ಬೆಂಗಳೂರು ಫೆ.1 NEWS DESK : ದೆಹಲಿಯಲ್ಲೇ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರದ ಬಜೆಟ್ MSP ಬಗ್ಗೆ ಉಸಿರೇ ಬಿಟ್ಟಿಲ್ಲ. ರೈತ ಸಮುದಾಯಕ್ಕೆ ಅತ್ಯಂತ ದೊಡ್ಡ ದ್ರೋಹ, ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರಲ್ಲಿ ಒಬ್ಬರೂ ರಾಜ್ಯದ ಹಿತಾಸಕ್ತಿ ಬಗ್ಗೆ ನೆಪಕ್ಕೂ ಬಾಯಿ ಬಿಟ್ಟಿಲ್ಲ, ರಾಜ್ಯಕ್ಕೆ ಏಕೆ ಚೊಂಬು ಕೊಟ್ಟಿದ್ದೀರಿ ಎಂದು ಬಿಜೆಪಿ-ಜೆಡಿಎಸ್ ಸಂಸದರು ಮತ್ತು ಕೇಂದ್ರ ಸಚಿವರು ಪ್ರಧಾನಿ ಮೋದಿಯವರಿಗೆ ಕೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆಂದ್ರ-ಬಿಹಾರ ಬಿಟ್ಟು ಎಲ್ಲಾ ರಾಜ್ಯಗಳಿಗೂ ಅನ್ಯಾಯ: ಜೆಡಿಎಸ್-ಬಿಜೆಪಿ ದೋಸ್ತಿಯಿದ್ದರೂ ರಾಜ್ಯಕ್ಕೆ ಚೊಂಬು ಸಿಕ್ಕಿದೆ. ಮನುಸ್ಮೃತಿ ವಿರೋಧಿಸಿ-ಸಂವಿಧಾನ ಪರವಾಗಿರುವ ರಾಜ್ಯಗಳ ವಿರುದ್ಧ ಬಿಜೆಪಿ ಸರ್ಕಾರ ಸೇಡು ತೀರಿಸಿಕೊಳ್ಳುತ್ತಿದೆ. ಆದಾಯ ತೆರಿಗೆಯ ಮಿತಿ 12 ಲಕ್ಷ ರೂಪಾಯಿಗಳಿಗೆ ಏರಿಸಿರುವುದನ್ನು ಕೊಂಡಾಡಲಾಗುತ್ತಿದೆ. ನಮ್ಮಲ್ಲಿ ಕಳೆದ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿ ಮಾಡಿದವರು ಕೇವಲ 8.09 ಕೋಟಿ ಜನ ಇದು ನಮ್ಮ ಒಟ್ಟು ಜನಸಂಖ್ಯೆಯ ಶೇ.6.64ರಷ್ಟಾಗತ್ತದೆ ಅವರಲ್ಲಿ 4.90 ಕೋಟಿ ಜನ ಸೊನ್ನೆ ತೆರಿಗೆ ಪಾವತಿ ದಾರರು. ಆದ್ದರಿಂದ…
ಲೇಖಕ: admin
ಮಡಿಕೇರಿ ಫೆ.1 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಹುನಿರೀಕ್ಷಿತ ಕೊಡಗು ಭೇಟಿ ಯಾವುದೇ ಅಭಿವೃದ್ಧಿ ಕಾರ್ಯಗಳ ಕುರಿತು ಭರವಸೆಗಳನ್ನು ಮೂಡಿಸದ ನಿರಾಶಾದಾಯಕ ಭೇಟಿಯಾಗಿತ್ತು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಗೆ ಯಾವುದೇ ಹೊಸ ಅಭಿವೃದ್ಧಿ ಯೋಜನೆಗಳನ್ನು ಮುಖ್ಯಮಂತ್ರಿಗಳು ಘೋಷಿಸಿಲ್ಲ, ಶಂಕುಸ್ಥಾಪನೆ ನೆರವೇರಿಸಿಲ್ಲ. ತಾವು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ ಆರಂಭಿಸಿದ ಭಾಗಮಂಡಲ ಮೆಲ್ಸೇತುವೆ ಯೊಜನೆಯನ್ನು ಎರಡನೇ ಅವಧಿಯ ಅಧಿಕಾರದ ಎರಡು ವರ್ಷಗಳ ನಂತರ ಉದ್ಘಾಟಿಸಿದ್ದಾರೆ. ಇದು ಕೊಡಗು ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ. ಯಾವುದೇ ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸುವಾಗ ಹೊಸ ಯೋಜನೆಗಳು, ಅಭಿವೃದ್ಧಿ ಕಾರ್ಯಗಳು ಮತ್ತು ಭವಿಷ್ಯದ ಭರವಸೆಗಳ ಬಗ್ಗೆ ಜನರಲ್ಲಿ ನಿರೀಕ್ಷೆಗಳಿರುತ್ತವೆ. ಆದರೆ ಸಿದ್ದರಾಮಯ್ಯ ಅವರು ಕೇವಲ ಮೆಲ್ಸೇತುವೆಯನ್ನು ಉದ್ಘಾಟಿಸಿ ಮರಳುವ ಮೂಲಕ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ. ಸಧ್ಯದಲ್ಲೇ ಬಜೆಟ್ ಮಂಡಿಸಲಿರುವ ಮುಖ್ಯಮಂತ್ರಿಗಳು ಕಾವೇರಿ ನಾಡು ಕೊಡಗಿಗೆ ನೀಡುವ ಕೊಡುಗೆಯ…
ಮಡಿಕೇರಿ ಫೆ.1 NEWS DESK : ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಎಎಸ್ಐಗಳಾದ ಬಿ.ಎನ್.ಸತ್ಯಮೂರ್ತಿ ಮತ್ತು ಪಿ.ಡಿ.ಪ್ರಕಾಶ್ ಅವರನ್ನು ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.
