ಸುಂಟಿಕೊಪ್ಪ ಜ.29 NEWS DESK : ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸಂತೆ ಮೇಳ ಮತ್ತು ವಸ್ತು ಪ್ರದರ್ಶನ ಗಮನ ಸೆಳೆಯಿತು. ಮಕ್ಕಳಿಗೆ ವ್ಯಾಪಾರ, ವಹಿವಾಟಿನ ಬಗ್ಗೆ ಜ್ಞಾನ ಮೂಡಿಸುವುದಕ್ಕಾಗಿ ಶಾಲಾ ಶಿಕ್ಷಕರ ಮಾರ್ಗದರ್ಶನದಲ್ಲಿ ವಿವಿಧ ಬಗೆಯ ತರಕಾರಿಗಳು, ಹಣ್ಣು ಹಂಪಲುಗಳು, ಮನೆಯಿಂದ ತಯಾರಿಸಿದ ಸಿಹಿ ಖಾದ್ಯ, ತಿಂಡಿಗಳನ್ನು ಮಾರಾಟ ಮಾಡಿ ಸಂಭ್ರಮಿಸಿದರು. ಶಾಲಾ ಶಿಕ್ಷಕರು, ಪೋಷಕರು, ಸಾರ್ವಜನಿಕರು ಮಕ್ಕಳ ವ್ಯಾಪಾರ ಶೈಲಿಗೆ ಮನಸೋತು ವಸ್ತುಗಳನ್ನು ಖರೀದಿಸಿದರು. ಇದೇ ವೇಳೆ ಶಾಲೆಯಲ್ಲಿ ವಸ್ತು ಪ್ರದರ್ಶನ ಕೂಡ ನಡೆಯಿತು. ಮಕ್ಕಳ ಕೈಯಿಂದ ಅರಳಿದ ವಿವಿಧ ರೀತಿಯ ವಿಜ್ಞಾನದ ಕೌತುಕದ ದೃಶ್ಯಾವಳಿಗಳು ಮನಸೂರೆಗೊಂಡಿತ್ತು. ಕನ್ನಡ, ವಿಜ್ಞಾನ, ಇಂಗ್ಲಿಷ್, ಹಿಂದಿ, ವಾಣಿಜ್ಯ ವಿಷಯಗಳ ಕುರಿತಾದ ವಸ್ತು ಪ್ರದರ್ಶನ ನಡೆಯಿತು. ರಾಕೆಟ್ ಉಡಾವಣೆ, ನೀರಿನ ಬಳಕೆ, ಮನೆಗಳ ನಿರ್ಮಾಣ ಶೈಲಿ, ಕನ್ನಡದ ಕವಿಗಳ ಚಿತ್ರಗಳು, ವ್ಯಾಕರಣ ರಚಿತ ದೃಶ್ಯಗಳು ಸೇರಿದಂತೆ ಇನ್ನಿತರ ವಸ್ತು ಪ್ರದರ್ಶನಗಳು ಮೆರುಗನ್ನು ನೀಡಿದವು. ಶಾಲೆಯ ವ್ಯವಸ್ಥಾಪಕರಾದ ಧರ್ಮಗುರು ವಿಜಯ್ ಕುಮಾರ್…
ಲೇಖಕ: admin
ವಿರಾಜಪೇಟೆ ಜ.29 NEWS DESK : ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ 126ನೇ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು, ಉಪನ್ಯಾಸಕರು ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಅಖಿಲ ಕರ್ನಾಟಕ ಸೈನಿಕ ಸಂಘದ ಅಧ್ಯಕ್ಷ ಕೊಟ್ಟುಕತ್ತಿರ ಸೋಮಣ್ಣ, ವಿದ್ಯಾರ್ಥಿಗಳು ಶಿಸ್ತು, ಪ್ರಾಮಾಣಿಕತೆ, ಕರ್ತವ್ಯಪ್ರಜ್ಞೆ, ಸಮಯಪಾಲನೆಯ ಮೂಲಕ ತಮ್ಮ ಗುರಿಯನ್ನು ಸಾಧಿಸಿ ಉತ್ತಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದರು. ರಾಷ್ಟ್ರ ಪ್ರೇಮವನ್ನು