ಮಡಿಕೇರಿ ಜ.28 NEWS DESK : ವಿದೇಶದಲ್ಲಿ ಚಿಕಿತ್ಸೆ ಪಡೆದ ಬಳಿಕ ತಾಯಿನಾಡಿಗೆ ಮರಳಿದ ಕರ್ನಾಟಕ ಚಲನಚಿತ್ರರಂಗದ ಪ್ರಖ್ಯಾತ ನಟ ಡಾ. ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದರು. ನಾಗವಾರದಲ್ಲಿನ ನಿವಾಸಕ್ಕೆ ಮುಖ್ಯಮಂತ್ರಿಗಳೊಂದಿಗೆ ಭೇಟಿ ನೀಡಿದ ಶಾಸಕರು, ಅತಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಲೇಖಕ: admin
ಮಡಿಕೇರಿ ಜ.28 NEWS DESK : ಬೆಳಗಾವಿ ಜಿಲ್ಲೆಯ ಆಜುರ ಪ್ರತಿಷ್ಠಾನದ ವತಿಯಿಂದ ಕೃಪಾ ದೇವರಾಜ್ ಅವರ ಮರ್ಮರ ಕಥಾ ಸಂಕಲನಕ್ಕೆ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಾರೋಗೇರಿಯಲ್ಲಿ ಆಜೂರ ಕುಟುಂಬದ ತೋಟದ ಮಹಾಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ಆಜೂರ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾದ ರಮೇಶ್ ಗುಬ್ಬಿ ಕಾರವಾರ, ಕೃಪಾ ದೇವರಾಜ್ ಮಡಿಕೇರಿ, ಎ.ಎಂ.ಜಯಶ್ರೀ ಬಳ್ಳಾರಿ, ಡಾ.ತಿಪ್ಪೇಸ್ವಾಮಿ ಹುನಗುಂದ, ಡಾ.ಅಶೋಕ ನರೋಡೆ ಮಹಾಲಿಂಗಪುರ, ವಿಜಯ ಬಡಿಗೇರ ಇಟಗಿ, ಭಾಗ್ಯಶ್ರೀ ಗವಿಸಿದ್ಧಯ್ಯ ಗದಗ, ಟಿ.ಎಸ್.ವಂಟಗುಡಿ ಹಿಟಗಲ್ಲು ಅವರನ್ನು ಶಾಲು ಹೊದಿಸಿ, ಪ್ರಶಸ್ತಿ ಫಲಕ, ನಗದು ನೀಡಿ ಸನ್ಮಾನಿಸಲಾಯಿತು. ಆಜೂರ ಪ್ರತಿಷ್ಠಾನದ ಪ್ರತಿಷ್ಠಿತ ರಾಜ್ಯ ಮಟ್ಟದ ಪ್ರಶಸ್ತಿ ಸಮಾರಂಭವನ್ನು ಶ್ರೀ ಶಿವಾನಂದ ಮಹಾಸ್ವಾಮಿ, ಶ್ರೀ ಶಶಿಕಾಂತ ಗುರೂಜಿ ದರೂರ, ಶ್ರೀ ವಿಠಲ ಶರಣರು ಇನ್ನಿತರ ಸ್ವಾಮೀಜಿಗಳ ಸಾನಿಧ್ಯದಲ್ಲಿ, ನೇತಾರಾದ ಬಸವರಾಜ ಆಜೂರ ಹಾಗೂ ಪ್ರಶಸ್ತಿ ಪುರಸ್ಕೃತರಾದ ಸಾಹಿತಿಗಳ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಶಿವಾನಂದ ಮಹಾಸ್ವಾಮಿ ಮಾತನಾಡಿ,…
ಕುಶಾಲನಗರ ಜ.28 NEWS DESK : ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡಾ ಆಸಕ್ತಿಯನ್ನೂ ಬೆಳೆಸಿಕೊಂಡು ತಮ್ಮನ್ನು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ.ಪ್ರವೀಣ್ ದೇವರಗುಂಡ ಸೋಮಪ್ಪ ಕರೆ ನೀಡಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ. ಎನ್.ಎಸ್.ಎಸ್.