ಲೇಖಕ: admin

ನಾಪೋಕ್ಲು ಫೆ.15 NEWS DESK : ಹಲ್ಲುಗಳ ರಕ್ಷಣೆಯ ಬಗ್ಗೆ ಕಾಳಜಿ ವಹಿಸಬೇಕಾದ್ದು ಅತ್ಯಗತ್ಯ ಎಂದು ಮಡಿಕೇರಿ ವಿಜ್ಞಾನ ಮಹಾ ವಿದ್ಯಾಲಯದ ನೋಡಲ್ ಅಧಿಕಾರಿ ಡಾ.ರೇವಣ್ಣ ಹೇಳಿದರು. ಮಡಿಕೇರಿ ವಿಜ್ಞಾನ ಮಹಾವಿದ್ಯಾಲಯ, ವಿರಾಜಪೇಟೆ ದಂತ ಮಹಾವಿದ್ಯಾಲಯ, ಲಯನ್ಸ್ ಕ್ಲಬ್ ನಾಪೋಕ್ಲು, ಗ್ರಾಮ ಅಭಿವೃದ್ಧಿ ಸಂಘ ವೆಸ್ಟ್ ಕೊಳಕೇರಿ ಸಂಯುಕ್ತ ಆಶ್ರಯದಲ್ಲಿ ಕೊಳಕೇರಿ ಗ್ರಾಮ ಅಭಿವೃದ್ಧಿ ಸಂಘದ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಎಲ್ಲರೂ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು, ಅದರಲ್ಲೂ ಹಲ್ಲುಗಳ ಬಗ್ಗೆ ಕಾಳಜಿ ವಹಿಸಬೇಕು. ಚಿಕ್ಕಂದಿನಲ್ಲೇ ಹುಳುಕು ಹಲ್ಲುಗಳ ರಕ್ಷಣೆ ಬಗ್ಗೆ ಕಾಳಜಿ ಹೊಂದಿರುವುದು ಅತ್ಯಗತ್ಯ. ಸಾಮಾನ್ಯವಾಗಿ ಹುಳುಕು ಹಲ್ಲುಗಳು ಮಾನವನ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಆರಂಭಿಕ ಹಂತದಲ್ಲಿ ಹುಳುಕು ಹಲ್ಲುಗಳ ತೊಂದರೆ ಕಾಣಿಸಿಕೊಂಡಾಗ ಚಿಕಿತ್ಸೆ ನೀಡಿ ಪರಿಹರಿಸಿಕೊಳ್ಳಬಹುದು. ಹಾಗೆಯೇ ಮನುಷ್ಯನಿಗೆ ವಸಡಿನ ತೊಂದರೆಗಳು ಕಂಡುಬರುತ್ತವೆ. ಆರಂಭದ ಹಂತದಲ್ಲಿ ಚಿಕಿತ್ಸೆ ನೀಡಿ ಸರಿಪಡಿಸಿಕೊಳ್ಳಲು ಸಾಧ್ಯ ಎಂದರು. ಜಿಲ್ಲೆಯ ಗ್ರಾಮೀಣ…

