ಮಡಿಕೇರಿ ಜ.31 NEWS DESK : ಕೊಡಗು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದರು. ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಕಾವೇರಿ ಹೈಸ್ಕೂಲ್ ಆವರಣದ ಹೆಲಿಪ್ಯಾಡ್ಗೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್ ಪೊನ್ನಣ್ಣ , ಶಾಸಕರಾದ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕಾಂಗ್ರೆಸ್ ಮುಖಂಡ ಟಿ.ಪಿ.ರಾಮೇಶ್ ಹಾಜರಿದ್ದರು. ಇದೇ ಸಂದರ್ಭ ಸಶಸ್ತ್ರ ಪಡೆಗಳಿಂದ ಮುಖ್ಯಮಂತ್ರಿಗಳಿಗೆ ಗೌರವ ಸಲ್ಲಿಸಲಾಯಿತು.
ಲೇಖಕ: admin
ಸೋಮವಾರಪೇಟೆ ಜ.31 NEWS DESK : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಿ.ಬಿ. ಸೋಮಯ್ಯ ಮತ್ತು ಉಪಾಧ್ಯಕ್ಷರಾಗಿ ಹೆಚ್.ಕೆ. ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾದರು. ಒಟ್ಟು 13 ಮಂದಿ ನಿರ್ದೇಶಕರಿರುವ ಸಂಘಕ್ಕೆ ಇಂದು ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಚುನಾವಣೆ ನಿಗಧಿಯಾಗಿತ್ತು. ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಬಿ.ಬಿ.ಸಂದೀಪ್ ಅವಿರೋಧ ಆಯ್ಕೆಯಾಗಿರುವುದಾಗಿ ಘೊಷಣೆ ಮಾಡಿದರು. ರೂಪಸತೀಶ್, ಕೃಷ್ಣ, ರವಿರಾಜ್, ಹೆಚ್.ಕೆ.ಮಾದಪ್ಪ, ಬಿ.ಎಂ. ಸುರೇಶ್, ಕೆ.ಕೆ.ಚಂದ್ರಿಕಾ, ಬಿ.ಶಿವಪ್ಪ, ಎಂ.ವಿ.ದೇವರಾಜು, ಬಿ.ಕೆ.ಉದಯ ಕುಮಾರ್, ಬಿ.ಜೆ.ದೀಪಕ್, ಸುಭಾಷ್ ಇದ್ದರು. ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ಇಲಾಖೆಯ ಬಿ.ಬಿ.ಸಂದೀಪ ಹಾಗೂ ಸಂಘದ ವ್ಯವಸ್ಥಾಕ ರವೀಂದ್ರ ಇದ್ದರು.
ಬೆಂಗಳೂರು ಜ.31 NEWS DESK : 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಸೇರಿಸಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯದ ವಿವಿಧ ಬೇಡಿಕೆಗಳನ್ನು ಸಲ್ಲಿಸಿದರು. ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಅನುಸರಿಸುತ್ತಿರುವ ತಾರತಮ್ಯ ಧೋರಣೆ ಜಗಜ್ಜಾಹೀರಾಗಿದೆ. ನಮ್ಮ ಒಕ್ಕೂಟ ವ್ಯವಸ್ಥೆಯು ಬಲಿಷ್ಠವಾಗಿರಬೇಕೆಂದರೆ ಕೇಂದ್ರ ಸರ್ಕಾರವು ತಾರತಮ್ಯರಹಿತ, ನ್ಯಾಯಸಮ್ಮತ, ಪಾರದರ್ಶಕ ನೀತಿಯನ್ನು ತನ್ನದಾಗಿಸಿಕೊಳ್ಳಬೇಕು. ರಾಜ್ಯಗಳನ್ನು ಸಂಪನ್ಮೂಲ ಸಂಗ್ರಹಣೆ ಮಾಡುವ ಘಟಕಗಳೆಂದು ನೋಡದೆ, ಅವುಗಳ ಕಷ್ಟನಷ್ಟಗಳಿಗೆ ಮಾನವೀಯವಾಗಿ ಸ್ಪಂದಿಸಬೇಕು. ತೆರಿಗೆ ಪಾಲಿನ ಹಂಚಿಕೆಯೂ ಸೇರಿದಂತೆ ರಾಜ್ಯಗಳಿಗೆ ಸಂಪನ್ಮೂಲ ಹಂಚಿಕೆ ಮಾಡುವ ವಿಷಯದಲ್ಲಿ ವೈಜ್ಞಾನಿಕವಾದ ಮಾನದಂಡಗಳನ್ನು ಅನುಸರಿಸಬೇಕು. ವಿಶೇಷವಾಗಿ, ಕರ್ನಾಟಕವೂ ಸೇರಿದಂತೆ ಅಭಿವೃದ್ಧಿ ಪಥದಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳ ಆದ್ಯತೆಗಳನ್ನು ಗುರುತಿಸಿ ಸಂಪನ್ಮೂಲ ಹಂಚಿಕೆಯ ವಿಚಾರದಲ್ಲಿ ಅವುಗಳಿಗೆ ಹೆಚ್ಚಿನ ಶಕ್ತಿಯನ್ನು ತುಂಬಬೇಕು, ಅವುಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಇದರಿಂದ ದೇಶಕ್ಕೆ ಹೆಚ್ಚು ಲಾಭವಿದ್ದು, ಈ ರಾಜ್ಯಗಳ ಸಾಧನೆಯ ಪಾಲು ಇತರೆ ರಾಜ್ಯಗಳಿಗೂ ಸಹಜವಾಗಿಯೇ ಸಲ್ಲುತ್ತದೆ. ಈ…
ಮಡಿಕೇರಿ ಜ.31 NEWS DESK : ಅಲ್ಲಿ ಭಾಷಣ ಇರಲಿಲ್ಲ. ವೇದಿಕೆಯೂ ಇರಲಿಲ್ಲ, ಅಲ್ಲಿ ಕೇಳಿ ಬಂದದ್ದು ಸುಮಧುರ ಭಜನೆ, ಕೀತ೯ನೆಗಳು ಮಾತ್ರ. ಎರಡೂವರೆ ಗಂಟೆ ಕಾಲ ಕಲಾಪ್ರೇಮಿಗಳ ಮನಸೂರೆಗೊಂಡ ಈ ಕಾಯ೯ಕ್ರಮದ ಮೂಲಕ ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ ವತಿಯಿಂದ ಗಾಂಧೀಜಿಯವರಿಗೆ ಗೀತನಮನ ಸಮಪಿ೯ಸಲಾಯಿತು. ಇಂಥದ್ದೊಂದು ವಿಶಿಷ್ಟ ಕಾಯ೯ಕ್ರಮಕ್ಕೆ ಮಡಿಕೇರಿಯ ಗಾಂಧಿ ಭವನ ಸಾಕ್ಷಿಯಾಯಿತು. ಗಾಂದೀಜಿಯವರಿಗೆ ಹಾಡುಗಳ ಮೂಲಕ ಗೌರವ ನಮನ ಸಲ್ಲಿಸುವ ನಿಟ್ಟಿನಲ್ಲಿ ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್, ಸಂಸ್ಥೆಯು ಕೊಡಗು ಜಾನಪದ ಪರಿಷತ್, ಜಿಲ್ಲಾ ವಾತಾ೯ ಮತ್ತು ಸಾವ೯ಜನಿಕ ಸಂಪಕ೯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 2 ನೇ ವಷ೯ದ ಗಾಂಧೀಜಿ ಗೀತ ನಮನ ಸತ್ಯಂ ಶಿವಂ ಸುಂದರಂ ಕಾಯ೯ಕ್ರಮ ಅನೇಕ ಕಲಾವಿದರ ಕಲಾಪ್ರೆತಿಬೆ ಬೆಳಕಿಗೆ ತರಲು ಸಹಕಾರಿಯಾಯಿತು. ಕಾಯ೯ಕ್ರಮವನ್ನು ಹಿರಿಯ ಲೇಖಕಿ ರಾಜಲಕ್ಷ್ಮಿ ಗೋಪಾಲಕೃಷ್ಣ, ಅಂಬೆಕಲ್ ಸುಶೀಲಾ ಕುಶಾಲಪ್ಪ, ಅಲೆಮಾಡ ಚಿತ್ರಾ ನಂಜಪ್ಪ ದೀಪಬೆಳಗಿಸಿ ಉದ್ಘಾಟಿಸಿದರು. ನಂತರ ಎರಡೂವರೆ ಗಂಟೆ ಕಾಲ ಅನೇಕ ಗಾಯಕ, ಗಾಯಕಿಯರು ದೇಶಭಕ್ತಿಗೀತೆ,…
