ಮಡಿಕೇರಿ ಜ.24 NEWS DESK : ಭಾಗಮಂಡಲ ಗ್ರಾಮ ಪಂಚಾಯತಿ ವತಿಯಿಂದ 8 ಅಂಗನವಾಡಿ ಕೇಂದ್ರಗಳಿಗೆ ಕೊಡುಗೆ ನೀಡಲಾಯಿತು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಾಂಡ ಸವಿತ ಕೀರ್ತನ್ ಕೆಲವು ದಿನಗಳ ಹಿಂದೆ ಕಾರ್ಯಕರ್ತೆಯರ ಮೂಲಕ ಅಂಗನವಾಡಿ ಕೇಂದ್ರಕ್ಕಾಗಿ ಗ್ರಾಮ ಪಂಚಾಯತಿಗೆ ಬೇಡಿಕೆಗಳನ್ನು ಸಲ್ಲಿಸಿದರು. ಬೇಡಿಕೆಗೆ ಸ್ವಂದಿಸಿ ಭಾಗಮಂಡಲ, ತಾವೂರು-1 ತಾವೂರು-2, ಚೇರಂಗಾಲ-1, ಚೇರಂಗಾಲ-2, ಕೋರಂಗಾಲ, ತಲಕಾವೇರಿ, ತಣ್ಣಿಮಾನಿ ಸೇರಿದಂತೆ 8 ಅಂಗನವಾಡಿ ಕೇಂದ್ರಗಳಿಗೆ ಗ್ರಾಮ ಪಂಚಾಯತಿಯಿಂದ ನೀರಿನ ಫಿಲ್ಟರ್, ಮಕ್ಕಳ ಕುರ್ಚಿ, ಮಕ್ಕಳ ಹಾಸಿಗೆ, ಚಾಪೆ, ಬೆಡ್ ಶೀಟ್ಗಳನ್ನು ವಿತರಿಸಲಾಯಿತು. ಅಧ್ಯಕ್ಷರಾದ ಕಾಳನ ಎ.ರವಿ ಮಾತನಾಡಿ, ಅಂಗನವಾಡಿ ಅಭಿವೃದ್ಧಿಗೆ ಸದಾ ಸಹಕರಿಸುವುದಾಗಿ ಭರವಸೆ ನೀಡಿದರು. ಕೇಂದ್ರದ ಅಭಿವೃದ್ಧಿಗೆ ಎಲ್ಲಾ ಸೇರಿ ಶ್ರಮಿಸಬೇಕಾಗಿ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಭಾಗಮಂಡಲ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಗಂಗಮ್ಮ, ಸದಸ್ಯರಾದ ದಂಡಿನ ಜಯಂತ, ನಿತ್ಯಾನಂದ, ಸಿರಕಜೆ ನಾಗೇಶ್, ಪೆಮಿತಾ, ದುರ್ಗಾವತಿ, ಶಶಿಕಲಾ, ವೀಣಾ ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಂದ, ಅಂಗನವಾಡಿ ಶಿಕ್ಷಕರಾದ…
ಲೇಖಕ: admin
ಮಡಿಕೇರಿ NEWS DESK ಜ.24 : ಆದಿಮಸಂಜಾತ ಕೊಡವರನ್ನು ಒಳಗೊಂಡ ಪರಿಪೂರ್ಣ ಮತ್ತು ಅರ್ಥಪೂರ್ಣ ಗಣರಾಜ್ಯಕ್ಕಾಗಿ ಒತ್ತಾಯಿಸಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಹಕ್ಕೊತ್ತಾಯವನ್ನು 76ನೇ ಗಣರಾಜ್ಯೋತ್ಸವದ ದಿನವಾದ ಜ.26 ರಂದು ಬೆಳಿಗ್ಗೆ 10.30 ಗಂಟೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತವಾಗಿ ಮಂಡಿಸಲಾಗುವುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಸೂಕ್ಷ್ಮಾತಿಸೂಕ್ಷ್ಮ ನಗಣ್ಯ ಸಂಖ್ಯೆಯ ಕೊಡವರ ಗೌರವಾನ್ವಿತ ಗುರಿಗಳು ಮತ್ತು ಶಾಸನ ಬದ್ಧ ಹಕ್ಕೊತ್ತಾಯಗಳ ಅನುಷ್ಠಾನಕ್ಕಾಗಿ ಜಿಲ್ಲಾಡಳಿತ ಮೂಲಕ ಸರಕಾರಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ದೇಶದ ಸಂವಿಧಾನದ ಆರ್ಟಿಕಲ್ 244 ಆರ್/ಡಬ್ಲ್ಯೂ 6ನೇ ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ, ವಿಶ್ವರಾಷ್ಟ್ರ ಸಂಸ್ಥೆಯ ಘೋಷಣೆ ಪ್ರಕಾರ ಅಂತರಾಷ್ಟ್ರೀಯ ಕಾನೂನಿನನ್ವಯ ಆದಿಮಸಂಜಾತ ಕೊಡವರಿಗೆ ಮಾನ್ಯತೆ ಮತ್ತು ಸೂಕ್ಷ್ಮಾತಿಸೂಕ್ಷ್ಮ ಕೊಡವ ಬುಡಕಟ್ಟು ಕುಲಕ್ಕೆ ಎಸ್ಟಿ ಟ್ಯಾಗ್ ಪರಿಗಣಿತೆಯೊಂದಿಗೆ ಸಿಎನ್ಸಿ ಪ್ರತಿಪಾದಿಸಿರುವ ಕೊಡವರ ಭೂಮಿ, ಭಾಷೆ, ಸಂಸ್ಕೃತಿ,…
ಮಡಿಕೇರಿ ಜ.24 NEWS DESK : ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆಯು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ಸರ್ಕಾರಿ ಗೋಶಾಲೆ ಮಂಜೂರಾಗಿರುವ 8 ಎಕರೆ ಜಾಗಕ್ಕೆ ಬೇಲಿ ಅಳವಡಿಸುವುದು, ಗೋಶಾಲೆಗೆ ಹೆಚ್ವುವರಿಯಾಗಿ ಒಂದು ಕೊಳವೆ ಬಾವಿ ಕೊರೆಸುವುದು, ಸರ್ಕಾರಿ ಗೋಶಾಲೆಯ ಜಾನುವಾರುಗಳಿಗೆ ಮೇವು ಕತ್ತರಿಸುವ ಯಂತ್ರ ಖರೀದಿಸುವುದು ಸೇರಿದಂತೆ ವಿವಿಧ ವಿಷಯಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಅನುಮೋದಿಸಲಾಯಿತು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಸಂರಕ್ಷಣಾ ಅಧಿನಿಯಮ 2020 ರಂತೆ ಪೊಲೀಸ್ ಇಲಾಖೆಯ ಮಾಹಿತಿಯಂತೆ 2023ರ ಏ.1 ರಿಂದ 2024ರ ಮಾರ್ಚ್ 31ರವರೆಗೆ 17 ಪ್ರಕರಣಗಳು ದಾಖಲಾಗಿದ್ದು, 38 ಜಾನುವಾರುಗಳನ್ನು ರಕ್ಷಿಸಲಾಗಿದೆ. ಸರ್ಕಾರಿ ಗೋಶಾಲೆ ಮಡಿಕೇರಿಗೆ 8 ಎಕರೆ ಮಂಜೂರಾಗಿದ್ದು, ಹಾಲಿ 2 ಎಕರೆ ಜಾಗಕ್ಕೆ ಮಾತ್ರ ಬೇಲಿ ನಿರ್ಮಿಸಲಾಗಿರುತ್ತದೆ. ಈ ಗೋಶಾಲೆ ಕಟ್ಟಡವು, ಮೇವು ದಾಸ್ತಾನು ಕೊಠಡಿ ಕಾವಲುಗಾರ ವಾಸದ ಕೊಠಡಿ ನಿರ್ಮಿಸಲಾಗಿದ್ದು, ಗೋಶಾಲೆಯ…
ಮಡಿಕೇರಿ ಜ.24 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ‘ಫಲಪುಷ್ಪ ಪ್ರದರ್ಶನ’ ಕಣ್ಮನ ಸೆಳೆಯುತ್ತಿದೆ. ನಾಲ್ಕು ದಿನಗಳ ಕಾಲ ನಡೆಯುವ ‘ಫಲಪುಷ್ಪ ಪ್ರದರ್ಶನ’ವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು. ಕೊಡಗಿನ ಪ್ರಸಿದ್ದ ಶ್ರೀ ಓಂಕಾರೇಶ್ವರ ದೇವಸ್ಥಾನದ ಕಲಾಕೃತಿ, “ಝೇಂಕಾರ (JHENKARA)” ಬ್ರಾಂಡ್ ಹಾಗೂ ಕೊಡಗು ಜೇನಿನ “ಕೂರ್ಗ್ ಹನಿ” ಮಾರಾಟ ಬ್ರಾಂಡ್ ಗಳ ವಿವಿಧ ಕಲಾಕೃತಿ, ಹೂ ಹಾಗೂ ಜೇನು ಹುಳುವಿನ ಕಲಾಕೃತಿ, ಗಣರಾಜ್ಯೋತ್ಸವದ ಅಂಗವಾಗಿ ಯೋಧ, ಪಿರಂಗಿ ಹಾಗೂ ರಾಷ್ಟ್ರಧ್ವಜದ ಕಲಾಕೃತಿ, ವಿಂಟೇಜ್ ಕಾರ್ ನ ಕಲಾಕೃತಿ, Butterfly wings, ಪ್ರವೇಶದಾರ, ಪ್ರಾಣಿ ಮುಖದ ಕಲಾಕೃತಿ, ಮಕ್ಕಳಿಗೆ ಮನರಂಜನೆ ನೀಡುವಂತಹ ಬಾರ್ಬಿ ಡಾಲ್, ಡೊರೆಮಾನ್, ಮೋಟು ಪಟು, ಫೋಟೋ ಫ್ರೆಮ್, Selfy Zone, ತರಕಾರಿ, ಹಣ್ಣುಗಳಿಂದ ಕೆತ್ತಲಾದ ವಿವಿಧ ಕ್ಷೇತ್ರಗಳ ಗಣ್ಯರುಗಳ…
ಮಡಿಕೇರಿ NEWS DESK ಜ.24 : ತೋಟಗಾರಿಕೆ ಇಲಾಖೆಯು ಜಿಲ್ಲಾ, ಆಡಳಿತ, ಜಿಲಾ, ಪಂಚಾಯತ್ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಭಾರತ ದೇಶದ ಗಣರಾಜ್ಯೋತ್ಸವದ ಪ್ರಯುಕ್ತ ಜ.24 ರಿಂದ 27 ರವರೆಗೆ ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಸುಮಾರು 7000 ಸಾವಿರ ಕುಂಡಗಳಲ್ಲಿ ವಿವಿಧ ಜಾತಿಯ ಹೂವುಗಳು ಹಾಗೂ ಬೆಡ್ ಗಳಲ್ಲಿ ಸುಮಾರು 20000 ವಿವಿಧ ಜಾತಿಯ ಹೂವುಗಳಾದ ಸಾಕ್ಷಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಇಂಪೇಷಿಯನ್ಸ್, ವಿಂಕಾ ರೋಸಿಯಾ, ಕಾಕ್ಸ್, ಕೋಂಬ್, ಡೇಲಿಯಾ, ಇತ್ಯಾದಿಗಳನ್ನು ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ಬೆಳೆಯಲಾಗಿದೆ. ಕೊಡಗಿನ ಪ್ರಸಿದ್ದ ಶ್ರೀ ಓಂಕಾರೇಶ್ವರ ದೇವಸ್ಥಾನದ ಕಲಾಕೃತಿಯನ್ನು 22 ಅಡಿ ಎತ್ತರದಲ್ಲಿ 30 ಅಡಿ ಉದ್ದ, 38 ಅಡಿ ಅಗಲದಲ್ಲಿ ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಮರ್ ಜಾತಿಯ ಸುಮಾರು 5 ಲಕ್ಷ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ. 2. ಕರ್ನಾಟಕ ಸರ್ಕಾರದ, ತೋಟಗಾರಿಕೆ ಇಲಾಖೆಯಿಂದ ಕರ್ನಾಟಕ ರಾಜ್ಯದಲ್ಲಿ ಉತ್ಪತ್ತಿಯಾಗುವ ಜೇನು ತುಪ್ಪವನ್ನು…
