ಲೇಖಕ: admin

ಮಡಿಕೇರಿ ಫೆ.19 NEWS DESK  : ಕರ್ನಾಟಕ ರಾಜ್ಯದ 2026-27ರ ಬಜೆಟ್‍ನಲ್ಲಿ ಕೊಡಗು ಜಿಲ್ಲೆಯ ಅಭವೃದ್ಧಿಗೆ 500 ಕೋಟಿ ರೂ.ಗಳ ವಿಶೇಷ ಪ್ಯಾಕೆಜ್ ಘೋಷಣೆ ಮಾಡಬೇಕು ಮತ್ತು ಪ್ರವಾಸೋದ್ಯಮದ ಅಭಿವೃದ್ಧಿಗೆ ರೂ.2,500 ಕೋಟಿ ಬಿಡುಗಡೆಗೊಳಿಸಬೇಕು ಎಂದು ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರು ಬಜೆಟ್ ನ ಬೇಡಿಕೆಗಳ ಕುರಿತು ಕರಪತ್ರದ ಮೂಲಕ ಸರಕಾರದ ಗಮನ ಸೆಳೆಯಲಾಗುವುದು ಎಂದರು. ಕೊಡಗಿಗೆ ಅತೀ ಅಗತ್ಯವಾಗಿರುವ ರೈಲು ಸಂಪರ್ಕವನ್ನು ಕೇಂದ್ರ ಹಾಗೂ ರಾಜ್ಯದ ಪ್ರತಿಷ್ಠೆಯ ಕಿತ್ತಾಟದಿಂದ ಕೈ ಬಿಡಲಾಗಿದೆ. ಈ ಬಜೆಟ್‍ನಲ್ಲಿ ಕೊಡಗಿಗೆ ರೈಲು ಸಂಪರ್ಕಕ್ಕಾಗಿ ಬೇಕಿರುವ ಅನುದಾನವನ್ನು ಕರ್ನಾಟಕ ಸರಕಾರ ಮೀಸಲಿಟ್ಟು ಪ್ರಕ್ರಿಯೆ ಪ್ರಾರಂಭಿಸಬೇಕು. ಕೊಡಗಿನ ಲೋಕಸಭಾ ಸದಸ್ಯರು ಕೇಂದ್ರದೊಂದಿಗೆ ಚರ್ಚಿಸಿ ಸಹಕರಿಸಬೇಕು. ತುರ್ತು ಆರೋಗ್ಯ ಸೇವೆಗಾಗಿ ಜಿಲ್ಲೆಗೆ ಏರ್ ಆಂಬ್ಯುಲೆನ್ಸ್ ನೀಡಬೇಕು. ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅನುದಾನ ಮೀಸಲಿಡಬೇಕು. ವನ್ಯಜೀವಿ ಹಾಗೂ ಮಾನವ ಸಂಘರ್ಷ…