ಮೈಸೂರು ಜ.31 NEWS DESK : ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ ದರ್ಶನ ಪಡೆದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜಾತ್ಯತೀತ ಸಮಾಜ ನಿರ್ಮಾಣ ಸಂವಿಧಾನದ ಮೂಲ ಉದ್ದೇಶ. ಶರಣಶ್ರೇಷ್ಠರಾದ ಬಸವಾದಿ ಶರಣರ ಆಶಯವೂ ಆಗಿದೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ಬಸವಣ್ಣನವರ ಆಶಯದಂತೆ ಜಾತಿ, ಧರ್ಮದ ಹೆಸರಿನ ಮನುಷ್ಯ ತಾರತಮ್ಯ ಹಾಗೂ ಮೌಡ್ಯಗಳನ್ನು ತೊರೆಯಬೇಕು ಎಂದು ಕರೆ ನೀಡಿದರು. ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರ್ಯ ಆರ್ಥಿಕವಾಗಿ, ಸಮಾಜಿಕವಾಗಿ ಇಲ್ಲ . ಇದು ಸಿಗದ ಹೊರತು ಸ್ವಾತಂತ್ರ್ಯದ ಆಶಯ ಪೂರ್ತಿ ಆಗುವುದಿಲ್ಲ ಎನ್ನುವ ಮಾತನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಜಾರಿ ಸಭೆಯಲ್ಲೇ ಹೇಳಿದ್ದರು. ಅವತ್ತಿನ ಅವರು ಮಾತು ಇವತ್ತಿಗೂ ಸತ್ಯ…
ಸುತ್ತೂರು ಜ.31 NEWS DESK : ಶ್ರೀ ಕ್ಷೇತ್ರ ಸುತ್ತೂರು ಮಠದ ಮಹದೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.
ಮಡಿಕೇರಿ ಜ.31 NEWS DESK : ಸುಂಟಿಕೊಪ್ಪ ಮಹಾತ್ಮ ಗಾಂಧಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮಹಾತ್ಮ ಗಾಂಧೀಯವರ ಪುಣ್ಯ ಸ್ಮರಣೆ ಮತ್ತು ಹುತಾತ್ಮ ದಿನವನ್ನು ಆಚರಿಸಲಾಯಿತು. ಗಾಂಧೀಜಿಯವರು ಕೊಡಗಿಗೆ ಭೇಟಿ ನೀಡಿದ ಮನೆ ಸ್ವರ್ಣಾಲಯದ ಮುಂಭಾಗದಲ್ಲಿ ಮೆಮೋರಿಯಲ್ ಟ್ರಸ್ಟ್ ನ ಟ್ರಸ್ಟಿಗಳು ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ಮಾತನಾಡಿದ ಕಾರ್ಯದರ್ಶಿ ಡೆನಿಸ್ ಡಿಸೋಜಾ ಮಹಾತ್ಮ ಗಾಂಧೀಯವರು ದೇಶಕ್ಕೆ ನೀಡಿದ ಕೊಡುಗೆ ಅಪಾರ, ಅವರ ಶಾಂತಿ ಮಾರ್ಗದ ಹೋರಾಟ ಇಂದಿನ ಯುವ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ. ಗಾಂಧೀಜಿಯವರ ವಿಚಾರಧಾರೆಗಳ ಬಗ್ಗೆ ಅಧ್ಯಯನ ನಡೆಸಬೇಕು. ಪ್ರತಿಯೊಬ್ಬ ಯುವ ಪೀಳಿಗೆಯು ಅವರ ವಿಚಾರಧಾರೆಯ ಪುಸ್ತಕಗಳನ್ನು ಅಧ್ಯಯನಮಾಡಬೇಕೆಂದು ಸಲಹೆ ನೀಡಿದರು. ಈ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಸಂಚಾಲಕ ಎಂ.ಇ ಮೊಹಿದ್ದೀನ್, ಖಜಾಂಚಿ ರಮೇಶ್ ಪಿಳ್ಳೆ, ಟ್ರಸ್ಟಿಯಾದ ಕರ್ನಲ್ ಕುಮಾರ್ ಉಪಸ್ಥಿತರಿದ್ದರು.