ಘಟಕ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಸಹಯೋಗದೊಂದಿಗೆ ಶಾಲೆಯಲ್ಲಿ ಏರ್ಪಡಿಸಿದ್ದ ಶಾಲಾ ಗ್ರಾಮೀಣ ವಾರ್ಷಿಕ ಕ್ರೀಡೋತ್ಸವ : 2025ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕ್ರೀಡೆಯು ಮಕ್ಕಳಲ್ಲಿ ಕ್ರೀಡಾ ಸ್ಫೂರ್ತಿ ಬೆಳೆಸಲು ಸಹಕಾರಿಯಾಗಿವೆ ಎಂದರು. ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಸದೃಢತೆ ಹೆಚ್ಚುತ್ತದೆ ಹಾಗೂ ವಿದ್ಯಾರ್ಥಿಯು ಹೆಚ್ಚು ಕ್ರಿಯಾಶೀಲ ವ್ಯಕ್ತಿಯಾಗಿ ರೂಪುಗೊಳ್ಳುತ್ತಾನೆ ಎಂದು ಹೇಳಿದರು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಪಠ್ಯ ಚಟುವಟಿಕೆಗಳೊಂದಿಗೆ ಕ್ರೀಡೆ ಹಾಗೂ ಇನ್ನಿತರ ಕ್ರಿಯಾತ್ಮಕ ಚಟುವಟಿಕೆ, ಇಕೋ ಕ್ಲಬ್,…
ಮಡಿಕೇರಿ ಜ.28 NEWS DESK : ಶಿರಂಗಾಲ ಗ್ರಾ.ಪಂ ವತಿಯಿಂದ ಶಿರಂಗಾಲ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಅಮೃತ ಗ್ರಾಮ ಪಂಚಾಯತಿ ಯೋಜನೆಯ ಅಡಿಯ ರೂ. 2.68 ಲಕ್ಷದ ಹಣದಲ್ಲಿ ವಿವಿಧ ಬಗೆಯ ಕ್ರೀಡಾ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು. ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷೆ ಎಂ.ಆರ್.ಲತಾಬಾಯಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಣೆ ಮಾಡಿ ಮಾತಾನಾಡಿ, ಸರಕಾರದ ವಿವಿಧ ಯೋಜನೆಯ ಭಾಗಗಳಲ್ಲಿ ಒಂದಾದ ಅಮೃತ ಗ್ರಾಮ ಪಂಚಾಯತಿ ಯೋಜನೆಯ ಅನುದಾನವು ದೊರೆತ ಹಿನ್ನೆಲೆಯಲ್ಲಿ ಅದರ ಸ್ವಲ್ಪ ಭಾಗದ ಹಣವನ್ನು ಉಪಯೋಗಿಸುವ ಮೂಲಕ ಅಂಗನವಾಡಿ ಕೇಂದ್ರಗಳಿಗೆ ಅನುಕೂಲವಾಗುವಂತೆ ಕ್ರೀಡಾ ಸಾಮಗ್ರಿಗಳನ್ನು ಖರೀದಿಸಿ 7 ಅಂಗನವಾಡಿ ಕೇಂದ್ರಗಳಿಗೆ ವಿತರಣೆ ಮಾಡಲಾಗಿದೆ. ಅದರ ಜೊತೆಯಲ್ಲಿ ವ್ಯಾಪ್ತಿಯ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಉಪಾಧ್ಯಕ್ಷ ಹೆಚ್.ಎಸ್.ಬಸವರಾಜ್, ಎಂ.ಎನ್.ಧರ್ಮಪ್ಪ, ಪ್ರದೀಪ್, ಶ್ರೀಕಾಂತ್, ಸರಿತಾ, ಭಾಗ್ಯರತಿ, ಗೀತಾ, ಲಕ್ಷ್ಮಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಿ.ಆರ್.ಹೇಮಲತಾ, ಕಾರ್ಯದರ್ಶಿ ಕೆ.ಸಿ.ರವಿ…