ಮಡಿಕೇರಿ ಜ.24 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಹಿರಿಯ ನಾಗರಿಕರಿಗೆ catract ಶಸ್ತ್ರ ಚಿಕಿತ್ಸೆ ಪ್ರಯುಕ್ತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು ಮಡಿಕೇರಿ ವೈದ್ಯಕೀಯ ಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ನಿರ್ದೇಶಕ ಡಾ.ಎ.ಜೆ.ಲೋಕೇಶ್ ಉದ್ಘಾಟಿಸಿ, ಹಿರಿಯ ನಾಗರಿಕರಿಗೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದಂತೆ ಕಣ್ಣಿನ ಆರೋಗ್ಯದ ಕುರಿತು ಹಾಗೂ ಆರೋಗ್ಯ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಶಸ್ತ್ರ ಚಿಕಿತ್ಸೆಕ ಡಾ.ನಂಜುಂಡಯ್ಯ ಮಾತನಾಡಿ, ಪ್ರತಿ ಗ್ರಾಮ ಮಟ್ಟದಲ್ಲಿ ಇಲಾಖೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಇದರಲ್ಲಿ ವಿಶೇಷ ಚೇತನಿಗೆ ಸಂಬಂಧಿಸಿದಂತೆ ಕಾರ್ಡ್ ನ್ನು ನೀಡುವ ಮೂಲಕ ಪ್ರತಿಯೊಬ್ಬರಿಗೂ ಇಲಾಖೆಯ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಶಿಬಿರವನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು. ಕಣ್ಣಿನ ವಿಭಾಗದ ಮುಖ್ಯಸ್ಥರಾದ ಕೃಪಾಲಿನಿ ಅಪ್ಪಯ್ಯ ಮಾತನಾಡಿ, ಕಣ್ಣಿನ ಸಮಸ್ಯೆಗೆ ವಯಸ್ಸಿನ ಮಿತಿ ಇರುವುದಿಲ್ಲ,…
ಮಂಗಳೂರು ಜ.24 NEWS DESK : ಆಧುನಿಕ ತಂತ್ರಜ್ಞಾನ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ಯತಿಕಾರ್ಪ್ ಇಂಡಿಯಾ ಪ್ರೈ.ಲಿ. ಕಂಪನಿಯು ಕರ್ನಾಟಕದಾದ್ಯಂತ ಪದವೀಧರರಿಗೆ ಉದ್ಯೋಗ ಅವಕಾಶವನ್ನು ಘೋಷಿಸಿದೆ. ಕಂಪನಿಯು ತನ್ನ ಹೊಸ ಎಐ ಸಾಕ್ಷರತಾ ಅಭಿಯಾನವನ್ನು ಮುನ್ನಡೆಸಲು ರಾಜ್ಯದ ಪ್ರತಿ ತಾಲ್ಲೂಕು ಕೇಂದ್ರಗಳಿಗೂ ಪ್ರಾದೇಶಿಕ ಪ್ರತಿನಿಧಿಗಳನ್ನು ನೇಮಿಸುತ್ತಿದ್ದು, ಆಕರ್ಷಕ ವೇತನ ಪ್ಯಾಕೇಜ್ಗಳನ್ನು ನೀಡುತ್ತಿದೆ. ಹುದ್ದೆ ಹೆಸರು :: ಎಐ ರೀಜನಲ್ ರೆಪ್ರೆಸೆಂಟೇಟಿವ್, ವೇತನ ಶ್ರೇಣಿಯು ತಿಂಗಳಿಗೆ ರೂ. 25,000 ದಿಂದ ರೂ.30,000ದವರೆಗೆ ಇರುತ್ತದೆ. ಸಂಸ್ಥೆಯು ಅಭಿವೃದ್ಧಿ ಪಡಿಸಿದ ಎಐ ಶಿಕ್ಷಕ್ನ ಮೂಲಕ ಎಐ ಕುರಿತು ಸಾಕ್ಷರತಾ ಅಭಿಯಾನ ನಡೆಸುವುದು ಕೆಲಸದ ಸ್ವರೂಪವಾಗಿರುತ್ತದೆ. ಎಐ ಪ್ರಾದೇಶಿಕ ಪ್ರತಿನಿಧಿಯಾಗಿ ನೇಮಕಗೊಂಡ ಅಭ್ಯರ್ಥಿಗಳು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಈ ಸ್ಥಾನವು ಹೊಸ ಪದವೀಧರರಿಗೆ ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಪ್ರವೇಶಿಸಲು ಹಾಗೂ ಶಿಕ್ಷಕ ಕ್ಷೇತ್ರದಲ್ಲಿ ಸಕಾರಾತ್ಮಕ ಕ್ರಾಂತಿಯನ್ನು ಮೂಡಿಸಲು ಉತ್ತಮ ಅವಕಾಶವನ್ನು ಒದಗಿಸುತ್ತದೆ. ಪ್ರಾದೇಶಿಕ ಪ್ರತಿನಿಧಿ ಹುದ್ದೆಯ…