Read More

ಮಡಿಕೇರಿ, NEWS DESK ಫೆ.19:-ಜಿಲ್ಲಾಧಿಕಾರಿಗಳು ಹಾಗೂ ಪ್ರಾಣಿದಯಾ ಸಂಘದ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ಮಡಿಕೇರಿ ಕೆ.ನಿಡುಗಣೆ ಜಿಲ್ಲಾ ಸರ್ಕಾರಿ ಗೋಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಗೋಶಾಲೆಯಲ್ಲಿ 37 ಜಾನುವಾರುಗಳನ್ನು ಸಾಕುತ್ತಿದ್ದು, ಜಾನುವಾರುಗಳ ನಿರ್ವಹಣೆಗೆ ಬೇಕಾಗುವ ಒಣ ಮೇವು ದಾಸ್ತಾನು, ಪಶು ಆಹಾರ ದಾಸ್ತಾನು ಕೊಠಡಿ ಹಾಗೂ ಚಿಕಿತ್ಸೆಗೆ ಬೇಕಾಗುವ ಔಷಧ ದಾಸ್ತಾನನ್ನು ಜಿಲ್ಲಾಧಿಕಾರಿ ಅವರು ವೀಕ್ಷಿಸಿದರು. ಗೋಶಾಲೆಯಲ್ಲಿನ ಜಾನುವಾರುಗಳ ನಿರ್ವಹಣೆಗೆ 3 ಜನ ಹೊರಗುತ್ತಿಗೆ ‘ಡಿ’ ದರ್ಜೆ ನೌಕರರು 3 ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಗೋಶಾಲೆ ಉಸ್ತುವಾರಿ ಅಧಿಕಾರಿ ಡಾ.ಎಂ.ಸಿ.ಲತಾ ಅವರು ಮಾಹಿತಿ ನೀಡಿದರು. ಹಸಿರು ಮೇವು ಬೆಳೆಯುವ ಕ್ಷೇತ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಗೋಶಾಲೆಗೆ ಹೆಚ್ಚುವರಿ ಜಾನುವಾರುಗಳ ಸೇರ್ಪಡೆಗೆ ಬೇಡಿಕೆ ಇದ್ದು, ಹೆಚ್ಚುವರಿ ದನದ ಕೊಟ್ಟಿಗೆ, ಒಣ ಮೇವು ದಾಸ್ತಾನು ಕೊಠಡಿ ನಿರ್ಮಾಣ ಹಾಗೂ ಹೆಚ್ಚುವರಿ ಜಾನುವಾರುಗಳನ್ನು ಮೇಯಲು ಬಿಡಲು ಗೋಶಾಲೆಗೆ ಮಂಜೂರಾದ 8 ಎಕರೆ ಜಾಗದ ಪೈಕಿ ಬಾಕಿ ಉಳಿದಿರುವ 6…

Read More

ಮಡಿಕೇರಿ, NEWS DESK ಫೆ.19:-ಮಾಜಿ ಸೈನಿಕರು ಮತ್ತು ಅವಲಂಬಿತರು ನಿವೇಶನಕ್ಕಾಗಿ ಫೆಬ್ರವರಿ, 25 ರೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಿಲ್ಲಾ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ, ನಿರ್ದೇಶನಾಲಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಇವರ ಪತ್ರ ಶೀರ್ಷಿಕೆಯಡಿ ಸುಳ್ಳು ಪ್ರಕಟಣೆಯನ್ನು ವಾಟ್ಸಪ್ ಜಾಲತಾಣದಲ್ಲಿ ಹರಡುತ್ತಿದ್ದು, ಈ ರೀತಿಯ ಯಾವುದೇ ಪ್ರಕಟಣೆಯನ್ನು ನಮ್ಮ ಇಲಾಖೆ ಅಥವಾ ಕಚೇರಿಯಿಂದ ಪ್ರಕಟಿಸಿರುವುದಿಲ್ಲ. ಈ ರೀತಿಯ ಸುಳ್ಳು ಪ್ರಕಟಣೆಯನ್ನು ನೀಡಿ ಮಾಜಿ ಸೈನಿಕರನ್ನು ದಿಕ್ಕು ತಪ್ಪಿಸುತ್ತಿರುವುದು ಕಂಡುಬಂದಿದ್ದು, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಿರಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ, NEWS DESK ಫೆ.19:-ಛತ್ರಪತಿ ಶಿವಾಜಿ ಮಹಾರಾಜರು ಭರತಖಂಡದಲ್ಲಿ ಜನಿಸದಿದ್ದರೆ ಊಹಿಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಆ ನಿಟ್ಟಿನಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಸಾಗರ್ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿವಾಜಿ ಮಹಾರಾಜರ ತಾಯಿ ಜೀಜಾಬಾಯಿಯವರಿಂದ ಮಕ್ಕಳನ್ನು ಹೇಗೆ ಬೆಳೆಸಬೇಕು ಎಂಬುದನ್ನು ಸಮಾಜಕ್ಕೆ ಹೇಳಿಕೊಟ್ಟಿದ್ದಾರೆ. ಗುಡ್ಡಗಾಡು ಪ್ರದೇಶದಲ್ಲಿ ಹುಟ್ಟಿ ಬೆಳೆದು ಭರತಖಂಡದ ಸಾಮ್ರಾಜ್ಯವನ್ನು ಕಟ್ಟಿದ್ದಾರೆ ಎಂದು ಲೋಕೇಶ್ ಸಾಗರ್ ಅವರು ಹೇಳಿದರು.ತಾಯಿ ಜೀಜಾಬಾಯಿ ಅವರ ಕಥೆಯನ್ನು ಕೇಳಿ ಬೆಳೆದ ಶಿವಾಜಿ ಅವರು ಸಮಾಜಕ್ಕೆ ಏನಾದರೂ ಕೊಡಬೇಕು ಎಂಬ ಉದ್ದೇಶದಿಂದ ಇಡೀ ಭರತ ಸಾಮ್ರಾಜ್ಯವನ್ನು ಕಟ್ಟಲು ಪ್ರಯತ್ನಿಸುತ್ತಾರೆ ಎಂದರು. ಶಿವಾಜಿ ಮಹಾರಾಜರು ಎಲ್ಲರನ್ನು ಪ್ರೀತಿಸುತ್ತಿದ್ದರು. ಗೌರವಿಸುತ್ತಿದ್ದರು ಎಂದು ಹೇಳಿದರು. ಶಿವಾಜಿ ಅವರ ತಾಯಿ ಜಿಜಾಬಾಯಿ ಅವರು…

