ವಿರಾಜಪೇಟೆ ಜ.27 NEWS DESK : ವಿಶ್ವದಾದ್ಯಂತ ಅನೇಕ ದೇಶಗಳಿದ್ದರು ಇಂದು ಭಾರತ ದೇಶದ ಸಂವಿಧಾನವು ಉತ್ಕೃಷ್ಟವಾದ ಸಂವಿಧಾನ, ಪ್ರಜಾಪ್ರಭುತ್ವ ಹೊಂದಿರುವ ಗಣತಂತ್ರ ದೇಶವಾಗಿದೆ ಎಂದು ವಕೀಲರಾದ ಪುಷ್ಪರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಜೈ ಭಾರತ್ ಆಟೋ ಚಾಲಕರು ಮತ್ತು ಮಾಲೀಕರ ಸಂಘ ವತಿಯಿಂದ ಸಂಘದ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ಆಚರಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಂಘದ ಕಾನೂನು ಸಲಹೆಗಾರರಾದ ವಕೀಲ ಪುಷ್ಪರಾಜ್, 1950ರಲ್ಲಿ ಸಂವಿಧಾನ ರಚನೆಗೊಂಡು ಅಂಗೀಕಾರವಾದ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸುಲಾಗುತ್ತಿದೆ. ಸಮಾನತೆ, ಪ್ರಜಾಪ್ರಭುತ್ವ, ಸರ್ವರಿಗೂ ಸಮಪಾಲು ಸಮಬಾಳು ಎಂಬ ತಳಹದಿಯೊಂದಿಗೆ ರಚನೆಗೊಂಡ ಸಂವಿಧಾನವನ್ನು ಎಲ್ಲಾ ವರ್ಗದವರು ಗೌರವಿಸುವಂತಾಗಬೇಕು. ಸಂವಿಧಾನದ ಮೌಲ್ಯಗಳಾದ, ಸಮಾನತೆ, ಪ್ರಜಾಪ್ರಭುತ್ವ, ಏಕತೆ ಮತ್ತು ಜಾತ್ಯಾತೀತವಾದಗಳನ್ನು ಒಳಗೊಂಡಂತೆ ರಚನೆಗೊಂಡ ಸಂವಿಧಾನವು ಇಂದು ವಿಶ್ವದಲ್ಲೇ ಅತ್ಯಂತ ಜನಪ್ರಿಯ ಹೊಂದಿರುವ ಗಣತಂತ್ರ ರಾಷ್ಟ್ರವಾಗಿ ಹೊರಹೊಮ್ಮಿದೆ. ಜನನಾಯಕವಾದ ರಾಷ್ಟ್ರದಲ್ಲಿ ನಮಗೆ ಜಾತಿ ಧರ್ಮ ಆಧರಿತವಾಗಿ ಯಾವುದೇ ರೀತಿಯ ಸಂವಿಧಾನ ರಚನೆಗೊಂಡಿಲ್ಲಾ ಬದಲಿಗೆ ಸರ್ವರು ಸಮಾನರು ಎಂಬ…
ಲೇಖಕ: admin
ಮಡಿಕೇರಿ ಜ.27 NEWS DESK : ಸೋಮವಾರಪೇಟೆ ತಾಲ್ಲೂಕು ಅಗ್ನಿಶಾಮಕ ಠಾಣೆಯ ನೂತನ ಕಟ್ಟಡವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಪ.ಪಂ ಅಧ್ಯಕ್ಷರಾದ ಜಯಂತಿ ಶಿವಕುಮಾರ್, ಚೌಡ್ಲು ಗ್ರಾಮ ಗ್ರಾ.ಪಂ ಅಧ್ಯಕ್ಷರಾದ ಸಿ.ಎಸ್.ಗೀತಾ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಇತರರು ಪಾಲ್ಗೊಂಡಿದ್ದರು.
