ಮಡಿಕೇರಿ ಫೆ.18 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರೌಢಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮುಕ್ತ ನಾಟಕ ಸ್ಪರ್ಧೆ ಏರ್ಪಡಿಸಲಾಗಿದೆ. ಮಡಿಕೇರಿಯಲ್ಲಿ ನಡೆದ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಸಾಹಿತಿ ನಾ.ಡಿಸೋಜ ಅವರ ದತ್ತಿ ಆಶಯದಂತೆ ಈ ನಾಟಕ ಸ್ಪರ್ಧೆ ನಡೆಯಲಿದೆ. ನಾಟಕ ತಂಡದಲ್ಲಿ ಆರು ಮಂದಿ ಕಲಾವಿದರು ಇರಬೇಕು. 20 ನಿಮಿಷಗಳ ನಾಟಕ ಪ್ರದರ್ಶಿಸಬೇಕು. ಸಾಮಾಜಿಕ ಐತಿಹಾಸಿಕ ಪೌರಾಣಿಕ ಜಾನಪದ ಯಾವುದೇ ಪ್ರಕಾರದ ನಾಟಕಗಳನ್ನು ಪ್ರದರ್ಶಿಸಬಹುದು. ಈ ಸ್ಪರ್ಧೆಯು ಮಡಿಕೇರಿಯಲ್ಲಿ ಮಾರ್ಚ್ ಮೊದಲ ವಾರದಲ್ಲಿ ನಡೆಯಲಿದೆ. ನಾಟಕ ಸ್ಪರ್ಧೆಯಲ್ಲಿ ಭಾಗವಹಿಸುವ ಆಸಕ್ತರು ದಿನಾಂಕ 25.02.2026 ರ ಒಳಗಾಗಿ ಈ ಕೆಳಗೆ ಸೂಚಿಸಿದ ಮೊಬೈಲ್ ಸಂಖ್ಯೆ 9113892396 ಗೆ ವಾಟ್ಸಪ್ ಮೂಲಕ ಕಳುಹಿಸ ತಕ್ಕದ್ದು ಅಥವಾ ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುದರ್ಶನ ವೃತ್ತದ ಬಳಿ, ಮಡಿಕೇರಿ. ಈ ವಿಳಾಸಕ್ಕೆ ಪತ್ರ ಮುಖೇನ ತಿಳಿಸಬೇಕಾಗಿ ಕೊಡಗು ಜಿಲ್ಲಾ…
ಲೇಖಕ: admin
ಮಡಿಕೇರಿ ಫೆ.18 NEWS DESK : ಮಕ್ಕಂದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಮ್ಮೆತ್ತಾಳು ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಿಯ ಅಷ್ಟಬಂಧ ಬ್ರಹ್ಮ ಕಲಶ ಮುಹೂರ್ತ ಫೆ.21 ಮತ್ತು 22ರಂದು ನಡೆಯಲಿದೆ. ಫೆ.21 ರಂದು ಬೆಳಿಗ್ಗೆ 8.30ರಿಂದ ಸಾಮೂಹಿಕ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಆದ್ಯ ಗಣಪತಿ ಹೋಮ, ನವಗ್ರಹ ಹೋಮ, ಶಿಖರ ಪೂಜೆ ಮತ್ತು ಪ್ರತಿಷ್ಠೆ ಬಳಿಕ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಲಿದೆ. ಸಂಜೆ 4 ಗಂಟೆಯಿಂದ ಸಪ್ತ ಶುದ್ಧಿ, ಶಾಂತಿ ಪ್ರಾಯಶ್ಚಿತ ಹೋಮ, ತತ್ವ ಹೋಮ, ಅಧಿವಾಸ ಹೋನಗಳು, ಸುದರ್ಶನ ಹೋಮ, ರಾಕ್ಷೋಘ್ನ ಹೋಮ, ಚಾಮುಂಡೇಶ್ವರಿ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಾಸ್ತು ಬಲಿ, ಪ್ರಾಕಾರ ಬಲಿ, ಬ್ರಹ್ಮಕಲಶಾಧಿವಾಸ, ಕುಂಭೇಶಕಲಶಾಧಿವಾಸ, ಚಾಮುಂಡೇಶ್ವರಿ ದೇವಿಯ ಬಿಂಬ ಪ್ರತಿಷ್ಠೆ, ಅಷ್ಟ ಬಂಧ ಲೇಪನ, ನಿದ್ರಾ ಕುಂಬಾಭಿಷೇಕ, ಪ್ರಸನ್ನ ಪೂಜೆ ನೆರವೇರಲಿದೆ. ಫೆ.22 ರಂದು ಬೆಳಿಗ್ಗೆ 6 ಗಂಟೆಯಿಂದ ಸ್ವಸ್ತಿ ವಾಚನ, ಗಣಯಾಗ, ದುರ್ಗಾ ಹೋಮ, ನಾಗಹೋಮ, ತತ್ವ ಹೋಮ, ಕಲಶಾದಿ…
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಅಬ್ಬಕ್ಕ 500 ಪ್ರೇರಣಾದಾಯಿ 100 ಉಪನ್ಯಾಸ ಸರಣಿಯ 100ರ ಸಂಭ್ರಮ ರಾಷ್ಟ್ರೀಯ ವಿಚಾರ ಸಂಕಿರಣವು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಇತ್ತೀಚಿಗೆ ನಡೆಯಿತು. ಆ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ ಮಹಿಳೆಯರಿಗೆ ವೀರರಾಣಿ ಅಬ್ಬಕ್ಕ ಪುರಸ್ಕಾರ ನೀಡಲಾಗಿದ್ದು ಅದರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ತೋರ ಗ್ರಾಮದ ನಿವಾಸಿ ಕೆ.ಬಿ.ಅಮ್ಮಣ್ಣಿ ವೀರರಾಣಿ ಅಬ್ಬಕ್ಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ . ಸೂಲಗಿತ್ತಿ ನಾಟಿವೈದ್ಯ , ಬಾಣಂತಿ ಆರೈಕೆ , ಜಾನಪದ ಕ್ಷೇತ್ರದಲ್ಲಿನ ಸೇವೆಯನ್ನು ಗಮನಿಸಿ ಈ ಪುರಸ್ಕಾರ ನೀಡಲಾಗಿದ್ದು. ಸೂಕ್ಷ್ಮ , ಸಣ್ಣ , ಮಧ್ಯಮ ಉದ್ಯಮಗಳ ರಾಜ್ಯ ಸಚಿವಾಲಯ ಸಚಿವರಾದ ಶೋಭಾ ಕರಂದ್ಲಾಜೆ ಅವರಿಂದ ಈ ಪುರಸ್ಕಾರ ಪಡೆದಿರುತ್ತಾರೆ. ಅಮ್ಮಣಿ ಯವರು ಕೆದಮುಳ್ಳೂರು ಪಂಚಾಯತಿಯ ತೋರ ಗ್ರಾಮದ ನಿವಾಸಿ ಭೀಮಯ್ಯನವರ ಪತ್ನಿಯಾಗಿದ್ದಾರೆ.
ಮಡಿಕೇರಿ ಫೆ.18 NEWS DESK : ನಾಪೋಕ್ಲುವಿನ ತೊತ್ತಿಯಂಡ ಬಾರಿಕೆ ಅಂಗನವಾಡಿ ಕೇಂದ್ರಕ್ಕೆ ಗ್ರಾಮಸ್ಥರು ಕುರ್ಚಿಗಳನ್ನು ಕೊಡುಗೆಯಾಗಿ ನೀಡಿದರು. ಗ್ರಾಮಸ್ಥರಾದ ಮಹಮ್ಮದ್ ಹಾಗೂ ಐಮದ್ ಅಂಗನವಾಡಿ ಕಾರ್ಯಕರ್ತೆ ಹೆಚ್.ಬಿ.ಪಾರ್ವತಿ ಅವರಿಗೆ 10 ಕುರ್ಚಿಗಳನ್ನು ಹಸ್ತಾಂತರಿಸಿದರು. ಆಶಾ ಕಾರ್ಯಕರ್ತೆ ಧಮಯಂತಿ, ಅಂಗನವಾಡಿ ಸಹಾಯಕಿ ಉಮೈಬ ಹಾಜರಿದ್ದರು.
