ಬೆಂಗಳೂರು ಜ.28 NEWS DESK : ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು. ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು. ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ,…
ಲೇಖಕ: admin
ಮಡಿಕೇರಿ ಜ.28 NEWS DESK : ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ಪ್ರಗತಿಪರ ಮತ್ತು ಜನಪರ ಸಂಘಟನೆಗಳ ವತಿಯಿಂದ ಆದಿವಾಸಿ ನಾಯಕ ವೈ.ಕೆ.ಗಣೇಶಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಗೋಣಿಕೊಪ್ಪಲಿನ ಎ.ಪಿ.ಎಂ.ಸಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣೇಶ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭ ಕೇರಳದ ಬುಡಕಟ್ಟು ಮತ್ತು ಸಮಾಜ ಕಲ್ಯಾಣ ಸಚಿವ ಸಂಗಾತಿ ಓ.ಆರ್.ಕೇಳು, ಸಿಪಿಐಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಡಾ.ಕೆ.ಪ್ರಕಾಶ್ ಮಾತನಾಡಿದರು. ಜೆ.ಆರ್.ಪ್ರೇಮ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹ ಸಂಚಾಲಕ ಡಾ.ಎಸ್.ವೈ.ಗುರುಶಾಂತ್, ಜಿಲ್ಲೆಯ ವಿವಿಧ ಮುಖಂಡರುಗಳು ಭಾಗವಹಿಸಿ ಅಗಲಿದ ನಾಯಕನಿಗೆ ನುಡಿ ನಮನ ಸಲ್ಲಿಸಿದರು.
ಮಡಿಕೇರಿ ಜ.28 NEWS DESK : ಮಡಿಕೇರಿಯ ರೋಶನಾರದಲ್ಲಿರುವ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರ ಸಮಾಧಿ ಸ್ಥಳದಲ್ಲಿಂದು ಕಾಯ೯ಪ್ಪ ಅವರ 126ನೇ ವಷ೯ದ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರ ಪುತ್ರ ನಿವೃತ್ತ ಏರ್ ಮಾಷ೯ಲ್ ನಂದಾ ಕಾಯ೯ಪ್ಪ, ಸೊಸೆ ಮೀನಾ ಕಾಯ೯ಪ್ಪ, ಪುತ್ರಿ ನಳಿನಿ ಕಾಯ೯ಪ್ಪ, ನಿವೃತ್ತ ಕನ೯ಲ್ ಬಿ.ಜಿ.ವಿ.ಕುಮಾರ್, ಕೊಡಗು ವಿದ್ಯಾಲಯದ ಆಡಳಿತ ಮಂಡಳಿ ನಿದೇ೯ಶಕ ಸಿ.ಎಸ್.ಗುರುದತ್, ಪ್ರಾಂಶುಪಾಲೆ ಸುಮಿತ್ರಾ, ಆಡಳಿತಾಧಿಕಾರಿ ರವಿ, ಶಾಲಾ ಶಿಕ್ಷಕಿಯರು, ವಿದ್ಯಾಥಿ೯ಗಳು, ಎನ್ ಸಿ ಸಿ ಕೆಡೆಟ್ ಗಳು, ಪೊಲೀಸರು ಸೇರಿದಂತೆ ಗಣ್ಯರು ಕಾಯ೯ಪ್ಪ ಅವರ ಸಮಾಧಿ ಸ್ಥಳಕ್ಕೆ ಪುಪ್ಪಾಚ೯ನೆ ಮೂಲಕ ಗೌರವ ಸಮಪಿ೯ಸಿದರು. ಈ ಸಂದಭ೯ ಮಾತನಾಡಿದ ನಿವೃತ್ತ ಏರ್ ಮಾಷ೯ಲ್ ನಂದಾ ಕಾಯ೯ಪ್ಪ, ತನ್ನ ತಂದೆಗೆ ದೇಶವೇ ಸದಾ ಮೊದಲಾಗಿತ್ತು, ಕುಟುಂಬ, ಗೆಳೆಯರು ನಂತರದ ಸ್ಥಾನದಲ್ಲಿದ್ದರು. ಅವರು ಸೇನಾ ಜೀವನದಲ್ಲಿ ತೋರಿದ ಪ್ರಮಾಣಿಕತೆ, ಶಿಸ್ತಿನ ಗುಣಗಳೇ ಪ್ರತೀಯೋವ೯ ಭಾರತೀಯನಿಗೂ ಮಾಗ೯ದಶಿ೯ಯಾಗಿರಬೇಕಾಗಿದೆ ಎಂದರು. ಉತ್ತಮ ಮನುಷ್ಯನಾಗಿ ಜೀವಿಸುವ ನಿಟ್ಟಿನಲ್ಲಿ ಪ್ರತೀಯೋವ೯ರು…
ಮಡಿಕೇರಿ ಜ.28 NEWS DESK : ಬೆಳೆದ ಬೆಳೆಗೆ ಸಮರ್ಪಕವಾದ ಬೆಲೆ ಸಿಗದ ಕಾರಣ ಶುಂಠಿ ಬೆಳೆದ ಕೃಷಿಕರು ಕಂಗಾಲಾಗಿದ್ದು, ಆರ್ಥಿಕವಾಗಿ ಸಾಕಷ್ಟು ನಷ್ಟಕ್ಕೆ ತುತ್ತಾಗುತ್ತಿರುವುದರಿಂದ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ ಶುಂಠಿ ಬೆಳೆಗಾರರ ಹಿತ ಕಾಪಾಡಬೇಕೆಂದು ಕೊಡಗು ಜಿಲ್ಲಾ ಶುಂಠಿ ಕೃಷಿಕರು ಕೊಡಗು ಜಿಲ್ಲಾಡಳಿತದ ಮೂಲಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ಸಹಾಯಕ ಜಿಲ್ಲಾಧಿಕಾರಿಗಳಿಗೆ ಬೇಡಿಕೆ ಪತ್ರವನ್ನು ನೀಡಿರುವ ಬೆಳೆಗಾರರು, ಶುಂಠಿ ಬೆಳೆಯಲು ತಗಲುವ ಉತ್ಪಾದಕ ವೆಚ್ಚ ಅಧಿಕವಾಗಿದೆ. ಬೆಲೆ ಹಾಗೂ ಬೆಳೆಯ ಇಳುವರಿ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಶುಂಠಿ ಬೆಳೆಗಾರರಿಗೆ ಕ್ವಿಂಟಾಲ್ ಗೆ ಕನಿಷ್ಠ 7000 ರೂಗಳ ಬೆಂಬಲ ಬೆಲೆಯನ್ನು ನೀಡುವ ಮೂಲಕ ಕೃಷಿಕರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕೆಂದು ಒತ್ತಾಯಿಸಿದ್ದಾರೆ. ಮಾರುಕಟ್ಟೆಯಲ್ಲಿ ಪ್ರಸ್ತುತ ಶುಂಠಿಯ ಬೆಲೆ 60 ಕೆಜಿ ತೂಕದ ಚೀಲವೊಂದಕ್ಕೆ 1000 ರೂಗಳಿಂದ 1100 ರೂಗಳಿದ್ದು, ವರ್ಷವಿಡೀ ಲಕ್ಷಾಂತರ ರೂ.ಹಣ ಖರ್ಚು ಮಾಡಿ ಬೆಳೆ ಬೆಳೆವ ರೈತರಿಗೆ…
ಮಡಿಕೇರಿ ಜ.28 NEWS DESK : ಶ್ರೀಮಂಗಲದ ಜೆ.ಸಿ.ವಿದ್ಯಾ ಸಂಸ್ಥೆಯ 35ನೇ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಕೊಟ್ರಂಗಡ ಸುಬ್ರಮಣಿ ಪ್ರತಿಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ತಂದು ಕೊಡುವುದಲ್ಲದೆ ಕೊಡಗಿನಲ್ಲಿ ಪ್ರಪ್ರಥಮ ಬಾರಿಗೆ ಗ್ರಾಮಾಂತರ ಶಾಲೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ತಂದು ಕೊಟ್ಟಿದ್ದು ನಮ್ಮ ಸಂಸ್ಥೆಯ ಸಾಧನೆ ಎಂದರು. ಇದಕ್ಕೆ ಶ್ರಮಿಸಿದ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು. ಸಂಸ್ಥೆಯ ಕರೆಸ್ಪಾಂಡೆಂಟ್ ಮಚ್ಚಮಾಡ ಸುರೇಶ್ ಮಾತನಾಡಿ, ಈ ವಿದ್ಯಾ ಸಂಸ್ಥೆಯಲ್ಲಿ ವಿದ್ಯೆಯನ್ನು ಪಡೆದ ವಿದ್ಯಾರ್ಥಿಗಳು ಇಂದು ಡಾಕ್ಟರ್, ಇಂಜಿನಿಯರ್, ಸೈನಿಕರಾಗಿ, ಕ್ರೀಡಾ ಕ್ಷೇತ್ರದಲ್ಲೂ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಚಾರ ಎಂದರು. ಶಾಲೆಯ ಆಡಳಿತ ಅಧಿಕಾರಿ ಕೊಟ್ರಂಗದ ತಿಮ್ಮಯ್ಯ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ತಾವು ಸದಾಸಿದ್ಧ ಎಂದು ಹೇಳಿದರಲ್ಲದೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿದರು. ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎನ್.ಸತೀಶ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಿಂಧು ವಾರ್ಷಿಕ ವರದಿ ವಾಚಿಸಿದರು. ಸಹ ಶಿಕ್ಷಕ ಪ್ರಸನ್ನ…
ಬೆಂಗಳೂರು ಜ.28 NEWS DESK : ಬೆಂಗಳೂರಿನ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ನಾಡದೇವಿ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿ, ಕನ್ನಡದ ಕಂಪು ಜಗದಗಲ ಪಸರಿಸಲೆಂದು ಶುಭ ಕೋರಿದರು. ವಿಶೇಷ ಪೂಜೆ ಮೂಲಕ 43.6 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ಅನಾವರಣಗೊಳಿಸಲಾಗಿದ್ದು, ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಸ್ಪೀಕರ್ ಯು.ಟಿ.ಖಾದರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ಸಚಿವರು, ಶಾಸಕರು ಸೇರಿದಂತೆ ಹಲವರು ಭಾಗಿಯಾಗಿದ್ದರು.