ಮಡಿಕೇರಿ ಜ.27 NEWS DESK : ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟದಲ್ಲಿ ಮಡಿಕೇರಿಯ ಮರ್ಕರ ಟೆಕ್ವಾಂಡೋ ಕ್ಲಬ್ನ ವಿದ್ಯಾರ್ಥಿ ಹೆಚ್.ಎಸ್.ಮೋಹಿತ್ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತದ ವತಿಯಿಂದ ಆರು ದಿನಗಳ ಕಾಲ ನಡೆದ ಕ್ರೀಡಾಕೂಟದಲ್ಲಿ 74 ಕೆಜಿ ಒಳಗಿನ ಬಾಲಕರ ವಿಭಾಗದಲ್ಲಿ ಹೆಚ್.ಎಸ್.ಮೋಹಿತ್ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. ಮಡಿಕೇರಿಯ ಹೆಚ್.ಆರ್.ಶೇಖರ್ ಹಾಗೂ ಹೆಚ್.ಪಿ.ಕುಸುಮಾ ದಂಪತಿಯ ಪುತ್ರ ಮೋಹಿತ್, ಟೆಕ್ವಾಂಡೋ ಕ್ಲಬ್ನ ಮಾಸ್ಟರ್ ಕುಶಾಲ್ ಕುಮಾರ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಕ್ರೀಡಾಕೂಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕ್ರೀಡಾ ಜ್ಯೋತಿಯನ್ನು ಪ್ರಜ್ವಲನೆ ಮಾಡಿದರು. ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಫೀಬಾ ಏಷ್ಯಾ…
ಕುಶಾಲನಗರ ಜ.27 NEWS DESK : ಕೂಡುಮಂಗಳೂರು ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ತಮ್ಮ ವಾರ್ಡ್ ಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಕೂಡುಮಂಗಳೂರು ಗ್ರಾ.ಪಂ ನ ಎರಡನೇ ವಾರ್ಡ್ ಸುಂದರನಗರ, ನವಗ್ರಾಮ, ಬಸವೇಶ್ವರ ಬಡಾವಣೆ ಹಾಗೂ ವಿನಾಯಕ ಬಡಾವಣೆಗೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗನೇ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವುದಾಗಿ ಭರವಸೆ ನೀಡಿದರು. ನರೇಗಾ ಯೋಜನೆಯಡಿ ಸರ್ಕಾರದ ಸವಲತ್ತುಗಳನ್ನು ಪಡೆಯುವ ಬಗ್ಗೆ, ಪರಿಶಿಷ್ಠ ಜಾತಿ ಹಾಗೂ ಪಂಗಡದವರಿಗೆ ಸರ್ಕಾರದಿಂದ ನೀಡಲಾಗಿರುವ ಯೋಜನೆಗಳ ಬಗ್ಗೆ, ಅಂಬೇಡ್ಕರ್ ಹಾಗೂ ಬಸವ ವಸತಿ ಯೋಜನೆಯಡಿ ಮನೆ ಪಡೆ ಸೇರಿದಂತೆ ಇನ್ನಿತರ ಸರ್ಕಾರಿ ಯೋಜನೆಗಳ ಬಗ್ಗೆ ಕೆ.ಬಿ.ಶಂಶುದ್ಧೀನ್ ಸ್ಥಳೀಯರಿಗೆ ಮಾಹಿತಿ ನೀಡಿದರು. ದಶಕಗಳಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ನಿವೇಶನ ರಹಿತರು ನಿವೇಶನ ಕೋರಿ ಪಂಚಾಯಿತಿಗೆ ಅರ್ಜಿ ಸಲ್ಲಿಸುವಂತೆ ಮಾಹಿತಿ ನೀಡಿದರು. ನಂತರ ಮಾತನಾಡಿದ ಅವರು, ವಾರ್ಡ್ ನಲ್ಲಿ ಹಂತಹಂತವಾಗಿ ಹಲವು ಅಭಿವೃದ್ಧಿ ಕೆಲಸಗಳನ್ನು ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು…
