ಸುಂಟಿಕೊಪ್ಪ ಜ.29 NEWS DESK : ಮಾದಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯಲ್ಲಿ ವಿದ್ಯಾರ್ಥಿಗಳ ಪಥಸಂಚಲನ ಸಾಂಸ್ಕೃತಿಕ ಕಾರ್ಯಕ್ರಮ ಜನಮನ ರಂಜಿಸಿತು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ನಸೀಮ, ಉಪಾಧ್ಯಕ್ಷ ಮನು, ಗ್ರಾ.ಪಂ.ಸದಸ್ಯ ಕೆ.ಎ.ಲತೀಫ್, ಮುಖ್ಯೋಪಾದ್ಯಾಯರಾದ ಮಂಜಯ್ಯ, ಶಿಕ್ಷಕಿ ಶೋಭ ಸದಸ್ಯ ಅಣಿ ಉಪಸ್ಥಿತರಿದ್ದರು.
ಲೇಖಕ: admin
ವಿರಾಜಪೇಟೆ ಜ.29 NEWS DESK : ಕೊಂಡಂಗೇರಿ ವಿವಿಧೋದ್ದೇಶ ಸಹಕಾರ ದವಸ ಭಂಡಾರ ನಿಯಮಿತ ಇದರ 2025-30ನೇ ಸಾಲಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಹಿಂದುಳಿದ ಕ್ಷೇತ್ರದಿಂದ ಚುನಾಯಿತರಾದ ಎ.ಎಂ.ಸಾದುಲಿ ಮತ್ತು ಉಪಾಧ್ಯಕ್ಷರಾಗಿ ಸಾಮಾನ್ಯ ಕ್ಷೇತ್ರದಿಂದ ಚುನಾಯಿತರಾದ ಪುಡಿಯಂಡ.ಇ.ಸಾದುಲಿ ಆಯ್ಕೆಗೊಂಡಿದ್ದಾರೆ. ಕೊಂಡಂಗೇರಿ ಸಹಕಾರ ದವಸ ಭಂಡಾರದ ನೂತನ ಆಡಳಿತ ಮಂಡಳಿಗೆ ಒಟ್ಟು 11 ಜನ ಆಯ್ಕೆಗೊಂಡಿದ್ದರು. ಈ ಪೈಕಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಟಿ.ಎ.ಆಲಿ, ಎನ್.ಈ. ಇಬ್ರಾಹಿಂ, ಜೆ.ಎಂ.ಇಬ್ರಾಹಿಂ, ಪುದಿಯಪೊರೆ ಹಸಿನಾರ್, ಮೇಕೇರಿರ ಪಿ. ರಾಧಾಪತಿ, ಜೆ.ಎ.ಸಾದುಲಿ, ಮಹಿಳಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮೇಕೇರಿರ ಜಲಾಶ್ ರಾಧಾಪತಿ, ಮೇಕೇರಿರ ರಾಧಾ ತಮ್ಮಯ್ಯ ಮತ್ತು ಹಿಂದುಳಿದ ವರ್ಗದಿಂದ ಸ್ಪರ್ಧಿಸಿದ್ದ ಎಂ.ಎಂ. ಮಮ್ಮದ್ ನಿರ್ದೇಶಕರಾಗಿ ಚುನಾಯಿತರಾಗಿದ್ದರು. ದವಸ ಭಂಡಾರದ ಆಡಳಿತ ಮಂಡಳಿಗೆ ಸ್ಪರ್ಧಿಸಿದ್ದ ಈ 11 ಜನರು ಸಹಕಾರ ಸಂಘಗಳ ನಿಯಮ1960, 14(ಜಿ)ನಲ್ಲಿನ ಉಪಬಂಧಾನುಸಾರ ಕ್ರಮಬದ್ಧವಾಗಿ ಚುನಾಯಿತರಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಹಾಲುಗುಂದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಉಜ್ಮಾ ಜಬೀನ್ ಅಧಿಕೃತವಾಗಿ ಘೋಷಿಸಿರುವುದಾಗಿ ಕೊಂಡಂಗೇರಿ…
ಮಡಿಕೇರಿ ಜ.29 NEWS DESK : ಮಡಿಕೇರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವೀರ ಸೇನಾನಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 126ನೇ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪ್ರತಿಮೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ಪ್ರಮುಖರು ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಶಿಸ್ತಿಗೆ ಹೆಸರುವಾಸಿಯಾಗಿದ್ದ ಸೇನಾ ದಂಡ ನಾಯಕ ಕಾರ್ಯಪ್ಪ ಅವರು ಭಾರತೀಯ ಸೇನಾ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಯ ಬಗ್ಗೆ ಶಾಸಕರು ಗುಣಗಾನ ಮಾಡಿದರು. ಈ ಸಂದರ್ಭ ಕೆಪಿಸಿಸಿ ಕಾರ್ಯದರ್ಶಿ ಹೆಚ್.ಎಂ.ನಂದಕುಮಾರ್, ಬ್ಲಾಕ್ ಉಪಾಧ್ಯಕ್ಷ ವಿ.ಜಿ.ಮೋಹನ್, ನಾಮ ನಿರ್ದೇಶಿತ ಸದಸ್ಯರು, ವಿವಿಧ ಘಟಕಗಳ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದು ವೀರ ಸೇನಾನಿಗೆ ನಮಿಸಿದರು.
ಮಡಿಕೇರಿ ಜ.29 NEWS DESK : ಇವತ್ತು ಬರೆದು ನಾಳೆ ಅಳಿದು ಹೋಗುವ ಕೃತಿಗಳನ್ನು ಬರೆಯದಿರಿ. ಅಧ್ಯಯನ ಉಸಿರಾಗಿ ಆಳವಾದ ಮತ್ತು ವಿಸ್ತ್ರತವಾದ ಓದನ್ನು ಮೈಗೂಡಿಸಿಕೊಂಡು ಹೆಚ್ಚಿನ ಕಾಲ ಮನದಲ್ಲಿ ಉಳಿಯುವ ಕೃತಿ ರಚನೆಯತ್ತ ಲೇಖಕರು ಗಮನ ಹರಿಸಬೇಕೆಂದು ಮಡಿಕೇರಿ ಆಕಾಶವಾಣಿ ಕೇಂದ್ರದ ಹಿರಿಯ ಉದ್ಘೋಷಕ, ಸಾಹಿತಿ ಸುಬ್ರಾಯ ಸಂಪಾಜೆ ಕಿವಿಮಾತು ಹೇಳಿದ್ದಾರೆ. ಮಡಿಕೇರಿ ಸೈಂಟ್ ಜೋಸೆಫ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಕೆ.ಜಯಲಕ್ಷ್ಮಿ ಅವರ ‘ಮತ್ತೆ ವಸಂತ’ ಕಥಾ ಸಂಕಲನವನ್ನು ನಗರದ ರೆಡ್ ಬ್ರಿಕ್ಸ್ ಸಭಾಂಗಣದಲ್ಲಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಪರಂಪರೆಯ ವಿಶೇಷತೆಗಳನ್ನು ಸೋದಾಹರಣವಾಗಿ ವಿವರಿಸಿದ ಸುಬ್ರಾಯಸಂಪಾಜೆ, ಕನ್ನಡವನ್ನು ಕೊಡಗಿನ ನೆಲದಲ್ಲಿ ಈ ಹಿಂದೆ ಶ್ರೀಮಂತಗೊಳಿಸಿದ ಹಿರಿಯರನ್ನು ನೆನಪಿಸಿಕೊಂಡರು. ಸದ್ಯದ ಪರಿಸ್ಥಿತಿಯಲ್ಲಿ ಕನ್ನಡದಲ್ಲಿ , ಕೃತಿರಚನೆಯ ಕೆಲಸ ವ್ಯಾಪಕವಾಗಿ ನಡೆಯುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿ ಲಭಿಸಿದರೂ ಅವರಲ್ಲಿ ಕೊಡಗಿನವರು ಯಾರೂ ಇಲ್ಲ. ಎಂದು ವಿಷಾಧಿಸಿದರು. ಕೃತಿ ಬಿಡುಗಡೆ…