ಮಡಿಕೇರಿ ಜ.28 NEWS DESK : ಪುಟಾಣಿ ವಿಜ್ಞಾನ ಬಳಗದವರು ನಡೆಸಿದ ರಾಷ್ಟ್ರಮಟ್ಟದ ಗಣಿತ ಪ್ರತಿಭಾ ಪರೀಕ್ಷೆಯಲ್ಲಿ ಚೇರಂಬಾಣೆ ಕೊಟ್ಟೂರು ರಾಜರಾಜೇಶ್ವರಿ ಶಾಲೆಯ ಕಿರಿಯ ಪ್ರಾಥಮಿಕ ವಿಭಾಗದ ಒಟ್ಟು 73 ವಿದ್ಯಾರ್ಥಿಗಳು ಭಾಗವಹಿಸಿ ಉತ್ತೀರ್ಣರಾಗಿದ್ದಾರೆ. ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಡಿ.ಎನ್.ಪಂಚಮಿ ರಾಷ್ಟ್ರಮಟ್ಟದಲ್ಲಿ ದ್ವಿತೀಯ ಸ್ಥಾನ, 5ನೇ ತರಗತಿಯ ಪಿ.ಎಸ್.ದ್ವಿತೀಯ ಸ್ಥಾನ, ರಾಜ್ಯಮಟ್ಟದಲ್ಲಿ 4ನೇ ತರಗತಿಯ ಪಿ.ವಿ.ಕವಿನ ದ್ವಿತೀಯ ಸ್ಥಾನ, ಐದನೇ ತರಗತಿಯ ಬಿ.ಜೆ.ಡಿಂಪನಾ ದ್ವಿತೀಯ ಸ್ಥಾನ,ಜಿಲ್ಲಾ ಮಟ್ಟದಲ್ಲಿ 4ನೇ ತರಗತಿಯ ಪಿ.ವಿ.ಕವನ ದ್ವಿತೀಯ ಸ್ಥಾನ, 5ನೇ ತರಗತಿಯ ಕೆ.ವೈ.ಪಾರ್ಥ ದ್ವಿತೀಯ ಸ್ಥಾನ, ತಾಲ್ಲೂಕು ಮಟ್ಟದಲ್ಲಿ 4ನೇ ತರಗತಿಯ ಬಿ.ಜಿ.ಪ್ರತೀಕ್ ದ್ವಿತೀಯ ಸ್ಥಾನ, 5ನೇ ತರಗತಿಯ ಪ್ರಥಮ್ ಕಾರ್ಯಪ್ಪ 3ನೇ ಸ್ಥಾನಪಡೆದು ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳೊಂದಿಗೆ ವಿದ್ಯಾಸಂಸ್ಥೆಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಕೆ.ಬಿ.ಸ್ವರೂಪ್ ಹಾಗೂ ಗಣಿತ ಶಿಕ್ಷಕಿ ಸರಳ ಹಾಜರಿದ್ದರು.
