ವಿರಾಜಪೇಟೆ ಜ.25 NEWS DESK : ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟ ಯೋಜನೆ ಜಾರಿಗೆ ಬಂದು 24 ವರ್ಷ ಕಳೆದರು ಬಿಸಿ ಊಟ ಯೋಜನೆ ಕಾರ್ಯಕರ್ತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವೇತನ ಹೆಚ್ಚಿಸಿಲ್ಲವೆಂದು ಸಿ.ಐ.ಟಿ.ಯು. ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಐಟಿಯು ಸಂಘಟನೆಯ ರಾಜ್ಯ ಸಮಿತಿ ಮತ್ತು ಕೊಡಗು ಜಿಲ್ಲಾ ಸಮಿತಿಯ ಜಂಟಿ ಆಶ್ರಯದಲ್ಲಿ ವಿರಾಜಪೇಟೆ ನಗರ ಶಾಖೆಯಲ್ಲಿ ಬಿಸಿ ಊಟ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮಾ.3 ಮತ್ತು 4 ರಂದು ಬಂದ್ ನಡೆಸಲಾಗುತ್ತದೆಂದು ತಿಳಿಸಿದರು. 2014ರ ನಂತರ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳ ಪರಿಕಲ್ಪನೆ ಬದಲಾಗಿ, ನೀತಿ ಆಯೋಗದ ಶಿಫಾರಸ್ಸಿನಂತೆ 60:40 ಅನುಪಾತದ ಆಧಾರದಲ್ಲಿ ಕೇಂದ್ರ ಸರ್ಕಾರ ತನ್ನ ಮೂಲ ಜವಾಬ್ದಾರಿ ಮರೆತು ನುಣುಚಿಕೊಂಡಿದೆ. ರಾಜ್ಯದಲ್ಲಿ ನೂತನ ಸರ್ಕಾರ ರಚನೆಯ ಆರಂಭದಲ್ಲಿ ವೇತನ ಹೆಚ್ಚಳದ ಭರವಸೆ ನೀಡಿತ್ತಾದರು ಇಂದಿನವರೆಗೂ ಜಾರಿಯಾಗಿಲ್ಲವೆಂದು ಆರೋಪಿಸಿದರು. ಸಿ.ಐ.ಟಿ.ಯು. ಸಂಘಟನೆಯ ರಾಜ್ಯ ಖಜಾಂಚಿಗಳಾದ ಮಹಾದೇವಮ್ಮ, ಬಿಸಿ ಊಟ…
ಲೇಖಕ: admin
ಪೊನ್ನಂಪೇಟೆ, ಜ.25 NEWS DESK : ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ವಿಶೇಷ ಅತಿಥಿಗಳಾಗಿ ತೆರಳಿದ ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ) ಕೋಶಾಧಿಕಾರಿ ಮತ್ತು ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹರಿಶ್ಚಂದ್ರ ಎ.ಹಂಸ ಅವರನ್ನು ಕೆ.ಎಂ.ಎ. ವತಿಯಿಂದ ಬೀಳ್ಕೊಡಲಾಯಿತು. ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ಶುಕ್ರವಾರದಂದು ಬೆಳಿಗ್ಗೆ ಕಣ್ಣನೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ನವದೆಹಲಿಗೆ ಪ್ರಯಾಣ ಬೆಳೆಸಿದ ಹೆಚ್.ಎ.ಹಂಸ ಅವರನ್ನು ಕೆ. ಎಂ.ಎ. ಪರವಾಗಿ ಅಧ್ಯಕ್ಷ ದುದ್ದಿಯಂಡ ಸೂಫಿ ಹಾಜಿ ಪುಷ್ಪಗುಚ್ಛ ನೀಡಿ ಬೀಳ್ಕೊಟ್ಟರು. ಈ ಸಂದರ್ಭ ಪ್ರಯಾಣಕ್ಕೆ ಶುಭ ಹಾರೈಸಿ ಮಾತನಾಡಿದ ಸೂಫಿ ಹಾಜಿ, ಜ. 26 ರಂದು ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ವಿಶೇಷ ಅತಿಥಿಗಳಾಗಿ ತೆರಳಲು ಆಯ್ಕೆಗೊಂಡ ಕರ್ನಾಟಕದ 12 ಗ್ರಾ.ಪಂ ಅಧ್ಯಕ್ಷರ ಪೈಕಿ ಒಬ್ಬರಾಗಿರುವ ಹಂಸ ಅವರ ಸಾಧನೆ ಕೇವಲ ಸಮುದಾಯಕ್ಕೆ ಮಾತ್ರವಲ್ಲ ಇಡೀ ಜಿಲ್ಲೆಗೆ ಹೆಗ್ಗಳಿಕೆ ಮೂಡಿಸಿದೆ. ಹಂಸ ಅವರ ಸಮಾಜಮುಖಿ…