ಮೈಗೂಡಿಸಿಕೊಳ್ಳುವುದರ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸಬೇಕು. ರಾಷ್ಟ್ರೀಯ ಭಾವೈಕ್ಯತಾ ಅಂಶಗಳಿಗೆ ವಿದ್ಯಾರ್ಥಿಗಳು ಒತ್ತು ನೀಡಬೇಕು ಎಂದು ಕರೆ ನೀಡಿದರು. ಅಖಿಲ ಕರ್ನಾಟಕ ಸೈನಿಕ ಸಂಘದ ಕಾರ್ಯದರ್ಶಿ ಕುಟ್ಟoಡ ಲವ ಪೊನ್ನಪ್ಪ ಮಾತನಾಡಿ, ದೇಶ ಪ್ರೇಮ ಎಂಬುವುದು ವಿದ್ಯಾರ್ಥಿ ಜೀವನದಲ್ಲಿಯೇ ಮೈಗೂಡಿಸಿಕೊಳ್ಳಬೇಕು. ರಾಷ್ಟ್ರ ಮೊದಲು ಎಂಬ ಪರಿಕಲ್ಪನೆ ವಿದ್ಯಾರ್ಥಿಗಳಲ್ಲಿ ಬರಬೇಕು. ಶಿಸ್ತನ್ನು ಮೈಗೂಡಿಸಿಕೊಳ್ಳುವುದರ ಮೂಲಕ ಆದರ್ಶ ವ್ಯಕ್ತಿಗಳಾಗಿ ಬಾಳಿ ಎಂದು ಸಲಹೆ ನೀಡಿದರು ಕಾರ್ಯಕ್ರಮದ…
ವಿರಾಜಪೇಟೆ ಜ.29 NEWS DESK : ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮೂಲತಃ ವಿರಾಜಪೇಟೆಯವರಾದ ಪಾಪನೋಗಿನಿಯ ದೇಶದ ಬಿಷಪ್ ರೋಸಾರಿಯೋ ಮೆನೇಜಸ್ ದ್ವಜಾರೋಹಣ ನೆರವೇರಿಸಿ ಮಾತನಾಡಿ ಭಾರತವು ವೈವಿಧ್ಯತೆಗಳಿಂದ ಕೂಡಿರುವ ದೇಶ. ಸಂವಿಧಾನವು ಶ್ರೇಷ್ಠ ಕಾನೂನಾಗಿದ್ದು, ಪ್ರತಿಯೊಬ್ಬರು ಗೌರವಿಸಬೇಕು ಎಂದು ಹೇಳಿದರು. ಪ್ರಜಾಪ್ರಭುತ್ವದ ಆಶಯದಂತೆ ಸ್ವತಂತ್ರ, ಸಮಾನತೆ, ಭ್ರಾತೃತ್ವ ಮತ್ತು ಕಾನೂನುನ್ನು ಪಾಲಿಸಿ ರಾಷ್ಟ್ರಕ್ಕೆ ಗೌರವವನ್ನು ಸೂಚಿಸಬೇಕು. ವಿದ್ಯಾರ್ಥಿಗಳು ರಾಷ್ಟ್ರ ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಹಾಗೂ ಪ್ರಧಾನ ಧರ್ಮ ಗುರುಗಳಾದ ರೆ. ಫಾ. ಜೇಮ್ಸ್ ಡೊಮಿನಿಕ್ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಈ ಸಂದರ್ಭ ಸಂತ ಅನ್ನಮ್ಮ ಪಿ. ಯು. ಕಾಲೇಜಿನ ಪ್ರಾಂಶುಪಾಲ ರೆ.ಫಾ.ಮದಲೈ ಮುತ್ತು, ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಬೆನ್ನಿ ಜೋಸೆಫ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ರೋಸಿ, ಸಿಸ್ಟರ್ ಐಡಾ, ಸಂತ ಅನ್ನಮ್ಮ ಪಾಲಕ ಶಿಕ್ಷಕರ ಸಂಘದ…