ಮಡಿಕೇರಿ ಜ.28 NEWS DESK : ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ, ಕಥೆಗಾರ್ತಿ ಕೆ.ಜಲಯಕ್ಷ್ಮಿ ಅವರ ‘ಮತ್ತೆ ವಸಂತ’ ಕಥಾ ಸಂಕಲನವು ನಗರದ ‘ರೆಡ್ ಬ್ರಿಕ್ಸ್ ಇನ್ ‘ಸತ್ಕಾರ್’ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡಿತು. ಕಾರ್ಯಕ್ರಮವನ್ನು ಆಕಾಶವಾಣಿ ಉದ್ಘೋಷಕ ಸುಬ್ರಾಯ ಸಂಪಾಜೆ ಕೃತಿ ಲೋಕಾರ್ಪಣೆ ಮಾಡಿ, ಕೊಡಗು ಸಾಹಿತ್ಯ ಚರಿತ್ರೆ ಹಾಗೂ ಪ್ರಸ್ತುತ ಕೊಡಗಿನ ಸಾಹಿತ್ಯದ ಸ್ಥಿತಿಗತಿ ಕುರಿತು ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಸಹಾಯ ಸಂಘದ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಬೆಳ್ತಂಗಡಿಯ ಎನ್.ಜಯಶಂಕರ್ ಶರ್ಮ ಹಾಗೂ ಶಕ್ತಿ ದಿನಪತ್ರಿಕೆಯ ಸಂಪಾದಕ ಚಿದ್ವಿಲಾಸ್ ಭಾಗವಹಿಸಿ ಮಾತನಾಡಿದರು. 32 ಸಣ್ಣ ಕಥೆಗಳನ್ನು ಹೊಂದಿರುವ ‘ಮತ್ತೆ ವಸಂತ ಕೃತಿ ಪರಿಚಯವನ್ನು ಮಡಿಕೇರಿ ತಾಲ್ಲೂಕು ಜನಪದ ಪರಿಷತ್ ಅಧ್ಯಕ್ಷ, ಪತ್ರಕರ್ತ ಅನಿಲ್ ಹೆಚ್.ಟಿ ಸಂಕ್ಷಿಪ್ತವಾಗಿ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಕೊಡಗಿನಲ್ಲಿ ಗಮನಾರ್ಹವಾಗಿ ಹೆಚ್ಚುತ್ತಿರುವ ಮಹಿಳಾ ಲೇಖಕಿಯರ ಕುರಿತು ಸಂತೋಷ ವ್ಯಕ್ತಪಡಿಸಿದರು.…
ಸೋಮವಾರಪೇಟೆ ಜ.28 NEWS DESK : ಗೌಡಳ್ಳಿ ಗ್ರಾ.ಪಂ ವ್ಯಾಪ್ತಿಯ ಚನ್ನಾಪುರ ಗ್ರಾಮದಲ್ಲಿ ಹುಲಿ ಹೆಜ್ಜೆ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ, ಕೃಷಿಕರಲ್ಲಿ ಆತಂಕ ಮೂಡಿದೆ. ಚನ್ನಾಪುರ ಗ್ರಾಮದ ಕೆರೆಯ ತಟದ ರಸ್ತೆಯಲ್ಲಿ ಹುಲಿ ಸಂಚರಿಸಿದ ಬಗ್ಗೆ ಅರಣ್ಯ ಇಲಾಖೆಗೆ ಪ್ರತ್ಯಕ್ಷದರ್ಶಿಗಳು ದೂರು ನೀಡಿದ್ದರು. ಬೆಳಿಗ್ಗೆ ಶನಿವಾರಸಂತೆ ಅರಣ್ಯ ಇಲಾಖೆಯ ಡಿಆರ್ಎಫ್ ಸೂರ್ಯ ಮತ್ತು ಸಿಬ್ಬಂದಿಗಳು ಗ್ರಾಮಸ್ಥರ ಸಹಕಾರದಿಂದ ಹುಲಿಯ ಹೆಜ್ಜೆ ಗುರುತನ್ನು ಪತ್ತೆ ಹಚ್ಚಿದ್ದಾರೆ. ನಂತರ ಗ್ರಾಮದ ರಸ್ತೆಯ ಬದಿಯಲ್ಲಿ ಸಿ.ಸಿ.ಕ್ಯಾಮೆರಾಗಳನ್ನು ಅಳವಡಿಸಿ, ಹುಲಿಯ ಚಲನವಲನ ಪತ್ತೆಗೆ ಕ್ರಮಕೈಗೊಂಡಿದ್ದಾರೆ. ಗೌಡಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಧ್ವನಿವರ್ಧಕದ ಮೂಲಕ ನಿವಾಸಿಗಳು ದನಕರುಗಳೊಂದಿಗೆ ಹೊರಹೋಗದಂತೆ ಎಚ್ಚರಿಕೆ ಸಂದೇಶ ನೀಡಲಾಗಿದೆ.