Read More

ಮಡಿಕೇರಿ, NEWS DESK ಫೆ.19:-ವಿದ್ಯುತ್ ಇಲಾಖೆಗೆ ಸಂಬಂಧಿಸಿದಂತೆ ಕಾರ್ಯ ಮತ್ತು ಪಾಲನೆ ಕ್ಷೇತ್ರ ಮಟ್ಟದಲ್ಲಿ ಗ್ರಾಹಕರಿಗೆ/ ಸಾರ್ವಜನಿಕರಿಗೆ/ ಸಿಬ್ಬಂದಿಗಳಿಗೆ ವಿದ್ಯುತ್ ಸೇವೆಗಳ ಹಾಗೂ ವಿದ್ಯುತ್ ಸುರಕ್ಷಿತಾ ಅರಿವನ್ನು ಮೂಡಿಸಲು ಅರಿವು ಸಪ್ತಾಹ ಕಾರ್ಯಕ್ರಮವನ್ನು ಉಪ ವಿಭಾಗ ಮಟ್ಟದಲ್ಲಿ ಆಯೋಜಿಸಲು ನಿರ್ಧರಿಸಿದ್ದು, ಕುಶಾಲನಗರ ಉಪ ವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡ ಹಾಗೂ ಸುರಕ್ಷಿತಾ ಕ್ರಮಗಳ ಬಗ್ಗೆ ಗ್ರಾಹಕರಲ್ಲಿ ಅರಿವು ಮೂಡಿಸುವ ಸಲುವಾಗಿ ಫೆಬ್ರವರಿ, 21 ರಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರ ಉಪ ವಿಭಾಗ ಕಚೇರಿ ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ತಿಳಿಸಿದ್ದಾರೆ.

Read More

ಮಡಿಕೇರಿ, NEWS DESK ಫೆ.19 : ಹೊದ್ದೂರು ಗ್ರಾಮದ ಕಬಡಗೇರಿಯ ನಿವೇಶನ ರಹಿತ 47 ಕುಟುಂಬಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಹಕ್ಕುಪತ್ರ ವಿತರಿಸಿದರು. ಹಾಗೆಯೇ ಹೊದ್ದೂರು ಗ್ರಾಮದ ಪಾಲೆಮಾಡಿನ 14 ಕುಟುಂಬಗಳಿಗೆ 94ಸಿ ರಡಿ ಹಕ್ಕುಪತ್ರವನ್ನು ಶಾಸಕರು ವಿತರಿಸಿದರು. ಹೊದ್ದೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ನಿವೇಶನ ಹಕ್ಕುಪತ್ರವನ್ನು ವಿತರಿಸಿದರು. ಹೊದವಾಡ ಗ್ರಾಮದ ಅಂಬಲ ಅಂಗನವಾಡಿ ಕೇಂದ್ರವನ್ನು ಇದೇ ಸಂದರ್ಭದಲ್ಲಿ ಶಾಸಕರು ಉದ್ಘಾಟಿಸಿದರು. ಹಾಗೆಯೇ ಹೊದ್ದೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ವಿವಿಧ ಸಂಪರ್ಕ ರಸ್ತೆಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ನಿವೇಶನ ನೀಡಲಾಗಿರುವ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲು ಪ್ರಯತ್ನಿಸಲಾಗುವುದು ಎಂದರು. ಹೊದ್ದೂರಿನ ಕಬಡಗೇರಿಗೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರನ್ನು ಇಡುವಂತಾಗಬೇಕು ಎಂದು ಸಲಹೆ ಮಾಡಿದ ಶಾಸಕರು ಬಡವರ ಶ್ರೇಯೋಭಿವೃದ್ಧಿಗೆ ಇನ್ನಷ್ಟು ಅಭಿವೃದ್ಧಿ ಕೆಲಸ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಬಡಾವಣೆ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಆ…

Read More

ಮಡಿಕೇರಿ, NEWS DESK ಫೆ.19 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರ ಉಪಸ್ಥಿತಿಯಲ್ಲಿ, ಕೊಡಗು ಅರೆಭಾಷೆ ಗೌಡ ಸಮುದಾಯ ವತಿಯಿಂದ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರನ್ನು ಬೆಂಗಳೂರಿನಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. ಇತ್ತೀಚೆಗೆ ಬೆಂಗಳೂರಿನಲ್ಲಿ ಜರುಗಿದ ಅರೆಭಾಷೆ ಗೌಡ ಸಮುದಾಯದ ಸಮಾರಂಭದಲ್ಲಿ ನೀಡಿದ ಆಶ್ವಾಸನೆಯಂತೆ, ಮುಖ್ಯಮಂತ್ರಿಗಳು, ಅರೆಭಾಷೆ ಗೌಡ ಸಮುದಾಯದ ಸಂಸ್ಕೃತಿ, ಶೈಕ್ಷಣಿಕ ಮತ್ತು ಕ್ರೀಡಾ ಕೇಂದ್ರ ಸ್ಥಾಪನೆ ಉದ್ದೇಶಕ್ಕಾಗಿ, ಮಡಿಕೇರಿ ತಾಲೂಕು ಮದೆ ಗ್ರಾಮದ ಕಾಟಕೇರಿ ಬಳಿ, 6 ಎಕರೆ ಜಾಗ ಮಂಜೂರು ಮಾಡಲು ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು. ಅದಲ್ಲದೇ, ದಶಕಗಳಿಂದ ಕೊಡಗಿನ ಜನತೆಯನ್ನು ಕಾಡುತ್ತಿದ್ದ, ಅತ್ಯಂತ ಜಟಿಲವಾದ ಜಮ್ಮ ಬಾಣೆ ಸಮಸ್ಯೆಯ ಪರಿಹಾರಕ್ಕಾಗಿ, ಕರ್ನಾಟಕ ರಾಜ್ಯ ಕಂದಾಯ ಮಸೂದೆ 2025 ರ ತಿದ್ದುಪಡಿ ವಿದೇಯಕಕ್ಕೆ ಅನುಮೋದನೆ…