ನಾಪೋಕ್ಲು ಜ.27 NEWS DESK : ನಾಪೋಕ್ಲು ನಾಡಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಂದಾಯ ಇಲಾಖೆಯ ಕಂದಾಯ ಪರಿವೀಕ್ಷ ಆರ್.ರವಿಕುಮಾರ್ ಧ್ವಜಾರೋಹಣ ನೆರವೇರಿಸಿ, ದಿನದ ಮಹತ್ವದ ಬಗ್ಗೆ ಮಾತನಾಡಿದರು. ಈ ಸಂದರ್ಭ ಕಂದಾಯ ಗ್ರಾಮ ಆಡಳಿತ ಅಧಿಕಾರಿಗಳಾದ ಜನಾರ್ಧನ್, ಅಮೃತ, ಸ್ವಾತಿ, ದಾನೇಶ್ವರಿ, ಲೇಖನ, ಜನಸೇವಕರಾದ ತಿಮ್ಮಣ್ಣ, ಸೋಮಯ್ಯ, ಪೂಣಚ್ಚ, ಸಂಜಯ್, ಲಾಲು, ಪ್ರದೀಪ್ ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜ.27 NEWS DESK : ಮಡಿಕೇರಿ ತಾಲ್ಲೂಕು ಸವಿತಾ ಸಮಾಜದ ವತಿಯಿಂದ ಫೆ.4 ರಂದು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಸವಿತಾ ಸಮಾಜದ ಅಧ್ಯಕ್ಷ ಎಂ.ಟಿ.ಮಧು ಈ ಕುರಿತು ಮಾಹಿತಿ ನೀಡಿ, ಸಮಾಜ ಬಾಂಧವರಿಗಾಗಿ ಅಂದು ಕ್ರೀಡಾಕೂಟ ಆಯೋಜಿತವಾಗಿದೆ. ಇದೇ ಸಂದರ್ಭ ‘ಪ್ರತಿಯೊಬ್ಬ ರಕ್ತದಾನಿ ಹೀರೋ’ ಎನ್ನುವ ಘೋಷ ವಾಕ್ಯದೊಂದಿಗೆ ರಕ್ತದಾನ ಶಿಬಿರ ನಡೆಯಲಿದ್ದು, ಇದರಲ್ಲಿ ಜಾತಿ ಮತಗಳ ಭೇದವಿಲ್ಲದೆ ಯಾರು ಬೇಕಾದರು ಪಾಲ್ಗೊಳ್ಳಬಹುದಾಗಿದ್ದು, ಸಂಘ ಸಂಸ್ಥೆಗಳು ಅಗತ್ಯ ಸಹಕಾರ ನಿಡುವಂತೆ ಮನವಿ ಮಾಡಿದರು. ಸಮಾಜದ ಕ್ರೀಡಾ ಅಧ್ಯಕ್ಷ ಮಧು ಚೆಟ್ಟಿಮಾನಿ ಅವರು ಮಾತನಾಡಿ, ಅಂದು ತಾಲ್ಲೂಕು ಮಟ್ಟದ ಸೂಪರ್ 9 ಕ್ರಿಕೆಟ್ ಪಂದ್ಯಾವಳಿಯನ್ನು ಯೋಜಿಸಲಾಗಿದೆ. ಪಂದ್ಯಾವಳಿಗೂ ಮುನ್ನ ಕೊಡಗು ಪತ್ರಕರ್ತರ ತಂಡ ಹಾಗೂ ಸವಿತಾ ಸಮಾಜ ತಂಡದ ನಡುವೆ ಪ್ರದರ್ಶನ ಪಂದ್ಯ ನಡೆಯಲಿದೆ. ಇದೇ ಮೊದಲ ಬಾರಿಗೆ ಮಹಿಳೆಯರಿಗೂ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದರು.…
ನಾಪೋಕ್ಲು ಜ.27 NEWS DESK : ನಾಪೋಕ್ಲು ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವದ ಆಚರಣೆಯಲ್ಲಿ ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಧ್ವಜಾರೋಹಣ ನೆರವೇರಿಸಿದರು. ವಿದ್ಯಾಸಂಸ್ಥೆ ಉಪಾಧ್ಯಕ್ಷ ನೆರವಂಡ ಸುನಿಲ್ ದೇವಯ್ಯ ಮಾತನಾಡಿ, ಪ್ರತಿಯೊಬ್ಬರು ಪ್ರತಿದಿನ ಸಂವಿಧಾನದ ವಿಶೇಷತೆಯ ಬಗ್ಗೆ ತಿಳಿದುಕೊಳ್ಳಬೇಕು ಎಂದರು. ಪ್ರಾಂಶುಪಾಲರಾದ ಬಿ.ಎಂ.ಶಾರದ ಮಾತನಾಡಿ, ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವುದರಿಂದ ವಿದ್ಯಾರ್ಥಿಗಳಲ್ಲಿ ಭಾವೈಕ್ಯತೆ ಬೆಳೆಯಲು ಸಾಧ್ಯ ಎಂದರು. ಶಿಕ್ಷಕಿ ಸಿ.ಕೆ.