ಕುಶಾಲನಗರ ಫೆ.17 NEWS DESK : ಕೊಡಗು ಜಿಲ್ಲಾ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಫೆ.18 ರಂದು ಕುಶಾಲನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಉಚಿತ ಹಾಸ್ಯ ನಗೆ ನಾಟಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಆವರ್ತಿ ಆರ್.ಮಹದೇವಪ್ಪ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ಧಾತ್ರಿ ರಂಗಸಂಸ್ಥೆ ಕಲಾವಿದರ ಮೂಲಕ ಸಂಜೆ 6 ಗಂಟೆಗೆ ಹಾಸ್ಯ ನಗೆ ನಾಟಕ ಆರಂಭಗೊಳ್ಳಲಿದೆ. ಶ್ರೀ ಕೃಷ್ಣ ಸಂಧಾನ ಎಂಬ ಈ ಹಾಸ್ಯ ನಗೆ ನಾಟಕ 2 ಗಂಟೆ 30 ನಿಮಿಷಗಳ ಅವಧಿ ನಡೆಯಲಿದೆ. ನಾಟಕದ ಉದ್ಘಾಟನೆಯನ್ನು ಉದ್ಯಮಿಗಳು ಹಾಗೂ ಸಮಾಜಸೇವಕರಾದ ರಾಜೇಗೌಡ ಅವರು ನೆರವೇರಿಸಲಿದ್ದಾರೆ. ಸಂಘದ ಜಿಲ್ಲಾಧ್ಯಕ್ಷರಾದ ಆವರ್ತಿ ಆರ್ ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗಾಯತ್ರಿ ಕಲ್ಯಾಣ ಮಂಟಪದ ಮಾಲೀಕರಾದ ಕೆ.ಬಿ.ಗಾಯತ್ರಿ ಉಪಸ್ಥಿತರಿರುವರು. ಈ ನಾಟಕ ನೋಡಿ ನಗದೇ ಇರುವ ಪ್ರೇಕ್ಷಕರಿಗೆ ಸ್ಥಳದಲ್ಲೇ ನಗದು…
ಲೇಖಕ: admin
ಮಡಿಕೇರಿ ಫೆ.17 NEWS DESK : ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ವರದಾನವಾಗಿರುವ ಕೊಡಗು ವಿಶ್ವ ವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಸರ್ಕಾರ ಮುಚ್ಚಬಾರದು ಎಂದು ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತರ ಘಟಕದ ಕೊಡಗು ಜಿಲ್ಲಾಧ್ಯಕ್ಷ ಕೆ.ಜಿ.ಜಾಶಿರ್ ಮೂರ್ನಾಡು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಅತ್ಯಂತ ಪುಟ್ಟ ಜಿಲ್ಲೆಯಾಗಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗುತ್ತಿದೆ. ಇದೀಗ ಯುವ ಸಮೂಹದ ಶೈಕ್ಷಣಿಕ ಭವಿಷ್ಯವನ್ನು ರೂಪಿಸುವ ವಿಶ್ವ ವಿದ್ಯಾಲಯವನ್ನೇ ಮುಚ್ಚಲು ಮುಂದಾಗಿರುವುದು ಕೊಡಗಿನ ಕಡೆಗಣನೆಗೆ ಮತ್ತೊಂದು ನಿದರ್ಶನವಾಗಿದೆ ಎಂದು ಟೀಕಿಸಿದ್ದಾರೆ. ವಿಶ್ವ ವಿದ್ಯಾಲಯಕ್ಕೆ ಸಂಪನ್ಮೂಲ ಒದಗಿಸಲು ಸರ್ಕಾರಕ್ಕೆ ಯಾವುದೇ ಹೊರೆಯಾಗುವುದಿಲ್ಲ. ಆರ್ಥಿಕ ಹೊರೆಯ ನೆಪವೊಡ್ಡಿ ವಿವಿಯನ್ನು ಮುಚ್ಚಿದರೆ ಜಿಲ್ಲೆಯ ಸಾವಿರಾರು ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ಹಿಂದೆ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ ಪ್ರತಿ ಜಿಲ್ಲೆಗೆ ವಿಶ್ವ ವಿದ್ಯಾಲಯ ಬೇಕೆಂಬ ಉದ್ದೇಶದಿಂದ 10 ನೂತನ ವಿವಿ ಗಳನ್ನು ಸ್ಥಾಪಿಸಿತು. ನಂತರ ಬಂದ ಸರ್ಕಾರ ಇದನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕಾಗಿತ್ತು. ಆದರೆ ಮುಚ್ಚುವ ನಿರ್ಧಾರಕ್ಕೆ ಬಂದಿರುವುದು…
ಮಡಿಕೇರಿ ಫೆ.17 NEWS DESK : ವಿರಾಜಪೇಟೆಯ ಬೈರಂಬಾಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರಾಜ್ಯ ಮಟ್ಟದ ಅತ್ಯುತ್ತಮ ಶಾಲೆ ಪ್ರಶಸ್ತಿ ಲಭಿಸಿದೆ. ಧಾರವಾಡ ಚೇತನ್ ಫೌಂಡೇಶನ್ ವತಿಯಿಂದ ಮೈಸೂರಿನ ಕನ್ನಡ ಸಾಹಿತ್ಯ ಭವನದಲ್ಲಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ನಡೆದ ನುಡಿ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಎನ್.ಪದ್ಮ ಪ್ರಶಸ್ತಿಯನ್ನು ಸ್ವೀಕರಿಸಿದರು.
ಬೆಂಗಳೂರು ಫೆ.17 NEWS DESK : ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ಸದಾ ರೈತ ಕುಲದ ಪರವಾಗಿ ಇರ್ತೇನೆ ಎಂದು ಭರವಸೆ ನೀಡಿದರು. ಮೈಕ್ರೋ ಫೈನಾನ್ಸ್ ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಸುಮೂಲಕಗ್ರೀವಾಜ್ಞೆರ್ಕಾರವನ್ನು ಒಕ್ಕೋರಲಿನಿಂದ ಅಭಿನಂಧಿಸಿದರು.ಸಭೆಯ ಪ್ರಾರಂಭಕ್ಕೂ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಮಡಿಕೇರಿ ಫೆ.17 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆಯು ಪರಿಷತ್ತಿನ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವಕಾಮತ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆಯನ್ನು ಆಚರಿಸುವ ಕುರಿತು ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಜಿಲ್ಲಾ ಪದಾಧಿಕಾರಿಗಳು ತಾಲ್ಲೂಕು ಅಧ್ಯಕ್ಷರು ಮತ್ತು ಹೋಬಳಿ ಅಧ್ಯಕ್ಷರುಗಳಿಗೆ ಜವಾಬ್ದಾರಿ ಹಂಚಿದ್ದು, ಸ್ವಾಗತ ಸಮಿತಿ ಆಹಾರ ಸಮಿತಿ ಸನ್ಮಾನ ಸಮಿತಿ ಮತ್ತು ಸಾಂಸ್ಕೃತಿಕ ಸಮಿತಿಯನ್ನು ರಚಿಸಲಾಯಿತು. ಸ್ವಾಗತ ಸಮಿತಿ ಅಧ್ಯಕ್ಷರಾಗಿ ರಾಜೇಶ್ ಪದ್ಮನಾಭ, ಸದಸ್ಯರುಗಳಾಗಿ ಎ.ವಿ.ಮಂಜುನಾಥ , ಎಸ್.ಎಸ್.ಸಂಪತ್ ಕುಮಾರ್, ಕೆ.ಟಿ.