ಮಡಿಕೇರಿ ಜ.29 NEWS DESK : ತಾರಾಮಂಡಲ ಸಂಸ್ಥೆಯವರು ಆಯೋಜಿಸಿದ ಅಂತರರಾಷ್ಟ್ರೀಯ ಮಟ್ಟದ ಪರಿಸರ ಜ್ಞಾನ ಸ್ಪರ್ಧೆಯಲ್ಲಿ ಚೇರಂಬಾಣೆ ಶ್ರೀ ರಾಜರಾಜೇಶ್ವರಿ ಶಾಲೆಯ 41 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ರಾಷ್ಟ್ರ ಮಟ್ಟದಲ್ಲಿ 7ನೇ ತರಗತಿಯ ಕೆ.ಟಿ.ತಾನ್ಯ ದ್ವಿತೀಯ ಸ್ಥಾನ, ರಾಜ್ಯಮಟ್ಟದಲ್ಲಿ 10ನೇ ತರಗತಿ ಬಿ.ಎಸ್.ಬಿಂದ್ಯಾ ತೃತೀಯ ಸ್ಥಾನ, ಜಿಲ್ಲಾ ಮಟ್ಟದಲ್ಲಿ 10ನೇ ತರಗತಿಯ ಕೆ.ಬಿ.ವರ್ಷ ತೃತೀಯ ಸ್ಥಾನ, 8ನೇ ತರಗತಿಯ ಕೆ..ಬಿಮಿಲನ ತೃತೀಯ ಸ್ಥಾನ, ತಾಲ್ಲೂಕು ಮಟ್ಟದಲ್ಲಿ 8ನೇ ತರಗತಿಯ ಕೆ.ಸಿ.ಶಿವಾನಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳೊಂದಿಗೆ ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಕೆ.ಬಿ.ಸ್ವರೂಪ್, ವಿಜ್ಞಾನ ಶಿಕ್ಷಕಿ ಕೆ.ಜೆ.ಪ್ರಿಯಾಂಕ ಹಾಜರಿದ್ದರು.
ಮಡಿಕೇರಿ ಜ.29 NEWS DESK : ಕೊಯನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಸಂಪಾಜೆ ಗ್ರಾ.ಪಂ ಅಧ್ಯಕ್ಷರಾದ ರಮಾದೇವಿ ಕಳಗಿ ಉದ್ಘಾಟಿಸಿದರು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಪುರುಷೋತ್ತಮ ಬಿಸಿಲುಮನೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಸ್.ಪಿ.ಹನೀಫ್, ಗ್ರಾ.ಪಂ ಸದಸ್ಯರುಗಳಾದ ನವೀನ್ ಕುಮಾರ್, ಜಗದೀಶ್ ಪರಮಲೆ, ಶಾಲಾ ಮುಂಚೂಣಿ ಹೋರಾಟಗಾರ ಟಿ.ಸಿ.ಅಪ್ಪಣ್ಣ, ವಿಶ್ವನಾಥ್ ಹೋಬಲಿದಾರ್, ಶ್ರೀನಿವಾಸ್, ಶಾಲಾ ಮುಖ್ಯೋಪಾಧ್ಯಾಯರಾದ ವನಿತಾಮಣಿ, ಶಾಲಾ ನಾಯಕಿಯಾದ ಕಾವ್ಯ ಹಾಜರಿದ್ದರು.ಶಿಕ್ಷಕಿ ನವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ನಂತರ ವಿದ್ಯಾರ್ಥಿಗಳಿಗೆ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು. ವಾರ್ಷಿಕೋತ್ಸವದ ಅಂಗವಾಗಿ ಹಿರಿಯ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಕ್ರೀಡಾಕೂಟ ನಡೆಯಿತು.