ಕುಶಾಲನಗರ ಜ.29 NEWS DESK : ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಲೆಕ್ಕ ಶೀರ್ಷಿಕೆಗಳಡಿಯಲ್ಲಿ ಅನುಮೋದನೆಗೊಂಡಿರುವ ಹಾಗೂ ಪೂರ್ಣಗೊಂಡಿರುವ ರೂ.66 ಲಕ್ಷದ ವಿವಿಧ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಚಾಲನೆ ನೀಡಿದರು. ಗುಡ್ಡೆಹೊಸೂರು ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, 2023-24ನೇ ಸಾಲಿನ ಮುಖ್ಯ ಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ರೂ.10 ಲಕ್ಷ ವೆಚ್ಚದಲ್ಲಿ ಮಾದಾಪಟ್ಟಣ ಗ್ರಾಮದ ರಸ್ತೆ ದುರಸ್ತಿ, ಕಾಂಕ್ರೀಟ್ ರಸ್ತೆ ಹಾಗೂ ರೂ.12 ಲಕ್ಷ ವೆಚ್ಚದಲ್ಲಿ ಬಸವನಹಳ್ಳಿ ಗ್ರಾಮದ ದಿಡ್ಡಳ್ಳಿ ನಿರಾಶ್ರಿತರ ಮನೆಯವರೆಗೆ ಹಾಗೂ ರಸ್ತೆ ದುರಸ್ತಿ, ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಹಾಗೂ ಚಿಕ್ಕಬೆಟ್ಟಗೇರಿ ಮುಖ್ಯ ರಸ್ತೆಯಿಂದ ಸೋಲಿಗರ ಕಾಲೋನಿ ಸಮುದಾಯ ಭವನದ ರಸ್ತೆ ದುರಸ್ತಿ, ರೂ.11 ಲಕ್ಷ ವೆಚ್ಚದಲ್ಲಿ ಹಾರಂಗಿ ಗ್ರಾಮದ ಬೊಳ್ಳೂರು ಮುಖ್ಯ ರಸ್ತೆ ದುರಸ್ತಿ ಹಾಗೂ ಮಡಿಕೇರಿ ಮುಖ್ಯ ರಸ್ತೆಯಿಂದ ಮೊರಾರ್ಜಿ ಶಾಲೆಯ ರಸ್ತೆ ದುರಸ್ತಿಗೆ ಚಾಲನೆ ನೀಡಲಾಗಿದೆ ಎಂದರು. 2024-25ನೇ ಸಾಲಿನ ಜಿಲ್ಲಾ ಪಂಚಾಯಿತ್ ರಾಜ್ಯ ಹಣಕಾಸು ಆಯೋಗದ…
ಮಡಿಕೇರಿ ಜ.29 NEWS DESK : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ಪ್ರಾದೇಶಿಕ ಕೇಂದ್ರ ವತಿಯಿಂದ ಮಡಿಕೇರಿಯಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ 126ನೇ ಹುಟ್ಟು ಹಬ್ಬ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳಾ, ಜಿಲ್ಲಾ ಉಪ ಯೋಜನೆ ಸಮನ್ವಯಾಧಿಕಾರಿ ಕೃಷ್ಣಪ್ಪ, ಪ್ರಾಂಶುಪಾಲರಾದ ವಿಜಯ, ಪ್ರಾದೇಶಿಕ ಕೇಂದ್ರದ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಮಡಿಕೇರಿ ಜ.29 : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜನವರಿ 31ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ.