ಮಡಿಕೇರಿ ಜ.25 NEWS DESK : ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಪಂಚಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಆಯ್ಕೆ ಸಮಿತಿ ಸಭೆಯಲ್ಲಿ ಕೊಡಗು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿ ಇರುವ 10 ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ರೋಸ್ಟರ್ ಬಿಂದುವನ್ನು ಗುರುತಿಸಿ ನೇಮಕಾತಿ ಮಾಡಲು ತೀರ್ಮಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕೊಡಗು ಜಿಲ್ಲೆಯ ವೆಬ್ಸೈಟ್ ನಲ್ಲಿ hಣಣಠಿs://ಞoಜogu.ಟಿiಛಿ.iಟಿ ಆನ್ಲೈನ್ ಮೂಲಕ ಭರ್ತಿ ಮಾಡಿ ಅಗತ್ಯ ದೃಢೀಕರಿಸಿದ ದಾಖಲೆಗಳೊಂದಿಗೆ ಸಲ್ಲಿಸಬಹುದು. ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು, ಪರಿಶಿಷ್ಟ ಜಾತಿ, ಸಾಮಾನ್ಯ, ಚೆನ್ನಯ್ಯನಕೋಟೆ, ಸಮಾನ್ಯ, ಸಾಮಾನ್ಯ, ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ, ಪರಿಶಿಷ್ಟ ಪಂಗಡ, ಸಾಮಾನ್ಯ, ಕುಟ್ಟ, ಸಾಮಾನ್ಯ, ಮಹಿಳಾ ಅಭ್ಯರ್ಥಿ, ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ, ಪ್ರವರ್ಗ-1, ಸಾಮಾನ್ಯ, ಸೋಮವಾರಪೇಟೆ ತಾಲ್ಲೂಕಿನ ನಿಡ್ತ, ಸಾಮಾನ್ಯ,…
ಮಡಿಕೇರಿ ಜ.25 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಲೇಖಕರು ಅಥವಾ ಪ್ರಕಾಶಕರು ಅರ್ಜಿ ಸಲ್ಲಿಸಬಹುದಾಗಿದೆ. ದಿನಾಂಕ 01-01-2022 ರಿಂದ 31-12-2022 ರ ಅವಧಿಯ ಮಧ್ಯೆ ಪ್ರಕಟಗೊಂಡ ಪುಸ್ತಕಗಳನ್ನು 2022ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಪರಿಗಣಿಸಲಾಗುವುದು. ಹಾಗೆಯೇ 01.01.2023 ರಿಂದ 31.12.2023 ರ ಅವಧಿಯ ಮಧ್ಯೆ ಪ್ರಕಟಗೊಂಡ ಪುಸ್ತಕಗಳನ್ನು 2023 ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಪರಿಗಣಿಸಲಾಗುವುದು. ಅಕಾಡೆಮಿಯಿಂದ ಪ್ರಕಟವಾದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ. ಅರೆಭಾಷೆ ಕವನ ಸಂಕಲನ, ಅರೆಭಾಷೆ ಕಥಾ ಸಂಕಲನ, ಅರೆಭಾಷೆ ಕಾದಂಬರಿ, ಅರೆಭಾಷೆ ನಾಟಕ, ಅರೆಭಾಷೆ ಲಲಿತ ಪ್ರಬಂಧ,ಅರೆಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಅಧ್ಯಯನಗ್ರಂಥ ಹಾಗೂ ಅನ್ಯ ಭಾಷೆಯಿಂದ ಅರೆಭಾಷೆಗೆ ಭಾಷಾಂತರಿತ ಕೃತಿಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದು. ಹೆಚ್ಚು ಜನಮನ್ನಣೆ ಗಳಿಸಿದ ಪುಸ್ತಕದ ಮೂರು ಪ್ರಕಾರಗಳನ್ನು ಮಾತ್ರ ಬಹುಮಾನಕ್ಕೆ ಪರಿಗಣಿಸಲಾಗುವುದು. ಪುಸ್ತಕಗಳ ತಲಾ ನಾಲ್ಕು ಪ್ರತಿಗಳನ್ನು…
ಮಡಿಕೇರಿ ಜ.25 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜ.28 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ತಾಮರ ರೆಸಾರ್ಟ್, ಕಕ್ಕಬ್ಬೆ, ಪೆಂಟಾಟೆಕ್, ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಮುತ್ತೂಟ್ ಪೈನಾನ್ಸ್, ಮೈಸೂರು, ಇಬ್ಬನಿ ರೆಸಾರ್ಟ್, ಮಡಿಕೇರಿ, ಅಪೋಲೋ ಫಾರ್ಮಸಿ ಬೆಂಗಳೂರು, ಹ್ಯೂಂಡಾಯಿ ಕಾರ್ ಶೋ ರೂಮ್ಸ್, ಮಡಿಕೇರಿ ತಮ್ಮ ಸಂಸ್ಥೆಗಳಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್ಸಿ ಕ್ಕಿಂತ ಕಡಿಮೆ, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ಸ್ವಯಂ ವಿವರ(ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ತಿಳಿಸಿದ್ದಾರೆ. ಹೆಚ್ಚಿನ…
