಾಗಿ ಉತ್ಸಾಹಭರಿತವಾಗಿ ಕಾಪಾಡುವಲ್ಲಿ ಆಯುರ್ವೇದ ನೆರವಾಗುತ್ತದೆ ಎಂದು ಅವರು ಮಾಹಿತಿ ನೀಡಿದರು. ವಿರಾಮವಿಲ್ಲದೆ, ನಿಯತ ಗುರಿ ಇಲ್ಲದೆ ಓಡುತ್ತಿರುವ ಈ ಸಮಾಜ ವಿಶ್ರಮಿಸುವಷ್ಟರಲ್ಲಿ ವಾರ್ಧಕ್ಯ ಮತ್ತು ಅನಾರೋಗ್ಯ ಮಾನವನನ್ನು ಸಂಪೂರ್ಣ ದುರ್ಬಲನನ್ನಾಗಿಸುತ್ತದೆ. ಆದ್ದರಿಂದ ಸರಿಯಾದ ಸಮಯದಲ್ಲಿ ಶಾರೀರಿಕ, ಮಾನಸಿಕ, ಆಧ್ಯಾತ್ಮಿಕ ಉಪಚಾರಗಳನ್ನು ಕೂಡ ಮಾಡುವುದರ ಮೂಲಕ ಆರೋಗ್ಯಕರ ವಾರ್ಧಕ್ಯವನ್ನು ಕಳೆಯುವ ಬಗ್ಗೆ ಡಾ.ಗಣಪತಿ ಭಟ್…

Read More

ಮಡಿಕೇರಿ ಫೆ.4 NEWS DESK : ಸವಿತಾ ಸಮಾಜದವರು ಸಮಾಜದಲ್ಲಿ  ಸಣ್ಣ ಪ್ರಮಾಣದ ಸಂಖ್ಯೆಯಲ್ಲಿದ್ದರೂ  ಮುಖ್ಯ ಪಾತ್ರವನ್ನು ವಹಿಸುತ್ತಾರೆ ಎಂದು ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ನಗರಸಭಾ ಸದಸ್ಯ ಬಿ.ವೈ.ರಾಜೇಶ್ ಶ್ಲಾಷಿಸಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಸವಿತಾ ಮಹಷಿ೯ ಜಯಂತಿ ಹಿನ್ನಲೆಯಲ್ಲಿ ಮಡಿಕೇರಿ ತಾಲ್ಲೂಕು ಸವಿತಾ ಸಮಾಜದ ವತಿಯಿಂದ ಆಯೋಜಿತ ಕ್ರೀಡಾಕೂಟ ಮತ್ತು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ರಾಜೇಶ್, ಸವಿತಾ ಸಮಾದವರು ಇತ್ತೀಚಿನ ವಷ೯ಗಳಲ್ಲಿ ಇತರ ಸಮಾಜಗಳಂತೆ ಸಂಘಟಿತರಾಗುವ ಮೂಲಕ ತಮ್ಮ ಸಮಾಜಕ್ಕೆ ಅಗತ್ಯತೆಗಳನ್ನು ಪಡೆಯುವ ನಿಟ್ಟಿನಲ್ಲಿ ಯಶಸ್ವಿಯಾಗುತ್ತಿದ್ದಾರೆ. ಸವಿತಾ ಸಮಾಜದ ಕೆಲವು ಬೇಡಿಕೆಗಳ ಬಗ್ಗೆ ಶಾಸಕರ ಗಮನ ಸೆಳೆದು ಅವುಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಪತ್ರಕತ೯ ಅನಿಲ್ ಹೆಚ್.ಟಿ. ಮಾತನಾಡಿ, ಸವಿತಾ ಮಹಷಿ೯ಗಳೇ ಮೂಲಪುರುಷರಾಗಿರುವ ಈ ಸಮಾಜದವರು ಬಹಳ ಪ್ರಮುಖ್ಯತೆಯನ್ನು ವಹಿಸುತ್ತಾರೆ. ಸವಿತಾ ಸಮಾಜದವರ ಅತ್ಯಗತ್ಯತೆ ಕೋವಿಡ್ ಲಾಕ್ ಡೌನ್ ಸಂದಭ೯ ಜನರಿಗೆ ಮತ್ತಷ್ಟು ಹೆಚ್ಚಾಗಿ ಮನವರಿಕೆಯಾಯಿತು ಎಂದರಲ್ಲದೇ, ಹಿಂದಿನ ಕಾಲದಲ್ಲಿ ದೇವರಿಗೆ…