ಮಡಿಕೇರಿ ಜ.24 NEWS DESK : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಜ.25 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಡಿಕೇರಿ ಜ.24 NEWS DESK : ಚೆಟ್ಟಳ್ಳಿ ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಗ್ರಾಮಸಭೆಯು ಜ.29 ರಂದು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಅಂದು ಪೂರ್ವಾಹ್ನ 11 ಗಂಟೆಗೆ ಗ್ರಾ.ಪಂ ಅಧ್ಯಕ್ಷರಾದ ಕೆ.ಸಿಂಧು ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ನೋಡಲ್ ಅಧಿಕಾರಿಯಾಗಿ ಪುಶುವೈಧ್ಯಾಧಿಕಾರಿ ಡಾ.ಸಂಜೀವ್ ಕುಮಾರ್ ಆರ್ ಸಿಂಧೆ ಪಾಲ್ಗೊಳ್ಳಲಿದ್ದು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷ ಮತ್ತು ಸದಸ್ಯರು ಮನವಿ ಮಾಡಿದ್ದಾರೆ.
ಮಡಿಕೇರಿ ಜ.24 NEWS DESK : ಪುಟಾಣಿ ವಿಜ್ಞಾನ ಬಳಗದವರು ನಡೆಸಿದ ರಾಷ್ಟ್ರಮಟ್ಟದ ಗಣಿತ ಪ್ರತಿಭಾ ಪರೀಕ್ಷೆಯಲ್ಲಿ ಚೇರಂಬಾಣೆ ಕೊಟ್ಟೂರು ರಾಜರಾಜೇಶ್ವರಿ ಶಾಲೆಯ ಒಟ್ಟು 68 ವಿದ್ಯಾರ್ಥಿಗಳು ಭಾಗವಹಿಸಿ ಉತ್ತೀರ್ಣರಾಗಿದ್ದಾರೆ. ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಚಕ್ಷ ಕಾವೇರಮ್ಮ ರಾಷ್ಟ್ರಮಟ್ಟದಲ್ಲಿ ಮೂರನೇ ಸ್ಥಾನ, 8ನೇ ತರಗತಿಯ ಟಿ.ಡಿ.ಭುವನ್ ರಾಜ್ಯಮಟ್ಟದಲ್ಲಿ 6ನೇ ಸ್ಥಾನ, 9ನೇ ತರಗತಿಯ ಹೆಚ್.ಎಲ್.ಮಂಜುಳ 6ನೇ ಸ್ಥಾನ, ಜಿಲ್ಲಾ ಮಟ್ಟದಲ್ಲಿ 10ನೇ ತರಗತಿಯ ಮೋಕ್ಷ ಬೋಪಣ್ಣ 5ನೇ ಸ್ಥಾನ, 9ನೇ ತರಗತಿಯ ಕೆ.ಜೆ.ತ್ರಿಶ 7 ನೇ ಸ್ಥಾನ, ತಾಲ್ಲೂಕು ಮಟ್ಟದಲ್ಲಿ 10ನೇ ತರಗತಿಯ ಕೆ.ಕೆ.ಇಂಚರ 5ನೇ ಸ್ಥಾನ, 8 ನೇ ತರಗತಿಯ ಪ್ರೇಕ್ಷ ಪೊನ್ನಮ್ಮ 5ನೇ ಸ್ಥಾನಪಡೆದು ಸಾಧನೆ ಮಾಡಿದ್ದಾರೆ. ಸಾಧನೆಗೈದ ವಿದ್ಯಾರ್ಥಿಗಳೊಂದಿಗೆ ಮುಖ್ಯಶಿಕ್ಷಕರಾದ ಕವನ್ ಕುದುಪಜೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಕೆ.ಬಿ.ಸ್ವರೂಪ್, ಗಣಿತ ಯೂ.ಬಿ.ಶಿಕ್ಷಕಿ ಟೀನಾ ಹಾಜರಿದ್ದರು.






