ಮಡಿಕೇರಿ ಫೆ.4 NEWS DESK : ಕರ್ನಾಟಕ ಸರ್ಕಾರ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ, 05 ರಿಂದ 11 ರವರೆಗೆ ಕಾವೇರಿ ವಸ್ತ್ರಸಿರಿ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ನಗರದ ಕೊಡವ ಸಮಾಜದ ಪ್ರಾಂಗಣದಲ್ಲಿ ನಡೆಯಲಿದೆ. ಫೆಬ್ರವರಿ, 5 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ…
ಲೇಖಕ: admin
ಮಡಿಕೇರಿ NEWS DESK ಫೆ.3 : ಭಾಗಮಂಡಲ ಮೇಲ್ಸೇತುವೆ ಉದ್ಘಾಟನೆಗೆಂದು ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ನಿರಾಶೆ ಮೂಡಿಸಿದ್ದಾರೆ. ಜಿಲ್ಲೆಯಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ವಿಶ್ವಾಸ ಮೂಡಿಸುವಲ್ಲಿ ಅವರು ವಿಫಲರಾಗಿದ್ದಾರೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಭಾಗಮಂಡಲ ಮೇಲ್ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿಗಳು ರಾಜಕೀಯ ಪ್ರೇರಿತ ಭಾಷಣವನ್ನಷ್ಟೇ ಮಾಡಿ ಹೋಗಿದ್ದಾರೆ ಹೊರತು ಜಿಲ್ಲೆಯನ್ನು ಕಾಡುತ್ತಿರುವ ಸಮಸ್ಯೆಗಳ ಕುರಿತು ಉಲ್ಲೇಖಿಸಿಲ್ಲ ಮತ್ತು ಯಾವುದೇ ಅಭಿವೃದ್ಧಿಪರ ಘೋಷಣೆಗಳನ್ನು ಮಾಡಿಲ್ಲ ಎಂದು ಆರೋಪಿಸಿದ್ದಾರೆ. ಜಿಲ್ಲೆಯಲ್ಲಿ ವನ್ಯಜೀವಿಗಳ ಉಪಟಳ ಮಿತಿ ಮೀರಿದ್ದು, ಜಾನುವಾರುಗಳು ಬಲಿಯಾಗುತ್ತಿವೆ, ಮಾನವನ ಮೇಲೂ ದಾಳಿಯಾಗುತ್ತಿದೆ. ಕೃಷಿ ಫಸಲು ನಾಶವಾಗಿ ರೈತಾಪಿ ವರ್ಗ ನಷ್ಟ ಅನುಭವಿಸುತ್ತಿದೆ. ಅಕಾಲಿಕ ಮಳೆಯ ಪರಿಣಾಮ ಕಾಫಿ ಬೆಳೆಗಾರರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದ ಗೊಂದಲ ಇನ್ನೂ ಕೂಡ ಇತ್ಯರ್ಥವಾಗಿಲ್ಲ. ರಾಜ್ಯ ಸರ್ಕಾರದಿಂದ ಪರಿಹಾರವಾಗಬಲ್ಲ…