Read More

ಕುಶಾಲನಗರ ಫೆ.15 NEWS DESK : ಪ್ರೇಮಿಗಳ ದಿನವನ್ನು ಕಾವೇರಿಯ ಸ್ವಚ್ಛತಾ ಕಾರ್ಯ ಮಾಡುವ ಮೂಲಕ ಕಾಲೇಜು ವಿದ್ಯಾರ್ಥಿಗಳು ವಿಶೇಷವಾಗಿ ಆಚರಣೆ ಮಾಡಿ ಯುವ ಪೀಳಿಗೆಗೆ ಹೊಸ ಸಂದೇಶ ನೀಡಿದರು. ಕುಶಾಲನಗರದಲ್ಲಿ  ನಡೆದ ಕಾರ್ಯಕ್ರಮದಲ್ಲಿ  ಕೊಪ್ಪ ಭಾರತ್ ಮಾತಾ ಪ್ರಥಮ ದರ್ಜೆ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಕುಶಾಲನಗರ ಕೊಪ್ಪ ಗಡಿ ಭಾಗದ ಕಾವೇರಿ ನದಿಯಲ್ಲಿ ಇಳಿದು ಐ ಲವ್ ಕಾವೇರಿ ಅನ್ನುವ ಘೋಷಣೆಯೊಂದಿಗೆ ನದಿಯಲ್ಲಿದ್ದ ತ್ಯಾಜ್ಯಗಳ ತೆರವು ಗೊಳಿಸುವ ಕಾಯಕದಲ್ಲಿ ತೊಡಗಿಸಿಕೊಂಡ ದೃಶ್ಯ ಕಂಡು ಬಂತು. ಕುಶಾಲನಗರ ಕೊಪ್ಪ ಕಾವೇರಿ ನದಿ ಸೇತುವೆ ಮೇಲ್ಭಾಗದಿಂದ ಜನರು ಎಸೆದ ಪೂಜಾ ಸಾಮಗ್ರಿಗಳು, ಬಳಕೆಗೆ ಯೋಗ್ಯವಲ್ಲದ ವಸ್ತುಗಳನ್ನು ನೂರಕ್ಕೂ ಅಧಿಕ ವಿದ್ಯಾರ್ಥಿ ವಿದ್ಯಾರ್ಥಿನಿಯರು ತೆರವುಗೊಳಿಸಿ ಕುಶಾಲನಗರ ಪುರಸಭೆ ಮತ್ತು ಕೊಪ್ಪ ಗ್ರಾಮ ಪಂಚಾಯಿತಿಗಳ ಕಸ ವಿಲೇವಾರಿ ವಾಹನಗಳಿಗೆ ತುಂಬಿಸಿ ನದಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಳೆದ ವರ್ಷ ಫೆಬ್ರುವರಿ 14ರಂದು ಕೂಡ ಇದೇ ರೀತಿಯ ಅಭಿಯಾನದಲ್ಲಿ ಈ ಕಾಲೇಜಿನ ವಿದ್ಯಾರ್ಥಿಗಳು ತೊಡಗಿಸಿಕೊಂಡು ಕಾವೇರಿ ನದಿಯ…

Read More

ಮಡಿಕೇರಿ ಫೆ.15 NEWS DESK : ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ದಕ್ಷಿಣ ಕನ್ನಡದ ಬೆಳ್ತಂಗಡಿಯ ಸೇವಾಭಾರತಿ ಸಂಸ್ಥೆಯ ವತಿಯಿಂದ ಮಡಿಕೇರಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ ಮತ್ತು ಗಾಲಿಕುರ್ಚಿ ಜಾಥಾ ನಡೆಯಿತು. ಮಡಿಕೇರಿಯ ವಿಕಾಸ್ ಜನ ಸೇವಾ ಟ್ರಸ್ಟ್ ಆಶ್ರಮ, ಸ್ವಾಮಿ ವಿವೇಕಾನಂದ ಯೂತ್ ಮೂಮ್ ಮೆಂಟ್ ಕೊಡಗು ಶಾಖೆ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋದಕ ಆಸ್ಪತ್ರೆಯ ಸಹಯೋಗದಲ್ಲಿ ನಗರದ ಅಶ್ವಿನಿ ಆಸ್ಪತ್ರೆಯಲ್ಲಿ ಮೂರು ದಿನಗಳ ಕಾಲ ಶಿಬಿರ ನಡೆಸಲಾಗಿದ್ದು,  ಜನ ಸಾಮಾನ್ಯರಿಗೆ ಬೆನ್ನುಹುರಿ ಅಪಘಾತದ ಬಗ್ಗೆ ಅರಿವು ಮೂಡಿಸಲು ಮತ್ತು ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದಾಗಿ ಗಾಲಿಕುರ್ಚಿ ಜಾಥಾವನ್ನು ನಡೆಸಲಾಯಿತು.  ಈ ಸಂದರ್ಭ ಸೇವಾ ಭಾರತಿ ಖಜಾಂಚಿ ಹಾಗೂ ಸೇವಾ ಧಾಮ ಸಂಸ್ಥೆಯ ಸ್ಥಾಪಕ ಕೆ.ವಿನಾಯಕ ರಾವ್, ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಸ್ಥಾಯಿ ಸಮಿತಿ ಸದಸ್ಯ ಅಜಯ್ ಸೂದ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಫೆ.15 NEWS DESK :  ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಕಾರದಲ್ಲಿ ಕ್ಲಬ್ ಮಹೀಂದ್ರ ವತಿಯಿಂದ ರಕ್ತದಾನ ಶಿಬಿರವು ನಗರದ ಹೊರವಲಯದಲ್ಲಿರುವ ಕ್ಲಬ್ ಮಹೀಂದ್ರದಲ್ಲಿ ನಡೆಯಿತು. ಹೋಟೆಲ್ ಕ್ಲಬ್ ಮಹೀಂದ್ರದ ಸುಮಾರು 45 ಸಿಬ್ಬಂದಿಗಳು ರಕ್ತದಾನ ಮಾಡಿದರು. ಕ್ಲಬ್ ಮಹೀಂದ್ರದ ವ್ಯವಸ್ಥಾಪಕ ಫಾರೂಕ್, ಎಂಜಿನಿಯರ್ ದೀಪಕ್ ಕುಮಾರ್, ಮಾನವ ಸಂಪನ್ಮೂಲ ವಿಭಾಗದ ನವೀನ್ ನೊರೋನಾ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರಕ್ತನಿಧಿ ವಿಭಾಗದ ಡಾ.ಕರುಂಬಯ್ಯ ಇತರರು ಇದ್ದರು.