ಸೋಮವಾರಪೇಟೆ ಫೆ.18 NEWS DESK : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಂದಾಜು 1 ಕೋಟಿ ರೂ.ಗಳ ವೆಚ್ಚದ ಸುಸಜ್ಜಿತ ಒಳಾಂಗಣ ಬಾಸ್ಕೆಟ್ಬಾಲ್ ಕೋರ್ಟ್ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಬಾಸ್ಕೆಟ್ಬಾಲ್ ಆಟಗಾರರ ಬಹುದಿನದ ಕನಸ್ಸನ್ನು ನನಸ್ಸು ಮಾಡುವ ಉದ್ದೇಶದಿಂದ ಕ್ರಮ ಅನುದಾನ ಕಲ್ಪಿಸಲಾಗುವುದು. ಇಲ್ಲಿಯವರೆಗೆ ಆಟಗಾರರೇ ಸ್ವಂತ ಖರ್ಚಿನಲ್ಲಿ ಕೋರ್ಟ್ ಮಾಡಿಕೊಂಡಿದ್ದರು. ಜಿಲ್ಲೆಯಲ್ಲಿ ಮಳೆ ಜಾಸ್ತಿಯಿರುವುದರಿಂದ ಒಳಾಂಗಣ ಕ್ರೀಡಾಂಗಣ ಮಾಡಲೇಬೇಕಿದೆ. ಮೊದಲ ಹಂತದಲ್ಲಿ ಸಿಂಥೆಟಿಕ್ ಕೋರ್ಟ್ ಮತ್ತು ವಿದ್ಯುತ್ ದೀಪ ಅಳವಡಿಸಲಾಗುತ್ತದೆ. ನಂತರ ಅವಶ್ಯಕವಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು. ವಿಶೇಷವಾಗಿ ಯುವಕರರು ಬಾಸ್ಕೆಟ್ಬಾಲ್ ಕ್ರೀಡೆಯತ್ತ ಒಲುವು ಮೂಡಿಸಬೇಕು. ಕೊಡಗಿನ ಜನರಿಗೂ ಕ್ರೀಡೆಗೂ ಅವಿನಾಭಾವ ಸಂಬಂಧವಿದೆ. ಹಾಕಿ, ಕಬಡ್ಡಿ, ವಾಲಿಬಾಲ್, ಥ್ರೋಬಾಲ್, ಬ್ಯಾಡ್ಮಿಂಟನ್, ಬಾಸ್ಕೆಟ್ಬಾಲ್ ಇನ್ನಿತರ ಆಟಗಳನ್ನು ಆಡಿ ಕಲಿತವರಿದ್ದಾರೆ. ಅಂತಹ ಕ್ರೀಡಾಪಟುಗಳಿಗೆ ಸೌಲಭ್ಯಗಳನ್ನು ಒದಗಿಸಬೇಕು ಎಂಬುದೇ ನಮ್ಮ ಆಶಯವೂ ಆಗಿದೆ. ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯತ್ತ ಒಲವು ಮೂಡಿಸಿಕೊಳ್ಳಬೇಕು.…
ಸೋಮವಾರಪೇಟೆ ಫೆ.18 NEWS DESK : ನೇರುಗಳಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿತ್ಲುಮಕ್ಕಿ ಗ್ರಾಮದಲ್ಲಿ ಕಳೆದ 9 ವರ್ಷಗಳಿಂದ ಮುಚ್ಚಿರುವ ಕಲ್ಲುಕೋರೆಯನ್ನು ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕೋರೆಯ ಅಕ್ಕಪಕ್ಕದಲ್ಲೇ ಅನೇಕ ಮನೆಗಳು ಇರುವುದಲ್ಲದೆ, ಪುಟ್ಟ ಮಕ್ಕಳು ಪ್ರತಿದಿನ ಅದೇ ರಸ್ತೆಯ ಮೂಲಕ ಶಾಲೆಗೆ ಸಂಚರಿಸುತ್ತಿದ್ದಾರೆ. ಕೆಲ ವಯೋವೃದ್ಧರು ಒಬ್ಬರೇ ವಾಸವಾಗಿದ್ದು, ಕಲ್ಲು ಕೋರೆಯ ಪುನರಾರಂಭದಿಂದ ಅವರ ಸುರಕ್ಷತೆ ಅಪಾಯಕ್ಕೆ ಒಳಗಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ. ಗ್ರಾಮದ ಸಮೀಪದಲ್ಲೇ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ಹಿಂದೆ ನಡೆಯುತ್ತಿದ್ದ ಕಲ್ಲುಕೋರೆ ಬ್ಲಾಸ್ಟ್ನಲ್ಲಿ ಶಾಲಾ ಕಟ್ಟಡಗಳಲ್ಲೇ ಬಿರುಕುಗಳು ಕಂಡುಬಂದಿವೆ ಎಂದು ಗ್ರಾಮಸ್ಥರು ದೂರಿದ್ದಾರೆ. ಕಲ್ಲುಕೋರೆ ಪ್ರಾರಂಭವಾದರೆ, ಭಾರೀ ವಾಹನಗಳ ಸಂಚಾರದಿಂದ ರಸ್ತೆ ಪರಿಸ್ಥಿತಿಯೂ ಹದಗೆಡಲಿದೆ. ಅನೇಕ ಕಡೆ ಗುಂಡಿಗಳು ಉಂಟಾಗಿ ಮಳೆಗಾಲದಲ್ಲಿ ಕೆಸರಿನ ಹೊಂಡಗಳಾಗಿ ಮಾರ್ಪಡುತ್ತವೆ. ಧೂಳು ಹಾಗೂ ಶಬ್ದ ಮಾಲಿನ್ಯ ಹೆಚ್ಚಾಗಿ ಮಕ್ಕಳು, ವೃದ್ಧರ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ…