ಮಡಿಕೇರಿ NEWS DESK ಜ.28 : ಮಡಿಕೇರಿ ತಾಲ್ಲೂಕಿನ ಕೆ.ನಿಡುಗಣೆ ಗ್ರಾಮದ ರೆಸಾರ್ಟ್ ವೊಂದರ ಹಿಂಭಾಗದಲ್ಲಿ ವಾಸವಿದ್ದ ಲಲಿತಾ.ಬಿ.ಪಿ (70) ಎಂಬುವವರನ್ನು 2021 ಫೆ.22 ರಂದು ಕೊಲೆ ಮಾಡಿ ನಗದು ಮತ್ತು ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆ ಮೂಡಬಿದ್ರೆಯ ನಿವಾಸಿ ಅನಿಲ್ ಗೆ ಮಡಿಕೇರಿಯ 1 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಯನ್ನು ನಡೆಸಿ ಇಂದು ಪ್ರಕರಣದ ಆರೋಪಿಯಾದ ಅನಿಲ್ (35) ಗೆ ಕೊಲೆ ಮಾಡಿರುವ ಅಪರಾಧಕ್ಕಾಗಿ ಜೀವಾವಧಿ ಜೈಲು ಶಿಕ್ಷೆ ಹಾಗೂ ರೂ.45 ಸಾವಿರ ದಂಡ ವಿಧಿಸಿದ್ದು, ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ ಒಂದು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿ ನ್ಯಾಯಾಲಯದ ನ್ಯಾಯಾಧೀಶರಾದ ಜಿ.ಪ್ರಶಾಂತಿ ಅವರು ತೀರ್ಪು ನೀಡಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಲಲಿತಾ.ಬಿ.ಪಿ ಅವರು 2021 ಫೆ.22 ರಂದು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ತಲೆಗೆ ಹೊಡೆದು ಕೊಲೆ ಮಾಡಿ ಮನೆಯಲ್ಲಿದ್ದ ಚಿನ್ನಾಭರಣಗಳು ಮತ್ತು…
ಸೋಮವಾರಪೇಟೆ NEWS DESK ಜ.28 : ಜಿಲ್ಲೆಯ ಮೂರ್ನಾಡು ಸಮೀಪದ ಕಟ್ಟೆಮಾಡು ದೇವಾಲಯದ ಆರ್ಚಕರಾದ ವಿಘ್ನೇಶ್ ಭಟ್ ಅವರ ಮೇಲಿನ ಹಲ್ಲೆ ಖಂಡನೀಯವಾಗಿದ್ದು ಕೂಡಲೇ ಅರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಸೋಮವಾರಪೇಟೆ ಬ್ರಾಹ್ಮಣ ಸಮಾಜ ಆಗ್ರಹಿಸಿದೆ. ಸದಾಕಾಲ ಧರ್ಮದ ಒಳಿತಿಗಾಗಿ ಸೇವೆಸಲ್ಲಿಸುತ್ತ ದೇವಾಲಯ ಮತ್ತು ಆಡಳಿತ ಮಂಡಳಿಗಳೀಗೆ ಹೊಂದಿಕೊ0ಡು ಭಕ್ತರ ಒಳಿತಿಗಾಗಿ ಸರ್ವೇಜನ ಸುಖಿನೋಭವಂತು ಎನ್ನುತ್ತಾ ಭಗವಂತನ ಸೇವೆ ಮಾಡುತ್ತಿರುವ ಅರ್ಚಕರ ಮೇಲೆ ಹಲ್ಲೆ ನಡೆಸುವುದು ಅಮಾನೀಯ ಕೃತ್ಯವಾಗಿದೆ ಎಂದು ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಸಮಾಜದ ಉಪಾಧ್ಯಕ್ಷ ಎಸ್.ಆರ್.ಸೋಮೇಶ್ ಖಂಡಿಸಿದ್ದಾರೆ. ಈಗಾಗಲೆ ಸಂಖ್ಯೆಯಲ್ಲಿ ಕಡಿಮೆಯಿರುವ ಬ್ರಾಹ್ಮಣವರ್ಗದ ರಕ್ಷಣೆಗೆ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು. ಕೂಡಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಸಮಾಜ ಬಾಂಧವರ ಸಹಕಾರದಿಂದ ಜಿಲ್ಲಾಡಳಿತ ಭವನದ ಮುಂಭಾಗ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು. ಹಲವಾರು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಜಾತಿಗಳ ನಡುವೆ ಯಾವುದೇ ಗಲಾಟೆ ಜಗಳ ಇಲ್ಲದೆ ಅನೂನ್ಯವಾಗಿ ಬದುಕು ನಡೆಯುತ್ತಿತ್ತು. ಇತ್ತೀಚಿನ ದಿನಗಳಲ್ಲಿ…