ಕಣಿವೆ ಫೆ.1 NEWS DESK : ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿಗೆ ಮಾರಕವಾಗಿರುವ ಮೊಬೈಲ್ ಎಂಬ ಮಾಯಾಪೆಟ್ಟಿಗೆಯನ್ನು ದೂರವಿಟ್ಟು ಪುಸ್ತಕ ಹಿಡಿದು ಅಧ್ಯಯನ ಮಾಡುವ ಮೂಲಕ ಜ್ಞಾನವಂತರಾಗಲು ನಿವೃತ್ತ ಪ್ರಾಂಶುಪಾಲ ಡಾ.ದೇವರಾಜು ಕರೆ ನೀಡಿದರು. ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಪಂಚದಲ್ಲಿ ಜ್ಞಾನಕ್ಕೆ ಇರುವ ಬೆಲೆ ಹಣಕ್ಕಿಲ್ಲ. ಹಣವಂತನನ್ನು ಎಲ್ಲಿಯೂ ಯಾರೂ ಕೂಡ ಸತ್ಕರಿಸಿದ ಉದಾಹರಣೆ ಇಲ್ಲ. ಅದೇ ಕಠಿಣ ಪರಿಶ್ರಮದ ಮೂಲಕ ಜ್ಞಾನವಂತರಾದರೆ ಸಮಾಜವೇ ತನ್ನ ಬಳಿ ಬಂದು ಗೌರವಿಸುತ್ತದೆ ಎಂದರು. ಹಳ್ಳಿಗಾಡಿನಲ್ಲಿ ಪೋಷಕರು ಇಂದಿಗೂ ಕೂಡ ಕಷ್ಟಪಟ್ಟು ಮಕ್ಕಳನ್ನು ಒಳ್ಳೆಯ ಕಾಲೇಜುಗಳಲ್ಲಿ ಓದಿಸುತ್ತಿದ್ದಾರೆ. ಮಕ್ಕಳು ಪೋಷಕರ ಹಣಕಾಸಿನ ಸ್ಥಿತಿಗತಿ ಅರಿಯಬೇಕು. ಹೆತ್ತವರು ಧರಿಸುವ ಹರಿದ ಹಾಗೂ ಹಳೆಯ ಬಟ್ಟೆಗಳ ಬೆವರು ನಿಮ್ಮ ಬದುಕನ್ನು ವರ್ಣರಂಜಿತವಾಗಿಸುತ್ತಿದೆ. ನಿಮ್ಮೊಳಗೆ ಅಡಗಿರುವ ವಿದ್ಯೆ ಹಾಗೂ ಉತ್ತಮ ಸಂಸ್ಕಾರಗಳು ನಿಮ್ಮನ್ನು ಸುಂದರಗೊಳಿಸುತ್ತವೆಯೇ ಹೊರತು, ನೀವು ಧರಿಸುವ ಕಲರ್ ಕಲರ್ ಬಟ್ಟೆಗಳು, ನೀವು ಸುತ್ತಾಡುವ ಬೈಕುಗಳು ಹಾಗೂ…
ವಿರಾಜಪೇಟೆ ಫೆ.1 NEWS DESK : ಯುವ ಸಮುದಾಯ ಭವ್ಯವಾದ ರಾಷ್ಟ್ರ ನಿರ್ಮಾಣಕ್ಕಾಗಿ ಸ್ವಾತಂತ್ರ್ಯಕ್ಕಾಗಿ ಬಲದಾನಗೈದ ಮಹಾನ್ ಚೇತನಗಳಿಂದ ಪ್ರೇರಣೆಯನ್ನು ಪಡೆಯಬೇಕೆಂದು ಕುಮಾರಿ ಶ್ರೀಶಾ ಅವರು ಕರೆ ನೀಡಿದರು. ಹಿಂದೂ ಜಾಗರಣ ವೇದಿಕೆಯ ವಿರಾಜಪೇಟೆ ತಾಲೂಕು ಘಟಕದ ವತಿಯಿಂದ ನಗರದಲ್ಲಿ ಆಯೋಜಿತ ಯುವ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯುವ ಜನಾಂಗದ ಪ್ರೇರಕ ಶಕ್ತಿಯಾಗಿರುವ ಸ್ವಾಮಿ ವಿವೇಕಾನಂದರು ಮತ್ತು ಸೈನಿಕ ಧರ್ಮ ಪರಿಪಾಲನೆ ಮಾಡಿ ರಾಷ್ಟ್ರಕ್ಕಾಗಿ ಬಲಿದಾನಗೈದ ಸುಭಾಷ್ ಚಂದ್ರ ಬೋಸ್ರ ಆದರ್ಶಗಳನ್ನು ಪರಿಪಾಲಿಸಿದಾಗ ಮಾತ್ರ ಸುಭದ್ರ ರಾಷ್ಟ್ರ ನಿರ್ಮಾಣದ ಪರಿಕಲ್ಪನೆ ಸಾಕಾರಗೊಳ್ಳುತ್ತದೆಂದರು. ಅಮ್ಮತ್ತಿಯ ಕಾಫಿ ಬೆಳೆಗಾರರಾದ ಕೆ.ಸಿ.