ಮಡಿಕೇರಿ ಫೆ.3 NEWS DESK : ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಜಲಜೀವನ್ ಮಿಷನ್ ಕುಡಿಯುವ ನೀರಿನ ಸರಬರಾಜು ಯೋಜನೆಯ ಕಾಮಗಾರಿಗಳನ್ನು ಪೈಪ್ ಲೈನ್ ಅಳವಡಿಕೆ, ಟ್ಯಾಂಕ್ ನಿರ್ಮಾಣದ ಕಾಮಗಾರಿಗೆ ಕೊಳವೆ ಬಾವಿಯಿಂದ ನೀರು ಎತ್ತಲು ವಿದ್ಯುತ್ ಸೌಲಭ್ಯಗಳ ಜೋಡಣೆ ಸೇರಿದಂತೆ ಇತರೆ ಕಾಮಗಾರಿಗಳನ್ನು ಸಧ್ಯದಲ್ಲಿ ಪೂರ್ಣಗೊಳಿಸಲಾಗುವುದು ಎಂದು ತಾಲ್ಲೂಕು ಗ್ರಾಮಾಂತರ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ವೀರೇಂದ್ರ ಕುಮಾರ್ ತಿಳಿಸಿದ್ದಾರೆ. ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸಣ್ಣ ಪ್ರಮಾಣದ ಬಾಕಿ ಉಳಿದ ಕಾಮಗಾರಿಯನ್ನು ವೀಕ್ಷಣೆ ಮಾಡಿ ಮಾತನಾಡಿದ ಅವರು ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಗುತ್ತಿಗೆದಾರನಿಗೆ ಸೂಚನೆ ನೀಡಿದರು. ಗ್ರಾಮಾಂತರ ಪ್ರದೇಶದ ಜಲಜೀವನ್ ಕುಡಿಯುವ ನೀರಿನ ಸರಬರಾಜು ಮಾಡುವ ಯೋಜನೆಯು ಇದೀಗ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಚುರುಕುಗೊಂಡಿದೆ. ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಮುಖೇನ ಕಳೆದ ಮೂರು ವರ್ಷಗಳಿಂದ ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರನ್ನು ಒದಗಿಸುವ ಮಹತ್ವಾಕಾಂಕ್ಷೆಯ ಯೋಜನೆಯು ಇದ್ದಾಗಿದ್ದು, ಇದರ ಅನ್ವಯ…
ಮಡಿಕೇರಿ ಫೆ.3 NEWS DESK : ಕೊಡಗು ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ 14 ವರ್ಷ 7 ತಿಂಗಳು ಸೇವೆ ಸಲ್ಲಿಸಿ ಪ್ರಸ್ತುತ ಪೊನ್ನಂಪೇಟೆ ನ್ಯಾಯಾಲಯದಿಂದ ನಿವೃತ್ತರಾದ ಬೈಲೀಪ್ ಕೆ.ಎಂ.ಲವಕುಮಾರ್ (ಮಾಜಿ ಸೈನಿಕ) ಅವರನ್ನು ಬೀಳ್ಕೊಡುವ ಸಮಾರಂಭ ನಡೆಯಿತು. ಪೊನ್ನಂಪೇಟೆ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಪ್ರದೀಪ್ ಪೋತೆದಾರ್, ಸಿವಿಲ್ ಹಿರಿಯ ನ್ಯಾಯಾಧೀಶ ಮಂಜುನಾಥ್, ವಿರಾಜಪೇಟೆ ಮುಖ್ಯ ಆಡಳಿತಾಧಿಕಾರಿ ಗೋವಿಂದ ರಾಜು, ನಾಝರ್, ಪ್ರೀತಮ್ ಮತ್ತಿತರ ಪ್ರಮುಖರು ಲವಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸುವುದರೊಂದಿಗೆ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು. ಸಂಧ್ಯಾ ಹಾಗೂ ನೇತ್ರಾವತಿ ಪ್ರಾರ್ಥಿಸಿ, ಕವಿತಾ ನಿರೂಪಿಸಿದರು.