ಬೇಬಿ ಮ್ಯಾಥ್ಯೂ, ಕೋಳೆರ ದಯಾ ಚಂಗಪ್ಪ, ಕೆ.ಎಸ್.ನಾಗೇಶ್, ಕುಲ್ಲಚಂಡ ಪ್ರಮೋದ್ ಗಣಪತಿ, ಉಳುವಂಗಡ ಕಾವೇರಿ ಉದಯ, ವಿ.ಟಿ.ಮಂಜುನಾಥ್ ಜವಾಬ್ದಾರಿ ವಹಿಸಲಾಯಿತು. ವೇದಿಕೆ ಸಮಿತಿ ಅಧ್ಯಕ್ಷರಾಗಿ ಅಂಬೆಕಲ್ ನವೀನ್ ಸದಸ್ಯರುಗಳಾಗಿ ಎಸ್.ಡಿ.ವಿಜೇತ್, ಸುನಿಲ್ ಪತ್ರವೋ, ನಂಗಾರು ಕೀರ್ತಿ ಪ್ರಸಾದ್, ಈರಮಂಡ ಹರಿಣಿ ವಿಜಯ್, ಪಿ.ಎಫ್ ಸಭಾಸ್ಟಿನ್, ಬಿ.ಬಿ.ನಾಗರಾಜ ಆಚಾರ್, ಬಾನಂಗಡ ಅರುಣ್ ರವರನ್ನು ಆರಿಸಲಾಯಿತು. ಆಹಾರ ಸಮಿತಿ ಅಧ್ಯಕ್ಷರಾಗಿ ಕಡ್ಲೇರ…
ಮಡಿಕೇರಿ ಫೆ.17 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಾಗೂ ಜಿಲ್ಲಾ ಮಹಿಳಾ ಸಹಾಯವಾಣಿ, ಮಡಿಕೇರಿ. ಕೊಡಗು ಜಿಲ್ಲೆ ಇವರ ಸಹಯೋಗದೊಂದಿಗೆ 2024-25 ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಡಿ“ಬೇಟಿ ಬಚವೊ-ಬೇಟಿ ಪಡಾವೊ” ತಾಲ್ಲೂಕು ಮಟ್ಟದ ಕಾರ್ಯಕ್ರಮದ ಅಂಗವಾಗಿ ತಿತಿಮತಿ ಸರ್ಕಾರಿ ಪ್ರೌಡ ಶಾಲೆಯಲ್ಲಿ “ಸಮಗ್ರ ಮಕ್ಕಳ ಲೈಂಗಿಕ ಶಿಕ್ಷಣದ ಕುರಿತು” ಕಾರ್ಯಕ್ರಮ ನಡೆಯಿತು. ತಿತಿಮತಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಮಂಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹೆಣ್ಣು ಮಕ್ಕಳು ಶಿಕ್ಷಣವಂತರಾಗಬೇಕು. ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಬೇಕು, ಪ್ರತಿ ಮನೆಯ ಹೆಣ್ಣು ಮಕ್ಕಳು ಶಿಕ್ಷಣ ಪಡೆಯಬೇಕು. ಅಲ್ಲದೆ ಹೆಣ್ಣು ಮಕ್ಕಳ ಜನನವನ್ನು ಸಂಭ್ರಮಿಸಬೇಕು. ಗಂಡು ಮತ್ತು ಹೆಣ್ಣು ನಡುವೆ ಸಮಾನತೆ ಇರಬೇಕು ಎಂದು ತಿಳಿಸಿದರು. ಕಾನೂನು ಸಲಹೆಗಾರರು, ಸಖಿ ಒನ್ ಸ್ಟಾಪ್ ಸೆಂಟರ್ ಮಡಿಕೇರಿ ಅಂಬಿಕಾ ಮಾತನಾಡಿ ಮಕ್ಕಳಿಗೆ…
ಮಡಿಕೇರಿ ಫೆ.17 NEWS DESK : ಡಾ||ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, ಕೊಡಗು ಜಿಲ್ಲೆ, ಈ ವಸತಿ ಶಾಲೆಗೆ 6ನೇ ತರಗತಿಯಿಂದ 10ನೇ ತರಗತಿ ವರೆಗೆ ಸಿಬಿಎಸ್ಇ ಪಠ್ಯಕ್ರಮ ಭೋಧಿಸುವ ಆಂಗ್ಲ ಭಾಷಾ ಅತಿಥಿ ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನಿಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08272 – 225528 9686138688 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.