Read More

ಮಡಿಕೇರಿ ಫೆ.15 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಾಗೂ ಜಿಲ್ಲಾ ಮಹಿಳಾ ಸಹಾಯವಾಣಿ ಇವರ ಸಹಯೋಗದೊಂದಿಗೆ 2024-25ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಡಿ “ಬೇಟಿ ಬಚಾವೊ-ಬೇಟಿ ಪಡಾವೊ” ತಾಲ್ಲೂಕು ಮಟ್ಟದ ಕಾರ್ಯಕ್ರಮ ಏರ್ಪಡಿಸಲಾಗಿದ್ದು “ಶಾಲಾ ಮಕ್ಕಳಿಗೆ ಪ್ರೇರಣಾ ತುಣುಕು ಕಾರ್ಯಾಗಾರವು ಹೆಬ್ಬಾಲೆ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆಯಿತು. ಕುಶಾಲನಗರ ಗ್ರಾಮಂತರ ಠಾಣೆಯ ಎ.ಎಸ್.ಐ ಕುಮಾರಿ ಉದ್ಘಾಟಿಸಿ ಮಾತನಾಡಿ. ಪ್ರಸ್ತುತ ದಿನಗಳಲ್ಲಿ ಶಾಲಾ ಮಕ್ಕಳು ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಬೇಕು. ಸರ್ಕಾರ ಮಕ್ಕಳಿಗಾಗಿ ಉಚಿತ ಹಾಸ್ಟೆಲ್ ವ್ಯವಸ್ಥೆಗಳನ್ನು ಕಲ್ಪಿಸಿದ್ದು ಮಕ್ಕಳು ಶಿಕ್ಷಣವಂತರಾಗುವಲ್ಲಿ ಹೆಚ್ಚಿನದಾದ ಶ್ರಮ ವಹಿಸಬೇಕು. ವಿದ್ಯಾಭ್ಯಾಸದ ಸಮಯದಲ್ಲಿ ಏಕಾಗ್ರತೆಯಿಂದ ಇರಬೇಕಾಗುತ್ತದೆ. ಮಕ್ಕಳಿಗೆ ಸಾರ್ವಜನಿಕ ವಲಯದಲ್ಲಿ ಸಮಸ್ಯೆಗಳಾದ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕ್ಕೆ ಕರೆ ಮಾಡಿ ಮಾಹಿತಿ ನೀಡಿದಾಗ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು. ಪೊಲೀಸ್ ಇಲಾಖೆಯ 112 ಗೆ…