Read More

ಮಡಿಕೇರಿ, NEWS DESK ಫೆ.19   ಆನ್ ಲೈನ್ ನಲ್ಲಿ ಔಷಧ ವ್ಯಾಪಾರಕ್ಕೆ ಕಡಿವಾಣ ಹಾಕದೇ ಹೋದಲ್ಲಿ ಮಾದಕ ದ್ರವ್ಯಗಳಿಗೂ ಸಂಪೂಣ೯ ತಡೆ ಸಾಧ್ಯವಾಗದು ಎಂದು ಅಭಿಪ್ರಾಯಪಟ್ಟಿರುವ ಕನಾ೯ಟಕ ಔಷಧ ವ್ಯಾಪಾರಸ್ಥರ ಸಂಘದ ಅಧ್ಯಕ್ಷ  ಆರ್ ರಘುನಾಥ ರೆಡ್ಡಿ, ಆನ್ ಲೈನ ಮೂಲಕ ಮಾದಕ ದ್ರವ್ಯ ಸಾಗಾಣಿಕೆ ಊಹೆಗೂ ಮೀರಿ ಬೆಳೆಯುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ. ನಗರದಲ್ಲಿ ಕೊಡಗು ಔಷಧ ವ್ಯಾಪಾರಸ್ಥರ ಸಂಘದ ವತಿಯಿಂದ ನೂತನವಾಗಿ ನಿಮಿ೯ಸಲಾದ ಸಂಘದ ಕಛೇರಿ, ಸಭಾಂಗಣವನ್ನು ಹೊಂದಿರುವ ಎರಡಂತಸ್ತಿನ ಫಾಮಾ೯ ಭವನ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಮಾದಕ ದ್ರವ್ಯ ಸಾಗಾಣಿಕೆ ದೇಶವ್ಯಾಪಿ ವಿಸ್ತಾರಗೊಳ್ಳುತ್ತಿದೆ. ಆನ್ ಲೈನ್ ನಲ್ಲಿ ಔಷಧಿ ವಹಿವಾಟು ನೆಪದಲ್ಲಿ ಮಾದಕ ದ್ರವ್ಯ ಸಾಗಾಣಿಕೆಯೂ ಹೆಚ್ಚಾಗುತ್ತಿದೆ. ಇಂಥ ಸಂದಭ೯ ಅನಗತ್ಯವಾಗಿ ಔಷಧಿ ವ್ಯಾಪಾರಿಗಳನ್ನು ತನಿಖಾ ಸಂಸ್ಥೆಗಳು ವಿಚಾರಣೆಗೊಳಪಡಿಸುತ್ತಿವೆ.  ಆನ್ ಲೈನ್ ಮೂಲಕ ಮಾದಕ  ವಸ್ತುಗಳನ್ನು ಸಲೀಸಾಗಿ ಸಾಗಾಣಿಕೆ ಮಾಡುವ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಆನ್ ಲೈನ್ ಔಷಧಿ ವಹಿವಾಟಿಗೇ…

Read More

ಮನುಷ್ಯ ನಿರ್ಮಿಸಲಾಗದ ಭಗವಂತನ ಸೃಷ್ಟಿಯ ನದಿ,ಸರೋವರಗಳು, ನೀರು,ಮಣ್ಣು, ಗಾಳಿ ಮೊದಲಾದ ಸುಂದರ ಪರಿಸರವನ್ನು ನಾವು ಹದಗೆಡಿಸದೇ ಸುಮ್ಮನಿದ್ದರೆ ಸಾಕು ಅದೇ ನಾವು ಭಗವಂತನಿಗೆ ಸಲ್ಲಿಸುವ ಕಾಣಿಕೆ ಎಂದು ಸುತ್ತೂರು ವೀರಸಿಂಹಾಸನ ಪೀಠದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅಭಿಪ್ರಾಯಿಸಿದರು. ಕುಶಾಲನಗರ ತಾಲ್ಲೂಕು ತೊರೆನೂರು ವಿರಕ್ತ ಮಠದಲ್ಲಿ ಹಿರಿಯ ಶ್ರೀ ಮಹಾಂತ ಸ್ವಾಮೀಜಿ ಸಂಸ್ಮರಣೋತ್ಸವ ಧಾರ್ಮಿಕ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಅವರು, ಹನ್ನೆರಡನೇ ಶತಮಾನದ ಶರಣರ ಚಿಂತನೆಗಳು ಎಲ್ಲಾ ಕಾಲಘಟ್ಟಕ್ಕೂ ಪ್ರಸ್ತುತ ವಾಗಿದ್ದು, ಎಲ್ಲಾ ವಚನಗಳಲ್ಲಿ ವೈಜ್ಞಾನಿಕ ನೆಲೆಗಟ್ಟು ಇದೆ. ಅನುಭವ ಮಂಟಪದಲ್ಲಿ ಅಲ್ಲಮಪ್ರಭುವಿನಷ್ಟೇ ಸಮಾನ ಅವಕಾಶಗಳು ಎಲ್ಲಾ ಶರಣರಿಗಿತ್ತು. ಸಮಾನತೆಗಾಗಿ ಹೋರಾಟ ಇನ್ನೂ ಜೀವಂತವಾಗಿರುವುದು ವಿಷಾದನೀಯ. ಭಗವಂತ ಭಕ್ತನ ನಡುವಿನ ನೇರ ಒಡನಾಟವೇ ಇಷ್ಟಲಿಂಗ ಪರಿಕಲ್ಪನೆ. ಸಾಮಾಜಿಕವಾಗಿ ಮೌಲ್ಯಯುತವಾದ ಜೀವನ ನಡೆಸಲು ಪೂರಕ. ಅಂತರಂಗ ಬಹಿರಂಗದ ಮದಗಳು ದೂರವಾದರೆ ಭಗವಂತನ ಬಳಿ ಹೋಗುತ್ತೇವೆ. ಭಗವಂತನ ಸೃಷ್ಟಿ ಹೊರತಾಗಿ ಮನುಷ್ಯನ ಸೃಷ್ಟಿ ಏನೇನೂ ಈ ಭೂಮಿಯಲ್ಲಿ ಇಲ್ಲ. ನಾನತ್ವ, ಅಹಂಕಾರ ಎರಡೂ…