ಮಡಿಕೇರಿ ಜ.25 NEWS DESK : ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2024-25 ನೇ ಸಾಲಿನಲ್ಲಿ ಎಸ್ಸಿಎಸ್ಪಿ/ ಟಿಎಸ್ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಇಂಟರ್ನ್ಶಿಪ್ ಪ್ರೋಗ್ರಾಂ(ಇಪಿ) ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರವಾಸಿ ತಾಣದಲ್ಲಿ ಮೊಬೈಲ್ ಕ್ಯಾಂಟೀನ್ ವಾಹನವನ್ನು ಖರೀದಿಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದೆ. ಈ ತರಬೇತಿ ಹಾಗೂ ಸಹಾಯಧನಕ್ಕಾಗಿ ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ 02 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 01 ಅಭ್ಯರ್ಥಿಗಳ ಗುರಿಯನ್ನು ಪ್ರಸ್ತುತ ಸಾಲಿನಲ್ಲಿ ನಿಗಧಿಪಡಿಸಿದೆ. ಈ ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮ ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ. ಈ ತರಬೇತಿ ಕಾರ್ಯಕ್ರಮಗಳ ವಿವರ/ ಅಭ್ಯರ್ಥಿಗಳ ವಿದ್ಯಾರ್ಹತೆಯ ವಿವರ ಇಂತಿದೆ. ಇಂಟರ್ಪ್ರೆನರ್ಶಿಪ್ ಪ್ರೋಗ್ರಾಮ್ (ಇಪಿ) ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಕನಿಷ್ಠ ವಿದ್ಯಾರ್ಹತೆ 10 ನೇ ತರಗತಿ, ತರಬೇತಿ…
ಬೆಂಗಳೂರು NEWS DESK ಜ 24: ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ರವೀಂದ್ರ ಕಲಾ ಕ್ಷೇತ್ರದಲ್ಲಿ ಕನ್ನಡ ಸೇನಾನಿ ಸಾ.ರಾ.ಗೋವಿಂದು ಅವರ ಅಭಿನಂದನ ಕಾರ್ಯಕ್ರಮದಲ್ಲಿ ಗೋವಿಂದು ಅವರನ್ನು ಸನ್ಮಾನಿಸಿ, ಅಭಿನಂದಿಸಿ ಮಾತನಾಡಿದರು. ಪಕ್ಕದ ರಾಜ್ಯಗಳಲ್ಲಿ ಪರಭಾಷಾ ಚಿತ್ರಗಳಿಗೆ ಟಿಕೆಟ್ ದರ ಎಷ್ಟಿದೆ ಎಂದು ಪರಿಶೀಲಿಸಿ ರಾಜ್ಯದಲ್ಲಿ ಅದಕ್ಕೆ ತಕ್ಕಂತೆ ನಿಯಂತ್ರಣ ತರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದರು. ಕನ್ನಡ ಕೆಲಸಕ್ಕೆ ಸರ್ಕಾರ ಸದಾ ಮುಂದೆ ಇರುತ್ತದೆ. ದಿನಾಂಕ 27 ರಂದು ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪುತ್ಥಳಿ ಸ್ಥಾಪಿಸಲಾಗುವುದು ಎಂದರು. ಗೋವಿಂದು ಅವರು ರಾಜ್ ಕುಮಾರ್ ಸಂಘದ ಅಧ್ಯಕ್ಷರಾಗಿ ಮಾಡಿದ ಕೆಲಸಗಳು ಸ್ಮರಣೀಯ. ರಾಜ್ ಅವರ ವಿನಯ, ಸಭ್ಯತೆ, ಸರಳತೆ ಇಡೀ ಮನುಷ್ಯ ಕುಲಕ್ಕೇ ಮಾದರಿ. ಡಾ.ರಾಜ್ ಕುಮಾರ್ ಅವರಿಗೆ ರಾಜ್ ಅವರೇ ಸಾಟಿ.…