ಮಡಿಕೇರಿ ಫೆ.17 NEWS DESK : ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವಾರು ವರ್ಷದಿಂದ ಕೊಡವ ಸಮಾಜದ ಮುಖಾಂತರ ಬಾಳೇಡ ಕುಟುಂಬಸ್ಥರ ಮನೆಗೆ ಹೋಗುವ ಸಂಪರ್ಕ ರಸ್ತೆಯ ಡಾಂಬರೀಕರಣವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅನುದಾನದ 5 ಲಕ್ಷ ದಲ್ಲಿ ನೂತನ ರಸ್ತೆಯ ಕಾಮಗಾರಿಯನ್ನು ಕೈಗೊಳ್ಳಲಾಯಿತು. ಹಲವಾರು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ, ರಸ್ತೆಯ ಕಾಮಗಾರಿ ಬಗ್ಗೆ ಶಾಸಕರ ಗಮನಕ್ಕೆ ತಂದಾಗ, ತಕ್ಷಣ ಕಾಮಗಾರಿಯನ್ನು ಕೈಗೊಳ್ಳಲು ನಿರ್ದೇಶಿಸಿದ್ದರು. ರಸ್ತೆಯ ಕಾಮಗಾರಿಯ ಬಗ್ಗೆ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಉತ್ತಮ ರೀತಿಯ ರಸ್ತೆ ನಿರ್ಮಾಣ ಆಗಿದ್ದಕ್ಕೆ, ಶಾಸಕರಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಇದಕ್ಕೆ ಸಹಕರಿಸಿದ ಬ್ಲಾಕ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷ ಮಾಚೇಟ್ಟಿರ ಕುಶು ಕುಶಾಲಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ವಿರಾಜಪೇಟೆ ಫೆ.NEWS DESK : ವಿರಾಜಪೇಟೆಯ ಮದರ್ ತೆರೇಸಾ ಸೇವಾ ಕೇಂದ್ರ ವತಿಯಿಂದ ವಿರಾಜಪೇಟೆಯ ಏಕೈಕ ಆಟೋ ಚಾಲಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಿಯಾ ಜೈಸನ್ ಅವರನ್ನು ಸನ್ಮಾನಿಸಲಾಯಿತು. ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳು ಹಾಗೂ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವ್ಯವಸ್ಥಾಪಕರಾದ ವಂ.ಫಾ.ಜೇಮ್ಸ್ ಡೊಮಿನಿಕ್ ಸನ್ಮಾನಿಸಿ, ಗೌರವಿಸಿದರು. ನಂತರ ಮಾತನಾಡಿದ ಅವರು ಕುಟುಂಬವನ್ನು ನಿರ್ವಹಿಸಲು ಮಹಿಳೆ ಸಮರ್ಥಳು. ಮಹಿಳೆ ಅಬಲೆಯಲ್ಲ, ಸಬಲೆ. ಮಹಿಳೆ ಮನಸ್ಸು ಮಾಡಿದ್ದಲ್ಲಿ ತನ್ನ ಕುಟುಂಬವನ್ನು ಪೋಷಿಸುವಲ್ಲಿ ಯಾವ ಕಠಿಣ ಕೆಲಸವನ್ನು ಮಾಡಲಿಕ್ಕೆ ಹಿಂಜರಿಯುವುದಿಲ್ಲ ಎಂಬುದಕ್ಕೆ ಪ್ರಿಯ ಜೈಸನ್ ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಗುರುಗಳಾದ ರೆ.ಫಾ ಮದಲೈ ಮುತ್ತು, ಸಂಘದ ಅಧ್ಯಕ್ಷರು ಹಾಗೂ ನಿವೃತ್ತ ಡಿ.ಡಿ.ಪಿ.ಐ ಪೆರಿಗ್ರೀನ್ ಎಸ್.ಮಚಡೋ, ಮಾರ್ಟಿನ್ ಬರ್ನಾಡ್, ಚೋಪಿ ಜೋಸೆಫ್, ಜೇಮ್ಸ್ ಮೆನೇಜಸ್, ಅನಿತಾ ನರೋನ್ನ, ಅರುಣ ಡಿಸೋಜಾ, ಮರ್ವಿನ್, ಜೋಕಿಂ ರಾಡ್ರಿಗೀಸ್, ಬೆನೆಡಿಕ್ಟ್ ಸಾಲ್ದಾನ್ಹ, ಚಾರ್ಲ್ಸ್ ಡಿಸೋಜ ಹಾಗೂ ಕೇಂದ್ರದ ಸರ್ವ ಸದಸ್ಯರು ಹಾಜರಿದ್ದು, ಪ್ರಿಯಾ ಅವರನ್ನು ಅಭಿನಂದಿಸಿದರು.
