ನಾಪೋಕ್ಲು ಜ.31 NEWS DESK : ಉತ್ತರಖಂಡದ ಹರಿದ್ವಾರದಲ್ಲಿ ಫೆ.2 ರಿಂದ 13 ರವರೆಗೆ ನಡೆಯಲಿರುವ ರಾಷ್ಟ್ರೀಯ ಗೇಮ್ಸ್ ಹಾಕಿ ಪಂದ್ಯಾವಳಿಯಲ್ಲಿ ತೀರ್ಪುಗಾರರಾಗಿ (ಅಂಪೈರ್) ಕೊಡಗಿನ ಹರ್ಷಿತ್ ಅಯ್ಯಪ್ಪ ನೇಮಕಗೊಂಡಿದ್ದಾರೆ. ಪ್ರಸ್ತುತ ಹಾಕಿ ಇಂಡಿಯಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಹರ್ಷಿತ್ ಅಯ್ಯಪ್ಪ, ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ ಗ್ರಾಮದ ಅಪ್ಪಚೆಟ್ಟೋಳಂಡ ಬೋಪಯ್ಯ ಹಾಗೂ ಭೋಜಮ್ಮ ದಂಪತಿಯ ಪುತ್ರ. ವರದಿ : ದುಗ್ಗಳ ಸದಾನಂದ.
ಲೇಖಕ: admin
ಮಡಿಕೇರಿ ಜ.31 NEWS DESK : ಕೊಡಗಿನ ಪವಿತ್ರ ಕ್ಷೇತ್ರ ಭಾಗಮಂಡಲದಲ್ಲಿ ಲೋಕಾರ್ಪಣೆಗೊಳ್ಳುತ್ತಿರುವ ಭಾಗಮಂಡಲ ತಲಕಾವೇರಿ ರಸ್ತೆ ಸಂಪರ್ಕಿಸುವ ಮೇಲ್ಸೇತುವೆಗೆ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಹೆಸರನ್ನು ಇಟ್ಟು ಅವರ ಪುತ್ಥಳಿಯನ್ನು ಸ್ಥಾಪಿಸಬೇಕೆಂದು ಗೌಡ ಸಂಘಟನೆಗಳು ಒತ್ತಾಯಿಸಿದೆ. ಭಾಗಮಂಡಲದ ಗ್ರಾಮ ಪಂಚಾಯತಿಯ ಪಿಡಿಒ ನಂದ ಅವರಿಗೆ ಮನವಿ ಸಲ್ಲಿಸಿದ ಭಾಗಮಂಡಲ ಗೌಡ ಸಮಾಜ, ಕಾರುಗುಂದ ಗೌಡ ಸಮಾಜ, ಕೊಡಗು ಗೌಡ ವಿದ್ಯಾಸಂಘ, ಭಾಗಮಂಡಲ ನಾಡು ಗೌಡ ಯುವ ಒಕ್ಕೂಟದ ಪ್ರಮುಖರು, ಕೆದಂಬಾಡಿ ರಾಮಯ್ಯ ಗೌಡರ ಚಾಣಾಕ್ಷ ನಡೆಗಳು ಇಡೀ ರೈತ ಹೋರಾಟವನ್ನು ನಿಯಂತ್ರಿಸಿ ಯಶಸ್ಸು ಕಂಡಿದ್ದು ಅವಿಸ್ಮರಣೀಯ. ತಮ್ಮ ಸರ್ವಸ್ವವನ್ನು ಸ್ವಾತಂತ್ರ್ಯ ಹೋರಾಟಕ್ಕೆ ಧಾರೆಯೆರೆದ ರಾಮಯ್ಯ ಗೌಡರ ಶ್ರೇಷ್ಠ ನಾಯಕತ್ವ ಮಂಗಳೂರಿನ ಬಾವುಟಗುಡ್ಡೆಯಲ್ಲಿ ಬ್ರಿಟೀಷರ ಧ್ವಜವನ್ನು ಕೆಳಗಿಳಿಸಿ ಕ್ರಾಂತಿ ಧ್ವಜವನ್ನು ಏರಿಸಿ 13 ದಿನಗಳ ಕಾಲ ರಾಜ್ಯಭಾರ ಮಾಡಿ ಸ್ವಾತಂತ್ರ್ಯವನ್ನು ಗಳಿಸಿತು. ಇಂತಹ ಸ್ವಾತಂತ್ರ್ಯ ವೀರರನ್ನು ಗುರುತಿಸುವ, ಅವರ ಸಾಧನೆಗಳನ್ನು ಶಾಶ್ವತವಾಗಿಸುವ ಕೆಲಸವಾಗಬೇಕಿದೆ. ಈ ನಿಟ್ಟಿನಲ್ಲಿ ಮೇಲ್ಸೇತುವೆಗೆ ಕೆದಂಬಾಡಿ ರಾಮಯ್ಯ…
ಮಡಿಕೇರಿ NEWS DESK ಜ.31 : ಹಿಂದೂ ಜಾಗರಣಾ ವೇದಿಕೆ ವತಿಯಿಂದ ಯುವ ಸಮಾವೇಶದ ಪ್ರಯುಕ್ತ ಹಿಂದೂ ಯುವ ಸಮೂಹದ ಜಾಗೃತಿಗಾಗಿ ಮಡಿಕೇರಿಯ ಪ್ರಮುಖ ಬೀದಿಗಳಲ್ಲಿ ಜಾಗೃತಿ ಬೈಕ್ ಜಾಥಾ ನಡೆಯಿತು.
ಮಡಿಕೇರಿ ಜ.31 NEWS DESK : ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಪ್ರತಿಷ್ಠಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದಲ್ಲಿ ನಿರ್ಮಿಸಲಾದ ನೂತನ ರಾಜಗೋಪುರವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ದೇವರಿಗೆ ಪ್ರಾರ್ಥನೆ ಸಲ್ಲಿಸಿ, ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ ತಿಹಾಸ ಪ್ರಸಿದ್ಧ ಶ್ರೀ ಶಾಸ್ತಾವು ದೇವರ ಆಶೀರ್ವಾದ ನಾಡಿನ ಎಲ್ಲರ ಮೇಲೆ ಇರಲಿ ಎಂದು ಹಾರೈಸಿದರು. ಜೀವನದಲ್ಲಿ ಯಶಸ್ಸು ಕಾಣಲು ನಮ್ಮ ಪ್ರಯತ್ನದೊಂದಿಗೆ ದೇವರ ಆಶೀರ್ವಾದ ಬೇಕೇಬೇಕು. ಸದ್ಭಾವನೆಯಿಂದ ಸಮಾಜದಲ್ಲಿ ಎಲ್ಲರೂ ಒಂದೇ, ಎಲ್ಲರೂ ಸಹಬಾಳ್ವೆಯಿಂದ ಬಾಳಬೇಕು ಎಂಬ ಭಾವನೆಯಿಂದ ಕೆಲಸ ಮಾಡಿದರೆ ದೇವರು ಖಂಡಿತ ಆಶೀರ್ವಾದ ಮಾಡುತ್ತಾನೆ ಎಂದು ಹೇಳಿದರು. ಈ ಸಂದರ್ಭ ಪೆರಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಜೈರಾಮ್ ಪೆರುಮುಂಡ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ದೇವಸ್ಥಾನದ ಆಡಳಿತ ಮಂಡಳಿ ಮುಖಂಡರು, ಪದಾಧಿಕಾರಿಗಳು,ಗ್ರಾಮಸ್ಥರು ಉಪಸ್ಥಿತರಿದ್ದರು.
ವಿರಾಜಪೇಟೆ ಜ.31 NEWS DESK : ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮುಂಖಡರ ಸಭೆ ವಿರಾಜಪೇಟೆ ನಗರದ ಪುರಭವನದಲ್ಲಿ ನಡೆಯಿತು. ವಿರಾಜಪೇಟೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸ್ಥಾನ 2010ರಿಂದಲೂ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡಿಲ್ಲ. ಆದುದರಿಂದ ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಕೆ.ಸತೀಶ್ ಮಾತನಾಡಿ ಕಾಂಗ್ರೆಸ್ನ ವೋಟ್ ಬ್ಯಾಂಕಿನಲ್ಲಿ ಪ್ರಮುಖ ಪಾತ್ರವಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಅಧ್ಯಕ್ಷ ಸ್ಥಾನ ಕೇಳುತ್ತಿದ್ದೇನೆ. ನಮ್ಮಲ್ಲಿ ಯಾರಾದರೊಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂದರು. ಪುರಸಭೆ ಸದಸ್ಯ ರಾಜೇಶ್ ಪದ್ಮನಾಭ ಮಾತನಾಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನಿಭಾಯಿಸಲು ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ನಾಯಕರುಗಳು ಸಮರ್ಥರಿದ್ದೇವೆ. 2010ರಿಂದಲೂ ಸಿಗದೆ ಇರುವ ಅವಕಾಶವನ್ನು ಈ ಬಾರಿ ಈ ಎರಡು ಸಮುದಾಯಗಳಲ್ಲಿ ಯಾರಿಗಾದರೂ ನೀಡಿ ಸಾಮಾಜಿಕ ನ್ಯಾಯ ಒದಗಿಸಿ ಎಂದರು.…
ಸುಂಟಿಕೊಪ್ಪ ಜ.31 NEWS DESK : ದೇಹದಲ್ಲಿ ಉಂಟಾಗುವ ಕೆಲವು ಭಾದೆಗಳನ್ನು ಫೂಟ್ ಪಲ್ಸ್ ಥೆರಪಿಯಿಂದ ಯಾವುದೇ ಚಿಕಿತ್ಸೆಗಳನ್ನು ಪಡೆದುಕೊಳ್ಳದೆಯೇ ಮುಕ್ತಿ ಹೊಂದಬಹುದಾಗಿದೆ ಎಂದು ಕಂಪಾನಿಯೋ ಕಂಪನಿ ಸಂಸ್ಥೆ ಮುಖ್ಯಸ್ಥ ರತ್ನಾಕರ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು. ಸುಂಟಿಕೊಪ್ಪ ಲಯನ್ಸ್ ಕ್ಲಬ್ ಹಾಗೂ ಕಂಪಾನಿಯೋ ಕಂಪನಿ ಸಹಯೋಗದಲ್ಲಿ ಮಾದಾಪುರ ರಸ್ತೆಯ ಮಂಜುನಾಥಯ್ಯ ಮಿನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಲಾಗಿರುವ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದಲ್ಲಿ ಮಾಹಿತಿ ಕಾರ್ಯಾಗಾರ ನೀಡಿದರು. ಫೂಟ್ ಪಲ್ಸ್ ಥೆರಪಿಯಿಂದ ಆಗುವ ಪ್ರಯೋಜನದ ಬಗ್ಗೆ ಮಾಹಿತಿ ನೀಡಿ ಉತ್ತಮ ಆರೋಗ್ಯದಿಂದ ಜೀವನ ನಡೆಸುವಂತೆ ಕರೆ ನೀಡಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಶಶಾಂಕ್ ಶ್ರೀನಿವಾಸ್ ಕಾರ್ಯಾಗಾರವನ್ನು ಉದ್ಘಾಟಿಸಿದರು. ಈ ಸಂದರ್ಭ ಲಯನ್ಸ್ ಕ್ಲಬ್ ಕಾರ್ಯದರ್ಶಿ ಗ್ಲೇನ್ ಮೆನೇಜಸ್, ಕೋಶಾಧಿಕಾರಿ ಪ್ರೀತಮ್ ಪ್ರಭಾಕರ್, ಹಿರಿಯ ಸದಸ್ಯರಾದ ಶ್ರೀನಿವಾಸ್ ಎಸ್.ಜಿ.ಪೆಮ್ಮಯ್ಯ, ಯಶೋಧರ್ ಪೂಜಾರಿ, ಕೆ.ಪಿ.ಜಗನಾಥ್, ಪಿ.ಜಿ.ಪೆಮ್ಮಯ್ಯ ಸಿ.ಟಿ.ಪೊನ್ನಪ್ಪ, ಹಾಜರಿದ್ದರು.
ಸುಂಟಿಕೊಪ್ಪ ಜ.31 NEWS DESK : ಶಿಕ್ಷಣವನ್ನು ಉತ್ತೇಜಿಸುವ ದಿಸೆಯಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಕ್ಕಳ ಶಿಕ್ಷಣಕ್ಕೆ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಡೆಸ್ಕ್ ಬೆಂಚ್ ವಿತರಿಸುತ್ತಿರುವುದು ಮಹತ್ಕಾರ್ಯವೆಂದು ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಜಗದೀಶ್ ಹೇಳಿದರು. ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಂಚ್ ಡೆಸ್ಕ್ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕವಾಗಿ ಸಮುದಾಯಕ್ಕೆ ಪ್ರೇರಣೆಯಾಗುವಂತಹ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದರು. ಶಿಕ್ಷಣಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ಸರಕಾರಿ, ಅನುದಾನಿತ ಶಾಲೆ ಹಾಗೂ ಖಾಸಗಿ ಶಾಲೆಗಳಿಗೆ ಅವರ ಬೇಡಿಕೆ ಅನುಸಾರ ಬೆಂಚ್ ಡೆಸ್ಕ್ಗಳನ್ನು ವಿತರಿಸುವ ಮೂಲಕ ಶಿಕ್ಷಣಕ್ಕೆ ಆದ್ಯತೆ ನೀಡಿರುವುದು ಹರ್ಷದಾಯಕ ವಿಚಾರವಾಗಿದೆ ಎಂದು ಹೇಳಿದರು. ಮಡಿಕೇರಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಸುಮಾರು 19 ಶಾಲೆಗಳು ಬೇಡಿಕೆ ಸಲ್ಲಿಸಿದಷ್ಟು 159 ಬೆಂಚ್ ಡೆಸ್ಕ್ ವಿತರಣೆ ಮಾಡಲಾಗಿದೆ ಎಂದು ಯೋಜನಾಧಿಕಾರಿ ಪುರುಷೋತ್ತಮ್ ಮಾಹಿತಿ ನೀಡಿದರು.…
ಬೆಂಗಳೂರು NEWS DESK ಜ.30 : ಮೊನ್ನೆಯಷ್ಟೆ ತಂದೆಯ ಪಿಂಡ ಪ್ರಧಾನ ಕಾರ್ಯಕ್ಕೆ ಭಾಗಮಂಡಲ ಹೋಗಿದ್ದೆ. ಕಾವೇರಿ ಸಂಗಮದ ಆ ಬದಿಯಲ್ಲಿ ಕಾರ್ಯ ನೆರವೇರಿಸುತ್ತಿರುವಾಗ ಫಳ ಫಳನೆ ಹೊಳೆಯುತ್ತಿದ್ದ ಫ್ಲೈ ಓವರ್ ಕಾಣಿಸಿತು. ಅರೇ ಇದೇನಿದು ಫ್ಲೈ ಓವರ್ ಸಿದ್ದವಾಗಿದೆ. ವಾಹನಗಳು ಸಂಚರಿಸುತ್ತಿವೆ. ಒಮ್ಮಗೆ ಆಶ್ಚರ್ಯ ಆಯ್ತು. ಕೈಂಕರ್ಯ ಮುಗಿಸಿದ ಬಳಿಕ ಅದೇ ಫ್ಲೈ ಓವರ್ ಕೆಳಗೆ ಹೋಗಿ ಸಂಪೂರ್ಣ ವೀಕ್ಷಿಸಿದೆ. ಫ್ಲೈ ಓವರ್ ನೋಡುತ್ತಿದ್ದಂತೆ 28 ವರ್ಷ (1997) ಹಿಂದಕ್ಕೆ ಜಾರಿದೆ. ಹಳೆಯ ನೆನಪುಗಳು ಎಳೆ ಎಳೆಯಾಗಿ ಹೊರ ಹೊಮ್ಮತೊಡಗಿದವು. ಅದು 1997. ಶಕ್ತಿ ಪತ್ರಿಕೆಯಲ್ಲಿ ಉಪಸಂಪಾದಕನಾಗಿ ಕೆಲಸ ಮಾಡುತ್ತಿದ್ದೆ. ಒಂದು ವರ್ಷದಲ್ಲಿ ಕೊಡಗಿನ ಒಂದಷ್ಟು ಗಮನಾರ್ಹ ವಿಚಾರಗಳನ್ನು, ಸಮಸ್ಯೆಗಳನ್ನ ಕಣ್ಣಾರೆ ಕಂಡಿದ್ದೆ. 1998ರ ಮಳೆಗಾಲ. ಎಂದಿನಂತೆ ಭಾಗಮಂಡಲ ಕಾವೇರಿ, ಕನ್ನಿಕೆ ನದಿ ಪ್ರವಾಹದಿಂದ ಜಲಾವೃತ್ತಗೊಂಡಿತ್ತು. ನಾನು ಈ ಸುದ್ದಿ ಫಾಲೋ ಅಪ್ ಮಾಡುತ್ತಿದ್ದೆ. ಎಲ್ಲಾ ಕಡೆಯಿಂದ ಸಂಪರ್ಕ ಕಡಿತಗೊಂಡು ದ್ವೀಪದಂತಾದ ಭಾಗಮಂಡಲ ಎಂದು ಬರೆದಿದ್ದೆ. ಭಾಗಮಂಡಲ – ತಲಕಾವೇರಿ – ಅಯ್ಯಂಗೇರಿ…