ಬೆಂಗಳೂರು ಜ.28 NEWS DESK : ಮಹಿಳೆಯರನ್ನು ಕಾಫಿ ಉದ್ಯಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವ ಮೂಲಕ ಅವರಿಗೆ ಸೂಕ್ತ ಉದ್ಯೋಗಾವಕಾಶ ಒದಗಿಸುವ ಜತೆಗೇ ಕಾಫಿಯ ಆಂತರಿಕ ಬೇಡಿಕೆಯನ್ನೂ ಹೆಚ್ಚಿಸಲು ಕಾಫಿ ಮಂಡಳಿಯು ಕರ್ನಾಟಕ ರಾಷ್ಟ್ರೀಯ ಜೀವನೋಪಾಯ ಮಿಷನ್ ನ ಸಹಯೋಗದೊಂದಿಗೆ ಮಹತ್ತರವಾದ ಯೋಜನೆಯೊಂದನ್ನು ಜಾರಿಗೊಳಿಸಿದೆ. ಈ ಯೋಜನೆಯ ಪ್ರಕಾರ ಕರ್ನಾಟಕದಾದ್ಯಂತ ರಾಷ್ಟ್ರೀಯ ಜೀವನೋಪಾಯ ಮಿಷನ್ ಸ್ವ-ಸಹಾಯ ಗುಂಪುಗಳ (SHGs) ಸುಮಾರು ಒಂದು ಲಕ್ಷ ಮಹಿಳಾ ಸದಸ್ಯರಿಗೆ ಕಾಫಿ ತಯಾರಿಸುವ ತಂತ್ರಗಳು ಮತ್ತು ಗ್ರಾಮೀಣ ಕೆಫೆ ನಿರ್ವಹಣೆಯಲ್ಲಿ ಸಬಲೀಕರಣ ನೀಡುವ ಯೋಜನೆಯನ್ನು ಸಹಭಾಗಿತ್ವದಲ್ಲಿ ಪ್ರಾರಂಭಿಸಿದೆ. ಇದು ಮುಖ್ಯವಾಗಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕೆಫೆಗಳ ಸ್ಥಾಪನೆಗೆ ಅನುಕೂಲವಾಗುವಂತೆ ಮಾಡುವ ಗುರಿಯನ್ನು ಹೊಂದಿದೆ, ಇದು ಅಧಿಕೃತ ಉತ್ಕೃಷ್ಟ ಫಿಲ್ಟರ್ ಕಾಫಿಯ ಅನುಭವವನ್ನು ಕಾಫಿ ಪ್ರಿಯರಿಗೆ ನೀಡಲಿದೆ. ಈ ಈ ಯೋಜನೆಯ ತಿಳುವಳಿಕೆ ಒಪ್ಪಂದಕ್ಕೆ (MoU) ಇತ್ತೀಚೆಗೆ ಕಾಫಿ ಮಂಡಳಿಯ ಸಿಇಒ ಮತ್ತು ಕಾರ್ಯದರ್ಶಿ ಡಾ. ಕೆ. ಜಿ. ಜಗದೀಶ ಮತ್ತು ರಾಷ್ಟ್ರೀಯ ಜೀವನೋಪಾಯ ಮಿಷನ್ನ…
ಮಡಿಕೇರಿ ಜ.28 NEWS DESK : ಸ್ವಾತಂತ್ರ್ಯ ಭಾರತದ ಮೊದಲ ಸೇನಾ ಮಹಾ ದಂಡನಾಯಕರಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸಲಾಯಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಕಾರ್ಯಪ್ಪ ಅವರ ಪ್ರತಿಮೆಗೆ ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ, ಜಿಲ್ಲಾಧಿಕಾರಿ ವೆಂಕಟ್ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ, ನಗರಸಭೆ ಮಾಜಿ ಅಧ್ಯಕ್ಷರಾದ ಅನಿತಾ ಪೂವಯ್ಯ, ಮಾಜಿ ಸೈನಿಕರು ಪುಷ್ಪಗುಚ್ಛ ಇರಿಸಿ, ಗೌರವ ನಮನ ಸಲ್ಲಿಸಿದರು. ಜಿಲ್ಲಾ ಪೊಲೀಸ್ ವಾದ್ಯ ತಂಡ ವೀರ ಸೇನಾನಿಗೆ ಗೌರವ ನಮನ ಸಲ್ಲಿಸಿ ಗಮನ ಸೆಳೆಯಿತು.
ಮಡಿಕೇರಿ ಜ.28 NEWS DESK : ವಿದೇಶದಲ್ಲಿ ಚಿಕಿತ್ಸೆ ಪಡೆದ ಬಳಿಕ ತಾಯಿನಾಡಿಗೆ ಮರಳಿದ ಕರ್ನಾಟಕ ಚಲನಚಿತ್ರರಂಗದ ಪ್ರಖ್ಯಾತ ನಟ ಡಾ. ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದರು. ನಾಗವಾರದಲ್ಲಿನ ನಿವಾಸಕ್ಕೆ ಮುಖ್ಯಮಂತ್ರಿಗಳೊಂದಿಗೆ ಭೇಟಿ ನೀಡಿದ ಶಾಸಕರು, ಅತಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.