ಮಡಿಕೇರಿ NEWS DESK ಜ.28 : ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಅವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಬಂಧನಕ್ಕೆ ಕೊಡಗು ಜಿಲ್ಲಾ ಪೊಲೀಸ್ ಮೂರು ವಿಶೇಷ ತಂಡಗಳನ್ನು ರಚಿಸಿದ್ದು, ದುಷ್ಕೃತ್ಯ ಎಸಗಿದವರನ್ನು ಶೀಘ್ರ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಟ್ಟೆಮಾಡು ದೇವಸ್ಥಾನಕ್ಕೆ ಸಂಬಂಧಿಸಿದಂತೆ ಎರಡು ಸಮುದಾಯಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಸಂಧಾನದ ಮೂಲಕ ಬಗೆಹರಿಸುವ ಪ್ರಯತ್ನ ನಡೆದಿದೆ. ಈ ಹಂತದಲ್ಲಿ ಅಶಾಂತಿ ಸೃಷ್ಟಿಸುವುದು ಸರಿಯಲ್ಲವೆಂದರು. ಪ್ರಧಾನ ಅರ್ಚಕರ ಮನೆಗೆ ಸೋಮವಾರ ಸಂಜೆ ತೆರಳಿದ ಇಬ್ಬರು, ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಟ್ಟೆಮಾಡು ಪ್ರಕರಣವನ್ನು ಬಳಸಿಕೊಂಡು ದುಷ್ಕರ್ಮಿಗಳು, ಸಮಾಜದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನಗಳಿಗೆ ಮುಂದಾದಲ್ಲಿ ಅವರನ್ನು ಕ್ರಿಮಿನಲ್ಗಳೆಂದು ಪರಿಗಣಿಸಿ, ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಪ್ರತಿಭಟನೆ ಎಲ್ಲರ ಹಕ್ಕು- ದೇವಸ್ಥಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು…
ಮಡಿಕೇರಿ NEWS DESK ಜ.28 : ಐತಿಹಾಸಿಕ ಹಿನ್ನೆಲೆಯ ನಗರದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಸ್ಥಾನದ ದಸರಾ ಉತ್ಸವ ಸಮಿತಿ ಐವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆ ಹೊರ ತಂದಿರುವ ‘ದಶಮಿ’ ಪುಸ್ತಕವನ್ನು ಮಂಗಳವಾರ ಸಂಜೆ ಅನಾವರಣಗೊಳಿಸಲಾಯಿತು. ಸ್ಥಳೀಯ ರಾಜಾಸೀಟು ಬಳಿಯ ರಾಜದರ್ಶನ್ ಸಭಾಂಗಣದಲ್ಲಿ ಆಯೋಜಿತ ಸಮಾರಂಭದಲ್ಲಿ ಅತಿಥಿ ಗಣ್ಯರು ಪುಸ್ತಕವನ್ನು ಅನಾವರಣಗೊಳಿಸಿದರು. ಪುಸ್ತಕದಲ್ಲಿ ದೇವಸ್ಥಾನದ ದಸರಾ ಉತ್ಸವ ಸಮಿತಿ ನಡೆದು ಬಂದಿರುವ ಹಾದಿ, ಹಿಂದೆ ಸಮಿತಿಯಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರ ವಿವರ, ದೇವಸ್ಥಾನದ ಹಿನ್ನೆಲಗಳ ಬಗ್ಗೆ ಬೆಳಕು ಚೆಲ್ಲಲಾಗಿದೆ. ಸನ್ಮಾನ- ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದಸರಾ ಸಮಿತಿ ಅಧ್ಯಕ್ಷ ರವಿ ಕರ್ಕೆರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿಯ ಮಾಜಿ ಅಧ್ಯಕ್ಷರು, ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಇಂದು ನಮ್ಮೊಂದಿಗೆ ಇಲ್ಲದ ಅಧ್ಯಕ್ಷರುಗಳ ಕುಟುಂಬಸ್ಥರನ್ನು, ಸಮಿತಿಗಾಗಿ ದುಡಿಯ ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸಿ ಗೌರವಿಸಲಾಯಿತು. ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್…