ಲೀನಾ ಮಾತನಾಡಿ, ದೇಶದ ಸಂವಿಧಾನದ ರಕ್ಷಣೆಗಾಗಿ ದುಡಿದ ಪ್ರತಿಯೊಬ್ಬರನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯರ ಆದ್ಯ ಕರ್ತವ್ಯ ಎಂದರು. ಕಾರ್ಯಕ್ರಮದಲ್ಲಿ ನಿರ್ದೇಶಕ ಚೌರಿರ ಮಂದಣ್ಣ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು. ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಜ.27 NEWS DESK : ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕನೆಂದು ಹೇಳಿಕೊಂಡಿರುವ ಹೆಚ್.ಎಲ್.ದಿವಾಕರ್ ಅವರು ಡಾ.ಅಂಬೇಡ್ಕರ್ ಭವನ ಸಮಿತಿ ವಿರುದ್ಧ ಮಾಡಿರುವ ಆರೋಪವನ್ನು ಸಾಬೀತು ಪಡಿಸಿದರೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಶತಮಾನೋತ್ಸವ ಭವನ ನಿರ್ಮಾಣ ಸಮಿತಿಯ ಅಧ್ಯಕ್ಷ ಹೆಚ್.ಎಂ.ನಂದಕುಮಾರ್ ಸವಾಲು ಹಾಕಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಮಿತಿ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಮತ್ತು ಎಲ್ಲಾ ಲೆಕ್ಕಪತ್ರಗಳು ಸಮರ್ಪಕವಾಗಿವೆ. ಸಮಿತಿಯ ಉಪಾಧ್ಯಕ್ಷ ಸ್ಥಾನದಲ್ಲಿರುವ ಹೆಚ್.ಎಲ್.ದಿವಾಕರ್ ಅವರು ಯಾವುದೇ ಸಭೆಗಳಿಗೆ ಹಾಜರಾಗದೆ ದುರುದ್ದೇಶಪೂರಿತ ಆರೋಪಗಳನ್ನು ಮಾಡಿದ್ದಾರೆ. ಇದನ್ನು ಸಮಿತಿ ತೀವ್ರವಾಗಿ ಖಂಡಿಸುವುದಾಗಿ ಅಸಮಾಧಾನ ವ್ಯಕ್ತಪಡಿಸಿದರು. ಮಡಿಕೇರಿ ನಗರದಲ್ಲಿ ನಿರ್ಮಾಣಗೊಂಡಿರುವ ಡಾ.ಅಂಬೇಡ್ಕರ್ ಭವನದ ಆಡಳಿತ ಮಂಡಳಿಯ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ನಗರದ ಅಶೋಕಪುರದ ನಿವಾಸಿಗಳ ಕೋರಿಕೆ ಮೇರೆಗೆ ಅಂದಿನ ಜಿಲ್ಲಾಧಿಕಾರಿಗಳಾಗಿದ್ದ ಹೆಚ್.ಭಾಸ್ಕರ್ ಅವರು 10 ಸೆಂಟ್ ಜಾಗವನ್ನು ಮೀಸಲಿರಿಸಿದರು. 1991-92 ರಲ್ಲಿ ವೈದ್ಯರಾಗಿದ್ದ ಡಾ.ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಭವನ…
ವಿರಾಜಪೇಟೆ ಜ.27 NEWS DESK : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ಸಂಸ್ಥೆಯ ನಿರ್ದೇಶಕರಾದ ಕೊಮ್ಮೆತೋಡಿನ ಪೊಯಕೆರ ಎಸ್.ರಫೀಕ್ (ಕೊಡವ ಮುಸ್ಲಿಂ ಅಸೋಸಿಯೇಷನ್ ನ ಮಾಜಿ ಅಧ್ಯಕ್ಷ ದಿ.ಸಾದುಲಿ ಹಾಜಿಯವರ ಪುತ್ರ) ಅವರು ಪ್ರಾಯೋಜಿಸಿರುವ ಸಾಂಪ್ರದಾಯಿಕ ದಫ್ ಅನ್ನು ಸಂಸ್ಥೆಗೆ ಹಸ್ತಾಂತರಿಸಲಾಯಿತು. ಸಂಸ್ಥೆಯ ಉಪಾಧ್ಯಕ್ಷ ಅಕ್ಕಳತಂಡ ಎಸ್.ಮೊಯ್ದು ಅವರ ಆತಿಥ್ಯದಲ್ಲಿ ಕಾಟ್ರಕೊಲ್ಲಿಯಲ್ಲಿ ನಡೆದ ಕೆಎಂಎ ದಫ್ ರಾತೀಬ್ನ ಸದಸ್ನಲ್ಲಿ ಪೊಯಕೆರ ರಫೀಕ್ ದಫನ್ನು ಸಾಂಕೇತಿಕವಾಗಿ ಕೆ.