ಕುಶಾಲನಗರ ಜ.29 NEWS DESK : ಮೈಸೂರು ಮಲ್ಲಿಗೆ ಹೂವಿನ ಪರಿಮಳ ದಷ್ಟೇ ಸೊಗಸಾಗಿದ್ದವು ಕೆ.ಎಸ್.ನರಸಿಂಹಸ್ವಾಮಿ ಬರೆದ ದಾಂಪತ್ಯ ಗೀತೆಗಳು ಎಂದು ಸಾಹಿತಿ ಕಣಿವೆ ಭಾರಧ್ವಜ್ ಹೇಳಿದರು. ಕುಶಾಲನಗರದ ಸಾಹಿತ್ಯಾಸಕ್ತರ ವೇದಿಕೆ ವತಿಯಿಂದ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ” ಪ್ರೇಮ ಕವಿ ಕೆ.ಎಸ್.ನರಸಿಂಹಸ್ವಾಮಿ ಸ್ಮರಣೆ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆ.ಎಸ್.ನರಸಿಂಹಸ್ವಾಮಿ ಬರೆದಂತಹ ಗೀತೆಗಳು ಇಂದಿಗೂ ಹಾಗೂ ಎಂದೆಂದಿಗೂ ಕೇಳುಗರ ಮನವನ್ನು ತಣಿಸುತ್ತವೆ. ತಮ್ಮ ಪತ್ನಿಯ ಕುರಿತ ಬರೆದಂತಹ ಕೆ.ಎಸ್.ನ ಕವನಗಳಲ್ಲಿ ಸಾರ್ಥಕ ದಾಂಪತ್ಯ ಜೀವನದ ಸೊಗಸು ಅಡಗಿದೆ. ಬದುಕಿನಲ್ಲಿ ಬಡತನವಿದ್ದರೂ ಕೂಡ ಯಾವುದನ್ನೂ ಲೆಕ್ಕಿಸದೇ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ ಮೇರುಕವಿಯಾಗಿ ನಮ್ಮೊಡನೆ ಇದ್ದಾರೆ ಎಂದು ಭಾರಧ್ವಜ್ ಹೇಳಿದರು. ಕಾರ್ಯಕ್ರಮದಲ್ಲಿ ಪ್ರಧಾನ ನುಡಿಗಳಾಡಿದ ಕುಶಾಲನಗರದ ನಿವೃತ್ತ ಶಿಕ್ಷಕ ಉ.ರಾ.ನಾಗೇಶ್, ಕೆ.ಎಸ್.ನರಸಿಂಹಸ್ಚಾಮಿ ಕನ್ನಡ ಸಾಹಿತ್ಯದ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿದ ಕವಿ. ಬದುಕಿನಲ್ಲಿ ಬಡತನವಿದ್ದರೂ ಕೂಡ ತಮ್ಮತನ ಬಿಡಲಾಗದ ಕೆ.ಎಸ್.ನ ತಮ್ಮ ಕಲ್ಪನಾ ಲೋಕದಲ್ಲಿ ತಲ್ಲೀನರಾಗಿ…
ನಾಪೋಕ್ಲು ಜ.29 NEWS DESK : ಯವಕಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ 76ನೇ ಗಣರಾಜ್ಯೋತ್ಸವ ಸಮಾರಂಭವು ಸಂಭ್ರಮದಿಂದ ನಡೆಯಿತು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷ ತಮ್ಮಯ್ಯ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ಶಾಲಾ ನಾಯಕ ಚೇತನ್ ಕ್ರೀಡಾಜ್ಯೋತಿ ಬೆಳಗಿಸುವುದರ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಹಾಗೂ ಪೋಷಕರಿಗೆ, ಗ್ರಾಮಸ್ಥರಿಗೆ ವಿವಿಧ ರೀತಿಯ ಆಟೋಟ ಕಾರ್ಯಕ್ರಮಗಳು ನಡೆಯಿತು. ಮಕ್ಕಳಿಂದ ದೈಹಿಕ ಕಸರತ್ತು, ಡಂಬಲ್ಸ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು. ಈ ಸಂದರ್ಭ ಕ್ರೀಡೆಯಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಿಗಳಿಗೆ ವೇದಿಕೆಯಲ್ಲಿದ್ದ ಗಣ್ಯರು ಬಹುಮಾನವನ್ನು ವಿತರಿಸಿ ಶುಭ ಹಾರೈಸಿದರು. ಸಮಾರೋಪ ಸಮಾರಂಭದಲ್ಲಿ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದಿರುವ ನಿವೃತ್ತ ಶಿಕ್ಷಕಿ ರೇಖಾ ಉಲ್ಲಾಸ್ ಮಕ್ಕಳಿಗೆ ಹಿತವಚನಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಕಕ್ಕಬೆ-ಕುಂಜಿಲಾ ಗ್ರಾ.