ಪೂಣಚ್ಚ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳ ಬದುಕನ್ನು ಯುವ ಸಮೂº ತಿಳಿಯುವಂತಾಗಬೇಕು. ಪ್ರಸ್ತುತ ಯುವ ಸಮಾಜವು ಮಾದಕ ದ್ರವ್ಯಗಳ ವ್ಯಸನಿಗಳಾಗಿ ಸಮಾಜದ ಸ್ವಾಸ್ಥ್ಯಕ್ಕೆ ಮಾರಕವಾಗುತ್ತಿದ್ದಾರೆಂದು ಕಳವಳ ವ್ಯಕ್ತಪಡಿಸಿ, ಮಾದಕ ವಸ್ತುಗಳ ವಿರುದ್ಧ ಹೋರಾಟ ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ಕೆ ಯುವ ಸಮುದಾಯ ಮುಂದಾಗಬೇಕು ಎಂದರು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ…
ಬೆಂಗಳೂರು ಫೆ.1 NEWS DESK : ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಗುತ್ತಿಗೆ ನೌಕರರ ಸಂಘ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಸಮುದಾಯ ಆರೋಗ್ಯ ಅಧಿಕಾರಿಗಳ ಸಂರಕ್ಷಣಾ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಮತ್ತು ಜಿಲ್ಲೆಯ ಶಾಸಕರುಗಳು ಉಪಸ್ಥಿತರಿದ್ದರು.
ಫೆ.3 ರಿಂದ 9ರ ವರೆಗೆ ವಾರ ಭವಿಷ್ಯ :: (ಡಾ.ಮಹಾಬಲೇಶ್ವರ ಭಟ್, ಮೂರ್ನಾಡು 8105634429) ಮೇಷ ರಾಶಿ :: ಈ ವಾರದಲ್ಲಿ ದೂರ ಪ್ರಯಾಣ, ಧನಾಗಮನ, ಹಿತಶತ್ರುಗಳಿಂದ ಕಿರುಕುಳ, ಹೊಸ ವಸ್ತು ಖರೀದಿ, ಆರೋಗ್ಯದ ಕಡೆ ಎಚ್ಚರ ವಹಿಸಿ. ಶುಭ ಸಂಖ್ಯೆ :: 1, 2, 3, 9 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ ವೃಷಭ ರಾಶಿ :: ಮಕ್ಕಳಿಂದ ಚಿಂತೆ, ಕೋರ್ಟು ಕಚೇರಿ ಕಾರ್ಯದಲ್ಲಿ ಒತ್ತಡ, ಸ್ನೇಹಿತರಿಂದ ಸಹಾಯ, ಮಾನಸಿಕ ಒತ್ತಡ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು ಮಿಥುನ ರಾಶಿ :: ಆರೋಗ್ಯದಲ್ಲಿ ಏರುಪೇರು, ಸಾಮಾಜಿಕ ಕಾರ್ಯದಲ್ಲಿ ಯಶಸ್ಸು, ಆತ್ಮೀಯರಿಂದ ಪ್ರಶಂಸೆ, ಕಚೇರಿ ಕೆಲಸದಲ್ಲಿ ಜಯ. :: ಶುಭಸಂಖ್ಯೆ : 3, 5, 6 :: ಶುಭ ಬಣ್ಣ :: ಕೆಂಪು, ಹಸಿರು. ಕರ್ಕಾಟಕ ರಾಶಿ :: ಸಾಲಗಾರರ ಒತ್ತಡ, ಮನೆಯಲ್ಲಿ ಕಿರಿಕಿರಿ,…
*JOB OPPORTUNITY : TEACHER VACANCY* A reputed school in Virajpet is hiring for high posting positions. We are seeking teachers for all subjects kindergarten/ elementary and head positions. Attractive salary packages and accommodation provided. Join us to shape young minds and grow your career in a supportive environment. For more details, contact 8310384621, Contact:9847490000