Read More

ಮಡಿಕೇರಿ ಫೆ.15 NEWS DESK : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲೆಯ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ (ಕೆಎಬಿಎಚ್‍ಐ) ವತಿಯಿಂದ ಅಂತಾರಾಷ್ಟ್ರೀಯ ಅಪಸ್ಮಾರ (ಮೂರ್ಛೆರೋಗ) ದಿನಾಚರಣೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಭೋದಕ ಆಸ್ಪತ್ರೆಯ ಉಪನ್ಯಾಸಕರ ಕೊಠಡಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆಒಐಎಂಎಸ್ ಸಂಸ್ಥೆಯ ಸ್ಥಾನಿಯ ವೈದ್ಯಾಧಿಕಾರಿ ಆಡಿ ಸತೀಶ್ ಸರ್ ಅವರು ಅಂತಾರಾಷ್ಟ್ರೀಯ ಮೂರ್ಛೆರೋಗ ದಿನಾಚರಣೆ 2025 ಘೋಷವಾಕ್ಯವಾದ “ರೋಗಗ್ರಸ್ಥೆಯನ್ನು ಮೀರಿ ಅಪಸ್ಮಾರದ ಅರಿವಿನೊಂದಿಗೆ ಜೀವನವನ್ನು ಸಶಕ್ತಗೊಳಿಸುವ” ಎಂಬ ಅಪಸ್ಮಾರ ರೋಗದ ಚಿಹ್ನೆಗಳನ್ನು ಮುಂಚಿತವಾಗಿ ರೋಗಿಯಲ್ಲಿ ಗುರುತಿಸುವ ಹಾಗೂ ಅಪಸ್ಮಾರ ರೋಗ ಬಂದ ರೋಗಿಯನ್ನು ಹೇಗೆ ಚಿಕಿತ್ಸೆಯನ್ನು ಕೊಡಿಸಬೇಕೆಂದು ನೆರೆದಿದ್ದ ವೈದ್ಯಕೀಯ ವಿದ್ಯಾರ್ಥಿಗಳಿಗೆ ತಿಳಿಸಿದರು. ಕೆಒಐಎಂಎಸ್ ಸಂಸ್ಥೆಯ ಸಾಮಾನ್ಯ ವೈದ್ಯಕೀಯ ವಿಭಾಗದ ವೈದ್ಯಧಿಕಾರಿಯಾದ ಆಡಿ ಚೇತನ್ ಮಾತನಾಡಿ, ಅಪಸ್ಮಾರ ಕಾಯಿಲೆಯ ಬಗೆಗೆ ನೆರೆದಿದ್ದ ವಿದ್ಯಾರ್ಥಿಗಳಿಗೆ ಅಪಸ್ಮಾರ ಖಾಯಿಲೆಯ ಉಪನ್ಯಾಸವನ್ನು ನೀಡಿದರು. ಹಾಗೂ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ ಕೊಡಗು ಜಿಲ್ಲೆಯ…

Read More

ಮಡಿಕೇರಿ ಫೆ.15 NEWS DESK : ಕೊಡಗು ಜಿಲ್ಲೆಯಲ್ಲಿ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ನಿಗದಿಪಡಿಸಲಾಗಿದ್ದ ಗುರಿಗಿಂತ ಅರ್ಜಿಗಳು ಸಲ್ಲಿಕೆಯಾಗಿರುವುದು ಕಡಿಮೆಯಾಗಿದೆ. ಈ ಸಂಬಂಧ ತಳಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷರಾದ ಜಿ.ಪಲ್ಲವಿ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಅಲೆಮಾರಿ ಅಭಿವೃದ್ಧಿ ನಿಗಮದಿಂದ ನೀಡಲಾಗುವ ಸ್ವಯಂ ಉದ್ಯೋಗ, ಉದ್ಯಮಶೀಲತಾ, ಸ್ವಾವಲಂಬಿ ಸಾರಥಿ ಹಾಗೂ ಮೈಕ್ರೋ ಕ್ರೆಡಿಟ್ ಯೋಜನೆಗಳಡಿ ನಿಗದಿತ ಗುರಿಗಿಂತ ಅರ್ಜಿಗಳ ಸಲ್ಲಿಕೆ ಕಡಿಮೆಯಾಗಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ಕಾಳಜಿವಹಿಸಿ ಪ್ರಗತಿ ಸಾಧಿಸುವಂತೆ ಸೂಚಿಸಿದರು. 2023-24 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಯೋಜನೆಯಡಿ ನಿಗದಿಪಡಿಸಿದ 24 ರ ಭೌತಿಕ ಗುರಿಯಲ್ಲಿ 19 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿದೆ. ಉದ್ಯಮಶೀಲತಾ ಯೋಜನೆಯಡಿ 11 ರ ಗುರಿಯಲ್ಲಿ…