ಬೆಂಗಳೂರು NEWS DESK ಜ.24 : 2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್ನಲ್ಲಿ ಆಟವಾಡಿ ಭಾರತ ತಂಡವು ಎರಡೂ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಲು ಅತ್ಯುತ್ತಮ ಪ್ರದರ್ಶನ ನೀಡಿದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರು ನರಸೀಪುರದ ಕುರಬೂರಿನ ಚೈತ್ರಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಇಬ್ಬರೂ ಪಟುಗಳಿಗೆ ತಲಾ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿದರು. ಸಚಿವರಾದ ಚಲುವರಾಯಸ್ವಾಮಿ ಮತ್ತು ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಜ.24 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಶುಕ್ರವಾರ ಚಾಲನೆ ನೀಡಿದರು. ರಾಜಾಸೀಟು ಉದ್ಯಾನವನದಲ್ಲಿ ನಿರ್ಮಾಣವಾಗಿರುವ ಓಂಕಾರೇಶ್ವರ ದೇವಾಲಯ ಹಾಗೂ ಕೊಡಗಿನ ಜೇನು ಸೇರಿದಂತೆ ಹಲವು ಫಲಪುಷ್ಪ ಪ್ರದರ್ಶನಗಳು ಆಕರ್ಷಣೀಯವಾಗಿದ್ದು, ನೋಡುಗರನ್ನು ಸೆಳೆಯುತ್ತಿವೆ. ಶಾಸಕ ಡಾ.ಮಂತರ್ ಗೌಡ ಅವರು ಮಾತನಾಡಿ ಈ ಬಾರಿ ಓಂಕಾರೇಶ್ವರ ದೇವಾಲಯ ಹಾಗೂ ಕೊಡಗಿನ ಜೇನು ಆಕರ್ಷಣೀಯವಾಗಿದ್ದು, ಗಮನ ಸೆಳೆಯುತ್ತಿದೆ. ಹಾಗೆಯೇ ಫಲಪುಷ್ಪ ಪ್ರದರ್ಶನದಲ್ಲಿ ಸೆಲ್ಫಿಗೂ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ಪ್ರತೀ ವರ್ಷದಂತೆ ಈ ಬಾರಿಯು ಸಹ ಬಟಾಣಿ ಗಾರ್ಡನ್ ಮಾದರಿಯಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಈ ಬಾರಿ ನಾಲ್ಕು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಇದನ್ನು ಮತ್ತಷ್ಟು ವಿಸ್ತರಿಸಬೇಕು ಎಂದು ಸಲಹೆ ಮಾಡಿದರು. 35 ಲಕ್ಷ ರೂ. ವೆಚ್ಚದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಪ್ರವಾಸಿಗರು ಸೇರಿದಂತೆ ಎಲ್ಲರೂ ಸ್ವಚ್ಚತೆಗೆ ಒತ್ತು ನೀಡಬೇಕು…
ಮಡಿಕೇರಿ ಜ.24 NEWS DESK : ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ರೈಲ್ವೆ ರಿಕ್ರೂಟ್ಮೆಂಟ್ ಬೋರ್ಡ್ ಅರ್ಜಿ ಆಹ್ವಾನಿಸಲಾಗಿದೆ. 10 ನೇ ತರಗತಿ ತೇರ್ಗಡೆಯಾಗಿರುವ 18 ರಿಂದ 36 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಫೆಬ್ರವರಿ, 22 ರವರೆಗೆ (23.1.2025 ರಿಂದ 22.2.2025 ರವರೆಗೆ) ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ನೀಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ರೈಲ್ವೆ ನೇಮಕಾತಿ ಪರೀಕ್ಷೆ ಹಾಗೂ ಇತರ ನೇಮಕಾತಿ ಪರೀಕ್ಷೆಗಳಿಗೆ ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್ ನಲ್ಲಿ ನುರಿತ ವಿಷಯ ತಜ್ಞರಿಂದ ರಿಯಾಯಿತಿ ದರದಲ್ಲಿ ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ 8660217739 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮಾಡಬಹುದು ಎಂದು ಶಾಖೆಯ ಗೌರವ ಕಾರ್ಯದರ್ಶಿ ಎಚ್.ಪಿ.ಮೋಹನ್ ಅವರು ತಿಳಿಸಿದ್ದಾರೆ.