ಎಂ.ಎ.ಗೆ ಹಸ್ತಾಂತರಿಸಿದರು. ಇದನ್ನು ಸಂಸ್ಥೆಯ ಪರವಾಗಿ ಅಧ್ಯಕ್ಷ ದುದ್ದಿಯಂಡ ಸೂಫಿ ಹಾಜಿ, ಹಿರಿಯ ಉಪಾಧ್ಯಕ್ಷ ಡಾ.ಜೋಯಿಪೆರ ಕುಂಜ್ಹಬ್ದುಲ್ಲಾ, ಉಪಾಧ್ಯಕ್ಷ ಅಕ್ಕಳತಂಡ ಎಸ್.ಮೊಯ್ದು ಕಾರ್ಯಕಾರಿ ಸಮಿತಿ ಪದಾಧಿಕಾರಿಗಳೊಂದಿಗೆ ನಲ್ವತ್ತೋಕ್ಲಿನ ರಿಫಾಯಿ ರಾತೀಬ್ ಸಂಘದ ಖಲೀಫರ ಮತ್ತು ಸದಸ್ಯರ ಸಮ್ಮುಖದಲ್ಲಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೂಫಿ ಹಾಜಿ, ಹಿಂದಿನಿಂದಲೂ ಕೊಡವ ಮುಸ್ಲಿಮರು ದಫ್ ರಾತೀಬನ್ನು ಶ್ರದ್ಧಾಭಕ್ತಿಯಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಈ ಕುರಿತು ಜನರಿಗಿರುವ ನಂಬಿಕೆ ಮಹತ್ತರವಾದದ್ದು. ದಫ್ ಕೇವಲ ಧಾರ್ಮಿಕ ಪರಿಕರ ಮಾತ್ರವಲ್ಲದೆ ಸಾಂಪ್ರದಾಯಿಕ ಧಾರ್ಮಿಕ ಆಚರಣೆಯ…
ನಾಪೋಕ್ಲು ಜ.27 NEWS DESK : ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸಭೆಯು ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ನಡೆಯಿತು. ಆರೋಗ್ಯ ಕೇಂದ್ರದ ಆಡಳಿತ ಅಧಿಕಾರಿ ಡಾ.ಪೂವಯ್ಯ ಮಾತನಾಡಿ ಕೊರೋನಾ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ರಕ್ಷಾ ಸಮಿತಿ ಇಲ್ಲದೆ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಗದೆ ಸಮಸ್ಯೆಗಳು ಆಗುತ್ತಿತ್ತು. ಇದೀಗ ನೂತನ ಸಮಿತಿ ಆಯ್ಕೆಯಾಗಿ ಕಾರ್ಯ ಪ್ರವೃತ್ತವಾಗುತ್ತಿದೆ. ಇಲ್ಲಿಗೆ ಬೇಕಾದ ಅವಶ್ಯಕತೆಗಳನ್ನು ಪರಿಶೀಲಿಸಿ ರೋಗಿಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡಲು ಸಹಕಾರಿಯಾಗಲಿದೆ ಎಂದರು. ಸಭೆಯಲ್ಲಿ ಸಮಿತಿ ಸದಸ್ಯ ಲೆಕ್ಕಪತ್ರವನ್ನು ಪರಿಶೀಲಿಸಿ ಮಾಹಿತಿಗಳನ್ನು ಪಡೆದುಕೊಂಡು ಮುಂದೆ ಕೈಗೊಳ್ಳಬೇಕಾದ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿ ಒಮ್ಮತದ ನಿರ್ಧಾರವನ್ನು ಕೈಗೊಳ್ಳಲಾಯಿತು. ರಕ್ಷಾ ಸಮಿತಿಯ ನೂತನ ಸದಸ್ಯರು ಹಾಗೂ ಆಡಳಿತ ಅಧಿಕಾರಿ ಪೂವಯ್ಯ ಸಭೆಯನ್ನು ಉದ್ಘಾಟಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷ ಕಂಗಂಡ ಶಶಿ, ಸಮಿತಿ ಸದಸ್ಯ ಟಿ.ಆರ್.ರಾಜಪ್ಪ, ಎ.ಸಿ.ಶಾಂತಿ, ಬಿ.ವಿ.ಮೊಹಮ್ಮದ್ ಅಶ್ರಫ್, ಅಪ್ಪಚೆಟ್ಟೋಳಂಡ ಮಿಥುನ್ ಮಾಚಯ್ಯ, ಡಾ.ಜೀವನ ಹಾಗೂ ಸಿಬ್ಬಂದಿಗಳು ಹಾಜರಿದ್ದರು. ಆರೋಗ್ಯ…