Read More

ಮಡಿಕೇರಿ ಫೆ.4 NEWS DESK : ಕೊಡಗು ಜಿಲ್ಲೆಯಾದ್ಯಂತ ಚೆಸ್ಕಾಂನ ವಿದ್ಯುತ್ ವಿತರಣಾ ಮಾರ್ಗಗಳು ಬಹುತೇಕ ತೋಟಗಳು, ಅರಣ್ಯ ಪ್ರದೇಶಗಳ ಮಧ್ಯೆ ಹಾಗೂ ಕಡಿದಾದ ಬೆಟ್ಟಗುಡ್ಡಗಳ ಅಂಚಿನಲ್ಲಿ ಹಾದುಹೋಗುತ್ತಿದ್ದು, ಮಳೆಗಾಲದ ಹಾಗೂ ಪ್ರಕೃತಿ ವಿಕೋಪದಂತಹ ಸಂದರ್ಭಗಳಲ್ಲಿ ಮರದ ಕೊಂಬೆಗಳು ಬೀಳುವಂತದ್ದು, ಕಡಿದಾದ ಗುಡ್ಡಗಳ ಜರಿತದಿಂದ ಕಂಬಗಳು ಬಾಗಿ, ತಂತಿಗಳು ತೀರಾ ಅಪಾಯಮಟ್ಟದಲ್ಲಿ ಜಾರುವಂತಹ ಸನ್ನಿವೇಶಗಳು ಎದುರಾಗಬಹುದು. ಇದರಿಂದಾಗಿ ವಿದ್ಯುತ್ ಅಪಘಾತಗಳಾಗುವ ಸಂಭವವಿರುತ್ತದೆ. ಆದ್ದರಿಂದ, ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು, ಶಿಥಿಲಗೊಂಡಿರುವ ಕಂಬಗಳು ಕಂಡುಬಂದರೆ ಈ ವ್ಯಾಪ್ತಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಥವಾ 24*7 ಸಹಾಯವಾಣಿ 1912 ಗೆ ಸಾರ್ವಜನಿಕರು ದೂರು ನೀಡಲು ಕೋರಿದೆ. ಕೊಡಗು ಜಿಲ್ಲೆಯಾದ್ಯಂತ ರೈತರು ತಮ್ಮ ತೋಟಗಳಲ್ಲಿ ಕಾಳುಮೆಣಸು ಕೀಳಲು ಮತ್ತು ಮರದ ಕೊಂಬೆಗಳನ್ನು ಕಡಿಯಲು ಅಲ್ಯೂಮಿನಿಯಂ ಏಣಿಗಳನ್ನು ಮತ್ತು ನೀರು ಹಾಯಿಸಲು ಅಲ್ಯೂಮಿನಿಯಂ ಸ್ಪ್ರಿಂಕ್ಲರ್ ಪೈಪ್‍ಗಳನ್ನು ಉಪಯೋಗಿಸುತ್ತಿದ್ದು, ಇವುಗಳು ವಿದ್ಯುತ್ ಮಾರ್ಗಕ್ಕೆ ತಾಗಿ ಆಗಿಂದಾಗ್ಗೆ ವಿದ್ಯುತ್ ಅಪಘಾತಗಳು ಸಂಭವಿಸುತ್ತಿದೆ. ಆದ್ದರಿಂದ, ಅಲ್ಯೂಮಿನಿಯಂ/ಕಬ್ಬಿಣದ ಏಣಿ ಬದಲು/ಪೈಬರ್ ಏಣಿಗಳನ್ನೇ ಕಡ್ಡಾಯವಾಗಿ ಉಪಯೋಗಿಸುವುದು.…