ಮಡಿಕೇರಿ ಫೆ.1 NEWS DESK : ವಿರಾಜಪೇಟೆ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ವಿಶೇಷ ಸಭೆಯು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲಾಯಿತು. ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳ ಅಭಿವೃದ್ಧಿಯ ಕುರಿತು ಮಾಹಿತಿ ಪಡೆದ ಶಾಸಕರು, ಮುಂದೆ ನಡೆಯಲಿರುವ ಅಭಿವೃದ್ಧಿ ಕಾಮಗಾರಿಗಳ ಬ್ಲೂಪ್ರಿಂಟ್ ನೀಡಬೇಕೆಂದು ಸೂಚನೆ ನೀಡಿದರು. ಈ ಸಂದರ್ಭ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ನಗರ ಕಾಂಗ್ರೆಸ್ ಅಧ್ಯಕ್ಷರು, ತಮ್ಮ ಕುಂದು ಕೊರತೆಗಳನ್ನು ಶಾಸಕರ ಗಮನಕ್ಕೆ ತಂದರು. ಅಲ್ಲದೇ ಅಭಿವೃದ್ಧಿ ಕಾಮಗಾರಿಗೆ ಬೇಕಾದ ಅನುದಾನಗಳ ಕೊರತೆ ನೀಗಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು. ಬಳಿಕ ಮಾತನಾಡಿದ ಶಾಸಕರು ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್ಗಳ ಜನಸಾಮಾನ್ಯರಿಗೆ ನಿತ್ಯ ಜೀವನ ನಡೆಸುವಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರಲ್ಲದೆ,…
ಮಡಿಕೇರಿ ಫೆ.1 NEWS DESK : ಸುಂದರ ಕೊಡಗು ನಿರ್ಮಾಣ ಮಾಡುವಲ್ಲಿ ಸಾರ್ವಜನಿಕರು ಕೈಜೋಡಿಸಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕರೆ ನೀಡಿದರು. ಕೊಡಗು ಪರಿಸರ ರಕ್ಷಣಾ ಹೋರಾಟ ಸಮಿತಿ ವತಿಯಿಂದ ವಿರಾಜಪೇಟೆಯಲ್ಲಿ ನಡೆದ ಪರಿಸರ ಜಾಗೃತಿ ಜಾಥಾವನ್ನು ಉದ್ಘಾಟಿಸಿ ಮಾತನಾಡಿದರು. ರಕ್ಷಣಾ ಹೋರಾಟ ಸಮಿತಿಯ ಕಾರ್ಯ ಶ್ಲಾಘನೀಯ. ಪರಿಸರಸ್ವಚ್ಛ ಹಾಗೂ ಪರಿಶುದ್ಧ ಕೊಡಗು ಜಿಲ್ಲೆಯ ಪರಿಕಲ್ಪನೆ ಈಡೇರಲು ಎಲ್ಲರ ಸಹಕಾರ ಅತಿ ಮುಖ್ಯ ಎಂದರು. ಪರಿಸರ ಎಂದರೆ ಭೂ ದೇವಿಯ ಮಡಲಿನ ನೀರು, ಗಾಳಿ ಹಾಗೂ ಇನ್ನಿತರ ಎಲ್ಲಾ ಪ್ರಾಕೃತಿಕ ವಿಷಯಗಳಲ್ಲೂ ಸ್ವಚ್ಛತೆ ಕಾಪಾಡುವುದರ ಮೂಲಕ ಜನರ ಆರೋಗ್ಯಕ್ಕೆ ಮತ್ತು ಸುಂದರ ಕೊಡಗು ನಿರ್ಮಾಣ ಮಾಡುವಲ್ಲಿ ಹಾಗೂ ಆಧುನಿಕ ಯುಗಕ್ಕೆ ಜನ ಮಾರುಹೋದರೂ ಸ್ವಚ್ಛತೆ ಬಗ್ಗೆ ಸದಾ ಗಮನದಲ್ಲಿ ಇಟ್ಟುಕೊಂಡು ಪರಿಸರವನ್ನು ಸಂರಕ್ಷಿಸುವಲ್ಲಿ ಸಾರ್ವಜನಿಕರು ಕೈಜೋಡಿಸಬೇಕೆಂದು ಕರೆ ನೀಡಿದರು.