ಮಡಿಕೇರಿ ಫೆ.3 NEWS DESK : ಖೇಲೋ ಇಂಡಿಯಾ 2024-25 ಮಹಿಳಾ ಫುಟ್ಬಾಲ್ ಪಂದ್ಯಾವಳಿಗೆ ಯುನೈಟೆಡ್ ಎಫ್ಸಿ ಕೊಡಗು ತಂಡವು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಸಹಯೋಗದೊಂದಿಗೆ ಭಾಗವಹಿಸುತ್ತಿದ್ದು, ಫುಟ್ಬಾಲ್ ಪಂದ್ಯಾವಳಿಗೆ ತಂಡದ ಆಯ್ಕೆ ಪ್ರಕ್ರಿಯೆ ಫೆ.5ರಂದು ಅಮ್ಮತ್ತಿ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಕೊಡಗು ಯುನೈಟೆಡ್ ಎಫ್.ಸಿ ತಂಡದ ಮುಖ್ಯಸ್ಥ ಹೆಚ್.ಹೆಚ್.ಹರೀಶ್ ತಿಳಿಸಿದ್ದಾರೆ. 1-1-2010 ಹಾಗೂ 31-12-2011ರೊಳಗೆ ಜನಿಸಿರುವ ಆಟಗಾರ್ತಿಯರು ಮಾತ್ರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶವಿದ್ದು, ಭಾಗವಹಿಸುವ ಆಟಗಾರ್ತಿಯರು ತಮ್ಮ ಒರ್ಜಿನಲ್ ಆಧಾರ್ ಕಾರ್ಡ್ ಮತ್ತು ಬರ್ತ್ ಸರ್ಟಿಫಿಕೇಟ್ ಕಡ್ಡಾಯವಾಗಿ ಹಾಜರುಪಡಿಸಬೇಕು. ಹೆಚ್ಚಿನ ಮಾಹಿತಿಗಾಗಿ 8951820251 ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಫೆ.3 NEWS DESK : ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ಕೊಡಗು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ. ಉಪಾಧ್ಯಕ್ಷರಾಗಿ ತೆನ್ನೀರ ಟೀನಾ ಚಂಗಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಚಂದನ್ ನಂದರಬೆಟ್ಟು, ಖಜಾಂಚಿಯಾಗಿ ವಿನೋದ್ ಕುಡ್ತೇಕರ್ ನೇಮಕಗೊಂಡಿದ್ದಾರೆ. ನಿರ್ದೇಶಕರುಗಳಾಗಿ ಅರುಣ್ ಕಡಗದಾಳು, ರುಬೀನಾ ಸೋಮವಾರಪೇಟೆ, ರಿಶಾ ಸೋಮವಾರಪೇಟೆ, ಹರ್ಷಿತಾ ಶೆಟ್ಟಿ ಗಾಳಿಬೀಡು, ಕೆ.ಎ.ಸಂಕೇತ್ ಗಾಳಿಬೀಡು, ಮಾಗಲು ಲೋಹಿತ್, ರಂಜಿತ್ ಜಯರಾಂ, ಲೋಕೇಶ್ ಕಾಟಕೇರಿ, ಎಸ್.ಆರ್.ವತ್ಸಲಾ, ಪೇರಿಯಂಡ ಜಯಂತಿ ಉತ್ತಪ್ಪ, ಬಿ.ಎನ್.ಚಿತ್ರಾ ಸುಜನ್, ಅಬ್ದುಲ್ಲಾ ಎಂ.ಎಂ.ವಿಶ್ವ ಕುಂಬೂರು, ಕೆ.ಎಂ.ವಿನೋದ್ ಆಯ್ಕೆಯಾಗಿದ್ದಾರೆಂದು ಬೊಳ್ಳಜಿರ ಬಿ.ಅಯ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶನಿವಾರಸಂತೆ ಫೆ.3 NEWS DESK : ಗುಡುಗಳಲೆಯ ಜಾತ್ರಾ ಸಮಾರೋಪದಲ್ಲಿ ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ಮಹಿಳಾ ಘಟಕದ ವತಿಯಿಂದ ನಡೆಸಿಕೊಟ್ಟ ಶಿವತಾಂಡವ ನೃತ್ಯ ರೂಪಕ ನೋಡುಗರ ಗಮನ ಸೆಳೆಯಿತು. ಕೊಡ್ಲಿಪೇಟೆಯ ಕಿರಿಕೊಡ್ಲಿಮಠ ಹಾಗೂ ಅಂಕನಹಳ್ಳಿ ಮನೆಹಳ್ಳಿ ಮಠದ ಶ್ರೀಗಳು ಸಾನಿಧ್ಯ ವಹಿಸಿದ್ದರು. ವೀರಶೈವ ಮಹಾಸಭಾದ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ದೀಪಿಕಾ ಕರುಣ, ಪ್ರಧಾನ ಕಾರ್ಯದರ್ಶಿ ಲೇಖನಾ ಧರ್ಮೇಂದ್ರ, ಜಿಲ್ಲಾ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಂದೀಶ್, ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಪಿ.ಮಹದೇವಪ್ಪ, ಶಿಕ್ಷಕರಾದ ಶಿವಲಿಂಗ, ಬಸವರಾಜು, ವಿದ್ಯಾ ಸೇರಿದಂತೆ ಇತರರು ಇದ್ದರು.