Read More

ಬೆಂಗಳೂರು ಫೆ.4 NEWS DESK : ಏರೋ ಇಂಡಿಯಾ-2025 ಆರಂಭಕ್ಕೆ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ಸಜ್ಜಾಗುತ್ತಿರುವಂತೆಯೇ, ಸಂದರ್ಶಕರು, ಪ್ರದರ್ಶಕರು ಮತ್ತು ಪ್ರತಿನಿಧಿಗಳು ಮರೆಯಲಾಗದ ಅತ್ಯುತ್ತಮ ಅನುಭವವನ್ನು ಎದುರು ನೋಡಬಹುದಾಗಿದೆ. ಪ್ರಮುಖ ಮೂಲಸೌಕರ್ಯ ನವೀಕರಣಗಳು ಮತ್ತು ಸುಧಾರಿತ ಸೌಕರ್ಯಗಳೊಂದಿಗೆ ಈ ಬಾರಿ ಆವೃತ್ತಿಯು ಹಿಂದೆಂದಿಗಿಂತಲೂ ದೊಡ್ಡದಾಗಿರಲಿದೆ, ಸುಗಮವಾಗಿ ಮತ್ತು ಸಂದರ್ಶಕ ಸ್ನೇಹಿಯಾಗಿರಲಿದೆ ಎಂಬ ಭರವಸೆಯನ್ನು ನೀಡುತ್ತದೆ.  ಸುಧಾರಿತ ಮೂಲಸೌಕರ್ಯ ಮತ್ತು ಸಂಚಾರ ನಿರ್ವಹಣೆ ::  ಹಿಂದಿನ ಸವಾಲುಗಳನ್ನು ಗುರುತಿಸಿ, ಸರಾಗ ಪ್ರವೇಶ, ಸಂಚಾರ ಮತ್ತು ಸಂಪರ್ಕವನ್ನು ಸುಗಮಗೊಳಿಸಲು ವ್ಯಾಪಕ ಸುಧಾರಣೆಗಳನ್ನು ಮಾಡಲಾಗಿದೆ ಮತ್ತು ರಕ್ಷಣಾ ಸಚಿವಾಲಯ, ಭಾರತೀಯ ವಾಯುಪಡೆ (ಐಎಎಫ್‌), ಬೆಂಗಳೂರು ಸಂಚಾರ ಪೊಲೀಸ್, ಬಿಬಿಎಂಪಿ, ಎನ್ ಎಚ್ ಎಐ ಮತ್ತು ನಮ್ಮ ಮೆಟ್ರೋದಂತಹ ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಅಂಗ ಸಂಸ್ಥೆಗಳ ನಡುವೆ ನಿಕಟ ಸಮನ್ವಯವಿದೆ. ವಾಹನ ದಟ್ಟಣೆಯನ್ನು ತಗ್ಗಿಸಲು ಮತ್ತು ಸ್ಥಳದ ಸುತ್ತಲಿನ ಸಂಚಾರವನ್ನು ಸುಧಾರಿಸಲು ವಾಯುಪಡೆ ನಿಲ್ದಾಣದ ಸುತ್ತಲೂ ಸಂಚಾರ ಹರಿವನ್ನು ಉತ್ತಮಗೊಳಿಸಲು ಸಂಪರ್ಕ ರಸ್ತೆಗಳನ್ನು ಅಗಲೀಕರಣಗೊಳಿಸಲಾಗಿದೆ. ಸಂಚಾರ…