ಮಡಿಕೇರಿ NEWS DESK ಜ.30 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಾಲಯದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ವಾಹನ ನೀಡಿ ಸಹಕರಿಸಿದ ಆರೋಪದಡಿ ಇಬ್ಬರ ವಿರುದ್ಧ ಕೊಡಗು ಪೊಲೀಸ್ ಪ್ರಕರಣ ದಾಖಲಿಸಿದೆ ಮತ್ತು ಎರಡು ವಾಹನಗಳನ್ನು ವಶಕ್ಕೆ ಪಡೆದಿದೆ. ವಿರಾಜಪೇಟೆ ತಾಲ್ಲೂಕಿನ ಕಾವಾಡಿ ಗ್ರಾಮದ ನೆಲ್ಲಮಕ್ಕಡ ಎಂ.ಶಿವಪ್ಪ (50) ಹಾಗೂ ಮೈತಾಡಿ ಗ್ರಾಮದ ಬೋಳ್ಯಪಂಡ ಎಂ.ಭೀಮಯ್ಯ (38) ಎಂಬುವವರ ವಿರುದ್ಧ ಆರೋಪಿಗಳಿಗೆ ಸಹಕರಿಸಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಆರೋಪಿಗಳು ತಪ್ಪಿಸಿಕೊಳ್ಳಲು ಬಳಕೆಯಾದ ಆರೋಪದಡಿ ನೆಲ್ಲಮಕ್ಕಡ ಎಂ.ಶಿವಪ್ಪ ಅವರ ಮಾರುತಿ ಕಾರು ಮತ್ತು ಅಪರಾಧ ಕೃತ್ಯಕ್ಕೆ ಬಳಸಿದ ಆರೋಪದಡಿ ಬೋಳ್ಯಪಂಡ ಎಂ.ಭೀಮಯ್ಯ ಅವರ ಬೋಲೆರೋ ವಾಹನವನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗಾಗಿ ಮಡಿಕೇರಿ ಡಿವೈಎಸ್ಪಿ ಸೂರಜ್.ಪಿ.ಎ, ಪಿಐ ಚಂದ್ರಶೇಖರ್ ಹೆಚ್.ವಿ, ಗ್ರಾಮಾಂತರ ಠಾಣೆಯ ಪಿಎಸ್ಐ ಶ್ರೀನಿವಾಸ, ಮಡಿಕೇರಿ ಸಂಚಾರಿ ಠಾಣೆಯ ಪಿಎಸ್ಐ ಎನ್.ಟಿ.ತಮ್ಮಯ್ಯ, ಉಪವಿಭಾಗ ಮಟ್ಟದ…
ಮಡಿಕೇರಿ NEWS DESK ಜ.30 : ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕೊಡಗು ಜಿಲ್ಲಾ ಘಟಕ ಪಂಚ ಪ್ರಶ್ನೆಗಳನ್ನಿಟ್ಟಿದೆ. ಈ ಕುರಿತು ಪ್ರತಿಕಾ ಪ್ರಕಟಣೆ ನೀಡಿರುವ ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ 2015 ರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹೆಚ್.ಕಾಂತರಾಜ್ ಅವರು ವೈಜ್ಞಾನಿಕವಾಗಿ ತಯಾರಿಸಿದ ಹಿಂದುಳಿದ ವರ್ಗಗಳ ಜಾತಿ ಜನಗಣತಿ ವರದಿಯನ್ನು ಯಾಕೆ ಸಚಿವ ಸಂಪುಟ ಅಂಗೀಕರಿಸಿ, ವಿಧಾನಸಭೆ ಹಾಗೂ ಪರಿಷತ್ತಿನಲ್ಲಿ ಚರ್ಚೆಗೆ ಮಂಡಿಸಿಲ್ಲ? ರಾಹುಲ್ ಗಾಂಧಿಯವರು ಕೇಂದ್ರ ಮಟ್ಟದಲ್ಲಿ ಜಾತಿ ಜನಗಣತಿಗೆ ಒತ್ತು ನೀಡುತ್ತಿರುವಾಗ ರಾಜ್ಯದಲ್ಲಿ ಕಾಂತರಾಜ್ ಆಯೋಗದ ಶಿಫಾರಸ್ಸು ಅನುಷ್ಠಾನಗೊಳಿಸಲು ಹಿಂದೇಟು ಹಾಕುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. 2023 ರ ಚುನಾವಣೆ ಪ್ರಣಾಳಿಕೆಯ ಭರವಸೆಯಂತೆ ಹಿಂದಿನ ಬಿಜೆಪಿ ಸರಕಾರ ಮುಸಲ್ಮಾನರಿಂದ ಕಿತ್ತುಕೊಂಡ ಮೀಸಲಾತಿಯನ್ನು ಮರು ಸ್ಥಾಪಿಸುವ ಬದ್ಧತೆ ಏನಾಯಿತು? ಗೆದ್ದು ಅಧಿಕಾರಕ್ಕೆ ಬಂದ ಮೊದಲನೆಯ ಮಂತ್ರಿಮಂಡಲದಲ್ಲಿ ಅನುಷ್ಠಾನಗೊಳಿಸುವ ವಾಗ್ಧಾನ ಜಾರಿಗೆ…