ಮಡಿಕೇರಿ ಜ.28 NEWS DESK : ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಡಿಕೇರಿ ಮಕ್ಕಳ ವಿಶೇಷ ಪೊಲೀಸ್ ಘಟಕ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಪೊನ್ನಂಪೇಟೆ ತಾಲೂಕಿನ ಬೊಮ್ಮಾಡು ಹಾಡಿ ನಿವಾಸಿಗಳಿಗೆ ಬಾಲ್ಯ ವಿವಾಹ, ಪೋಕ್ಸೋ ಹಾಗೂ ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕದ ಸುಮತಿ, ಸತ್ಯ ಹಾಗೂ ನಾಲ್ಕೇರಿ ಗ್ರಾ.ಪಂ ಅಧ್ಯಕ್ಷ ಸೋಮಯ್ಯ, ಹಾಡಿ ಮುಖಂಡರಾದ ತಿಮ್ಮ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ವಾಲ್ಮೀಕಿ ಆಶ್ರಮ ಶಾಲೆಯ ಮುಖ್ಯೋಪಾಧ್ಯಾಯರು, ಶಾಲೆಯ ಮಕ್ಕಳು ಮತ್ತು ಹಾಡಿಯ ನಿವಾಸಿಗಳು ಹಾಜರಿದ್ದರು.
ಮಡಿಕೇರಿ ಜ.28 NEWS DESK : ಫಲಪುಷ್ಪ ಪ್ರದರ್ಶನ ಪ್ರಯುಕ್ತ ನಗರದ ಗಾಂಧಿ ಮೈದಾನದಲ್ಲಿ ಏರ್ಪಡಿಸಲಾಗಿದ್ದ ತೋಟಗಾರಿಕೆ ವಿವಿಧ ಬೆಳೆ ವಸ್ತು ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಯೋಗೇಶ್ ಬಹುಮಾನ ವಿತರಿಸಿ, ಗೌರವಿಸಿದರು.
ಮಡಿಕೇರಿ NEWS DESK ಜ.27 : ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಕಾಂಗ್ರೆಸ್ ಕಾರ್ಯಕರ್ತನನ್ನು ಅಮಾನತುಗೊಳಿಸಿದೆ.
ಮಡಿಕೇರಿ NEWS DESK ಜ.27 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಅವರ ಮೇಲೆ ಸೋಮವಾರ ಸಂಜೆ ಹಲ್ಲೆ ನಡೆದಿದೆ. ಮೂರ್ನಾಡಿನಲ್ಲಿರುವ ಅರ್ಚಕರ ಮನೆಗೆ ಸಂಜೆಯ ವೇಳೆ ಬಂದ ಇಬ್ಬರು ವ್ಯಕ್ತಿಗಳು ವಿಘ್ನೇಶ್ ಭಟ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಅರ್ಚಕರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅರ್ಚಕ ವಿಘ್ನೇಶ್ ಭಟ್ ಇಬ್ಬರು ವ್ಯಕ್ತಿಗಳು ನನ್ನ ಮನೆಯ ಬಳಿ ಬಂದು ಹಲ್ಲೆ ಮಾಡಿದ್ದಾರೆ. ತಡೆಯಲು ಬಂದ ನನ್ನ ತಾಯಿಗೂ ನೋವಾಗಿದೆ ಎಂದು ಆರೋಪಿಸಿದರು. ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿರುವ ವಿಘ್ನೇಶ್ ಭಟ್ ರನ್ನು ಭೇಟಿ ಮಾಡಿ, ಸಾಂತ್ವನ ಹೇಳಿದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.