Read More

ಮಡಿಕೇರಿ ಫೆ.15 NEWS DESK : ವಿಶಿಷ್ಟ ಸಂಸ್ಕೃತಿ, ಪರಂಪರೆಗಳನ್ನು ಹೊಂದಿ ಕೊಡಗಿನ ನೆಲದಲ್ಲಿ ಸಹಸ್ರಾರು ವರ್ಷಗಳಿಂದ ಬದುಕಿ ಬಾಳುತ್ತಿರುವ ‘ಕುಡಿಯ’ ಸಮುದಾಯವನ್ನು ಅಲೆಮಾರಿಗಳೆನ್ನದೆ, ಆದಿವಾಸಿಗಳ ಪಟ್ಟಿಗೆ ಸೇರಿಸಬೇಕೆಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷರಿಗೆ ಕುಡಿಯ ಸಮುದಾಯದ ಪ್ರಮುಖರು ಮನವಿ ಮಾಡಿದರು. ನಗರದ ಸುದರ್ಶನ ಅತಿಥಿ ಗೃಹದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳ ಅಹವಾಲುಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷರಾದ ಜಿ.ಪಲ್ಲವಿ ಅವರು ಸ್ವೀಕರಿಸಿದರು. ಈ ಸಂದರ್ಭ ಕುಡಿಯ ಸಮುದಾಯದ ಪ್ರಮುಖರಾದ ಕುಡಿಯರ ಮುತ್ತಪ್ಪ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಕುಡಿಯ ಜನಾಂಗಕ್ಕೆ 5 ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದ್ದು, ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ. ಆದ್ದರಿಂದ ಕುಡಿಯ ಸಮುದಾಯವನ್ನು ಅಲೆಮಾರಿಗಳೆಂದು ಹೇಳದೆ ಆದಿವಾಸಿಗಳ ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ನಿಗಮದ ವಿಶೇಷ ಕರ್ತವ್ಯ ಅಧಿಕಾರಿ ಆನಂದ್ ಕುಮಾರ್, ಸೂಕ್ಷ್ಮ, ಸಣ್ಣ ಸಣ್ಣ…

Read More

ಮಡಿಕೇರಿ ಫೆ.15 NEWS DESK : ನೊಬೆಲ್ ಪ್ರಶಸ್ತಿ ವಿಜೇತ ಟಿಬೆಟಿಯನ್ ಧಾರ್ಮಿಕ ಗುರು 14ನೇ ದಲಾಯಿಲಾಮ ಅವರ ಆಶೀರ್ವಾದ ಪಡೆಯಲು ರಾಜ್ಯ ಗೃಹ ಸಚಿವ ಪರಮೇಶ್ವರ್ ಕುಶಾಲನಗರ ಸಮೀಪ ಬೈಲುಕುಪ್ಪೆಗೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದರು. ದಂಪತಿ ಸಮೇತರಾಗಿ ಆಗಮಿಸಿದ ಪರಮೇಶ್ವರ್ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಕ್ಕೆ ಅವರ ಭೇಟಿ ಸಂದರ್ಭ ಪ್ರತಿ ಬಾರಿ ಆಶೀರ್ವಾದ ಪಡೆದಿದ್ದೇನೆ ಎಂದ ಗೃಹ ಸಚಿವ ಪರಮೇಶ್ವರ್ ಬೈಲುಕುಪ್ಪೆಗೆ ಏಳು ವರ್ಷಗಳ ನಂತರ ದಲೈಲಾಮ ಅವರು ಭೇಟಿ ನೀಡಿದ್ದಾರೆ. 90 ವರ್ಷ ದಾಟಿರುವ ದಲೈಲಾಮ ಅವರಿಗೆ ಅಲ್ಪಸ್ವಲ್ಪ ಆರೋಗ್ಯದ ಸಮಸ್ಯೆ ಇರುವುದಾಗಿ ಮಾಹಿತಿ ನೀಡಿದ ಅವರು, ಭಗವಂತ ಇನ್ನೂ ಹೆಚ್ಚಿನ ಆಯಸ್ಸು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು. ದಲೈಲಾಮ ಅವರಿಗೆ ಜೀವ ಬೆದರಿಕೆ ಬಗ್ಗೆ ಗುಪ್ತಚರ ಇಲಾಖೆಯಿಂದ ಬಂದ ಮಾಹಿತಿ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚಿನ ಭದ್ರತೆಯನ್ನು ನೀಡಲಾಗುತ್ತಿದೆ ರಾಜ್ಯದ ಅತಿಥಿಯಾಗಿ ಬಂದಿರುವ ಕಾರಣ ರಾಜ್ಯ ಸರ್ಕಾರ…

Read More

ಮಡಿಕೇರಿ NEWS DESK ಫೆ.14 : ಇತ್ತೀಚೆಗೆ ಕೂಟುಹೊಳೆಯಲ್ಲಿ ಮೃತಪಟ್ಟ ಮಡಿಕೇರಿ ನವೋದಯ ಶಾಲೆಯ ಪಿಯುಸಿ ವಿದ್ಯಾರ್ಥಿ ಅಮಿತ್  ನ ಮನೆಗೆ ಶಾಸಕ ಡಾ.ಮಂತರ್ ಗೌಡ ಇಂದು ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.

Read More