ಮಡಿಕೇರಿ ಫೆ.18 NEWS DESK : ಆಸಹಾಯಕರು ಹಾಗೂ ಮುಖ್ಯವಾಹಿನಿಯಿಂದ ದೂರವಿರುವ ನಾಗರಿಕರಿಗೆ ಕಾನೂನಿನ ಮಾಹಿತಿ ನೀಡುವುದು ಅರೆಕಾಲಿಕ ಕಾನೂನು ಸ್ವಯಂಸೇವಕರ ಕರ್ತವ್ಯವಾಗಿದೆ ಎಂದು ಪ್ರಧಾನ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಹೊಸಮನಿ ಪುಂಡಲಿಕ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಔಟಲಾ ಇಂಡಿಯಾ ಸಂಸ್ಥೆ ಹಾಗೂ ಮಡಿಕೇರಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ನಾಲ್ಕು ದಿನಗಳ ಕಾಲ ಏರ್ಪಡಿಸಲಾಗಿರುವ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಾನೂನು ಸೇವಾ ಪ್ರಾಧಿಕಾರದ ಜೊತೆ ಸೇರಿ ನೊಂದವರಿಗೆ ಕಾನೂನಿನ ಮಾಹಿತಿ ನೀಡುವುದು ಅರೆಕಾಲಿಕ ಕಾನೂನು ಸ್ವಯಂ ಸೇವಕರ ಜವಾಬ್ದಾರಿಯಾಗಿದ್ದು, ಆ ನಿಟ್ಟಿನಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಅವರು ಸಲಹೆ ಮಾಡಿದರು. ನಿಸರ್ಗದತ್ತ ಹಾಗೂ ಮನುಷ್ಯ ಮಾಡಿದ…
ನವದೆಹಲಿ: ಭಾರತ್ ಮಂಟಪಂನಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026’ ರಲ್ಲಿ ಚೀನಾದ ರೋಬೋಟ್ ಅನ್ನು ತನ್ನದೇ ಸ್ವಂತ ಆವಿಷ್ಕಾರ ಎಂದು ಬಿಂಬಿಸಲು ಹೋಗಿ ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯ (Galgotias University) ವಿವಾದದ ಸುಳಿಗೆ ಸಿಲುಕಿದೆ. ಜಾಗತಿಕ ವೇದಿಕೆಯಲ್ಲಿ ದೇಶಕ್ಕೆ ಮುಜುಗರ ಉಂಟುಮಾಡಿದ ಹಿನ್ನೆಲೆಯಲ್ಲಿ, ಸರ್ಕಾರವು ವಿಶ್ವವಿದ್ಯಾಲಯದ ಮಳಿಗೆಯನ್ನು (Stall) ತಕ್ಷಣವೇ ತೆರವುಗೊಳಿಸಲು ಕಟ್ಟುನಿಟ್ಟಿನ ಆದೇಶ ನೀಡಿದೆ. ವಿವಾದದ ಮೂಲ: ‘ಒರಿಯನ್’ ವರ್ಸಸ್ ‘Unitree Go2’ ವಿಶ್ವವಿದ್ಯಾಲಯವು ತನ್ನ ಮಳಿಗೆಯಲ್ಲಿ ಪ್ರದರ್ಶಿಸಿದ್ದ ನಾಲ್ಕು ಕಾಲುಗಳ ರೋಬೋಟಿಕ್ ನಾಯಿಗೆ ‘ಒರಿಯನ್’ (Orion) ಎಂದು ಹೆಸರಿಟ್ಟಿತ್ತು. ಮಾಧ್ಯಮಗಳೊಂದಿಗೆ ಮಾತನಾಡಿದ್ದ ವಿಶ್ವವಿದ್ಯಾಲಯದ ಪ್ರತಿನಿಧಿ ಪ್ರೊಫೆಸರ್ ನೇಹಾ ಸಿಂಗ್, “ಇದನ್ನು ನಮ್ಮ ವಿಶ್ವವಿದ್ಯಾಲಯದ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ಅಭಿವೃದ್ಧಿಪಡಿಸಲಾಗಿದೆ” ಎಂದು ಹೇಳಿಕೊಂಡಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ತಂತ್ರಜ್ಞಾನ ಆಸಕ್ತರು ಇದು ಚೀನಾದ ‘ಯುನಿಟ್ರೀ ರೊಬೊಟಿಕ್ಸ್’ ಕಂಪನಿಯ ‘Unitree Go2’ ಮಾದರಿಯ ರೋಬೋಟ್ ಎಂದು