Read More

ಮಡಿಕೇರಿ ಫೆ.18 NEWS DESK : ಎಲ್ಲ ಊರಿನ ದೇವರ ಕಾಡುಗಳು ಊರಿನ ಎಲ್ಲ ಸಮುದಾಯಗಳ ಸಾಮರಸ್ಯ ಕಾಪಾಡುವ ವ್ಯವಸ್ಥೆಯಾಗಿದೆ. ದೇವರ ಕಾಡುಗಳನ್ನು ಕಾಪಾಡುವುದು, ದೇವರ ಉತ್ಸವಗಳನ್ನು ನಡೆಸುವುದು ಊರಿನವರ ಜವಾಬ್ದಾರಿಯಾಗಿ ನಡೆದುಕೊಂಡು ಬಂದಿರುವ ಕಾರಣ ದೇವರ ಕಾಡು ಉಳಿದಿದೆ ಎಂದು ಕೊಡಗು ಮಾಡಲು ಫಾರೆಸ್ಟ್ ಅಧ್ಯಕ್ಷ ಪ್ರೊ. ಸಿ.ಜಿ.ಕುಶಾಲಪ್ಪ ನುಡಿದರು.  ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೊಡಗು ಮಾಡೆಲ್ ಫಾರೆಸ್ಟ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದಲ್ಲಿ ಸುಲೋಚನಾ ಡಾ. ಎಂ.ಜಿ ನಾಗರಾಜ್ ದತ್ತಿ ಆಶಯದಂತೆ ಕೊಡಗಿನ ದೇವರ ಕಾಡುಗಳ ಸಂರಕ್ಷಣೆ ಕುರಿತ ಉಪನ್ಯಾಸದಲ್ಲಿ ಮಾತನಾಡಿದರು. ಕೊಡಗಿನಲ್ಲಿ 1,215 ದೇವರ ಕಾಡುಗಳಿವೆ ಅವುಗಳಲ್ಲಿ 165ಕ್ಕೂ ಹೆಚ್ಚು ಬೇರೆ ಬೇರೆ ದೇವರುಗಳಿವೆ. ಇವು ಒಂದು ಜನಾಂಗಕ್ಕೆ ಸೀಮಿತವಾಗಿಲ್ಲ ಕೊಡಗಿನ ಎಲ್ಲ ಸಮುದಾಯಗಳ ದೇವರು ಕಾಡುಗಳಿದ್ದು ವಿಶೇಷವಾಗಿ ಕೊಡವ ಮಾಪಿಳ್ಳೆ ದೇವರ ಕಾಡುಗಳು ಇದ್ದು ಪಳ್ಳಿಕಾಡು ಎನ್ನುವ ಹೆಸರಿಂದ ಗುರುತಿಸಲ್ಪಡುತ್ತಿದೆ. ದೇವರ ಕಾಡುಗಳಲ್ಲಿರುವ ಅಯ್ಯಪ್ಪ ಭದ್ರಕಾಳಿ ಮುಂತಾದ ದೇವರುಗಳಿಗೆ…

Read More