ಕುಶಾಲನಗರ ಜ.31 NEWS DESK : ಬೆಂಗಳೂರು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವತಿಯಿಂದ ಕೊಡಮಾಡುವ 2024 -25 ನೇ ಸಾಲಿನ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ರಾಜ್ಯ ಮಟ್ಟದ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಕುಶಾಲನಗರದ ಕೆ.ಎಸ್.ಮೂರ್ತಿ ಆಯ್ಕೆಯಾಗಿದ್ದಾರೆ. ಫೆ.5 ರಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕೆ.ಎಸ್.ಮೂರ್ತಿ ಅವರ ಕ್ರಿಯಾ ಶೀಲ ಸಾಹಿತ್ಯಪರ ಚಟುವಟಿಕೆಗಳನ್ನು ಮನಗಂಡು ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಸಂಸ್ಥೆಯ ಮುಖ್ಯಸ್ಥರಾದ ಡಾ.ಎಸ್.ಬಾಲಾಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜ.31 NEWS DESK : ಬೆಂಗಳೂರಿನಲ್ಲಿ ನಡೆದ ಎಂ.ಇ.ಜಿ ( ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ )ಗೆ ಕೊಡಗಿನ ತ್ರಿವೇಣಿ ವಿದ್ಯಾಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿ ಸಿ.ಎಂ.ಚಿಣ್ಣಪ್ಪ ಆಯ್ಕೆಯಾಗಿದ್ದಾನೆ. ಚೋಳಂಡ ಮಾದಪ್ಪ ಹಾಗೂ ಶಾಲಿನಿ ದಂಪತಿಯ ಪುತ್ರನಾಗಿರುವ ಚಿಣ್ಣಪ್ಪಗೆ ಕೂತಂಡ ಸಚಿನ್ ತರಬೇತಿ ನೀಡಿದ್ದಾರೆ.
ನಾಪೋಕ್ಲು ಜ.31 NEWS DESK : ಉತ್ತರಖಂಡದ ಹರಿದ್ವಾರದಲ್ಲಿ ಫೆ.2 ರಿಂದ 13 ರವರೆಗೆ ನಡೆಯಲಿರುವ ರಾಷ್ಟ್ರೀಯ ಗೇಮ್ಸ್ ಹಾಕಿ ಪಂದ್ಯಾವಳಿಯಲ್ಲಿ ತೀರ್ಪುಗಾರರಾಗಿ (ಅಂಪೈರ್) ಕೊಡಗಿನ ಹರ್ಷಿತ್ ಅಯ್ಯಪ್ಪ ನೇಮಕಗೊಂಡಿದ್ದಾರೆ. ಪ್ರಸ್ತುತ ಹಾಕಿ ಇಂಡಿಯಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಹರ್ಷಿತ್ ಅಯ್ಯಪ್ಪ, ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ ಗ್ರಾಮದ ಅಪ್ಪಚೆಟ್ಟೋಳಂಡ ಬೋಪಯ್ಯ ಹಾಗೂ ಭೋಜಮ್ಮ ದಂಪತಿಯ ಪುತ್ರ. ವರದಿ : ದುಗ್ಗಳ ಸದಾನಂದ.