ಪುರಾವೆ ಸಮೇತ ಬಹಿರಂಗಪಡಿಸಿದರು. ಸುಮಾರು 2 ರಿಂದ 3 ಲಕ್ಷ…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಿಹಿಸುದ್ದಿ ನೀಡಿದೆ. ದೇಶಾದ್ಯಂತ ಇರುವ ತನ್ನ 18 ವಿವಿಧ ಕಚೇರಿಗಳಲ್ಲಿ ಖಾಲಿ ಇರುವ 650 ಸಹಾಯಕ (Assistant) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಪದವೀಧರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಕೆ ಆರಂಭ: ಫೆಬ್ರವರಿ 16, 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 8, 2026 ಪೂರ್ವಭಾವಿ ಪರೀಕ್ಷೆ (Preliminary Exam): ಏಪ್ರಿಲ್ 11, 2026 (ತಾತ್ಕಾಲಿಕ) ಮುಖ್ಯ ಪರೀಕ್ಷೆ (Main Exam): ಜೂನ್ 7, 2026 (ತಾತ್ಕಾಲಿಕ) ಅರ್ಹತಾ ಮಾನದಂಡಗಳು ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಕನಿಷ್ಠ ಶೇ. 50 ರಷ್ಟು ಅಂಕಗಳೊಂದಿಗೆ ಪದವಿ ಪೂರ್ಣಗೊಳಿಸಿರಬೇಕು. ಇದರೊಂದಿಗೆ ಕಂಪ್ಯೂಟರ್ ವರ್ಡ್ ಪ್ರೊಸೆಸಿಂಗ್ ಜ್ಞಾನ ಮತ್ತು ಸ್ಥಳೀಯ ಭಾಷೆಯ ಪರಿಣತಿ ಅತ್ಯಗತ್ಯ. ವಯೋಮಿತಿ: ಫೆಬ್ರವರಿ 1, 2026 ಕ್ಕೆ ಅನ್ವಯವಾಗುವಂತೆ 20…
ಮಡಿಕೇರಿ NEWS DESK ಫೆ.18 : ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ಮಾತೃಭಾಷಾ ದಿನಾಚರಣೆ ಅಂಗವಾಗಿ ಫೆ.21ರಂದು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರಿನಲ್ಲಿ “ಕೊಡವ ಸತ್ಯಾಗ್ರಹ” ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಬೆಳಿಗ್ಗೆ 10.30 ಕ್ಕೆ ಶಾಂತಿಯುತವಾಗಿ ಸತ್ಯಾಗ್ರಹ ನಡೆಸಿ ಪ್ರಖ್ಯಾತ ಭಾಷಾ ತಜ್ಞ ಪಂಡಿತ್ ಡಾ. ಸೀತಕಾಂತ್ ಮಹಾಪಾತ್ರ ಆಯೋಗದ ವರದಿಯ ಶಿಫಾರಸ್ಸಿನಂತೆ ಕೊಡವ ತಕ್ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಗೆ ಸೇರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮಂಡಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಈಗಾಗಲೇ ಪರಿಗಣಿಸಲ್ಪಟ್ಟ ಕೊಂಕಣಿ ಮತ್ತು ಪರಿಗಣನೆಯ ಹಂತದಲ್ಲಿರುವ ತುಳು ಪ್ರಸ್ತಾವನೆಯಂತೆಯೇ, ಸಂವಿಧಾನದ 345 ನೇ ವಿಧಿಯಡಿ ಕೊಡವ ತಕ್ ಅನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಗುರುತಿಸಬೇಕು. ಕೊಡವರ ಕುರಿತಾದ ನೈಜ ಚರಿತ್ರೆಯನ್ನು ತಿರುಚಿ ಸುಳ್ಳು ಚರಿತ್ರೆಯನ್ನು ಸೃಷ್ಟಿಸಿದವರ ವಿರುದ್ಧ ಕ್ರಮ ಜರುಗಿಸಬೇಕು. ಕೊಡವ ಜನಾಂಗೀಯ ಗುರುತು, ಕೊಡವ ಜಾನಪದ ಹಿನ್ನೆಲೆ, ಭಾಷಾಲೋಕ ಹಾಗೂ ಆದಿಮಸಂಜಾತ ಏಕ-ಜನಾಂಗೀಯ…