ಸಿದ್ದಾಪುರ ಫೆ.17 NEWS DESK : ಪುಲಿಯೇರಿ ಶ್ರೀ ಮಂಗುಯಿಲ್ ಭಗವತಿ ಕ್ಷೇತ್ರದ 3ನೇ ವಾರ್ಷಿಕ ಮಹೋತ್ಸವ ಕಾರ್ಯಕ್ರಮವು ಫೆ.26 ರಿಂದ ಮಾ. 2 ರವರೆಗೆ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನಡೆಯಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಎಂ.ಟಿ.ಶಶಿ. ಫೆ.26 ರಂದು ಶುದ್ದಿಪೂಜೆ ಆಚಾರ್ಯವರಣಂ, ದೀಪಾರಾಧನೆ, ಫೆ.27 ರಂದು ಗಣಪತಿ ಹೋಮ ,ಉಷಾಪೂಜೆ, ಮಹಾಪೂಜೆ, ಕಲಶ ಪೂಜೆ, ಭಗವತಿ ಪೂಜೆ, ಅತ್ತಾಯ ಪೂಜೆ. ಫೆ.28 ರಂದು ದೀಪಾರಾಧನೆ, ಸರ್ವ ಐಶ್ವರ್ಯ ಪೂಜೆ, ಮಾ.1ರಂದು ಲಲಿತ ಸಹಸ್ರನಾಮಾರ್ಚ, ಮಹಾ ಪೂಜೆ ನಡೆಯಲಿದೆ. ಮಾ.2ರಂದು ಉತ್ಸವದ ಕೊನೆಯ ದಿನವಾಗಿದ್ದು ಮಹಾ ಗಣಪತಿ ಹೋಮ, ದೇವಿಗೆ ಮಹಾ ಪೊಂಗಾಲ, ಮಹಾಕುರುದಿ, ಮಹಾಪೂಜೆ, ನಂತರ ಚಂಡೆವಾಗಳೊಂದಿ ಅಲಂಕೃತ ಮಂಟಪದಲ್ಲಿ ದೇವಿಯ ವಿಗ್ರಹವನ್ನು ಇರಿಸಿ ಗುಹ್ಯ ಅಗಸ್ತ್ಯೇಶ್ವರ ದೇವಾಲಯದ ಕಾವೇರಿ ನದಿಯಲ್ಲಿ ದೇವಿ ಆರಾಟ್ ನಡೆಯಲಿದು ಮಂಗುಯಿಲ್ ಭಗವತಿ ಕ್ಷೇತ್ರದವರೆಗೆ ಶೋಭಾಯಾತ್ರೆ ನಡೆಯಲಿದೆ. ಫೆ.8 ಗಂಟೆಗೆ ಮಹಾ ಪೂಜೆ ಮತ್ತು ದೇವಿಗೆ ಮಹಾ…