ಪಂ ಮಾಜಿ ಅಧ್ಯಕ್ಷ ಸಂಪನ್ ಅಯ್ಯಪ್ಪ, ಸದಸ್ಯರಾದ ಭರತ್ ಚಂದ್ರ ದೇವಯ್ಯ, ಇಂದಿರಾ, ಪ್ರಕಾಶ್, ಎಸ್ಡಿಎಂಸಿ ಉಪಾಧ್ಯಕ್ಷ ಸುಬ್ರಮಣಿ, ಯವಕಪಾಡಿ…
ಮಡಿಕೇರಿ ಜ.29 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಹಾತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ, ಕುಂದ ಈಚೂರಿನ ತಾತೀರ ಹಾಗೂ ಮದ್ರೀರ ಕುಟುಂಬದ ಮನೆಗಳಿಗೆ ತೆರಳುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲಾಯಿತು. ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರ ವಿಶೇಷ ಕಾಳಜಿಯಿಂದ ಮಂಜೂರು ಮಾಡಿದ ರೂ.5 ಲಕ್ಷಗಳಲ್ಲಿ ಕಾಮಗಾರಿ ನಡೆಯಿತು. ತಮ್ಮ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ ಶಾಸಕರಿಗೆ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರೀರ ನವೀನ್ ಗೆ ಹಾತೂರು ವಲಯ ಕಾಂಗ್ರೆಸ್ ಅಧ್ಯಕ್ಷ ಕೊಕ್ಕಂಡ ರೋಶನ್ ಗೆ ಕುಟುಂಬಸ್ಥರು ಕೃತಜ್ಞನೆ ಸಲ್ಲಿಸಿದರು.
ಮಡಿಕೇರಿ ಜ.29 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 126ನೇ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ, ಮುಖ್ಯ ಅತಿಥಿಗಳು ಹಾಗೂ ಎನ್ಸಿಸಿ ಕೆಡೆಟ್ಗಳು ಕಾರ್ಯಪ್ಪ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಅಪ್ರತಿಮ ಸೇನಾ ದಂಡ ನಾಯಕರಾಗಿದ್ದಾರೆ, ಯಾವುದೇ ಜಾತಿ, ಧರ್ಮ ಮತ್ತು ಜನಾಂಗಕ್ಕೆ ತಮ್ಮನ್ನು ಸೀಮಿತಗೊಳಿಸಿಕೊಳ್ಳದೆ ದೇಶಕ್ಕಾಗಿ ಸೇವೆ ಸಲ್ಲಿಸಿದ್ದಾರೆ. ಶಿಸ್ತು, ಸಂಯಮ, ಧೈರ್ಯ, ದೇಶಭಕ್ತಿಯ ಮೂಲಕ ಸೇನಾಸೇವೆ ಸಲ್ಲಿಸಿ, ತಮ್ಮ ಆದರ್ಶಗಳಿಂದ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು. ಕಾರ್ಯಪ್ಪ ಅವರ ಪುತ್ರರಾದ ಏರ್ ಮಾರ್ಷಲ್ ನಂದಾ ಕಾರ್ಯಪ್ಪ ಅವರು ವಾಯುದಳದಲ್ಲಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಇವರು ಎರಡನೇ ಇಂಡೋ-ಪಾಕ್ ಯುದ್ಧದಲ್ಲಿ ಪಾಕಿಸ್ತಾನದ ಕೈದಿ ಆಗಿದ್ದಾಗ ಪುತ್ರನಿಗೆ ವಿಶೇಷ ಸವಲತ್ತುಗಳನ್ನು ನಿರಾಕರಿಸಿದ ಫೀ.ಮಾ.ಕಾರ್ಯಪ್ಪ ಅವರು ಎಲ್ಲಾ…