Read More

ವಿರಾಜಪೇಟೆ ಫೆ.4 NEWS DESK : ಕ್ರೀಡಾ ಜಿಲ್ಲೆಯಾದ ಕೊಡಗಿನಲ್ಲಿ ಎಲ್ಲಾ ಕ್ರೀಡೆಗಳಿಗೆ ಸಹಕಾರ ನೀಡುವಂತೆ ಬ್ಯಾಡ್ಮಿಂಟನ್ ಕ್ರೀಡೆಗೂ ಹೆಚ್ಚಿನ ಅವಕಾಶ ಕಲ್ಪಿಸಬೇಕು ಎಂದು ಉದ್ಯಮಿ ಮತ್ತು ಕಾಂಗ್ರೆಸ್ ಪಕ್ಷದ ಪ್ರಮುಖ ಸಿ.ಎ. ನಾಸಿರ್ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಫ್ರೆಂಡ್ಸ್ ಯುವಕ ಸಂಘದ ವತಿಯಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಚಿಕ್ಕಪೇಟೆಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕೊಡಗು ಬ್ಯಾಡ್ಮಿಂಟನ್ ಲೀಗ್ 2ನೇ ಅವೃತ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಭಾರತ ದೇಶವು ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ತನ್ನದೇಯಾದ ಕೊಡುಗೆಗಳನ್ನು ನೀಡಿದೆ. ಅದರಂತೆ ಕೊಡಗಿನ ಬ್ಯಾಡ್ಮಿಂಟನ್ ಕಲಿಗಳು ರಾಜ್ಯ, ದೇಶವನ್ನು ಪ್ರತಿನಿಧಿಸಿ ಕ್ರೀಡಾ ಸಾಧನೆಯನ್ನು ತೋರಿದ್ದು, ಮುಂದಿನ ದಿನಗಳಲ್ಲಿ ಕೊಡಗಿನಿಂದ ಹೆಚ್ಚಿನ ಕ್ರೀಡಾಪಟುಗಳು ಪಾಲ್ಗೊಳ್ಳುವಂತಾಗಬೇಕು ಎಂದು ಕರೆ ನೀಡಿದರು. ಜೆ.ಡಿ.ಎಸ್ ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಜಾಸಿರ್ ಮಾತನಾಡಿದರು. ಮುಂಜಾನೆ ನಡೆದ ಲೀಗ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ…

Read More

ವಿರಾಜಪೇಟೆ ಫೆ.4 NEWS DESK : ವಿರಾಜಪೇಟೆ ಪುರಸಭೆಯ ನೂತನ ಮುಖ್ಯ ಅಧಿಕಾರಿಯಾಗಿ ಪಿ.ಕೆ.ನಾಚಪ್ಪ ನೇಮಕಗೊಂಡಿದ್ದಾರೆ. ಈ ಹಿಂದೆ ವಿರಾಜಪೇಟೆ ಪುರಸಭೆಯ ಮುಖ್ಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ  ಚಂದ್ರ ಕುಮಾರ್ ಅವರನ್ನು ತಕ್ಷಣದಿಂದಲೇ ವರ್ಗಾವಣೆಗೊಳಿಸಿ ಈ ಸ್ಥಾನಕ್ಕೆ ಪಿ.ಕೆ.ನಾಚಪ್ಪ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

Read More

ಮಡಿಕೇರಿ ಫೆ.4 NEWS DESK : ರಾಜ್ಯದ ಮುಖ್ಯಮಂತ್ರಿಗಳು ಕೇಂದ್ರ ಸರಕಾರದ ಬಜೆಟ್ ನ್ನು ಟೀಕಿಸುತ್ತಾ ರಾಜಕೀಯ ಭಾಷಣ ಮಾಡುವುದನ್ನು ಬಿಟ್ಟು ಅಭಿವೃದ್ಧಿ ಕಾರ್ಯಗಳ ಕಡೆ ಮನ ನೀಡಲಿ ಎಂದು ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರಕಾರ ಮಂಡಿಸಿದ 50.65 ಲಕ್ಷ ಕೋಟಿ ಮೊತ್ತದ ಬಜೆಟ್ ನ್ನು ಇಡೀ ದೇಶವೇ ಒಪ್ಪಿಕೊಂಡಿದೆ. ವಿದೇಶಿಗರು ಕೂಡ ಬಜೆಟ್ ಕುರಿತು ಉತ್ತಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕಾಂಗ್ರೆಸ್ ಮಾತ್ರ ರಾಜಕೀಯ ಕಾರಣಕ್ಕಾಗಿ ಟೀಕಿಸುತ್ತಿದೆ. ರಾಜ್ಯದ ಮುಖ್ಯಮಂತ್ರಿಗಳು ಕೇಂದ್ರದ ಬಜೆಟ್ ಮಂಡನೆಯಾಗುವ ಮೊದಲೇ ಬಜೆಟ್ ನಿಂದ ಏನನ್ನೂ ನಿರೀಕ್ಷೆ ಮಾಡಲ್ಲ ಎಂದು ಟೀಕಿಸಲು ಆರಂಭಿಸಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಸರಕಾರ ತನ್ನ ಘೋಷಣೆಯಂತೆ “ಜನಪ್ರಿಯವಲ್ಲ, ಜನಪರ ಬಜೆಟ್” ನ್ನು ನೀಡಿದೆ. ‘ಸಬ್ ಕಾ ಸಾತ್, ಸಬ್ ಕಾ ವಿಕಾಸ್’ ಎಂಬಂತೆ ದೇಶದ ಎಲ್ಲಾ ವರ್ಗದ ಜನರಿಗೂ ಸಹಕಾರಿಯಾಗಬಲ್ಲ ಬಜೆಟ್ ಇದಾಗಿದೆ. ತೆರಿಗೆ ವಿನಾಯಿತಿ ಮೊತ್ತವನ್ನು…