ಪುತ್ತೂರು ಫೆ.3 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ಮತ್ತು ಮಾನವಿಕ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಅಧ್ಯಾಪಕ ಮಾರ್ಗದರ್ಶಕರಿಗೆ ಉತ್ತಮ ಬೋಧನಾ ಮತ್ತು ಕಲಿಕಾ ಅಭ್ಯಾಸಗಳು ಎನ್ನುವ ವಿಷಯದ ಬಗ್ಗೆ 3 ದಿನಗಳ ಅಧ್ಯಾಪಕರ ಕೌಶಲಾಭಿವೃದ್ಧಿ ಕಾರ್ಯಾಗಾರ ನಡೆಯಲಿದೆ. ಬೋಧಕರಲ್ಲಿ ನವೀನ ಶಿಕ್ಷಣ ಕೌಶಲ್ಯಗಳನ್ನು ಹೆಚ್ಚಿಸುವುದು, ಉತ್ತಮ ಬೋಧನಾ ಪದ್ದತಿಗಳನ್ನು ಅಳವಡಿಸುವ ಮೂಲಕ ಫಲಿತಾಂಶ ಅಧಾರಿತ ಶಿಕ್ಷಣದ ಪರಿಷ್ಕರಣೆ, ಪರಿಣಾಮಕಾರೀ ಮಾರ್ಗದರ್ಶನ ಕೌಶಲಗಳನ್ನು ಅಳವಡಿಸುವುದು, ಸಂವಾದಾತ್ಮಕ ಬೋಧನೆಗಾಗಿ ಡಿಜಿಟಲ್ ಉಪಕರಣಗಳು ಮತ್ತು ತಂತ್ರಜ್ಞಾನದ ಬಳಕೆ ಮತ್ತು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗಾಗಿ ಉತ್ತಮ ಅಭ್ಯಾಸಗಳನ್ನು ಉತ್ತೇಜಿಸುವುದು ಇದೇ ಮುಂತಾದ ವಿಷಯಗಳ ಬಗ್ಗೆ ಪದವಿಪೂರ್ವ, ಪದವಿ, ಇಂಜಿನಿಯರಿಂಗ್, ಬಿ.ಎಡ್ ಉಪನ್ಯಾಸಕರಿಗೆ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ಮಾಹಿತಿಯನ್ನು ನೀಡುವುದಕ್ಕಾಗಿ ಇದನ್ನು ಆಯೋಜಿಸಲಾಗಿದೆ. ಫೆ.5 ರಿಂದ 7ರ ವರೆಗೆ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ಈ ಕಾರ್ಯಕ್ರಮವು ನಡೆಯಲಿದ್ದು, ರಾಜ್ಯಾದ್ಯಂತ ವಿವಿಧ ಕಾಲೇಜುಗಳ ಪ್ರಾಧ್ಯಾಪಕರು ಮತ್ತು ಪ್ರೌಢ…
ನಾಪೋಕ್ಲು ಫೆ.3 NEWS DESK : ಮೂರ್ನಾಡಿನ ಆಪ್ತಮಿತ್ರ ಬಳಗದ ಸೇವಾರ್ಥವಾಗಿ ಫೆ.8 ರಂದು ಮೂರ್ನಾಡಿನಲ್ಲಿ “ಸಾಕೇತ ಸಾಮ್ರಾಜ್ಞೆ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಮೂರ್ನಾಡಿನ ಪಾಂಡಾಣೆ ನಾಡ್ ಮಂದ್ ಶಾಲಾ ಮೈದಾನದಲ್ಲಿ ಅಂದು ಸಂಜೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಹನುಮಗಿರಿಯ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ವತಿಯಿಂದ ಪ್ರದರ್ಶನ ನಡೆಯಲಿದೆ. ಎರಡನೇ ವರ್ಷದ ಕಾರ್ಯಕ್ರಮ ಇದಾಗಿದ್ದು ಊಟೋಪಚಾರ ವ್ಯವಸ್ಥೆ ಇರುತ್ತದೆ. ಹಿಮ್ಮೇಳದಲ್ಲಿ ಭಾಗವತರಾಗಿ ರವಿಚಂದ್ರ ಕನ್ನಡಿಕಟ್ಟೆ, ಕಲ್ಲಡ್ಕ ಚಿನ್ಮಯ ಭಟ್, ಚಂಡೆ ಮತ್ತು ಮದ್ದಳೆ ಕಲಾವಿದರಾಗಿ ದೇಲಂತಮಜಲು ಸುಬ್ರಮಣ್ಯ ಭಟ್, ಚೈತನ್ಯ ಕೃಷ್ಣ ಪದ್ಯಾಣ, ಶ್ರೀಧರ ವಟ್ಲ, ಕೌಶಲ್ ರಾವ್ ಪುತ್ತಿಗೆ ಪಾಲ್ಗೊಳ್ಳಲಿದ್ದಾರೆ. ಹಾಸ್ಯ ಕಲಾವಿದರಾಗಿ ಸೀತಾರಾಮ ಕುಮಾರ್ ಕಟೀಲ್, ಮೋಹನ್ ಮುಚ್ಚುರ್, ಸ್ತ್ರೀ ವೇಷದಲ್ಲಿ ಸಂತೋಷ್ ಕುಮಾರ್ ಹಿಲಿಯಾಣ, ರಕ್ಷಿತ್ ಶೆಟ್ಟಿ ಪಡ್ರೆ, ಸತೀಶ್ ನೀರ್ಕರೆ, ಮಹೇಶ್ ಎಡನೀರು ಭಾಗವಹಿಸಲಿದ್ದಾರೆ. ಮುಮ್ಮೇಳದಲ್ಲಿ ವಾಸುದೇವ ರಂಗ ಭಟ್ ಮಧೂರು, ಸದಾಶಿವ ಕುಲಾಲ್ ವೇಣೂರು,ಪ್ರಸಾದ್ ಸವಣೂರು, ಪೆರ್ಮುದೆ ಜಯಪ್ರಕಾಶ್…
ನಾಪೋಕ್ಲು ಫೆ.3 NEWS DESK : ವಿದ್ಯಾರ್ಥಿಗಳು ನಿರಂತರ ಅಧ್ಯಯನ ಮತ್ತು ಗುರಿಯ ಕಡೆಗೆ ಗಮನ ನೀಡಬೇಕೆಂದು ಕೀಪಾಡಂಡ ಮೊಣ್ಣಪ್ಪ ಹೇಳಿದರು. ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 10ನೇ ತರಗತಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿನಿ ಮುಫೀದಳಿಗೆ ಕೀಪಾಡಂಡ ಬಸಪ್ಪ ಸ್ಮರಣಾರ್ಥ ಸ್ಥಾಪಿಸಿದ ರೂ.7000 ಮೊತ್ತವನ್ನು ವಿತರಿಸಿ ಮಾತನಾಡಿದರು. ದತ್ತಿನಿಧಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಿ.ಎಸ್.ರಾಮಕೃಷ್ಣ, ವಿದ್ಯಾರ್ಥಿಗಳ ಕಲಿಕೆಗೆ ಇದೊಂದು ಪ್ರೇರಣದಾಯಕವಾದ ಅಂಶವಾಗಿದ್ದು, ವಿದ್ಯಾರ್ಥಿಗಳು ಈ ಹಣವನ್ನು ತಮ್ಮ ಮುಂದಿನ ಕಲಿಕೆಗೆ ಬಳಸಿಕೊಳ್ಳುವುದರ ಮೂಲಕ ಉನ್ನತವ್ಯಾಸಂಗವನ್ನು ಮಾಡುವಂತಾಗಲಿ ಎಂದರು. ಶಿಕ್ಷಕರಾದ ಸಿ.ಆರ್.ಲೋಕೇಶ್ ಸ್ವಾಗತಿಸಿದರು. ಎಸ್.ಪಿ.ಪರಮೇಶ್ ವಂದಿಸಿದರು. ವರದಿ : ದುಗ್ಗಳ ಸದಾನಂದ