Read More

ನಾಪೋಕ್ಲು ಫೆ.4 NEWS DESK : ಜಿಲ್ಲೆಯಲ್ಲಿ ಎರಡು ಪ್ರಬಲ ಜನಾಂಗಗಳ ನಡುವೆ ಶಕ್ತಿ ಪ್ರದರ್ಶನ ಹಾಗೂ ಬಲಾಬಲ ಕಾರ್ಯ ನಡೆಲಿದ್ದು, ಇದನ್ನು ತಡೆಗಟ್ಟುವ ಹಾಗೂ ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಾಪೋಕ್ಲುವಿನಲ್ಲಿ ಪಥ ಸಂಚಲನದ ಮೂಲಕ ಜಾಗೃತಿ ಮೂಡಿಸಲಾಯಿತು. ನಾಪೋಕ್ಲು ಪೊಲೀಸ್ ಮೈದಾನದಿಂದ ಪಟ್ಟಣದ ಮುಖ್ಯ ಬೀದಿಯ ಮೂಲಕ ಹಳೆತಾಲೂಕು ವರೆಗೆ ಸಿಆರ್‍ಪಿಎಫ್ ಕ್ಷಿಪ್ರ ಕಾರ್ಯಾಚರಣೆ ಪಡೆಯ ಕಮಾಂಡೊ ಯೋಧರು ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿ ಆತ್ಮಸ್ಥೈರ್ಯ ತುಂಬಿದರು. ಈ ಸಂದರ್ಭ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ. 

Read More

ಕುಶಾಲನಗರ ಫೆ.4 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕುಶಾಲನಗರ ಗ್ರಾ.ಪಂ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ದೊಡ್ಡತ್ತೂರು, ಚಿಕ್ಕತ್ತೂರು, ಸುಂದರನಗರ, ವಿನಾಯಕ ಬಡಾವಣೆ, ಬಸವೇಶ್ವರ ಬಡಾವಣೆ, ವಿಜಯನಗರ ಗ್ರಾಮದಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ‘ಕೂಡಿಗೆ ಗ್ರಾ.ಪಂ, ಹೆಬ್ಬಾಲೆ, ತೊರೆನೂರು, ಶಿರಂಗಾಲ ಗ್ರಾ.ಪಂ ನ ಹಲವು ಕಾಮಗಾರಿಗಳಿಗೆ ಶಾಸಕ‌ ಡಾ.ಮಂತರ್ ಗೌಡರವರು ಆಯಾ ವ್ಯಾಪ್ತಿಯ ಗ್ರಾ.ಪಂ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಶಾಸಕರು, ಆಯ್ಕೆಯಾದ ದಿನದಿಂದ ಈವರೆಗೆ ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನಗಳನ್ನು ತರಲಾಗಿದೆ. ಕ್ಷೇತ್ರದ ಅಭಿವೃದ್ಧಿಯ ಧ್ಯೇಯದೊಂದಿಗೆ ಇನ್ನಷ್ಟು ಉತ್ಸಾಹ ಹಾಗೂ ಹುಮ್ಮಸ್ಸಿನಿಂದ ಕಾರ್ಯನಿರ್ವಹಿಸಲಾಗುವುದು ಎಂದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ವಿ.ಪಿ.ಶಶಿಧರ್, ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷ ಬಾಸ್ಕರ ನಾಯಕ್, ಕೂಡುಮಂಗಳೂರು ಗ್ರಾ.ಪಂ ಸದಸ್ಯರಾದ ಫಿಲೋಮಿನಾ, ಕೆ.ಬಿ.ಶಂಶುದ್ಧೀನ್, ಕಾಂಗ್ರೆಸ್…

Read More